Author: kannadanewsnow09

ಬೆಂಗಳೂರು: ನಗರದಲ್ಲಿ ಕೆರೆಗಳ ಅಳಿವು ಉಳಿವಿನ ಪ್ರಶ್ನೆಯಾಗಿದೆ. ಬೆಂಗಳೂರಲ್ಲಿ ಕೆರೆ ನಿರ್ವಣೆಗಾಗಿ ಬಿಬಿಎಂಪಿ ಮಹತ್ವದ ಕ್ರಮ ಕೈಗೊಳ್ಳಲಾಗಿದ್ದು, ಸಾರ್ವಜನಿಕರಿಗೆ ಅದರಲ್ಲಿ ತೊಡಗಿಸಿಕೊಳ್ಳೋ ಅವಕಾಶವನ್ನು ನೀಡಲಾಗಿದೆ. ನೀವು ಬೆಂಗಳೂರಲ್ಲಿ ಕೆರೆ ರಕ್ಷಣೆ ಮಾಡೋ ಉದ್ದೇಶ ಹೊಂದಿದ್ದರೇ, ನಿಮಗೂ ಸುವರ್ಣಾವಕಾಶವಿದೆ. ಆ ಬಗ್ಗೆ ಮುಂದೆ ಓದಿ. ಈ ಕುರಿತಂತೆ ಬಿಬಿಎಂಪಿ ಮಾಹಿತಿ ನೀಡಿದ್ದು, ಬೆಂಗಳೂರಿನ ವ್ಯಾಪ್ತಿಯಲ್ಲಿ ಕೆರೆ ಮಿತ್ರರಾಗಲು ಈ ಹಿಂದೆ ಎರಡು ಬಾರಿ ಕೆರೆಗಳ ನಿರ್ವಹಣೆಯಲ್ಲಿ ನಾಗರೀಕರನ್ನು ಒಳಗೊಳ್ಳುವ ಉದ್ದೇಶದಿಂದ ಅಧಿಸೂಚನೆಯನ್ನು ಹೊರಡಿಸಿ ಆಸಕ್ತಿವುಳ್ಳ ನಾಗರೀಕರನ್ನು “ಕೆರೆ ಮಿತ್ರ” ಸ್ವಯಂಸೇವಕರಾಗಿ ನೊಂದಾಯಿಸಿಕೊಳ್ಳಲು ಕೋರಲಾಗಿತ್ತು. ಅದರಂತೆ 124 ಕೆರೆಗಳಿಗೆ ಈಗಾಗಲೇ ಕೆರೆ ಮಿತ್ರ ಸ್ವಯಂಸೇವಕರನ್ನು ಆಯ್ಕೆ ಮಾಡಲಾಗಿರುತ್ತದೆ. ಇನ್ನುಳಿದ ಕೆಲವು ಕೆರೆಗಳಿಗೆ ನಾಗರೀಕರು ನೊಂದಾಯಿಸದೇ ಇರುವುದರಿಂದ ಈ ಕೆರೆಗಳಿಗೆ ಹಾಗೂ ಕೆಲವು ಕೆರೆಗಳಿಗೆ ಕೇವಲ ಒಬ್ಬರು ನೊಂದಾಯಿಸಿರುವುದರಿಂದ ಒಟ್ಟಾಗಿ ಎಲ್ಲಾ ಕೆರೆಗಳಿಗೆ ನಾಗರೀಕರನ್ನು “ಕೆರೆ ಮಿತ್ರ” ಸ್ವಯಂ ಸೇವಕರನ್ನಾಗಿ ಪಾಲಿಕೆಯ ವೆಬ್‌ಸೈಟ್‌ನಲ್ಲಿ ನೊಂದಾಯಿಸಿಕೊಳ್ಳಲು ಕೋರಲಾಗಿದೆ. ಅದರಂತೆ ಬೆಂಗಳೂರಿನ ನಿವಾಸಿಗಳು ಅವರು ವಾಸವಿರುವ ವಾರ್ಡ್ /…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಹಾವು ಕಡಿತ ಚಿಕಿತ್ಸಾ ಕೇಂದ್ರಗಳನ್ನು ಗುರುತಿಸುವ ಬಗ್ಗೆ ಹಾಗೂ ಹಾವು ಕಡಿತದ ಪ್ರಕರಣಗಳಿಗೆ ವಿವಿಧ ಹಂತಗಳಲ್ಲಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಪ್ರಕಟಿತ ಮಾರ್ಗಸೂಚಿ ಕ್ರಮಗಳನ್ನು ಹಾವು ಕಡಿತಕ್ಕೆ ಚಿಕಿತ್ಸೆಯನ್ನು ನೀಡುವ ವೇಳೆಯಲ್ಲಿ ಕಡ್ಡಾಯವಾಗಿ ಪಾಲಿಸುವಂತೆಯೂ ಖಡಕ್ ಸೂಚನೆ ನೀಡಿದೆ. ರಾಜ್ಯ ಸರ್ಕಾರದಿಂದ ಕೆಲ ದಿನಗಳ ಹಿಂದಷ್ಟೇ ಹಾವು ಕಡಿತವನ್ನು ಅಧಿಸೂಚಿತ ಖಾಯಿಲೆ, ಘೋಷಿತ ಖಾಯಿಲೆ ಎಂಬುದಾಗಿ ಘೋಷಣೆ ಮಾಡಲಾಗಿತ್ತು. ಈ ಬೆನ್ನಲ್ಲೇ ಆರೋಗ್ಯ ಇಲಾಖೆಯಿಂದ ಹಾವುಗಳ ಕಡಿತಕ್ಕೆ ಚಿಕಿತ್ಸೆ ನೀಡುವ ಸಂಬಂಧ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಪ್ರಕಟಿತ ಮಾರ್ಗಸೂಚಿಯಲ್ಲಿ ಕರ್ನಾಟಕ ಸರ್ಕಾರವು ಹಾವು ಕಡಿತ ಪ್ರಕರಣ ಮತ್ತು ಮರಣವನ್ನು ಅಧಿಸೂಚಿತ ರೋಗವೆಂದು ಅಧಿಸೂಚನೆ ಸಂಖ್ಯೆ ಆಕುಕ 56 ಸಿಜಿಎಂ 2024 ದಿನಾಂಕ 12.02.2024 ರಂದು ಘೋಷಿಸಿದೆ. ರಾಜ್ಯದ ಎಲ್ಲಾ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ, ಎಲ್ಲಾ ಜಿಲ್ಲಾ ಆಸ್ಪತ್ರೆಗಳನ್ನು ಹಾಗೂ ಆಯ್ದ ಸಮುದಾಯ ಆರೋಗ್ಯ ಕೇಂದ್ರಗಳನ್ನು ಹಾವು ಕಡಿತ ಚಿಕಿತ್ಸಾ ಕೇಂದ್ರಗಳಾಗಿ ಗುರುತಿಸಲಾಗಿದೆ. ಹಾಗೂ ಹಾವು…

Read More

ಕನಕಗಿರಿ : ಶ್ರೇಷ್ಠತೆಯ ವ್ಯಸನದಿಂದ 58 ಲಕ್ಷ ಯಹೂದಿಗಳನ್ನು ಹತ್ಯೆ ಮಾಡಿದ ಹಿಟ್ಲರ್ ಕೊನೆಗೆ ಒಬ್ಬ ಹೇಡಿಯಂತೆ ಗುಂಡು ಹಾರಿಸಿಕೊಂಡು ಸತ್ತ. ಇಂಥಾ ಪರಿಸ್ಥಿತಿ ನಮ್ಮ ದೇಶದಲ್ಲಿ ಬರಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು. ಕೊಪ್ಪಳ ಜಿಲ್ಲೆಯ ಐತಿಹಾಸಿಕ ಕನಕಗಿರಿ ಉತ್ಸವವನ್ನು ಭವ್ಯವಾದ “ರಾಜಾ ಉಡಚಪ್ಪ ನಾಯಕ” ವೇದಿಕೆಯಲ್ಲಿ‌ ಉದ್ಘಾಟಿಸಿ ಮಾತನಾಡಿದರು. ಇಲ್ಲಿ ಶ್ರೇಷ್ಠರು, ಕನಿಷ್ಠರು ಇಲ್ಲವೇ ಇಲ್ಲ. ತಮ್ಮನ್ನು ತಾವು ಶ್ರೇಷ್ಠರು ಎನ್ನುವವರು, ಮತ್ತೊಬ್ಬರನ್ನು ಕನಿಷ್ಠರು ಎನ್ನುವವರು ಮನುಷ್ಯರೇ ಅಲ್ಲ. ಈ ರೀತಿಯ ಶ್ರೇಷ್ಠತೆಯ ವ್ಯಸನವನ್ನು ಹೋಗಲಾಡಿಸಲು ಬಸವಣ್ಣ, ಅಂಬೇಡ್ಕರ್ ಹೋರಾಟ ಮಾಡಿದರು ಎಂದು ವಿವರಿಸಿದರು.‌ ಸಮಾಜದಲ್ಲಿ ಅಸಮಾನತೆ ಇದೆ. ಇದನ್ನು ಹೋಗಲಾಡಿಸಲು ಏನಾದ್ರೂ ಪ್ರಯತ್ನ ಮಾಡಿದ್ವಾ ಎನ್ನುವ ಕುರಿತು ಪ್ರತಿಯೊಬ್ಬರೂ ತಮ್ಮನ್ನು ಪ್ರಶ್ನಿಸಿಕೊಳ್ಳಬೇಕು ಎಂದರು. ಚತುವರ್ಣವ್ಯವಸ್ಥೆ ರೂಪಿಸಿ ಒಬ್ಬರನ್ನು ಶ್ರೇಷ್ಠರು ಉಳಿದವರನ್ನು ಕನಿಷ್ಠರು ಎನ್ನುವ ವ್ಯವಸ್ಥೆ ರೂಪಿಸಿದರು. ಇದನ್ನೇ ಹಿಟ್ಲರ್ ಮತ್ತು ಮುಸಲೋನಿ ಜರ್ಮನಿಯಲ್ಲಿ ಮಾಡಿದ್ದು. ಕೊನೆಗೆ ಅವರಿಗೆ ಯಾವ ಗತಿ ಆಯ್ತು ಎಂದು ಇಡಿ ಮನುಕುಲ…

Read More

ಕೊಪ್ಪಳ: ಮುಂದಿನ ವರ್ಷ ಕನಕಗಿರಿ ಅಭಿವೃದ್ಧಿ ಪ್ರಾಧಿಕಾರವನ್ನು ರಚನೆ ಮಾಡಲಾಗುವುದು ಎಂದು ಸಿ.ಎಂ ಸಿದ್ಧರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ಕನಕಗಿರಿ ಉತ್ಸವವನ್ನು ನಿರಂತರವಾಗಿ ನಡೆಸಲು, ಕನಕಗಿರಿಯ ಸರ್ವತೋಮುಖ ಅಭಿವೃದ್ಧಿಗೆ ನಾನು ಮತ್ತು ನಮ್ಮ ಸರ್ಕಾರ ಸದಾ ಬದ್ದವಾಗಿದೆ. ಸರ್ವೋದಯ, ಸರ್ವದರ್ಮ, ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟುಕೊಂಡಿರುವವನು ನಾನು. ಈ ದಿಕ್ಕಿನಲ್ಲೇ ನಮ್ಮ ಸರ್ಕಾರ ಮುನ್ನಡೆಯಲಿದೆ. ಕೊಪ್ಪಳ ನನ್ನದೇ ಕ್ಷೇತ್ರ. ಈ ಜಿಲ್ಲೆಯ ಜನರ ಪ್ರೀತಿಗೆ ನಾನು ಸದಾ ಋಣಿ ಎಂದು ಕೃತಜ್ಞತೆ ಸಲ್ಲಿಸಿದರು. ಶ್ರೀ ವೇದಮೂರ್ತಿ ಭುವನೇಶ್ವರಯ್ಯ ತಾತನವರ ದಿವ್ಯ ಸಾನ್ನಿದ್ಯದಲ್ಲಿ ನಡೆದ ಉತ್ಸವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರೂ, ಕೊಪ್ಪಳ ಜಿಲ್ಲಾ ಸಚಿವರಾದ ಶಿವರಾಜ್ ತಂಗಡಗಿ ಸಂಗಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ರಾಯರೆಡ್ಡಿ, ಸಂಸದರಾದ ಕರಡಿ ಸಂಗಣ್ಣ, ಶಾಸಕರಾದ ರಾಘವೇಂದ್ರ ಹಿಟ್ನಾಳ್, ಜನಾರ್ಧನರೆಡ್ಡಿ, ದೊಡ್ಡನಗೌಡ ಪಾಟೀಲ್, ಇಕ್ಬಾಲ್ ಅನ್ಸಾರಿ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Read More

ಶಿವಮೊಗ್ಗ: ಸೊರಬ ಪುರಸಭೆಯ 2023-24 ನೇ ಸಾಲಿನ ಶೇ.24.10 ಪರಿಶಿಷ್ಟ ಜಾತಿ(ಎಸ್‍ಸಿಪಿ) ಅನುದಾನದಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ(ಟಿಎಸ್‍ಪಿ) ಅನುದಾನದಡಿ ಅಡುಗೆ ಅನಿಲ ಸಂಪರ್ಕ ನೀಡಲು, ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಹಾಗೂ ಶೇ.5 ರ ವಿಕಲಚೇತನರ ಯೋಜನೆಯಡಿ ಅಂಗವಿಕಲರ ಉಪಯೋಗಕ್ಕೆ ಅಡುಗೆ ಅನಿಲ ಸಂಪರ್ಕ ಕಲ್ಪಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪುರಸಭೆ ಕಚೇರಿಯಿಂದ ಅರ್ಜಿ ಪಡೆದು ಮಾ.07 ರೊಳಗೆ ನಿಗದಿತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು ಎಂದು ಸೊರಬ ಪುರಸಭೆ ಮುಖ್ಯಾಧಿಕಾರಿ ತಿಳಿಸಿದ್ದಾರೆ. https://kannadanewsnow.com/kannada/is-covid-19-vaccine-increasing-the-risk-of-heart-attack-the-health-ministers-clarification-is-as-follows/ https://kannadanewsnow.com/kannada/sri-ramakrishna-vidyashala-mysuru-invites-applications-for-admission-to-8th-standard/

Read More

ಬೆಂಗಳೂರು: ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಕ ಅಧಿಕಾರಿಗಳು ಪ್ರತಿ ಸೋಮವಾರ ತಮ್ಮ ಕಾರ್ಯಕ್ಷೇತ್ರದಲ್ಲಿ ಪ್ರವಾಸ ಮಾಡಿ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಬೇಕು, ತಮ್ಮ ಪ್ರವಾಸ ಸಮಯದಲ್ಲಿ ನರೇಗಾ ಕಾಮಗಾರಿಗಳ ವೀಕ್ಷಣೆ, ಕೂಸಿನ ಮನೆ ಹಾಗೂ ಅರಿವು ಕೇಂದ್ರಗಳ ತಪಾಸಣೆಯನ್ನು ಸೇರಿಸಿಕೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದ್ದಾರೆ. ಪ್ರತಿ ತಿಂಗಳ ಎರಡನೆ ದಿನಾಂಕದಂದು ನಡೆಯುವ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಮಾಸಿಕ ವಿಡಿಯೋ ಕಾನ್ಪರೆನ್ಸ್‌ ವಿಮರ್ಶಾ ಸಭೆಯಲ್ಲಿ ಸಚಿವರು ಮಾತನಾಡಿದರು. ಬೇಸಿಗೆಯ ಪ್ರಖರತೆ ಹೆಚ್ಚಾಗುತ್ತಿದ್ದು ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಅಭಾವ ಜಾಸ್ತಿಯಾಗುತ್ತಿದೆ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಮುಂದಿನ ಮೂರು ತಿಂಗಳುಗಳ ಕಾಲ ಪ್ರತಿ ಎರಡನೆ ಹಾಗೂ ನಾಲ್ಕನೆ ಸೋಮವಾರಗಳಂದು ಸಭೆ ನಡೆಸಿ ಕುಡಿಯುವ ನೀರಿನ ಪರಿಸ್ಥಿತಿಯ ಬಗ್ಗೆ ಅವಲೋಕನ ಮಾಡಬೇಕು, ನೀರಿನ ಅಭಾವ ಎದುರಿಸುವ ಗ್ರಾಮಗಳಿಗೆ ಪರ್ಯಾಯ ನೀರಿನ…

Read More

ದಾವಣಗೆರೆ: ಮುಂಬರುವ 2024-25 ಸಾಲಿಗೆ ಪರಿಶಿಷ್ಟ ಜಾತಿ ಹಾಗೂ ಅನೈರ್ಮಲ್ಯಕರ ವೃತ್ತಿಯಲ್ಲಿ ತೊಡಗಿರುವ ಪೋಷಕರ ಪ್ರತಿಭಾವಂತ ಗಂಡು ಮಕ್ಕಳಿಗೆ ಪ್ರಿತಿಷ್ಟಿತ ಮೈಸೂರಿನ ಶ್ರೀರಾಮಕೃಷ್ಣ ವಿದ್ಯಾಶಾಲೆಯಲ್ಲಿ 8 ನೇ ತರಗತಿಗೆ ಪ್ರವೇಶ ಕಲ್ಪಿಸಲು ಅರ್ಜಿ ಆಹ್ವಾನಿಸಲಾಗಿದೆ. ಏಪ್ರಿಲ್ 11 ರಂದು ಬೆಳಿಗ್ಗೆ 10 ಗಂಟೆಗೆ ಶ್ರೀ. ರಾಮಕೃಷ್ಣ ವಿದ್ಯಾಶಾಲೆ, ಯಾದವಗಿರಿ, ಮೈಸೂರು ಇಲ್ಲಿ ಆಯ್ಕೆ ಪ್ರವೇಶ ಪರೀಕ್ಷೆ ಇರುತ್ತದೆ. ಇದಕ್ಕೆ ಸಂಬಂಧಿಸಿದ ಅರ್ಜಿಯನ್ನು ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಠಡಿ ಸಂಖ್ಯೆ 37, ಮೊದಲನೇ ಮಹಡಿ, ಜಿಲ್ಲಾಡಳಿತ ಭವನ, ದಾವಣಗೆರೆ ಇಲ್ಲಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಮಾ.22 ರೊಳಗೆ ಕಚೇರಿಗೆ ಸಲ್ಲಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನಾಗರಾಜ ತಿಳಿಸಿದ್ದಾರೆ. https://kannadanewsnow.com/kannada/cafe-blast-case-we-will-bear-the-cost-of-treatment-of-injured-says-owner/ https://kannadanewsnow.com/kannada/pm-modi-launches-rs-1-62-lakh-crore-oil-and-gas-project-across-india/

Read More

ಬೆಂಗಳೂರು: ನಗರದ ಕುಂದಲಹಳ್ಳಿ ಬಳಿಯ ರಾಮೇಶ್ವರ ಕೆಫೆಯಲ್ಲಿ ನಿನ್ನೆ ಬಾಂಬ್ ಸ್ಪೋಟಗೊಂಡಿತ್ತು. ಈ ಘಟನೆಯಲ್ಲಿ 10 ಮಂದಿ ಗಾಯಗೊಂಡಿದ್ದಾರೆ. ಇಂತಹ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ನಾವೇ ಭರಿಸುವುದಾಗಿ ಹೋಟೆಲ್ ಮಾಲೀಕ ರಾಘವೇಂದ್ರ ರಾವ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಈ ಹಿಂದೆಯೋ ನಮ್ಮ ಹೋಟೆಲ್ ಬಳಿಯಲ್ಲಿ ಅನುಮಾನಾಸ್ಪದ ಬ್ಯಾಗ್ ಬಿಟ್ಟು ಹೋಗಲಾಗಿತ್ತು. ಆಗ ನಾವೇ ಪೊಲೀಸರಿಗೆ ಮಾಹಿತಿ ನೀಡಿದ್ವಿ. ಅದರನ್ನು ಪರಿಶೀಲಿಸಿದಾಗ ಅದರಲ್ಲಿ ಪಂಚೆ, ಶರ್ಟ್ ಬಟ್ಟೆಗಳು ಮಾತ್ರವೇ ಇದ್ದವು ಎಂದರು. ನಾವು 2012ರಲ್ಲಿ ರಾಮೇಶ್ವರಂ ಕೆಫೆಯಯನ್ನು ಪ್ರಾರಂಭಿಸಲಾಯಿತು. ತಲೆ ತಲಾಂದರದಿಂದ ನಮಗೆ ಕಷ್ಟಗಳು ಬರುತ್ತಿವೆ. ನಾವು ಎಪಿಜೆ ಅಬ್ದುಲ್ ಕಲಾಂ ಹಾದಿಯಲ್ಲಿ ನಡೆಯುವಂತವರು. ಕಲ್ಲುಗಳನ್ನು ಮೆಟ್ಟಿಲುಗಳನ್ನಾಗಿ ಮಾಡಿಕೊಂಡಿದ್ದೇವೆ ಎಂದರು. ರಾಮೇಶ್ವರಂ ಕೆಫೆ ಪ್ರಾರಂಭಕ್ಕೂ ಮುನ್ನ ಹಲವು ಹೋಟೆಲ್ ನಲ್ಲಿ ಕೆಲಸ ಮಾಡಿದ್ದೇನೆ. ಹೋಟೆಲ್ ನಡೆಸುವಂತವರು ಯಾರು ಈ ರೀತಿ ಕೃತ್ಯ ಎಸಗುವುದಿಲ್ಲ. ಎಲ್ಲಾ ಗಣ್ಯರು ಹಾಗೂ ಪೊಲೀಸರ ಜೊತೆಗೆ ನಾವು ಸೌಹಾರ್ಧತೆಯನ್ನು ಹೊಂದಿದ್ದೇವೆ ಎಂದು ತಿಳಿಸಿದರು. ನಾನು ಕೋಲಾರದ…

Read More

ಬೆಂಗಳೂರು : ಕಾಂಗ್ರೆಸ್ ಸರ್ಕಾರ ಕ್ಕೆ ಬಡವರ ಪರ ಕಾಳಜಿ ಇದೆ. ಆದಕ್ಕಾಗಿಯೇ ಗ್ಯಾರಂಟಿ ಆರ್ಥಿಕ ಹೊರೆ ನಡುವೆಯೂ 1,80,253 ಬಡ ಕುಟುಂಬಗಳಿಗೆ ಸೂರು ಕಲ್ಪಿಸುವ ಮಹತ್ವದ ತೀರ್ಮಾನ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೆ ಆರ್ ಪುರದ ನಗರೇಶ್ವರ ನಾಗೇನಹಳ್ಳಿ ಬಳಿ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮ ದಲ್ಲಿ ರಾಜ್ಯಾ ದ್ಯಂತ ಏಕ ಕಾಲದಲ್ಲಿ 36.789 ಮನೆಗಳ ಹಂಚಿಕೆಗೆ ಚಾಲನೆ ನೀಡಿ ಮಾತನಾಡಿ, ಬಡವರು ಸಂಕಷ್ಟ ದಲ್ಲಿದ್ದಾರೆ ಎಂದು ಜಮೀರ್ ಅಹಮದ್ ಖಾನ್ ಹೇಳಿದ ತಕ್ಷಣ ಫಲಾನುಭವಿಗಳ ವಂತಿಕೆ ಐದು ಲಕ್ಷ ರೂ ಸರ್ಕಾರವೇ ಭರಿಸುವ ತೀರ್ಮಾನ ಕೈಗೊಂಡಿತು. ಇಂದು 36.789 ಮನೆ ನೀಡಿದ್ದು ಉಳಿದ ಮನೆ ಮುಂದಿನ ದಿನಗಳಲ್ಲಿ ನೀಡಲಾಗುವುದು ಎಂದು ತಿಳಿಸಿದರು. ಬಿಜೆಪಿ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ಹೇಳುತ್ತದೆ. ಆದರೆ, ಪ್ರಧಾನ ಮಂತ್ರಿ ಅವಾಸ್ ಯೋಜನೆ ಎಂದು ಬಡವರು ಮನೆ ಕಟ್ಟಿಕೊಳ್ಳಲು 1.50 ಲಕ್ಷ ಸಬ್ಸಿಡಿ ನೀಡಿ…

Read More

ನವದೆಹಲಿ: 2024 ರ ಲೋಕಸಭಾ ಚುನಾವಣೆಗೆ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಶನಿವಾರ ಪ್ರಕಟಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಘೋಷಿಸಿದ್ದಾರೆ. ಮೊದಲ ಪಟ್ಟಿಯಲ್ಲಿ 34 ಕೇಂದ್ರ ಮತ್ತು ರಾಜ್ಯ ಸಚಿವರು, ಇಬ್ಬರು ಮಾಜಿ ಮುಖ್ಯಮಂತ್ರಿಗಳ ಹೆಸರುಗಳಿವೆ ಎಂದು ತಾವ್ಡೆ ಹೇಳಿದರು. ಅರುಣಾಚಲ ಪಶ್ಚಿಮದಿಂದ ಕಿರಣ್ ರಿಜಿಜು, ದಿಬ್ರುಗಢದಿಂದ ಸರ್ಬಾನಂದ ಸೋನೊವಾಲ್, ಈಶಾನ್ಯ ದೆಹಲಿಯಿಂದ ಮನೋಜ್ ತಿವಾರಿ, ನವದೆಹಲಿಯಿಂದ ಬಾನ್ಸುರಿ ಸ್ವರಾಜ್, ಗಾಂಧಿನಗರದಿಂದ ಅಮಿತ್ ಶಾ, ಪೋರ್ಬಂದರ್ನಿಂದ ಮನ್ಸುಖ್ ಮಾಂಡವಿಯಾ, ಗೊಡ್ಡಾದಿಂದ ಸಿಆರ್ ಪಾಟೀಲ್ ನಿರಾಹುವಾ, ನಿಶಿಕಾಂತ್ ದುಬೆ ಬಿಜೆಪಿ ಮೊದಲ ಪಟ್ಟಿಯಲ್ಲಿದ್ದಾರೆ. ತ್ರಿಶೂರ್ ನಿಂದ ಸುರೇಶ್ ಗೋಪಿ, ಪಥನಂತಿಟ್ಟದಿಂದ ಅನಿಲ್ ಆಂಟನಿ, ತಿರುವನಂತಪುರಂನಿಂದ ರಾಜೀವ್ ಚಂದ್ರಶೇಖರ್, ಗುನಾದಿಂದ ಜ್ಯೋತಿರಾದಿತ್ಯ ಸಿಂಧಿಯಾ, ವಿದಿಶಾದಿಂದ ಶಿವರಾಜ್ ಸಿಂಗ್ ಚೌಹಾಣ್, ಬಿಕಾನೇರ್ನಿಂದ ಅರ್ಜುನ್ ಮೇಘವಾಲ್, ಅಲ್ವಾರ್ನಿಂದ ಭೂಪೇಂದ್ರ ಯಾದವ್, ಜೋಧಪುರದಿಂದ ಗಜೇಂದ್ರಸಿಂಗ್ ಶೇಖಾವತ್, ಕೋಟಾದಿಂದ ಓಂ ಬಿರ್ಲಾ, ಕರೀಂನಗರದಿಂದ ಬಂಡಿ ಸಂಜಯ್…

Read More