Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ರಾಜ್ಯದ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿರುವ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಲಿದೆ ಎಂದು ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಭವಿಷ್ಯ ನುಡಿದಿದ್ದಾರೆ. ಇಂದು ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದ ಸಂಘಟನೆ ಮತ್ತು ಸರ್ಕಾರದ ಸಾಧನೆಗಳ ಮೇಲೆ ನಮಗೆ ನಂಬಿಕೆಯಿದೆ ಎಂದರು. ಶಾಸಕರ ಪ್ರಮುಖ ಹೇಳಿಕೆಗಳು ಇಲ್ಲಿವೆ: ಶಿಸ್ತು ಕ್ರಮ ಸಹಜ ಪ್ರಕ್ರಿಯೆ ಉಪಚುನಾವಣೆಯ ಪ್ರಚಾರ ಕಾರ್ಯಗಳಲ್ಲಿ ಪಾಲ್ಗೊಳ್ಳದ ನಾಯಕರಿಗೆ ಪಕ್ಷ ನೋಟಿಸ್ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, “ಪಕ್ಷದ ಚಟುವಟಿಕೆಗಳಿಂದ ದೂರವಿರುವವರಿಗೆ ನೋಟಿಸ್ ಕೊಡುವುದು ಅಥವಾ ಕ್ರಮ ಕೈಗೊಳ್ಳುವುದು ಸಹಜ ಪ್ರಕ್ರಿಯೆ. ಪಕ್ಷದ ಶಿಸ್ತು ಕಾಪಾಡುವುದು ಮುಖ್ಯ,” ಎಂದು ತಿಳಿಸಿದರು. ಅಲ್ಪಸಂಖ್ಯಾತರಿಗೆ ಆದ್ಯತೆ ಕಾಂಗ್ರೆಸ್ ಪಕ್ಷವು ಅಲ್ಪಸಂಖ್ಯಾತ ಸಮುದಾಯವನ್ನು ಕೇವಲ ಮತಬ್ಯಾಂಕ್ ಆಗಿ ಬಳಸುತ್ತಿಲ್ಲ, ಬದಲಾಗಿ ಅಧಿಕಾರದಲ್ಲೂ ಪಾಲು ನೀಡಿದೆ ಎಂದು ಬೇಳೂರು ಸಮರ್ಥಿಸಿಕೊಂಡರು. ಯು.ಟಿ ಖಾದರ್ ಅವರನ್ನು ವಿಧಾನಸಭೆಯ ಸ್ಪೀಕರ್ ಮಾಡಲಾಗಿದೆ. ಜಮೀರ್ ಅಹ್ಮದ್ ಖಾನ್ ಮತ್ತು ರಹೀಂ ಖಾನ್…
ಮಹಾರಾಷ್ಟ್ರ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬದ ಹಿನ್ನೆಲೆಯಲ್ಲಿ ಸರ್ಕಾರಿ ಇಂಜಿನಿಯರ್ ಒಬ್ಬರನ್ನು ಕೆಸರು ನೀರಿನಲ್ಲಿ ನಡೆಯುವಂತೆ ಮಾಡಿ, ಅವಮಾನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಕ್ಯಾಬಿನೆಟ್ ಸಚಿವ ಮತ್ತು ಬಿಜೆಪಿ ನಾಯಕ ನಿತೇಶ್ ನಾರಾಯಣ್ ರಾಣೆ ಅವರಿಗೆ ಸಿಂಧುದುರ್ಗ ನ್ಯಾಯಾಲಯವು ಒಂದು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಪ್ರಕರಣದ ಹಿನ್ನೆಲೆ ಏನು? ಈ ಘಟನೆಯು ಜುಲೈ 4, 2019 ರಂದು ನಡೆದಿತ್ತು. ಮುಂಬೈ-ಗೋವಾ ರಾಷ್ಟ್ರೀಯ ಹೆದ್ದಾರಿ (NH-66) ವಿಸ್ತರಣೆ ಕಾಮಗಾರಿ ವಿಳಂಬ ಮತ್ತು ರಸ್ತೆಗಳ ದುಸ್ಥಿತಿಯಿಂದ ಸಾರ್ವಜನಿಕರು ಆಕ್ರೋಶಗೊಂಡಿದ್ದರು. ಈ ವೇಳೆ ಕಂಕವಲಿ ಭಾಗದ ರಾಷ್ಟ್ರೀಯ ಹೆದ್ದಾರಿ ಉಪವಿಭಾಗದ ಎಂಜಿನಿಯರ್ ಪ್ರಕಾಶ್ ಶೇಡೇಕರ್ ಅವರನ್ನು ಸ್ಥಳಕ್ಕೆ ಕರೆಸಿದ್ದ ನಿತೇಶ್ ರಾಣೆ ಮತ್ತು ಅವರ ಬೆಂಬಲಿಗರು, ಕಾಮಗಾರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಆ ಸಂದರ್ಭದಲ್ಲಿ ಇಂಜಿನಿಯರ್ ಮೇಲೆ ಕೆಸರು ನೀರು ಸುರಿದು, ಅವರನ್ನು ಬಲವಂತವಾಗಿ ಕೆಸರು ಗದ್ದೆಯಂತಾಗಿದ್ದ ರಸ್ತೆಯಲ್ಲಿ ನಡೆಸುವ ಮೂಲಕ ಸಾರ್ವಜನಿಕವಾಗಿ ಅವಮಾನಿಸಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ನ್ಯಾಯಾಲಯದ ತೀರ್ಪು ಮತ್ತು ವೀಕ್ಷಣೆ…
ಶಿವಮೊಗ್ಗ : ಬಿರುಗಾಳಿ ಮತ್ತು ಮಳೆಯಿಂದ ಹಾನಿಗೊಳಗಾದ ಅಡಿಕೆ, ತೆಂಗು ತೋಟ ಸೇರಿದಂತೆ ಬೆಳೆ ಹಾನಿಯಾದ ರೈತರಿಗೆ ಮತ್ತು ಮನೆ ಕಳೆದುಕೊಂಡವರಿಗೆ ತಕ್ಷಣವೇ ಸೂಕ್ತ ಪರಿಹಾರ ಬಿಡುಗಡೆ ಮಾಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪನವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನಡ ನೀಡಿದರು. ಮಂಗಳವಾರ ಬೆಳಿಗ್ಗೆ ಗಾಳಿ ಮಳೆ ಹಾನಿಗೊಳಗಾದ ಶಿವಮೊಗ್ಗ ಗ್ರಾಮಾಂತರ ಪ್ರದೇಶಗಳಿಗೆ ಭೇಟಿ ನೀಡಿ ಅವರು ಮಾತನಾಡಿದರು. ಅರಹತೊಳಲು ಗ್ರಾಮದ ತೋಟಕ್ಕೆ ಭೇಟಿ ನೀಡಿ ಬಿರುಗಾಳಿ ಮತ್ತು ಮಳೆಯಿಂದಾಗಿ ಧರೆಗುರುಳಿದ ಮರಗಳನ್ನು ವೀಕ್ಷಿಸಿ, ಸಂತ್ರಸ್ತ ರೈತರೊಂದಿ ಮಾತನಾಡಿದರು. ಬಿರುಗಾಳಿಗೆ ಧರೆಗುರುಳಿದ ಅಡಿಕೆ ಮರಗಳು, ಹಾನಿಗೊಳಗಾದ ಮನೆಗಳು ವೀಕ್ಷಿಸಿದರು. ಸಂತ್ರಸ್ತ ರೈತರು ಮತ್ತು ಸಾರ್ವಜನಿಕರೊಂದಿಗೆ ಮಾತನಾಡಿ ಅಹವಾಲು ಸ್ವೀಕರಿಸಿದರು. ನಂತರ ಅರಹತೊಳಲು ವಡ್ಡರಹಟ್ಟಿಗೆ ತೆರಳಿ ಬಿರುಗಾಳಿಗೆ ಹಾನಿಗೊಳಗಾದ ಮನೆಗಳು, ಕೊಟ್ಟಿಗೆಗಳನ್ನು ವೀಕ್ಷಿಸ, ಮನೆಯವರೊಂದಿಗೆ ಮಾತನಾಡಿ, ಅಧಿಕಾರಿಗಳ ಬಳಿ ನಷ್ಟದ ಕುರಿತು ಮಾಹಿತಿ ಪಡೆದುಕೊಂಡು, ತ್ವರಿತ ಪರಿಹಾರಕ್ಕೆ ಕ್ರಮ ವಹಿಸಬೇಕೆಂದು ಸೂಚನೆ ನೀಡುದರು. ಮಲ್ಲಿಗೇನಹಳ್ಳಿ…
ಬೆಂಗಳೂರು: 2026ನೇ ಸಾಲಿನ ರಾಜ್ಯದ ಎಸ್ಎಸ್ಎಲ್ಸಿ (SSLC) ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ಗಮನಾರ್ಹ ಸಾಧನೆ ದಾಖಲಾಗಿದೆ. ಈ ವರ್ಷ ಒಟ್ಟು 94.18% ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಈ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಸರ್ಕಾರದ ಮುಂದಿನ ಕ್ರಮಗಳನ್ನು ಹಂಚಿಕೊಂಡಿದ್ದಾರೆ. ಫಲಿತಾಂಶದ ಮುಖ್ಯಾಂಶಗಳು ಈ ಬಾರಿಯ ಪರೀಕ್ಷೆಯಲ್ಲಿ ಸುಮಾರು 45,415 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದು, ಅವರ ವಿಷಯವಾರು ವಿವರ ಈ ಕೆಳಗಿನಂತಿದೆ: 1 ವಿಷಯದಲ್ಲಿ: 20,691 ವಿದ್ಯಾರ್ಥಿಗಳು 2 ವಿಷಯಗಳಲ್ಲಿ: 10,509 ವಿದ್ಯಾರ್ಥಿಗಳು 3 ವಿಷಯಗಳಲ್ಲಿ: 6,103 ವಿದ್ಯಾರ್ಥಿಗಳು 4 ವಿಷಯಗಳಲ್ಲಿ: 3,799 ವಿದ್ಯಾರ್ಥಿಗಳು 5 ವಿಷಯಗಳಲ್ಲಿ: 2,552 ವಿದ್ಯಾರ್ಥಿಗಳು ಎಲ್ಲಾ ವಿಷಯಗಳಲ್ಲಿ: 1,716 ವಿದ್ಯಾರ್ಥಿಗಳು ‘ಪರೀಕ್ಷೆ-2’ಕ್ಕೆ ಸುವರ್ಣ ಅವಕಾಶ ಯಾವುದೇ ವಿದ್ಯಾರ್ಥಿ ಫಲಿತಾಂಶದಿಂದ ನಿರಾಶೆಗೊಂಡು ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸಬಾರದು ಎಂಬುದು ಸರ್ಕಾರದ ಆಶಯವಾಗಿದೆ. ಈ ನಿಟ್ಟಿನಲ್ಲಿ ಅನುತ್ತೀರ್ಣರಾದ…
ಬೆಂಗಳೂರು: ನೂರತ್ತು ವರ್ಷಗಳ ಇತಿಹಾಸವಿರುವ, ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತವು (ಕೆ.ಎಸ್.ಡಿ.ಎಲ್) 2025-26ನೇ ಹಣಕಾಸು ವರ್ಷದಲ್ಲಿ ಇದೇ ಮೊದಲ ಬಾರಿಗೆ 2,016 ಕೋಟಿ ರೂ. ವಹಿವಾಟು ನಡೆಸಿದ್ದು, 507 ಕೋಟಿ ರೂ. ಲಾಭ ಗಳಿಸಿದೆ. ಇದು ಸಂಸ್ಥೆಯ ಪಾಲಿಗೆ ಚಾರಿತ್ರಿಕ ಮೈಲುಗಲ್ಲಾಗಿದ್ದು, ಸಾರ್ವಜನಿಕ ಉದ್ದಿಮೆಗಳ ಸಾಧನೆಯಲ್ಲಿ ಕಿರೀಟಪ್ರಾಯವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮಂಗಳವಾರ ಹೇಳಿದ್ದಾರೆ. ಸಂಸ್ಥೆಯ ಈ ಅಪೂರ್ವ ಸಾಧನೆಯ ಸಂಭ್ರಮಾಚರಣೆಯ ನಿಮಿತ್ತವಾಗಿ ನಗರದ ಖಾಸಗಿ ಹೋಟೆಲಿನಲ್ಲಿ ಏರ್ಪಡಿಸಿದ್ದ ಮೈಸೂರು ಸ್ಯಾಂಡೆಲ್ ನ ಸಾಧನೆಯ ಶಿಖರ ಕಾರ್ಯಕ್ರಮದಲ್ಲಿ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾಡಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಸಂಸ್ಥೆಯು ಮೊದಲ ಒಂದು ಸಾವಿರ ಕೋಟಿ ರೂ.ಗಳ ವಹಿವಾಟನ್ನು ತಲುಪಲು 105 ವರ್ಷ ತೆಗೆದುಕೊಂಡಿತ್ತು. ಆದರೆ, ಅಲ್ಲಿಂದ 2 ಸಾವಿರ ಕೋಟಿ ರೂ. ಮಟ್ಟವನ್ನು ಕೇವಲ ನಾಲ್ಕು ವರ್ಷಗಳಲ್ಲಿ ತಲುಪಿದೆ. ಅದರಲ್ಲೂ 2022-23 ರಲ್ಲಿ 1,375…
ಭಾರತೀಯ ವಾಯುಪಡೆಯಲ್ಲಿ (IAF) ಗ್ರೂಪ್ ಸಿ ಸಿವಿಲಿಯನ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ: ನೇಮಕಾತಿ ವಿವರಗಳು ಭಾರತೀಯ ವಾಯುಪಡೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 47 ಗ್ರೂಪ್ ‘ಸಿ’ ಸಿವಿಲಿಯನ್ ಹುದ್ದೆಗಳನ್ನು ಭರ್ತಿ ಮಾಡಲು ಈ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಹುದ್ದೆಗಳ ವಿವರ: ಲೋಯರ್ ಡಿವಿಷನ್ ಕ್ಲರ್ಕ್ (LDC): 33 ಹುದ್ದೆಗಳು ಹಿಂದಿ ಟೈಪಿಸ್ಟ್ (Hindi Typist): 11 ಹುದ್ದೆಗಳು ಸಿವಿಲಿಯನ್ ಮೆಕ್ಯಾನಿಕಲ್ ಟ್ರಾನ್ಸ್ಪೋರ್ಟ್ ಡ್ರೈವರ್: 03 ಹುದ್ದೆಗಳು ಶೈಕ್ಷಣಿಕ ಅರ್ಹತೆ: LDC ಮತ್ತು ಹಿಂದಿ ಟೈಪಿಸ್ಟ್: ಮಾನ್ಯತೆ ಪಡೆದ ಮಂಡಳಿಯಿಂದ 12ನೇ ತರಗತಿ (ಪಿಯುಸಿ) ತೇರ್ಗಡೆಯಾಗಿರಬೇಕು. ಇದರೊಂದಿಗೆ ಕಂಪ್ಯೂಟರ್ನಲ್ಲಿ ಇಂಗ್ಲಿಷ್ ಅಥವಾ ಹಿಂದಿ ಟೈಪಿಂಗ್ ಜ್ಞಾನವಿರಬೇಕು. ಡ್ರೈವರ್: 10ನೇ ತರಗತಿ (ಎಸ್ಸೆಸ್ಸೆಲ್ಸಿ) ತೇರ್ಗಡೆಯಾಗಿರಬೇಕು. ಲಘು ಮತ್ತು ಭಾರೀ ವಾಹನ ಚಾಲನಾ ಪರವಾನಗಿ (Driving License) ಹೊಂದಿರಬೇಕು ಹಾಗೂ ಕನಿಷ್ಠ 2 ವರ್ಷಗಳ ಅನುಭವ ಅಗತ್ಯ. ವಯೋಮಿತಿ: ಅಭ್ಯರ್ಥಿಗಳ…
ಬೆಂಗಳೂರು: ನಾಡಿನ ಜನತೆಯ ಜೀವ ಮತ್ತು ಆಸ್ತಿಪಾಸ್ತಿಯ ರಕ್ಷಣೆಯಲ್ಲಿ ಸದಾ ಸನ್ನದ್ಧವಾಗಿರುವ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ನಿರುದ್ಯೋಗಿ ಯುವಜನತೆಗೆ ಸಿಹಿಸುದ್ದಿ ನೀಡಿದೆ. ಇಲಾಖೆಯಲ್ಲಿ ಖಾಲಿ ಇರುವ ವಿವಿಧ ವೃಂದದ ಒಟ್ಟು 1,828 ಹುದ್ದೆಗಳ ಭರ್ತಿಗೆ ಅಧಿಕೃತ ಚಾಲನೆ ನೀಡಲಾಗಿದ್ದು, ಸೇವೆ ಮತ್ತು ಸಾಹಸದ ಮನೋಭಾವವುಳ್ಳ ಯುವಕರಿಗೆ ಇದು ಅತ್ಯುತ್ತಮ ಅವಕಾಶವಾಗಿದೆ. ಯಾವ ಯಾವ ಹುದ್ದೆಗಳು ಲಭ್ಯ? ಈ ಬೃಹತ್ ನೇಮಕಾತಿ ಪ್ರಕ್ರಿಯೆಯಲ್ಲಿ ಮುಖ್ಯವಾಗಿ ಮೂರು ವಿಭಾಗದ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ: ಅಗ್ನಿಶಾಮಕ (Fireman) ಅಗ್ನಿಶಾಮಕ ಚಾಲಕ (Fireman Driver) ಚಾಲಕ ಮೆಕ್ಯಾನಿಕ್ (Driver Mechanic) ವಿದ್ಯಾರ್ಹತೆ ಮತ್ತು ಅರ್ಹತೆಗಳು: ಅಗ್ನಿಶಾಮಕ ಹುದ್ದೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಎಸ್ಎಸ್ಎಲ್ಸಿ (10ನೇ ತರಗತಿ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಚಾಲಕ ಹುದ್ದೆಗಳು: ಎಸ್ಎಸ್ಎಲ್ಸಿ ವಿದ್ಯಾರ್ಹತೆಯ ಜೊತೆಗೆ, ಅಭ್ಯರ್ಥಿಗಳು ಕಡ್ಡಾಯವಾಗಿ ಭಾರೀ ವಾಹನ ಚಾಲನಾ ಪರವಾನಗಿ (HTV License) ಹೊಂದಿರಬೇಕು ಹಾಗೂ ಕನಿಷ್ಠ ಎರಡು ವರ್ಷಗಳ ಚಾಲನಾ ಅನುಭವದ…
ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲೂಕಿನ ಮದರಾ (ಕೆ) ಗ್ರಾಮದಲ್ಲಿ ಕೌಟುಂಬಿಕ ಕಲಹವೊಂದು ಭೀಕರ ದುರಂತದಲ್ಲಿ ಅಂತ್ಯಗೊಂಡಿದೆ. ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿದ ಪತಿಯೊಬ್ಬ, ನಂತರ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ. ಘಟನೆಯ ವಿವರ: ಲಕ್ಷ್ಮೀಪುತ್ರ ಎಂಬಾತ ತನ್ನ 23 ವರ್ಷದ ಪತ್ನಿ ಅಂಜಲಿಯನ್ನು ಕ್ಷುಲ್ಲಕ ಕಾರಣಕ್ಕಾಗಿ ಮನೆಯಲ್ಲೇ ಕುಡುಗೋಲಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಹೆಂಡತಿಯ ಕೊಲೆಯ ನಂತರ ತೀವ್ರ ಆತಂಕಕ್ಕೊಳಗಾದ ಲಕ್ಷ್ಮೀಪುತ್ರ, ತನ್ನ ಪುಟ್ಟ ಮಗುವನ್ನು ಎತ್ತಿಕೊಂಡು ಗ್ರಾಮದ ಸಮೀಪದ ಬಾವಿಯತ್ತ ಓಡಿ ನೀರಿಗೆ ಜಿಗಿದಿದ್ದಾನೆ. ಮಗುವನ್ನು ರಕ್ಷಿಸಿದ ಗ್ರಾಮಸ್ಥರು: ಲಕ್ಷ್ಮೀಪುತ್ರ ಮಗುವಿನೊಂದಿಗೆ ಬಾವಿಗೆ ಹಾರುತ್ತಿರುವುದನ್ನು ಕಂಡ ಸ್ಥಳೀಯರು ಕೂಡಲೇ ಕಾರ್ಯಪ್ರವೃತ್ತರಾಗಿದ್ದಾರೆ. ಸಮಯಪ್ರಜ್ಞೆ ಮೆರೆದ ಗ್ರಾಮಸ್ಥರು ತಕ್ಷಣವೇ ಬಾವಿಗೆ ಜಿಗಿದು ಮಗುವನ್ನು ಸುರಕ್ಷಿತವಾಗಿ ದಡಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ನೀರಿನಲ್ಲಿ ಮುಳುಗಿದ ಲಕ್ಷ್ಮೀಪುತ್ರ ಪ್ರಾಣ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಪೊಲೀಸ್ ತನಿಖೆ: ವಿಷಯ ತಿಳಿದ ತಕ್ಷಣ ರೇವೂರು ಪೊಲೀಸರು ಹಾಗೂ ಸೋಕೋ (SOCO) ತಂಡ…
ರಾಮನಗರ: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪಟ್ಟಾಭಿಷೇಕದ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ. ಮೇ 15 ಅಂತಿಮ ದಿನಾಂಕ: ಈ ಹಿಂದೆ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುವ ಬಗ್ಗೆ ಎರಡ್ಮೂರು ಬಾರಿ ದಿನಾಂಕಗಳನ್ನು ನೀಡಿದ್ದ ಇಕ್ಬಾಲ್ ಹುಸೇನ್, ಇದೀಗ ಮೇ 15ನ್ನು ಅಂತಿಮ ಗಡುವು ಎಂದು ಘೋಷಿಸಿದ್ದಾರೆ. “ಮೇ 15ರ ಒಳಗಾಗಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುವುದು ನಿಶ್ಚಿತ. ಇದು ನನ್ನ ಕಡೆಯಿಂದ ಅಂತಿಮ ದಿನಾಂಕ,” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶಾಸಕರ ಬಯಕೆ ಮತ್ತು ಅಭಿವೃದ್ಧಿಯ ಕನಸು: ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಸಿಗಬೇಕು ಎನ್ನುವುದು ಕೇವಲ ನನ್ನ ಆಸೆ ಮಾತ್ರವಲ್ಲ, ರಾಜ್ಯದ ಬಹುತೇಕ ಶಾಸಕರ ಬಯಕೆಯಾಗಿದೆ. ಅವರ ಮಾರ್ಗದರ್ಶನ ಮತ್ತು ನೇತೃತ್ವದಲ್ಲಿ ರಾಜ್ಯದ ಅಭಿವೃದ್ಧಿ ಕಾರ್ಯಗಳು ವೇಗವಾಗಿ ನಡೆಯಬೇಕು ಎಂಬ…
ಶಿವಮೊಗ್ಗ: ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಮಹಿಳಾ ಮೀಸಲಾತಿ ಕಾಯ್ದೆಯನ್ನು ಕಾಂಗ್ರೆಸ್ ಪಕ್ಷವು ರಾಜಕೀಯ ಲಾಭಕ್ಕಾಗಿ ವಿರೋಧಿಸುತ್ತಿದೆ ಎಂದು ಆರೋಪಿಸಿ, ಸಾಗರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ ಹರತಾಳು ಹಾಲಪ್ಪ ಅವರ ನೇತೃತ್ವದಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಯಿತು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರಸಭೆ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯ ಮುಂದೆ ಬಿಜೆಪಿ ಕಾರ್ಯಕರ್ತರೊಂದಿಗೆ ಜಮಾಯಿಸಿದ ಹರತಾಳು ಹಾಲಪ್ಪ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ನ ಇಬ್ಬಂದಿ ನೀತಿ ಈ ಪ್ರತಿಭಟನೆಯಲ್ಲಿ ಮಾತನಾಡಿದ ಹರತಾಳು ಹಾಲಪ್ಪ ಅವರು, “ನರೇಂದ್ರ ಮೋದಿ ಅವರ ಸರ್ಕಾರ ಮಹಿಳೆಯರಿಗೆ ಸಂಸತ್ತು ಮತ್ತು ವಿಧಾನಸಭೆಗಳಲ್ಲಿ ಶೇ. 33ರಷ್ಟು ಮೀಸಲಾತಿ ನೀಡುವ ಐತಿಹಾಸಿಕ ತೀರ್ಮಾನ ಕೈಗೊಂಡಿದೆ. ಇದನ್ನು ಬೆಂಬಲಿಸುವ ಬದಲು ಕಾಂಗ್ರೆಸ್ ಈ ಕಾಯ್ದೆಯನ್ನು ಜಾರಿಗೆ ತರಲು ಅಡ್ಡಗಾಲು ಹಾಕುತ್ತಿದೆ. ಕಾಂಗ್ರೆಸ್ಸಿಗರಿಗೆ ಮಹಿಳೆಯರ ಸಬಲೀಕರಣ ಬೇಕಿಲ್ಲ, ಅವರಿಗೆ ಕೇವಲ ರಾಜಕೀಯ ಅಧಿಕಾರ ಮುಖ್ಯ,” ಎಂದು ಕಿಡಿಕಾರಿದರು. ಮಹಿಳೆಯರ ಆಕ್ರೋಶಕ್ಕೆ…














