Author: kannadanewsnow09

ಬೆಂಗಳೂರು: ಸ್ಪೀಕರ್ ಅವರು ಆಡಳಿತ ಪಕ್ಷದ ಕೈಗೊಂಬೆಯಾಗಿ ವರ್ತಿಸಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಮನವಿ ಮಾಡಿದ್ದಾರೆ. ಬಿ.ವೈ. ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿ ಬಿಜೆಪಿ ಶಾಸಕರ ನಿಯೋಗವು ಇಂದು ಗೌರವಾನ್ವಿತ ರಾಜ್ಯಪಾಲರನ್ನು ಭೇಟಿ ಮಾಡಿತು. ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿಯ 18 ಶಾಸಕರನ್ನು 6 ತಿಂಗಳ ಕಾಲ ಅಮಾನತು ವಿಷಯದಲ್ಲಿ ಸಂವಿಧಾನ ವಿರೋಧಿ ನಡೆಯನ್ನು ಅನುಸರಿಸಲಾಗಿದ್ದು, ಸ್ಪೀಕರ್ ಅವರು ಇದಕ್ಕೆ ಬೆಂಬಲ ಕೊಡಬಾರದು ಎಂದು ಒತ್ತಾಯಿಸಿದರು. ಆಡಳಿತ ಪಕ್ಷಕ್ಕೆ ಮನವರಿಕೆ ಮಾಡಿ ಸ್ಪೀಕರ್ ಅವರು ತಮ್ಮ ನಿರ್ಧಾರದಿಂದ ಹಿಂದೆ ಸರಿಯಬೇಕೆಂದು ಆಗ್ರಹಿಸಿದರು. ಗೌರವಾನ್ವಿತ ರಾಜ್ಯಪಾಲರನ್ನು ಭೇಟಿ ಮಾಡಿದ್ದೇವೆ. ರಾಜ್ಯಪಾಲರು ಇದರಲ್ಲಿ ಮಧ್ಯಸ್ಥಿಕೆ ವಹಿಸಬೇಕು. ಸರಕಾರಕ್ಕೆ ಬುದ್ಧಿ ಹೇಳಬೇಕೆಂದು ಕೋರಿದ್ದಾಗಿ ವಿವರಿಸಿದರು. ಈಚೆಗೆ ನಡೆದ ಸದನದ ಕಲಾಪದಲ್ಲಿ ಬಿಜೆಪಿಯ 18 ಶಾಸಕರ ಅಮಾನತು ಕೂಡ ಆಗಿದೆ. ಹಲವಾರು ಬಾರಿ ವಿಪಕ್ಷದ ನಾಯಕರು ಮತ್ತು ಶಾಸಕರು…

Read More

ಬೆಂಗಳೂರು: ಹಬ್ಬನಘಟ್ಟ ಮತ್ತು ಅರಸೀಕೆರೆ ನಡುವಿನ ಲೈನ್ ಬ್ಲಾಕ್‌ನಿಂದಾಗಿ ಈ ಹಿಂದೆ ರದ್ದುಗೊಳಿಸಲಾಗಿದ್ದ, ಭಾಗಶಃ ರದ್ದುಗೊಳಿಸಲಾಗಿದ್ದ ಮತ್ತು ನಿಯಂತ್ರಿಸಲಾಗಿದ್ದ ಕೆಲವು ರೈಲು ಸೇವೆಗಳನ್ನು ಪುನರಾರಂಭಿಸಲಾಗಿದೆ. ಅವುಗಳ ವಿವರ ಹೀಗಿದೆ: 1. ರೈಲು ಸಂಖ್ಯೆ 56267 ಅರಸೀಕೆರೆ – ಮೈಸೂರು ಪ್ಯಾಸೆಂಜರ್ ರೈಲು, ಈ ಹಿಂದೆ ಏಪ್ರಿಲ್ 29, ಮೇ 3 ಮತ್ತು 10 ರಂದು ರದ್ದುಗೊಳಿಸಲಾಗಿತ್ತು. ಈಗ ಈ ರೈಲು ಎಂದಿನಂತೆ ಅರಸೀಕೆರೆಯಿಂದ ಮೈಸೂರಿಗೆ ತನ್ನ ನಿಗದಿತ ವೇಳಾಪಟ್ಟಿಯಂತೆ ಸಂಚರಿಸಲಿದೆ. 2. ರೈಲು ಸಂಖ್ಯೆ 16225 ಮೈಸೂರು – ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ ರೈಲು, ಈ ಹಿಂದೆ ಏಪ್ರಿಲ್ 29, ಮೇ 3 ಮತ್ತು 10 ರಂದು ಮೈಸೂರು ಮತ್ತು ಅರಸೀಕೆರೆ ನಡುವೆ ಭಾಗಶಃ ರದ್ದುಗೊಳಿಸಲಾಗಿತ್ತು. ಈಗ ಈ ರೈಲು ಮೈಸೂರಿನಿಂದ ಹೊರಟು ಶಿವಮೊಗ್ಗ ಟೌನ್‌ವರೆಗೆ ತನ್ನ ಪೂರ್ಣ ಮಾರ್ಗದಲ್ಲಿ ಸಂಚರಿಸಲಿದೆ. 3. ರೈಲು ಸಂಖ್ಯೆ 16206 ಮೈಸೂರು – ತಾಳಗುಪ್ಪ ಎಕ್ಸ್‌ಪ್ರೆಸ್ ರೈಲು, ಈ ಹಿಂದೆ ಏಪ್ರಿಲ್ 29, ಮೇ 3…

Read More

ಜಮ್ಮು: ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ಆಘಾತ ಮತ್ತು ದುಃಖವನ್ನು ವ್ಯಕ್ತಪಡಿಸುವ ನಿರ್ಣಯವನ್ನು ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಸೋಮವಾರ ಸರ್ವಾನುಮತದಿಂದ ಅಂಗೀಕರಿಸಿತು. ಕೋಮು ಸೌಹಾರ್ದತೆಯನ್ನು ಭಂಗಗೊಳಿಸುವ ಮತ್ತು ಪ್ರಗತಿಗೆ ಅಡ್ಡಿಪಡಿಸುವ ದುಷ್ಟ ಯೋಜನೆಗಳನ್ನು ಸೋಲಿಸಲು ದೃಢವಾಗಿ ಹೋರಾಡಲು ನಿರ್ಧರಿಸಿತು. ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಉಪಮುಖ್ಯಮಂತ್ರಿ ಸುರಿಂದರ್ ಚೌಧರಿ ಮಂಡಿಸಿದ ನಿರ್ಣಯವನ್ನು ಧ್ವನಿ ಮತದಿಂದ ಅಂಗೀಕರಿಸಲಾಯಿತು. ಅಧಿವೇಶನದ ಆರಂಭದಲ್ಲಿ, ಸದನದ ಸದಸ್ಯರು ಕಳೆದ ವಾರ ದುರಂತದಲ್ಲಿ ಸಾವನ್ನಪ್ಪಿದ 26 ಜನರಿಗೆ ಗೌರವ ಸಲ್ಲಿಸಲು ಎರಡು ನಿಮಿಷಗಳ ಮೌನ ಆಚರಿಸಿದರು. ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆಯು ತನ್ನ ಎಲ್ಲಾ ನಾಗರಿಕರಿಗೆ ಶಾಂತಿ, ಅಭಿವೃದ್ಧಿ ಮತ್ತು ಅಂತರ್ಗತ ಸಮೃದ್ಧಿಯ ವಾತಾವರಣವನ್ನು ಬೆಳೆಸಲು ಮತ್ತು ರಾಷ್ಟ್ರ ಮತ್ತು ಜಮ್ಮು ಮತ್ತು ಕಾಶ್ಮೀರದ ಕೋಮು ಸೌಹಾರ್ದತೆ ಮತ್ತು ಪ್ರಗತಿಯನ್ನು ಭಂಗಗೊಳಿಸಲು ಪ್ರಯತ್ನಿಸುವವರ ದುಷ್ಟ ಯೋಜನೆಗಳನ್ನು ದೃಢವಾಗಿ ಸೋಲಿಸಲು ತನ್ನ ಅಚಲ ಬದ್ಧತೆಯನ್ನು ಪುನರುಚ್ಚರಿಸುತ್ತದೆ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ. ನಿರ್ಣಯದ ಮೇಲಿನ ಚರ್ಚೆಯನ್ನು ಮುಕ್ತಾಯಗೊಳಿಸಿದ ಪ್ರವಾಸೋದ್ಯಮ…

Read More

ಉತ್ತರ ಕನ್ನಡ: ರಾಜ್ಯದಲ್ಲಿ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಎಂಬುದಾಗಿಯೇ ಮೌಸಿನ್ ಶುಕುರ್ ನನ್ನು ಕರೆಯಲಾಗುತ್ತಿತ್ತು. ಇಂತಹ ಆರೋಪಿ ಮೌಸಿನ್ ಶುಕುರ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ 1ನೇ ಹೆಚ್ಚುವರಿ ಸತ್ರ ನ್ಯಾಯಾಲಯದಿಂದ ಈ ಆದೇಶ ಮಾಡಲಾಗಿದೆ. ಅನೀಸ್ ಕೊಲೆ ಕೇಸಲ್ಲಿ ಮೌಸಿನ್ ಶುಕುರ್ ಗೆ ನ್ಯಾಯಾಂಗ ಬಂಧನವನ್ನು ವಿಧಿಸಿ ಕೋರ್ಟ್ ಆದೇಶಿಸಿದೆ. ಇನ್ನುಳಿದ ಪ್ರಕರಣದಲ್ಲಿ ಬಾಡಿ ವಾರಂಟ್ ಪಡೆಯಲು ಪೊಲೀಸರು ಸಜ್ಜಾಗಿದ್ದಾರೆ. ಮೋಸ್ಟ್ ವಾಂಟೆಡ್ ಕ್ರಿಮಿನಲ್ ಆಗಿರುವ ಮೌಸಿನ್ ಶುಕುರ್ ಗೆ ಬಾಡಿ ವಾರೆಂಟ್ ಪಡೆಯಲು ಪೊಲೀಸರು ಮುಂದಾಗಿದ್ದಾರೆ. ಅಂದಹಾಗೇ ಮೌಸಿರ್ ಶುಕುರ್ ವಿರುದ್ಧ ಉತ್ತರ ಕನ್ನಡ, ಬೆಂಗಳೂರು, ಮಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದಾವೆ. ಈತ ಭಯೋತ್ಪಾದಕರ ಜೊತೆ ಸಂಪರ್ಕ ಹೊಂದಿದ್ದರ ಬಗ್ಗೆಯೂ ಮಾಹಿತಿ ಇದೆ. ಈ ಕಾರಣಕ್ಕಾಗಿಯೇ ಎನ್ಐಎ ಕೂಡ ವಿಚಾರಣೆಗೆ ಮುಂದಾಗಿ ಎನ್ನಲಾಗುತ್ತಿದೆ. https://kannadanewsnow.com/kannada/big-news-woman-fined-rs-500-for-eating-at-namma-metro-in-bengaluru-bmrcl-makes-important-announcement/ https://kannadanewsnow.com/kannada/breaking-sensex-rises-over-1000-points-in-the-stock-market-share-market/

Read More

ಬೆಂಗಳೂರು: ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಾ, ಧರ್ಮದ ಹೆಸರಿನಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡತ್ತಾ, ಕೊಳಕು ರಾಜಕೀಯ ಪೋಷಿಸುತ್ತಾ ಇರುವ ರಾಜ್ಯದ ಬಿಜೆಪಿ ನಾಯಕರು ಮೋದಿ ಜೀ ಅವರನ್ನು ಪ್ರಶ್ನಿಸುವ ಎದೆಗಾರಿಕೆ ತೋರುವರಾ? ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಪ್ರಶ್ನಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಇಂದು ಕೇಂದ್ರ ಸರ್ಕಾರದ ರೈಲ್ವೆ ಇಲಾಖೆ ಪರೀಕ್ಷೆಗೆ ಜನಿವಾರ, ಮಾಂಗಲ್ಯ, ಕಾಲುಂಗುರ, ಕೈಬಳೆ, ತಿಲಕ ಎಲ್ಲವನ್ನು ನಿಷೇಧಿಸಿರುವುದನ್ನು ವಿಶ್ವ ಹಿಂದೂ ಪರಿಷತ್ ರವರೇ ಖಂಡಿಸಿರುವುದನ್ನು ಪತ್ರಿಕೆಯಲ್ಲಿ ಓದಿದೆ ಎಂದಿದ್ದಾರೆ. ಈ ಬಗ್ಗೆ ಬಿ.ಜೆ.ಪಿ ಅವರು ಮೋದಿ ಜೀ ಅವರನ್ನು ದೂಷಿಸಿಸುತ್ತಾರೆಯೇ? ಅಥವಾ ಮೋದಿಜೀ ಅವರಿಗೆ ಪತ್ರ ಬರೆದು ಮಾರ್ಪಾಡಿಗೆ ಕೇಳುತ್ತಾರೆಯೇ? ಇಲ್ಲ ರಾಜ್ಯದ್ಯಾಂತ ಮೋದಿ ಜೀ ಕೇಂದ್ರ ಸರ್ಕಾರದ ಈ ನಡೆಯನ್ನು ಖಂಡಿಸಿ ಚಳುವಳಿ/ ಜಾಥಾ/ ಮೆರವಣಿಗೆ ನಡೆಸುತ್ತಾರೆಯೇ ಎಂಬುದನ್ನು ಕೂತೂಹಲದಿಂದ ಎದುರು‌ ನೋಡುತ್ತಿದ್ದೇವೆ ಎಂದು ತಿಳಿಸಿದ್ದಾರೆ. ನಾನು ಈ ಹಿಂದೆ ನಮ್ಮ ರಾಜ್ಯದ ಉನ್ನತ ಶಿಕ್ಷಣ ಸಚಿವರಿಗೆ…

Read More

ಬೆಳಗಾವಿ: ನಗರದಲ್ಲಿ ನಡೆಯುತ್ತಿರುವಂತ ಕಾಂಗ್ರೆಸ್ ಕಾರ್ಯಕ್ರಮದ ವೇಳೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾತನಾಡುತ್ತಿದ್ದಂತ ವೇಳೆಯಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಕಪ್ಪುಬಟ್ಟೆ ಪ್ರದರ್ಶನ ಮಾಡಿ, ಹೈಡ್ರಾಮಾ ನಡೆಸಿದಂತ ಘಟನೆ ನಡೆದಿದೆ. ಬೆಳಗಾವಿ ನಗರದ ಸಿಪಿಎಡ್ ಮೈದಾನದಲ್ಲಿ ಇಂದು ಹೈಡ್ರಾಮಾವೇ ನಡೆದಿದೆ. AICC ಆಯೋಜಿಸಿದ್ದ ಕೇಂದ್ರ ಸರ್ಕಾರದ ಬೆಲೆ ಏರಿಕೆ, ಜನ ವಿರೋಧಿ ನೀತಿ ಹಾಗೂ ದೇಶ ವಿರೋಧಿ ಆಡಳಿತ ವಿರೋಧಿ ಖಂಡನಾ ಸಮಾವೇಶವನ್ನು ಉದ್ಘಾಟಿಸಿ ಸಿಎಂ ಸಿದ್ಧರಾಮಯ್ಯ ಮಾತನಾಡುತ್ತಿದ್ದಂತ ವೇಳೆಯಲ್ಲೇ ಬಿಜೆಪಿ ಕಾರ್ಯಕರ್ತೆಯರು ಕಪ್ಪುಬಟ್ಟೆ ಪ್ರದರ್ಶನ ಮಾಡಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಯತ್ನ ನಡೆಸಿದಂತ ಘಟನೆಯೂ ನಡೆಯಿತು. ಈ ಘಟನೆಯಿಂದ ಗರಂ ಆದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಬಿಜೆಪಿಯ ದೇಶ ವಿರೋಧಿ ಆಡಳಿತ, ಜನ ವಿರೋಧಿ ಕ್ರಮಗಳನ್ನು ಖಂಡಿಸಿ ಭಾಷಣ ಮಾಡುವ ವೇಳೆ ಮುಖ್ಯಮಂತ್ರಿಗಳ ಭಾಷಣಕ್ಕೆ ಅಡ್ಡಿ ಪಡಿಸಿದ ಬಿಜೆಪಿ ಕಿಡಿಗೇಡಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಬಿಜೆಪಿ-RSS ಗೆ ನೇರವಾಗಿ ಸವಾಲೆಸೆದು ಸೆಡ್ಡು ಹೊಡೆದರು. ಕಳೆದ…

Read More

ಬೆಂಗಳೂರು: ರಾಜ್ಯದಲ್ಲಿ ರಾಷ್ಟ್ರೀಯ ಹಾವು ಕಡಿತ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮದ ಅನುಷ್ಠಾನವನ್ನು ಮಾಡಲಾಗಿದೆ. ಈ ಮೂಲಕ ಹಾವು ಕಡಿತ ತಡೆಗಟ್ಟುವ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಡವಳಿಯನ್ನು ಹೊರಡಿಸಲಾಗಿದ್ದು, ಕರ್ನಾಟಕದಲ್ಲಿ ಹಾವು ಕಡಿತ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮವನ್ನು 2023-24 ರಲ್ಲಿ ಪ್ರಾರಂಭಿಸಿ, ಜಾರಿಗೊಳಿಸಲಾಗಿದೆ. ರಾಜ್ಯದಲ್ಲಿ ಇದರ ಯಶಸ್ವಿ ಅನುಷ್ಠಾನಕ್ಕಾಗಿ, ಮೇಲಿನ ಉಲ್ಲೇಖ (1) ರಲ್ಲಿ ಓದಲಾದ ಅಧಿಸೂಚನೆಯಲ್ಲಿ ಸರ್ಕಾರವು ಹಾವು ಕಡಿತದ ಪ್ರಕರಣಗಳು ಮತ್ತು ಹಾವು ಕಡಿತದಿಂದ ಸಂಭವಿಸುವ ವ್ಯಕ್ತಿಗಳ ಮರಣಗಳನ್ನು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ, 2020 ರ ಪ್ರಕರಣ 3 ರ ಅಡಿಯಲ್ಲಿ “ಅಧಿಸೂಚಿತ ಕಾಯಿಲೆ” ಎಂದು ಘೋಷಿಸಿದೆ. ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ಬೆಂಗಳೂರು, ಇವರು ವಿಷಪೂರಿತ ಹಾವು ಕಡಿತಕ್ಕೆ ತುತ್ತಾದವರಿಗೆ ಸಕಾಲಿಕ ಮತ್ತು ಸೂಕ್ತ ಚಿಕಿತ್ಸೆಯನ್ನು ನೀಡದಿದ್ದಲ್ಲಿ ಮರಣ ಅಥವಾ ಶಾಶ್ವತ ಅಂಗವೈಕಲ್ಯಗಳಂತಹ ವೈದ್ಯಕೀಯ ಸಮಸ್ಯೆಗಳು ಉಂಟಾಗುತ್ತವೆ ಎಂದು ತಿಳಿಸುತ್ತಾ, ಮೇಲಿನ ಉಲ್ಲೇಖ…

Read More

ಬೆಳಗಾವಿ: ರಾಜ್ಯದ ಯಜಮಾನಿ ಮಹಿಳೆಯರಿಗೆ ಗುಡ್ ನ್ಯೂಸ್ ಎನ್ನುವಂತೆ ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಹಣವನ್ನು ತಮ್ಮ ಖಾತೆಗೆ ಜಮಾ ಮಾಡಲಾಗುತ್ತದೆ ಅಂತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಮಾಡಲಾಗುವುದು. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಭರವಸೆ ನೀಡಿದ್ದಾರೆ. ಕೊಟ್ಟ ಮಾತನ್ನು ಉಳಿಸಿಕೊಳ್ಳುವ ವ್ಯಕ್ತಿ ನಮ್ಮ ಮುಖ್ಯಮಂತ್ರಿ ಎಂದು ಸಚಿವರು ಹೇಳಿದರು. ಮುಂದಿನ ತಿಂಗಳು 20 ನೇ ತಾರೀಖಿಗೆ ನಮ್ಮ ಸರ್ಕಾರ ಅಧಿಕಾರ ಬಂದು 2 ವರ್ಷ ಪೂರೈಸುತ್ತಿದೆ. ಈವರೆಗೆ 80 ಸಾವಿರ ಕೋಟಿ ರೂಪಾಯಿಗಳಷ್ಟು ಹಣವನ್ನು ಯಾವುದೇ ಮಧ್ಯವರ್ತಿಗಳಿಲ್ಲದೆ ನೇರವಾಗಿ ಜನರ ಜೇಬಿಗೆ ಹಾಕಿದ್ದೇವೆ. ಇದು ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಜನ ಸಾಮಾನ್ಯರ ಮೇಲಿರುವ ಬದ್ಧತೆ ಎಂದು ಸಚಿವರು ಹೇಳಿದರು. 2023 ರಲ್ಲಿ ಜನರ ವಿಶ್ವಾಸ ಗಳಿಸಿ ಕರ್ನಾಟದಲ್ಲಿ 136 ಸ್ಥಾನಗಳನ್ನು ಗೆದ್ದು ಅಧಿಕಾರದಲ್ಲಿದ್ದೇವೆ. ಸರ್ಕಾರ ಬಂದು 100 ದಿನಗಳ ಒಳಗೆ ಕೊಟ್ಟ ಮಾತಿನಂತೆ 5 ಗ್ಯಾರಂಟಿಗಳನ್ನು ಮನೆ…

Read More

ಬೆಂಗಳೂರು : ಈ ಬಿಜೆಪಿಯವರು ಹೇಳುವುದು ಒಂದು ಮಾಡುವುದು ಇನ್ನೊಂದು. ಇದೇ ಅವರ ಮುಖವಾಡ. ರೈಲ್ವೆ ಪರೀಕ್ಷೆಯಲ್ಲಿ ಮಂಗಳಸೂತ್ರ, ಜನಿವಾರ ತೆಗೆಯಬೇಕು ಎಂದು ಹೇಳಿರುವುದು ಸರಿಯಲ್ಲ. ಇದನ್ನು ಹಿಂಪಡೆಯಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಗ್ರಹಿಸಿದರು. ಸದಾಶಿವನಗರದ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಬೆಳಿಗ್ಗೆ ಪ್ರತಿಕ್ರಿಯೆ ನೀಡಿದರು‌. ರೈಲ್ವೆ ಪರೀಕ್ಷೆಯಲ್ಲಿ ಜನಿವಾರ, ತಾಳಿ ಧರಿಸುವುದನ್ನು ನಿಷೇಧ ಮಾಡಿರುವ ಬಗ್ಗೆ ಕೇಳಿದಾಗ, “ಧಾರ್ಮಿಕ ಸಂಕೇತಗಳಾಗಿ ಕಿವಿಯಲ್ಲಿ ಓಲೆ, ಮೂಗೂತಿ, ಮಂಗಳಸೂತ್ರ, ಜನಿವಾರ, ಉಡುದಾರ, ಹಣೆಬೊಟ್ಟು ಇರುತ್ತದೆ. ಇವುಗಳನ್ನು ಪರಿಶೀಲನೆ ಮಾಡಲಿ. ಆದರೆ ಅದನ್ನು ತೆಗೆಸುವುದು ಸರಿಯಲ್ಲ. ಈ ಹಿಂದೆ ಸಣ್ಣ, ಸಣ್ಣ ಉಪಕರಣಗಳನ್ನು ಬಳಸಿ ಪರೀಕ್ಷಾ ಅಕ್ರಮ ಎಸೆದ ಉದಾಹರಣೆಗಳನ್ನು ನೋಡಿದ್ದೇವೆ. ಇದರ ವಿರುದ್ಧ ಜನರೇ ಆಕ್ರೋಶ ವ್ಯಕ್ತಪಡಿಸಬೇಕು” ಎಂದರು. ಬೆಲೆ ಏರಿಕೆಗೆ ಕೇಂದ್ರವೇ ಕಾರಣ “ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯಿಂದ ಜನರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಜನಜಾಗೃತಿ ಮೂಡಿಸಿ ಹಾಗೂ ಸಂವಿಧಾನ ರಕ್ಷಣೆಗೆ ಬೆಳಗಾವಿಯಲ್ಲಿ ಪ್ರತಿಭಟನೆ…

Read More

ಬೆಳಗಾವಿ: ನಾವು ಬಿಜೆಪಿ-RSS ಗೊಡ್ಡು ಬೆದರಿಕೆಗಳಿಗೆ ನಾವು ಜಗ್ಗಲ್ಲ-ಬಗ್ಗಲ್ಲ. ಸಾರ್ವಜನಿಕವಾಗಿ ಎದುರಿಸುವ ಶಕ್ತಿ ನನಗಿದೆ. ನಮ್ಮ ಕಾರ್ಯಕರ್ತರಿಗೂ ಇದೆ ಎಂದು ಸಿದ್ದರಾಮಯ್ಯ ಗುಡುಗಿದರು. AICC ಆಯೋಜಿಸಿದ್ದ ಕೇಂದ್ರ ಸರ್ಕಾರದ ಬೆಲೆ ಏರಿಕೆ, ಜನ ವಿರೋಧಿ ನೀತಿ ಹಾಗೂ ದೇಶ ವಿರೋಧಿ ಆಡಳಿತ ವಿರೋಧಿ ಖಂಡನಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಬಿಜೆಪಿಯ ದೇಶ ವಿರೋಧಿ ಆಡಳಿತ, ಜನ ವಿರೋಧಿ ಕ್ರಮಗಳನ್ನು ಖಂಡಿಸಿ ಭಾಷಣ ಮಾಡುವ ವೇಳೆ ಮುಖ್ಯಮಂತ್ರಿಗಳ ಭಾಷಣಕ್ಕೆ ಅಡ್ಡಿ ಪಡಿಸಿದ ಬಿಜೆಪಿ ಕಿಡಿಗೇಡಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಬಿಜೆಪಿ-RSS ಗೆ ನೇರವಾಗಿ ಸೆಡ್ಡು ಹೊಡೆದರು. ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಾ, ಭಾರತೀಯರ ಬದುಕನ್ನು ಬೆಲೆ ಏರಿಕೆಯಲ್ಲಿ ಬೇಯಿಸುತ್ತಾ, ಭಾರತೀಯ ಸಮಾಜವನ್ನು ಛಿದ್ರಗೊಳಿಸುತ್ತಾ, ಬಿರುಕು ಮೂಡಿಸುತ್ತಾ ಜನದ್ರೋಹಿಯಾಗಿ ವರ್ತಿಸುತ್ತಿರುವುದು ಬಿಟ್ಟರೆ ಬೇರೆ ಏನು ಮಾಡಿದ್ದೀರಿ ತೋರಿಸಿ ಜನರಿಗೆ ಎಂದು ಸವಾಲು ಹಾಕಿದರು. ಭಾರತೀಯರು ಬ್ರಿಟೀಷರ ವಿರುದ್ಧ ಪ್ರಾಣತ್ಯಾಗ ಮಾಡಿ ಹೋರಾಡುತ್ತಿದ್ದಾಗ ನೀವು ಸಂಘ ಪರಿವಾರದವರು ಏನು…

Read More