Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಮಹಿಳಾ ಪ್ರೀಮಿಯರ್ ಲೀಗ್ (WPL) 2026 ಸೀಸನ್ಗೆ ದೆಹಲಿ ಕ್ಯಾಪಿಟಲ್ಸ್ ಜೆಮಿಮಾ ರೊಡ್ರಿಗಸ್ ಅವರನ್ನು ನಾಯಕಿಯಾಗಿ ಘೋಷಿಸಿದೆ. ನಗದು-ಶ್ರೀಮಂತ ಲೀಗ್ನಲ್ಲಿ ತಂಡವನ್ನು ಸತತ ಮೂರು ಫೈನಲ್ಗೆ ಕೊಂಡೊಯ್ದ ಮೆಗ್ ಲ್ಯಾನಿಂಗ್ ಅವರಿಂದ ಅವರು ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ಆದಾಗ್ಯೂ, ಭಾರತೀಯ ಕ್ರಿಕೆಟಿಗರ ಮೇಲೆ ಕೇಂದ್ರೀಕರಿಸಿ ಮತ್ತು ಅದೇ ಸಿದ್ಧಾಂತವನ್ನು ಮನಸ್ಸಿನಲ್ಲಿಟ್ಟುಕೊಂಡು, ಆಡಳಿತ ಮಂಡಳಿಯು ಬದಲಾವಣೆಯನ್ನು ತರಲು ಬಯಸಿತು. ಜೆಮಿಮಾ ಅವರನ್ನು ಉನ್ನತ ಮಟ್ಟದ ಪಾತ್ರಕ್ಕೆ ಆಯ್ಕೆ ಮಾಡಲಾಗಿದೆ. ಗಮನಾರ್ಹವಾಗಿ, 25 ವರ್ಷದ ಅವರು WPL ನಲ್ಲಿ ದೆಹಲಿಯ ಮೊದಲ ಸಹಿ ಹಾಕಿದರು. ಅಂದಿನಿಂದ ಅವರು ತಂಡದ ಅವಿಭಾಜ್ಯ ಅಂಗವಾಗಿದ್ದಾರೆ, 27 ಪಂದ್ಯಗಳಲ್ಲಿ 139.66 ಸ್ಟ್ರೈಕ್ ದರದಲ್ಲಿ 507 ರನ್ ಗಳಿಸಿದ್ದಾರೆ. ಇತ್ತೀಚೆಗೆ, ಜೆಮಿಮಾ 2025 ರ ಏಕದಿನ ವಿಶ್ವಕಪ್ ಸೆಮಿಫೈನಲ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಅಜೇಯ ಶತಕ ಗಳಿಸಿದರು ಮತ್ತು ನಂತರ ವಿಶಾಖಪಟ್ಟಣದಲ್ಲಿ ಶ್ರೀಲಂಕಾ ವಿರುದ್ಧದ ಮೊದಲ T20I ನಲ್ಲಿ ಅಜೇಯ 69 ರನ್ ಗಳಿಸಿದರು. ಕುತೂಹಲಕಾರಿಯಾಗಿ, ಫ್ರಾಂಚೈಸಿ ಜೆಮಿಮಾ ಅವರನ್ನು ಅಕ್ಟೋಬರ್ನಲ್ಲಿ ಅಭಿಮಾನಿಗಳ…
ಬೆಂಗಳೂರು: ಕಜೆ ಆಯುರ್ವೇದ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಡಿಸೆಂಬರ್ 25 ರಿಂದ 28, 2025 ರ ವರೆಗೆ ದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ. ಈ ಸಂಬಂಧ ಪತ್ರಿಕಾಗೋಷ್ಠಿಯು ಬೆಂಗಳೂರಿನ ರಾಜಾಜಿನಗರದ ಪ್ರಶಾಂತಿ ಆಯುರ್ವೇದಿಕ್ ಸೆಂಟರ್’ನಲ್ಲಿ ಇಂದು(23-12-2025) ನಡೆಯಿತು. ಈ ಸಮ್ಮೇಳನದ ರೂವಾರಿಗಳಾದ ಡಾ.ಗಿರಿಧರ ಕಜೆ ಸುದ್ದಿ ಗೋಷ್ಠಿಯನ್ನು ನಡೆಸಿ, ಐತಿಹಾಸಿಕ ವಿಶ್ವ ಸಮ್ಮೇಳನದ ಕುರಿತಾಗಿ ಮಾಹಿತಿ ನೀಡಿದರು. ಹಿಮಾಲಯ ವೆಲ್’ನೆಸ್ ಕಂಪನಿಯ ಡಾ. ಅಶೋಕ್, ದೂತಪಾಪೇಶ್ವರ ಕಂಪೆನಿಯ ಅಜಿತ್ ಹಾಗೂ ಅಭಿಷೇಕ್ ಉಪಸ್ಥಿತರಿದ್ದರು. ಕಜೆ ಆಯುರ್ವೇದ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಕೇಂದ್ರ ಸರ್ಕಾರದ ಆಯುಷ್ ಸಚಿವಾಲಯದ ಸಹಯೋಗದೊಂದಿಗೆ ಡಿಸೆಂಬರ್ 25 ರಿಂದ 28, 2025 ರ ವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನವನ್ನು ಆಯೋಜಿಸಿದ್ದು, ಆಯುರ್ವೇದದ ವೈಶಿಷ್ಟ್ಯಗಳ ಅನಾವರಣ ಬೃಹತ್ ರೂಪದಲ್ಲಿ ನೆರವೇರಲಿದೆ. ನಾಡಿನ ಸಂತ ಮಹಂತರು – ಗಣ್ಯ ಮಾನ್ಯರು – ದೇಶ ವಿದೇಶಗಳ ಆಯುರ್ವೇದ ತಜ್ಞರ ಉಪಸ್ಥಿತಿಯಲ್ಲಿ ವಿಶಿಷ್ಟ ಆಯುರ್ವೇದ…
ಶಿವಮೊಗ್ಗ: ಶಾಲಾ-ಕಾಲೇಜಿಗೆ ಒಳ್ಳೆಯ ಹೆಸರು ಬರಲು ಅಲ್ಲಿ ಕಾರ್ಯನಿರ್ವಹಿಸುವ ಅಧ್ಯಾಪಕ ವೃಂದ ಪ್ರಮುಖ ಕಾರಣವಾಗುತ್ತದೆ. ಒಂದು ಕಾಲದಲ್ಲಿ ದೊಡ್ಡಿ ಎಂದು ಕರೆಯುತ್ತಿದ್ದ ಸರ್ಕಾರಿ ಪದವಿಪೂರ್ವ ಕಾಲೇಜು ರಾಜ್ಯದಲ್ಲಿಯೆ ನಂ.1 ಸ್ಥಾನ ಗಳಿಸಲು ಎಲ್ಲರ ಸಹಕಾರ ಇದೆ. 2004ರಲ್ಲಿ ನಾನು ಶಾಸಕನಾಗಿ ಆಯ್ಕೆಯಾಗಿ ಬಂದಾಗ ಕಾಲೇಜಿನ ಅಭಿವೃದ್ದಿಗೆ ಅರ್ಹನಿಶಿ ಕೆಲಸ ಮಾಡಿದ್ದೇನೆ. ನಮ್ಮ ಕಾಲ ಮತ್ತು ಸಂದರ್ಭದಲ್ಲಿ ಹೆಚ್ಚಿಗೆ ಓದಲು ಸಾಧ್ಯವಾಗಲಿಲ್ಲ ಆದರೆ ಯಾರೇ ಆಗಲಿ ಯಾವ ಸಂದರ್ಭದಲ್ಲಿ ಆಗಲಿ ವಿದ್ಯಾಭ್ಯಾಸಕ್ಕೆ ತೊಂದರೆ ಆಗುತ್ತಿದೆ ಎಂದರೆ ನನ್ನ ಬಳಿ ಬನ್ನಿ ನಾನು ಎಂದಿಗೂ ಸಹಕಾರ ನೀಡುತ್ತೇನೆ ಎಂಬುದಾಗಿ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಸಾಗರದ ನೆಹರೂ ಮೈದಾನದಲ್ಲಿ ಮಂಗಳವಾರ ಸರ್ಕಾರಿ ಪದವಿಪೂರ್ವ ಕಾಲೇಜಿನ ಸುವರ್ಣ ಮಹೋತ್ಸವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದಂತ ಅವರು, ನನ್ನ ಜೀವನದಲ್ಲಿಯೇ ಇದೊಂದು ವಿಶೇಷವಾದ ದಿನವಾಗಿದೆ. ನಾನು ಓದಿದ ಈ ಕಾಲೇಜಿಗೆ 50 ವರ್ಷಗಳು ಕಾಲೇಜು ಸುವರ್ಣ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿದೆ. ಈ ಸಂದರ್ಭದಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕನಾಗಿ…
ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಹೀಗಾಗಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಸಂಕಷ್ಟ ಎದುರಾದಂತೆ ಆಗಿದೆ. ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬಂಧನದ ಭೀತಿ ಎದುರಾಗಿದೆ. ನಿರೀಕ್ಷಣಾ ಜಾಮೀನು ಕೋರಿ ಶಾಸಕ ಭೈರತಿ ಬಸವರಾಜು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೇ, ಹೈಕೋರ್ಟ್ನ ಜಸ್ಟೀಸ್ ಸುನೀಲ್ ಯಾದವ್ ಅವರ ಪೀಠವು ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಈ ಕೊಲೆ ಕೇಸ್ ನಲ್ಲಿ ಕೋಕಾ ಕಾಯ್ದೆ ಅನ್ವಯವಾಗುವುದಿಲ್ಲವೆಂದು ಆದೇಶ ನೀಡಿದೆ. ವಿಚಾರಣಾ ನ್ಯಾಯಾಲಯದಲ್ಲೇ ಸೂಕ್ತ ಅರ್ಜಿ ಸಲ್ಲಿಸಲು ಭೈರತಿ ಬಸವರಾಜ್ ಗೆ ಹೈಕೋರ್ಟ್ ಸೂಚನೆ ನೀಡಿದೆ. ಆದರೇ, ಅಲ್ಲಿಯವರೆಗೂ ಭೈರತಿ ಬಸವರಾಜುಗೆ ಬಂಧನದಿಂದ ರಕ್ಷಣೆ ನೀಡಲು ನಿರಾಕರಿಸಿದೆ. ಹೈಕೋರ್ಟ್ ನ ಈ ಆದೇಶದಿಂದ ಭೈರತಿ ಬಸವರಾಜುಗೆ ಬಂಧನದ ಭೀತಿ ಎದುರಾಗಿದೆ.
ಲವಂಗದಿಂದ ಈ ಪರಿಹಾರವನ್ನು ಮಾಡಿಕೊಳ್ಳಿ ಮೂರು ಶುಕ್ರ ವಾರ ಗಳ ಕಾಲ ಈ ಪರಿಹಾರವನ್ನು ನೀವು ಪಾಲಿಸಿಕೊಂಡು ಬಂದಿದೆ ಅದರೆ ನಿಮ್ಮ ಜೀವನದಲ್ಲಿ ಎದುರಾಗುತ್ತ ಇರುವಂತಹ ಹಣಕಾಸಿಗೆ ಸಂಬಂಧಪಟ್ಟ ವಿಚಾರಗಳು ಬೇಗ ಪರಿಹರವಾಗುತ್ತದೆ. ಪಂಡಿತ್ ವಿದ್ಯಾಧರ್ ನಕ್ಷತ್ರಿ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ 9686268564 ಅದು ಹೇಗೆ ಅಂತೀರಾ ಈ ಲವಂಗಕ್ಕೆ ಬಹಳ ವಿಶೇಷವಾದ ಶಕ್ತಿ ಇದೆ ಹಾಗೂ ದುಷ್ಟಶಕ್ತಿಯನ್ನು ದೂರ ಮಾಡುವಂತಹ…
ನವದೆಹಲಿ : ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ಆರಂಭಿಸುವಂತೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ್ದಾರೆ. ಈ ಸಂಬಂಧ ರೈಲ್ವೆ ಸಚಿವರಿಗೆ ಪತ್ರ ಬರೆದಿರುವ ಕುಮಾರಸ್ವಾಮಿ ಅವರು; ಬೆಂಗಳೂರು ನಗರದಿಂದ ಹಾಸನ- ಮಂಗಳೂರು ಜಂಕ್ಷನ್- ಉಡುಪಿ ಮತ್ತು ಕಾರವಾರ ಮಾರ್ಗವಾಗಿ ಗೋವಾದ ಮಡಗಾಂವ್ವರೆಗೆ ಅತಿವೇಗದ ವಂದೇ ಭಾರತ್ ರೈಲು ಸೇವೆ ಆರಂಭಿಸುವಂತೆ ಕೋರಿದ್ದಾರೆ. ಈ ಭಾಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ವಂದೇ ಭಾರತ್ ರೈಲು ಸಂಚಾರಕ್ಕೆ ಅವಕಾಶ ನೀಡುವುದರಿಂದ ಕರಾವಳಿ ಭಾಗದ ಜನರಿಗೆ ಹೆಚ್ಚು ಅನುಕೂಲ ಆಗಲಿದೆ. ಅಭಿವೃದ್ಧಿಗೂ ಹೆಚ್ಚು ಪೂರಕವಾಗಿರುತ್ತದೆ ಎಂದು ಸಚಿವರು ರೈಲ್ವೆ ಸಚಿವರ ಗಮನ ಸೆಳೆದಿದ್ದಾರೆ. ಪಶ್ಚಿಮಘಟ್ಟ ಪ್ರದೇಶ ಸೇರಿದಂತೆ ಈ ಮಾರ್ಗದಲ್ಲಿ ವಿದ್ಯುದೀಕರಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿರುವ…
ಶಿವಮೊಗ್ಗ: ಸಾಗರದ ಪ್ರಸಿದ್ಧ ಮಾರಿಕಾಂಬಾ ಜಾತ್ರೆಯನ್ನು ಎಲ್ಲರೂ ಸೇರಿ ಅರ್ಥಪೂರ್ಣವಾಗಿ ಆಚರಿಸೋಣ. ಜಾತ್ರೆ ಅತ್ಯಂತ ವಿಜೃಂಭಣೆಯಿoದ ನಡೆಸಲು ಅಗತ್ಯ ಸಿದ್ದತೆ ನಡೆಸಲಾಗುತ್ತಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಶಿವಮೊಗ್ಗದ ಸಾಗರದ ಮಾರಿಕಾಂಬಾ ದೇವಸ್ಥಾನದಲ್ಲಿ ಸೋಮವಾರ ಫೆಬ್ರವರಿ 3ರಿಂದ ನಡೆಯಲಿರುವ ಮಾರಿಕಾಂಬಾ ಜಾತ್ರೆ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ನಡೆಸಿದ ಅವರು, ಮಾರಿಕಾಂಬಾ ಜಾತ್ರೆ ಹಿನ್ನೆಲೆಯಲ್ಲಿ ಗೋಪುರಕ್ಕೆ ಬಣ್ಣ ಬಳಿಯುವುದು, ಮಂಟಪ, ಶಾಮಿಯಾನ, ಲೈಟಿಂಗ್ ಇನ್ನಿತರೆ ಟೆಂಡರ್ಗಳು ಕಾನೂನುಬದ್ದವಾಗಿ ಕರೆದು ಕೆಲಸ ಪ್ರಾರಂಭಿಸಲು ತಿಳಿಸಲಾಗಿದೆ ಎಂದು ಹೇಳಿದರು. ಮಾರಿಕಾಂಬಾ ಜಾತ್ರೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 2 ಕೋಟಿ ಅನುದಾನ ಮಂಜೂರು ಮಾಡಿದ್ದು ತುರ್ತು ಕಾಮಗಾರಿ ಕೈಗೊಳ್ಳಲಾಗುತ್ತಿದೆ. ನಗರದ ಬಿ.ಎಚ್.ರಸ್ತೆ ಡಾಂಬಾರೀಕರಣ ಕಾಮಗಾರಿ ತ್ವರಿತವಾಗಿ ನಡೆಯುತ್ತಿದೆ. ಇದರ ಜೊತೆಗೆ ಕೆಳದಿ ರಸ್ತೆ, ಹೊಸನಗರ ರಸ್ತೆ ಸಹ ಅಭಿವೃದ್ದಿಪಡಿಸಿ ಡಿವೈಡರ್ಗಳನ್ನು ಅಳವಡಿಸಿ ವಿದ್ಯುದ್ದೀಪ ಅಳವಡಿಸಲಾಗುತ್ತಿದೆ. ಒಟ್ಟು ಸಾಗರ ನಗರ ಸಂಪರ್ಕಿಸು ರಸ್ತೆಗಳಲ್ಲಿ 400 ವಿದ್ಯುದ್ದೀಪಗಳನ್ನು ಅಳವಡಿಸಲಾಗುತ್ತಿದೆ ಎಂದರು. ಜಾತ್ರೆ…
ನವದೆಹಲಿ: ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಉಚ್ಚಾಟಿತ ಬಿಜೆಪಿ ನಾಯಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೈಲು ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ಅಮಾನತುಗೊಳಿಸಿದೆ. ನ್ಯಾಯಮೂರ್ತಿಗಳಾದ ಸುಬ್ರಮೋನಿಯಂ ಪ್ರಸಾದ್ ಮತ್ತು ಹರೀಶ್ ವೈದ್ಯನಾಥನ್ ಶಂಕರ್ ಅವರ ಪೀಠವು ಸೆಂಗಾರ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿತು ಮತ್ತು 15 ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಮತ್ತು ಅದೇ ಮೊತ್ತದ ಮೂರು ಶ್ಯೂರಿಟಿಗಳನ್ನು ಸಲ್ಲಿಸುವಂತೆ ಸೂಚಿಸಿತು. ಸಂತ್ರಸ್ತೆಯ ಮನೆಯ 5 ಕಿ.ಮೀ ವ್ಯಾಪ್ತಿಯಲ್ಲಿ ಬರಬಾರದು ಮತ್ತು ಆಕೆ ಅಥವಾ ಆಕೆಯ ತಾಯಿಗೆ ಬೆದರಿಕೆ ಹಾಕಬಾರದು ಎಂದು ಹೈಕೋರ್ಟ್ ಸೆಂಗಾರ್ಗೆ ಸೂಚಿಸಿತು. “ಯಾವುದೇ ಷರತ್ತುಗಳನ್ನು ಉಲ್ಲಂಘಿಸಿದರೆ ಜಾಮೀನು ರದ್ದತಿಗೆ ಕಾರಣವಾಗುತ್ತದೆ” ಎಂದು ನ್ಯಾಯಾಲಯ ಹೇಳಿದೆ. ಅತ್ಯಾಚಾರ ಪ್ರಕರಣದಲ್ಲಿ ತನ್ನ ಅಪರಾಧ ಸಾಬೀತು ಮತ್ತು ಶಿಕ್ಷೆಯನ್ನು ಪ್ರಶ್ನಿಸಿ ಸೆಂಗಾರ್ ಸಲ್ಲಿಸಿದ ಮೇಲ್ಮನವಿ ವಿಚಾರಣೆ ಮುಗಿಯುವವರೆಗೆ ಅವರ ಶಿಕ್ಷೆಯನ್ನು ಹೈಕೋರ್ಟ್ ಅಮಾನತುಗೊಳಿಸಿದೆ. ಅತ್ಯಾಚಾರ ಪ್ರಕರಣದಲ್ಲಿ ಡಿಸೆಂಬರ್ 2019 ರ ವಿಚಾರಣಾ ನ್ಯಾಯಾಲಯದ ತೀರ್ಪನ್ನು…
ಶಿವಮೊಗ್ಗ: ಇಂದು ಮಲೆನಾಡು ಪ್ರದೇಶದ ಇತಿಹಾಸ ಮತ್ತು ಅಭಿವೃದ್ಧಿಯ ಹೆಮ್ಮೆಯ ಸಂಕೇತವಾದ ಸಾಗರ ಜಂಬಗಾರು ರೈಲು ನಿಲ್ದಾಣದಲ್ಲಿ ಸ್ಟೇಷನ್ ಮಹೋತ್ಸವವನ್ನು ಆಚರಿಸಲಾಯಿತು. ರೈಲ್ವೆ ಇಲಾಖೆಯ ಅಧಿಕೃತ ದಾಖಲೆಗಳ ಪ್ರಕಾರ, ಈ ನಿಲ್ದಾಣವು 1938–39ರಲ್ಲಿ ಸ್ಥಾಪನೆಯಾಗಿ ಹಲವು ದಶಕಗಳನ್ನು ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸ್ಟೇಷನ್ ಮಹೋತ್ಸವವು ಭಾರತೀಯ ರೈಲ್ವೆಯ ಮಹತ್ವದ ಉಪಕ್ರಮವಾಗಿದ್ದು, ರೈಲು ನಿಲ್ದಾಣಗಳ ಇತಿಹಾಸ, ಪರಂಪರೆ, ಅಭಿವೃದ್ಧಿ ಹಾಗೂ ಸಾರ್ವಜನಿಕ ಸೇವೆಯ ಪಾತ್ರವನ್ನು ಜನರಿಗೆ ಪರಿಚಯಿಸುವುದು ಇದರ ಉದ್ದೇಶವಾಗಿದೆ. ವಿಶೇಷವಾಗಿ ಶಾಲಾ ಮಕ್ಕಳನ್ನು ಒಳಗೊಂಡಂತೆ ಯುವ ಪೀಳಿಗೆಗೆ ರಾಷ್ಟ್ರ ನಿರ್ಮಾಣದಲ್ಲಿ ರೈಲ್ವೆಯ ಮಹತ್ವವನ್ನು ಅರಿವುಗೊಳಿಸುವುದಕ್ಕೆ ಇದು ಸಹಕಾರಿಯಾಗಿದೆ. ಭಾರತೀಯ ರೈಲ್ವೆ ದಾಖಲೆಗಳಲ್ಲಿ ಸಾಗರವನ್ನು ಅಧಿಕೃತವಾಗಿ ಸಾಗರ ಜಂಬಗಾರು ಎಂದು ದಾಖಲಿಸಲಾಗಿದೆ. ಸಾಗರಕ್ಕೆ ಸೇವೆ ನೀಡಿದ ಮೊದಲ ರೈಲು ನಿಲ್ದಾಣವು ಬಸವನ ಹೊಳೆ ಅತ್ತ ಇರುವ ಜಂಬಗಾರು ಗ್ರಾಮದಲ್ಲಿ ಸ್ಥಾಪಿತವಾಗಿತ್ತು. ಮೀಟರ್ ಗೇಜ್ ಅವಧಿಯಲ್ಲಿ ಸಾಗರ ಜಂಬಗಾರು ನಿಲ್ದಾಣವನ್ನು ಎಸ್ಆರ್ ಎಫ್ ಕೋಡ್ನಿಂದ ಗುರುತಿಸಲಾಗುತ್ತಿದ್ದು, ತಾಲಗುಪ್ಪ ನಿಲ್ದಾಣಕ್ಕೆ ಟಿಎಲ್ ಜಿಪಿ…
ಬೆಂಗಳೂರು: ಕರ್ನಾಟಕ ಸರ್ಕಾರವು ಅನುಷ್ಠಾನಕ್ಕೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ಅನ್ನು ಯಾವುದೇ ಕಾರಣಕ್ಕೆ ಅಂಗೀಕರಿಸದಂತೆ ಬಿಜೆಪಿ ವತಿಯಿಂದ ನಾಡಿದ್ದು ಮಾನ್ಯ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ ಅವರು ತಿಳಿಸಿದ್ದಾರೆ. ನಗರದಲ್ಲಿ ಇಂದು ಕೆ.ಜಿ. ರಸ್ತೆ ಬಳಿ ಇರುವ ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ನಾಡಿದ್ದು ಮಾನ್ಯ ರಾಜ್ಯಪಾಲರಿಗೆ ಮನವಿ ಕೊಡಲಿದ್ದು, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ಅವರು ನೇತೃತ್ವ ವಹಿಸುವರು. ಎಲ್ಲ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರು ಭಾಗವಹಿಸುತ್ತಾರೆ ಎಂದು ತಿಳಿಸಿದರು. ಈ ವಿಧೇಯಕದ ವಿರುದ್ಧ ಇವತ್ತು ಇಲ್ಲಿ ಸಾಂಕೇತಿಕವಾಗಿ ಮೌನ ಪ್ರತಿಭಟನೆ ಮಾಡುತ್ತಿದ್ದೇವೆ. ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಇವತ್ತು ಹೋರಾಟ ನಡೆಸಲಾಗುತ್ತಿದೆ ಎಂದು ವಿವರಿಸಿದರು. ಮಸೂದೆ ವಾಪಸ್ ಪಡೆಯುವಂತೆ ಕಾನೂನು ರೀತಿಯ ಹೋರಾಟ…














