Subscribe to Updates
Get the latest creative news from FooBar about art, design and business.
Author: kannadanewsnow09
ಆಂಧ್ರಪ್ರದೇಶ: ಇಂದು ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಅದೇ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿ ಐವರು ದುರ್ಮರಣ ಹೊಂದಿರುವಂತ ಘಟನೆ ನಡೆದಿದೆ. ಆಂಧ್ರಪ್ರದೇಶದ ಮೆಹಬೂಬನಗರ ಜಿಲ್ಲೆಯ ಕೊತಕೋಟೆ ಬೈಪಾಸ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿಯಾಗಿದೆ. ಈ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರೇ, ಮಗುವೊಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದೆ. ಎರಿಟಿಗಾ ಕಾರಿನಲ್ಲಿ ಹೈದರಾಬಾದ್ ಗೆ ಬಳ್ಳಾರಿ ಮೂಲದವರು ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಕಾರು ಮರಕ್ಕೆ ಡಿಕ್ಕಿಯಾಗಿ ಸಂಭವಿಸಿದಂತ ಅಪಘಾತದಲ್ಲಿ ಮತ್ತಿಬ್ಬರು ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/sanatan-dharma-row-pm-modi-hits-out-at-udhayanidhi-stalin-over-hereditary-identity/ https://kannadanewsnow.com/kannada/bjp-state-president-jp-nadda-resigns-from-rajya-sabha/
ಆಂಧ್ರಪ್ರದೇಶ: ಇಲ್ಲಿನ ಕಡಪ ಜಿಲ್ಲೆಯಲ್ಲಿ ತೆಲಂಗಾಣ ಪೊಲೀಸರು ಹಾಗೂ ಎನ್ಐಎ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಓರ್ವ ಶಂಕಿತ ಉಗ್ರನನ್ನು ಬಂಧಿಸಿದ್ದಾರೆ. ಕಳೆದ 25 ದಿನಗಳಿಂದ ಆಂಧ್ರಪ್ರದೇಶದ ಚೆರ್ಲೋಪಲ್ಲಿ ಬಳಿಯ ಮಸೀದಿಯೊಂದರಲ್ಲಿ ಶಂಕಿತ ಓರ್ವ ಉಗ್ರ ಅಡಗಿರೋ ಮಾಹಿತಿಯನ್ನು ತಿಳಿದಂತ ಎನ್ಐಎ ಹಾಗೂ ತೆಲಂಗಾಣ ಪೊಲೀಸರು ಬಂಧಿಸಿದ್ದಾರೆ. ನಿಷೇಧಿತ ಪಿಎಫ್ಐ ಸಂಘಟನೆಗ ಸೇರಿದಂತ್ತೆ ಉತ್ತರ ತೆಲಂಗಾಣದ ಕಾರ್ಯದರ್ಶಿಯಾಗಿ ಅಬ್ದುಲ್ ಸಲೀಂ ಕಾರ್ಯ ನಿರ್ವಹಿಸುತ್ತಿದ್ದನು. ತಲೆಮರೆಸಿಕೊಂಡಿದ್ದಂತ ಆತ ಆನ್ ಲೈನ್ ಮೂಲಕ ಕರೆ ಮಾಡುತ್ತಿದ್ದನು. ಈ ಎಲ್ಲಾ ಮಾಹಿತಿಯನ್ನು ಕಲೆಹಾಕಿ ಆಂಧ್ರಪ್ರದೇಶ ಕಡಪ ಜಿಲ್ಲೆಯ ಮೈದುೂಕೊರು ಮಂಡಲದ ಚೆರ್ಲೋಪಲ್ಲಿ ಬಳಿಯ ಮಸೀದಿಯೊಂದರಲ್ಲಿ ಬಂಧಿಸಿದ್ದಾರೆ. ಇದೀಗ ಬಂಧಿತ ಶಂಕಿತ ಉಗ್ರನನ್ನು ಹೈದರಾಬಾದಿಗೆ ಕರೆದೊಯ್ಯುತ್ತಿದ್ದು, ಅಲ್ಲಿ ವಿಚಾರಣೆಯನ್ನು ನಡೆಸಲಿದ್ದಾರೆ. ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಸಂಬಂಧವೂ ಶಂಕಿತ ಉಗ್ರನನ್ನು ಎನ್ಐಎ ಅಧಿಕಾರಿಗಳ ವಿಚಾರಣೆ ನಡೆಸೋ ಸಾಧ್ಯತೆ ಇದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/from-now-on-disputes-of-economically-weaker-sections-in-the-state-will-be-settled-within-a-time-frame-of-6-months/ https://kannadanewsnow.com/kannada/digitize-applications-under-sakala-from-receipt-to-service-minister-krishna-byre-gowda/
ಬೆಂಗಳೂರು: ರಾಜ್ಯ ಸರ್ಕಾರದಿಂದ ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಗೌರವಧನ ಹೆಚ್ಚಿಸಿ ಹಾಗೂ ವಿಮಾ ಸೌಲಭ್ಯ ಜಾರಿಗೊಳಿಸಿ ಆದೇಶಿಸಿದೆ. ಈ ಕುರಿತಂತೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ಇಂಜಿನಿಯರಿಂಗ್ ಕಾಲೇಜುಗಳಲ್ಲಿನ ಅರೆಕಾಲಿಕ ಉಪನ್ಯಾಸಕರುಗಳಿಗೆ ಗರಿಷ್ಠ ಮಾಸಿಕ ಕಾರ್ಯಭಾರ 32 ಗಂಟೆಗೆ ಗರಿಷ್ಠ ಕಾರ್ಯಭಾರಕ್ಕೆ ಮಾಸಿಕ ಗೌರವಧನ ರೂ.15,000ಗಳನ್ನು ಹಾಗೂ ಪಾಲಿಟೆಕ್ನಿಕ್ ಮತ್ತು ಸರ್ಕಾರಿ ಕಿರಿಯ ತಾಂತ್ರಿಕ ಶಾಲೆಗಳಲ್ಲಿನ ಅರೆಕಾಲಿಕ ಉಪನ್ಯಾಸಕರುಗಳಿಗೆ ಗರಿಷ್ಠ ರೂ.12,500ಗಳನ್ನು ಪಾವತಿಸಲಾಗುತ್ತಿದೆ ಎಂದಿದ್ದಾರೆ. ಪ್ರಸ್ತುತ ಸಲ್ಲಿಸುತ್ತಿರುವ ಸೇವಾ ಅವಧಿಗೆ ಅನುಗುಣವಾಗಿ ಗೌರವಧನವನ್ನು 5 ವರ್ಷಕ್ಕಿಂತ ಕಡಿಮೆ ಸೇವಾವಧಿಗೆ ರೂ.5,000, 5 ವರ್ಷದಿಂದ 10 ವರ್ಷಗಳ ಸೇವಾವಧಿಗೆ 6000, 10 ವರ್ಷದಿಂದ 15 ವರ್ಷಗಳ ಸೇವಾವಧಿಗೆ ರೂ.7000 ಹಾಗೂ 15 ವರ್ಷ ಮೇಲ್ಪಟ್ಟು ಸೇವಾವಧಿಗೆ ರೂ.8000 ಹೆಚ್ಚಿಸಿ ಆದೇಶಿಸಿದ್ದಾರೆ. ಇದಲ್ಲೇದ 60 ವರ್ಷ ಮೀರಿದಂತ ಅತಿಥಿ ಉಪನ್ಯಾಸಕರುಗಳಿಗೆ ಭದ್ರತಾ ರೂಪದಲ್ಲಿ ವಾರ್ಷಿಕ ರೂ.50,000ದಂತೆ ಗರಿಷ್ಠ 5 ಲಕ್ಷಗಳ ಮೊತ್ತದ ಇಡಿಗಂಟಿನ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಉನ್ನತ ಶಿಕ್ಷಣ ಇಲಾಖೆಯ ಕಾಲೇಜು ಶಿಕ್ಷಣ ಇಲಾಖಎಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತ ಸ್ರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರುಗಳಿಗೆ ಗೌರವಧನ ಮತ್ತಿತರ ಸೌಲಭ್ಯವನ್ನು ಮಂಜೂರು ಮಾಡಿ ಆದೇಶಿಸಿದೆ. ಅದರಲ್ಲೂ ಗೌರವಧನವನ್ನು ಸೇವಾ ಹಿರಿತನದ ಆಧಾರದ ಮೇಲೆ ಪರಿಷ್ಕರಿಸಿ ಆದೇಶಿಸಿದೆ. ಈ ಕುರಿತಂತೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ.ಧನಂಜಯ ನಡವಳಿಯನ್ನು ಹೊರಡಿಸಿದ್ದು, ಸರ್ಕಾರಿ ಪ್ರಧಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಗುಳ ಆರೋಗ್ಯದ ದೃಷ್ಠಿಯಿಂದ ವಾರ್ಷಿಕ 5 ಲಕ್ಷಗಳ ಆರೋಗ್ಯ ವಿಮಾ ಸೌಲಭ್ಯವನ್ನು ಒದಗಿಸಲು ಮಾಸಿಕ 400 ರೂ ವಂತಿಕೆಯನ್ನು ಅವರಿಂದ ಕಟಾಯಿಸಿ, ಇನ್ನುಳಿದ 400 ರೂ ಸರ್ಕಾರದ ವತಿಯಿಂದ ಭರಿಸಲು ಉದ್ದೇಶಿಸಿದ್ದು, ಹೀಗೆ ಒಟ್ಟು 800 ಗಳನ್ನು ಆರೋಗ್ಯ ವಿಮೆಗೆ ಪಾವತಿಸಲು ಉದ್ದೇಶಿಸಿದೆ ಎಂದಿದ್ದಾರೆ. ಅತಿಥಿ ಉಪನ್ಯಾಸಕರ ಆರೋಗ್ಯದ ಸಲುವಾಗಿ ವಿಮಾ ಸೌಲಭ್ಯವನ್ನು ಮಂಜೂರು ಮಾಡುವಂತೆ ಹಾಗೂ ಅತಿಥಿ ಉಪನ್ಯಾಸಕರುಗಳಾಗಿ ಸೇವೆ ಸಲ್ಲಿಸಿದ 60 ವರ್ಷ ಮೀರಿದ ನಂತ್ರ ಇವರಿಗೆ ಭದ್ರತಾ…
ಬೆಂಗಳೂರು: ನಗರದ ಎಲ್ಲಾ ನೀರಿನ ಟ್ಯಾಂಕರ್ ಮಾಲೀಕರು ಮಾ. 7 ತಾರೀಕಿನ ವೇಳೆಗೆ ನೋಂದಣಿ ಮಾಡಿಸದಿದ್ದರೆ ಸೀಜ್ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಖಡಕ್ ಎಚ್ಚರಿಕೆ ನೀಡಿದರು. ಕುಡಿಯುವ ನೀರಿನ ಸಮಸ್ಯೆ ವಿಚಾರವಾಗಿ ಬಿಬಿಎಂಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ 3,500 ಟ್ಯಾಂಕರ್ಗಳು ಇದ್ದು, ಕೇವಲ 219 ಟ್ಯಾಂಕರ್ಗಳು ಅಂದರೆ ಕೇವಲ ಶೇ 10 ರಷ್ಟು ಮಾತ್ರ ನೋಂದಣಿ ಮಾಡಿಸಿಕೊಂಡಿವೆ. ಚಿಕ್ಕ, ದೊಡ್ಡ, ಹಾಲಿನ ಟ್ಯಾಂಕರ್ಗಳನ್ನು ಶೀಘ್ರ ಸರ್ಕಾರದ ವಶಕ್ಕೆ ಪಡೆಯಲಾಗುವುದು. ಬಿಡಬ್ಲ್ಯೂ ಎಸ್ಎಸ್ಬಿ ಅವರು 210 ಟ್ಯಾಂಕರ್ಗಳನ್ನು ಈಗಾಗಲೇ ನೀರಿನ ಪೂರೈಕೆಗೆ ಬಳಸುತ್ತಿದ್ದಾರೆ ಎಂದಿದ್ದಾರೆ. ನೀರು ಸರ್ಕಾರಕ್ಕೆ ಸೇರಿದ್ದು ನೀರು ಸರ್ಕಾರಕ್ಕೆ ಸೇರಿದ್ದು. ಯಾವುದೇ ವೈಯಕ್ತಿಕ ವ್ಯಕ್ತಿಗೆ ಸೇರಿದ್ದಲ್ಲ. ಯಾವ ನೀರನ್ನು ಬೇಕಾದರೂ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಹಕ್ಕು ಸರ್ಕಾರಕ್ಕೆ ಇದೆ. ಬೆಂಗಳೂರು ಹೊರವಲಯದಲ್ಲಿ ಅಂತರ್ಜಲ ನೀರಿನ ಮಟ್ಟ ಹೆಚ್ಚಿರುವ ಕಡೆಯಿಂದಲೂ ನೀರಿನ ಪೂರೈಕೆ ಮಾಡಲು ಸಿದ್ದರಾಗಿ ಇರಬೇಕು ಎಂದು ಅಧಿಕಾರಿಗಳಿಗೆ ತಿಳಿಸಲಾಗಿದೆ. ನೀರಿನ ಸಮಸ್ಯೆ ಬಗೆಹರಿಸಲು…
ಋಣಭಾರ ತೊಲಗಲು, ದುಷ್ಟ ಶಕ್ತಿಗಳಿಂದ ಮುಕ್ತಿ ಪಡೆಯಲು, ಶತ್ರು ಬಾಧೆಯಿಂದ ಮುಕ್ತಿ ಹೊಂದಲು ಭೈರವನ ಆರಾಧನೆ ಹೇಗೆ ಉತ್ತಮವೋ, ಅದೇ ರೀತಿ ಅಡೆತಡೆಗಳ ನಿವಾರಣೆಗೆ ಭೈರವನ ಆರಾಧನೆ ಮಾಡಬಹುದು. ಕೆಲವು ಕೆಲಸಗಳು ಎಂದಿಗೂ ಮುಗಿಯುವುದಿಲ್ಲ. ನಾವು ಅನೇಕ ವಿಷಯಗಳನ್ನು ಪ್ರಯತ್ನಿಸಿದ್ದೇವೆ. ಭೈರವನನ್ನು ಪೂಜಿಸುವಾಗ ಅಡೆತಡೆಗಳು ಕಂಡುಬಂದರೆ ತಕ್ಷಣವೇ ಅಡೆತಡೆಗಳು ನಿವಾರಣೆಯಾಗುತ್ತವೆ. ಶಿವನ ಅಂಶವುಳ್ಳ ಈ ಭೈರವನಿಗೆ ಎಂತಹ ದೊಡ್ಡ ಸಂಕಷ್ಟವನ್ನೂ ನಿವಾರಿಸುವ ಶಕ್ತಿಯಿದೆ. ಅಡೆತಡೆಗಳನ್ನು ನಿವಾರಿಸುವ ಭೈರವನ ಆರಾಧನೆಯನ್ನು ನಾವೂ ತಿಳಿಯೋಣವೇ? ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ…
ಪಾಟ್ನಾ: ಪ್ರಧಾನಿ ನರೇಂದ್ರ ಮೋದಿ ಹಿಂದೂ ಅಲ್ಲ ಎಂದು ಹೇಳಿಕೆ ನೀಡಿದ್ದ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ವಿರುದ್ಧ ಪಾಟ್ನಾ ಪೊಲೀಸರು ಸೋಮವಾರ ಪ್ರಕರಣ ದಾಖಲಿಸಿದ್ದಾರೆ. ಭಾರತೀಯ ಜನತಾ ಯುವ ಮೋರ್ಚಾದ (ಬಿಜೆವೈಎಂ) ರಾಜ್ಯ ವಕ್ತಾರ ಕಲ್ಲು ಎಂದೂ ಕರೆಯಲ್ಪಡುವ ಕೃಷ್ಣ ಸಿಂಗ್ ಅವರು ಭಾನುವಾರ ರಾತ್ರಿ ಪಾಟ್ನಾದ ಗಾಂಧಿ ಮೈದಾನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಾವು ಲಾಲು ಪ್ರಸಾದ್ ಯಾದವ್ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ ಮತ್ತು ಈ ವಿಷಯವು ತನಿಖೆಯಲ್ಲಿದೆ” ಎಂದು ಗಾಂಧಿ ಮೈದಾನ್ ಪೊಲೀಸ್ ಠಾಣೆಯ ಎಸ್ಎಚ್ಒ ಸೀತಾರಾಮ್ ಕುಮಾರ್ ಹೇಳಿದ್ದಾರೆ. ಭಾನುವಾರ ಗಾಂಧಿ ಮೈದಾನದಲ್ಲಿ ನಡೆದ ಜನವಿಶ್ವಾಸ್ ರ್ಯಾಲಿಯಲ್ಲಿ ಮಾತನಾಡಿದ ಲಾಲು ಪ್ರಸಾದ್ ಯಾದವ್, ಇತ್ತೀಚಿನ ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ವಂಶಪಾರಂಪರ್ಯದ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂದಿದ್ದರು. ರ್ಯಾಲಿಯಲ್ಲಿ ಮಾತನಾಡಿದ ಲಾಲು ಪ್ರಸಾದ್, “ಅವರಿಗೆ ಏಕೆ ಮಕ್ಕಳಿಲ್ಲ ಎಂದು ನಾನು ಅವರನ್ನು ಕೇಳಲು ಬಯಸುತ್ತೇನೆ. ಅವರು ಮಕ್ಕಳನ್ನು ಹೊಂದಿರುವವರ ಮೇಲೆ ದಾಳಿ…
ದಾವಣಗೆರೆ : ಸಾರ್ವಜನಿಕರು ತಮ್ಮಲ್ಲಿರುವ ಅಘೋಷಿತ ವನ್ಯಜೀವಿ, ಪ್ರಾಣಿಗಳ ಅಂಗಾಂಗಗಳ ಪದಾರ್ಥಗಳು, ಟ್ರೋಪಿಗಳು ಮತ್ತು ಸಂಸ್ಕರಿಸಿದ ಟ್ರೋಪಿಗಳನ್ನು ಅಧ್ಯರ್ಪಿಸಲು ಸಂಬಂಧಪಟ್ಟ ಅರಣ್ಯಇಲಾಖೆ, ಎಸಿಎಫ್, ಡಿಸಿಎಫ್ ಕಚೇರಿಗೆ ನೀಡಲು 90 ದಿನಗಳ ಕಾಲಾವಕಾಶ ನೀಡಲಾಗಿದೆ. ಅಧ್ಯರ್ಪಿಸಲು ಏ.11 ರಂದು ಕೊನೆಯ ದಿನವಾಗಿದ್ದು, ದಾವಣಗೆರೆ ಜಿಲ್ಲೆಯ ಸಾರ್ವಜನಿಕರು ತಮ್ಮಲ್ಲಿರುವ ವನ್ಯಜೀವಿ ಅಂಗಾಗಳಾದ ಹುಲಿಉಗುರು, ಚಿರತೆಉಗುರು, ಆನೆದಂತ, ಜಿಂಕೆಕೊಂಬು, ವನ್ಯಪ್ರಾಣಿಗಳ ಚರ್ಮ, ವನ್ಯಜೀವಿ ವಸ್ತುಗಳು ಸೇರಿದಂತೆ ಇನ್ನಿತರೆ ವಸ್ತುಗಳನ್ನು ಹೊಂದಿದ್ದರೆ. ಅಧ್ಯರ್ಪಿಸಬೇಕು. ಕಚೇರಿಗೆ ಸಲ್ಲಿಸುವ ಮೊದಲು 100 ರೂಪಾಯಿಗಳ ಸ್ಟ್ಯಾಂಪ್ ಪೇಪರ್ನಲ್ಲಿ ನೋಟರಿ ಮಾಡಿರಬೇಕು ಮತ್ತು ನೋಟರಿಗೊಂಡ ಅಫಿಡವಿಟನಲ್ಲಿ ಅಧ್ಯರ್ಪಿಸುತ್ತಿರುವ ವನ್ಯಜೀವಿ ಅಂಗಾಂಗ, ಟ್ರೋಪಿಯನ್ನು ಅರ್ಜಿದಾರರು ಪಡೆದ ವಿಧ ಮತ್ತು ವರ್ಷದ ಬಗ್ಗೆ ಸ್ಪಷ್ಟವಾಗಿ ನಮೂದಿಸಿ ದೃಡೀಕರಿಸಿರಬೇಕು. ಹೆಚ್ಚಿನ ಮಾಹಿತಿಗಾಗಿ ದಾವಣಗೆರೆ ಪ್ರಾದೇಶಿಕ ವಲಯ ಕಚೇರಿ, ಮೊ. ನಂ:9481991703, ಜಗಳೂರು ಪ್ರಾದೇಶಿಕ ವಲಯ ಕಚೇರಿ,ಮೊ. ನಂ:9481991705, ಹೊನ್ನಾಳಿ ಪ್ರಾದೇಶಿಕ ವಲಯ ಕಚೇರಿ, ಮೊ. ನಂ:9481991704, ಹೊಸಕೆರೆ ರಂಗಯ್ಯನದುರ್ಗ ವನ್ಯಜೀವಿ ವಲಯ, ಮೊ. ನಂ:9481991706, ಮತ್ತು ಸಹಾಯಕ…
ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಧಾನ ಮಂಡಲದ ಅಧಿವೇಶನದಲ್ಲಿ ಸಿವಿಲ್ ಪ್ರಕ್ರಿಯಾ ಸಂಹಿತೆ (ಕರ್ನಾಟಕ ತಿದ್ದುಪಡಿ) ಅಧಿನಿಯಮ 2023 ಅನ್ನು ಮಂಡಿಸಿ ಅಂಗೀಕಾರ ಪಡೆದಿದೆ. ಇದಕ್ಕೆ ರಾಷ್ಟ್ರಪತಿಗಳಿಂದಲೂ ಅಂಗೀಕಾರ ದೊರೆತಿದೆ. ಹೀಗಾಗಿ ಇನ್ಮುಂದೆ ರಾಜ್ಯದಲ್ಲಿ ಆರ್ಥಿಕವಾಗಿ ದುರ್ಬಲರಾದವರ ವ್ಯಾಜ್ಯಗಳು 6 ತಿಂಗಳ ಕಾಲಮಿತಿಯಲ್ಲಿಯೇ ಇತ್ಯರ್ಥವಾಗಲಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ ಪಾಟೀಲ್ ಅವರು, ದೇಶದ ಯಾವುದೇ ರಾಜ್ಯದಲ್ಲಿಯೂ ಈ ರೀತಿ ಬಡವರ ವ್ಯಾಜ್ಯ ತ್ವರಿತ ಪರಿಹಾರಕ್ಕೆ ಮಸೂದೆಗಳು ಮಂಡನೆಯಾಗಿಲ್ಲ. ಬಡವರು, ಸಣ್ಣ ರೈತರು ಹಣ ಖರ್ಚು ಮಾಡಿಕೊಂಡು ನ್ಯಾಯದಾನ ಪಡೆಯಲು ವರ್ಷಗಟ್ಟಲೆ ನ್ಯಾಯಾಲಯಕ್ಕೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಇದನ್ನು ಜಾರಿಗೆ ತರಲಾಗಿದೆ ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1764599703898112215 https://kannadanewsnow.com/kannada/pro-pakistan-slogans-raised-in-vidhana-soudha-r-ashoka-demands-disclosure-of-fsl-report/ https://kannadanewsnow.com/kannada/bjp-launches-modi-ka-parivar-campaign-hits-back-at-lalu-prasad-over-modi-has-no-family/
ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದಂತ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಈಗ ಎಫ್ಎಸ್ಎಲ್ ವರದಿಯನ್ನು ಬಹಿರಂಗ ಪಡಿಸುವಂತೆ ಆರ್.ಅಶೋಕ್ ಒತ್ತಾಯಿಸಿದ್ದಾರೆ. ಈ ಕುರಿತಂತೆ ಎಕ್ಸ್ ಮಾಡಿರುವಂತ ಅವರು, ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ವರದಿ ಬಂದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸಿಎಂ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕಡೆಗೂ ಜನಾಕ್ರೋಶಕ್ಕೆ ಮಣಿದು ಮೂರು ಆರೋಪಿಗಳನ್ನು ಬಂಧಿಸಿದೆ ಎಂದಿದ್ದಾರೆ. FSL ವರದಿಯಲ್ಲಿ ಘೋಷಣೆ ಕೂಗಿದ್ದು ಧೃಢಪಟ್ಟ ನಂತರವೇ ಈ ಮೂವರು ಆರೋಪಿಗಳ ಬಂಧನವಾಗಿರುವುದು ಸ್ಪಷ್ಟಾಗಿದ್ದರೂ, ಸರ್ಕಾರ ಇನ್ನೂ FSL ವರದಿ ಬಹಿರಂಗ ಮಾಡದಿರುವುದು ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ. ಸರ್ಕಾರ ಏನನ್ನೂ ಮುಚ್ಚಿಡುತ್ತಿಲ್ಲ, ಯಾರನ್ನೂ ರಕ್ಷಿಸುತ್ತಿಲ್ಲ ಎನ್ನುವುದಾದರೆ ವರದಿ ಬಹಿರಂಗ ಮಾಡಲು ಹಿಂಜರಿಕೆ ಏಕೆ? ಎಂದು ಪ್ರಶ್ನಿಸಿದ್ದಾರೆ. ಸರ್ಕಾರ ಈ ಮೂವರು ಆರೋಪಿಗಳನ್ನು ಬಂಧಿಸಿದರೆ ಸಾಲದು, ಇವರ ಮೇಲೆ IPC ಯ ಸೆಕ್ಷನ್ 124A ಅಡಿ ದೇಶದ್ರೋಹ ಪ್ರಕರಣ ದಾಖಲಿಸಿ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರನ್ನೂ…