Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿ (CCPA) ಬುಧವಾರ, ಮುಂಬರುವ ಸಂಸತ್ತಿನ ಬಜೆಟ್ ಅಧಿವೇಶನದ ಪ್ರಮುಖ ದಿನಾಂಕಗಳನ್ನು ಅನುಮೋದಿಸಿದೆ. ಸಂಸದೀಯ ಕ್ಯಾಲೆಂಡರ್ ಪ್ರಕಾರ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1, ಭಾನುವಾರದಂದು 2026-27ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಮಂಡಿಸಲಿದ್ದಾರೆ. ಇದರೊಂದಿಗೆ, ಕೇಂದ್ರ ಬಜೆಟ್ ಅನ್ನು ಭಾನುವಾರದಂದು ಮಂಡಿಸಲಾಗುತ್ತಿರುವುದು ಇದೇ ಮೊದಲು. ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿಗಳು ಜನವರಿ 28 ರಂದು ಭಾಷಣ ಮಾಡಲಿದ್ದು, ಬಜೆಟ್ ಅಧಿವೇಶನ ಆರಂಭವಾಗಲಿದೆ. ಜನವರಿ 29 ರಂದು ಆರ್ಥಿಕ ಸಮೀಕ್ಷೆಯನ್ನು ಸಂಸತ್ತಿನಲ್ಲಿ ಮಂಡಿಸಲಾಗುವುದು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸತತ ಎಂಟನೇ ಕೇಂದ್ರ ಬಜೆಟ್ ಅನ್ನು ಮಂಡಿಸಲಿದ್ದಾರೆ. ಇದು ಸ್ವಾತಂತ್ರ್ಯದ ನಂತರದ 80 ನೇ ಬಜೆಟ್ ಕೂಡ ಆಗಿರುತ್ತದೆ. 2017 ರಿಂದ, ಫೆಬ್ರವರಿ 28 ರ ಹಿಂದಿನ ಸಂಪ್ರದಾಯದಿಂದ ಮುಂದುವರೆದ ನಂತರ, ಫೆಬ್ರವರಿ 1 ರಂದು ಬೆಳಿಗ್ಗೆ 11 ಗಂಟೆಗೆ ಕೇಂದ್ರ ಬಜೆಟ್ ಮಂಡಿಸುವ ಅಭ್ಯಾಸವನ್ನು…
ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿ (CCPA) ಬುಧವಾರ, ಮುಂಬರುವ ಸಂಸತ್ತಿನ ಬಜೆಟ್ ಅಧಿವೇಶನದ ಪ್ರಮುಖ ದಿನಾಂಕಗಳನ್ನು ಅನುಮೋದಿಸಿದೆ. ಸಂಸದೀಯ ಕ್ಯಾಲೆಂಡರ್ ಪ್ರಕಾರ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1, ಭಾನುವಾರದಂದು 2026-27ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಮಂಡಿಸಲಿದ್ದಾರೆ. ಇದರೊಂದಿಗೆ, ಕೇಂದ್ರ ಬಜೆಟ್ ಅನ್ನು ಭಾನುವಾರದಂದು ಮಂಡಿಸಲಾಗುತ್ತಿರುವುದು ಇದೇ ಮೊದಲು. ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿಗಳು ಜನವರಿ 28 ರಂದು ಭಾಷಣ ಮಾಡಲಿದ್ದು, ಬಜೆಟ್ ಅಧಿವೇಶನ ಆರಂಭವಾಗಲಿದೆ. ಜನವರಿ 29 ರಂದು ಆರ್ಥಿಕ ಸಮೀಕ್ಷೆಯನ್ನು ಸಂಸತ್ತಿನಲ್ಲಿ ಮಂಡಿಸಲಾಗುವುದು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸತತ ಎಂಟನೇ ಕೇಂದ್ರ ಬಜೆಟ್ ಅನ್ನು ಮಂಡಿಸಲಿದ್ದಾರೆ, ಇದು ಸ್ವಾತಂತ್ರ್ಯದ ನಂತರದ 80 ನೇ ಬಜೆಟ್ ಕೂಡ ಆಗಿರುತ್ತದೆ. 2017 ರಿಂದ, ಫೆಬ್ರವರಿ 28 ರ ಹಿಂದಿನ ಸಂಪ್ರದಾಯದಿಂದ ಮುಂದುವರೆದ ನಂತರ, ಫೆಬ್ರವರಿ 1 ರಂದು ಬೆಳಿಗ್ಗೆ 11 ಗಂಟೆಗೆ ಕೇಂದ್ರ ಬಜೆಟ್ ಮಂಡಿಸುವ…
ಚಿಕ್ಕಮಗಳೂರು: ರಾಜ್ಯದಲ್ಲೇ ಹೃದಯ ವಿದ್ರಾವಕ ಘಟನೆ ಎನ್ನುವಂತದ್ದು ಚಿಕ್ಕಮಗಳೂರಲ್ಲಿ ನಡೆದಿದೆ. ಹಣದ ಆಸೆಗಾಗಿ ತನ್ನ ಅಪ್ರಾಪ್ತ ಪುತ್ರಿಯನ್ನೇ ಪಾಪಿ ತಂದೆಯೊಬ್ಬ ವೇಶ್ಯಾವಾಟಿಕೆಗೆ ತಳ್ಳಿದಂತ ಘಟನೆ ಚಿಕ್ಕಮಗಳೂರಿನ ಅಜ್ಜಂಪುರ ತಾಲ್ಲೂಕಿನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲ್ಲೂಕಿನ ನಾಗವಂಗಲ ಗ್ರಾಮದಲ್ಲಿ 16 ವರ್ಷದ ಅಪ್ರಾಪ್ತೆಯ ತಾಯಿ 6 ವರ್ಷಗಳ ಹಿಂದೆ ತೀರಿಕೊಂಡ ಬಳಿಕ ಅಜ್ಜಿ ಹಾಗೂ ತಂದೆಯ ಜೊತೆಗೆ ವಾಸವಿದ್ದಳು. ತಂದೆ ಗಿರೀಶ್, ಬ್ರೋಕರ್ ನಾರಾಯಣಸ್ವಾಮಿ ಮೂಲಕ ಮಂಗಳೂರಿನ ಭರತ್ ಶೆಟ್ಟಿ ಮನೆಗೆ ಹೋಗೋಣ ಎಂಬುದಾಗಿ ಅಪ್ರಾಪ್ತೆಯನ್ನು ಕರೆದೊಯ್ದಿದ್ದಾರೆ. ಅಲ್ಲೇ ತಂದೆ ಗಿರೀಶ್ ಎದುರಲ್ಲೇ ಅಪ್ರಾಪ್ತ ಪುತ್ರಿಯ ಮೇಲೆ ಭರತ್ ಶೆಟ್ಟಿ ಅತ್ಯಾಚಾರ ಎಸಗಿದ್ದಾನೆ. ಇದಾದ ಒಂದು ವಾರದ ಬಳಿಕ ಅಪ್ರಾಪ್ತೆ ಮುಟ್ಟಾಗಿ ನೋವಿನಿಂದ ನರಳುತ್ತಿದ್ದರೂ ಬಿಡದೇ 8 ರಿಂದ 10 ಮಂದಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಬಾಲಕಿ ತೀವ್ರ ವಿರೋಧ ವ್ಯಕ್ತ ಪಡಿಸಿದಂತ ಸಂದರ್ಭದಲ್ಲಿ ಕೀಚಕರು ನಿಮ್ಮ ಅಪ್ಪ ಗಿರೀಶ್ ಹಾಗೂ ಭರತ್ ಶೆಟ್ಟಿಗೆ ಹಣ ನೀಡಿದ್ದೇವೆ ಎಂಬುದಾಗಿ ಹೇಳುತ್ತಲೇ ಸರಣಿ…
ಶಿವಮೊಗ್ಗ: ಫೆಬ್ರವರಿ.3ರಿಂದ ಸಾಗರದ ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬ ದೇವಿ ಜಾತ್ರೆ ಆರಂಭಗೊಳ್ಳಲಿದೆ. ಈ ಹಿನ್ನಲೆಯಲ್ಲಿ ನಿನ್ನೆ ಶಾಸಕ ಗೋಪಾಲಕೃಷ್ಣ ಬೇಳೂರು ಸಾಗರದ ಪ್ರಮುಖ ರಸ್ತೆಗಳ ಡಾಂಬಾರೀಕರಣ ಕಾಮಗಾರಿಗೆ ಚಾಲನೆ ನೀಡಿದ್ದರು. ಈ ಬೆನ್ನಲ್ಲೇ ಸಾಗರದ ಮಾರಿಕಾಂಬ ದೇವಸ್ಥಾನದ ಮುಂಭಾಗದ ರಸ್ತೆಯನ್ನು ಡಾಂಬಾರೀಕರಣ ಮಾಡಲಾಯಿತು. ಶಾಸಕ ಗೋಪಾಲಕೃಷ್ಣ ಬೇಳೂರು ಅವರು ನಿನ್ನೆ ಮಾರಿಕಾಂಬ ದೇವಿ ಜಾತ್ರೆಯ ಹಿನ್ನಲೆಯಲ್ಲಿ ಸಾಗರ ನಗರದ ಪ್ರಮುಖ ರಸ್ತೆಗಳ ಡಾಂಬಾರೀಕರಣಕ್ಕೆ ಚಾಲನೆ ನೀಡಿದ್ದರು. ಇಂದು ಸಾಗರದ ಗಂಡನ ಮನೆ ಮುಂಭಾಗದಲ್ಲಿನ ರಸ್ತೆಯ ಅಂಗಡಿಗಳನ್ನು ಸ್ವಯಂ ಪ್ರೇರಿತವಾಗಿ ಬಂದ್ ಮಾಡೋ ಮೂಲಕ ಡಾಂಬಾರೀಕರಣ ಮಾಡಲಾಯಿತು. ಸಾಗರದ ಮಾರಿಗುಡಿ ದೇವಸ್ಥಾನದ ಮುಂಭಾಗದಲ್ಲಿ ರಸ್ತೆ ಡಾಂಬಾರೀಕರಣ ಕಾಮಗಾರಿಯನ್ನು ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಅಧ್ಯಕ್ಷ ನಾಗೇಂದ್ರ, ಪ್ರಧಾನ ಕಾರ್ಯದರ್ಶಿ ಗಿರಿಭಟ್, ಸಮಿತಿಯ ನಾಗೇಂದ್ರ ಕುಮಟ, ಕೃಷ್ಣಮೂರ್ತಿ ಮತ್ತು ಗೌತಮ್, ಲಿಂಗರಾಜು ಸೇರಿದಂತೆ ಇತರರು ವೀಕ್ಷಣೆ ಮಾಡಿದರು. ಹೀಗಿದೆ ಸಾಗರದ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವದ ವೇಳಾಪಟ್ಟಿ 2026ರ ಜನವರಿ 27ರಂದು…
ಬೆಂಗಳೂರು: ಹುಟ್ಟಿದಾಗಿನಿಂದ-16 ವರ್ಷದವರೆಗೂ ಲಸಿಕೆಗಳನ್ನು ಸರಿಯಾದ ಸಮಯಕ್ಕೆ ಹಾಕಿಸುವುದರ ಮೂಲಕ ಮಾರಣಾಂತಿಕ ಖಾಯಿಲೆಗಳಿಂದ ನಿಮ್ಮ ಮಗುವನ್ನು ರಕ್ಷಿಸಿಕೊಳ್ಳಿ ಎಂಬುದಾಗಿ ಆರೋಗ್ಯ ಇಲಾಖೆ ಮನವಿ ಮಾಡಿದೆ. ಗರ್ಭಿಣಿ ಸ್ತ್ರೀಯರು ಟಿ.ಡಿ-1 ಲಸಿಕೆಯನ್ನು ಗರ್ಭಧಾರಣೆಯ ಆರಂಭಿಕ ಹಂತದಲ್ಲಿ ಹಾಗೂ ಟಿ.ಡಿ-2 ಲಸಿಕೆಯನ್ನು ಟಿ.ಡಿ-1 ಲಸಿಕೆ ಪಡೆದ 4 ವಾರಗಳ ನಂತರ ಪಡೆದುಕೊಳ್ಳಬೇಕು. ಹುಟ್ಟಿದ ಕೂಡಲೇ ಮಗುವಿಗೆ 24 ಗಂಟೆಯೊಳಗೆ ಹೆಪಟೈಟೀಸ್-ಬಿ ಲಸಿಕೆ, ಬಿ.ಸಿ.ಜಿ ಹಾಗೂ ಓ.ಪಿ.ವಿ ಲಸಿಕೆಯನ್ನು ಪಡೆದುಕೊಳ್ಳಬೇಕು. ಹುಟ್ಟಿದ 6 ವಾರಗಳ ನಂತರ ಓ.ಪಿ.ವಿ-1, ರೋಟಾ-1, ಐ.ಪಿ.ವಿ- 1, ಪಿ.ಸಿ.ವಿ-1 ಹಾಗೂ ಪೆಂಟಾವೆಲೆಂಟ್-1 ಲಸಿಕೆಯನ್ನು ಪಡೆದುಕೊಳ್ಳಬೇಕು. ಹುಟ್ಟಿದ 10 ವಾರಗಳ ನಂತರ ಓ.ಪಿ.ವಿ-2, ರೋಟಾ-2 ಮತ್ತು ಪೆಂಟಾವೆಲೆಂಟ್-2 ಲಸಿಕೆಯನ್ನು ಪಡೆದುಕೊಳ್ಳಬೇಕು. ಹುಟ್ಟಿದ 14 ವಾರಗಳ ನಂತರ ಓ.ಪಿ.ವಿ-3, ರೋಟಾ-3, ಐ.ಪಿ.ವಿ-2, ಪಿ.ಸಿ.ವಿ-2 ಹಾಗೂ ಪೆಂಟಾವೆಲೆಂಟ್-3 ಲಸಿಕೆಯನ್ನು ಪಡೆದುಕೊಳ್ಳಬೇಕು. 9 ತಿಂಗಳ ಮಗುವಿಗೆ ಐ.ಪಿ.ವಿ-3, ದಡಾರ ರುಬೆಲ್ಲಾ-1, ಪಿ.ಸಿ.ವಿ ವರ್ಧಕ, ಜೆ.ಇ-1 ಮತ್ತು ವಿಟಮಿನ್ ಎ-1 ಲಸಿಕೆಗಳನ್ನು ಪಡೆದುಕೊಳ್ಳಬೇಕು. 16-23 ತಿಂಗಳ ಮಕ್ಕಳಿಗೆ ಓ.ಪಿ.ವಿ…
ಬೆಳಗಾವಿ: ನಿನ್ನೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಬೈಕ್ ನಲ್ಲಿ ಬಂದಿದ್ದಂತ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಗಾಯಗೊಳಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಕಾರು ಚಾಲಕ ಬಸವಂತ ಕಡೋಲ್ಕರ್ ಅವರು ಕಾರು ನಿಲ್ಲಿಸಿ ಹೊರಗೆ ನಿಂತಿದ್ದಂತ ಸಂದರ್ಭದಲ್ಲಿ ನಿನ್ನೆ ದುಷ್ಕರ್ಮಿಗಳು ಎದೆ, ಭುಜ ಸೇರಿದಂತೆ ವಿವಿಧೆಡೆ ಚಾಕುವಿನಿಂದ ಇರಿದು ಪರಾರಿಯಾಗಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದಂತ ಪೊಲೀಸರು ಇಂದು ಪ್ರಕರಣ ಸಂಬಂಧ ಶಿವಯ್ಯ ಪೂಜಾರಿ, ನಿತೇಶ್ ಬಡಿಗೇರ, ಮೌನಪ್ಪ ಹಾಗೂ ಸಂಪತ್ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. ಅಂದಹಾಗೇ ಬಸವಂತಗೆ ಚಾಕುವಿನಿಂದ ಇರಿದಂತ ಆರೋಪಿಗಳು ಅವರ ಸ್ನೇಹಿತರೇ ಆಗಿದ್ದರು. ಚಾಕು ಇರಿತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಇದೀಗ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ಪೊಲೀಸರು ಪಡೆಯಲಿದ್ದಾರೆ ಎನ್ನಲಾಗುತ್ತಿದೆ.
ಬೆಂಗಳೂರು : ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಹಾಗೂ ರಾಮನಗರ ಜಿಲ್ಲೆ ಉಪ ವಿಭಾಗಾಧಿಕಾರಿಗಳ (ಎಸಿ) ವ್ಯಾಪ್ತಿಯಲ್ಲಿ ನ್ಯಾಯಾಲಯ ಪ್ರಕರಣಗಳು ಅತಿಹೆಚ್ಚು ಸಂಖ್ಯೆಯಲ್ಲಿ ಬಾಕಿ ಇದ್ದು, ಶೀಘ್ರ ವಿಲೇವಾರಿ ಮಾಡುವಂತೆ ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದರು. ಬುಧವಾರ ವಿಕಾಸಸೌಧದಲ್ಲಿ ನಡೆದ ಉಪ ವಿಭಾಗಾಧಿಕಾರಿಗಳ ಕೋರ್ಟ್ ಕೇಸ್ ಸಂಬಂಧಿಸಿದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದ ಅವರು, “ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ರಾಜ್ಯಾದ್ಯಂತ ಒಟ್ಟು 19,000 ಪ್ರಕರಣಗಳು ಬಾಕಿ ಇವೆ. ಈ ಪೈಕಿ ಸುಮಾರು 13,000 ಪ್ರಕರಣಗಳು ಬೆಂ.ನಗರ, ಬೆಂ.ಗ್ರಾಮಾಂತರ, ತುಮಕೂರು ಹಾಗೂ ರಾಮನಗರ ಜಿಲ್ಲೆಗಳಲ್ಲೇ ಬಾಕಿ ಇವೆ” ಎಂದು ಬೇಸರ ವ್ಯಕ್ತಪಡಿಸಿದರು. “ಬೆಂಗಳೂರು ಸುತ್ತಮುತ್ತಲ ಜಿಲ್ಲೆಗಳಲ್ಲೇ ಹೆಚ್ಚು ಸಂಖ್ಯೆಯಲ್ಲಿ ನ್ಯಾಯಾಲಯ ಪ್ರಕರಣಗಳು ಬಾಕಿ ಇದ್ದರೆ, ರಾಜ್ಯದ ಇತರ ಭಾಗಗಳ ಅಧಿಕಾರಿಗಳೊಂದಿಗೆ ಏನೆಂದು ಸಭೆ ನಡೆಸಲಿ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಕೇವಲ 6,000 ಪ್ರಕರಣಗಳು ಮಾತ್ರ ಬಾಕಿ ಇದ್ದು, ಈ ನಾಲ್ಕು ಜಿಲ್ಲೆಗಳ ಅಧಿಕಾರಿಗಳು…
ಬೆಂಗಳೂರು: ಕೆ ಎಸ್ ಆರ್ ಟಿ ಸಿ ನಿಗಮದ ಸಿಬ್ಬಂದಿಗಳ ಮಕ್ಕಳು ಅತ್ಯುತ್ತಮ ವಿದ್ಯಾಭ್ಯಾಸ ಮಾಡಿ ಚಿನ್ನದ ಪದಕ ಪಡೆದಿದ್ದರು. ವಿಷಯ ತಿಳಿದಂತ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ನಿಗಮದ ಕೇಂದ್ರ ಕಚೇರಿಗೆ ಕರೆಯಿಸಿ ಸನ್ಮಾನಿಸಿ, ನಗದು ಬಹುಮಾನ ನೀಡಿ ಪ್ರೋತ್ಸಾಹಿಸಿದರು. ಆ ಮೂಲಕ ಮತ್ತಷ್ಟು ಸಾಧನೆ ಮಾಡೋದಕ್ಕೆ ಹುರುಪು ತುಂಬಿದರು. ಇಂದು ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ನಿಗಮದಲ್ಲಿನ ಸಿಬ್ಬಂದಿಗಳ ಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ಉನ್ನತ ವಿದ್ಯಾಭ್ಯಾಸ ಮಾಡಿ, ಹೆಚ್ಚಿನ ಅಂಕಗಳಿಸಿ ಚಿನ್ನದ ಪದಕ ಪಡೆದಿರುವ 6 ವಿದ್ಯಾರ್ಥಿಗಳನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು, ಸಂಸ್ಥೆಯ ವತಿಯಿಂದ ತಲಾ ರೂ.5,000/- ಗಳ ಗೌರವಧನ, ಪ್ರಮಾಣ ಪತ್ರ ನೀಡಿ ಗೌರವಿಸಿದರು. ಅಲ್ಲದೇ ಸಚಿವ ರಾಮಲಿಂಗಾರೆಡ್ಡಿ ಅವರು ವೈಯಕ್ತಿಕವಾಗಿ ಎಲ್ಲಾ 6 ವಿದ್ಯಾರ್ಥಿಗಳಿಗೆ ತಲಾ ರೂ.20,000/- ಗಳಂತೆ ನಗದು ಬಹಮಾನ ನೀಡಿ ಸನ್ಮಾನಿಸಿದರು. 1) ಕೆ ಎಸ್ ಆರ್ ಟಿ ಸಿಯ ಕೆಂಗೇರಿಯ ಪ್ರಾದೇಶಿಕ ಕಾರ್ಯಾಗಾರದಲ್ಲಿ ಕೆಲಸ ನಿರ್ವಹಿಸುತ್ತಿರುವ…
ಬೆಂಗಳೂರು: ರಾಜ್ಯದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಉಪ ವಿಭಾಗೀಯ ಕಚೇರಿ, ಜಿಲ್ಲಾಧಿಕಾರಿಗಳ ಕಚೇರಿಗಳಲ್ಲಿನ ಭೂ ದಾಖಲೆಗಳನ್ನು ಡಿಜಿಟಲೀಕರಣ ಮಾಡುವುದಾಗಿ ಕಂದಾಯ ಸಚಿವ ಕೃಷ್ಣ ಬೇರೇಗೌಡ ತಿಳಿಸಿದ್ದಾರೆ. ರಾಜ್ಯದಲ್ಲಿ ಭೂ ದಾಖಲೆಗಳನ್ನು ಸಂಪೂರ್ಣ ಡಿಜಿಟಲೀಕರಣ ಮಾಡಲಾಗುತ್ತಿದೆ. ಕಳೆದ ವರ್ಷ ಜನವರಿಯಲ್ಲಿ ಎಲ್ಲ ತಾಲೂಕು ಕಚೇರಿಗಳ ಮೂಲ ಭೂ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಿಸಲಾಗಿತ್ತು. ಇದೀಗ ಉಪ ವಿಭಾಗಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿರುವ ದಾಖಲೆಗಳ ಸ್ಕ್ಯಾನಿಂಗ್ಗೂ ಚಾಲನೆ ನೀಡಲಾಗಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/2008505495280320542 https://kannadanewsnow.com/kannada/complaint-to-it-against-minister-jameer-ahmed/ https://kannadanewsnow.com/kannada/do-you-know-what-a-woman-desires-from-her-husband/
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 19 ಡಿವೈಎಸ್ಪಿ ಹಾಗೂ 53 ಪೊಲೀಸ್ ಇನ್ಸ್ ಪೆಕ್ಟರ್ ಸಿವಿಲ್ ಅವರನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತಂತೆ ವರ್ಗಾವಣೆ ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು, ಆಂತರಿಕ ಭದ್ರತ ವಿಭಾಗದ ಡಿವೈಎಸ್ಪಿಯಾಗಿದ್ದಂತ ಗಣೇಶ್ ಎಂ ಹೆಗಡೆ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಬೆಂಗಳೂರಿನ ಶೇಷಾದ್ರಿಪುರಂ ಉಪ ವಿಭಾಗದ ಡಿವೈಎಸ್ಪಿ ಪ್ರಕಾಶ್.ಆರ್ ಅವರನ್ನು ಚಿಕ್ಕಬಳ್ಳಾಪುರ ಉಪ ವಿಭಾಗಕ್ಕೆ, ಸಿಸಿಪಿಎಸ್ ಡಿವೈಎಸ್ಪಿ ನಾಗರಾಜ.ಜಿ ಅವರನ್ನು ವಿಜಯಪುರ ಉಪ ವಿಭಾಗಕ್ಕೆ, ಮೈಸೂರಿನ ಕೆಪಿಎ ಡಿವೈಎಸ್ಪಿ ಮೊಹಮ್ಮದ ಹಸ್ಮತ್ ಖಾನ್.ಐ ಅವರನ್ನು ಹೊಳೆನರಸೀಪುರ ಉಪ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಹೀಗಿದೆ 19 ಡಿವೈಎಸ್ಪಿ ವರ್ಗಾವಣೆ ಪಟ್ಟಿ ಇನ್ನೂ 53 ಪೊಲೀಸ್ ಇನ್ಸ್ ಪೆಕ್ಟರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಬೆಳಗಾವಿಯ ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಸುನೀಲ್ ಬಿ ಪಾಟೀಲ್ ಅವರನ್ನು ಇಂಡಿ ಗ್ರಾಮಾಂತರ ವೃತ್ತಕ್ಕೆ ವರ್ಗಾವಣೆ…














