Author: kannadanewsnow09

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿರುವ ಮುಡಾ ನಿವೇಶನ ಅಕ್ರಮ, ವಾಲ್ಮೀಕಿ ನಿಗಮದ ಕರ್ಮಕಾಂಡದ ಬೆನ್ನಲ್ಲೇ ಸಿದ್ದರಾಮಯ್ಯ ಸರ್ಕಾರಕ್ಕೆ KIADB ಬಹುಕೋಟಿ ಹಗರಣವೂ ಸಂಕಷ್ಟ ತಂದೊಡ್ಡಿದೆ. ಕುತೂಹಲಕಾರಿ ಬೆಳವಣಿಗೆಯಲ್ಲಿ ‘ದೇವನಹಳ್ಳಿ KIADB ಭೂಸ್ವಾಧೀನ ಅವ್ಯವಹಾರ’ ಆರೋಪ ಕುರಿತಂತೆ ಸಿಎಂ ಸಿದ್ದರಾಮಯ್ಯ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹಾಗೂ ಕೆ.ಎ.ಎಸ್ ಅಧಿಕಾರಿ ಬಾಳಪ್ಪ ಹಂದಿಗುಂದ ವಿರುದ್ಧ ಜಾರಿ ನಿರ್ದೇಶನಾಲಯ (ED)ದ ನಿರ್ದೇಶಕರಿಗೆ ದೂರು ಸಲ್ಲಿಕೆಯಾಗಿದೆ. ‘ಸಿಟಿಜನ್ ರೈಟ್ಸ್ ಫೌಂಡೇಶನ್’ ಈ ದೂರನ್ನು ಸಲ್ಲಿಸಿದ್ದು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ನಿರ್ದೇಶನ ಕೋರಿ ಕೇಂದ್ರ ಸರ್ಕಾರಕ್ಕೂ ದೂರು ಸಲ್ಲಿಕೆಯಾಗಿದೆ. ಕೈಗಾರಿಕೋದ್ಯಮಗಳನ್ನು ಉತ್ತೇಜಿಸಲು, ಉದ್ಯಮ ಸಂಸ್ಥೆಗಳಿಗೆ ಮೂಲಸೌಕರ್ಯ ಕಲ್ಪಿಸುವ ಸಂಬಂಧ ಸ್ಥಾಪಿಸಲಾಗಿರುವ ರಾಜ್ಯ ಸರ್ಕಾರದ ಅಧೀನದ ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ (KIADB) ಇದೀಗ ಹಗರಣಗಳ ಕೂಪವಾಗಿದ್ದು, ಒಂದೊಂದೇ ಕರ್ಮಕಾಂಡಗಳು ಬೆಳಕಿಗೆ ಬರುತ್ತಿವೆ. ಅದರಲ್ಲೂ ಸರ್ಕಾರಿ ಜಮೀನಿಗೆ ನಕಲಿ ಮಾಲೀಕರನ್ನು ಸೃಷ್ಟಿಸಿ ಪರಿಹಾರದ ಮೊತ್ತವನ್ನು…

Read More

ಬೆಂಗಳೂರು: ದಕ್ಷಿಣ ಭಾರತದ ಸಾಂಪ್ರದಾಯಿಕ ಶೈಲಿಯ ಭೋಜನಕ್ಕೆ ಹೆಸರುವಾಸಿಯಾಗಿರುವ ರಾಮೇಶ್ವರಂ ಕೆಫೆ ತನ್ನ ನೂತನ ಶಾಖೆಯನ್ನು ಇಂದಿರಾನಗರದಲ್ಲಿ ಪುನರಾರಂಭಗೊಳಿಸಲಾಯಿತು. ಇಂದಿರಾನಗರದ 100 ಅಡಿ ರಸ್ತೆಯಲ್ಲಿ 15,000 ಚದರ ಅಡಿಗಳಷ್ಟು ವ್ಯಾಪ್ತಿಯಲ್ಲಿ ಸುಮಾರು 400 ಜನರಿಗೆ ಆತಿಥ್ಯ ನೀಡಬಹುದಾದ ವಿಶಾಲವಾದ ಸ್ಥಳದಲ್ಲಿ ನಿರ್ಮಿಸಲಾಗಿದೆ. ಈ ಕುರಿತು ಮಾತನಾಡಿದ ರಾಮೇಶ್ವರಂ ಕೆಫೆಯ ಸಹ-ಸಂಸ್ಥಾಪಕ ಮತ್ತು ಸಿಇಒ ರಾಘವೇಂದ್ರ ರಾವ್, ಇಂದಿರಾನಗರದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದೇವೆ. ಈ ಭಾಗದ ಜನರಿಗಾಗಿ ನಮ್ಮ ದಕ್ಷಿಣ ಭಾರತದ ಸಾಂಪ್ರದಾಯಿಕ ಶೈಲಿಯ ಭೋಜನವನ್ನು ಗುಣಮಟ್ಟ ಹಾಗೂ ರುಚಿಕರವಾಗಿ ಉಣಬಡಿಸುವ ಉದ್ದೇಶದಿಂದ ವಿಶಾಲವಾದ ಸ್ಥಳದಲ್ಲಿ ನಿರ್ಮಿಸಿದೇವೆ. ಸುಮಾರು 120 ಹೆಚ್ಚು ಬಗೆಯ ವಿಶೇಷ ಭಕ್ಷ್ಯಗಳು ಲಭ್ಯವಿದೆ. ಮತ್ತೊಂದು ವಿಶೇಷವೆಂದರೆ, ನಮ್ಮ ಸಾಂಪ್ರದಾಯಕತೆಗೆ ಒತ್ತು ನೀಡುವ ಉದ್ದೇಶದಿಂದ ರಾಮೇಶ್ವರಂ ಕೆಫೆಯನ್ನು ದೇವಾಲಯದ ಮಾದರಿಯಲ್ಲಿಯೇ ವಿನ್ಯಾಸಗೊಳಿಸಲಾಗಿದ್ದು, ಇಲ್ಲಿ ಭೇಟಿ ನೀಡುವವರಿಗೆ ನಮ್ಮ ಧಾರ್ಮಿಕತೆಯ ಅನುಭವ ದೊರೆಯಬೇಕು. ಸಹ-ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ದಿವ್ಯಾ ರಾಘವೇಂದ್ರ ರಾವ್ ಮಾತನಾಡಿ, 2021ರಲ್ಲಿ ಪ್ರಾರಂಭಗೊಂಡ ನಮ್ಮ ಜರ್ನಿ ಇಲ್ಲಿಯವರೆಗೂ…

Read More

ನವದೆಹಲಿ: ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಆಸ್ಟ್ರೇಲಿಯಾದ ಸಹವರ್ತಿ ಪೆನ್ನಿ ವಾಂಗ್ ಅವರೊಂದಿಗಿನ ಸಭೆಯ ಪತ್ರಿಕಾಗೋಷ್ಠಿಯ ಸುದ್ದಿಯನ್ನು ಪ್ರಸಾರ ಮಾಡಿದ ಕೆಲವೇ ಗಂಟೆಗಳ ನಂತರ ಕೆನಡಾವು ಪ್ರಮುಖ ವಲಸಿಗ ಸಂಸ್ಥೆಯಾದ ಮಾಧ್ಯಮವನ್ನು ನಿಷೇಧಿಸಿದೆ ಎಂದು ಭಾರತ ಗುರುವಾರ ಹೇಳಿದೆ. ಆಸ್ಟ್ರೇಲಿಯಾ ಟುಡೇಯನ್ನು ಕೆನಡಾ ನಿಷೇಧಿಸಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ. ಸುದ್ದಿ ಸಂಸ್ಥೆಯನ್ನು ನಿರ್ಬಂಧಿಸಲಾಗಿದೆ ಮತ್ತು ಕೆನಡಾದಲ್ಲಿ ವೀಕ್ಷಕರಿಗೆ ಇನ್ನು ಮುಂದೆ ಲಭ್ಯವಿಲ್ಲ. “… ಹೌದು, ನೀವು ಅದನ್ನು ಸರಿಯಾಗಿ ಕೇಳಿದ್ದೀರಿ. ಪ್ರಮುಖ ವಲಸಿಗ ಮಳಿಗೆಯಾಗಿರುವ ಈ ನಿರ್ದಿಷ್ಟ ಮಳಿಗೆಯ ಸಾಮಾಜಿಕ ಮಾಧ್ಯಮ ಹ್ಯಾಂಡಲ್ಗಳು ಮತ್ತು ಪುಟಗಳನ್ನು ನಿರ್ಬಂಧಿಸಲಾಗಿದೆ ಮತ್ತು ಕೆನಡಾದ ವೀಕ್ಷಕರಿಗೆ ಇನ್ನು ಮುಂದೆ ಲಭ್ಯವಿಲ್ಲ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಪೆನ್ನಿ ವಾಂಗ್ ಅವರೊಂದಿಗೆ ವಿದೇಶಾಂಗ ವ್ಯವಹಾರಗಳ ಸಚಿವರ ಪತ್ರಿಕಾಗೋಷ್ಠಿಯನ್ನು ಈ ಪತ್ರಿಕೆ ಪ್ರಸಾರ ಮಾಡಿದ ಕೆಲವೇ ಗಂಟೆಗಳ ನಂತರ ಇದು ಸಂಭವಿಸಿದೆ. ವಿದೇಶಾಂಗ ವ್ಯವಹಾರಗಳ ಸಚಿವರ ಭೇಟಿಯ ಬಗ್ಗೆ ಹಲವಾರು ಲೇಖನಗಳನ್ನು ಮತ್ತು…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ಕಚೇರಿಗಳಲ್ಲಿ, ಕಚೇರಿಯ ಆವರಣಗಳಲ್ಲಿ ಧೂಮಪಾನ, ಇತರೆ ತಂಬಾಕು ಉತ್ಪನ್ನಗಳ ಸೇವನೆಯನ್ನು ನಿಷೇಧಿಸಿ ಖಡಕ್ ಆದೇಶ ಹೊರಡಿಸಲಾಗಿದೆ. ಈ ಕುರಿತು ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಗೆಜೆಟ್ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಧೂಮಪಾನ ಹಾಗೂ ತಂಬಾಕಿನ ಇತರ ಉತ್ಪನ್ನಗಳ ಸೇವನೆಯು ಆರೋಗ್ಯಕ್ಕೆ ಮಾರಕವಾಗಿದ್ದು ಸಾರ್ವಜನಿಕ ಪುದೇಶಗಳಲ್ಲಿ ಇಂತಹ ಉತ್ಪನ್ನಗಳ ಸೇವನೆಯನ್ನು THE CIGARETTES AND OTHER TOBACCO PRODUCTS (PROHIBITION OF ADVERTISEMENT AND REGULATION OF TRADE AND COMMERCE, PRODUCTION, SUPPLY AND DISTRIBUTION) ACT, 2003 (ಕೇಂದ್ರ ಅಧಿನಿಯಮ 34/2003)ರಲ್ಲಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು, 2021ರ ನಿಯಮ-31ರಲ್ಲಿ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಮಾದಕ ಪಾನೀಯ ಅಥವಾ ಮಾದಕ ವಸ್ತುವನ್ನು ಸೇವಿಸುವುದನ್ನು ಕೂಡ ನಿಷೇಧಿಸಲಾಗಿದೆ. ಶಾಸನತ್ಮಾಕ ಎಚ್ಚರಿಕೆಗಳ ಹೊರತಾಗಿಯೂ ಸರ್ಕಾರಿ ಕಛೇರಿಗಳಲ್ಲಿ ಹಾಗೂ ಕಛೇರಿಯ ಆವರಣದಲ್ಲಿ ತಂಬಾಕು ಉತ್ಪನ್ನಗಳ ಸೇವನೆ…

Read More

ಶಿವಮೊಗ್ಗ: ಜಿಲ್ಲೆಯ ಸೊರಬ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಗಾಂಜಾ ಮಾರುತ್ತಿದ್ದಂತ ಯುವಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನವೆಂಬರ್.6, 2024ರಂದು ಸೊರಬ ಪಟ್ಟಣದ ಹಿರೇಶಕುನದ ಇಂಡಸ್ಟ್ರೀಯಲ್ ಪ್ರದೇಶದಲ್ಲಿ ಯುವಕನೊಬ್ಬ ಗಾಂಜಾ ಮಾರುತ್ತಿದ್ದಂತ ಖಚಿತ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಈ ಖಚಿತ ಮಾಹಿತಿಯ ಮೇರೆಗೆ ಶಿಕಾರಿಪುರ ಹಾಗೂ ಸೊರಬ ಡಿವೈಎಸ್ಪಿ ಕೇಶವ್ ಸೂಚನೆ ಮೇರೆಗೆ ಸೊರಬ ಸರ್ಕಲ್ ಇನ್ಸ್ ಪೆಕ್ಟರ್ ರಾಜಶೇಖರ್ ಮಾರ್ಗದರ್ಶನದಲ್ಲಿ ಎಸ್ಐ ಚಂದನ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ದಾಳಿಯ ವೇಳೆಯಲ್ಲಿ ಸಾಗರ ನಿವಾಸಿ ಮನೀಶ್ ಖಾರ್ವಿ(24) ಎಂಬಾತನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯಿಂದ 10 ಸಾವಿರ ಮೌಲ್ಯದ 100 ಗ್ರಾಂ ತೂಕದ ಒಣ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಇದಲ್ಲದೇ ರೂ.600 ನಗದು ಹಾಗೂ ಕೃತ್ಯಕ್ಕೆ ಬಳಸಿದ್ದಂತ ಒಂದು ದ್ವಿಚಕ್ರವಾಹನವನ್ನು ಸೀಜ್ ಮಾಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಹೆಚ್ ಸಿ ರಾಜುನಾಯಕ್, ಪಿಸಿ ವಿನಯ್, ರಾಘವೇಂದ್ರ ಹಾಗೂ ಲೋಕೇಶ್, ಚಾಲಕ ಜಗದೀಶ್ ಭಾಗಿಯಾಗಿದ್ದರು. ಇಂತಹ ಕಾರ್ಯಾಚರಣೆ ನಡೆಸಿದಂತ ಸೊರಬ ಠಾಣೆಯ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳಿಗೆ…

Read More

ಬೆಂಗಳೂರು: IIT/IIM/IISC /NIT ಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ಓದುವ SC/ST ವಿದ್ಯಾರ್ಥಿಗಳ ಪ್ರೋತ್ಸಾಹ ಧನವನ್ನು 1 ರಿಂದ 2 ಲಕ್ಷಕ್ಕೆ ಹೆಚ್ಚಳ ಮಾಡಿ ಸರ್ಕಾರವು ಆದೇಶ ಹೊರಡಿಸಿದ್ದು ಇದು ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳ ಹೆಚ್ಚಿನ ಶೈಕ್ಷಣಿಕ ಸಾಧನೆಗೆ ಕಾರಣವಾಗಲಿದೆ ಎಂದು ಮಾನ್ಯ ಸಮಾಜ ಕಲ್ಯಾಣ ಸಚಿವರಾದ ಡಾ ಹೆಚ್ ಸಿ ಮಹದೇವಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇನ್ನು ಪಿಯುಸಿ ಪರೀಕ್ಷೆಯಲ್ಲಿ 95 ಕ್ಕೂ ಹೆಚ್ಚಿನ ಅಂಕಗಳನ್ನು ಪಡೆದು, ನೀಟ್ ಪ್ರವೇಶ ಪರೀಕ್ಷೆಯ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ದೊರಕದೇ ಮ್ಯಾನೇಜ್ ಮೆಂಟ್ ಕೋಟಾದಡಿ ಎಂಬಿಬಿಎಸ್ ಕೋರ್ಸ್ ಗೆ ಸೀಟು ಪಡೆದುಕೊಂಡ ಪರಿಶಿಷ್ಟ ಜಾತಿಯ ಮಕ್ಕಳಿಗೆ 25 ಲಕ್ಷ ರೂಪಾಯಿಗಳ ಶುಲ್ಕ ಧನವನ್ನು ಒದಗಿಸಲು ಸರ್ಕಾರ ತೀರ್ಮಾನಿಸಿದೆ. ಎಂಬಿಬಿಎಸ್ ಪದವಿಯನ್ನು ಪಡೆಯುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಮೊದಲ ವರ್ಷ 60% ಗೂ ಹೆಚ್ಚಿನ ಅಂಕಗಗಳನ್ನು ಪಡೆದು ಉತ್ತೀರ್ಣ ರಾದರೆ ಅವರಿಗೆ ಅವರಿಗೆ ಮತ್ತೆ 25 ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನವನ್ನು ನೀಡಲಾಗುವುದು. ಶಿಕ್ಷಣವೇ ಸಮಾಜವನ್ನು…

Read More

ಬೆಂಗಳೂರು: ನಗರದ ಮತ್ತೊಂದು ಪ್ರತಿಷ್ಠಿತ ಶಾಲೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಕೂಡಲೇ ಪೊಲೀಸರು ಪರಿಶೀಲಿಸಲಾಗಿ, ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯ ಬಿಷಪ್ ಕಾಟನ್ ಶಾಲೆಗೆ ವೆಬ್ ಸೈಟ್ ಗೆ ಬಾಂಬ್ ಬೆದರಿಕೆ ಇ-ಮೇಲ್ ಮೂಲಕ ಕಳಉಹಸಲಾಗಿದೆ. ಬೆಳಿಗ್ಗೆ ಬಂದಿದ್ದಂತ ಬೆದರಿಕೆ ಸಂದೇಶವನ್ನು ಮಧ್ಯಾಹ್ನ ಶಾಲಾ ಸಿಬ್ಬಂದಿಗಳು ಗಮನಿಸಿದ್ದಾರೆ. ಈ ಬೆದರಿಕೆಯ ಸಂದೇಶದ ನಂತ್ರ ಕೂಡಲೇ ಕಬ್ಬನ್ ಪಾರ್ಕ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದಂತ ಶ್ವಾನ ದಳ, ಬಾಂಬ್ ನಿಷ್ಕ್ರೀಯ ದಳದ ಸಿಬ್ಬಂದಿಗಳು ಬಿಷಪ್ ಕಾಟನ್ ಶಾಲೆಯನ್ನು ಪರಿಶೀಲಿಸಿದ್ದಾರೆ. ಪೊಲೀಸರು ಪರಿಶೀಲನೆಯ ನಂತ್ರ ಯಾವುದೇ ಬಾಂಬ್ ಶಾಲೆಯಲ್ಲಿ ಪತ್ತೆಯಾಗಿಲ್ಲ. ಹೀಗಾಗಿ ಇದೊಂದು ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಎಂಬುದಾಗಿ ತಿಳಿಸಿದ್ದಾರೆ. ಈ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. https://kannadanewsnow.com/kannada/siddaramaiah-demands-pm-modis-apology-for-false-advertisement-on-grihalakshmi-scheme/ https://kannadanewsnow.com/kannada/save-your-life-from-heart-attack-keep-this-7-rupees-ram-kit/

Read More

ಬೆಂಗಳೂರು: ಗೃಹಲಕ್ಷ್ಮೀ ಯೋಜನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಸುಳ್ಳು ಜಾಹೀರಾತು ನೀಡಿದ್ದಾರೆ. ಕೂಡಲೇ ಕ್ಷಮೆಯಾಚನೆ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆಗ್ರಹಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ‘‘ಸುಳ್ಳೇ ಬಿಜೆಪಿಯ ಮನೆ ದೇವರು’’ ಎಂದು ನಾವು ಹೇಳುತ್ತಿರುವುದು ಸುಳ್ಳಲ್ಲ. ಮಹಾರಾಷ್ಟ್ರದ ಬಿಜೆಪಿ ನಮ್ಮ ಯಶಸ್ವಿ ಗ್ಯಾರಂಟಿ ಯೋಜನೆಯಾಗಿರುವ ‘’ಗೃಹಲಕ್ಷ್ಮಿ’’ ಬಗ್ಗೆ ಒಂದು ಅಪ್ಪಟ ಸುಳ್ಳನ್ನು ಮಾಧ್ಯಮಗಳಲ್ಲಿ ಜಾಹೀರಾತು ಮೂಲಕ ಪ್ರಕಟಿಸಿ ಸಿಕ್ಕಿ ಹಾಕಿಕೊಂಡಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಭರವಸೆ ನೀಡಿದಂತೆ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರದೆ ಮೋಸ ಮಾಡಿದೆ ಎನ್ನುವುದು ಬಿಜೆಪಿ ಆರೋಪ ಎಂದಿದ್ದಾರೆ. ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರೇ, ಇದೇನು ನಮಗೆ ಆಶ್ಚರ್ಯ ಉಂಟುಮಾಡಿಲ್ಲ. ಮನೆ ಒಡೆಯನ ಬುದ್ದಿ ಮನೆಯವರಿಗೆಲ್ಲ ಬಂದಿದೆ. ಹೋದಲ್ಲಿ ಬಂದಲ್ಲಿ ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಸುಳ್ಳುಗಳನ್ನು ಉದುರಿಸುವ ನಿಮ್ಮಿಂದಲೇ ಪ್ರೇರಣೆ ಪಡೆದು ಮಹಾರಾಷ್ಟ್ರ ಬಿಜೆಪಿ ಇಷ್ಟೊಂದು ನಿರ್ಲಜ್ಜತನದಿಂದ ಈ ಹಸಿಸುಳ್ಳನ್ನು ಪ್ರಕಟಿಸಿದೆ ಎನ್ನುವುದು ನಿಸ್ಸಂಶಯ ಎಂದು ತಿಳಿಸಿದ್ದಾರೆ.…

Read More

ತುಮಕೂರು: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿನ  ಶೌಚದಗುಂಡಿ ತುಂಬಿ ಹರಿಯುತ್ತಿದ್ದ ಮಲವನ್ನ ದಲಿತರಿಂದ ಸ್ವಚ್ಚಗೊಳಿಸಿರುವ ಅಮಾನವೀಯ ಘಟನೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಸ್ವಕ್ಷೇತ್ರ ಕೊರಟಗೆರೆಯಲ್ಲಿ ನಡೆದಿದೆ. ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದ ಹೃದಭಾಗದಲ್ಲಿರುವ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು ನಾಗರೀಕ ‌ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ನಿಲ್ದಾಣದ ಒಳಗಿರುವ ಸಾರ್ವಜನಿಕ ಶೌಚಾಲಯದ ಪಿಟ್ ತುಂಬಿ ಹರಿಯುತ್ತಿದನ್ನ ದಲಿತರಿಂದ ಸ್ವಚ್ಚಗೊಳಿಸುವ ಕೆಲಸ ಮಾಡಿಸಲಾಗಿದೆ. ತುಮಕೂರು ಮೂಲದ ಪರಿಶಿಷ್ಟ ಜಾತಿಗೆ ಸೇರಿದ 10 ವರ್ಷದ ಬಾಲಕಾರ್ಮಿಕ ಹಾಗೂ ಓರ್ವ ವ್ಯಕ್ತಿ ನಿಲ್ದಾಣದಲ್ಲಿ ಮಲವನ್ನ ಸ್ವಚ್ಚಗೊಳಿಸುತ್ತಿದ್ದ ದೃಷ್ಯ ಮಾಧ್ಯಮದ ಕ್ಯಾಮೆರಾದಲ್ಲಿ ಸೆರೆಯಾಗಿದೆ. ದಲಿತರಿಂದ ಮಲ ಸ್ವಚ್ಚಗೊಳಿಸುವ ಕೆಲಸ ಮಾಡಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಸಿಬ್ಬಂದಿ ಮಾಧ್ಯಮದವರನ್ನ ಕಂಡ ಕೂಡಲೇ ಅಲ್ಲಿಂದ ಪರಾರಿಯಾಗಿದ್ದಾನೆ. ಮಾಧ್ಯಮ ದವರು ಬಾಲಕನನ್ನ ಮಾತನಾಡಿಸಿದ ವೇಳೆ ಶೌಚಾಲಯದ ನಿರ್ವಹಣೆ ಮಾಡುತ್ತಿದ್ದ ಕುಮಾರಣ್ಣ ಎಂಬುವರು ನಮಗೆ ಈ ಕೆಲಸ ಮಾಡುವಂತೆ ಹೇಳಿದ್ದಾರೆ,…

Read More

ಚಿಕ್ಕಬಳ್ಳಾಪುರ: ಮಿನಿ ವಿಧಾನಸೌಧ ವಕ್ಫ್ ಆಸ್ತಿ ಎಂಬುದಾಗಿ ನಮೂದಿಸಿದ ವಿವಾದದ ಬೆನ್ನಲ್ಲೇ ಸರ್ ಎಂ ವಿಶ್ವೇಶ್ವರಯ್ಯ ಅವರು ಓದಿದಂತ ಸರ್ಕಾರಿ ಶಾಲೆಯ ಭೂಮಿ ಕೂಡ ವಕ್ಫ್ ಗೆ ಸೇರಿದ್ದು ಎಂಬುದಾಗಿ ಪಹಣಿಯಲ್ಲಿ ನಮೂದಿಸಲಾಗಿದೆ. ಇದರ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಚಿಕ್ಕಬಳ್ಳಾಪುರ ತಾಲ್ಲೂಕಿನ ಕಂದವಾರ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರ್ ಎಂ ವಿಶ್ವೇಶ್ವರಯ್ಯ ಅವರು ಹೋದಿದ್ದು. ಈ ಸರ್ಕಾರಿ ಶಾಲೆಯ ಹೆಸರಿನಲ್ಲಿದ್ದಂತ ಸರ್ವೆ ನಂಬರ್ 1ರಲ್ಲಿನ 19 ಗುಂಟೆ ಜಾಗ ಕೂಡ ದಾವೂದ್ ಷಾ ವಾಲೀ ದರ್ಗಾ ಸುನ್ನಿ ವಕ್ಫ್ ಸ್ವತ್ತು ಎಂಬುದಾಗಿ ಪಹಣಿಯಲ್ಲಿ ಉಲ್ಲೇಖಿಸಲಾಗಿದೆ. 2015-16ರಲ್ಲಿ ಪಹಣಿಯಲ್ಲಿ ಸ್ಕೂಲ್ ಬದಲು ವಕ್ಫ್ ಸ್ವತ್ತು ಎಂಬುದಾಗಿ ನಮೂದಾಗಿದೆ. ಈ ಹಿನ್ನಲೆಯಲ್ಲಿ ಸರ್ಕಾರಿ ಶಾಲೆಯ ಜಾಗದ ಉಳಿವಿಗಾಗಿ ಕಂದವಾರ ಗ್ರಾಮದ ಗ್ರಾಮಸ್ಥರು ಹೋರಾಟಕ್ಕೆ ಸಿದ್ಧರಾಗಿದ್ದಾರೆ. ಅಲ್ಲದೇ ಈ ತಪ್ಪು ಸರಿಪಡಿಸುವಂತೆಯೂ ಆಗ್ರಹಿಸಿದ್ದಾರೆ. ಇನ್ನೂ ಕೆಲ ವರ್ಷಗಳ ಹಿಂದೆ ಶಾಲೆಯ ಆವರಣದಲ್ಲೇ ದರ್ಗಾ ಕೂಡ ತೆಲೆ ಎತ್ತಿದ್ದೂ, ಗ್ರಾಮಸ್ಥರು…

Read More