Subscribe to Updates
Get the latest creative news from FooBar about art, design and business.
Author: kannadanewsnow09
ಬಳ್ಳಾರಿ: ಮಾಜಿ ಸಚಿವರಾದ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಅವರ ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ. ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತು ಹಾಕಲು ಬಿಜೆಪಿ ಹಳ್ಳಿ ಹಳ್ಳಿಗೆ ತೆರಳಿ ಹೋರಾಟ ನಡೆಸುತ್ತದೆ. ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಜೊತೆಗೆ ಬಿಜೆಪಿ ಯಾವಾಗಲೂ ಇರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಬಳ್ಳಾರಿಯಲ್ಲಿ ಪೋಸ್ಟರ್ ಹಾಕುವ ವಿಚಾರದಲ್ಲಿ ನಡೆದ ಗಲಾಟೆ ವಿರೋಧಿಸಿ ನಡೆದ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾವು ಶೆಡ್ಡು ಹೊಡೆದು ಸಂಗ್ರಾಮಕ್ಕೆ ತಯಾರಾಗಬೇಕು. ಕಾಂಗ್ರೆಸ್ ನ ಎರಡೂವರೆ ವರ್ಷದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ದಿನ ನಿತ್ಯ ಕೊಲೆ ರೇಪು ಸುದ್ದಿ ಕೇಳಿ ಸಾಕಾಗಿದೆ. ಹಲವಾರು ರೀತಿಯಲ್ಲಿ ಪೊಲಿಸರ ದಬ್ಬಾಳಿಕೆ ಇಡೀ ರಾಜ್ಯದಲ್ಲಿ ಇದೆ. ಬಳ್ಳಾರಿಯಲ್ಲಿ ಈ ಘಟನೆ ಆಗಲು ಎರಡು ಕಾರಣ ಜನಾರ್ದನ ರೆಡ್ಡಿ ಕೋರ್ಟಿನ ಆದೇಶದ ಪ್ರಕಾರ ಬಳ್ಳಾರಿಗೆ ಬಂದಿದ್ದರಿಂದ ತಮಗೆ ಉಳಿಗಾಲವಿಲ್ಲ ಎಂದು, ಜನಾರ್ದರೆಡ್ಡಿ ಮತ್ತು ಅವರ ಆತ್ಮೀಯ ಸ್ನೇಹಿತ ರಾಮುಲು…
ಗದಗ: ಲಕ್ಕುಂಡಿಯಲ್ಲಿ ಉತ್ಖನನದ ವೇಳೆಯಲ್ಲಿ ಶಿವಲಿಂಗ ಪೀಠದ ಪ್ರಾಶ್ಚಾವಶೇಷ ಪತ್ತೆಯಾಗಿದೆ. ಆ ಮೂಲಕ ಉತ್ಖನನದ ವೇಳೆ ಮತ್ತಷ್ಟು ಪ್ರಾಚೀನ ಅವಶೇಷಗಳು ಪತ್ತೆಯಾಗೋ ಸಾಧ್ಯತೆ ಇದೆ. ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ಉತ್ಖನನದ ವೇಳೆಯಲ್ಲಿ ಶಿವಲಿಂಗ ಪೀಠದ ಪ್ರಾಶ್ಚಾವಶೇಷ ಪತ್ತೆಯಾಗಿದೆ. ಇದಲ್ಲದೇ ಒಡೆದ ಮಣ್ಣಿನ ಮಡಕೆಯ ಚೂರುಗಳು ಕೂಡ ಪತ್ತೆಯಾಗಿವೆ. ಉತ್ಖನನದ ವೇಳೆಯಲ್ಲಿ ಕುತೂಹಲದಿಂದ ಕಾರ್ಮಿಕರು ಸಿಕ್ಕ ವಸ್ತುಗಳನ್ನು ಸಂಗ್ರಹಿಸುತ್ತಿದ್ದಾರೆ. ಇನ್ನೂ ಹಲವು ಪ್ರಾಚೀನ ವಸ್ತುಗಳು ಸಿಗುವ ನಿರೀಕ್ಷೆಯಿದ್ದು ಉತ್ಖನನ ಕಾರ್ಯವನ್ನು ಮುಂದುವರೆಸಲಾಗಿದೆ. https://kannadanewsnow.com/kannada/8-08-lakh-fine-collected-from-4353-people-who-travelled-without-tickets-in-ksrtc-buses/
ಬೆಂಗಳೂರು: ನಗರದಲ್ಲಿ ಟಿಕೇಟ್ ಇಲ್ಲದೆ ಪ್ರಯಾಣಿಸಿದ 4353 ಪ್ರಯಾಣಿಕರಿಂದ ಬರೋಬ್ಬರಿ 8.08 ಲಕ್ಷ ದಂಡವನ್ನು ವಸೂಲಿ ಮಾಡಿ, ಬಿಸಿ ಮುಟ್ಟಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೆ ಎಸ್ ಆರ್ ಟಿ ಸಿ ಮಾಹಿತಿ ನೀಡಿದ್ದು, ಡಿಸೆಂಬರ್-2025ರ ಮಾಹೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ತನಿಖಾ ತಂಡಗಳಿAದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 43553 ವಾಹನಗಳನ್ನು ತನಿಖೆಗೊಳಪಡಿಸಿ 4207 ಪ್ರಕರಣಗಳನ್ನು ಪತ್ತೆಹಚ್ಚಿ, 4353 ಟಿಕೇಟ್ ರಹಿತ ಪ್ರಯಾಣಿಕರಿಂದ 8,08,704/-ರೂ ಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಿರುತ್ತಾರೆ. ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 1,14,500/- ರೂಗಳನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ, ಹಾಗೂ ತಪ್ಪಿತಸ್ಥರ ವಿರುದ್ದ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ ಎಂದಿದೆ. ಆದ್ದರಿಂದ ಸಾರ್ವಜನಿಕ ಪ್ರಯಾಣಿಕರು, ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೇಟ್/ ಪಾಸ್ ಪಡೆದು ಪ್ರಯಾಣ ಮಾಡುವಂತೆ, ನಿಗಮವು ಈ ಮೂಲಕ ಪ್ರಯಾಣಿಕರಲ್ಲಿ ಕೋರಿದೆ. https://kannadanewsnow.com/kannada/excise-dc-lokayukta-arrested-while-accepting-bribe-of-rs-25-lakh-in-bengaluru/
ಬೆಂಗಳೂರು: ನಗರದಲ್ಲಿ 25 ಲಕ್ಷ ಲಂಚ ಸ್ವೀಕರಿಸುತ್ತಿದ್ದಂತ ಸಂದರ್ಭದಲ್ಲಿ ಅಬಕಾರಿ ಡಿಸಿ ಒಬ್ಬರನ್ನು ಲೋಕಾಯುಕ್ತ ಪೊಲೀಸರು ಬಂಧಿಸಲಾಗಿದೆ. ಬೆಂಗಳೂರಲ್ಲಿ ಲೋಕಾಯುಕ್ತ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಬರೋಬ್ಬರಿ 25 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿಯೇ ಡಿಸಿ ಜಗದೀಶ್ ನನ್ನು ಬಂಧಿಸಿದ್ದಾರೆ. ಬೆಂಗಳೂರು ಅಬಕಾರಿ ಡಿಸಿ ಜಗದೀಶ್ ನಾಯ್ಕ್ ಬಂಧಿಸಿದ್ದಾರೆ. ಬ್ಯಾಟರಾಯನಪುರದ ಅಬಕಾರಿ ಕಚೇರಿಯಲ್ಲಿ 25 ಲಕ್ಷ ಲಂಚ ಪಡೆಯುತ್ತಿದ್ದಂತ ಸಂದರ್ಭದಲ್ಲಿ ಅಬಕಾರಿ ಡಿಸಿ ಜಗದೀಶ್ ನಾಯ್ಕ್, ಅಧೀಕ್ಷಕ ತಮ್ಮಣ್ನ ಹಾಗೂ ಕಾನ್ ಸ್ಟೇಬಲ್ ಲಕ್ಕಪ್ಪ ಎಂಬುವರನ್ನು ಬಂಧಿಸಿದ್ದಾರೆ. https://kannadanewsnow.com/kannada/good-news-for-ex-servicemen-application-deadline-for-childrens-scholarship-extended/
ಬೆಂಗಳೂರು: ನಗರದಲ್ಲಿ ಬೃಹತ್ತಾದ, ಸಾರ್ವಜನಿಕ ಉದ್ದೇಶವುಳ್ಳ, ಲೋಕೋಪಕಾರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ತೆರೆಯಲು ಕರ್ನಾಟಕ ಸರ್ಕಾರ (ಸರ್ಕಾರ) ಮತ್ತು ಅಜೀಂ ಪ್ರೇಮ್ಜಿ ಫೌಂಡೇಷನ್ (ಫೌಂಡೇಷನ್) ಪಾಲುದಾರಿಕೆಗೆ ಕೈ ಜೋಡಿಸಿವೆ. ಈ ಆಸ್ಪತ್ರೆಯನ್ನು 1000 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ಅಭಿವೃದ್ಧಿಪಡಿಸಲಾಗುತ್ತಿದ್ದು ಈ ಮೂಲಕ ದುರ್ಬಲ ವರ್ಗಗಳು ಮತ್ತು ಸೂಕ್ತ ಸೇವೆಗಳಿಂದ ವಂಚಿತರಾದ ಜನರಿಗೆ ಉತ್ತಮ ಗುಣಮಟ್ಟದ ಆರೈಕೆಯನ್ನು ಒದಗಿಸುವ ಉದ್ದೇಶವನ್ನು ಹೊಂದಿದೆ. ಒಟ್ಟಾರೆ ಶೇಕಡಾ 75 ರಷ್ಟು ಹಾಸಿಗೆಗಳನ್ನು ರೋಗಿಗಳಿಗೆ ಉಚಿತವಾಗಿ ಒದಗಿಸುವ ಗುರಿ ಹೊಂದಲಾಗಿದ್ದು, ಉಳಿದ ಹಾಸಿಗೆಗಳಿಗೆ ತೃತೀಯ ಹಂತದ ಆರೈಕೆ ಒದಗಿಸುವ ಸರ್ಕಾರಿ ಆಸ್ಪತ್ರೆಗಳ ದರಕ್ಕೆ ಸರಿಸಮಾನವಾದ ದರವನ್ನು ವಿಧಿಸಲಾಗುತ್ತದೆ. ಈ ಆಸ್ಪತ್ರೆಯು ವಿವಿಧ ಸ್ಪೆಷಾಲಿಟಿಗಳನ್ನು ಒದಗಿಸಲಿದ್ದು, ಅಂಗಾಂಗ ಕಸಿಗೆ ವಿಶೇಷ ಒತ್ತನ್ನು ನೀಡಲಾಗುತ್ತದೆ. ಅಲ್ಲದೆ ಇದು ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನೆಗೆ ತನ್ನ ಕೊಡುಗೆಯನ್ನು ನೀಡಲಿದೆ. ಈ ಉಪಕ್ರಮವು, ಅತ್ಯಾಧುನಿಕ ತೃತೀಯ ಹಂತದ ಆರೈಕೆಯ ಲಭ್ಯತೆಯನ್ನು ವಿಸ್ತರಿಸುವ ಮೂಲಕ ನಗರದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುವ ಮತ್ತು…
ಬೆಂಗಳೂರು: 2025-26ನೇ ಸಾಲಿನಲ್ಲಿ ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ/ಡಿಪ್ಲೋಮಾ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳ ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಸುವ ದಿನಾಂಕವನ್ನು ಜ. 31 ರವರೆಗೆ ವಿಸ್ತರಿಸಲಾಗಿದ್ದು, ಕೇಂದ್ರೀಯ ಸೈನಿಕ ಮಂಡಳಿ ಮತ್ತು ಇತರೆ ಸರ್ಕಾರಿ ಮೂಲಗಳಿಂದ ಯಾವುದೇ ಶಿಷ್ಯವೇತನವನ್ನು ಪಡೆಯದಿರುವ ಮಾಜಿ ಸೈನಿಕರ ಮಕ್ಕಳಿಗೆ ಅರ್ಜಿಯನ್ನು ಸಲ್ಲಿಸಬಹುದುದಾಗಿರುತ್ತದೆ. ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಛೇರಿಯಲ್ಲಿ ಶುಲ್ಕ ರಹಿತ ಅರ್ಜಿಗಳನ್ನು ವಿತರಿಸಲಾಗುತ್ತಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ಜ. 31 ರೊಳಗಾಗಿ ಉಪನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಛೇರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ. 08182-220925 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/does-bharat-reddy-have-the-strength-to-burn-down-janarthana-reddys-house-question-from-the-deceitful-narayanaswamy/
ಬಳ್ಳಾರಿ: ಭರತ್ ರೆಡ್ಡಿಯವರು 5 ನಿಮಿಷ ಸಾಕು; ಜನಾರ್ಧನ ರೆಡ್ಡಿಯವರ ಮನೆ ಸುಟ್ಟು ಭಸ್ಮ ಮಾಡುತ್ತೇನೆ ಎಂದಿದ್ದಾರೆ. ಇದು ಶಾಸಕರು ಆಡುವ ಮಾತೇ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಶ್ನಿಸಿದರು. ಬಿಜೆಪಿ ವತಿಯಿಂದ ಬಳ್ಳಾರಿಯಲ್ಲಿ ಇಂದು ಕಾಂಗ್ರೆಸ್ ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಂಥ ಭಸ್ಮಾಸುರನಿಗೆ ಜನ್ಮ ಕೊಟ್ಟಿದ್ದಾರೆ ಈ ಬಳ್ಳಾರಿಯಲ್ಲಿ ಎಂದು ಕಳವಳ ವ್ಯಕ್ತಪಡಿಸಿದರು. ಇವತ್ತಲ್ಲ ನಾಳೆ ಜನಾರ್ಧನ ರೆಡ್ಡಿ ಮುಗಿಸಿ ಬಿಡುವುದಾಗಿ ಹೇಳುತ್ತೀರಿ. ಏನು ಅಷ್ಟೂ ತಾಕತ್ತಿದೆಯೇ ನಿಮಗೆ ಎಂದು ಸವಾಲು ಹಾಕಿದರು. ನಾವೂ ನೋಡುತ್ತೇವೆ; ನಾವು ಯಾವುದಕ್ಕೂ ಹೆದರುವ ಮಕ್ಕಳಲ್ಲ. ನಾವೂ ಇಳಿಯುತ್ತೇವೆ. ನಿಮ್ಮಂತೆ ದುಂಡಾವರ್ತಿ ಮಾಡುವುದಿಲ್ಲ. ಡಾ. ಬಾಬಾಸಾಹೇಬ ಅಂಬೇಡ್ಕರರು ಕೊಟ್ಟ ಸಂವಿಧಾನದ ಅಡಿಯಲ್ಲೇ ನಿಮಗೆ ಪಾಠ ಕಲಿಸಲು ಸಾಧ್ಯವಿದೆ. ಅದನ್ನು ಕಲಿಸಿ ತೋರಿಸುತ್ತೇವೆ ಎಂದು ತಿಳಿಸಿದರು. ನೀವು ಕೋಪ ಮಾಡಿಕೊಂಡು ಮೂಗು ಕುಯ್ದು ಹಾಕಿದರೆ ಅದು ಮತ್ತೆ ಬೆಳೆಯದು ಎಂದು ಜನಾರ್ಧನ ರೆಡ್ಡಿ…
ರಾಯಚೂರು: ಜಿಲ್ಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ, ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವಂತ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ದೇವದುರ್ಗದ ಸಿರವಾರ ಕ್ರಾಸ್ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಕಾರು ಚಾಲಾಯಿಸುತ್ತಿದ್ದಂತ ಶಾಂತಪ್ಪ(62) ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಖಾಸಗಿ ಶಾಲೆಯಲ್ಲಿ ಶಿಕ್ಷಕರಾಗಿ ಶಾಂತಪ್ಪ ಕೆಲಸ ಮಾಡುತ್ತಿದ್ದರು. ಚಾಲನೆ ವೇಳೆಯಲ್ಲಿ ನಿಯಂತ್ರಣ ತಪ್ಪಿ ಸಿರವಾರ ಕ್ರಾಸ್ ನಲ್ಲಿ ಪಲ್ಟಿಯಾಗಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದಂತ ಮಾರೆಪ್ಪ, ಶಿನು ಪವಾರ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಬೆಂಗಳೂರು: 2026ನೇ ಸಾಲಿನ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಅನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದ್ದು, ಫೆಬ್ರುವರಿ 16ರವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಕೆಇಎ ವೆಬ್ ಸೈಟ್ ನಲ್ಲಿ ಲಿಂಕ್ ಬಿಡುಗಡೆ ಮಾಡಿದ್ದು, ಅರ್ಜಿ ಶುಲ್ಕ ಪಾವತಿಸಲು ಫೆ.18 ಕೊನೆ ದಿನ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಎಂಜಿನಿಯರಿಂಗ್, ಪಶು ವೈದ್ಯಕೀಯ, ಕೃಷಿ ವಿಜ್ಞಾನ ಸೇರಿದಂತೆ ಇತರ ವೃತ್ತಿಪರ ಕೋರ್ಸ್ ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)/ ಕೌನ್ಸೆಲಿಂಗ್ ಮತ್ತು ವೈದ್ಯಕೀಯ ಕೋರ್ಸ್ ಗಳಿಗೆ ನೀಟ್ ಅಂಕಗಳ ಆಧಾರದ ಮೇಲೆ ಕೇವಲ ಸೀಟು ಹಂಚಿಕೆಯನ್ನು ಪ್ರಾಧಿಕಾರ ಮಾಡಲಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅರ್ಜಿ ಸಲ್ಲಿಸಲು ಸಾಕಷ್ಟು ಸಮಯ ನೀಡಿರುವ ಕಾರಣ ಅಭ್ಯರ್ಥಿಗಳು ಸಾವಧಾನದಿಂದ ಸಿಇಟಿ ಮಾಹಿತಿಯನ್ನು ಓದಿ, ಮನನ ಮಾಡಿಕೊಂಡ ನಂತರ ಅರ್ಜಿ ಭರ್ತಿ ಮಾಡಬೇಕು. ಅಭ್ಯರ್ಥಿಗಳು ತಮಗೆ ಅನ್ವಯವಾಗುವ ಮೀಸಲಾತಿಗಳಿಗೆ ಪೂರಕವಾಗಿ ದಾಖಲೆಗಳನ್ನು ಸಿದ್ಧ ಮಾಡಿಟ್ಟುಕೊಂಡು…
ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ವೇತನ ಪಾವತಿಯು ಎನ್ ಹೆಚ್ ಎಂ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನೌಕರರಿಗೆ, ಆಶಾ ಕಾರ್ಯಕರ್ತೆಯರಿಗೆ ವಿಳಂಬಗೊಂಡಿತ್ತು. ಇದೀಗ ತಾಂತ್ರಿಕ ಸಮಸ್ಯೆಯಿಂದ ಉಂಟಾದಂತ ತೊಂದರೆ ನಿವಾರಿಸಿ, ಶೀಘ್ರವೇ ಬಾಕಿ ವೇತನ ಪಾವತಿಸುವುದಾಗಿ ರಾಜ್ಯ ಸರ್ಕಾರ ಸ್ಪಷ್ಟ ಪಡಿಸಿದೆ. ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರಾಷ್ಟ್ರೀಯ ಆರೋಗ್ಯ ಅಭಿಯಾನ(NHM), ಕರ್ನಾಟಕದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಒಪ್ಪಂದಾಧಾರಿತ ನೌಕರರು ಹಾಗೂ ASHA ಕಾರ್ಯಕರ್ತರಿಗೆ 2025ರ ನವೆಂಬರ್ ಮತ್ತು ಡಿಸೆಂಬರ್ ತಿಂಗಳ ವೇತನ ಮತ್ತು ಪ್ರೋತ್ಸಾಹಧನ ಪಾವತಿಯಲ್ಲಿ ಸಂಭವಿಸಿದ ವಿಳಂಬದ ಕುರಿತು ಈ ಮೂಲಕ ಸ್ಪಷ್ಟನೆ ನೀಡಲಾಗುತ್ತಿದೆ ಎಂದಿದೆ. ಭಾರತ ಸರ್ಕಾರದ ಮಾರ್ಗಸೂಚಿಗಳಂತೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯನ್ನು ಆರ್ಥಿಕ ವರ್ಷದ ಮಧ್ಯಭಾಗದಲ್ಲಿ SNA-SPARSH ಎಂಬ ಹೊಸ ಹಣಕಾಸು ವ್ಯವಸ್ಥೆಗೆ ವರ್ಗಾಯಿಸಲಾಗಿದೆ. ಹಿಂದಿನ ವ್ಯವಸ್ಥೆಯಿಂದ ಹೊಸ ವ್ಯವಸ್ಥೆಗೆ ವರ್ಗಾವಣೆಯಾಗುವ ಸಂದರ್ಭದಲ್ಲಿ, ಕೇಂದ್ರ ಮತ್ತು ರಾಜ್ಯ ಮಟ್ಟಗಳಲ್ಲಿ ನಿಧಿ ಬಿಡುಗಡೆ ಹಾಗೂ ಪಾವತಿ ಪ್ರಕ್ರಿಯೆಗಳಲ್ಲಿ ತಾಂತ್ರಿಕ…














