Author: kannadanewsnow09

ದೆಹಲಿ : “ಮಾಧ್ಯಮಗಳ ಮುಂದೆ ಮಾಡುವ ಚರ್ಚೆಯಿಂದ ರಾಜಕಾರಣ ನಡೆಯುವುದಿಲ್ಲ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಕೆಪಿಸಿಸಿ ಅಧ್ಯಕ್ಷ ಗಾದಿಗೆ ನಾನೂ ಆಕಾಂಕ್ಷಿ ಎನ್ನುವ ಸಚಿವ ಕೆ.ಎನ್.ರಾಜಣ್ಣ ಹಾಗೂ ಸತೀಶ್ ಜಾರಕಿಹೊಳಿ ಅವರ ಹೆಸರು ಮುನ್ನೆಲೆಗೆ ಬಂದಿರುವ ಬಗ್ಗೆ ಪ್ರಶ್ನಿಸಿದಾಗ, “ಮಾಧ್ಯಮಗಳ ಮುಂದೆ ರಾಜಕೀಯ ಚರ್ಚೆ ಮಾಡುವುದು ಯಾವ ಪಕ್ಷದವರಿಗೂ ಹಾಗೂ ಯಾರಿಗೂ ಸೂಕ್ತವಾದುದಲ್ಲ” ಎಂದು ಅಭಿಪ್ರಾಯಪಟ್ಟರು. ಸಿದ್ದರಾಮಯ್ಯ ಅವರು ಸಮಾವೇಶದ ಬಗ್ಗೆ ತಿಳಿಸಿದ್ದಾರೆ ಕಾಂಗ್ರೆಸ್ ಪಕ್ಷದ ಸಾಧನ ಸಮಾವೇಶವು ಸಿದ್ದರಾಮಯ್ಯ ಅವರ ಸಮಾವೇಶವಾಗಿ ಬದಲಾಗಿದೆ ಎನ್ನುವ ಕುರಿತು ಅಸಮಾಧಾನ ಹೊಂದಿರುವ ಪತ್ರವು ಎಐಸಿಸಿಗೆ ಬಂದಿದೆ ಎನ್ನುವ ಬಗ್ಗೆ ಕೇಳಿದಾಗ, “ನನಗೆ ಇದರ ಬಗ್ಗೆ ಮಾಹಿತಿಯಿಲ್ಲ. ಆದರೆ, ಸಮಾವೇಶವನ್ನು ಯಾವ ಕಾರಣಕ್ಕೆ ಮಾಡಲಾಗುತ್ತಿದೆ ಎನ್ನುವುದರ ಬಗ್ಗೆ ಮುಖ್ಯಮಂತ್ರಿಗಳು ನನಗೆ ಮೊದಲೇ ತಿಳಿಸಿದ್ದಾರೆ. ಮಿಕ್ಕ ವಿಚಾರಗಳು ನನಗೆ ಗೊತ್ತಿಲ್ಲ. ಏಕೆಂದರೆ ಮುಖ್ಯಮಂತ್ರಿಗಳು ಹಾಗೂ ನಾನು ಭೇಟಿ ಮಾಡಿ…

Read More

ತುಮಕೂರು : ತುಮಕೂರು ಜಿಲ್ಲೆಯಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ವಿವಿಧ ಇಲಾಖೆಗಳ ಯೋಜನೆಯ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲು ಡಿ.2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು. ನಗರದ‌ಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಬೃಹತ್ ಕಾರ್ಯಕ್ರಮ ನಡೆಯಲಿದೆ. ಇಂಧನ ಸಚಿವ ಕೆ.ಜೆ.ಜಾರ್ಜ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಬೃಹತ್ ಕೈಗಾರಿಕೆ ಸಚಿವ ಎಂ‌ಬಿ.ಪಾಟೀಲ್, ಕಂದಾಯ ಸಚಿವ ಕೃಷ್ಣಬೈರೇಗೌಡ, ಕಾರ್ಮಿಕ ಸಚಿವ ಸಂತೋಷ್ ಲಾಡ್, ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಮುಂತಾದ ಸಚಿವರು, ಜಿಲ್ಲೆಯ ಎಲ್ಲ‌ ಕ್ಷೇತ್ರಗಳ ಶಾಸಕರು ಹಾಗೂ ಕೇಂದ್ರ ಸಚಿವ ವಿ.ಸೋಮಣ್ಣ ಅವರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದರು. ಸುಮಾರು ರೂ. 938 ಕೋಟಿ ಮೊತ್ತದ 825 ಕಾಮಗಾರಿಗಳಿಗೆ ಶಂಕುಸ್ಥಾಪನೆ, 94 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ನೂತನ ಕಾಮಗಾರಿಗಳ ಉದ್ಘಾಟನೆ. ವಿವಿಧ ಇಲಾಖೆಗಳ…

Read More

ಬೆಂಗಳೂರು: ಕೆ ಎಸ್ ಆರ್ ಟಿಸಿ ಅಂತರ ನಿಗಮ ವರ್ಗಾವಣೆ ನಿರೀಕ್ಷೆಯಲ್ಲಿ ಇದ್ದಂತ ನೌಕರರಿಗೆ ರಾಜ್ಯದ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅದೇ ಅಂತರ ನಿಗಮ ವರ್ಗಾವಣೆಗೆ ಗ್ರೀನ್ ಸಿಗ್ನಲ್ ನೀಡಿದೆ. ಈ ಕುರಿತು ಸಾರಿಗೆ ಮತ್ತು ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ಹಂಚಿಕೊಂಡಿದ್ದು, ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ 2023ನೇ ಸಾಲಿನ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ ದಿನಾಂಕ: 05-07-2023 ರ ಬೆಳಿಗ್ಗೆ 11:00 ಗಂಟೆಯಿಂದ ಪ್ರಾರಂಭವಾಗಿದ್ದು, ದಿನಾಂಕ:31-12-2023 ರ ಸಂಜೆ 5:30 ರವರೆಗೆ ಆನ್-ಲೈನ್ ಮೂಲಕ www.ksrtc.org/transfer ರಲ್ಲಿ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತೆ ಎಂದಿದ್ದಾರೆ. ಇದೇ ಪ್ರಥಮ ಬಾರಿಗೆ ಶೇ.40ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ನೌಕರರು ಹಾಗೂ ತೀವ್ರ ತರಹದ ಅನಾರೋಗ್ಯ (ಹೃದಯ ರೋಗ, ಕ್ಯಾನ್ಸರ್, ಸ್ಪಯಿನಾಲ್ ಕಾರ್ಡ್, ಕಿಡ್ನಿ ವೈಪಲ್ಯ ಹಾಗೂ ಮೆದಳು ಸಂಭಂದಿಸಿದ ಖಾಯಿಲೆಗಳು) ನೌಕರರ ಪ್ರಕರಣಗಳಿಗೆ ಅಂತರ ನಿಗಮ ವರ್ಗಾವಣೆಯ ಶೇ 5 ರಷ್ಟು ಹುದ್ದೆಗಳನ್ನು ಮೀಸಲಿರಿಸಲಾಗಿದೆ ಎಂದು…

Read More

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಬದಲಾವಣೆಯಿಲ್ಲ. ಹರಿದಾಡುತ್ತಿರುವಂತ ಸುದ್ದಿಗಳು ಸತ್ಯಕ್ಕೆ ದೂರವಾಗಿರುವಂತವುಗಳು ಎಂಬುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸ್ಪಷ್ಟ ಪಡಿಸಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 2024 – 25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಮಹತ್ವದ ಬದಲಾವಣೆ ಮಾಡಿರುವುದಾಗಿ ದಿನಪತ್ರಿಕೆಗಳಲ್ಲಿ ಸುದ್ದಿ ಪ್ರಕಟವಾಗಿರುತ್ತದೆ. ಆದರೆ 2024 – 25ನೇ ಸಾಲಿನ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಮಂಡಳಿಯು ಯಾವುದೇ ಬದಲಾವಣೆ ಮಾಡಿರುವುದಿಲ್ಲ ಎಂದು ಈ ಮೂಲಕ ಸ್ಪಷ್ಟೀಕರಿಸುತ್ತಿದ್ದೇವೆ ಎಂದಿದ್ದಾರೆ. ಮುಂದಿನ ಶೈಕ್ಷಣಿಕ ವರ್ಷದಲ್ಲಿ ವಿಷಯ ತಜ್ಞರ ಸಮಿತಿ ರಚಿಸಿ, ಸದರಿ ಸಮಿತಿ ನೀಡುವ ವರದಿಯಂತೆ ಕ್ರಮವಹಿಸಲಾಗುವುದು. ಹಾಗಾಗಿ ಈ ಸಾಲಿನ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಯಾವುದೇ ಬದಲಾವಣೆಯಿಲ್ಲದೆ, ಕಳೆದ ಸಾಲಿನಂತೆಯೇ ಮುಂದುವರಿಸಲಾಗಿದ್ದು, ಸದ್ಯದಲ್ಲೇ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಮಂಡಳಿಯ ಜಾಲತಾಣದಲ್ಲಿ ಪ್ರಕಟಿಸಲಾಗುವುದು. ಈ ಬಗ್ಗೆ ಶಿಕ್ಷಕರು,…

Read More

ಬೆಂಗಳೂರು: ರಾಜ್ಯದಲ್ಲಿ ಕೊಳವೆ ಬಾವಿ ಕೊರೆದು, ಮುಚ್ಚದೇ ಬಿಡುತ್ತಿರುವಂತವರ ವಿರುದ್ಧ ಸರ್ಕಾರ ಸಮರ ಸಾರುತ್ತಿದೆ. ಕೊಳವೆ ಬಾವಿ ಕೊರೆದು, ನೀರು ಬೀಳದೇ ಇದ್ದರೇ ಮುಚ್ಚುವುದು ಕಡ್ಡಾಯ ಮಾಡುವಂತ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಕೊಳವೆ ಬಾವಿ ಕೊರೆದು ಮುಚ್ಚದೇ ಇದ್ದರೇ ಒಂದು ವರ್ಷ ಜೈಲು ಶಿಕ್ಷೆ ಹಾಗೂ 20 ಸಾವಿರ ದಂಡವನ್ನು ವಿಧಿಸೋ ನಿರ್ಣಯವನ್ನು ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ The Karnataka Groundwater (Regulation and Control of Development and Management) (ತಿದ್ದುಪಡಿ) ವಿಧೇಯಕ, 2024ಕ್ಕೆ ಅನುಮೋದಿಸಿದೆ ಹಾಗೂ ಸದರಿ ವಿಧೇಯಕವನ್ನು ಮುಂಬರುವ ವಿಧಾನ ಮಂಡಲದ ಅಧಿವೇಶನದಲ್ಲಿ ಮಂಡಿಸಲು ಸಚಿವ ಸಂಪುಟ ಅನುಮೋದಿಸಿದೆ. ಒಂದು ವೇಳೆ ಚಳಿಗಾಲದ ವಿಧಾನ ಮಂಡಲದ ಅಧಿವೇಶನದಲ್ಲಿ ಈ ತಿದ್ದುಪಡಿ ವಿಧೇಯಕಕ್ಕೆ ಉಭಯ ಸದನಗಳಲ್ಲಿ ಒಪ್ಪಿಗೆ ಸಿಕ್ಕಲೇ ಕೊಳವೆ ಬಾವಿ ಕೊರೆದು, ಅನಾಹುತವಾದವರಿಗೆ…

Read More

ಮುಂಬೈ: ಕೊಲಾಬಾ ಮೂಲದ ನಿವೃತ್ತ ಮರ್ಚೆಂಟ್ ನೇವಿ ಕ್ಯಾಪ್ಟನ್ಗೆ 11.16 ಕೋಟಿ ರೂ.ಗಳನ್ನು ವಂಚಿಸಿದ ಆರೋಪದ ಮೇಲೆ ಪೈಧೋನಿ ಪ್ರದೇಶದ 31 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಮೊಹಮ್ಮದ್ ಅಲಿ ರಸ್ತೆಯ ನಿವಾಸಿ ಕೈಫ್ ಇಬ್ರಾಹಿಂ ಮನ್ಸೂರಿಯಿಂದ 33 ಡೆಬಿಟ್ ಕಾರ್ಡ್ಗಳು ಮತ್ತು ವಿವಿಧ ಬ್ಯಾಂಕ್ ಖಾತೆಗಳು ಮತ್ತು ಬಳಕೆದಾರರ 12 ಚೆಕ್ ಪುಸ್ತಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮುಂಬೈ ದಕ್ಷಿಣ ವಲಯದ ಸೈಬರ್ ಪೊಲೀಸ್ ಸಿಬ್ಬಂದಿ ತಿಳಿಸಿದ್ದಾರೆ. ಅಪರಾಧಕ್ಕೆ ಬಳಸಿದ ಬ್ಯಾಂಕ್ ಖಾತೆಯ ವಹಿವಾಟು ವಿವರಗಳನ್ನು ವಿಶ್ಲೇಷಿಸಿದಾಗ, ಒಬ್ಬ ಮಹಿಳೆ ಚೆಕ್ ಬಳಸಿ 6 ಲಕ್ಷ ರೂ.ಗಳನ್ನು ಹಿಂಪಡೆದಿರುವುದು ತನಿಖಾಧಿಕಾರಿಗಳಿಗೆ ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಅವಳನ್ನು ಪತ್ತೆಹಚ್ಚಿ ಪ್ರಶ್ನಿಸಿದಾಗ, ಮನ್ಸೂರಿಯ ಸೂಚನೆಯ ಮೇರೆಗೆ ಹಣವನ್ನು ಡ್ರಾ ಮಾಡಿದ್ದೇನೆ ಎಂದು ಅವಳು ಹೇಳಿದಳು, ನಂತರ ಅವನನ್ನು ಬಂಧಿಸಲಾಯಿತು. 11.16 ಕೋಟಿ ರೂ.ಗಳಲ್ಲಿ 43 ಲಕ್ಷ ರೂ.ಗಳನ್ನು ಬೇರೆಡೆಗೆ ತಿರುಗಿಸಿದ ಇನ್ನೂ ಐದು ಖಾತೆಗಳ ಡೆಬಿಟ್ ಕಾರ್ಡ್ಗಳನ್ನು…

Read More

ನವದೆಹಲಿ: ರಾಷ್ಟ್ರವನ್ನು ಆವರಿಸಿದ ಭಾವನಾತ್ಮಕ ಚರ್ಚೆಯ ನಂತರ ಆಸ್ಟ್ರೇಲಿಯಾ ಗುರುವಾರ 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧವನ್ನು ಕಾನೂನಾಗಿ ಅಂಗೀಕರಿಸಿತು, ಇದು ಬಿಗ್ ಟೆಕ್ ಅನ್ನು ಗುರಿಯಾಗಿಸಿಕೊಂಡು ಕಠಿಣ ನಿಯಮಗಳಲ್ಲಿ ಒಂದಾಗಿದೆ. ಇನ್ಸ್ಟಾಗ್ರಾಮ್ ಮತ್ತು ಫೇಸ್ಬುಕ್ ಮಾಲೀಕ ಮೆಟಾದಿಂದ ಟಿಕ್ಟಾಕ್ವರೆಗೆ ಟೆಕ್ ದೈತ್ಯರು ಅಪ್ರಾಪ್ತ ವಯಸ್ಕರು ಲಾಗಿನ್ ಆಗುವುದನ್ನು ನಿಲ್ಲಿಸಲು ಅಥವಾ 49.5 ಮಿಲಿಯನ್ ಡಾಲರ್ (ಯುಎಸ್ಡಿ 32 ಮಿಲಿಯನ್) ವರೆಗೆ ದಂಡವನ್ನು ಎದುರಿಸಲು ಕಾನೂನು ಒತ್ತಾಯಿಸುತ್ತದೆ. ಇದನ್ನು ಜಾರಿಗೊಳಿಸುವ ವಿಧಾನಗಳ ಪ್ರಯೋಗವು ಜನವರಿಯಲ್ಲಿ ಪ್ರಾರಂಭವಾಗಲಿದ್ದು, ನಿಷೇಧವು ಒಂದು ವರ್ಷದಲ್ಲಿ ಜಾರಿಗೆ ಬರಲಿದೆ. ಸಾಮಾಜಿಕ ಮಾಧ್ಯಮ ಕನಿಷ್ಠ ವಯಸ್ಸಿನ ಮಸೂದೆಯು ಯುವಜನರ ಮೇಲೆ ಮಾನಸಿಕ ಆರೋಗ್ಯದ ಪರಿಣಾಮದ ಬಗ್ಗೆ ಕಳವಳದ ನಡುವೆ ಸಾಮಾಜಿಕ ಮಾಧ್ಯಮದಲ್ಲಿ ವಯಸ್ಸಿನ ನಿರ್ಬಂಧವನ್ನು ಶಾಸನ ಮಾಡಲು ಯೋಜಿಸಿರುವ ಅಥವಾ ಕಾನೂನು ಮಾಡಲು ಯೋಜಿಸಿರುವ ಹೆಚ್ಚುತ್ತಿರುವ ಸರ್ಕಾರಗಳಿಗೆ ಆಸ್ಟ್ರೇಲಿಯಾವನ್ನು ಪರೀಕ್ಷಾ ಪ್ರಕರಣವಾಗಿ ರೂಪಿಸುತ್ತದೆ. ಫ್ರಾನ್ಸ್ ಮತ್ತು ಕೆಲವು ಯುಎಸ್ ರಾಜ್ಯಗಳು ಸೇರಿದಂತೆ ದೇಶಗಳು ಪೋಷಕರ…

Read More

ಲಂಡನ್: ಮುಂಬರುವ ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಹಿನ್ನೆಲೆಯಲ್ಲಿ 15 ದಿನಗಳ ಯೂರೋಪ್ ಪ್ರವಾಸ ಕೈಗೊಂಡಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮೊದಲ ದಿನವಾದ ಗುರುವಾರ ಸ್ಮಿತ್ ಗ್ರೂಪ್ ಜತೆ ಬಂಡವಾಳ ಹೂಡಿಕೆ ಕುರಿತು ಲಂಡನ್ ನಲ್ಲಿ ಮಾತುಕತೆ ನಡೆಸಿದ್ದಾರೆ. ಜತೆಗೆ ಆಲ್ಕೋಬೇವ್ (ಮದ್ಯ ತಯಾರಿಕೆ) ವಲಯದ ಕಂಪನಿಗಳ ಜತೆಯೂ ಅವರು ದುಂಡುಮೇಜಿನ ಸಭೆ ನಡೆಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿರುವ ಸ್ಮಿತ್ ಗ್ರೂಪ್ ಕರ್ನಾಟಕದಲ್ಲಿ ದೀರ್ಘಾವಧಿ ಹೂಡಿಕೆ ಮಾಡಲು ಮತ್ತು ತನ್ನ ಉತ್ಪಾದನಾ ಚಟುವಟಿಕೆಗಳನ್ನು ವಿಸ್ತರಿಸಲು ಒಲವು ವ್ಯಕ್ತಪಡಿಸಿದೆ ಎಂದು ತಿಳಿಸಿದ್ದಾರೆ. ಏರೋಸ್ಪೇಸ್ ಮತ್ತು ರಕ್ಷಣಾ ವಲಯ ಸೇರಿದಂತೆ ಹಲವು ವಲಯಗಳಲ್ಲಿ ಸಕ್ರಿಯವಾಗಿರುವ ಸ್ಮಿತ್ ಗ್ರೂಪ್, ತನ್ನ ವೆಟ್ ಸೀಲ್ ಜೋಡಣೆ ಚಟುವಟಿಕೆಗಳನ್ನು ಥಾಯ್ಲೆಂಡಿನಿಂದ ಬೆಂಗಳೂರಿಗೆ ಸ್ಥಳಾಂತರಿಸಲು ತೀರ್ಮಾನಿಸಿದೆ. ಅದು ಬೆಂಗಳೂರಿನಲ್ಲಿ ಈಗಾಗಲೇ 600 ಉದ್ಯೋಗಿಗಳನ್ನು ಹೊಂದಿದೆ. ಜತೆಗೆ ಕಂಪನಿಯು ತನ್ನ ಹೂಡಿಕೆ…

Read More

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಮೋಹಿತ್ ನರಸಿಂಹ ಮೂರ್ತಿ ಅವರನ್ನು ಬಂಧಿಸಲಾಗಿದೆ. ಬೆಂಗಳೂರಿನ ಕಾಟನ್ ಪೇಟೆ ಹಾಗೂ ತುಮಕೂರಿನ ಕೊರಟಗೆರೆಯಲ್ಲಿ ಮೋಹಿತ್ ವಿರುದ್ಧ ದೂರು ದಾಖಲಾಗಿತ್ತು, ಉತ್ತರಾಖಾಂಡ ದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿ ಯನ್ನು ತುಮಕೂರು ಪೊಲೀಸರು ಬಂಧಿಸಿ ಕರೆತರುತ್ತಿದ್ದಾರೆ. ಮೋಹಿತ್ ನರಸಿಂಹ ಮೂರ್ತಿ ಮುಖ್ಯಮಂತ್ರಿ ಹಾಗೂ ಸಚಿವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಜತೆಗೆ ಜಾತಿ ನಿಂದನೆ ದಸಹ ಮಾಡಿದ್ದರು. ದೂರು ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದರು. ಪೊಲೀಸರು ಮೊಬೈಲ್ ಟವರ್ ಪತ್ತೆ ಹಚ್ಚಿ ಉತ್ತರಾಖಂಡ ದಲ್ಲಿ ಬಂಧಿಸಿ ಕರೆತರುತ್ತಿದ್ದು ಶುಕ್ರವಾರ ನ್ಯಾಯಾಲಯದ ಮುಂದೆ ಹಾಜರು ಪಡಿಸಲಿದ್ದಾರೆ. https://kannadanewsnow.com/kannada/state-cabinet-decides-to-re-appeal-for-prosecution-against-bs-yediyurappa/ https://kannadanewsnow.com/kannada/cm-to-be-vice-chancellor-of-universities-cabinet-meeting/

Read More

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ದಿನಾಂಕ: 28.11.2024ರ ಸಚಿವ ಸಂಪುಟದ ಮಹತ್ವದ ನಿರ್ಣಯಗಳ ಬಗ್ಗೆ ಮುಂದೆ ಓದಿ. ಲೋಕಾಯುಕ್ತ ಸಂಸ್ಥೆಯಲ್ಲಿ ಎಸ್.ನಿರಂಜನ್, ನಿವೃತ್ತ ಕಾರ್ಯಪಾಲಕ ಇಂಜಿನಿಯರ್ ಹಾಗೂ ಬಿ.ಪ್ರಸನ್ನಕುಮಾರ್, ನಿವೃತ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಇವರ ಸೇವೆಯನ್ನು ಮತ್ತೊಂದು ವರ್ಷದ ಅವಧಿಗೆ ಮುಂದುವರೆಸಲು ಪ್ರಸ್ತಾಪಿಸಲಾಗಿದೆ. ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಆಡಳಿತ ಹಿತದೃಷ್ಟಿಯಿಂದ ಹಾಗೂ ತಾಂತ್ರಿಕ ವಿಭಾಗಕ್ಕೆ ವಹಿಸುವ ದೂರು ಪ್ರಕರಣಗಳಲ್ಲಿ ತನಿಖಾ ವರದಿಗಳನ್ನು ನಿಗದಿತ ಕಾಲಾವದಿಯೊಳಗೆ ಪಡೆಯುವುದು ಅವಶ್ಯಕವಾಗಿದೆ ಎಂದು ಲೋಕಾಯುಕ್ತ ನಿಬಂಧಕರು ಕೋರಿರುತ್ತಾರೆ. • ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ 05 ಕಾರ್ಯಪಾಲಕ ಇಂಜಿನಿಯರ್ ಹುದ್ದೆಗಳು ಹಾಗೂ 08 ಸಹಾಯಕ ಇಂಜಿನಿಯರ್‌ಗಳ ಹುದ್ದೆಗಳು ಮಂಜೂರಾಗಿವೆ. ಈ ಪೈಕಿ ಇಬ್ಬರು ಕಾರ್ಯಪಾಲಕ ಇಂಜಿನಿಯರ್ ಹಾಗೂ ಒಬ್ಬರು ಸಹಾಯಕ ಇಂಜಿನಿಯರ್ ಹುದ್ದೆಗಳು ಖಾಲಿಯಿವೆ. ಕರ್ನಾಟಕ ಸರ್ಕಾರ (ವ್ಯವಹಾರ ನಿರ್ವಹಣೆ) ನಿಯಮಗಳು, 1977ರ ಅನುಸೂಚಿ-1ರ ಐಟಂ-19ರನ್ವಯ ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಕಾರ್ಯಪಾಲಕ ಇಂಜಿನಿಯರ್ ಹಾಗೂ ಸಹಾಯಕ…

Read More