Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕಾಸರಗೋಡು ಕೇವಲ ಗಡಿ ಪ್ರದೇಶವಲ್ಲ; ಅದು ಕನ್ನಡ ಹೃದಯಭೂಮಿ. ಇಲ್ಲಿನ ಪ್ರತಿಯೊಬ್ಬ ಕನ್ನಡಿಗನ ಕನಸು ಸಾಕಾರವಾಗುವ ದಿನ ಬರಬೇಕು ಎಂದು ಕಾಸರಗೋಡಿನ ಕನ್ನಡ ಭವನ ಸಂಸ್ಥಾಪಕ ಅಧ್ಯಕ್ಷರಾದ ಡಾ. ವಾಮನರಾವ್ ರಾವ್ ಬೇಕಲ್ ಆಶಯ ವ್ಯಕ್ತಪಡಿಸಿದರು. ಕನ್ನಡ ಭವನದ ರಜತ ಸಂಭ್ರಮದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ವಿತರಿಸಿ ಮಾತನಾಡಿದರು. ಕನ್ನಡಿಗರ ಏಕತೆ ಮತ್ತು ಸಂಕಲ್ಪವೇ ಕಾಸರಗೋಡಿನ ಭವಿಷ್ಯವನ್ನು ರೂಪಿಸಲಿದೆ. ಜೊತೆಗೆ ಗಡಿ ಪ್ರದೇಶದ ಅಭಿವೃದ್ಧಿಗೆ ಕರ್ನಾಟಕ ಸರ್ಕಾರ ಮತ್ತು ಕೇರಳ ಸರ್ಕಾರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕಿದೆ ಎಂದು ಅಭಿಪ್ರಾಯ ಪಟ್ಟರು. ಇದೇ ಸಂದರ್ಭದಲ್ಲಿ ಬೆಂಗಳೂರಿನ ಸಾಹಿತಿ ಗೊರೂರು ಪಂಕಜ ಅವರ ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿಯಾದ ಕನ್ನಡ ಪಯಸ್ವಿನಿ ಅಚೀವ್ ಮೆಂಟ್ ಅವಾರ್ಡ್- 2026 ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಸಾಹಿತಿ ರಾಧಾಕೃಷ್ಣ ಕೆ. ಉಳಿಯತಡ್ಕ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಎಡನೀರು ಮಠದ ರಮೇಶ್ ಗೋವಿನಾಳ ಮಹಾಸ್ವಾಮಿಜಿ, ಡಾ. ವೆಂಕಟರಮಣ ಹೊಳ್ಳ, ಕನ್ನಡ ಭವನ ಸ್ಥಾಪಕ…
ನವದೆಹಲಿ: ಭಾರತೀಯ ನ್ಯಾಯಾಂಗ ವ್ಯವಸ್ಥೆಯು ಎದುರಿಸುತ್ತಿರುವ ಸವಾಲುಗಳ ಬಗ್ಗೆ ವಿದ್ಯಾರ್ಥಿಗಳಿಗೆ ನೈಜ ಮಾಹಿತಿ ನೀಡುವ ಉದ್ದೇಶದಿಂದ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯು (NCERT) 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಿದೆ. ಹೊಸ ಪಠ್ಯದಲ್ಲಿ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ಮತ್ತು **’ಪ್ರಕರಣಗಳ ಭಾರಿ ಬಾಕಿ’**ಯನ್ನು ದೇಶದ ನ್ಯಾಯಾಂಗ ವ್ಯವಸ್ಥೆಯ ಮುಂದಿರುವ ಪ್ರಮುಖ ಸವಾಲುಗಳೆಂದು ಉಲ್ಲೇಖಿಸಲಾಗಿದೆ. ನೈಜ ಸ್ಥಿತಿಯ ಪರಿಚಯ: ಈ ಮೊದಲು ಪಠ್ಯಪುಸ್ತಕಗಳು ಕೇವಲ ನ್ಯಾಯಾಂಗದ ರಚನೆ ಮತ್ತು ಕಾರ್ಯವೈಖರಿಗೆ ಮಾತ್ರ ಸೀಮಿತವಾಗಿದ್ದವು. ಆದರೆ 2026ರ ಪರಿಷ್ಕೃತ ಪಠ್ಯದಲ್ಲಿ, ‘ನಮ್ಮ ಸಮಾಜದಲ್ಲಿ ನ್ಯಾಯಾಂಗದ ಪಾತ್ರ’ ಎಂಬ ಅಧ್ಯಾಯದಲ್ಲಿ ವ್ಯವಸ್ಥೆಯೊಳಗಿನ ದೋಷಗಳನ್ನು ಮುಕ್ತವಾಗಿ ಚರ್ಚಿಸಲಾಗಿದೆ. ಭ್ರಷ್ಟಾಚಾರದ ಉಲ್ಲೇಖ: ನ್ಯಾಯಾಂಗದ ವಿವಿಧ ಹಂತಗಳಲ್ಲಿ ಜನರು ಭ್ರಷ್ಟಾಚಾರವನ್ನು ಎದುರಿಸುತ್ತಿದ್ದಾರೆ ಎಂದು ಪಠ್ಯದಲ್ಲಿ ತಿಳಿಸಲಾಗಿದೆ. ಇದು ವಿಶೇಷವಾಗಿ ಬಡವರು ಮತ್ತು ಹಿಂದುಳಿದ ವರ್ಗದವರಿಗೆ ನ್ಯಾಯ ಸಿಗದಂತೆ ಮಾಡುತ್ತದೆ ಎಂದು ಎಚ್ಚರಿಸಲಾಗಿದೆ. ಪ್ರಕರಣಗಳ ಬಾಕಿ (Backlog): ದೇಶದ ವಿವಿಧ ನ್ಯಾಯಾಲಯಗಳಲ್ಲಿ ಕೋಟ್ಯಂತರ ಪ್ರಕರಣಗಳು ಬಾಕಿ…
ನವದೆಹಲಿ: 2026 ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಮುಂದಿನ ಬೇಸಿಗೆಯಲ್ಲಿ ಇಂಗ್ಲೆಂಡ್ ಮತ್ತು ವೇಲ್ಸ್ನಲ್ಲಿ ಜೂನ್ 12 ರಿಂದ ಜುಲೈ 5 ರವರೆಗೆ ನಡೆಯಲಿದೆ. 24 ದಿನಗಳ ಅವಧಿಯಲ್ಲಿ, ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನ (ಮ್ಯಾಂಚೆಸ್ಟರ್), ಹೆಡಿಂಗ್ಲೆ (ಲೀಡ್ಸ್), ಹ್ಯಾಂಪ್ಶೈರ್ ಬೌಲ್ (ಸೌತಾಂಪ್ಟನ್) ಮತ್ತು ಬ್ರಿಸ್ಟಲ್ ಕೌಂಟಿ ಮೈದಾನ ಸೇರಿದಂತೆ ಏಳು ಉನ್ನತ-ಶ್ರೇಣಿಯ ಸ್ಥಳಗಳಲ್ಲಿ ಒಟ್ಟು 33 ಪಂದ್ಯಗಳು ನಡೆಯಲಿವೆ. ಹೊಸದಾಗಿ ವಿಸ್ತರಿಸಲಾದ ಸ್ಪರ್ಧೆಯಲ್ಲಿ ಪ್ರತಿಷ್ಠಿತ ಟ್ರೋಫಿಗಾಗಿ 12 ತಂಡಗಳು ಸ್ಪರ್ಧೆ ಏಕದಿನ ಚಾಂಪಿಯನ್ಸ್ ಭಾರತವನ್ನು ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಜೊತೆಗೆ ಗುಂಪು 1 ರಲ್ಲಿ ಇರಿಸಲಾಗಿದೆ. ಮಹಿಳಾ ಇನ್ ಬ್ಲೂ ತಂಡವು ಜೂನ್ 14 ರಂದು ತಮ್ಮ ಅಭಿಯಾನದ ಆರಂಭಿಕ ಪಂದ್ಯದಲ್ಲಿ IND vs PAK ಮುಖಾಮುಖಿಯಲ್ಲಿ ತಮ್ಮ ಎದುರಾಳಿಗಳನ್ನು ಎದುರಿಸಲಿದೆ. ಹರ್ಮನ್ಪ್ರೀತ್ ಕೌರ್ & ತಂಡ ಜೂನ್ 25 ರಂದು ಮ್ಯಾಂಚೆಸ್ಟರ್ನಲ್ಲಿ ಬಾಂಗ್ಲಾದೇಶವನ್ನು ಎದುರಿಸಲಿದೆ. ಐಸಿಸಿ ಮಹಿಳಾ ಟಿ20 ವಿಶ್ವಕಪ್ 2026 ಗುಂಪುಗಳು…
ನವದೆಹಲಿ: ದಕ್ಷಿಣದ ರಾಜ್ಯವಾದ ಕೇರಳದ ಹೆಸರನ್ನು ಅಧಿಕೃತವಾಗಿ ‘ಕೇರಳಂ’ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಮಂಗಳವಾರ (ಫೆಬ್ರವರಿ 24, 2026) ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಮಹತ್ವದ ಅನುಮೋದನೆ ನೀಡಿದೆ. ಈ ಮೂಲಕ ರಾಜ್ಯದ ಸಾಂಸ್ಕೃತಿಕ ಮತ್ತು ಭಾಷಾ ಅಸ್ಮಿತೆಯನ್ನು ಎತ್ತಿ ಹಿಡಿಯುವ ದಶಕಗಳ ಕಾಲದ ಬೇಡಿಕೆಗೆ ಮನ್ನಣೆ ಸಿಕ್ಕಂತಾಗಿದೆ. ಸಚಿವ ಸಂಪುಟದ ನಿರ್ಧಾರ: ಹೊಸದಿಲ್ಲಿಯ ‘ಸೇವಾ ತೀರ್ಥ’ (ಹೊಸ ಪ್ರಧಾನ ಮಂತ್ರಿ ಕಚೇರಿ) ಕಟ್ಟಡದಲ್ಲಿ ನಡೆದ ಮೊದಲ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಈ ವಿಷಯವನ್ನು ಅಧಿಕೃತವಾಗಿ ಪ್ರಕಟಿಸಿದರು. ಸಂವಿಧಾನದ ತಿದ್ದುಪಡಿ ಪ್ರಕ್ರಿಯೆ: ಸಂವಿಧಾನದ ವಿಧಿ 3ರ (Article 3) ಅನ್ವಯ ರಾಜ್ಯದ ಹೆಸರು ಬದಲಾಯಿಸಲು ಕ್ರಮ ಕೈಗೊಳ್ಳಲಾಗುವುದು. ಇದರ ಭಾಗವಾಗಿ ‘ಕೇರಳ (ಹೆಸರು ಬದಲಾವಣೆ) ಮಸೂದೆ-2026’ ಅನ್ನು ರಾಷ್ಟ್ರಪತಿಗಳು ರಾಜ್ಯ ವಿಧಾನಸಭೆಯ ಅಭಿಪ್ರಾಯಕ್ಕಾಗಿ ಕಳುಹಿಸಲಿದ್ದಾರೆ. ಆ ನಂತರ ಸಂಸತ್ತಿನಲ್ಲಿ ಈ ಮಸೂದೆಯನ್ನು…
ನವದೆಹಲಿ: 2026 ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಮುಂದಿನ ಬೇಸಿಗೆಯಲ್ಲಿ ಇಂಗ್ಲೆಂಡ್ ಮತ್ತು ವೇಲ್ಸ್ನಲ್ಲಿ ಜೂನ್ 12 ರಿಂದ ಜುಲೈ 5 ರವರೆಗೆ ನಡೆಯಲಿದೆ. 24 ದಿನಗಳ ಅವಧಿಯಲ್ಲಿ, ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನ (ಮ್ಯಾಂಚೆಸ್ಟರ್), ಹೆಡಿಂಗ್ಲೆ (ಲೀಡ್ಸ್), ಹ್ಯಾಂಪ್ಶೈರ್ ಬೌಲ್ (ಸೌತಾಂಪ್ಟನ್) ಮತ್ತು ಬ್ರಿಸ್ಟಲ್ ಕೌಂಟಿ ಮೈದಾನ ಸೇರಿದಂತೆ ಏಳು ಉನ್ನತ-ಶ್ರೇಣಿಯ ಸ್ಥಳಗಳಲ್ಲಿ ಒಟ್ಟು 33 ಪಂದ್ಯಗಳು ನಡೆಯಲಿವೆ. ಹೊಸದಾಗಿ ವಿಸ್ತರಿಸಲಾದ ಸ್ಪರ್ಧೆಯಲ್ಲಿ ಪ್ರತಿಷ್ಠಿತ ಟ್ರೋಫಿಗಾಗಿ 12 ತಂಡಗಳು ಸ್ಪರ್ಧೆ ಏಕದಿನ ಚಾಂಪಿಯನ್ಸ್ ಭಾರತವನ್ನು ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಜೊತೆಗೆ ಗುಂಪು 1 ರಲ್ಲಿ ಇರಿಸಲಾಗಿದೆ. ಮಹಿಳಾ ಇನ್ ಬ್ಲೂ ತಂಡವು ಜೂನ್ 14 ರಂದು ತಮ್ಮ ಅಭಿಯಾನದ ಆರಂಭಿಕ ಪಂದ್ಯದಲ್ಲಿ IND vs PAK ಮುಖಾಮುಖಿಯಲ್ಲಿ ತಮ್ಮ ಎದುರಾಳಿಗಳನ್ನು ಎದುರಿಸಲಿದೆ. ಹರ್ಮನ್ಪ್ರೀತ್ ಕೌರ್ & ತಂಡ ಜೂನ್ 25 ರಂದು ಮ್ಯಾಂಚೆಸ್ಟರ್ನಲ್ಲಿ ಬಾಂಗ್ಲಾದೇಶವನ್ನು ಎದುರಿಸಲಿದೆ. ಐಸಿಸಿ ಮಹಿಳಾ ಟಿ20 ವಿಶ್ವಕಪ್ 2026 ಗುಂಪುಗಳು…
ಬೆಂಗಳೂರು: ರಾಜ್ಯದಲ್ಲಿ ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಕ್ರೀಡಾಕೂಟಗಳ ವೇಳೆ ಜನಸಂದಣಿಯನ್ನು ನಿಯಂತ್ರಿಸಲು ಉದ್ದೇಶಿತ ‘ಕರ್ನಾಟಕ ಜನಸಂದಣಿ ನಿಯಂತ್ರಣ ಮಸೂದೆ-2025’ ಅಧಿಕೃತವಾಗಿ ಕಾಯಿದೆಯಾಗಿ ಜಾರಿಯಾಗುವವರೆಗೆ, ಸರ್ಕಾರ ರೂಪಿಸಿರುವ ಪ್ರಮಾಣಿತ ಕಾರ್ಯವಿಧಾನವನ್ನು (SOP) ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಮಹತ್ವದ ನಿರ್ದೇಶನ ನೀಡಿದೆ. 2025ರ ಜೂನ್ನಲ್ಲಿ ಆರ್ಸಿಬಿ ತಂಡದ ವಿಜಯೋತ್ಸವದ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (PIL) ವಿಚಾರಣೆ ವೇಳೆ ಈ ಆದೇಶ ಹೊರಬಿದ್ದಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರನ್ನೊಳಗೊಂಡ ವಿಭಾಗೀಯ ಪೀಠವು, ಹೊಸ ಮಸೂದೆ ಈಗಷ್ಟೇ ಸದನ ಸಮಿತಿಯ ಮುಂದಿರುವುದರಿಂದ, ಅಲ್ಲಿಯವರೆಗೆ ಜನವರಿ 13ರಂದು ಸರ್ಕಾರ ಹೊರಡಿಸಿರುವ ಪರಿಷ್ಕೃತ ಎಸ್ಒಪಿ ಅನ್ವಯ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದೆ. ಅಮಿಕಸ್ ಕ್ಯೂರಿ ಸಲಹೆ: ನ್ಯಾಯಾಲಯಕ್ಕೆ ನೆರವಾಗಲು ನೇಮಕಗೊಂಡಿದ್ದ ಹಿರಿಯ ವಕೀಲೆ ಎಸ್. ಸುಶೀಲಾ ಅವರು,…
ಶಿವಮೊಗ್ಗ: ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಗಳು ಫೆಬ್ರವರಿ 28ರಿಂದ ಮಾರ್ಚ್17ರವರೆಗೆ ಜಿಲ್ಲೆಯ 41ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಗಮವಾಗಿ ನಡೆಸಲು ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಹೇಳಿದರು. ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಮಾಧ್ಯಮಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು. ಶಿವಮೊಗ್ಗದಲ್ಲಿ 17, ಭದ್ರಾವತಿಯಲ್ಲಿ 06, ತೀರ್ಥಹಳ್ಳಿ ಮತ್ತು ಹೊಸನಗರದಲ್ಲಿ ತಲಾ 03, ಸಾಗರ ಮತ್ತು ಶಿಕಾರಿಪುರದಲ್ಲಿ ತಲಾ 05 ಮತ್ತು ಸೊರಬದಲ್ಲಿ 02 ಪರೀಕ್ಷಾ ಕೇಂದ್ರಗಳು ಸೇರಿ ಜಿಲ್ಲೆಯಲ್ಲಿ ಒಟ್ಟು 41ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. 19009ವಿದ್ಯಾರ್ಥಿಗಳು ಸದರಿ ಪರೀಕ್ಷೆಗೆ ಹಾಜರಾಗಲಿದ್ದಾರೆ. 7188ಬಾಲಕರು ಹಾಗೂ 10567ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 17,755ರೆಗ್ಯೂಲರ್ವಿದ್ಯಾರ್ಥಿಗಳು, 871 ಪುನರಾವರ್ತಿತ ಅಭ್ಯರ್ಥಿಗಳು, 380 ಖಾಸಗಿ ಅಭ್ಯರ್ಥಿಗಳು ಹಾಗೂ ಫಲಿತಾಂಶ ಸುಧಾರಣೆಗಾಗಿ 03ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ ಎಂದರು. ಪತ್ರಿಕೆಗಳನ್ನು ಸಕಾಲದಲ್ಲಿ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ಮೂರು ಜನರ ಅಧಿಕಾರಿಗಳ 12 ತಂಡವನ್ನು ರಚಿಸಲಾಗಿದ್ದು, ಅಗತ್ಯ ಪೊಲೀಸ್ಭದ್ರತೆ ಒದಗಿಸಲಾಗಿದೆ.…
ಬೆಂಗಳೂರು: ನಗರದ ಸಾಮರ್ ಇಂಟರ್ ನ್ಯಾಷನರ್ ಇಸ್ಲಾಮಿಕ್ ಶಾಲೆಯಲ್ಲಿ ರಾಷ್ಟ್ರ ವಿರೋಧಿ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ. ರಾಷ್ಟ್ರದ ಏಕತೆಗೆ ಭಂಗ ಬರುವಂತ ಚಟುವಟಿಕೆಗಳು ನಡೆಯುತ್ತಿವೆ ಎಂಬುದಾಗಿ ವಿದ್ಯಾರ್ಥಿಯೊಬ್ಬ ದೂರು ನೀಡಿದ್ದನು. ಈ ದೂರು ಆಧರಿಸಿ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಪ್ರೌಢ ಶಿಕ್ಷಣ ಇಲಾಖೆಯ ನಿರ್ದೇಶಕರು ಸೂಕ್ತ ಕ್ರಮಕ್ಕೆ ಸೂಚಿಸಿದ್ದಾರೆ. ಈ ಸಂಬಂಧ ಆದೇಶ ಹೊರಡಿಸಿರುವಂತ ಶಾಲಾ ಶಿಕ್ಷಣ ಇಲಾಖೆಯ ಪ್ರೌಢ ಶಿಕ್ಷಣ ವಿಭಾಗದ ನಿರ್ದೇಶಕರು, ಬೆಂಗಳೂರಿನ ಅಬ್ದುಲ್ ರಹೀಮ್ ಅವರ ಪುತ್ರ ಅಬ್ದುಲ್ ರಜಾಕ್ ಸಾಮರ್ ಇಂಟರ್ ನ್ಯಾಷನರ್ ಇಸ್ಲಾಮಿಕ್ ಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾನೆ. ಅವರು ವ್ಯಾಸಂಗ ಮಾಡುತ್ತಿರುವಂತ ಸಾಮರ್ ಇಂಟರ್ ನ್ಯಾಷನರ್ ಇಸ್ಲಾಮಿಕ್ ಶಾಲೆಯಲ್ಲಿ ಕಾನೂನಿಗೆ ವಿರುದ್ಧವಾಗಿ ನಡೆಯುತ್ತಿರುವಂತ ಅವ್ಯವಹಾರಗಳ ಬಗ್ಗೆ ಸೂಕ್ತ ಕ್ರಮಕ್ಕೆ ಪತ್ರದಲ್ಲಿ ಕೋರಿದ್ದಾರೆ ಎಂದಿದ್ದಾರೆ. ದಿನಾಂಕ 24-11-2019ರಲ್ಲಿ ಯೂಟ್ಯೂಬ್ ಚಾನಲ್ ನಲ್ಲಿ ಮುಸ್ಲೀಂ ಜನಾಂಗದವರ ಚರಿತ್ರೆಯನ್ನು ವಿವರಿಸುವ ಸಂದರ್ಭದಲ್ಲಿ ರಾಷ್ಟ್ರವನ್ನು ಮುಸಲ್ಮಾನ್ ಆಡಳಿತಕ್ಕೆ ಒಳಪಡಿಸಬೇಕಾದ ಅತ್ಯಗತ್ಯಗಳ ಬಗ್ಗೆ ಪ್ರಸ್ತಾಪಿಸಲಾಗಿದೆ. ಅಲ್ಲದೇ ಚರ್ಚೆಗೆ ಒಳಪಡಿಸುವಂತೆಯೂ…
ಬೆಂಗಳೂರು: ಬಡವರ ಹೊಟ್ಟೆಯ ಮೇಲೆ ಕಾಂಗ್ರೆಸ್ ಸರ್ಕಾರ ಹೊಡೆದಿದೆ. ಸ್ವಾರ್ಥಕ್ಕಾಗಿ ಕೂಲಿ ಕಾರ್ಮಿಕರ ಭವಿಷ್ಯವನ್ನು ಬಲಿ ಕೊಡುತ್ತಿದೆ ಎಂಬುದಾಗಿ ಜೆಡಿಎಸ್ ತೀವ್ರ ವಾಗ್ಧಾಳಿ ನಡೆಸಿದೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಜಾತ್ಯಾತೀತ ಜನತಾ ದಳ ಪಕ್ಷವು, ಗ್ರಾಮೀಣ ಜನರ ಉದ್ಯೋಗಕ್ಕೆ ಗ್ರಹಣ ಹಿಡಿಸಿದ ಕಾಂಗ್ರೆಸ್ ಸರ್ಕಾರ ಕೇಂದ್ರ ಸರ್ಕಾರದ ವಿಬಿ ಜಿ ರಾಮ್ ಜಿ ಯೋಜನೆಗೆ ಅಡ್ಡಿ ಪಡಿಸುತ್ತಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರ ಗ್ರಾಮೀಣ ಭಾಗದ ಜನರ ಉದ್ಯೋಗವನ್ನು ಕಸಿಯುತ್ತಿದೆ ಎಂಬುದಾಗಿ ಗುಡುಗಿದೆ. ಮನರೇಗಾ ಯೋಜನೆಯಲ್ಲಿ ನಕಲಿ ಜಾಬ್ ಕಾರ್ಡ್ ಸೃಷ್ಟಿಸಿ ಹಣ ಲೂಟಿ ಹೊಡೆಯುತ್ತಿದ್ದ ಕಾಂಗ್ರೆಸ್ಸಿಗರು, ತಮ್ಮ ಭ್ರಷ್ಟಾಚಾರಗಳನ್ನು ಮುಚ್ಚಿಕೊಳ್ಳಲು ಕೂಲಿ ಕಾರ್ಮಿಕರ ಉದ್ಯೋಗಕ್ಕೂ ಕುತ್ತು ತಂದು, ಅವರ ಭವಿಷ್ಯಕ್ಕೆ ಕೊಳ್ಳಿ ಹಿಡುತ್ತಿದ್ದಾರೆ ಎಂದು ಆಕ್ರೋಶ ಹೊರ ಹಾಕಿದೆ. ಕೇಂದ್ರ ಸರ್ಕಾರದ ಮೇಲಿನ ದ್ವೇಷ ರಾಜಕಾರಣಕ್ಕಾಗಿ ಗ್ರಾಮೀಣ ಭಾಗದ ಬಡವರ ಹೊಟ್ಟೆಯ ಮೇಲೆ ಹೊಡೆಯುತ್ತಿರುವ ಸಿದ್ಧರಾಮಯ್ಯ ಸರ್ಕಾರದ ನಡೆ ಖಂಡನೀಯ ಅಂತ ಹೇಳಿದೆ. https://twitter.com/JanataDal_S/status/2026185951958171740
ಬೆಂಗಳೂರು: ‘ಅಭಯ ಹಸ್ತ’ದ ಮೂಲಕ 1,000 ಆರೋಗ್ಯ ಸಿಬ್ಬಂದಿಗೆ ನೇಮಕಾತಿ ಆದೇಶ ನೀಡಲಾಗಿದ್ದು, ಇದರಿಂದ ನಮ್ಮ ಆರೋಗ್ಯ ವ್ಯವಸ್ಥೆ ಇನ್ನಷ್ಟು ಬಲಗೊಂಡಿದೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅಭಯ ಹಸ್ತ ಕಾರ್ಯಕ್ರಮದಲ್ಲಿ 1000 ಆರೋಗ್ಯ ಸಿಬ್ಬಂದಿಗೆ ನೇಮಕಾತಿ ಆದೇಶ ಪತ್ರ ವಿತರಿಸಿ ಮಾತನಾಡಿದಂತ ಅವರು, ಮಧ್ಯಮ ವರ್ಗ, ಕೆಳಮಧ್ಯಮ ವರ್ಗ ಹಾಗೂ ಬಡಜನರು ನಮ್ಮ ಸರ್ಕಾರಿ ಆಸ್ಪತ್ರೆಗಳ ಮೇಲೆ ಅಪಾರ ನಂಬಿಕೆ ಇಟ್ಟು ಬರುತ್ತಾರೆ. ಆದ್ದರಿಂದ ಸರ್ಕಾರಿ ಸೇವೆ ಎಂದರೆ ಕೇವಲ ಉದ್ಯೋಗವಲ್ಲ, ಅದು ಜನಸೇವೆಯ ಜವಾಬ್ದಾರಿ ಎಂಬುದನ್ನು ಆರೋಗ್ಯ ಇಲಾಖೆ ಕುಟುಂಬಕ್ಕೆ ಸೇರ್ಪಡೆಯಾದ ಪ್ರತಿಯೊಬ್ಬರೂ ನೆನಪಿನಲ್ಲಿಟ್ಟುಕೊಳ್ಳಬೇಕು ಎಂದರು. ನಮ್ಮ ಸರ್ಕಾರ ವಿವಿಧ ಜನಪರ ಯೋಜನೆಗಳ ಮೂಲಕ ಗುಣಮಟ್ಟದ ಆರೋಗ್ಯ ಸೇವೆಯನ್ನು ಜನರಿಗೆ ತಲುಪಿಸುತ್ತಿದೆ. ಆ ಸೇವೆಯನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವಲ್ಲಿ ನಮ್ಮ ಆರೋಗ್ಯ ಸಿಬ್ಬಂದಿಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ನಮ್ಮ ನಾಗರಿಕರಿಗೆ ಸದೃಢ ಬದುಕು ಕಲ್ಪಿಸುವುದರ ಜೊತೆಗೆ ಸಶಕ್ತ ಕರ್ನಾಟಕ ನಿರ್ಮಾಣದತ್ತ ನಮ್ಮ ಪ್ರಯಾಣ ದಿಟ್ಟವಾಗಿ ಸಾಗುತ್ತಿದೆ…













