Author: kannadanewsnow09

ನವದೆಹಲಿ: ಪಾಕಿಸ್ತಾನದಲ್ಲಿ ಬುಧವಾರ ಭೂಕಂಪ ಸಂಭವಿಸಿದ್ದರಿಂದ ದೆಹಲಿ ಎನ್ಸಿಆರ್ ಮತ್ತು ಚಂಡೀಗಢ ಸೇರಿದಂತೆ ಉತ್ತರ ಭಾರತದ ವಿವಿಧ ಭಾಗಗಳಲ್ಲಿ ನಡುಕ ಉಂಟಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಭೂಕಂಪದ ಕೇಂದ್ರಬಿಂದು ಪಾಕಿಸ್ತಾನದ ಮುಲ್ತಾನ್ ಬಳಿ 33 ಕಿಲೋಮೀಟರ್ ಆಳದಲ್ಲಿ ಮಧ್ಯಾಹ್ನ 12:58 ಕ್ಕೆ ಸಂಭವಿಸಿದೆ. ಯಾವುದೇ ಹಾನಿಯ ಬಗ್ಗೆ ವರದಿಯಾಗಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://twitter.com/NCS_Earthquake/status/1833773467663261975 https://kannadanewsnow.com/kannada/class-8-boy-dies-of-heart-attack/ https://kannadanewsnow.com/kannada/good-news-for-farmers-rs-25-lakh-for-sheep-poultry-and-piggery-50-subsidy/

Read More

ರಾಯಚೂರು: ಈವರೆಗೆ ವಯಸ್ಕರು, ವಯೋವೃದ್ಧರಲ್ಲಿ ಕಾಣಿಸಿಕೊಳ್ಳುತ್ತಿದ್ದಂತ ರಕ್ತದೊತ್ತಡ, ಈಗ ಮಕ್ಕಳಲ್ಲೂ ಆರಂಭಗೊಂಡಿದೆ. ಶಾಕಿಂಗ್ ಎನ್ನುವಂತೆ 8ನೇ ತರಗತಿ ಬಾಲಕನೊಬ್ಬ ಲೋ ಬಿಪಿಯಾಗಿ ಶಾಲೆಯಲ್ಲೇ ಕುಸಿದು ಬಿದ್ದು, ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯುತ್ತಿರುವ ವೇಳೆ ಸಾವನ್ನಪ್ಪಿರುವಂತ ಘಟನೆ ರಾಯಚೂರಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಸಿರಿವಾರ ಪಟ್ಟಣದಲ್ಲಿನ ಖಾಸಗಿ ಶಾಲೆಯೊಂದರಲ್ಲಿ 8ನೇ ತರಗತಿಯನ್ನು ಬಾಲಕ ತರುಣ್ ಅತ್ತನೂರು(14) ಓದುತ್ತಿದ್ದನು. ಎಂದಿನಂತೆ ಶಾಲೆಗೆ ತೆರಳಿದ್ದಂತ ತರುಣ್ ಗೆ ಲೋ ಬಿಪಿಯಾಗಿ, ಏಕಾಏಕಿ ಶಾಲೆಯಲ್ಲೇ ಕುಸಿದು ಬಿದ್ದಿದ್ದಾನೆ. ಕೂಡಲೇ ಶಿಕ್ಷಕರು ಆತನನ್ನು ಸಿರಿವಾರ ಪಟ್ಟಣದ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗೆ ದಾಖಲು ಮಾಡಿದ್ದಾರೆ. ಪ್ರಾಥಮಿಕ ಚಿಕಿತ್ಸೆಯ ಬಳಿಕ, ತೀವ್ರ ಅಸ್ವಸ್ಥಗೊಂಡಿದ್ದಂತ ಬಾಲಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿಗೆ ಕರೆದೊಯ್ಯುತ್ತಿದ್ದ ವೇಳೆಯಲ್ಲಿ ಮಾರ್ಗಮಧ್ಯದಲ್ಲೇ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಸಿರಿವಾರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. https://kannadanewsnow.com/kannada/loan-facility-up-to-rs-5-lakh-from-central-government-if-you-have-these-documents-apply-immediately/ https://kannadanewsnow.com/kannada/good-news-for-farmers-rs-25-lakh-for-sheep-poultry-and-piggery-50-subsidy/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ರಾಜ್ಯ ಸಿವಿಲ್ ಸೇವೆಗಳ ಗ್ರೂಪ್-ಬಿ ಹಾಗೂ ಗ್ರೂಪ್-ಸಿ ಹುದ್ದೆಗಳ ನೇಮಕಾತಿಗೆ ಅಭ್ಯರ್ಥಿಗಳಿಗೆ ವಯೋಮಿತಿಯನ್ನು ಒಂದು ಬಾರಿಗೆ 3 ವರ್ಷಗಳು ಸಡಿಲಿಸಿ ಆದೇಶಿಸಿದೆ. ಇಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಡಿ ಮತ್ತು ಗ್ರೂಪ್-ಸಿ ಮತ್ತು ಗ್ರೂಪ್-ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸರ್ಕಾರಕ್ಕೆ ಮನವಿ ಸಲ್ಲಿಸಿ, ಕರ್ನಾಟಕ ರಾಜ್ಯದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ಮತ್ತು ಇತರೆ ಕಾರಣದಿಂದ ಮತ್ತು ಪದೇ ಪದೇ ಲಾಕ್ ಡೌನ್ ಆಗಿದ್ದರಿಂದ ವಿವಿಧ ಇಲಾಖೆಯಲ್ಲಿನ ಖಾಲಿ ಹುದ್ದೆಗಳ ನೇಮಕಾತಿಯನ್ನು ಸರ್ಕಾರವು ಮುಂದೂಡುತ್ತಾ ಬಂದಿರುತ್ತದೆ. ಇದರಿಂದ ಅಭ್ಯರ್ಥಿಗಳ ವಯೋಮಿತಿ ಹೆಚ್ಚಾಗಿದ್ದು ಹುದ್ದೆಗಳ ನೇಮಕಾತಿಯಿಂದ ವಂಚಿತರಾಗಿ ನಿರುದ್ಯೋಗಿಗಳಾಗಿರುವುದರಿಂದ ರಾಜ್ಯ ಸರ್ಕಾರದ ನೇರ ನೇಮಕಾತಿಯಲ್ಲಿ ಪ್ರಸ್ತುತ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಸಡಿಲಿಸುವಂತೆ ಕೋರಿರುತ್ತಾರೆ ಎಂದಿದ್ದಾರೆ. ಗರಿಷ್ಠ ವಯೋಮಿತಿಯನ್ನು ಹೆಚ್ಚಿಸುವ ಕುರಿತು ಸ್ವೀಕರಿಸಲಾಗಿರುವ ಮನವಿಗಳನ್ನು ಪರಿಶೀಲಿಸಿದ್ದು ರಾಜ್ಯ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಭೂ ಒಡೆತನ ಯೋಜನೆಯ ಅಡಿಯಲ್ಲಿ ಕೃಷಿ ಭೂಮಿ ಇಲ್ಲದಂತ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಕೃಷಿ ಜಮೀನು ಖರೀದಿಸಿ, ಸ್ವಾವಲಂಬಿ ಜೀವನ ನಡೆಸೋದಕ್ಕೆ ಸಾಲಸೌಲಭ್ಯಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಮೂಲಕ ಪರಿಶಿಷ್ಟ ಜಾತಿ ಸಮುದಾಯದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಭೂ ಒಡೆತನ ಯೋಜನೆಯು ಸಮಾಜ ಕಲ್ಯಾಣ ಇಲಾಖೆಯಿಂದ ಜಾರಿಗೊಳಿಸಿದಂತ ಯೋಜನೆಯಾಗಿದೆ. ಕೃಷಿ ಭೂಮಿ ಇಲ್ಲದಂತ ಮಹಿಳೆಯರಿಗೆ ಜಮೀನು ಖರೀದಿಗೆ ಸಬ್ಸಿಡಿ ದರದಲ್ಲಿ ಸಹಾಯ ಧನ ಸೌಲಭ್ಯವನ್ನು ಕಲ್ಪಿಸುವಂತ ಯೋಜನೆಯಾಗಿದೆ. ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ ಆಧಾರ್ ಕಾರ್ಡ್ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಭೂ ರಹಿತ ಕೃಷಿ ಕಾರ್ಮಿಕರ ಪ್ರಮಾಣಪತ್ರ ರೇಷನ್ ಕಾರ್ಡ್ ಬ್ಯಾಂಕ್ ಪಾಸ್ ಬುಕ್ ನಕಲು ಪ್ರತಿ ಪೋಟೋ ಈ ಹಂತ ಅನುಸರಿಸಿ, ಅರ್ಜಿ ಸಲ್ಲಿಸಿ 2023-24ನೇ ಸಾಲಿನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಆದರೇ…

Read More

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮ ತಡೆಗೆ ಮಹತ್ವದ ಕ್ರಮ ವಹಿಸಲಾಗಿದೆ. ರಾಜ್ಯ ಸರ್ಕಾರದಿಂದ ಇದಕ್ಕಾಗಿ ಮಸೂದೆಯನ್ನು ತಿದ್ದುಪಡಿ ಮಾಡಲಾಗಿದ್ದು, ಅದಕ್ಕೆ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು ಅಂಕಿತ ಹಾಕಿದ್ದಾರೆ. ಹೀಗಾಗಿ ಇನ್ಮುಂದೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿದವರಿಗೆ 10 ಕೋಟಿ ದಂಡ ಹಾಗೂ 10 ವರ್ಷ ಜೈಲು ಶಿಕ್ಷೆ ಫಿಕ್ಸ್ ಆದಂತೆ ಆಗಿದೆ. ಸರ್ಕಾರ ವಿವಿಧ ಇಲಾಖೆಗಳ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ಎಸಗುವವರಿಗೆ ₹10 ಕೋಟಿ ದಂಡ ಮತ್ತು 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸುವ ಕರ್ನಾಟಕ ಸಾರ್ವಜನಿಕ ಪರೀಕ್ಷಾ (ನೇಮಕಾತಿಯಲ್ಲಿ ಭ್ರಷ್ಟಾಚಾರ ಮತ್ತು ಅನುಚಿತ ವಿಧಾನಗಳ ಪ್ರತಿಬಂಧಕ ಕ್ರಮಗಳು) ಮಸೂದೆ – 2023ಕ್ಕೆ ರಾಜ್ಯಪಾಲರಾದ ಥಾವರ್‌ಚಂದ್‌ ಗೆಹ್ಲೋಟ್‌ ಅನುಮೋದನೆ ನೀಡಿದ್ದಾರೆ. ಒಟ್ಟಾರೆಯಾಗಿ ಕರ್ನಾಟಕ ಸಾರ್ವಜನಿಕ ಪರೀಕ್ಷಾ (ನೇಮಕಾತಿಯಲ್ಲಿ ಭ್ರಷ್ಟಾಚಾರ ಮತ್ತು ಅನುಚಿತ ವಿಧಾನಗಳ ಪ್ರತಿಬಂಧಕ ಕ್ರಮಗಳು) ಮಸೂದೆ-2023ಕ್ಕೆ ರಾಜ್ಯಪಾಲರು ಅಂಕಿತ ಮುದ್ರೆ ಒತ್ತಿದ್ದಾರೆ. ಈ ಮಸೂದೆಯಂತೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗುವವರಿಗೆ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಉದ್ಯೋಗ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಲಾಗಿದೆ. ರಾಜ್ಯ ಸಿವಿಲ್ ಸೇವೆಗಳಿಗೆ ಸಂಬಂಧಿಸಿದಂತ ಗ್ರೂಪ್-ಬಿ ಹಾಗೂ ಸಿ ವೃಂದದ ನೇಮಕಾತಿಯ ವೇಳೆಯಲ್ಲಿ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ 3 ವರ್ಷ ವಯೋಮಿತಿಯನ್ನು ಸಡಿಲಿಸಿ ಆದೇಶಿಸಿದೆ. ಇಂದು ರಾಜ್ಯ ಸರ್ಕಾರದಿಂದ ಈ ಬಗ್ಗೆ ಆದೇಶ ಹೊರಡಿಸಿದ್ದು, ಕೋವಿಡ್-19 ಸಮಯದಲ್ಲಿ ನೇಮಕಾತಿಗಳು ಸರಿಯಾಗಿ ನಡೆದಿರಲಿಲ್ಲ. ಹಲವು ನೇಮಕಾತಿಗಳನ್ನು ಮುಂದೂಡುತ್ತಾ ಬರಲಾಗಿತ್ತು. ಹೀಗಾಗಿ ಅನೇಕ ಉದ್ಯೋಗ ಆಕಾಂಕ್ಷಿಗಳು ವಯೋಮಿತಿಯನ್ನು ಮೀರುವಂತೆ ಆಗಿತ್ತು. ಅವರೆಲ್ಲರೂ ವಯೋಮಿತಿ ಸಡಿಲಿಕೆಗೆ ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಮನವಿಯ ಹಿನ್ನಲೆಯಲ್ಲಿ 3 ವರ್ಷ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಮಾಡಿರುವುದಾಗಿ ತಿಳಿಸಿದೆ. ರಾಜ್ಯ ಸರ್ಕಾರ ಹೊರಡಿಸಿದ ಆದೇಶದಲ್ಲಿ ಏನಿದೆ.? ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಡಿ ಮತ್ತು ಗ್ರೂಪ್-ಸಿ ಮತ್ತು ಗ್ರೂಪ್-ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸರ್ಕಾರಕ್ಕೆ ಮನವಿ ಸಲ್ಲಿಸಿ, ಕರ್ನಾಟಕ ರಾಜ್ಯದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ಮತ್ತು ಇತರೆ ಕಾರಣದಿಂದ ಮತ್ತು ಪದೇ ಪದೇ…

Read More

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯ ಹಗರಣಗಳ ಬಗ್ಗೆ ತನಿಖೆ ನಡೆಸುವುದಾಗಿ ಈಗಾಗಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಲಾಗಿತ್ತು. ಈಗ ಮುಂದುವರೆದ ಭಾಗವಾಗಿ ವಿವಿಧ ಹಗರಣಗಳ ತನಿಖೆಗಳ ಪ್ರಗತಿ, ಸಮನ್ವಯ ಕಾರ್ಯಗಳಿಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿ ಸಿಎಂ ಸಿದ್ಧರಾಮಯ್ಯ ಆದೇಶಿಸಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಡವಳಿಯನ್ನು ಹೊರಡಿಸಿದ್ದು, ಸರ್ಕಾರದ ಮತ್ತು ತನಿಖಾ ಸಂಸ್ಥೆಗಳ ಹಂತದಲ್ಲಿ ಚಾಲ್ತಿಯಲ್ಲಿರುವ ವಿವಿಧ ಹಗರಣಗಳ ತನಿಖೆಗಳ ಪ್ರಗತಿ, ಸಮನ್ವಯ ಮುಂತಾದ ಕಾರ್ಯಗಳಿಗೆ ಸಂಬಂಧಿಸಿದಂತೆ ಕ್ರಮ ವಹಿಸಲು ಸಚಿವರನ್ನ ಒಳಗೊಂಡ ಸಮಿತಿ ರಚಿಸಿ ಆದೇಶಿಸಲಾಗಿದೆ ಎಂದಿದ್ದಾರೆ. ವಿವಿಧ ಹಗರಣಗಳ ಪ್ರಗತಿ, ಸಮನ್ವಯ ಸಮಿತಿಯ ಅಧ್ಯಕ್ಷರನ್ನಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರನ್ನು ನೇಮಿಸಲಾಗಿದೆ. ಸದಸ್ಯರನ್ನಾಗಿ ಸಚಿವ ಹೆಚ್.ಕೆ ಪಾಟೀಲ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಅವರನ್ನು ನೇಮಕ ಮಾಡಲಾಗಿದೆ. ಈ ಸಚಿವರ ಸಮಿತಿಯು ಮುಂದಿನ ಎರಡು ತಿಂಗಳಲ್ಲಿ ತಮಗೆ ವಹಿಸಿರುವ ಜವಾಬ್ದಾರಿಯನ್ನು ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೋರಿದ್ದಾರೆ. https://kannadanewsnow.com/kannada/jr-ntr-janhvi-kapoor-starrer-devara-trailer-out/…

Read More

ಮುಂಬೈ : ಭಾರತದ ಮುಂಚೂಣಿ ರೀಟೇಲರ್ ಆದ ರಿಲಯನ್ಸ್ ರೀಟೇಲ್ ವೆಂಚರ್ಸ್ ಲಿಮಿಟೆಡ್ ಹಾಗೂ ಇಸ್ರೇಲ್ ನ ಡೆಲ್ಟಾ ಗಲಿಲ್ ಇಂಡಸ್ಟ್ರೀಸ್ ಸಂಬಂಧಿಸಿದಂತೆ ಮಂಗಳವಾರದಂದು ಪ್ರಮುಖ ಘೋಷಣೆ ಹೊರಬಿದ್ದಿದೆ. ಇದರೊಂದಿಗೆ ಭಾರತದಲ್ಲಿ ಈ ಎರಡೂ ಕಂಪನಿಗಳು ಕಾರ್ಯತಂತ್ರ ಪಾಲುದಾರಿಕೆಯನ್ನು ಪ್ರಕಟಿಸಿವೆ. ಶೇಕಡಾ 50/50ರ ಜಂಟಿ ಉದ್ಯಮ ಇದಾಗಿದೆ. ಡೆಲ್ಟಾ ಗಲಿಲ್ ಟೆಲ್ ಅವಿವ್ ಷೇರು ಮಾರುಕಟ್ಟೆಯಲ್ಲಿ ಲಿಸ್ಟಿಂಗ್ ಆಗಿದೆ. ಈ ಸಂಸ್ಥೆಯು ಜಾಗತಿಕ ದಿರಿಸು ಉತ್ಪಾದಕರಾಗಿ ಗುರುತಿಸಿಕೊಂಡಿದ್ದು, ಜತೆಗೆ ಮಾರ್ಕೆಟಿಂಗ್ ಸಹ ಮಾಡುತ್ತದೆ. ಬ್ರ್ಯಾಂಡೆಡ್ ಬಟ್ಟೆಗಳು, ಖಾಸಗಿ ಲೇಬಲ್ ಗಳನ್ನು ಒಳಗೊಂಡ ದಿರಿಸುಗಳನ್ನು ಮಹಿಳೆಯರು, ಪುರುಷರು ಹಾಗೂ ಮಕ್ಕಳಿಗಾಗಿ ತಯಾರಿಸುತ್ತದೆ. ಇದರಲ್ಲಿ ಡೆನಿಮ್ ಬಟ್ಟೆಗಳು ಸೇರಿವೆ. ಇನ್ನು ಈಗ ರಿಲಯನ್ಸ್ ರೀಟೇಲ್ ಹಾಗೂ ಡೆಲ್ಟಾ ಗಲಿಲ್ ಒಟ್ಟಾಗಿ ಭಾರತದ ಬಟ್ಟೆ ಮಾರುಕಟ್ಟೆಯನ್ನು ಪುನರ್ ವ್ಯಾಖ್ಯಾನಿಸುವ ಗುರಿಯನ್ನು ಇರಿಸಿಕೊಂಡಿವೆ. ಈ ಪಾಲುದಾರಿಕೆ ಉದ್ದೇಶ ಏನೆಂದರೆ, ಭಾರತೀಯ ಗ್ರಾಹಕರ ವಿಶಿಷ್ಟ ಬೇಡಿಕೆಗಳನ್ನು ಪೂರೈಸುವ ದಿರಿಸುಗಳ ನವೀನ ರೀತಿಯ ವೇದಿಕೆಯನ್ನು ಆರಂಭಿಸುವುದಾಗಿದೆ. ಡೆಲ್ಟಾ ಗಲಿಲ್ ತನ್ನ…

Read More

ಬೆಂಗಳೂರು: ನಗರದಲ್ಲಿ ಪೌರ ಕಾರ್ಮಿಕರ ಸೇವೆ ಖಾಯಂ ಮಾಡಿಕೊಳ್ಳುವುದಾಗಿ ಸರ್ಕಾರ ಘೋಷಣೆ ಮಾಡಲಾಗಿತ್ತು. ಇಂತಹ ಪೌರ ಕಾರ್ಮಿಕರ ಸೇವೆ ಕಾಯಂ ಮಾಡುವ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸುವುದಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ಬಿಬಿಎಂಪಿಯಲ್ಲಿ ಪೌರ ಕಾರ್ಮಿಕರ ಸೇವೆಯನ್ನು ಕಾಯಂ ಮಾಡುವ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸಲಾಗುವುದು. ಕೆಲವೊಂದು ಪ್ರಕ್ರಿಯೆಗಳಿಗೆ ಆಡಳಿತ ವಿಭಾಗದ ವಿಶೇಷ ಆಯುಕ್ತರು ವಿವರಣೆ ಕೇಳಿದ್ದರು. ಮಾಹಿತಿ ನೀಡಲಾಗಿದೆ ಎಂದು ಹೇಳಿದ್ದಾರೆ. ರಸ್ತೆ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ: ವಸಂತನಗರ 6ನೇ ಮುಖ್ಯ ರಸ್ತೆಯಲ್ಲಿ ರಸ್ತೆ ಗುಂಡಿ ಮುಚ್ಚುವ ಕಾರ್ಯವನ್ನು ಪರಿಶೀಲಿಸಿ, ಗುಣಮಟ್ಟವನ್ನು ಕಾಪಾಡಿಕೊಂಡು ಗುಂಡಿಗಳನ್ನು ಮುಚ್ಚಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಾಲಮಿತಿಯೊಳಾಗಿ ರಸ್ತೆ ಗುಂಡಿ ಮುಚ್ಚದಿದ್ದರೆ ಅಮಾನತು: ರಸ್ತೆ ಗುಂಡಿ ಮುಚ್ಚುವ ಕಾರ್ಯವನ್ನು ಕಾಲಮಿತಿಯೊಳಗಾಗಿ ಮುಚ್ಚಬೇಕು. ಇಲ್ಲವಾದಲ್ಲಿ ಸಂಬಂಧ ಅಧಿಕಾರಿಗಳನ್ನು ಯಾವುದೇ ಮುಲಾಜಿಲ್ಲದೆ ಅಮಾನತು ಮಾಡಲಾಗುವುದೆಂದು ಎಚ್ಚರಿಕೆ ನೀಡಿದರು. https://kannadanewsnow.com/kannada/fir-lodged-against-iaf-wing-commander-for-allegedly-raping-woman-flying-officer/ https://kannadanewsnow.com/kannada/governor-gives-assent-to-bill-for-hefty-fine-10-year-jail-term-for-irregularities-in-recruitment-exams/ https://kannadanewsnow.com/kannada/big-update-good-news-for-the-owners-1-months-grihalakshmi-money-finally-deposited-in-the-account/

Read More

ನವದೆಹಲಿ: ಭಾರತೀಯ ವಾಯುಪಡೆಯ ಮಹಿಳಾ ಫ್ಲೈಯಿಂಗ್ ಆಫೀಸರ್ ವಿಂಗ್ ಕಮಾಂಡರ್ ಶ್ರೇಣಿಯ ಅಧಿಕಾರಿಯ ವಿರುದ್ಧ ಅತ್ಯಾಚಾರದ ಆರೋಪ ಮಾಡಿದ್ದು, ಇದರ ಪರಿಣಾಮವಾಗಿ ಕೇಂದ್ರ ಕಾಶ್ಮೀರದ ಬುಡ್ಗಾಮ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಇಬ್ಬರೂ ಐಎಎಫ್ ಅಧಿಕಾರಿಗಳು ಪ್ರಸ್ತುತ ಶ್ರೀನಗರದಲ್ಲಿ ಬೀಡುಬಿಟ್ಟಿದ್ದಾರೆ. ದೂರಿನ ನಂತರ, ಕೇಂದ್ರ ಕಾಶ್ಮೀರದ ಬುಡ್ಗಾಮ್ ಪೊಲೀಸ್ ಠಾಣೆಯಲ್ಲಿ ಶನಿವಾರ “ಕಾನೂನಿನ ಸಂಬಂಧಿತ ವಿಭಾಗಗಳ” ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ಈ ಪ್ರಕರಣದ ಬಗ್ಗೆ ನಮಗೆ ತಿಳಿದಿದೆ. ಈ ವಿಷಯದ ಬಗ್ಗೆ ಸ್ಥಳೀಯ ಬುಡ್ಗಾಮ್ ಪೊಲೀಸ್ ಠಾಣೆಯು ಶ್ರೀನಗರದ ವಾಯುಪಡೆ ನಿಲ್ದಾಣವನ್ನು ಸಂಪರ್ಕಿಸಿತು. ಈ ಪ್ರಕರಣಕ್ಕೆ ನಾವು ಸಂಪೂರ್ಣ ಸಹಕಾರ ನೀಡುತ್ತಿದ್ದೇವೆ ಎಂದು ಹಿರಿಯ ಐಎಎಫ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ಎನ್ಡಿಟಿವಿ ವರದಿಯ ಪ್ರಕಾರ, ಮಹಿಳಾ ಅಧಿಕಾರಿ ಕಳೆದ ಎರಡು ವರ್ಷಗಳಿಂದ ಕಿರುಕುಳ, ಲೈಂಗಿಕ ದೌರ್ಜನ್ಯ ಮತ್ತು ಮಾನಸಿಕ ಹಿಂಸೆಯನ್ನು ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಡಿಸೆಂಬರ್ 31 ರಂದು…

Read More