Author: kannadanewsnow09

ಬೆಂಗಳೂರು: “ದೇಶದ್ರೋಹ ಕೆಲಸದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಪೊಲೀಸರ ತನಿಖೆಯಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಉತ್ತರಿಸಿದಂತ ಅವರು, “ಪಾಕ್ ಪರ ಘೋಷಣೆ ಪ್ರಕರಣದಲ್ಲಿ ಪೊಲೀಸರಿಗೆ ತನಿಖೆ ನಡೆಸಲು ಸ್ವಾತಂತ್ರ್ಯ ನೀಡಿದ್ದೇವೆ. ಈ ಬಗ್ಗೆ ಗೃಹಸಚಿವರು ಹೇಳಿಕೆ ನೀಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಿ ಎಂದು ನಮ್ಮ ರಾಜ್ಯಸಭಾ ಸದಸ್ಯರು ಕೂಡ ಅವತ್ತೇ ಹೇಳಿಕೆ ನೀಡಿದ್ದಾರೆ ಎಂದರು. ಬಿಜೆಪಿಯವರು ತಮಗೆ ಬೇಕಾದವರ ಕೈಯಿಂದ ಏನೇ ವರದಿ ತರಿಸಿಕೊಳ್ಳಬಹುದು ಅದು ಅಧಿಕೃತವಲ್ಲ. ಪೊಲೀಸ್ ಅಧಿಕಾರಿಗಳು ಸಮಗ್ರ ತನಿಖೆ ಮಾಡಲಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಬಿಜೆಪಿ ಕಾರ್ಯಕರ್ತರ ಪ್ರಕರಣವೂ ತನಿಖೆ ಕೆಲ ಸಚಿವರು ಪಾಕ್ ಪರ ಘೋಷಣೆ ಕೂಗಿಲ್ಲ ಎಂದು ಹೇಳಿದ್ದರ ಬಗ್ಗೆ ಕೇಳಿದಾಗ, “ಅವರ ಅಭಿಪ್ರಾಯ ಅವರು ಹೇಳಿದ್ದಾರೆ. ಇಲ್ಲಿ ವಿಡಿಯೋ ತಿರುಚಿರಬಹುದು. ಇಲ್ಲಿ ನಮ್ಮ ಅಭಿಪ್ರಾಯಕ್ಕಿಂತ ಪೊಲೀಸರ ತನಿಖೆಯ…

Read More

ಶಿವಮೊಗ್ಗ : ಜಿಲ್ಲಾ ಸೈನಿಕ ಪುನರ್ವಸತಿ ಇಲಾಖೆ ಕಛೇರಿಯಲ್ಲಿ ಲಿಪಿಕ ಕಂ ಚಾಲಕ ಹುದ್ದೆಗೆ ಅನುಭವುಳ್ಳ ಮಾಜಿ ಸೈನಿಕರು ಹೊರ ಗುತ್ತಿಗೆಯ ಆಧಾರದ ಮೇಲೆ ಕಾರ್ಯ ನಿರ್ವಹಿಸಲು ಅರ್ಜಿ ಆಹ್ವಾನಿಸಿದೆ. ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಮಾತ್ರ ಅವಕಾಶವಿದ್ದು, ಅರ್ಜಿದಾರರು ಸೇನೆಯಲ್ಲಿ ವಾಹನ ಪರವಾನಿಗೆ ಪಡೆದಿರುವ ಮತ್ತು ಸೇನಾ ವಾಹನ ಚಲಾಯಿಸಿದ ಚಾಲಕ ಪ್ರವೃತ್ತಯುಳ್ಳವರಾಗಿರಬೇಕು ಜೊತೆಗೆ ಸರ್ಕಾರದ ಮೋಟಾರು ಕಾಯಿದೆಯಡಿಯಲ್ಲಿ ದಿನಾಂಕ 01-03-2022 ರ ಮೊದಲು ಪಡೆದ ಲಘು ಮೋಟಾರು ವಾಹನದ ಪರವಾನಿಗೆ ಹೊಂದಿರಬೇಕು. ಸೈನ್ಯದಲ್ಲಿ ದುರ್ನಡತೆ ಸಲುವಾಗಿ ಯಾವುದೇ ವೈದ್ಯಕೀಯ ಕಾರಣಗಳಿಂದ ಸೈನ್ಯದಿಂದ ಬಿಡುಗಡೆಗೊಂಡಿರಬಾರದು. ಆಸಕ್ತರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಶಿವಮೊಗ್ಗ ಕಛೇರಿಗೆ ಸ್ವಯಂ ಲಿಖಿತ ಅರ್ಜಿ ಮತ್ತು ಸ್ವವಿವರ ದೊಂದಿಗೆ ಮಾ. 11 ರೊಳಗಾಗಿ ಕಛೇರಿಯ ವೇಳೆಯಲ್ಲಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕ ಡಾ. ಸಿ.ಎ.ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಕಛೇರಿಯ ದೂ. ಸಂ. :08182-2200925 ಯನ್ನು ಕಛೇರಿಯ ವೇಳೆಯಲ್ಲಿ ಅಥವಾ ಇಮೇಲ್ soldiersshimoga@gmail.com…

Read More

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣದಲ್ಲಿ ರಾಜ್ಯಸಭಾ ಸದಸ್ಯರಾಗಿ ಕಾಂಗ್ರೆಸ್‍ನಿಂದ ಆಯ್ಕೆಯಾದ ನಾಸೀರ್ ಹುಸೇನ್ ಅವರನ್ನು ಕೂಡ ಅಪರಾಧಿ ಎಂದು ಎಫ್‍ಐಆರ್‍ನಲ್ಲಿ ಸೇರಿಸಬೇಕು. 3 ಆರೋಪಿಗಳ ವಿವರ ಲಭಿಸಿದೆ. ನಾಲ್ಕನೇ ಆರೋಪಿಯಾಗಿ ನಾಸೀರ್ ಹುಸೇನ್ ಹೆಸರು ಸೇರಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು. ಬೆಳಗಾವಿಯ ವಿಮಾನನಿಲ್ದಾಣದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಖಾಸಗಿ ಎಫ್‍ಎಸ್‍ಎಲ್ ವರದಿ ಬಿಡುಗಡೆ ಆಗದೆ ಇದ್ದಿದ್ದರೆ ಸರಕಾರ ಈ ದೇಶದ್ರೋಹಿಗಳನ್ನು ಬಂಧಿಸಲು ಮೀನಮೇಷ ಎಣಿಸುವ ಸಾಧ್ಯತೆ ಇತ್ತು ಎಂದು ಅನುಮಾನ ವ್ಯಕ್ತಪಡಿಸಿದರು. ವಿಧಾನಸೌಧದ ಒಳಗೆ ಕೆಲವು ದೇಶದ್ರೋಹಿಗಳು ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಕೂಗಿದ ನಂತರ ಬಿಜೆಪಿ ನಿರಂತರ ಹೋರಾಟದ ಪ್ರತಿಫಲವಾಗಿ ನಿನ್ನೆ ಮೂರು ದೇಶದ್ರೋಹಿಗಳನ್ನು ಬಂಧಿಸಿದ್ದಾರೆ. ಆದರೆ, ರಾಜ್ಯ ಸರಕಾರ ಇನ್ನೂ ಎಫ್.ಎಸ್.ಎಲ್ ವರದಿಯನ್ನು ಬಹಿರಂಗಪಡಿಸಿಲ್ಲ ಎಂದು ಆಕ್ಷೇಪಿಸಿದರು. ಸರಕಾರ ಯಾವ ಕಾರಣಕ್ಕೆ ಎಫ್.ಎಸ್.ಎಲ್ ವರದಿಯನ್ನು ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದ ಅವರು,…

Read More

ನವದೆಹಲಿ: ಮುಂಬರುವಂತ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿಯೊಂದಿಗೆ ಕಣಕ್ಕೆ ಇಳಿಯಲಿದ್ದಾವೆ. ಈ ಮೈತ್ರಿ ಕೂಟವು ಚುನಾವಣೆಯಲ್ಲಿ ಭರ್ಜರಿ ಜಯಭೇರಿಯನ್ನು ಸಾಧಿಸಲಿದೆ. ಕಾಂಗ್ರೆಸ್ ಕೇವಲ 4 ಸ್ಥಾನಗಳನ್ನು ಗೆಲ್ಲಲಿದೆ ಎಂಬುದಾಗಿ ಇಂಡಿಯಾ ಟಿವಿ-ಸಿಎನ್ಎಕ್ಸ್ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ತಿಳಿಸಿದೆ. 2024 ರ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) 22 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ. ಅದರ ಮಿತ್ರ ಪಕ್ಷ ಜೆಡಿಎಸ್ 2 ಸ್ಥಾನಗಳನ್ನು ಗೆಲ್ಲಬಹುದು ಎಂದು ಇಂಡಿಯಾ ಟಿವಿ-ಸಿಎನ್ಎಕ್ಸ್ ಒಪಿನಿಯನ್ ಪೋಲ್ ಸೋಮವಾರ (ಮಾರ್ಚ್ 4) ಭವಿಷ್ಯ ನುಡಿದಿದೆ. 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆದ್ದಿತ್ತು. ಈ ಬಾರಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುತ್ತಿದೆ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಮತ್ತು ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ್ದ ಕಾಂಗ್ರೆಸ್ ಕೇವಲ ನಾಲ್ಕು ಸ್ಥಾನಗಳನ್ನು ಗೆಲ್ಲಲಿದೆ ಎಂದು ಅಂದಾಜಿಸಲಾಗಿದೆ. ಎನ್ಡಿಎ ಒಟ್ಟು 24 ಸ್ಥಾನಗಳನ್ನು ಗೆಲ್ಲಬಹುದು. ಕಾಂಗ್ರೆಸ್ 4 ಸ್ಥಾನಗಳನ್ನು ಗೆಲ್ಲಲಿದೆ ಎಂದು ಅಂದಾಜಿಸಲಾಗಿದೆ.…

Read More

ಬೆಂಗಳೂರು: ಶಿವರಾತ್ರಿ ಹಬ್ಬದಂದು ಊರಿಗೆ ತೆರಳುವಂತ ಸಾರಿಗೆ ಬಸ್ ಪ್ರಯಾಣಿಕರಿಗೆ ಕೆ ಎಸ್ ಆರ್ ಟಿಸಿಯಿಂದ ಗುಡ್ ನ್ಯೂಸ್ ನೀಡಲಾಗಿದೆ. ಅದೇ 1,500 ಹೆಚ್ಚುವರಿ ವಿಶೇಷ ಬಸ್ ಸಂಚಾರದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ KSRTCಯು, ದಿನಾಂಕ 08.03.2024 ರಂದು ಮಹಾಶಿವರಾತ್ರಿ ಹಾಗೂ ದಿನಾಂಕ:09.03.2024 ಮತ್ತು 10.03.2024 ವಾರಾಂತ್ಯ ದಿನಗಳಾಗಿರುವುದರಿಂದ ಕರಾರಸಾ ನಿಗಮ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ 07.03.2024 ರಿಂದ 10.03.2024 ರವರೆಗೆ ಬೆಂಗಳೂರಿನಿAದ ಈ ಕೆಳಕಂಡ ಸ್ಥಳಗಳಿಗೆ 1500 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ: 10.03.2024 ಹಾಗೂ 11.03.2024 ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದಿದೆ. • ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ,…

Read More

ಬೆಂಗಳೂರು: ಮಾರ್ಚ್.5ರ ಇಂದು ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ರಾಜ್ಯ ಮಟ್ಟದ 5ನೇ ಸಮಾವೇಶವನ್ನು ಆಯೋಜಿಸಲಾಗಿದೆ. ಈ ಸಮಾವೇಶದಲ್ಲಿ ಭಾಗಿಯಾಗುವಂತ ನೌಕರರಿಗೆ ಅನುಕೂಲವಾಗುವಂತೆ ಮಾರ್ಚ್.5ರ ಇಂದು ಮತ್ತು ನಾಳೆ, ಎರಡು ದಿನ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು,ಕರ್ನಾಟಕ ರಾಜ್ಯ ಸರ್ಕಾರಿ ಎಸ್.ಸಿ./ಎಸ್.ಟಿ. ನೌಕರರ ಸಮನ್ವಯ ಸಮಿತಿಯ ವತಿಯಿಂದ ದಿನಾಂಕ: 05.03.2024 ರಂದು ಬೆಂಗಳೂರಿನ ವಸಂತ ನಗರದಲ್ಲಿರುವ ಡಾ|| ಅಂಬೇಡ್ಕರ್ ಭವನದಲ್ಲಿ ರಾಜ್ಯ ಮಟ್ಟದ 5ನೇ ಕರ್ನಾಟಕ ರಾಜ್ಯ ಸರ್ಕಾರಿ ಎಸ್‌.ಸಿ/ಎಸ್‌.ಟಿ, ನೌಕರರ ಸಮಾವೇಶವನ್ನು ಆಯೋಜಿಸಲಾಗಿದೆ ಎಂದಿದ್ದಾರೆ. ಈ ಸಮಾವೇಶದಲ್ಲಿ ಭಾಗವಹಿಸುವ ಬೆಂಗಳೂರು ನಗರ ಜಿಲ್ಲೆಯ ಸಂಘದ ಸದಸ್ಯರು ಅಧಿಕಾರಿ/ನೌಕರರಿಗೆ ದಿನಾಂಕ: 05.03.2024 ರಂದು ಒಂದು ದಿನ ಮಾತ್ರ ಹಾಗೂ ರಾಜ್ಯದ ಇತರ ಜಿಲ್ಲೆಗಳ ಸಂಘದ ಸದಸ್ಯ ಅಧಿಕಾರಿ/ನೌಕರರಿಗೆ ಪ್ರಯಾಣ ದಿನಗಳೂ ಸೇರಿದಂತೆ ದಿನಾಂಕ: 05.03 2024 ಮತ್ತು…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ತಾಂತ್ರಿಕ ಕಾಲೇಜು ಅತಿಥಿ ಉಪನ್ಯಾಸಕರಿಗೆ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ. ಅದೇ ಗೌರವ ಧನವನ್ನು ಪರಿಷ್ಕರಿಸಿ ಆದೇಶಿಸಿದೆ. ಅಲ್ಲದೇ ಆರೋಗ್ಯ ವಿಮಾ ಸೌಲಭ್ಯ, ಇಡಗಂಟು ಯೋಜನೆಯನ್ನು ಜಾರಿಗೊಳಿಸಿ ಆದೇಶಿಸಿದೆ. ಈ ಕುರಿತಂತೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ.ಧನಂಜಯ ನಡವಳಿಯನ್ನು ಹೊರಡಿಸಿದ್ದು, ಸರ್ಕಾರಿ ಪ್ರಧಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಗುಳ ಆರೋಗ್ಯದ ದೃಷ್ಠಿಯಿಂದ ವಾರ್ಷಿಕ 5 ಲಕ್ಷಗಳ ಆರೋಗ್ಯ ವಿಮಾ ಸೌಲಭ್ಯವನ್ನು ಒದಗಿಸಲು ಮಾಸಿಕ 400 ರೂ ವಂತಿಕೆಯನ್ನು ಅವರಿಂದ ಕಟಾಯಿಸಿ, ಇನ್ನುಳಿದ 400 ರೂ ಸರ್ಕಾರದ ವತಿಯಿಂದ ಭರಿಸಲು ಉದ್ದೇಶಿಸಿದ್ದು, ಹೀಗೆ ಒಟ್ಟು 800 ಗಳನ್ನು ಆರೋಗ್ಯ ವಿಮೆಗೆ ಪಾವತಿಸಲು ಉದ್ದೇಶಿಸಿದೆ ಎಂದಿದ್ದಾರೆ. ಅತಿಥಿ ಉಪನ್ಯಾಸಕರ ಆರೋಗ್ಯದ ಸಲುವಾಗಿ ವಿಮಾ ಸೌಲಭ್ಯವನ್ನು ಮಂಜೂರು ಮಾಡುವಂತೆ ಹಾಗೂ ಅತಿಥಿ ಉಪನ್ಯಾಸಕರುಗಳಾಗಿ ಸೇವೆ ಸಲ್ಲಿಸಿದ 60 ವರ್ಷ ಮೀರಿದ ನಂತ್ರ ಇವರಿಗೆ ಭದ್ರತಾ ರೂಪದಲ್ಲಿ ವಾರ್ಷಿಕ 50,000…

Read More

ಬೀದರ್: ಜಿಲ್ಲೆಯ ಹಲವೆಡೆ ಇಂದು ರಾತ್ರಿ ಭೂಕಂಪನ ಉಂಟಾಗಿದೆ. ಲಘು ಭೂಕಂಪನದಿಂದಾಗಿ ಭೂಮಿ ಕಂಪಿಸಿದ ಪರಿಣಾಮ ಜನರು ಬೆಚ್ಚಿ ಬಿದ್ದಿರೋದಾಗಿ ತಿಳಿದು ಬಂದಿದೆ. ಬೀದರ್ ಜಿಲ್ಲೆಯಲ್ಲಿ ಸಂಜೆ ಸುಮಾರು 7.40 ಗಂಟೆಗೆ ಭೂಕಂಪನ ಉಂಟಾಗಿದೆ. ಬೀದರ್ ತಾಲೂಕಿನ ಇಸ್ಲಾಂಪುರದ ಯರನಹಳ್ಳಿಯಲ್ಲಿ 1.85 ತೀವ್ರತೆಯಲ್ಲಿ ಭೂಕಂಪನ ಸಂಭವಿಸಿದೆ. ಅಲ್ಲದೇ ಬಸವಕಲ್ಯಾಣದ ರಾಜೇಶ್ವರದಲ್ಲಿ 2.6ರಷ್ಟು ತೀವ್ರತೆಯಲ್ಲಿ ಭೂಮಿ ಕಂಪಿಸಿದೆ. ಇದಲ್ಲದೇ ಯರಭಾಗದಲ್ಲಿ 3.2 ರಷ್ಟು ತೀವ್ರತೆಯಲ್ಲಿ ಭೂಮಿ ಕಂಪನ ಉಂಟಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣ ಕೇಂದ್ರದಿಂದ ಈ ಮಾಹಿತಿಯನ್ನು ಬಿಡುಗಡೆ ಮಾಡಲಾಗಿದೆ.

Read More

ಆಂಧ್ರಪ್ರದೇಶ: ಇಂದು ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಅದೇ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿ ಐವರು ದುರ್ಮರಣ ಹೊಂದಿರುವಂತ ಘಟನೆ ನಡೆದಿದೆ. ಆಂಧ್ರಪ್ರದೇಶದ ಮೆಹಬೂಬನಗರ ಜಿಲ್ಲೆಯ ಕೊತಕೋಟೆ ಬೈಪಾಸ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿಯಾಗಿದೆ. ಈ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರೇ, ಮಗುವೊಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದೆ. ಎರಿಟಿಗಾ ಕಾರಿನಲ್ಲಿ ಹೈದರಾಬಾದ್ ಗೆ ಬಳ್ಳಾರಿ ಮೂಲದವರು ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಕಾರು ಮರಕ್ಕೆ ಡಿಕ್ಕಿಯಾಗಿ ಸಂಭವಿಸಿದಂತ ಅಪಘಾತದಲ್ಲಿ ಮತ್ತಿಬ್ಬರು ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/sanatan-dharma-row-pm-modi-hits-out-at-udhayanidhi-stalin-over-hereditary-identity/ https://kannadanewsnow.com/kannada/bjp-state-president-jp-nadda-resigns-from-rajya-sabha/

Read More

ಆಂಧ್ರಪ್ರದೇಶ: ಇಲ್ಲಿನ ಕಡಪ ಜಿಲ್ಲೆಯಲ್ಲಿ ತೆಲಂಗಾಣ ಪೊಲೀಸರು ಹಾಗೂ ಎನ್ಐಎ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಓರ್ವ ಶಂಕಿತ ಉಗ್ರನನ್ನು ಬಂಧಿಸಿದ್ದಾರೆ. ಕಳೆದ 25 ದಿನಗಳಿಂದ ಆಂಧ್ರಪ್ರದೇಶದ ಚೆರ್ಲೋಪಲ್ಲಿ ಬಳಿಯ ಮಸೀದಿಯೊಂದರಲ್ಲಿ ಶಂಕಿತ ಓರ್ವ ಉಗ್ರ ಅಡಗಿರೋ ಮಾಹಿತಿಯನ್ನು ತಿಳಿದಂತ ಎನ್ಐಎ ಹಾಗೂ ತೆಲಂಗಾಣ ಪೊಲೀಸರು ಬಂಧಿಸಿದ್ದಾರೆ. ನಿಷೇಧಿತ ಪಿಎಫ್ಐ ಸಂಘಟನೆಗ ಸೇರಿದಂತ್ತೆ ಉತ್ತರ ತೆಲಂಗಾಣದ ಕಾರ್ಯದರ್ಶಿಯಾಗಿ ಅಬ್ದುಲ್ ಸಲೀಂ ಕಾರ್ಯ ನಿರ್ವಹಿಸುತ್ತಿದ್ದನು. ತಲೆಮರೆಸಿಕೊಂಡಿದ್ದಂತ ಆತ ಆನ್ ಲೈನ್ ಮೂಲಕ ಕರೆ ಮಾಡುತ್ತಿದ್ದನು. ಈ ಎಲ್ಲಾ ಮಾಹಿತಿಯನ್ನು ಕಲೆಹಾಕಿ ಆಂಧ್ರಪ್ರದೇಶ ಕಡಪ ಜಿಲ್ಲೆಯ ಮೈದುೂಕೊರು ಮಂಡಲದ ಚೆರ್ಲೋಪಲ್ಲಿ ಬಳಿಯ ಮಸೀದಿಯೊಂದರಲ್ಲಿ ಬಂಧಿಸಿದ್ದಾರೆ. ಇದೀಗ ಬಂಧಿತ ಶಂಕಿತ ಉಗ್ರನನ್ನು ಹೈದರಾಬಾದಿಗೆ ಕರೆದೊಯ್ಯುತ್ತಿದ್ದು, ಅಲ್ಲಿ ವಿಚಾರಣೆಯನ್ನು ನಡೆಸಲಿದ್ದಾರೆ. ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಸಂಬಂಧವೂ ಶಂಕಿತ ಉಗ್ರನನ್ನು ಎನ್ಐಎ ಅಧಿಕಾರಿಗಳ ವಿಚಾರಣೆ ನಡೆಸೋ ಸಾಧ್ಯತೆ ಇದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/from-now-on-disputes-of-economically-weaker-sections-in-the-state-will-be-settled-within-a-time-frame-of-6-months/ https://kannadanewsnow.com/kannada/digitize-applications-under-sakala-from-receipt-to-service-minister-krishna-byre-gowda/

Read More