Author: kannadanewsnow09

ಶಿವಮೊಗ್ಗ: ಅರಣ್ಯ ಸಚಿವ ಈಶ್ವರ್ ಖಂಡ್ರೆಯವರ ಟಿಪ್ಪಣಿಯಿಂದಾಗಿ ಸಾಗರದ ಶರಾವತಿ ಮುಳುಗಡೆ ಸಂತ್ರಸ್ತರನ್ನು ಸಂಕಷ್ಟಕ್ಕೆ ದೂಡುವಂತಾಗಿತ್ತು. ಇಂತಹ ಸಾಗರದ ಯಡಮನೆ ಗ್ರಾಮಕ್ಕೆ ಮಾಜಿ ಸಚಿವ ಹರತಾಳು ಹಾಲಪ್ಪ ಭೇಟಿ ನೀಡಿದರು. ಅಲ್ಲದೇ ಗ್ರಾಮಸ್ಥರಿಂದ ಮಾಹಿತಿ ಪಡೆದು, ಸರ್ಕಾರದ ಗಮನ ಸೆಳೆದು, ಪರಿಹಾರದ ಭರವಸೆಯನ್ನು ನೀಡಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕರೂರು ಹೋಬಳಿಯ ಕಟ್ಟಿನಕಾರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಯಡಮನೆ ಗ್ರಾಮಕ್ಕೆ ಮಾಜಿ ಸಚಿವ ಹರತಾಳು ಹಾಲಪ್ಪ ಭೇಟಿ ನೀಡಿದರು. ಈ ಗ್ರಾಮದಲ್ಲಿದ್ದಂತ 16 ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ಮನೆ, ಜಮೀನು ಖಾಲಿ ಮಾಡುವಂತೆ ನೋಟಿಸ್ ನೀಡಿದ್ದ ಹಿನ್ನಲೆಯಲ್ಲಿ ರೈತ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ್ದವು. ಅವರನ್ನು ಭೇಟಿ ಮಾಡಿರು. ಮಾಜಿ ಸಚಿವ ಹರತಾಳು ಹಾಲಪ್ಪ ಬಳಿಯಲ್ಲಿ ಯಡಮನೆ ಗ್ರಾಮದ ಗ್ರಾಮಸ್ಥರು ತಮ್ಮ ಕಣ್ಣೀರಿನ ಕತೆಯನ್ನೇ ಬಿಚ್ಚಿಟ್ಟಿದರು. ಮನೆ, ಜಮೀನು, ಕೊಚ್ಚಿಗೆಯಯನ್ನು ಖಾಲಿ ಮಾಡಿರೋದು, ಹಾಳಾದ ಮನೆಯ ಸಂಪೂರ್ಣ ಚಿತ್ರಣವನ್ನೇ ಮಾಜಿ ಸಚಿವರ ಮುಂದಿಟ್ಟಿದರು. ಯಡಮನೆ ಗ್ರಾಮಸ್ಥರ ಸಂಕಷ್ಟ ಕೇಳಿದಂತ ಹಾಲಪ್ಪ…

Read More

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರು ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ಶಿಫಾರಸ್ಸು ಮಾಡಿದ್ದಾರೆ ಎನ್ನುವಂತ ನಕಲಿ ಪತ್ರವನ್ನು ಶೇರ್ ಮಾಡಿದಂತ ಶಾಸಕ ಸುನೀಲ್ ಕುಮಾರ್ ಕಾರ್ಕಳ, ಎಂಎಲ್ಸಿ ರವಿಕುಮಾರ್ ಸೇರಿ ಇತರರ ವಿರುದ್ಧ ಪೊಲೀಸ್ ಆಯುಕ್ತರಿಗೆ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ದೂರು ನೀಡಿದ್ದಾರೆ. ಕಾಂಗ್ರೆಸ್ ಎಂಎಲ್ಸಿ, ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷರಾದಂತ ರಮೇಶ್ ಬಾಬು ನೀಡಿರುವಂತ ದೂರಿನಲ್ಲಿ, ಕರ್ನಾಟಕ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳ ಹೆಸರಿನಲ್ಲಿ ನಕಲಿ/ಕಟ್ಟುಕತೆ ವರ್ಗಾವಣೆ ಪತ್ರವನ್ನು ತಯಾರಿಸಿ (Dr ಅದನ್ನು ಈ ದಿನ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿದ್ದು, ಆ ನಕಲಿ ಪತ್ರದ ಆಧಾರದ ಮೇಲೆ ಭ್ರಷ್ಟಾಚಾರದ ಸುಳ್ಳು ಆರೋಪಗಳನ್ನು ಮಾಡಿದ ಒಬ್ಬ ಶಾಸಕ ಸುನಿಲ್ ಕುಮಾರ್ (MLA) ಹಾಗೂ ಒಬ್ಬ ವಿಧಾನ ಪರಿಷತ್ ಸದಸ್ಯ ರವಿಕುಮಾರ್ (MLC) ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ದೂರು ಸಲ್ಲಿಸುತ್ತಿದ್ದೇನೆ ಎಂದಿದ್ದಾರೆ. ಪ್ರಸಾರವಾಗಿರುವ ಪತ್ರವು ಸಂಪೂರ್ಣ ಕೃತಕ ಹಾಗೂ ದುರುದ್ದೇಶದಿಂದ ಕೂಡಿರುತ್ತದೆ. ದಿನಾಂಕ ಇಲ್ಲದ…

Read More

ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ಹಗಲು ಹೊತ್ತಿನಲ್ಲೇ ಕಳ್ಳತನಕ್ಕೆ ಇಳಿದಂತ ಕಳ್ಳನೊಬ್ಬನನ್ನು ಗ್ರಾಮಸ್ಥರು ರೆಡ್ ಹ್ಯಾಂಡ್ ಹಿಡಿದು, ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಅಲ್ಲದೇ ಕಳ್ಳನನ್ನು ಊರ ತುಂಬೆಲ್ಲ ಮೆರವಣಿಗೆ ಮಾಡಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕಾನಲೇ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೊಂಕೇರಿ ಗ್ರಾಮದಲ್ಲಿ ಹಾಡಹಗಲೇ ಕಳ್ಳನೊಬ್ಬ, ಕಬ್ಬಳ್ಳಿ ಹುಚ್ಚಪ್ಪ ಎಂಬುವರ ಮನೆಯ ಕಿಟಕಿ ಮುರಿದು ಒಳಗೆ ಹೋಗಿದ್ದಾನೆ. https://youtu.be/Z-0067bOTR0 ಮನೆಯ ಒಳಗಡೆ ಶಬ್ದವಾಗುತ್ತಿದ್ದಂತ ಗಮನಿಸಿದಂತ ಗ್ರಾಮಸ್ಥರು, ಅನುಮಾನಗೊಂಡು ನೋಡಿದಾಗ ಕಳ್ಳನೊಬ್ಬ ನುಗ್ಗಿ, ಕಳ್ಳತನ ಮಾಡುತ್ತಿರೋದು ಕಂಡು ಬಂದಿದೆ. ಕೂಡಲೇ ಅಲರ್ಟ್ ಆದಂತ ಹೊಂಕೇರಿ ಗ್ರಾಮಸ್ಥರು, ಬಾಗಿಲಿ ತೆಗೆದು ಒಳಹೋಗಿ ಕಳ್ಳನನ್ನು ರೆಡ್ ಹ್ಯಾಂಡ್ ಆಗಿಯೇ ಹಿಡಿದಿದ್ದಾರೆ. ಅಂದಹಾಗೇ ಹೊಂಕೇರಿಯ ಕಬ್ಬಳ್ಳಿ ಹುಚ್ಚಪ್ಪ ಅವರ ಮನೆಗೆ ನುಗ್ಗಿದಂತ ಕಳ್ಳ, ಬೀರು ಮುರಿದಿದ್ದನು. ಅಲ್ಲದೇ ಅದರಲ್ಲಿ ಕಬ್ಬಳ್ಳಿ ಹುಚ್ಚಪ್ಪ ಅವರು ಬೆಲ್ಲ ಮಾರಿ ಇರಿಸಿದ್ದಂತ 50,000 ಹಣ, ಚಿನ್ನಾಭರಣ ದೋಚಿದ್ದನು ಎನ್ನಲಾಗಿದೆ. ಬಾಗಿಲು ಮೂಲಕ ಗ್ರಾಮಸ್ಥರು ಒಳಗೆ ನುಗ್ಗಿ ಹಿಡಿದಾಗ ಇದೆಲ್ಲವೂ ಸಿಕ್ಕಿದೆ.…

Read More

ಬೆಂಗಳೂರು: ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ, ಬೆಂಗಳೂರಿನಿಂದ ಸೋಮನಾಥಪುರ, ತಲಕಾಡು, ಮಧ್ಯಂರಂಗ ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿಗೆ ವಿಶೇಷ ಪ್ಯಾಕೇಜ್ ಟೂರ್ ಗಳನ್ನು ಘೋಷಣೆ ಮಾಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕೆ ಎಸ್ ಆರ್ ಟಿ ಸಿಯು, ಕರ್ನಾಟಕ ರಾಜ್ಯರಸ್ತೆ ಸಾರಿಗೆ ನಿಗಮದ ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಪ್ಯಾಕೇಜ್‌ಟೂರ್ ಸೇವೆಗಳನ್ನು ವಾರಾಂತ್ಯದ ದಿನಗಳಲ್ಲಿ (ಶನಿವಾರ& ಭಾನುವಾರ) ರಾಜಹಂಸ ಮತ್ತುಅಶ್ವಮೇಧ ಕ್ಲಾಸಿಕ್ ಸಾರಿಗೆಗಳೊಂದಿಗೆ ಕಾರ್ಯಾಚರಣೆ ಮಾಡಲಾಗುತ್ತಿದೆ. (ಪ್ರವೇಶ ಶುಲ್ಕ, ಉಪಹಾರ, ಮಧ್ಯಾಹ್ನದ/ರಾತ್ರಿಊಟವನ್ನು ಹೊರತುಪಡಿಸಿ) ಸದರಿ ಪ್ಯಾಕೇಜ್‌ಟೂರ್‌ಗೆ ಸಾರ್ವಜನಿಕ ಪ್ರಯಾಣಿಕರಿಂದಉತ್ತಮ ಪ್ರೋತ್ಸಾಹದೊರೆಯುತ್ತಿದೆ. ಪ್ಯಾಕೇಜ್ ಟೂರ್‌ಗಳ ವಿವರ ಮತ್ತು ಪ್ರಯಾಣದರ ಈ ಕೆಳಗಿನಂತಿದೆ. ಪ್ಯಾಕೇಜ್ ಟೂರ್‌ಗಳ ವಿವರ ಮತ್ತು ಪ್ರಯಾಣದರ ಬೆಂಗಳೂರು-ಗಗನಚುಕ್ಕಿ ಪ್ಯಾಕೇಜ್ ಟೂರ್ ನಲ್ಲಿ ಸೋಮನಾಥಪುರ-ತಲಕಾಡು-ಮಧ್ಯರಂಗ-ಭರಚುಕ್ಕಿ-ಗಗನಚುಕ್ಕಿ ಪ್ರವಾಸಿ ತಾಣಗಳನ್ನು  ರಾಜಹಂಸ ಬಸ್ ಮೂಲಕ ನೋಡಬಹುದಾಗಿದೆ. ವಯಸ್ಕರಿಗೆ ರೂ.750 ಹಾಗೂ ಮಕ್ಕಳಿಗೆ ರೂ.600 ಟಿಕೆಟ್ ದರ ನಿಗದಿ ಪಡಿಸಲಾಗಿದೆ. ಬೆಂಗಳೂರು-ಗಗನಚುಕ್ಕಿ ಪ್ಯಾಕೇಜ್ ಟೂರಿನಲ್ಲಿ ಸೋಮನಾಥಪುರ-ತಲಕಾಡು-ಮಧ್ಯರಂಗ-ಭರಚುಕ್ಕಿ-ಗಗನಚುಕ್ಕಿ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಪೊಲೀಸ್ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಕಾನ್ಸ್ ಟೇಬಲ್ ನಿಂದ ಎಎಸ್ಐ ದರ್ಜೆಯ ಸಿಬ್ಬಂದಿಗೆ ವಿಶೇಷ ರಜೆ ಮಂಜೂರು ಮಾಡಲಾಗಿದೆ. ಈ ಕುರಿತು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಂದ ಸುತ್ತೋಲೆ ಹೊರಡಿಸಲಾಗಿದ್ದು, ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಕಡ್ಡಾಯವಾಗಿ ರಜೆ ನೀಡಬೇಕು. ಅರ್ಜಿ ಸಲ್ಲಿಸಿದರೇ ಕಡ್ಡಾಯವಾಗಿ ರಜೆ ನೀಡಬೇಕು ಎಂಬುದಾಗಿ ಸೂಚಿಸಿದ್ದಾರೆ. ರಾಜ್ಯದ ಕಾನ್ಸ್ ಟೇಬಲ್ ನಿಂದ ಎಎಸ್ಐ ದರ್ಜೆಯ ಸಿಬ್ಬಂದಿಗಳಿಗೆ ಹುಬ್ಬುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ವಿಶೇಷ ರಜೆಯನ್ನು ಕಡ್ಡಾಯವಾಗಿ ನೀಡುವಂತೆ ಪೊಲೀಸ್ ಮಹಾನಿರ್ದೇಶಕರು ಸುತ್ತೋಲೆಯಲ್ಲಿ ಖಡಕ್ ಸೂಚನೆ ನೀಡಿದ್ದಾರೆ. https://kannadanewsnow.com/kannada/fir-registered-against-those-who-shared-cm-siddaramaiahs-fake-recommendation-letter/ https://kannadanewsnow.com/kannada/breaking-massive-corruption-in-rto-department-following-excise-fcs-issued-to-vehicles-without-inspection/

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ವರ್ಗಾವಣೆ ಮಾಡಲು ಶಿಫಾರಸ್ಸು ಮಾಡಿದಂತ ಪತ್ರವೊಂದು ವೈರಲ್ ಆಗಿತ್ತು. ಇದೇ ಪತ್ರವನ್ನು ಶಾಸಕ ಸುನೀಲ್ ಕುಮಾರ್ ಕಾರ್ಕಳ ಕೂಡ ಶೇರ್ ಮಾಡಿ, ಸಿಎಂ ವಿರುದ್ಧ ಕಿಡಿಕಾರಿದ್ದರು. ಈ ಬೆನ್ನಲ್ಲೇ ನಕಲಿ ಶಿಫಾರಸ್ಸು ಪತ್ರ ಸಿದ್ಧಮಾಡಿ, ಹಂಚಿದವರ ವಿರುದ್ಧ ಸರ್ಕಾರ ಎಫ್ಐಆರ್ ದಾಖಲಿಸಿದೆ. ಈ ಕುರಿತಂತೆ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಒಂದೇ ಸುಳ್ಳನ್ನು ನೂರು ಬಾರಿ ಹೇಳಿ ಅದನ್ನೇ ಸತ್ಯವಾಗಿಸುವ ಬಿಜೆಪಿಯ ಸುಳ್ಳಿನ ಫ್ಯಾಕ್ಟರಿಯ ಮತ್ತೊಂದು ವಿಫಲ ಹುನ್ನಾರವಿದು. ಸುನೀಲ್ ಕುಮಾರ್ ಅವರೇ, ದಿನಾಂಕವಿಲ್ಲದ, ರೆಫರೆನ್ಸ್ ಸಂಖ್ಯೆಯಿಲ್ಲದ ಒಂದು ನಕಲಿ ಪತ್ರವನ್ನು ಹಿಡಿದು ಜನರಲ್ಲಿ ಗೊಂದಲ ಸೃಷ್ಟಿಸಲು ಹೊರಟಿರುವ ನಿಮಗೆ ಕನಿಷ್ಠ ಜ್ಞಾನವೂ ಇಲ್ಲವೇ? ಆರೋಗ್ಯ ಇಲಾಖೆಯ ಅಧಿಕಾರಿಯನ್ನು ಅಬಕಾರಿ ಇಲಾಖೆಗೆ ವರ್ಗಾಯಿಸಲು ನಮ್ಮ ನಿಯಮಗಳಲ್ಲಿ ಅವಕಾಶವೇ ಇಲ್ಲ ಎಂಬುದು ತಿಳಿಯದಷ್ಟು ಬೌದ್ಧಿಕ ದಿವಾಳಿತನವೇ? ಈ ನಕಲಿ ಪತ್ರದ ಬಗ್ಗೆ ನಮ್ಮ ಮುಖ್ಯಮಂತ್ರಿ…

Read More

ಬೆಂಗಳೂರು: 2026ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ನಿಗಮದ ಬಸ್ಸುಗಳಲ್ಲಿ ಪರೀಕ್ಷಾ ದಿನಗಳಂದು ಉಚಿತವಾಗಿ ಪ್ರಯಾಣಿಸಲು ಅನುಮತಿಸಿ ಆದೇಶಿಸಲಾಗಿದೆ. ಈ ಕುರಿತಂತೆ ಕೆ ಎಸ್ ಆರ್ ಟಿ ಸಿ ಮುಖ್ಯ ಸಂಚಾರ ವ್ಯವಸ್ಥಾಪಕರು ಸುತ್ತೋಲೆ ಹೊರಡಿಸಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಿನಾಂಕ: 28.02.2026 ರಿಂದ ಕರ್ನಾಟಕದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ, ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸುವಂತೆ ಉಲ್ಲೇಖಿತ-1 ರ ಪತ್ರದಲ್ಲಿ ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ರವರು ಕೋರಿರುತ್ತಾರೆ ಎಂದಿದ್ದಾರೆ. ಅದರನ್ವಯ ಕ.ರಾ.ರ.ಸಾ.ನಿಗಮವು, ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ದಿನಾಂಕಗಳಂದು ಅಂದರೆ, ದಿನಾಂಕ 28.02.2026 ರಿಂದ 17.03.2026 ರವರೆಗೆ, ಪರೀಕ್ಷೆಗೆ ಹಾಜರಾಗುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು…

Read More

ಬೆಂಗಳೂರು : ಹೃದಯಾಘಾತದಿಂದ  ಸ್ಯಾಂಡಲ್ ವುಡ್ ಖ್ಯಾತ ಚಿತ್ರ ನಿರ್ದೇಶಕ ಜೋ ಸೈಮನ್ ನಿಧನರಾಗಿದ್ದಾರೆ. ಆ ಮೂಲಕ ಖ್ಯಾತ ಕನ್ನಡದ ಚಲನಚಿತ್ರ ನಿರ್ದೇಶಕ ಜೋ ಸೈಮನ್ ಇನ್ನಿಲ್ಲವಾಗಿದ್ದಾರೆ.  ಇಂದು ಖ್ಯಾತ ಸ್ಯಾಂಡಲ್ ವುಡ್ ನಿರ್ದೇಶಕ ಜೋ ಸೈಮನ್ ಅವರು ಹೃದಯಾಘಾತದಿಂದ ದಿಢೀರ್ ಕುಸಿದು ಬಿದ್ದಿದ್ದರು. ಅವರನ್ನು ಕೂಡಲೇ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೇ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಇಂದು ಫಿಲ್ಮಂ ಚೇಂಬರ್ ನಲ್ಲಿ ನಡೆದಂತ ಸಭೆಯಲ್ಲಿ ಭಾಗವಹಿಸಿದ್ದಂತ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಮೃತ ಸ್ಯಾಂಡಲ್ ವುಡ್ ನಿರ್ದೇಶಕ ಜೋ ಸೈಮನ್ ಅವರಿಗೆ 80 ವರ್ಷ ವಯಸ್ಸಾಗಿತ್ತು. https://kannadanewsnow.com/kannada/breaking-massive-corruption-in-rto-department-following-excise-fcs-issued-to-vehicles-without-inspection/ https://kannadanewsnow.com/kannada/big-news-pan-card-is-no-longer-required-for-bank-transactions-of-this-amount-new-rules-implemented/

Read More

ಶಿವಮೊಗ್ಗ: ಶರಾವತಿ ಮುಳುಗಡೆ ಸಂತ್ರಸ್ತರ ಬೆನ್ನಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ನಿಂತಿದ್ದಾರೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೊರಡಿಸಿರುವಂತ ಟಿಪ್ಪಣಿಯು ಮಲೆನಾಡಿನ ಜನರ ವಿರುದ್ಧವಾಗಿದೆ. ಹೀಗಾಗಿ ಮುಂದಿನ ಶಾಸನೀಯ ಕ್ರಮ ಜರುಗಿಸುವವರೆಗೆ ವಾಪಾಸ್ಸು ಪಡೆಯುವಂತೆ ಪತ್ರದಲ್ಲಿ ಕೋರಿದ್ದಾರೆ. ಈ ಕುರಿತಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆಗೆ ಪತ್ರ ಬರೆದಿರುವಂತ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರು, ಶಿವಮೊಗ್ಗ ಜಿಲ್ಲೆಯ ಶರಾವತಿ ವಿದ್ಯುತ್ ಯೋಜನೆಗಾಗಿ ಅರಣ್ಯ ಇಲಾಖೆಯಿಂದ 50 ವರ್ಷಗಳ ಹಿಂದೆ ಕರ್ನಾಟಕ ಪವರ್ ಕಾರ್ಪೊರೇಷನ್ (ಕೆ.ಪಿ.ಸಿ.)ಗೆ ಸುಮಾರು 2 ಲಕ್ಷ ಎಕರೆಗೂ ಹೆಚ್ಚು ಭೂಮಿಯನ್ನು ನೀಡಲಾಗಿದ್ದು, ಈ ಪೈಕಿ ಕೆ.ಪಿ.ಸಿ. 20 ಸಾವಿರ ಎಕರೆ ಭೂಮಿಯನ್ನು ಬಳಕೆ ಮಾಡಿರುವುದಿಲ್ಲ. ಹೀಗಾಗಿ ಅನಾಥವಾಗಿರುವ ಭೂಮಿಯನ್ನು ಪಟ್ಟಭದ್ರ ಹಿತಾಸಕ್ತಿಗಳು ಒತ್ತುವರಿ ಮಾಡುತ್ತಿದ್ದಾರೆ ಎಂದು ದಿನಪತ್ರಿಕೆಯಲ್ಲಿ ವರದಿ ಪಕಟವಾಗಿದೆ ಎಂದಿದ್ದಾರೆ. ವೃಕ್ಷ ಲಕ್ಷ ಆಂದೋಲನದ ಅನಂತ ಹೆಗಡೆ ಅಶೀಸರ ಅವರು ಕೂಡ ಈ ಸಂಬಂಧ ಸಚಿವಾಲಯಕ್ಕೆ ಪತ್ರ ಬರೆದಿರುತ್ತಾರೆ. ಈ ಬಗ್ಗೆ ತಾವು ನಿಯಮಾನುಸಾರ ಯಾವುದೇ…

Read More

ನವದೆಹಲಿ: ರಾಜಸ್ಥಾನ್ ರಾಯಲ್ಸ್ ತಂಡವು ರಿಯಾನ್ ಪರಾಗ್ ಅವರನ್ನು ತಮ್ಮ ಹೊಸ ನಾಯಕನನ್ನಾಗಿ ನೇಮಿಸಿದ್ದು, ಸಂಜು ಸ್ಯಾಮ್ಸನ್ ಚೆನ್ನೈ ಸೂಪರ್ ಕಿಂಗ್ಸ್‌ಗೆ ಸ್ಥಳಾಂತರಗೊಂಡ ನಂತರ ಫ್ರಾಂಚೈಸಿಗೆ ಹೊಸ ಯುಗದ ಆರಂಭವನ್ನು ಸೂಚಿಸುತ್ತಿದೆ. 2019 ರಲ್ಲಿ ಐಪಿಎಲ್‌ಗೆ ಪಾದಾರ್ಪಣೆ ಮಾಡಿದ ಪರಾಗ್, ರಾಯಲ್ಸ್ ಪರ ದೀರ್ಘಕಾಲ ಸೇವೆ ಸಲ್ಲಿಸಿದ ಆಟಗಾರರಲ್ಲಿ ಒಬ್ಬರಾಗಿದ್ದು, ತಮ್ಮ ಏಳು ಋತುಗಳನ್ನೂ ಫ್ರಾಂಚೈಸಿಯೊಂದಿಗೆ ಕಳೆದಿದ್ದಾರೆ. ಈ ನೇಮಕಾತಿಯು ತಂಡದ ನಿರಂತರತೆ ಮತ್ತು ಯೌವ್ವನದ ಮೇಲಿನ ನಂಬಿಕೆಯನ್ನು ಸೂಚಿಸುತ್ತದೆ ಏಕೆಂದರೆ ಅವರು ಮೈದಾನದ ಒಳಗೆ ಮತ್ತು ಹೊರಗೆ ಪುನರ್ನಿರ್ಮಿಸಲು ನೋಡುತ್ತಿದ್ದಾರೆ. https://twitter.com/rajasthanroyals/status/2022263593194889573 ಕಳೆದ ಋತುವಿನಲ್ಲಿ ಸ್ಯಾಮ್ಸನ್ ಗಾಯದ ನಂತರ ಎಂಟು ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದಾಗ 24 ವರ್ಷದ ಆಟಗಾರ ನಾಯಕತ್ವದ ಅನುಭವ ಪಡೆದರು. ಫಲಿತಾಂಶಗಳು ಮಿಶ್ರವಾಗಿದ್ದರೂ – ರಾಯಲ್ಸ್ ಒಂಬತ್ತನೇ ಸ್ಥಾನ ಪಡೆದಾಗ ಎರಡು ಗೆಲುವುಗಳು ಮತ್ತು ಆರು ಸೋಲುಗಳು – ಪರಾಗ್ ಬ್ಯಾಟಿಂಗ್‌ನಲ್ಲಿ ಎದ್ದು ಕಾಣುತ್ತಿದ್ದರು. ಈಡನ್ ಗಾರ್ಡನ್ಸ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ವೃತ್ತಿಜೀವನದ ಅತ್ಯುತ್ತಮ 95…

Read More