Subscribe to Updates
Get the latest creative news from FooBar about art, design and business.
Author: kannadanewsnow09
ಹಾವೇರಿ: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕಾಗಿ ಸ್ಪೋಟ ಭವಿಷ್ಯವನ್ನು ಕೋಡಿಮಠದ ಶ್ರೀಗಳು ನುಡಿದಿದ್ದಾರೆ. ಅದು ಏನು ಅಂತ ಮುಂದೆ ಓದಿ.. ಹಾವೇರಿಯಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಕೋಡಿ ಮಠ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಅಂಬಲಿ ಹಳಸಿತು, ಕಂಬಳಿ ಹಾಸೀತು ಅಂತ ಹೇಳಿದ್ದೆ. ಕೈಲಾಸದಲ್ಲಿ ಕೈ ಪೂಜೆ ಮಾಡುತ್ತೆ ಎಂಬುದಾಗಿ ಸಹ ಹೇಳಿದ್ದೆ. ಹಕ್ಕಬುಕ್ಕರು ವಿಜಯನಗರ ಸಾಮ್ರಾಜ್ಯ ಉಳಿಸಿದರು. ಸಂಗೊಳ್ಳಿ ರಾಯಣ್ಣ ಕಿತ್ತೂರು ಸಾಮ್ರಾಜ್ಯ ಉಳಿಸಿದರು. ಕುರುಬ ಸಮಾಜದವರು ಪ್ರಕೃತಿಯಲ್ಲಿ ಭವಿಷ್ಯ ಕಂಡವರು. ಹಾಲು ಮತ ಸಮಾಜ ದೈವಿಬಲವುಳ್ಳ ಪುರಾತನ ಮತ ಎಂದಿದ್ದಾರೆ. ಹಾಲುಮತದಿಂದ ಅಧಿಕಾರ ಬಿಡಿಸಿಕೊಳ್ಳೋದ ಕಷ್ಟ ಎಂಬುದಾಗಿ ಹೇಳುವ ಮೂಲಕ ಸಿಎಂ ಬದಲಾವಣೆ ಕಷ್ಟ ಕಷ್ಟ ಎಂಬುದಾಗಿ ಪ್ರಾಸಂಗಿಕವಾಗಿ ಕೋಡಿಮಠ ಶ್ರೀಗಳು ಭವಿಷ್ಯ ನುಡಿದಿದ್ದಾರೆ. https://kannadanewsnow.com/kannada/attention-kadugolla-community-gane-trust-invites-applications-for-a-consultation-meeting/ https://kannadanewsnow.com/kannada/newborn-baby-found-behind-college-in-bengaluru/
ಚಿತ್ರದುರ್ಗ: ಜಿಲ್ಲೆಯಲ್ಲಿ ಗಣೆ ಟ್ರಸ್ಟ್ ಮೂಲಕ ಕಾಡುಗೊಲ್ಲ ಸಮುದಾಯದ ಅರಿವು, ಜಾಗೃತಿ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಇದೀಗ ಸಮುದಾಯದ ಯುವಕ-ಯುವತಿಯರಿಗಾಗಿ ಬುಡಕಟ್ಟು ಸಮುದಾಯದ ಸಾಹಿತ್ಯ, ಸಂಸ್ಕೃತಿ, ಅರಿವು ಎಂಬ ವಿಷಯದ ಕುರಿತಂತೆ ವಿಚಾರ ಕಮ್ಮಟವನ್ನು ಜನವರಿ.10, 11ರಂದು ಆಯೋಜಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಗಣೆ ಟ್ರಸ್ಟ್ ನ ಡಾ.ಪ್ರೇಮಾ ಅವರು ಮಾಹಿತಿ ನೀಡಿದ್ದು, ಗಣೇಟ್ರಸ್ಟ್ (ರಿ), ಹಿರಿಯೂರು, ಬುಡಕಟ್ಟು ಮಹಿಳಾ ಜಾಗೃತಿ ಮತ್ತು ಸಬಲೀಕರಣಕ್ಕಾಗಿ ಶ್ರಮಿಸುತ್ತಿರುವ ಒಂದು ಸಂಸ್ಥೆ ಆಗಿದೆ. ಈಗಾಗಲೇ ಕಾಡುಗೊಲ್ಲರ ಹಟ್ಟಿಗಳಲ್ಲಿ ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದ್ದು, ಅಂತಯೇ ಕಾಡುಗಲ್ಲ ಸಮುದಾಯದ ಯುವತಿ ಯುವಕರಿಗಾಗಿ ಬುಡಕಟ್ಟು ಸಮುದಾಯ ಸಾಹಿತ್ಯ ಸಂಸ್ಕೃತಿ ಅರಿವು ಎಂಬುವ ವಿಷಯದಡಿಯಲ್ಲಿ ತುಮಕೂರು ಜಿಲ್ಲೆ, ಶಿರಾ ತಾಲೂಕಿನಲ್ಲಿ ಇದೆ 2026 ಜನವರಿ 10 ಮತ್ತು 11 ಶನಿವಾರ ಮತ್ತು ಭಾನುವಾರ ಈ ಎರಡು ದಿನಗಳಂದು ವಿಚಾರ ಕಮ್ಮಟವನ್ನು (ವರ್ಕ್ ಷಾಪ್)ಏರ್ಪಡಿಸಲಾಗಿದೆ ಎಂದಿದ್ದಾರೆ. ಈ ಕಮ್ಮಟದಲ್ಲಿ ಕಾಡುಗೊಲ್ಲ ಬುಡಕಟ್ಟು ಸಾಹಿತ್ಯ, ಸಂಸ್ಕೃತಿ ಮತ್ತು…
ಶಿವಮೊಗ್ಗ: ಜಿಲ್ಲೆಯ ಸಾಗರದ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನಕ್ಕೆ ಚುನಾವಣೆಗೆ ಹೈಕೋರ್ಟ್ ತಡೆ, ತೆರವಿನ ಬಳಿಕ, ಇದೀಗ ಮತ್ತೆ ಮರು ನಿಗದಿ ಮಾಡಲಾಗಿದೆ. ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನಕ್ಕೆ ಚುನಾವಣೆಗೆ ದಿನಾಂಕ ಫಿಕ್ಸ್ ಮಾಡಲಾಗಿದೆ. ಈ ಕುರಿತಂತೆ ಚುನಾವಣಾಧಿಕಾರಿ ನಾಗಭೂಷಣ ಚಂದ್ರಶೇಖರ ಕಲ್ಮನೆ ಅವರು ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನಕ್ಕೆ ಮುಂದುವರೆದ ಚುನಾವಣಾ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಹೀಗಿದೆ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಚುನಾವಣಾ ವೇಳಾಪಟ್ಟಿ ದಿನಾಂಕ 26-02-2026ರಂದು ಗುರುವಾರ ಬೆಳಗ್ಗೆ 11ರಿಂದ ಸಂಜೆ 4ರವರೆಗೆ ನಾಮಪತ್ರ ಸ್ವೀಕಾರಕ್ಕೆ ಕೊನೆ ದಿನ ದಿನಾಂಕ 27-02-2026ರಂದು ನಾಮಪತ್ರ ಪರಿಶೀಲನೆ ದಿನಾಂಕ 27-02-2026ರಂದು ನಾಮಪತ್ರ ಪರಿಶೀಲನೆ ಬಳಿಕ ಅಭ್ಯರ್ಥಿಗಳ ಪಟ್ಟಿ ಪ್ರಕಟ ದಿನಾಂಕ 28-02-2026ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನ ದಿನಾಂಕ 28-02-2026ರಂದು ಸಂಜೆ 4 ಗಂಟೆಗೆ ಚಿಹ್ನೆ ಹಂಚಿಕೆ ದಿನಾಂಕ 2-03-2026ರಂದು ಸಂಜೆ 4 ಗಂಟೆಗೆ ಚಿಹ್ನೆ ಸಹಿತ ಕ್ರಮಬದ್ಧವಾಗಿ ಸ್ಪರ್ಧೆಯಲ್ಲಿರುವ ಅಭ್ಯರ್ಥಿಗಳ ಪಟ್ಟಿ ಪ್ರಕಟ ದಿನಾಂಕ 08-03-2026ರಂದು…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರಿನ ಜವಗೊಂಡನಹಳ್ಳಿ ಬಳಿಯ ಗೊರ್ಲಡಕುವಿನಲ್ಲಿ ಸೀಬರ್ಡ್ ಬಸ್ ದುರಂತ ಸಂಭವಿಸಿತ್ತು. ಈ ದುರಂತದಲ್ಲಿ ಮೃತರಾದಂತ ಐವರು ಮೃತದೇಹದ ಗುರುತು ಡಿಎನ್ಎ ವರದಿಯಿಂದ ಪತ್ತೆಯಾಗಿದೆ. ಹೀಗಾಗಿ ಕುಟುಂಬಸ್ಥರಿಗೆ ಪೊಲೀಸರು ಹಸ್ತಾಂತರಿಸಿದ್ದಾರೆ. ಡಿಸೆಂಬರ್.25, 2025ರಂದು ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದಂತ ಬಸ್ಸಿನಲ್ಲಿ ಶಿವಮೊಗ್ಗ, ಗೋಕರ್ಣ, ಕುಮಟಕ್ಕೆ ತೆರಳೋದಕ್ಕೆ 32 ಪ್ರಯಾಣಿಕರು ತೆರಳುತ್ತಿದ್ದರು. ಈ ಬಸ್ ಚಿತ್ರದುರ್ಗದ ಹಿರಿಯೂರಿನ ಗೊರ್ಲಡಕು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಲಾರಿಯೊಂದು ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡಿತ್ತು. ಈ ದುರ್ಘಟನೆಯಲ್ಲಿ ಐವರು ಸುಟ್ಟು ಕರಕಲಾಗಿದ್ದರು. ಮೃತದೇಹವನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿತ್ತು. ಅಲ್ಲಿ ಮೃತ ದೇಹದ ಮಾದರಿಯನ್ನು ಸಂಗ್ರಹಿಸಿ ಡಿಎನ್ಎ ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ಪರೀಕ್ಷೆಯ ವರದಿ ಬಂದಿದ್ದು, ಮೃತ ಐವರ ಗುರುತು ಪತ್ತೆಯಾಗಿದೆ. ಹೀಗಾಗಿ ಮೃತ ದೇಹವನ್ನು ಪೊಲೀಸರು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ. ಅಂದಹಾಗೇ ಮೃತ ರಶ್ಮೀ ಮಹಾಲೆ ಮೃತದೇಹವನ್ನು ಅವರ ಸಹೋದರ ವಿನಾಯಕಗೆ ಹಸ್ತಾಂತರಿಸಿದರೇ, ಬೆಂಗಳೂರಿನ ಬಿಂದು ಮತ್ತು ಅವರ ಮಗಳು ಗ್ರಿಯಾ ಮೃತದೇಹವನ್ನು ಬಿಂದು ಪತ್ನಿ ದರ್ಶನ್ ಗೆ…
ಚಿತ್ರದುರ್ಗ: ಜಿಲ್ಲೆಯ ಜವಗೊಂಡನಹಳ್ಳಿಯ ಗೊರ್ಲಡಕು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್ ಹಾಗೂ ಬಸ್ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿತ್ತು. ಈ ಅಪಘಾತದ ಬಳಿಕ ಬೆಂಕಿ ಕಾಣಿಸಿಕೊಂಡು ಬಸ್ ಸಂಪೂರ್ಣ ಸುಟ್ಟು ಭಸ್ಮವಾಗಿತ್ತು. ಈ ದುರಂತದಲ್ಲಿ 7 ಮಂದಿ ಮೃತಪಟ್ಟಿದ್ದರು. ಅವರಲ್ಲಿ ಇಬ್ಬರು ಯುವತಿಯರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಚಿತ್ರದುರ್ಗದ ಜವಗೊಂಡನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯ ಬಸ್ ಅಪಘಾತ ಪ್ರಕರಣದಲ್ಲಿ ಮೃತಪಟ್ಟ ಹಾಸನ ಜಿಲ್ಲೆಯ ಇಬ್ಬರು ಯುವತಿಯ ಮೃತದೇಹವನ್ನು ಹಸ್ತಾಂತರಿಸಲಾಗಿದೆ. ಚಿತ್ರದುರ್ಗ ಜಿಲ್ಲಾಸ್ಪತ್ರೆ ಶವಾಗಾರದ ಬಳಿ ಪೋಷಕರಿಗೆ ಹಸ್ತಾಂತರಿಸಲಾಗಿದೆ. ಡಿಎನ್ಎ ಪರೀಕ್ಷೆ ವರದಿ ಆಧರಿಸಿ ನವ್ಯಾ, ಮಾನಸಾ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. ಇಂದು ನವ್ಯಾ, ಮಾನಸಾ ಅವರ ಶವದ ಅಂತ್ಯ ಸಂಸ್ಕಾರವನ್ನು ಕುಟುಂಬಸ್ಥರು ಹಾಸನದ ಎ.ಅಂಕನಹಳ್ಳಿಯಲ್ಲಿ ನೆರವೇರಿಸಲಿದ್ದಾರೆ. ಕಾಳೇನಹಳ್ಳಿ ಸ್ಮಶಾನದಲ್ಲಿ ಮಾನಸಾ ಅಂತ್ಯಕ್ರಿಯೆ ನೆರವೇರಿಸಲಿದ್ದಾರೆ. https://kannadanewsnow.com/kannada/newborn-baby-found-behind-college-in-bengaluru/
ಬೆಂಗಳೂರು: ನಗರದ ಪ್ರತಿಷ್ಠಿತ ಕಾಲೇಜು ಒಂದರ ಹಿಂಭಾಗದಲ್ಲೇ ನವಜಾತ ಶಿಶುವೊಂದು ಪತ್ತೆಯಾಗಿರುವಂತ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಮಾಗಡಿ ರಸ್ತೆಯ ಎಎಸ್ ಸಿ ಕಾಲೇಜು ಹಿಂಭಾಗದಲ್ಲಿ ನವಜಾತ ಶಿಶು ಪತ್ತೆಯಾಗಿದೆ. ನಿನ್ನೆ ಜನಿಸಿರುವಂತ ಮಗುವನ್ನು ಎಸೆದು ಹೋಗಿರೋದಾಗಿ ಹೇಳಲಾಗುತ್ತಿದೆ. ಮಾಗಡಿ ರಸ್ತೆ ಪೊಲೀಸರಿಂದ ನವಜಾತ ಶಿಶುವನ್ನು ರಕ್ಷಣೆ ಮಾಡಲಾಗಿದೆ. ವಾಣಿ ವಿಲಾಸ ಆಸ್ಪತ್ರೆಗೆ ಶಿಶುವನ್ನು ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/sharavati-pumped-storage-project-25-talakalale-villagers-agree-to-give-their-land-write-to-mla/
ವೈಕುಂಠ ದ್ವಾರ ಎಂದರೇನು? ವೈಕುಂಠ ಏಕಾದಶಿಯಂದು ದೇವಸ್ಥಾನಗಳಲ್ಲಿ ತೆರೆಯುವ ಉತ್ತರ ದ್ವಾರವನ್ನೇ “ವೈಕುಂಠ ದ್ವಾರ” ಎಂದು ಕರೆಯುತ್ತಾರೆ. ಆದರೆ ಇದು ಬರೀ ದೇವಾಲಯದ ಬಾಗಿಲಲ್ಲ… ಇದು ಮೋಕ್ಷದ ಸಂಕೇತ, ಇದು ಅಂತರಂಗ ಶುದ್ಧಿಯ ಕರೆ.. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ಶಾಸ್ತ್ರೀಯ ಅರ್ಥ – ಪುರಾಣಗಳ ಪ್ರಕಾರ ಈ ದಿನ ಭಗವಂತನು ಭಕ್ತರಿಗೆ ಹೀಗೆ ಅನುಗ್ರಹಿಸಿದನೆಂದು ಹೇಳಲಾಗುತ್ತದೆ – “ನನ್ನನ್ನು ಶ್ರದ್ಧೆಯಿಂದ ಸ್ಮರಿಸುವವರಿಗೆ ನಾನು ಸ್ವತಃ ವೈಕುಂಠದ ದಾರಿ ತೆರೆದು ಕೊಡುತ್ತೇನೆ” ಹಾಗದರೆ ನಿಜವಾದ ವೈಕುಂಠ ದ್ವಾರ ಎಲ್ಲಿದೆ? ಬಾಗಿಲು ದೇವಸ್ಥಾನದಲ್ಲಿ… ಆದರೆ ವೈಕುಂಠ ನಮ್ಮ ಹೃದಯದಲ್ಲಿದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ…
ಶಿವಮೊಗ್ಗ: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಪರಿಸರಕ್ಕೆ ಮಾರಕ, ಮಾಡಬಾರದು ಎಂಬುದು ಪರಿಸರ ವಾದಿಗಳು, ರೈತರ ಒತ್ತಾಯವಾಗಿದೆ. ಇದರ ನಡುವೆ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ನಮ್ಮ ಜಮೀನು ಬಿಟ್ಟುಕೊಡಲು ಸಿದ್ಧರಿದ್ದೇವೆ ಎಂಬುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರಿಗೆ 25 ತಲಕಳಲೆ ಗ್ರಾಮಸ್ಥರು ಪತ್ರ ಬರೆದಿದ್ದಾರೆ. ಈ ಕುರಿತಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ತಳಕಳಲೆ ಗ್ರಾಮಸ್ಥರು ಪತ್ರ ಬರೆದಿದ್ದು, ಅದರಲ್ಲಿ ನಾವು ಸಾಗರ ತಾಲ್ಲೂಕಿನ ಭಾರಂಗಿ ಹೋಬಳಿಯ ತಳಕಳಲೆ ಗ್ರಾಮದ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯ ವ್ಯಾಪ್ತಿಯಲ್ಲಿ ಕೃಷಿ ಜಮೀನು ಹೊಂದಿದ್ದೇವೆ. ಸರ್ಕಾರದಿಂದ ಮಂಜೂರಾತಿ ಪಡೆದು ಕಂದಾಯ ಜಮೀನು ಹೊಂದಿರುತ್ತೇವೆ. ಸರ್ಕಾರದ ಮಹತ್ತರವಾದ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯು ಸುಗಮವಾಗಿ ಕಾರ್ಯಗತವಾಗಲು ಅನುಕೂಲವಾಗುವಂತೆ ನಾವುಗಳು ನಮ್ಮ ಕೃಷಿ ಜಮೀನನ್ನು ಸರ್ಕಾರಕ್ಕೆ ಷರತ್ತುಬದ್ಧವಾಗಿ ನೀಡಲು ಚಿಂತನೆ ಮಾಡಿರುತ್ತೇವೆ ಎಂದಿದ್ದಾರೆ. ನಾವು ಸುಮಾರು 25 ಕೃಷಿ ಕುಟುಂಬದವರು ಹೊಂದಿರುವ ಕೃಷಿ ಜಮೀನನ್ನು ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯ ಸುರಂಗ ಮಾರ್ಗದಲ್ಲಿ ಹೊರತೆರೆಯುವ ಸುಮಾರು 18…
ಬೆಂಗಳೂರು: ನವ ವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಈಗ ಹೊಸ ಟ್ವಿಸ್ಟ್ ಸಿಕ್ಕಿಗೆ. ಗಾನವಿ ಮತ್ತೊಬ್ಬ ಹುಡುಗನನ್ನು ಪ್ರೀತಿಸುತ್ತಿದ್ದ ಬಗ್ಗೆ ತಿಳಿದು ಬಂದಿದೆ. ಈ ಹಿನ್ನಲೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ಹೇಳಲಾಗುತ್ತಿದೆ. ಹೀಗಾಗಿ ಆತ್ಮಹತ್ಯೆ ಮಾಡಿಕೊಂಡ ಗಾನವಿ ಕುಟುಂಬಸ್ಥರ ವಿರುದ್ಧ, ಸೂರಜ್ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದಾರೆ. ನವ ವಿವಾಹಿತೆ ಗಾನವಿ ಆತ್ಮಹತ್ಯೆ ಬೆನ್ನಲ್ಲೇ ಪತಿ ಸೂರಜ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದರು. ಇದೇ ಸಂದರ್ಭದಲ್ಲಿ ಸೂರಜ್ ಮೇಲೆ ಗಾನವಿ ಕುಟುಂಬದವರು ವರದಕ್ಷಿಣೆ ಕಿರುಕುಳ ಆರೋಪ ಮಾಡಿದ್ದರು. ಅಲ್ಲದೇ ಸೂರಜ್ ಕುಟುಂಬದ ವಿರುದ್ಧ ದೂರು ನೀಡಿದ್ದರಿಂದ ಸೂರಜ್ ತಾಯಿ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದರು. ಈ ಘಟನೆಯ ನಡುವೆ ಗಾನವಿ-ಸೂರಜ್ ಮದುವೆಯ ಬಳಿಕ ಹನಿಮೂನ್ ಗೆ ಶ್ರೀಲಂಕಾಗೆ ತೆರಳಿದ್ದರು. ಆ ವೇಳೆಯಲ್ಲೇ ಗಾನವಿ ತಾನು ಹರ್ಷ ಎಂಬಾತನನ್ನು ಪ್ರೀತಿಸುತ್ತಿದ್ದೇನೆ.ಆತನನ್ನೇ ಮದುವೆಯಾಗೋದಕ್ಕೂ ನಿರ್ಧರಿಸಿದ್ದೆ. ಆದರೇ ಮನೆಯವರ ಒತ್ತಾಯಕ್ಕೆ ಮಣಿದು ನಿಮ್ಮನ್ನು ಮದುವೆಯಾಗಬೇಕಾಯಿತು ಎಂದು ತಿಳಿಸಿದ್ದಳು. ಈ ಎಲ್ಲಾ ವಿಷಯವನ್ನು ಕೇಳಿದಂತ ಸೂರಜ್ ತನ್ನ ಹನಿಮೂನ್ ಟ್ರಿಪ್ ಅರ್ಧಕ್ಕೆ…
ಶಿವಮೊಗ್ಗ: ಸಾಗರದಲ್ಲಿ ಕೆಲವು ಸೈಬರ್ಗಳಲ್ಲಿ ನಕಲಿ ಕಾರ್ಮಿಕರ ಕಾರ್ಡ್ ಮಾಡಿಕೊಡುತ್ತಿರುವುದು ನನ್ನ ಗಮನಕ್ಕೆ ಬಂದಿದ್ದು, ನಕಲಿ ಕಾರ್ಡ್ ಮಾಡಿಕೊಡುವವರು ಮತ್ತು ನಕಲಿ ಕಾರ್ಡ್ ಮಾಡಿಸಿಕೊಳ್ಳುವವರನ್ನು ಜೈಲಿಗೆ ಕಳಿಸಲಾಗುತ್ತದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಎಚ್ಚರಿಕೆ ನೀಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ನಗರಸಭೆ ರಂಗಮಂದಿರದಲ್ಲಿ ಶ್ರಮಜೀವಿ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪದಾಧಿಕಾರಿಗಳ ಪದಗ್ರಹಣ, ಟೀಶರ್ಟ್ ವಿತರಣೆ, ಹಿರಿಯ ಕಾರ್ಮಿಕರಿಗೆ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದಂತ ಅವರು, ಸರ್ಕಾರ ಕಾರ್ಮಿಕರಿಗೆ ನೀಡುವ ಸೌಲಭ್ಯ ನೈಜ ಕಾರ್ಮಿಕರಿಗೆ ತಲುಪಬೇಕು. ಕಾರ್ಮಿಕರಿಗೆ ವಂಚನೆಯಾಗುವುದನ್ನು ಸಹಿಸಿಕೊಳ್ಳುವುದಿಲ್ಲ. ತಾಲ್ಲೂಕಿನಲ್ಲಿ ಕಾರ್ಮಿಕ ಸ್ನೇಹಿ ಅಧಿಕಾರಿಗಳಿಗೆ ಮಾತ್ರ ಅವಕಾಶ ಇದ್ದು, ಕಾರ್ಮಿಕರನ್ನು ಶೋಷಣೆ ಮಾಡುವ ಅಧಿಕಾರಿಯನ್ನು ಬೇರೆಡೆ ಕಳಿಸಲಾಗುತ್ತದೆ. ಕಾರ್ಮಿಕರಿಗೆ ಎಂತಹ ಸಮಸ್ಯೆ ಬಂದರೂ ನಿಮ್ಮ ಕುಟುಂಬದವನಾಗಿ ಅದನ್ನು ಬಗೆಹರಿಸಲು ಬೇಳೂರು ನಿಮ್ಮ ಜೊತೆ ಇರುತ್ತಾನೆ. ಗೋಪಾಲಕೃಷ್ಣ ಬೇಳೂರು ಮನೆಗೆ ಬಾಗಿಲು ಇಲ್ಲ. ಬೆಳಿಗ್ಗೆ 7ರಿಂದ 10ರವರೆಗೆ…














