Author: kannadanewsnow09

ಮಂಡ್ಯ : ಮದ್ದೂರು ನಗರದಲ್ಲಿ ನಿರ್ಮಾಣವಾಗುತ್ತಿರುವ ಕಾಂಗ್ರೆಸ್‌ ಭವನಕ್ಕೆ ಪಕ್ಷದ ಎಲ್ಲಾ ಕಾರ್ಯಕರ್ತರು ಮತ್ತು ಮುಖಂಡರು ತನು, ಮನ, ಧನ ನೆರವು ನೀಡಬೇಕೆಂದು ಶಾಸಕ ಕೆ.ಎಂ.ಉದಯ್ ಕರೆ ನೀಡಿದರು. ಕದಲೂರು ಗ್ರಾಮದ ಶಾಸಕರ ನಿವಾಸದಲ್ಲಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕದಲೂರು ರಾಮಕೃಷ್ಣ ಅವರೊಂದಿಗೆ ತೆರಳಿದ ಸುರೇಶ್ ಕಂಠಿ ನಗರದಲ್ಲಿ ನಿರ್ಮಾಣವಾಗುತ್ತಿರುವ ಕಾಂಗ್ರೆಸ್ ಭವನಕ್ಕೆ 1 ಲಕ್ಷ ರೂ ದೇಣಿಗೆಯನ್ನು ಶಾಸಕ ಕೆ.ಎಂ.ಉದಯ್ ಅವರಿಗೆ ಹಸ್ತಾಂತರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ನಗರದಲ್ಲಿ ಹಲವಾರು ವರ್ಷಗಳಿಂದ ಕಾಂಗ್ರೆಸ್ ಕಛೇರಿಗೆ ಸ್ವಂತ ಕಟ್ಟಡವಿಲ್ಲದೆ ಬಾಡಿಗೆ ಕಟ್ಟಡದಲ್ಲಿ ಇತ್ತು. ಹೀಗಾಗಿ ನಾನು ಶಾಸಕನಾಗಿ ಆಯ್ಕೆಯಾದ ಬಳಿಕ ರಾಜ್ಯಾದ್ಯಂತ ಕಾಂಗ್ರೆಸ್ ಭವನಗಳನ್ನು ನಿರ್ಮಾಣ ಮಾಡಬೇಕೆಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಕರೆ ನೀಡಿದ್ದಾರೆ. ಹೀಗಾಗಿ ಪ್ರವಾಸಿ ಮಂದಿರದ ಬಳಿಯ ನನ್ನ ಸ್ವಂತ ನಿವೇಶನವನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ನೋಂದಣಿ ಮಾಡಿಸಿದ್ದು, ಮಾಜಿ ಸಂಸದರಾದ ಡಿ.ಕೆ.ಸುರೇಶ್ ಅವರು ಕೂಡ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಿದ್ದಾರೆ.…

Read More

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ರಾಮೇಶ್ವರಂ ಕೆಫೆ ಮಳಿಗೆಯಲ್ಲಿ ಸಂಬಂಧಿಸಿದ ದೂರಿನ ಕುರಿತು ಇತ್ತೀಚೆಗೆ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಕೆಲವು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಹರಡುತ್ತಿರುವ ತಪ್ಪು ಮಾಹಿತಿ ಕುರಿತ ಸ್ಪಷ್ಟನೆ ಇದಾಗಿದೆ. ರಾಮೇಶ್ವರಂ ಕೆಫೆಯ ಪ್ರವರ್ತಕರು ಸಲ್ಲಿಸಿದ ಕ್ರಿಮಿನಲ್ ಅರ್ಜಿಯನ್ನು ಆಲಿಸಿದ ಕರ್ನಾಟಕದ ಗೌರವಾನ್ವಿತ ಹೈಕೋರ್ಟ್, ಬೆಂಗಳೂರು ನಗರದ ಬಿಐಎಎಲ್ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 59/2025 ರ ನೋಂದಣಿಗೆ ಅನುಗುಣವಾಗಿ ಮುಂದಿನ ವಿಚಾರಣೆಯ ದಿನಾಂಕದವರೆಗೆ ತಡೆಯಾಜ್ಞೆ ನೀಡಿದೆ. ನ್ಯಾಯಾಲಯವು ರಾಜ್ಯ ಸೇರಿದಂತೆ ಸಂಬಂಧಪಟ್ಟ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡುವಂತೆಯೂ ನಿರ್ದೇಶಿಸಿದೆ. ನ್ಯಾಯಾಲಯದ ವಿಚಾರಣೆಯಲ್ಲಿ ದಾಖಲಾಗಿರುವಂತೆ, ಪ್ರವರ್ತಕರ ವಿರುದ್ಧ ಮಾಡಲಾದ ಆರೋಪಗಳು ಸುಳ್ಳು, ಪ್ರತೀಕಾರದ ಸ್ವರೂಪದ್ದಾಗಿದ್ದು, ಆರೋಪಿಸಲಾದ ಅಪರಾಧಗಳ ಅಗತ್ಯ ಅಂಶಗಳನ್ನು ಬಹಿರಂಗಪಡಿಸುವಂತಿಲ್ಲ ಎಂಬ ಸಲ್ಲಿಕೆಗಳನ್ನು ಗೌರವಾನ್ವಿತ ನ್ಯಾಯಾಲಯವು ಗಮನಿಸಿದೆ. ಈ ವಿಷಯಕ್ಕೆ ವಿವರವಾದ ಪರಿಗಣನೆಯ ಅಗತ್ಯವಿದೆ ಎಂದು ನ್ಯಾಯಾಲಯವು ಉಲ್ಲೇಖಿಸಿದ್ದು, ಅದರ ನಂತರ ಮಧ್ಯಂತರ ತಡೆಯಾಜ್ಞೆ ನೀಡಿದೆ. ರಾಮೇಶ್ವರಂ ಕೆಫೆಯು ಕೆಲವು ವ್ಯಕ್ತಿಗಳು ಮತ್ತು ಸಾಮಾಜಿಕ ಮಾಧ್ಯಮಗಳು ಉದ್ದೇಶಪೂರ್ವಕವಾಗಿ…

Read More

ಜರ್ಮನಿ: ಪಪುವಾ ನ್ಯೂಗಿನಿಯಾದಲ್ಲಿ ಸೋಮವಾರ, ಡಿಸೆಂಬರ್ 22, 2025 ರಂದು GMT ಸುಮಾರು 10:31:28 ಕ್ಕೆ ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆಯ ಭೂಕಂಪ ಸಂಭವಿಸಿದೆ. ಈ ಮಾಹಿತಿಯನ್ನು GFZ ಜರ್ಮನ್ ಭೂವಿಜ್ಞಾನ ಸಂಶೋಧನಾ ಕೇಂದ್ರವು ಹಂಚಿಕೊಂಡಿದೆ. ಭೂಕಂಪದ ಕೇಂದ್ರಬಿಂದುವು 108.8 ಕಿಲೋಮೀಟರ್ ಆಳದಲ್ಲಿದೆ ಎಂದು ವರದಿಯಾಗಿದೆ, ಪ್ರಾಥಮಿಕ ನಿರ್ದೇಶಾಂಕಗಳು ಅದನ್ನು 5.78 ಡಿಗ್ರಿ ದಕ್ಷಿಣ ಅಕ್ಷಾಂಶ ಮತ್ತು 145.50 ಡಿಗ್ರಿ ಪೂರ್ವ ರೇಖಾಂಶದಲ್ಲಿ ಇರಿಸಿದೆ ಎಂದು ಕ್ಸಿನ್ಹುವಾವನ್ನು ಉಲ್ಲೇಖಿಸಿ ನ್ಯೂಸ್.ಆಜ್ ವರದಿ ಮಾಡಿದೆ. ಸ್ಥಳೀಯ ಅಧಿಕಾರಿಗಳು ಸಂಭಾವ್ಯ ಪರಿಣಾಮಗಳು ಮತ್ತು ಈ ಬಲವಾದ ಭೂಕಂಪದ ನಂತರ ಸಂಭವಿಸಬಹುದಾದ ಯಾವುದೇ ಸಂಭಾವ್ಯ ನಂತರದ ಆಘಾತಗಳ ಮೌಲ್ಯಮಾಪನವನ್ನು ಪ್ರಾರಂಭಿಸಿದ್ದಾರೆ. ಪಪುವಾ ನ್ಯೂಗಿನಿಯಾದಲ್ಲಿ ಗೊರೊಕಾದ ಈಶಾನ್ಯಕ್ಕೆ 26 ಮೈಲುಗಳಷ್ಟು ದೂರದಲ್ಲಿ 6.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ (USGS) ದೃಢಪಡಿಸಿದೆ.

Read More

ಬೆಂಗಳೂರು: ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡಲು ಎಸ್ಎಂವಿಟಿ ಬೆಂಗಳೂರು ಮತ್ತು ಕೊಲ್ಲಂ ನಡುವೆ ಒಂದು ಟ್ರಿಪ್ ವಿಶೇಷ ರೈಲು ಕಾರ್ಯಾಚರಣೆ ಮಾಡಲಾಗುವುದು. ರೈಲು ಸಂಖ್ಯೆ 06573/06574 ಎಸ್ಎಂವಿಟಿ ಬೆಂಗಳೂರು-ಕೊಲ್ಲಂ-ಎಸ್ಎಂವಿಟಿ ಬೆಂಗಳೂರು ಎಕ್ಸ್’ಪ್ರೆಸ್ ವಿಶೇಷ (ಒಂದು ಟ್ರಿಪ್): ರೈಲು ಸಂಖ್ಯೆ 06573 (ಎಸ್ಎಂವಿಟಿ ಬೆಂಗಳೂರು – ಕೊಲ್ಲಂ): ಡಿಸೆಂಬರ್ 25ರಂದು ಮಧ್ಯಾಹ್ನ 3 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು, ಮರುದಿನ ಬೆಳಿಗ್ಗೆ 6:30ಕ್ಕೆ ಕೊಲ್ಲಂ ತಲುಪಲಿದೆ. ಇದೆ ರೈಲು (06574) ಡಿಸೆಂಬರ್ 26ರಂದು ಬೆಳಿಗ್ಗೆ 10:30ಕ್ಕೆ ಕೊಲ್ಲಂನಿಂದ ಹೊರಟು, ಮರುದಿನ ಮುಂಜಾನೆ 03:30ಕ್ಕೆ ಎಸ್ಎಂವಿಟಿ ಬೆಂಗಳೂರಿಗೆ ಆಗಮಿಸಲಿದೆ. ಈ ವಿಶೇಷ ರೈಲು ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್, ತಿರುಪ್ಪೂರ್, ಪೊದನೂರು, ಪಾಲಕ್ಕಾಡ್, ತ್ರಿಶೂರ್, ಆಲುವಾ, ಎರ್ನಾಕುಲಂ ಟೌನ್, ಕೊಟ್ಟಾಯಂ, ಚಂಗನಾಸ್ಸೆರಿ, ತಿರುವಲ್ಲಾ, ಚೆಂಗನ್ನೂರು, ಮಾವೇಲಿಕರ ಮತ್ತು ಕಾಯಂಕುಲಂ ನಿಲ್ದಾಣಗಳಲ್ಲಿ ನಿಲ್ಲಲಿದೆ. ಈ ರೈಲು ಒಟ್ಟು 22 ಬೋಗಿಗಳನ್ನು ಹೊಂದಿರಲಿದ್ದು, ಇದರಲ್ಲಿ 20 ಸ್ಲೀಪರ್ ಕ್ಲಾಸ್ ಬೋಗಿಗಳು ಮತ್ತು 2 ಎಸ್ಎಲ್ಆರ್/ಡಿ…

Read More

ಬಳ್ಳಾರಿ: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ಮಹಿಳೆಯೊಬ್ಬರು ಲೈವ್ ನಲ್ಲಿ ಮಾತನಾಡುತ್ತಲೇ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿಯಲ್ಲಿ ವೀಡಿಯೋ ಮಾಡುತ್ತಲೇ ಮಹಿಳೆಯೊಬ್ಬರು ಲೈವ್ ನಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಳ್ಳಾರಿಯ ಹುಸೇನ್ ನಗರದಲ್ಲಿ ಮುನ್ನಿ(23) ಎಂಬುವರೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದಂತ ಮಹಿಳೆಯಾಗಿದ್ದಾರೆ. ಕಳೆದ 6 ತಿಂಗಳಿನಿಂದ ಪತಿಯಿಂದ ಮುನ್ನಿ ದೂರವಾಗಿದ್ದರು. ಮೊಹಮ್ಮದ್ ಶೇಖ್ ಎಂಬಾತನ ಜೊತೆಗೆ ಮುನ್ನಿ ಸ್ನೇಹ ಬೆಳೆಸಿದ್ದರು. ಮದುವೆಯಾಗಿ ಇಬ್ಬರು ಮಕ್ಕಳನ್ನು ಹೊಂದಿದ್ದರೂ ಮುನ್ನಿ ಮತ್ತೊಬ್ಬನ ಜೊತೆಗೆ ಸ್ನೇಹ ಬೆಳಸಿದ್ದರು. ಕೆಲ ದಿನಗಳ ಹಿಂದೆ ಮೊಹಮ್ಮದ್ ಶೇಖ್ ಹಾಗೂ ಮುನ್ನಿ ನಡುವೆ ಗಲಾಟೆಯಾಗಿತ್ತು. ಇದೇ ಕಾರಣಕ್ಕೆ ಮುನ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ಸಂಬಂಧಿಕರು ಆರೋಪವಾಗಿದೆ. ಈ ಸಂಬಂಧ ಬಳ್ಳಾರಿಯ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/good-news-for-bengaluru-metro-passengers-parking-facility-to-be-provided-at-new-stations/

Read More

ಬೆಂಗಳೂರು: ನಗರದ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಇನ್ಮುಂದೆ ಹೊಸ ಮೆಟ್ರೋ ನಿಲ್ದಾಣಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಇರಲಿದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಇಂದು ಮೆಟ್ರೋ ಅಧಿಕಾರಿಗಳ ಜೊತೆಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗಾಗರೊಂದಿಗೆ ಮಾತನಾಡಿದಂತ ಅವರು, ಸಂಚಾರ ದಟ್ಟಣೆ ತಗ್ಗಿಸಬೇಕು. ಮೆಟ್ರೋ ಓಡಾಟ ಜಾಸ್ತಿ ಆಗಬೇಕು. ಬೆಂಗಳೂರಲ್ಲಿ ಸದ್ಯ 96 ಕಿಲೋ ಮೀಟರ್ ವರೆಗೆ ಮೆಟ್ರೋ ಚಾಲನೆಯಲ್ಲಿದೆ ಎಂದರು. ನಾನು ಬಂದ ಮೇಲೆ 24 ಕಿ.ಮೀ ಹೆಚ್ಚುವರಿ ಸೇರ್ಪಡೆ ಮಾಡಿದ್ದೇನೆ. 2026ರ ಏಪ್ರಿಲ್ ಅಥವಾ ಮೇ ವರೆಗೆ 41 ಕಿ.ಮೀ ಹೊಸದಾಗಿ ಸೇರ್ಪಡೆಯಾಗಲಿದೆ. 2027ರ ಅಂತ್ಯಕ್ಕೆ ಏರ್ ಪೋರ್ಟ್ ಮಾರ್ಗ ಪೂರ್ಣಗೊಳ್ಳಲಿದೆ. ಅದು ಪೂರ್ಣವಾದ್ರೆ 175 ಕಿ.ಮೀ ಪೂರ್ಣಗೊಂಡಂತೆ ಆಗುತ್ತದೆ ಎಂದರು. ಎಲ್ಲೆಲ್ಲಿ ಮೆಟ್ರೋ ನಿಲ್ದಾಣಗಳಿವೆ ಅಲ್ಲಿ ವಾಣಿಜ್ಯ ಚಟುವಟಿಕೆಗೆ ಅವಕಾಶ ನೀಡಲಾಗುತ್ತದೆ. ಇನ್ಮುಂದೆ ಹೊಸ ಮೆಟ್ರೋ ನಿಲ್ದಾಣಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಇರಲಿದೆ ಎಂಬುದಾಗಿ ಹೇಳುವ ಮೂಲಕ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದರು.…

Read More

ಬೆಂಗಳೂರು: ನಗರದಲ್ಲಿ ಹೊಸ ವರ್ಷ ಸಂಭ್ರಮಾಚರಣೆಯ ವೇಳೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಹದ್ದಿನ ಕಣ್ಣನ್ನು ಇರಿಸಿದೆ. ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಾತನಾಡಿ, ಎಲ್ಲರೂ ಜವಾಬ್ದಾರಿಯಿಂದ ಆಚರಿಸೋಣ ಎಂಬ ಅಭಿಯಾನ ಮಾಡಲಾಗುತ್ತಿದೆ. ಪೊಲೀಸ್ ಅಧಿಕಾರಿಗಳು ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರೆ. ಎಲ್ಲರೂ ಜವಾಬ್ದಾರಿಯಿಂದ ಹೊಸ ವರ್ಷ ಆಚರಣೆ ಮಾಡಬೇಕು ಎಂದರು. ಬೆಂಗಳೂರಲ್ಲಿ ಅಗ್ನಿಶಾಮಕ ದಳ, ಬಿಎಂಟಿಸಿ, ಮೆಟ್ರೋ ಹೊಸ ವರ್ಷ ಆಚರಣೆಯ ಸೇವೆಗೆ ಸಿದ್ಧವಾಗಿದೆ. ಡ್ರಗ್ಸ್, ರೇವ್ ಪಾರ್ಟಿ ನಡೆಸಲು ಬಿಡೋದಿಲ್ಲ.  ಹೊಸ ವರ್ಷಾಚರಣೆ ವೇಳೆಯಲ್ಲಿ ಡ್ರಿಂಕ್ ಅಂಡ್ ಡ್ರೈವ್ ಮಾಡಬಾರದು ಎಂದರು. ವಿಶೇಷವಾಗಿ ಹೆಣ್ಣುಮಕ್ಕಳ ಸೇಫ್ಟಿ ಬಗ್ಗೆ ಸಾಕಷ್ಟು ತಯಾರಿ ಮಾಡಿದ್ದೇವೆ. ಸಿಸಿಟಿಪಿ, ಟೆಕ್ನಾಲಜಿ ಬಳಸಿಕೊಂಡು ಸೇಫ್ಟಿ ಕುರಿತು ಕ್ರಮ ವಹಿಸಿದ್ದೇವೆ. ಕ್ಯೂ ಆರ್ ಕೋಟ್ ಸ್ಕ್ಯಾನ್ ಮಾಡಿದ್ರ ಎಲ್ಲಾ ಮಾಹಿತಿಯೂ ಸಿಗಲಿದೆ. ಅದೇ ಕ್ಯೂ ಆರ್ ಕೋಡ್ ಬಳಸಿ ದೂರು ಕೂಡ ನೀಡಬಹುದು ಎಂದರು.

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಪತ್ರಕರ್ತರಿಗೆ ವಿತರಿಸಿರುವ ಸ್ಮಾರ್ಟ್‌ ಕಾರ್ಡ್ ಬಸ್ ಪಾಸ್ ಮಾನ್ಯತಾ ಅವಧಿಯನ್ನು ವಿಸ್ತರಿಸಿ ಆದೇಶಿಸಿದೆ. ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅವರು, ಮಾನ್ಯತೆ ಪಡೆದ ಪತ್ರಕರ್ತರಿಗೆ ವಿತರಿಸಲಾಗಿರುವ ಸ್ಮಾರ್ಟ್‌ ಕಾರ್ಡ್‌ಗಳ ಮಾನ್ಯತಾ ಅವಧಿಯು ದಿನಾಂಕ: 31.12.2025 ಕ್ಕೆ ಕೊನೆಗೊಳ್ಳಲಿದ್ದು, 2026 ಮತ್ತು 2027ನೇ ಸಾಲಿನ ಮಾನ್ಯತೆ ಪಡೆದ ಪತ್ರಕರ್ತರ ಸ್ಮಾರ್ಟ್‌ ಕಾರ್ಡ್‌ಗಳನ್ನು ಜರೂರಾಗಿ ಮುದ್ರಿಸಿ ನೀಡುವಂತೆ ಕೋರಿರುತ್ತಾರೆ. ಮಾನ್ಯತೆ ಪಡೆದ ಪತ್ರಕರ್ತರ ಬಸ್ ಪಾಸುಗಳನ್ನು ಮುದ್ರಿಸಲು ಕಾಲಾವಕಾಶದ ಅವಶ್ಯಕತೆ ಇರುವುದರಿಂದ, ಕ.ರಾ.ರ.ಸಾ.ನಿಗಮದ ವತಿಯಿಂದ ವಿತರಿಸಲಾಗಿರುವ ಸ್ಮಾರ್ಟ್‌ಕಾರ್ಡ್ ಬಸ್‌ಪಾಸ್‌ಗಳ ಮಾನ್ಯತಾ ಅವಧಿಯನ್ನು ಸೂಕ್ತಾಧಿಕಾರಿಗಳ ಅನುಮೋದನೆಯಂತೆ ದಿನಾಂಕ: 28.02.2026 ರವರೆಗೆ ವಿಸ್ತರಿಸಲಾಗಿದೆ. ಈ ಬಗ್ಗೆ ನಿಗಮದ ಎಲ್ಲಾ ಚಾಲನಾ ಸಿಬ್ಬಂದಿಗಳಿಗೆ ಸೂಕ್ತ ತಿಳುವಳಿಕೆ ನೀಡುವುದು ಮತ್ತು ದಿನಾಂಕ: 31.12.2025 ರವರೆಗೆ ಚಾಲ್ತಿಯಲ್ಲಿರುವ ಸ್ಮಾರ್ಟ್‌ ಕಾರ್ಡ್ ಬಸ್‌ ಸ್ ಪಾಸ್‌ಗಳನ್ನು ಹೊಂದಿರುವ ಪತ್ರಕರ್ತರನ್ನು ದಿನಾಂಕ: 28.02.2026 ರವರೆಗೆ ಕ.ರಾ.ರ.ಸಾ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸಲು ಅನುಮತಿಸುವುದು. ಈ ಬಗ್ಗೆ…

Read More

ನಮ್ಮ ಪರ್ಸ್ ಯಾವಾಗಲೂ ತುಂಬಿರಬೇಕು, ಅದು ಖಾಲಿಯಾಗಬಾರದೆಂದು ಅನೇಕರು ಬಯಸುತ್ತಾರೆ. ಕೆಲವೊಮ್ಮೆ ಹಣದ ಸಮಸ್ಯೆ ಎದುರಾದಾಗ ಪರ್ಸ್ ನಲ್ಲಿ ಹಣ ಖಾಲಿಯಾಗುವ ಸಂಭವವಿರುತ್ತದೆ. ಹೀಗಾಗಿ ನಿಮ್ಮ ಪರ್ಸ್ ಯಾವಾಗಲೂ ತುಂಬಿರಬೇಕೆಂದು ಬಯಸಿದರೆ ಏನು ಮಾಡಬೇಕು ಎಂಬುದನ್ನು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ಗುರೂಜೀ ಅವರಿಂದ ತಿಳಿಯೋಣ ಬನ್ನಿ. ಎಷ್ಟೇ ಕಷ್ಟ ಪಟ್ಟು ದುಡಿದರೂ, ಹಣ ಕೈಯಲ್ಲಿ ಉಳಿಯುವುದೇ ಇಲ್ಲ, ಜೊತೆಗೆ ಸಾಲವೂ ಹೆಚ್ಚಾಗುತ್ತಾ ಹೋಗುತ್ತಿದೆ ಎಂಬ ಸಮಸ್ಯೆಯನ್ನು ನೀವೂ ಕೂಡ ಅನುಭವಿಸುತ್ತಿದ್ದೀರಾ? ಈ ಸಮಸ್ಯೆಯಿಂದ ಮುಕ್ತಿ ಪಡೆಯಲು ವಾಸ್ತು ಸಲಹೆ ಅನುಸರಿಸುವುದು ಅಗತ್ಯ. ಕೆಲವು ಸರಳ ಪರಿಹಾರಗಳು ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುತ್ತದೆ ಮತ್ತು ನಿಮ್ಮ ಜೀವನದಲ್ಲಿ ಪ್ರಗತಿಗೆ ಅನೇಕ ಅವಕಾಶಗಳನ್ನು ತರುತ್ತದೆ ಎಂದು ವಾಸ್ತು ತಜ್ಞರು ಹೇಳುತ್ತಾರೆ. ಈ ನಾಲ್ಕು ವಸ್ತುಗಳನ್ನು ನಿಮ್ಮ ಪರ್ಸ್​ನಲ್ಲಿ ಇಟ್ಟುವುದರಿಂದ ನೀವು ಆರ್ಥಿಕ ಸಮಸ್ಯೆಯಿಂದ ಹೊರಬರಬಹುದಾಗಿದೆ. ಅಕ್ಕಿ ಕಾಳು: ವಾಸ್ತು ಶಾಸ್ತ್ರದ ಪ್ರಕಾರ, ಅಕ್ಕಿ ಕಾಳುಗಳನ್ನು ಬೆಳವಣಿಗೆಯ ಸಂಕೇತವೆಂದು ಪರಿಗಣಿಸಲಾಗುತ್ತದೆ, ಆದ್ದರಿಂದ ಯಾವಾಗಲೂ ನಿಮ್ಮ…

Read More

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತಂತೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವರಾದ ಜಿ.ಪರಮೇಶ್ವರ ಅವರು ತಿಳಿಸಿದರು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿ ನಡೆಸುವ ಕುರಿತಂತೆ ವಿಧಾನಸೌಧದ ಉಪಸಮಿತಿ ಕೊಠಡಿಯಲ್ಲಿ ಇಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಪದಾಧಿಕಾರಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಡಿಸೆಂಬರ್ 24ರಂದು ವಿಜಯ್ ಹಜಾರೆ ಕ್ರಿಕೆಟ್ ಪಂದ್ಯ ನಡೆಸಲು ಅನುಮತಿ ನೀಡುವಂತೆ ಕೆಎಸ್‌ಸಿಎ ಮನವಿ ಮಾಡಿದೆ. ಸಾರ್ವಜನಿಕರ ವೀಕ್ಷಣೆಗೆ ಅವಕಾಶ ನೀಡುವುದಿಲ್ಲ. ಪಂದ್ಯ ಮಾತ್ರ ನಡೆಸುತ್ತೇವೆ ಎಂದು ಕೆಎಸ್‌ಸಿಎ ಅವರು ಕೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರೇಕ್ಷಕರ, ಕ್ರೀಡಾಪಟುಗಳ ಸುರಕ್ಷತೆಯೆ ಹಿತಾದೃಷ್ಟಿಯಿಂದ ಜಿಬಿಎ ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರು, ಲೋಕೋಪಯೋಗಿ, ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆ, ಆರೋಗ್ಯ ಇಲಾಖೆಯನ್ನೊಳಗೊಂಡ ಸಮಿತಿಯು ಮಧ್ಯಾಹ್ನ 3 ಗಂಟೆಗೆ ಚಿನ್ನಸ್ವಾಮಿ ಸ್ಟೇಡಿಯಂಗೆ ಭೇಟಿ ನೀಡಿ, ಪರಿಶೀಲಿಸಿ ಸರ್ಕಾರಕ್ಕೆ ವರದಿ ನೀಡಲಿದ್ದಾರೆ. ಸಮಿತಿ…

Read More