Author: kannadanewsnow09

ಬೆಂಗಳೂರು: ಕಲಬುರಗಿ ಜಿಲ್ಲೆಯ ವಾಡಿ ಪೊಲೀಸ್ ಠಾಣೆಯಲ್ಲಿ ಪೊಲೀಸರು ಇಸ್ಪೀಟ್ ಆಟದಲ್ಲಿ ನಿರತರಾಗಿರುವ ವಿಡಿಯೋ ದೃಶ್ಯಗಳು ವೈರಲ್ ಆಗಿರುವ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಹಾಗೂ ಠಾಣೆಯ ಸಬ್ ಇನ್ಸ್ಪೆಕ್ಟರ್‌ಗೆ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಕಲಬುರಗಿ ಜಿಲ್ಲೆಯ ವಾಡಿ ಪೊಲೀಸ್ ಠಾಣೆಯಲ್ಲಿ ಪೊಲೀಸರು ಇಸ್ಪೀಟ್ ಆಟದಲ್ಲಿ ನಿರತರಾಗಿರುವ ವಿಡಿಯೋ ದೃಶ್ಯಗಳು ತಮ್ಮ ಗಮನಕ್ಕೆ ಬಂದ ತಕ್ಷಣವೇ ಈ ಕುರಿತು ವಿಚಾರಣೆ ನಡೆಸಿ ಅಗತ್ಯ ಕ್ರಮ ಜರುಗಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದೆ ಎಂದು ಹೇಳಿರುವ ಸಚಿವರು ಈ ಬಗ್ಗೆ ವಿಚಾರಣೆ ನಡೆಸಿದಾಗ ಈ ಪ್ರಕರಣ ಹಲವು ತಿಂಗಳ ಹಿಂದೆ ನಡೆದದ್ದು ಎಂದು ತಿಳಿದು ಬಂದಿರುತ್ತದೆ ಎಂದು ಹೇಳಿದ್ದಾರೆ. ಇಲಾಖೆಯ ಯಾವುದೇ ಸಿಬ್ಬಂದಿ, ಅಧಿಕಾರಿಗಳ ಶಿಸ್ತು ಉಲ್ಲಂಘನೆಯನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ, ಸಾರ್ವಜನಿಕ ಸೇವೆಯಲ್ಲಿ ಹಾಗೂ ಕಾನೂನು ಪಾಲನೆಯಲ್ಲಿ ಲೋಪವನ್ನು ಸಹಿಸಲು ಸಾಧ್ಯವಿಲ್ಲ ಎಂದು…

Read More

ಧಾರವಾಡ :  ಹುಬ್ಬಳ್ಳಿಯ ಸುಳ್ಳ ರಸ್ತೆಯ ಶಿಕ್ಷಕರ ಕಾಲನಿಯ ಆದಿತ್ಯ ಪ್ರಭು ಅನ್ನುವವರು ತಮ್ಮ ತಂದೆ ಮಧನ ಪ್ರಭು ಹಾಗೂ ತಾಯಿ ಮಾನಿಶಾ ಪ್ರಭುರವರಿಗೆ ಎದುರುದಾರ ನವಿ ಜನರಲ್ ಇನ್ಸುರೆನ್ಸ್ ಕಂಪನಿಯಿಂದ 2022 ರಿಂದಆರೋಗ್ಯ ವಿಮೆ ಮಾಡಿಸಿದ್ದರು. ಅವರು ಅಗತ್ಯ ಪ್ರಿಮಿಯಮ್‍ಕಟ್ಟಿ ದಿ:16/06/2023 ರಿಂದ ದಿ:15/06/2024 ರವರೆಗೆ ಆ ವಿಮಾ ಪಾಲಸಿಯನ್ನು ನವೀಕರಿಸಿದ್ದರು. ದಿ:09/11/2023ರಂದು ದೂರುದಾರ ತಂದೆ ಮಧನ ಪ್ರಭುರವರಿಗೆ ಮನೆಯಲ್ಲಿ ಜಾರಿ ಬಿದ್ದು ಮೊಣಕಾಲಿನ ಮೂಳೆ ಮುರಿತವಾಗಿತ್ತು. ತಕ್ಷಣ ಅವರನ್ನು ಹುಬ್ಬಳ್ಳಿಯ ಸುಪರ್ ಸ್ಪೆಶಾಲಿಟಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದರು. ಅವರು ರೂ.2,20,000 ಕ್ಯಾಶ್‍ಲೆಶ್ ಕ್ಲೇಮು ಎದುರುದಾರರಿಗೆ ಸಲ್ಲಿಸಿದ್ದರು. ಎದುರುದಾರರು ಅದನ್ನು ತಿರಸ್ಕರಿಸಿದ್ದರು. ಆಸ್ಪತ್ರೆಯಿಂದ ದಿಸ್‍ಚಾರ್ಜ ಆದ ಮೇಲೆ ಎಲ್ಲ ದಾಖಲೆ ಪತ್ರಗಳ ಜೊತೆ ರೂ.1,80,000 ಆಸ್ಪತ್ರೆಯ ಖರ್ಚು ವೆಚ್ಚದ ಕ್ಲೇಮನ್ನು ದೂರುದಾರರು ಎದುರುದಾರ ವಿಮಾ ಕಂಪನಿಗೆ ಸಲ್ಲಿಸಿದ್ದರು. ದೂರುದಾರ ತಂದೆ 10 ವರ್ಷಗಳಿಂದ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು ಆ ಸಂಗತಿಯನ್ನು ವಿಮೆ ಪಡೆಯುವಾಗ ಅವರು ಮುಚ್ಚಿಟ್ಟಿದ್ದಾರೆ ಅಂತಾ ಕಾರಣ…

Read More

ಬೆಂಗಳೂರು: ನಟಿ ರನ್ಯಾ ರಾವ್ ಅವರನ್ನು ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಬಂಧಿಸಲಾಗಿದೆ. ಆಕೆಗೆ ನ್ಯಾಯಾಂಗ ಬಂಧನವಾಗಿದ್ದು, ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಇದೇ ಪ್ರಕರಣದಲ್ಲಿ ಜಾಮೀನು ಕೋರಿ 2ನೇ ಆರೋಪಿ ತರುಣ್ ರಾಜು ಸಲ್ಲಿಸಿದ್ದಂತ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ದುಬೈನಿಂದ 14 ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಿಸಿದಂತ ಕೇಸಲ್ಲಿ ಸ್ಯಾಂಡಲ್ ವುಡ್ ನಟಿ ರನ್ಯಾ ರಾವ್ ಬಂಧನವಾಗಿದೆ. ಅವರನ್ನು ನ್ಯಾಯಾಂಗ ಬಂಧನಕ್ಕೆ ಕೋರ್ಟ್ ನೀಡಿ ಆದೇಶಿಸಿದೆ. ಹೀಗಾಗಿ ನಟಿ ರನ್ಯಾ ರಾವ್ ಜೈಲುಪಾಲಾಗಿದ್ದಾರೆ. ಇನ್ನೂ ಇದೇ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಅವರ ಬಾಯ್ ಫ್ರೆಂಡ್ ಎಂದೇ ಹೇಳಲಾಗುತ್ತಿದ್ದಂತ ತರುಣ್ ರಾಜು ಎಂಬುವರ ವಿರುದ್ಧವೂ ಡಿಆರ್ ಐ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದಲ್ಲಿ ಜಾಮೀನು ಕೋರಿ ಅವರು ಆರ್ಥಿಕ ಅಪರಾಧಗಳ ನ್ಯಾಯಾಲಯ ಮೊರೆ ಹೋಗಿದ್ದರು. ಇಂದು ಪ್ರಕರಣದ ವಿಚಾರಣೆ ನಡೆಸಿದಂತ ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯವು ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ 2ನೇ ಆರೋಪಿಯಾಗಿರುವಂತ ತರುಣ್ ರಾಜು ಜಾಮೀನು…

Read More

ಬಳ್ಳಾರಿ: ತೀವ್ರ ಉಸಿರಾಟದ ಸಮಸ್ಯೆ ಹಾಗೂ ಹೃದಯದ ಅಪಧಮನಿಯ ಗಂಭೀರ ಸಮಸ್ಯೆಯಿಂದ ಬಳಲುತ್ತಿದ್ದ 38 ವರ್ಷದ ಬಳ್ಳಾರಿ ಮೂಲದ ವ್ಯಕ್ತಿಗೆ ಕನ್ನಿಂಗ್‌ ಹ್ಯಾಮ್‌ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಚಿಕಿತ್ಸೆ ನೀಡುವ ಮೂಲಕ ಸಾವಿನ ದವಡೆ ತಲುಪಿದ್ದ ವ್ಯಕ್ತಿಗೆ ಮರುಜೀವ ನೀಡಲಾಗಿದೆ. ಫೋರ್ಟಿಸ್ ಆಸ್ಪತ್ರೆಯ ಇಂಟರ್ನಲ್‌ ಮೆಡಿಸನ್‌ ಕನ್ಸಲ್ಟೆಂಟ್‌, ಡಾ. ನಾಸಿರುದ್ದೀನ್ ಜಿ. ನೇತೃತ್ವದ ವೈದ್ಯರ ತಂಡ ಈ ಶಸ್ತ್ರಚಿಕಿತ್ಸೆ ನಡಿಸಿದೆ. ಈ ಕುರಿತು ಮಾತನಾಡಿದ, ಡಾ. ನಾಸಿರುದ್ದೀನ್ ಜಿ, ಚೈತನ್ಯ ಎಂಬ 38 ವರ್ಷದ ವ್ಯಕ್ತಿಗೆ ಈ ಮೊದಲು ಹೃದಯಾಘಾತವಾಗಿತ್ತು. ಚಿಕಿತ್ಸೆ ವೇಳೆ ಅವರು ಪಡೆದಿದ್ದ ಥ್ರಂಬೋಲಿಟಿಕ್ ಚುಚ್ಚುಮದ್ದು ಅವರ ಶ್ವಾಸಕೋಶದಲ್ಲಿ ರಕ್ತಸ್ರಾವಕ್ಕೆ ಕಾರಣವಾಗಿದೆ. ಪ್ರಮುಖವಾಗಿ “ಪ್ರಸರಣ ಅಲ್ವಿಯೋಲಾರ್ ರಕ್ತಸ್ರಾವ” ಆಗತೊಡಗಿತ್ತು. ರಕ್ತಹೆಪ್ಪುಗಟ್ಟುವಿಕೆಯಿಂದಾಗಿ ಅವರ ಶ್ವಾಸಕೋಶ ಸಂಪೂರ್ಣ ಹಾಳಾಗಿತ್ತು. ಕೆಮ್ಮುವಾಗ ಮೂಗಿನಿಂದ ರಕ್ತಸ್ತ್ರಾವ, ಗುದನಾಳದಲ್ಲಿ ರಕ್ತಸ್ತ್ರಾವ ಸೇರಿದಂತೆ ಹಲವು ಅಂಗಾಂಗಳಲ್ಲಿ ರಕ್ತಸ್ತ್ರಾವ ಆಗತೊಡಗಿತ್ತು. ಇದರಿಂದ ರೋಗಿಯ ಹಿಮೋಗ್ಲೋಬಿನ್‌ ಮಟ್ಟ ಸಂಪೂರ್ಣವಾಗಿ ಕುಸಿಯತೊಡಗಿತ್ತು. ಈ ಎಲ್ಲಾ ತೊಂದರೆಯಿಂದ ಅವರು ಸಾವು ಬದುಕಿನ ನಡುವೆ…

Read More

ನವದೆಹಲಿ: ಸಣ್ಣ ವ್ಯಾಪಾರಿಗಳಿಗೆ ಕಡಿಮೆ ಮೌಲ್ಯದ ಭೀಮ್-ಯುಪಿಐ ಪಿ 2 ಎಂ ವಹಿವಾಟುಗಳನ್ನು ಉತ್ತೇಜಿಸಲು 1,500 ಕೋಟಿ ರೂ.ಗಳ ಪ್ರೋತ್ಸಾಹಕ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಈ ಯೋಜನೆಯ ಪ್ರಕಾರ, ಸಣ್ಣ ವ್ಯಾಪಾರಿಗಳಿಗೆ 2,000 ರೂ.ವರೆಗಿನ ಎಲ್ಲಾ ವ್ಯಕ್ತಿಯಿಂದ ವ್ಯಾಪಾರಿ (ಪಿ 2 ಎಂ) ವಹಿವಾಟುಗಳು ಶೂನ್ಯ ವೆಚ್ಚ ಅಥವಾ ಎಂಡಿಆರ್ ಮತ್ತು 0.15% ದರದಲ್ಲಿ ಪ್ರೋತ್ಸಾಹಧನಕ್ಕೆ ಅರ್ಹವಾಗಿರುತ್ತವೆ. ಈ ಯೋಜನೆಯನ್ನು ಏಪ್ರಿಲ್ 1, 2024 ರಿಂದ ಮಾರ್ಚ್ 31, 2025 ರ ನಡುವೆ ಒಂದು ವರ್ಷದವರೆಗೆ ಜಾರಿಗೆ ತರಲಾಗುವುದು. ಕೇಂದ್ರ ಸಚಿವ ಸಂಪುಟದ ನಿರ್ಧಾರಗಳ ಬಗ್ಗೆ ಮಾಹಿತಿ ನೀಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ಈ ಯೋಜನೆಯನ್ನು ಮುಂದಿನ ವರ್ಷವೂ (ಹಣಕಾಸು ವರ್ಷ 25-26) ಮುಂದುವರಿಸಲಾಗುವುದು ಎಂದು ಹೇಳಿದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ 2024-25ರ ಹಣಕಾಸು ವರ್ಷಕ್ಕೆ ಕಡಿಮೆ…

Read More

ಬೆಂಗಳೂರು: ದೇಶದ 100 ಕೋಟಿ ಜನರಿಗೆ ಕೊಳ್ಳುವ ಆಯ್ಕೆಗಳೇ ಇಲ್ಲ. ವರದಿಯೊಂದರ ಪ್ರಕಾರ, 20.5 ಕೋಟಿ ಕುಟುಂಬಗಳು ಅಂದರೆ ನೂರು ಕೋಟಿ ಜನರ ವಾರ್ಷಿಕ ಆದಾಯ 87,000 ರೂಪಾಯಿಗಿಂತ ಕಡಿಮೆ ಇದೆ. ದೇಶದಲ್ಲಿ ಅಸಮಾನತೆ ಅಷ್ಟರ ಮಟ್ಟಿಗೆ ಇದೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ವಿಧಾನಸಭಾ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಮೇಲಿನ‌ ಚರ್ಚೆಗೆ ಉತ್ತರಿಸಿದಂತ ಅವರು, ದೇಶದಲ್ಲಿ ಆರ್ಥಿಕ, ಸಾಮಾಜಿಕ ಅಸಮಾನತೆ ಇರುವವರೆಗೆ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಗುವುದಿಲ್ಲ. ಕೊಳ್ಳುವ ಶಕ್ತಿಯನ್ನು ಹೆಚ್ಚು ಮಾಡುವ ಸಾರ್ವತ್ರಿಕ ಮೂಲ ಆದಾಯ ತತ್ವವನ್ನು ನಾವು ಜಾರಿ ಮಾಡಿದ್ದೇವೆ. ಆರ್ಥಿಕ, ಸಾಮಾಜಿಕ ಶಕ್ತಿಯನ್ನು ಜನರಲ್ಲಿ ತುಂಬಿದರೆ ಜನರ ಹಾಗೂ ರಾಜ್ಯದ ಅಭಿವೃದ್ಧಿ ಸಾಧ್ಯ. ನೀವು ಸಮಾಜದ 10% ಜನರಿಗೆ ಶಕ್ತಿ ತುಂಬುತ್ತಿದ್ದೀರಿ ಎಂದರು. 1994 ರಲ್ಲಿ 34% ಇದ್ದ ಶ್ರೀಮಂತರ ಸಂಖ್ಯೆ ಈಗ 57% ಗೆ ಹೆಚ್ಚಾಗಿದೆ. 50% ಜನರಿಗೆ ಇರುವ ಆರ್ಥಿಕ ಶಕ್ತಿ 15% ಗೆ ಕುಸಿದಿದೆ. ಇದು ಆತಂಕಕಾರಿ ಸಂಗತಿ…

Read More

ನವದೆಹಲಿ: ತ್ರಿಭಾಷಾ ಸೂತ್ರದ ಅಡಿಯಲ್ಲಿ ಯಾವುದೇ ರಾಜ್ಯದ ಮೇಲೆ ಯಾವುದೇ ಭಾಷೆಯನ್ನು ಹೇರಲಾಗುವುದಿಲ್ಲ ಎಂದು ಶಿಕ್ಷಣ ಸಚಿವಾಲಯ ರಾಜ್ಯಸಭೆಗೆ ತಿಳಿಸಿದೆ. ಸಚಿವಾಲಯದ ಪ್ರಕಾರ, ಮಕ್ಕಳು ಕಲಿತ ಭಾಷೆಗಳನ್ನು ರಾಜ್ಯಗಳು ಮತ್ತು ವಿದ್ಯಾರ್ಥಿಗಳು ಸ್ವತಃ ಆಯ್ಕೆ ಮಾಡುತ್ತಾರೆ. ಇದು ನಮ್ಯತೆ ಮತ್ತು ಸ್ವಾಯತ್ತತೆಯನ್ನು ಉತ್ತೇಜಿಸುತ್ತದೆ. ತ್ರಿಭಾಷಾ ಸೂತ್ರ ಎಂದರೇನು? ತ್ರಿಭಾಷಾ ಸೂತ್ರವು ಭಾಷಾ ಕಲಿಕೆಯ ನೀತಿಯಾಗಿದ್ದು, ಇದನ್ನು ಮೊದಲು 1968 ರಲ್ಲಿ ಭಾರತ ಸರ್ಕಾರದ ಶಿಕ್ಷಣ ಸಚಿವಾಲಯವು ರಾಜ್ಯಗಳೊಂದಿಗೆ ಸಮಾಲೋಚಿಸಿ ಪರಿಚಯಿಸಿತು. ಈ ನೀತಿಯು ವಿದ್ಯಾರ್ಥಿಗಳು ಮೂರು ಭಾಷೆಗಳನ್ನು ಕಲಿಯಲು ಶಿಫಾರಸು ಮಾಡುತ್ತದೆ. ಅವರ ಮಾತೃಭಾಷೆ ಅಥವಾ ಪ್ರಾದೇಶಿಕ ಭಾಷೆ, ಇಂಗ್ಲಿಷ್ ಮತ್ತು ಆಧುನಿಕ ಭಾರತೀಯ ಭಾಷೆ. ಹೊಸ ಶಿಕ್ಷಣ ನೀತಿ (ಎನ್ಇಪಿ) 2020 ತ್ರಿಭಾಷಾ ಸೂತ್ರ ನೀತಿಯನ್ನು ಉತ್ತೇಜಿಸುತ್ತದೆ. ವಿದ್ಯಾರ್ಥಿಗಳು ತಮ್ಮ ಪ್ರಾದೇಶಿಕ ಮತ್ತು ಸಾಂಸ್ಕೃತಿಕ ಅಗತ್ಯಗಳಿಗೆ ಸರಿಹೊಂದುವ ಕನಿಷ್ಠ ಮೂರು ಭಾಷೆಗಳನ್ನು ಕಲಿಯಲು ಪ್ರೋತ್ಸಾಹಿಸುತ್ತದೆ. https://kannadanewsnow.com/kannada/over-1000-hindu-devotees-missing-after-mahakumbh-mela-akhilesh-yadav/ https://kannadanewsnow.com/kannada/man-attempts-to-kill-his-aunt-by-stabbing-her-with-beer-bottle-for-not-giving-her-money-to-drink/

Read More

ನವದೆಹಲಿ: ಮಹಾಕುಂಭ ಮೇಳಕ್ಕೆ ತೆರಳಿದ್ದ 1,000 ಕ್ಕೂ ಹೆಚ್ಚು ಹಿಂದೂ ಭಕ್ತರು ಇನ್ನೂ ಕಾಣೆಯಾಗಿದ್ದಾರೆ ಎಂದು ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಬುಧವಾರ ಹೇಳಿದ್ದಾರೆ. ಕಾಣೆಯಾದ ವ್ಯಕ್ತಿಗಳ ಬಗ್ಗೆ ಮಾಡಲಾಗುತ್ತಿರುವ ಪೋಸ್ಟ್ಗಳನ್ನು ಸರ್ಕಾರ ತೆಗೆದುಹಾಕುತ್ತಿದೆ ಎಂದು ಅವರು ಹೇಳಿದ್ದಾರೆ. ಉತ್ತರ ಪ್ರದೇಶ ಸರ್ಕಾರಕ್ಕೆ ಕೇಂದ್ರ ಸರ್ಕಾರ ಬಜೆಟ್ ಹಂಚಿಕೆ ಮಾಡಿರುವುದನ್ನು ಯಾದವ್ ಪ್ರಶ್ನಿಸಿದರು. ಭಾರತೀಯ ಜನತಾ ಪಕ್ಷ (ಬಿಜೆಪಿ) ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕುಂಭಮೇಳದಲ್ಲಿ ಹೆಚ್ಚಿನ ಸಂಖ್ಯೆಯ ಜನರು ಕೊಲ್ಲಲ್ಪಟ್ಟಿರುವುದರಿಂದ ಬಿಜೆಪಿ ಜನರಿಗೆ ಸಹಾಯ ಮಾಡಬೇಕು ಎಂದು ಹೇಳಿದರು. https://twitter.com/ABPNews/status/1902312629068304730 https://kannadanewsnow.com/kannada/man-attempts-to-kill-his-aunt-by-stabbing-her-with-beer-bottle-for-not-giving-her-money-to-drink/ https://kannadanewsnow.com/kannada/karnataka-prevention-of-land-grabbing-amendment-bill-passed-in-assembly/

Read More

ಕೋಲಾರ: ಕುಡಿಯೋದಕ್ಕೆ ಹಣ ನೀಡದಿಲ್ಲ ಅಂತ ಚಿಕ್ಕಮ್ಮನನ್ನೇ ಬಿಯರ್ ಬಾಟಲಿಯಿಂದ ತಿವಿದು ಹತ್ಯೆ ಮಾಡೋದಕ್ಕೆ ಯತ್ನಿಸಿದಂತ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ದಾಸೇಗೌಡನೂರು ಬಳಿಯಲ್ಲಿ ಗರುಡ ಕೆಂಪನಹಳ್ಳಿ ಗ್ರಾಮ ಅನಸೂಯ(35) ಎಂಬ ಮಹಿಳೆಯನ್ನು ಅದೇ ಗ್ರಾಮದ ಆನಂದ್ (26) ಕೊಲೆ ಯತ್ನ ನಡೆಸಿದ್ದನು. ಕುಡಿಯೋದಕ್ಕೆ ಹಣ ನೀಡುವಂತೆ ತನ್ನ ಚಿಕ್ಕಮ್ಮ ಅನಸೂಯ ಅವರನ್ನು ಆನಂದ್ ಪೀಡಿಸುತ್ತಿದ್ದನು. ಆದರೇ ಹಣ ಇಲ್ಲವೆಂದು ಅನಸೂಯ ನಿರಾಕರಿಸಿದ್ದರು. ಈ ಕಾರಣಕ್ಕಾಗಿ ಬಿಯರ್ ಬಾಟಲಿಯಿಂದ ಚುಚ್ಚಿ ಕೊಲೆಗೆ ಯತ್ನಿಸಿದ್ದಾನೆ. ಬಿಯರ್ ಬಾಟಲಿಯಿಂದ ಚುಚ್ಚಿದ ಕಾರಣ ಅನಸೂಯ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಆರೋಪಿ ಆನಂದ್ ನನ್ನು ಕಾಮಸಮುದ್ರ ಪೊಲೀಸರು ಬಂಧಿಸಿದದಾರೆ. https://kannadanewsnow.com/kannada/if-our-government-comes-to-power-in-2028-grihalakshmis-money-will-be-increased-to-rs-4000-congress-mla/ https://kannadanewsnow.com/kannada/two-arrested-for-writing-pro-pakistan-wall-writing-at-a-private-factory-in-bidadi/ https://kannadanewsnow.com/kannada/karnataka-prevention-of-land-grabbing-amendment-bill-passed-in-assembly/

Read More

ಬೆಂಗಳೂರು: ವಿಧಾನಸಭೆಯಲ್ಲಿ ನಿನ್ನೆ ಕರ್ನಾಟಕ ಭೂ ಕಬಳಿಕೆ ತಿದ್ದುಪಡಿ ವಿಧೇಯಕವನ್ನು ಮಂಡಿಸಲಾಗಿತ್ತು. ಈ ಬಗ್ಗೆ ವಿಸ್ತೃತವಾದಂತ ಚರ್ಚೆಯನ್ನು ನಡೆಸಲಾಗಿತ್ತು. ಇಂದು ಕೂಡ ಚರ್ಚೆಯ ನಂತ್ರ, ಕರ್ನಾಟಕ ಭೂ ಕಬಳಿಕೆ ನಿಷೇಧ (ತಿದ್ದುಪಡಿ) ವಿಧೇಯಕವನ್ನು ಅಂಗೀಕರಿಸಲಾಗಿದೆ. ರಾಜ್ಯ ಸರ್ಕಾರದಿಂದ ಕರ್ನಾಟಕ ಭೂ ಕಬಳಿಕೆ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿತ್ತು. ಈ ತಿದ್ದುಪಡಿ ವಿಧೇಯಕಕ್ಕೆ ಇಂದು ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ. ಪ್ರಸ್ತಾವಿತ ಕರಡು ತಿದ್ದುಪಡಿಯು, ಯಾವುದೇ ರೀತಿಯಲ್ಲಿಯೂ ವಿಧೇಯಕದ ಮೂಲ ಕರಡಿಗೆ ವಿರುದ್ದವಾಗಿರದೆ, ಗ್ರಾಮೀಣ ಪ್ರದೇಶದ, ರೈತರ ಹಾಗೂ ಇತರರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸುವುದರಿಂದ ರಕ್ಷಣೆ ದೊರೆಯುತ್ತದೆ. ಸಣ್ಣ ಹಾಗೂ ಅತಿ ಸಣ್ಣ ರೈತರು ಹಾಗೂ ಜನಸಾಮಾನ್ಯರು, ಬಗರ್ ಹುಕುಮ್ ಸಾಗುವಳಿ ಸಂಬಂಧ, ಬೆಂಗಳೂರಿನಲ್ಲಿ ಸ್ಥಾಪಿತವಾದ ವಿಶೇಷ ನ್ಯಾಯಾಲಯಕ್ಕೆ ಅಲೆಯುವುದನ್ನು ತಪ್ಪಿಸಿದಂತಾಗುತ್ತದೆ. https://kannadanewsnow.com/kannada/cabinet-approves-rs-1500-crore-incentive-for-upi/ https://kannadanewsnow.com/kannada/if-our-government-comes-to-power-in-2028-grihalakshmis-money-will-be-increased-to-rs-4000-congress-mla/ https://kannadanewsnow.com/kannada/two-arrested-for-writing-pro-pakistan-wall-writing-at-a-private-factory-in-bidadi/

Read More