Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಭಾರತೀಯ ವಾಯುಪಡೆಯ ಮಹಿಳಾ ಫ್ಲೈಯಿಂಗ್ ಆಫೀಸರ್ ವಿಂಗ್ ಕಮಾಂಡರ್ ಶ್ರೇಣಿಯ ಅಧಿಕಾರಿಯ ವಿರುದ್ಧ ಅತ್ಯಾಚಾರದ ಆರೋಪ ಮಾಡಿದ್ದು, ಇದರ ಪರಿಣಾಮವಾಗಿ ಕೇಂದ್ರ ಕಾಶ್ಮೀರದ ಬುಡ್ಗಾಮ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಇಬ್ಬರೂ ಐಎಎಫ್ ಅಧಿಕಾರಿಗಳು ಪ್ರಸ್ತುತ ಶ್ರೀನಗರದಲ್ಲಿ ಬೀಡುಬಿಟ್ಟಿದ್ದಾರೆ. ದೂರಿನ ನಂತರ, ಕೇಂದ್ರ ಕಾಶ್ಮೀರದ ಬುಡ್ಗಾಮ್ ಪೊಲೀಸ್ ಠಾಣೆಯಲ್ಲಿ ಶನಿವಾರ “ಕಾನೂನಿನ ಸಂಬಂಧಿತ ವಿಭಾಗಗಳ” ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ಈ ಪ್ರಕರಣದ ಬಗ್ಗೆ ನಮಗೆ ತಿಳಿದಿದೆ. ಈ ವಿಷಯದ ಬಗ್ಗೆ ಸ್ಥಳೀಯ ಬುಡ್ಗಾಮ್ ಪೊಲೀಸ್ ಠಾಣೆಯು ಶ್ರೀನಗರದ ವಾಯುಪಡೆ ನಿಲ್ದಾಣವನ್ನು ಸಂಪರ್ಕಿಸಿತು. ಈ ಪ್ರಕರಣಕ್ಕೆ ನಾವು ಸಂಪೂರ್ಣ ಸಹಕಾರ ನೀಡುತ್ತಿದ್ದೇವೆ ಎಂದು ಹಿರಿಯ ಐಎಎಫ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ಎನ್ಡಿಟಿವಿ ವರದಿಯ ಪ್ರಕಾರ, ಮಹಿಳಾ ಅಧಿಕಾರಿ ಕಳೆದ ಎರಡು ವರ್ಷಗಳಿಂದ ಕಿರುಕುಳ, ಲೈಂಗಿಕ ದೌರ್ಜನ್ಯ ಮತ್ತು ಮಾನಸಿಕ ಹಿಂಸೆಯನ್ನು ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಡಿಸೆಂಬರ್ 31 ರಂದು…
ಬೆಂಗಳೂರು: ರಾಜ್ಯದ ಅನುದಾನಿತ ಶಾಲಾ ಶಿಕ್ಷಕರಿಗೆ ಸಿಹಿಸುದ್ದಿ ಎನ್ನುವಂತೆ, ರಾಜ್ಯ ಸರ್ಕಾರದಿಂದ 7ನೇ ರಾಜ್ಯವೇತನ ಆಯೋಗದ ಶಿಫಾರಸ್ಸಿನಂತೆ ರಾಜ್ಯ ವೇತನ ಸೌಲಭ್ಯಗಳನ್ನು ವಿಸ್ತರಿಸಿ ಆದೇಶಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ(ಪ್ರಾಥಮಿಕ)ಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸುವ ಕುರಿತು ಆದೇಶಿಸಿದ್ದು, ಸದರಿ ಆದೇಶದ ಕಂಡಿಕೆ-8ರಲ್ಲಿ “ಅನ್ವಯಿಸುವ ಬದಲಾವಣೆಯೊಂದಿಗೆ ಈ ಮೇಲಿನ ಎಲ್ಲಾ ಸೌಲಭ್ಯಗಳನ್ನು ಅನುದಾನಿತ ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳ ನೌಕರರು ಮತ್ತು ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗಳಿಗೂ ಸಹ ವಿಸ್ತರಿಸಲು ಸರ್ಕಾರವು ಹರ್ಷಿಸುತ್ತದೆ” ಎಂದು ಆದೇಶಿಸಲಾಗಿರುತ್ತದೆ ಎಂದಿದ್ದಾರೆ. ಸರ್ಕಾರದ ಆದೇಶದಲ್ಲಿ ವೇತನ ಶ್ರೇಣಿಗಳ ಪರಿಷ್ಕರಣೆ ಮತ್ತು ಇತರ ಸಂಬಂಧಿತ ವಿಸ್ತ್ರತವಾದ ಆದೇಶವನ್ನು ಹೊರಡಿಸಿದ್ದು, ಸದರಿ ಆದೇಶದ ಕಂಡಿಕೆ 11.1ರಲ್ಲಿ “ಪರಿಷ್ಕೃತ ವೇತನ ಶ್ರೇಣಿಗಳ ಸೌಲಭ್ಯಗಳನ್ನು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರು ಹಾಗೂ ಸ್ಥಳೀಯ ಸಂಸ್ಥೆಗಳ ಮತ್ತು ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗಳಿಗೂ ಸಹ ವಿಸ್ತರಿಸಲಾಗಿರುತ್ತದೆ. ಈ ಕುರಿತಂತೆ ಆದೇಶಗಳನ್ನು ಸಂಬಂಧಪಟ್ಟ ಆಡಳಿತ…
ಒಂದು ವೇಳೆ ಯಾರಾದರೂ ನಿಮಗೆ ತಿಳಿಯದೆ ಮೋಸವನ್ನು ಮಾಡಿ ಆಸ್ತಿಯನ್ನು ತೆಗೆದುಕೊಂಡಿದ್ದರೆ, ಯಾರಾದರೂ ನಿಮ್ಮ ವಿರುದ್ಧ ಆಸ್ತಿಯ ವಿಚಾರವಾಗಿ ಕೋರ್ಟ್ ಅಲ್ಲಿ ಕೇಸ್ ಹಾಕಿದ್ದರೆ ಹಾಗೂ ಅದರಿಂದ ನಿಮಗೆ ಏನಾದರೂ ನ್ಯಾಯ ದೊರಕುತ್ತಿಲ್ಲ ಎಂದರೆ ಕಾರ್ತವೀರ್ಯಾರ್ಜುನ ಮಂತ್ರದಿಂದ ನೀವು ಕಳೆದುಕೊಂಡ ಆಸ್ತಿಯನ್ನು ಮತ್ತೆ ಪಡೆದುಕೊಳ್ಳಬಹುದು. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564 ಈ ಕಾರ್ತವೀರ್ಯಾರ್ಜುನ…
ನವದೆಹಲಿ: ಪ್ಯಾರಿಸ್ನಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ವಿಜೇತರಿಗೆ 75 ಲಕ್ಷ ರೂ., ಬೆಳ್ಳಿ ವಿಜೇತರಿಗೆ 50 ಲಕ್ಷ ರೂ., ಮತ್ತು ಕಂಚಿನ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ 30 ಲಕ್ಷ ರೂ.ಗಳ ನಗದು ಬಹುಮಾನವನ್ನು ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಮಂಗಳವಾರ ಪ್ರಕಟಿಸಿದ್ದಾರೆ. ಮಿಶ್ರ ತಂಡಗಳ ವಿಭಾಗದಲ್ಲಿ ಉತ್ತಮ ಪ್ರದರ್ಶನ ತೋರುವ ಬಿಲ್ಲುಗಾರ್ತಿ ಶೀತಲ್ ದೇವಿ 22.5 ಲಕ್ಷ ರೂ.ಗಳಷ್ಟು ಶ್ರೀಮಂತರಾಗಲಿದ್ದಾರೆ. ಮೆಗಾ ಈವೆಂಟ್ ನಲ್ಲಿ ಪದಕ ವಿಜೇತರನ್ನು ಸನ್ಮಾನಿಸಲು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಚಿವರು ಇದನ್ನು ಘೋಷಿಸಿದರು. 2028ರ ಲಾಸ್ ಏಂಜಲೀಸ್ ಪ್ಯಾರಾಲಿಂಪಿಕ್ಸ್ನಲ್ಲಿ ಹೆಚ್ಚಿನ ಪದಕಗಳನ್ನು ಗೆಲ್ಲುವ ಗುರಿ ಹೊಂದಿರುವ ಪ್ಯಾರಾ-ಅಥ್ಲೀಟ್ಗಳಿಗೆ ಸಂಪೂರ್ಣ ಬೆಂಬಲ ಮತ್ತು ಸೌಲಭ್ಯಗಳನ್ನು ಮಾಂಡವಿಯಾ ಭರವಸೆ ನೀಡಿದರು. “ಪ್ಯಾರಾಲಿಂಪಿಕ್ಸ್ ಮತ್ತು ಪ್ಯಾರಾ ಸ್ಪೋರ್ಟ್ಸ್ನಲ್ಲಿ ದೇಶವು ಬೆಳೆಯುತ್ತಿದೆ. 2016ರಲ್ಲಿ ಟೋಕಿಯೊದಲ್ಲಿ 4 ಪದಕಗಳನ್ನು ಗೆದ್ದಿದ್ದ ಭಾರತ, ಟೋಕಿಯೊದಲ್ಲಿ 19 ಪದಕಗಳನ್ನು ಗೆದ್ದಿದ್ದರೆ, ಪ್ಯಾರಿಸ್ನಲ್ಲಿ 29 ಪದಕಗಳನ್ನು ಗೆದ್ದು 18ನೇ ಸ್ಥಾನದಲ್ಲಿದೆ. 2028ರ ಲಾಸ್ ಏಂಜಲೀಸ್ ಪ್ಯಾರಾಲಿಂಪಿಕ್ಸ್ನಲ್ಲಿ…
ಬೆಂಗಳೂರು: ನಗರದಲ್ಲಿ ಮೂರನೇ ದಿನವಾದಂತ ನಿನ್ನೆಯ ದಿನದಂದು ಬರೋಬ್ಬರಿ 1.32 ಲಕ್ಷ ಗಣೇಶ ಮೂರ್ತಿಗಳನ್ನು ವಿವಿಧ ಕೆರೆ, ಟ್ಯಾಂಕರ್ ಗಳಲ್ಲಿ ವಿಸರ್ಜನೆ ಮಾಡಲಾಗಿದೆ. ಈ ಕುರಿತಂತೆ ಬಿಬಿಎಂಪಿ ಮಾಹಿತಿ ಹಂಚಿಕೊಂಡಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಿನಾಂಕ: 09/09/2024 ರಂದು ಸಂಚಾರಿ/ಮೊಬೈಲ್ ಟ್ಯಾಂಕರ್ ಹಾಗೂ ಕೆರೆ ಅಂಗಳದ ಶಾಶ್ವಾತ/ತಾತ್ಕಾಲಿಕ ಕಲ್ಯಾಣಿಗಳಲ್ಲಿ ಒಟ್ಟು 132153 ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿರುತ್ತದೆ ಎಂದಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಿರುವ ವಿವರ: ಪೂರ್ವ ವಲಯ: 29586 ಪಶ್ಚಿಮ ವಲಯ: 15516 ದಕ್ಷಿಣ ವಲಯ: 62246 ಬೊಮ್ಮನಹಳ್ಳಿ ವಲಯ: 3790 ದಾಸರಹಳ್ಳಿ ವಲಯ: 668 ಮಹದೇವಪುರ ವಲಯ: 4899 ಆರ್.ಆರ್.ನಗರ ವಲಯ: 6716 ಯಲಹಂಕ ವಲಯ: 8732 ಒಟ್ಟು: 132153 ಗಣೇಶ ಮೂರ್ತಿಯನ್ನು ಮೂರನೇ ದಿನವಾದಂತ ನಿನ್ನೆಯ ದಿನದಂದು ಬೆಂಗಳೂರಿನ ವಿವಿಧೆಡೆಗಳಲ್ಲಿ ವಿಸರ್ಜನೆ ಮಾಡಲಾಗಿದೆ. https://kannadanewsnow.com/kannada/karnataka-will-extend-full-cooperation-in-the-field-of-industries-union-minister-hd-kumaraswamy/ https://kannadanewsnow.com/kannada/jr-ntr-janhvi-kapoor-starrer-devara-trailer-out/ https://kannadanewsnow.com/kannada/big-update-good-news-for-the-owners-1-months-grihalakshmi-money-finally-deposited-in-the-account/
ಕೆಎನ್ಎನ್ ಸಿನಿಮಾ ಡೆಸ್ಕ್: ಕೊರಟಾಲ ಶಿವ ಅವರ ದೇವರ ಬಹು ನಿರೀಕ್ಷಿತ ಟ್ರೈಲರ್ ಅಂತಿಮವಾಗಿ ಬಿಡುಗಡೆಯಾಗಿದೆ. ಇದು ನಾಟಕ, ಆಕ್ಷನ್ ಮತ್ತು ಭಾವನೆಗಳ ಆಕರ್ಷಕ ಮಿಶ್ರಣವನ್ನು ನೀಡುತ್ತದೆ. ಜೂನಿಯರ್ ಎನ್ಟಿಆರ್ ಮತ್ತು ಜಾನ್ವಿ ಕಪೂರ್ ನೇತೃತ್ವದ ತಾರಾಗಣವನ್ನು ಒಳಗೊಂಡಿರುವ ಟ್ರೈಲರ್ ಮಹಾಕಾವ್ಯ ಸಿನಿಮೀಯ ಅನುಭವಕ್ಕಾಗಿ ಹೆಚ್ಚಿನ ನಿರೀಕ್ಷೆಗಳನ್ನು ಹೊಂದಿದೆ. ಆರ್ ರತ್ನವೇಲು ಅವರ ಛಾಯಾಗ್ರಹಣವಿರುವ ಗ್ರಾಮೀಣ ಭಾರತದ ಬೆರಗುಗೊಳಿಸುವ ದೃಶ್ಯಗಳೊಂದಿಗೆ ಟ್ರೈಲರ್ ಪ್ರಾರಂಭವಾಗುತ್ತದೆ. ಪ್ರತಿಯೊಂದು ಫ್ರೇಮ್ ನಿಮ್ಮನ್ನು ದೇವರ ಪ್ರಪಂಚಕ್ಕೆ ಆಳವಾಗಿ ಸೆಳೆಯುತ್ತದೆ. ಸೊಂಪಾದ ಹಸಿರು ಹೊಲಗಳಿಂದ ಹಿಡಿದು ಕಠಿಣ ಆಕ್ಷನ್ ದೃಶ್ಯಗಳವರೆಗೆ, ದೃಶ್ಯ ಕಥೆ ಹೇಳುವಿಕೆಯು ಆಕರ್ಷಕ ಮತ್ತು ಆಳವಾಗಿದೆ. ಟ್ರೈಲರ್ ಕಥಾವಸ್ತುವಿನ ವಿವರಗಳನ್ನು ಚೆನ್ನಾಗಿ ಮುಚ್ಚಿಟ್ಟಿದ್ದರೂ, ಇದು ತೀವ್ರವಾದ ವೈಯಕ್ತಿಕ ಮತ್ತು ಸಾಮಾಜಿಕ ಸಂಘರ್ಷಗಳಿಂದ ತುಂಬಿದ ನಿರೂಪಣೆಯನ್ನು ಸೂಚಿಸುತ್ತದೆ. ಜೂನಿಯರ್ ಎನ್ಟಿಆರ್ ಅವರ ಪಾತ್ರವು ದಬ್ಬಾಳಿಕೆ ಮತ್ತು ಅನ್ಯಾಯದ ವಿರುದ್ಧ ಹೋರಾಡುವ ಜನರ ಮನುಷ್ಯನಂತೆ ಕಾಣುತ್ತದೆ. ಸಾಮಾಜಿಕ-ರಾಜಕೀಯ ವಿಷಯಗಳನ್ನು ಚಾಣಾಕ್ಷತೆಯಿಂದ ನಿರ್ವಹಿಸಲು ಹೆಸರುವಾಸಿಯಾದ ಕೊರಟಾಲ ಶಿವ ಅವರ ನಿರ್ದೇಶನವು…
ನವದೆಹಲಿ: ಕರ್ನಾಟಕದ ಕೈಗಾರಿಕಾಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಇಂದಿಲ್ಲಿ ಭೇಟಿಯಾದ ಕರ್ನಾಟಕದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಿವಿಧ ಅಂಶಗಳ ಬಗ್ಗೆ ಚರ್ಚೆ ನಡೆಸಿದರು. ನವದೆಹಲಿಯ ಉದ್ಯೋಗ ಭವನದಲ್ಲಿರುವ ಭಾರೀ ಕೈಗಾರಿಕೆ ಸಚಿವಾಲಯದ ಕಚೇರಿಯಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿಯಾದ ಎಂ.ಬಿ.ಪಾಟೀಲ್ ಅವರು; ಕೈಗಾರಿಕೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೇಂದ್ರದಿಂದ ಅಗತ್ಯ ಸಹಕಾರ ಬೇಕೆಂದು ಮನವಿ ಮಾಡಿದರು. ಸಚಿವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವರು; ಸಂಪೂರ್ಣ ಸಹಕಾರದ ಭರವಸೆ ಕೊಟ್ಟರು. ಪ್ರಮುಖವಾಗಿ ಕರ್ನಾಟಕದಲ್ಲಿ ಕೈಗಾರಿಕಾ ಕ್ಷೇತ್ರದ ಸ್ಥಿತಿಗತಿಗಳ ಬಗ್ಗೆ ಕೇಂದ್ರ ಸಚಿವರು, ಪಾಟೀಲ್ ಅವರಿಂದ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಕೆಲ ಕೈಗಾರಿಕೆಗಳ ಬಗ್ಗೆ ಮನವಿ ಸಲ್ಲಿಸಿದ ಅವರು; ಕೇಂದ್ರ ಸರ್ಕಾರದಿಂದ ಸಿಗಬೇಕಿರುವ ಒಪ್ಪಿಗೆಯ ಬಗ್ಗೆ ಪ್ರಸ್ತಾವನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಕೈಗಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ ಮಾಡುವ…
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಸಂಶೋಧನಾ ವಿನ್ಯಾಸ ಮತ್ತು ಗುಣಮಟ್ಟ ಸಂಸ್ಥೆಯಿಂದ ಪ್ರಾಯೋಗಿಕ ಸಂಚಾರದ ಮೂಲಕ ಪರೀಕ್ಷೆಗಳನ್ನು ಆರಂಭಿಸಲಾಗಿದೆ. ಹೀಗಾಗಿ 2 ವಾರದಲ್ಲಿ ಪೂರ್ಣಗೊಂಡು ಡಿಸೆಂಬರ್ ನಲ್ಲಿ ವಾಣಿಜ್ಯ ಸಂಚಾರ ಆರಂಭವಾಗುವ ಸಾಧ್ಯತೆ ಇದೆ. ಬಿಎಂಆರ್ ಸಿಎಲ್ ಮಾಹಿತಿ ಹಂಚಿಕೊಂಡಿದ್ದು, ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಸಂಶೋಧನಾ ವಿನ್ಯಾಸ ಮತ್ತು ಗುಣಮಟ್ಟ ಸಂಸ್ಥೆ (ಆರ್ಡಿಎಸ್ಒ) ಪ್ರಾಯೋಗಿಕ ಸಂಚಾರದ ಮೂಲಕ ಪರೀಕ್ಷೆಗಳನ್ನು ಸೋಮವಾರ ಆರಂಭಿಸಿದೆ. 2 ವಾರದಲ್ಲಿ ಆರ್ಡಿಎಸ್ಒ ಪರೀಕ್ಷೆ ಪೂರ್ಣಗೊಳ್ಳಲಿದೆ ಎಂದಿದೆ. ಬೊಮ್ಮನಹಳ್ಳಿಯಿಂದ ಆರ್.ವಿ.ರಸ್ತೆ ನಡುವಿನ 18.82 ಕಿ.ಮೀ. ದೂರದ ಈ ಮಾರ್ಗದಲ್ಲಿ ಪ್ರಮುಖ ರಸ್ತೆಗಳನ್ನು ಆರಂಭಿಸಲಾಗಿದೆ. 12 ರಿಂದ 14 ದಿನ ವಿವಿಧ ಪರೀಕ್ಷೆಗಳನ್ನು ತಾಂತ್ರಿಕ ಪರಿಣಿತರು ನಡೆಸಲಿದ್ದಾರೆ. https://twitter.com/KarnatakaVarthe/status/1833448330312974638 https://kannadanewsnow.com/kannada/state-govt-approves-start-of-english-medium-classes-in-373-primary-schools/ https://kannadanewsnow.com/kannada/applications-invited-for-nomination-for-development-journalism-and-environmental-journalism-award/ https://kannadanewsnow.com/kannada/big-update-good-news-for-the-owners-1-months-grihalakshmi-money-finally-deposited-in-the-account/
ಬೆಂಗಳೂರು: ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್ ಎನ್ನುವಂತೆ, 373 ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ (ದ್ವಿಭಾಷಾ) ವಿಭಾಗಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. 2024-25ನೇ ಶೈಕ್ಷಣಿಕ ವರ್ಷದ ಆರಂಭದಲ್ಲಿ 1,419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಿ ಅನುಮತಿ ನೀಡಲಾಗಿತ್ತು. ಬೇಡಿಕೆ ಪರಿಗಣಿಸಿ ಕನಿಷ್ಠ 100 ವಿದ್ಯಾರ್ಥಿಗಳಿರುವ 373 ಶಾಲೆಗಳಿಗೆ ಅನುಮತಿ ನೀಡಲಾಗಿದೆ. ಬೆಂಗಳೂರು ದಕ್ಷಿಣ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ತುಮಕೂರು, ಬಾಗಲಕೋಟೆ, ಗದಗ, ಹಾವೇರಿ, ಉತ್ತರ ಕನ್ನಡ, ಶಿರಸಿ, ಮೈಸೂರು, ಹಾಸನ, ವಿಜಯಪುರ ಮತ್ತು ಚಿಕ್ಕಮಗಳೂರಿನ ಶಾಲೆಗಳಿಗೆ ಅನುಮತಿ ನೀಡಲಾಗಿದೆ. ಒಟ್ಟಾರೆಯಾಗಿ ರಾಜ್ಯ ಸರ್ಕಾರದಿಂದ ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್ ಎನ್ನುವಂತೆ ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದಂತೆ 373 ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲೀಷ್ ಮೀಡಿಯಂ ಶಾಲೆಗಳನ್ನು ಆರಂಭಿಸುವುದಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. https://twitter.com/KarnatakaVarthe/status/1833470602075635960 https://kannadanewsnow.com/kannada/applications-invited-for-ganga-kalyana-yojana/ https://kannadanewsnow.com/kannada/applications-invited-for-nomination-for-development-journalism-and-environmental-journalism-award/ https://kannadanewsnow.com/kannada/big-update-good-news-for-the-owners-1-months-grihalakshmi-money-finally-deposited-in-the-account/
ಬೆಂಗಳೂರು: ಪರಿಶಿಷ್ಟ ಜಾತಿಯವರಿಗಾಗಿ ರಾಜ್ಯ ಸರ್ಕಾರದಿಂದ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಮಾಹಿತಿ ನೀಡಲಾಗಿದ್ದು, 1.20 ಎಕರೆಯಿಂದ 5 ಎಕರೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಕೊಳವೆಬಾವಿ ಕೊರೆದು, ಪಂಪ್ ಸೆಟ್ ಅಳವಡಿಸಿ, ವಿದ್ಯುದ್ದೀಕರಣಗೊಳಿಸಿ ನೀರಾವರಿ ಸೌಲಭ್ಯ ಒದಗಿಸುವ ಗಂಗಾ ಕಲ್ಯಾಣ ಯೋಜನೆಗೆ ಎಸ್ಸಿ ಸಮುದಾಯದವರಿಗೆ ಅರ್ಜಿ ಆಹ್ವಾನಿಸಿರುವುದಾಗಿ ತಿಳಿಸಿದೆ. ಗಂಗಾ ಕಲ್ಯಾಣ ಯೋಜನೆಯಡಿ ಎಸ್ಸಿ ಸಮುದಾಯದವರಿಗೆ 4.75 ಲಕ್ಷ, 3.75 ಲಕ್ಷ ನೀಡಲಾಗುತ್ತದೆ. ಇದರಲ್ಲಿ 50000 ಸಾಲವೂ ಸೇರಿರುತ್ತದೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-10-2024 ಆಗಿರುತ್ತದೆ. ಅರ್ಜಿಗಳನ್ನು ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳ ಮೂಲಕ ಸಲ್ಲಿಸಬಹುದು ಎಂದು ಹೇಳಿದೆ. ಹೆಚ್ಚಿನ ಮಾಹಿತಿಗಾಗಿ 9482 300 400 ಸಂಪರ್ಕಿಸಬಹುದು. https://twitter.com/KarnatakaVarthe/status/1833458824218329459 https://kannadanewsnow.com/kannada/good-news-for-landless-sc-women-in-the-state-applications-invited-for-land/ https://kannadanewsnow.com/kannada/big-update-good-news-for-the-owners-1-months-grihalakshmi-money-finally-deposited-in-the-account/