Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯ ದ ದಿನಾಂಕವನ್ನು ಸಧ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸ್ವಂತ ಖರ್ಚಿನಲ್ಲಿ ಶಾಸಕರ ವಿದೇಶ ಪ್ರವಾಸ ಶಾಸಕರು ವಿದೇಶ ಪ್ರವಾಸ ಕೈಗೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಎಂ ಎಲ್ ಎ ಗಳು ಮತ್ತು ಎಂಎಲ್ ಸಿ ಗಳು ತಮ್ಮ ಸ್ವಂತ ಖರ್ಚಿನಲ್ಲಿ ವಿದೇಶ ಪ್ರವಾಸ ಕೈಗೊಳ್ಳುತ್ತಿದ್ದಾರೆ ಎಂದರು. ವರಿಷ್ಠರ ತೀರ್ಮಾನದಂತೆ ನಡೆಯುತ್ತೇವೆ ಪತ್ರಕರ್ತರು ನಾಯಕತ್ವ ಬದಲಾವಣೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ಪತ್ರಕರ್ತರು ಪದೇ ಪದೇ ಒಂದೇ ವಿಷಯವನ್ನು ಕೇಳಬಾರದು. ನಾಯಕತ್ವ ಬದಲಾವಣೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸಿದರೆ ಅದರಂತೆ ನಾನು ಮತ್ತು ಉಪಮುಖ್ಯಮಂತ್ರಿಗಳಿಬ್ಬರೂ ನಡೆದುಕೊಳ್ಳುತ್ತೇವೆ ಎಂದರು. https://kannadanewsnow.com/kannada/the-development-of-the-state-is-a-mirage-mlc-n-ravikumar/
ಬೆಂಗಳೂರು: ವಿಧಾನಸೌಧದಲ್ಲಿ 300 ಗ್ರಾಂ ಚಿನ್ನ ಸಿಕ್ಕಿದೆ. ಇಷ್ಟೊಂದು ದೊಡ್ಡ ಪ್ರಮಾಣದ ಬಂಗಾರ ವಿಧಾನಸೌಧದಲ್ಲಿ ಹೇಗೆ ಸಿಕ್ಕಿತು. ಯಾರಿಗೆ ಕೊಡಲು ತಂದಿದ್ದರು ಎಂದು ವಿಧಾನಪರಿಷತ್ ವಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು ಪ್ರಶ್ನಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು ಪ್ರಶ್ನೆಗೆ ಉತ್ತರಿಸಿದರು. ಹಣ ಕೊಡುವುದರ ಬದಲು ಬಂಗಾರ ಕೊಡಲೆಂದು ತಂದಿದ್ದರೇ? 1.5 ಲಕ್ಷ ಹಣ ಮತ್ತು ಚಿನ್ನವÀನ್ನು ಎಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದರು? ಎಂದು ಕೇಳಿದರು. ಇದು ಲಂಚಾವತಾರ- ಭ್ರಷ್ಟಾಚಾರದ ಮತ್ತೊಂದು ಉದಾಹರಣೆ ಎಂದು ಟೀಕಿಸಿದರು. ಇದರಲ್ಲಿರುವ ಬೈರತಿ ಸುರೇಶ್ ಅಥವಾ ಇನ್ಯಾರೇ ಇದ್ದರೂ ತನಿಖೆ ಮಾಡಿ. ಪ್ರಕರಣದಲ್ಲಿ ಭಾಗಿಯಾದ ಅಧಿಕಾರಿ, ಸಚಿವರು ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿದರು. ಶಾಸಕರ ವಿದೇಶ ಪ್ರವಾಸ ಕುರಿತು ಪ್ರಶ್ನೆಗೆ ಉತ್ತರಿಸಿದ ಅವರು, ಯಾವ್ಯಾವ ಶಾಸಕರು ಯಾರ್ಯಾರ ತಂಡದಲ್ಲಿ ಹೋಗುತ್ತಿದ್ದಾರೆ ಎಂಬುದು ಕುತೂಹಲದ ವಿಷಯ. ಡಿ.ಕೆ.ಶಿವಕುಮಾರ್ ಕಡೆಯವರು ಯಾರ ಜೊತೆ ಯಾವ ದೇಶಕ್ಕೆ ಹೋಗುತ್ತಿದ್ದಾರೆ? ಸಿದ್ದರಾಮಯ್ಯನವರ ಕಡೆಯವರು ಯಾರ ಜೊತೆ ಯಾವ ದೇಶಕ್ಕೆ ಹೋಗುತ್ತಿದ್ದಾರೆ? ಅಲ್ಲಿ ಹೋಗಿ…
ಬೆಂಗಳೂರು: “ಕಾಂಗ್ರೆಸ್ ಪಕ್ಷವು ಸರ್ವ ಧರ್ಮ, ಸರ್ವ ಪಕ್ಷಗಳ ನಾಯಕರನ್ನು ಒಳಗೊಂಡಿದೆ. ಇಲ್ಲಿ ಬಿಜೆಪಿ, ಜನತಾ ದಳ, ಬಿಎಸ್ ಪಿ ಸೇರಿದಂತೆ ಎಲ್ಲರೂ ಇದ್ದಾರೆ. ನಮ್ಮಲ್ಲಿ ಮೊದಲ ಆದ್ಯತೆ ಅವರಿಗೆ. ಹೊರಗಿನಿಂದ ಬಂದವರಿಗೆ ಮೊದಲ ಆದ್ಯತೆ, ಆಮೇಲೆ ಕಾಂಗ್ರಸಿಗರಿಗೆ ಆದ್ಯತೆ. ಅತಿಥಿಗಳನ್ನು ಗೌರವಿಸುವುದೇ ಕಾಂಗ್ರೆಸ್ ಪಕ್ಷದ ಗುರಿ” ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಉತ್ತರಿಸಿದರು. ರಾಜ್ಯ ಸರ್ಕಾರ ಬಿಜೆಪಿ ಮುಖಂಡನಿಗೆ ಸಚಿವ ಸ್ಥಾನಮಾನ ನೀಡಿದೆ ಎಂದು ಕೇಳಿದಾಗ, “ಕಾಂಗ್ರೆಸ್ ಎಲ್ಲರನ್ನು ಗೌರವಿಸುತ್ತದೆ. ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕು ಎಂಬ ಭಾವನೆ ಮುಖ್ಯಮಂತ್ರಿಗಳಿಗೆ ಇರುವುದರಿಂದ ಮಾಡಿರಬಹುದು. ಇದರಲ್ಲಿ ತಪ್ಪೇನಿಲ್ಲ” ಎಂದರು. ದೆಹಲಿ ಪ್ರವಾಸ ಶಿವಕುಮಾರ್ ಅವರಿಗೆ ಹೊಸತಲ್ಲ ನಿಮ್ಮ ಸಹೋದರ ಅವರು ದೆಹಲಿಯಲ್ಲಿದ್ದಾರೆ ಎಂದು ಕೇಳಿದಾಗ, “ಅವರು ದೆಹಲಿ ಪ್ರವಾಸಕ್ಕೆ ಹೋಗುವಾಗ ಚುನಾವಣೆ ವಿಚಾರವಾಗಿ ಸಭೆ ಮಾಡಲು ಕರೆದಿದ್ದಾರೆ ಎಂದು ನಿಮಗೆ ಮಾಹಿತಿ ನೀಡಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಉಪಮುಖ್ಯಮಂತ್ರಿ…
ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ತಲೆ ಮರೆಸಿಕೊಂಡಿದ್ದರು. ಅವರ ಬಂಧನಕ್ಕಾಗಿ ಇದೀಗ ಸಿಐಡಿ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿಗೊಳಿಸಿದ್ದಾರೆ. ನಿನ್ನೆಯಷ್ಟೇ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಹೀಗಾಗಿ ಭೈರತಿ ಬಸವರಾಜ್ ಗೆ ಬಂಧನದ ಭೀತಿ ಎದುರಾಗಿತ್ತು. ಮತ್ತೊಂದೆಡೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ಬಂಧನಕ್ಕಾಗಿ ಸಿಐಡಿ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿಗೊಳಿಸಿದ್ದಾರೆ ಎನ್ನಲಾಗಿದೆ. ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಹಿನ್ನಲೆಯಲ್ಲಿ ಅವರು ಬಂಧನದ ಭೀತಿಯಿಂದ ವಿದೇಶಕ್ಕೆ ತೆರಳುವ ಸಾಧ್ಯತೆ ಹಿನ್ನಲೆಯಲ್ಲಿ, ಈ ಕ್ರಮವನ್ನು ಕೈಗೊಂಡಿದ್ದಾರೆ ಎನ್ನಲಾಗಿದೆ.
ಬೆಂಗಳೂರು: ನಗರದಲ್ಲಿ ಶಾಲಾ ಬಸ್ ಹರಿದು ಪೊಲೀಸ್ ಸಿಬ್ಬಂದಿಯ ಇಬ್ಬರು ಮಕ್ಕಳು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಹೆಣ್ಣೂರು ಸಂಚಾರಿ ಠಾಣಾ ವ್ಯಾಪ್ತಿಯ ಥಣಿಸಂದ್ರ ಬಳಿ ಘಟನೆ ನಡೆದಿದೆ. ಪೊಲೀಸ್ ಪೇದೆಯ ಇಬ್ಬರು ಪುತ್ರರು ಸ್ಥಳದಲ್ಲೇ ಸಾವನ್ನಪ್ಪಿರುವಂತ ಮನಕಲಕುವ ಘಟನೆ ನಡೆದಿದೆ. ಮೃತ ಮಕ್ಕಳನ್ನ ವರ್ಷ (2) ಹಾಗು ಭಾನು (4) ಎಂದು ತಿಳಿದುಬಂದಿದೆ. ಬೈಕ್ನಲ್ಲಿ ಮಕ್ಕಳನ್ನು ಕೂರಿಸಿಕೊಂಡು ಹೋಗುತ್ತಿದ್ದ ಶಾಲಾ ಬಸ್ ತೆಗೆದುಕೊಳ್ಳುವಾಗ ಬೈಕ್ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ಮೇಲೆ ಇದ್ದ ಇಬ್ಬರೂ ಮಕ್ಕಳು ಕೆಳಗೆ ಬಿದ್ದಾಗ ಇಬ್ಬರು ಮಕ್ಕಳ ಮೇಲೆ ಶಾಲಾ ಬಸ್ ಹರಿದು ದುರಂತ ಸಂಭವಿಸಿದೆ.
ಬೆಂಗಳೂರು: ರಾಜ್ಯದ ಸಮಾಜ ಕಲ್ಯಾಣ ಇಲಾಖೆಯಿಂದ ಎಸ್ ಎಸ್ ಎಲ್ ಸಿ ಮತ್ತು ಮೆಟ್ರಿಕ್ ನಂತ್ರದ ಪ್ರೋತ್ಸಾಹಧನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಣೆ ಮಾಡಿ, ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ಸಮಾಜ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು ಇಲಾಖೆ ನೀಡುತ್ತಿದೆ ಎಂದಿದೆ. ಎಸ್ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ.60ರಿಂದ 79ರಷ್ಟು ಅಂಕ ಪಡೆದವರಿಗೆ ರೂ.7,500 ಪ್ರೋತ್ಸಾಹಧನ ದೊರೆಯಲಿದೆ. ಶೇ.75ಕ್ಕಿಂತ ಹೆಚ್ಚು ತೆಗೆದವರಿಗೆ ರೂ.15,000 ನೀಡಲಾಗುತ್ತದೆ. ಪಿಯುಸಿ, ಡಿಪ್ಲೋಮಾಗೆ ರೂ.20,000, ಪದವಿ ವಿದ್ಯಾರ್ಥಿಗಳಿಗೆ ರೂ.25,000, ಸ್ನಾತಕ ಪದವಿ ವಿದ್ಯಾರ್ಥಿಗಳಿಗೆ ರೂ.30,000 ಹಾಗೂ ವೃತ್ತಿಪರ ಪದವಿ, ವೈದ್ಯಕೀಯ, ತಾಂತ್ರಿಕ, ಕೃಷಿ, ಪಶು ವೈದ್ಯಕೀಯ ವ್ಯಾಸಂಗದವರಿಗೆ ರೂ.35,000 ಪ್ರೋತ್ಸಾಹಧನ ನೀಡುತ್ತಿರುವುದಾಗಿ ತಿಳಿಸಿದೆ. ಎಸ್ ಎಸ್ ಎಲ್ ಸಿ ಮತ್ತು ಮೆಟ್ರಿಕ್ ನಂತರದ ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸಲು ದಿನಾಂಕ 28-02-2026ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ. ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಸೇವಾಸಿಂಧು…
ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದಂತ ಓರ್ವ ಮಹಿಳೆ ಸೇರಿದಂತೆ ಒಟ್ಟು 8 ವಿದೇಶಿ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಸಂಜಯನಗರ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿದ್ದಂತ ವಿದೇಶಿ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಓರ್ವ ಮಹಿಳೆ ಸೇರಿದಂತೆ ಒಟ್ಟು 8 ವಿದೇಶಿ ಪ್ರಜೆಗಳನ್ನು ವಶಕ್ಕೆ ಪಡೆಯಲಾಗಿದೆ. ಬೆಂಗಳೂರಲ್ಲಿ ಕ್ಯಾಮರೂನ್ ದೇಶದ ಐವರು, ಸುಡಾನ್ ದೇಶದ ಮೂವರು ಸೇರಿದಂತೆ ಐವರು ಸೇರಿದಂತೆ 8 ವಿದೇಶಿ ಪ್ರಜೆಗಳು ಅಕ್ರಮವಾಗಿ ವಾಸಿಸುತ್ತಿದ್ದರು. ಅವರನ್ನು ಇಂದು ವಶಕ್ಕೆ ಪಡೆಯಾಲಾಗಿದೆ. ವಿದ್ಯಾರ್ಥಿ ವೀಸಾದಡಿ ಬೆಂಗಳೂರಿಗೆ ಈ ವಿದೇಶಿ ಪ್ರಜೆಗಳು ಆಗಮಿಸಿದ್ದರು. ಕಳೆದ ಮೂರು ನಾಲ್ಕು ವರ್ಷಗಳಿಂದ ವೀಸಾ ಅವಧಿ ಮುಗಿದಿದ್ದರೂ ಅಕ್ರಮವಾಗಿ ಬೆಂಗಳೂರಲ್ಲೇ ವಾಸಿಸುತ್ತಿದ್ದರು. ಅವರನ್ನು ಬಂಧಿಸಿ ಎಫ್ ಆರ್ ಆರ್ ಓ ಮುಂದೆ ಪೊಲೀಸರು ಹಾಜರುಪಡಿಸಿದ್ದಾರೆ. ಆ ಬಳಿಕ ಅವರ ದೇಶಕ್ಕೆ ವಾಪಾಸ್ ಅವರನ್ನು ಪೊಲೀಸರು ಕಳುಹಿಸಲಿದ್ದಾರೆ. https://kannadanewsnow.com/kannada/128-year-old-royal-family-menu-goes-viral-do-you-know-what-the-maharajas-meal-was-like-in-1897/ https://kannadanewsnow.com/kannada/bjp-mla-bhairati-basavaraj-fears-arrest-anticipatory-bail-plea-dismissed-in-biklu-shiva-murder-case/
ಜನವರಿ 31, 1897 ರ ಸಂಜೆ, ಬರೋಡಾದಲ್ಲಿ ಊಟದ ಮೇಜು ಅಧಿಕಾರ, ರಾಜತಾಂತ್ರಿಕತೆ ಮತ್ತು ಅಭಿರುಚಿಗೆ ಶಾಂತ ವೇದಿಕೆಯಾಯಿತು. ಆತಿಥೇಯ ಬರೋಡಾದ ಮಹಾರಾಜ, ಗೌರವಾನ್ವಿತ ಅತಿಥಿ ಗ್ವಾಲಿಯರ್ನ ಮಹಾರಾಜ ಸಿಂಧಿಯಾ, ಬ್ರಿಟಿಷ್ ಸಾಮ್ರಾಜ್ಯವು ಭಾರತವನ್ನು ಆಳಿತು. ಆದರೆ ರಾಜಮನೆತನದ ಅರಮನೆಗಳ ಗೋಡೆಗಳ ಒಳಗೆ, ಭಾರತೀಯ ರಾಜರು ಇನ್ನೂ ತಮ್ಮದೇ ಆದ ಪ್ರತಿಷ್ಠೆಯ ಭಾಷೆಯನ್ನು ನಿರ್ವಹಿಸುತ್ತಿದ್ದರು. ಆಗಾಗ್ಗೆ ಆಹಾರದ ಮೂಲಕ. ಹಾಗಾದ್ರೆ 128 ವರ್ಷಗಳ ಹಿಂದೆ ರಾಮನೆತನದ ಮಹಾರಾಜರ ಊಟದ ಮೆನು ಹೇಗಿತ್ತು ಎನ್ನುವ ಪೋಟೋ ವೈರಲ್ ಆಗಿದ್ದು, ಊಟ ಹೇಗಿತ್ತು ಅನ್ನೋ ಬಗ್ಗೆ ಮುಂದೆ ಓದಿ.. ಆ ರಾತ್ರಿಯ ಮೆನು ಈಗ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ. ಇಂದು ಅಮೇರಿಕನ್ ಆರ್ಕೈವ್ನಲ್ಲಿ ಸಂರಕ್ಷಿಸಲಾಗಿದೆ. ಮೊಘಲ್ ಯುಗದ ದಕ್ಷಿಣ ಏಷ್ಯಾದ ಇತಿಹಾಸಕಾರ ನೇಹಾ ವರ್ಮಾನಿ ಅವರು ಆರ್ಕೈವಲ್ ಸಂಶೋಧನೆಯ ಸಮಯದಲ್ಲಿ ಅದನ್ನು ಕಂಡುಕೊಂಡಾಗ ಮತ್ತು ಅದನ್ನು X ನಲ್ಲಿ ಹಂಚಿಕೊಂಡಾಗ ಅದು ಇತ್ತೀಚೆಗೆ ಮತ್ತೆ ಕಾಣಿಸಿಕೊಂಡಿತು. ನಂತರ ವ್ಯಾಪಕ ಗಮನ ಸೆಳೆಯಿತು. ಮೆನು…
ಬೆಂಗಳೂರು: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ ಫೌಂಡೇಶನ್ನ ವ್ಯವಸ್ಥಾಪಕ ಟ್ರಸ್ಟಿ ಸುಜಾ ಕೆ.ಜೆ. ಜಾರ್ಜ್ ಅವರು ಪ್ರಮಾಣಪತ್ರ ವಿತರಿಸಿದರು. ಕೆ.ಜಿ. ಹಳ್ಳಿಯಲ್ಲಿ ಸ್ಥಾಪಿಸಿರುವ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಪ್ರಮಾಣಪತ್ರ ವಿತರಿಸಿದ ಸುಜಾ ಕೆ.ಜೆ.ಜಾರ್ಜ್ ಅವರು, “ಇಂಧನ ಸಚಿವರೂ ಆಗಿರುವ ಸರ್ವಜ್ಞನಗರ ಕ್ಷೇತ್ರದ ಶಾಸಕ ಕೆ.ಜೆ.ಜಾರ್ಜ್ ಅವರ ಬೆಂಬಲದೊಂದಿಗೆ ಈ ಕೌಶಲ್ಯ ಅಭಿವೃದ್ಧಿ ಕೇಂದ್ರವನ್ನು ಸ್ಥಾಪಿಸಿ ತರಬೇತಿ ನೀಡಲಾಗುತ್ತಿದ್ದು, ಇದರಿಂದ ಮಹಿಳೆಯರು ಸಬಲೀಕರಣ ಸಾಧ್ಯವಾಗಿದೆ,” ಎಂದರು. “ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ಕಲೆ ಮತ್ತು ಕರಕುಶಲತೆ, ಕಸೂತಿ ಮತ್ತು ಟೈಲರಿಂಗ್ ಮತ್ತು ಕಂಪ್ಯೂಟರ್ ಕೌಶಲ್ಯಗಳಲ್ಲಿ ಯಶಸ್ವಿಯಾಗಿ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ವಿತರಿಸಿದ ಪ್ರಮಾಣ ಪತ್ರವು ಕೇವಲ ಅರ್ಹತೆಯನ್ನು ಪ್ರತಿನಿಧಿಸುವುದಿಲ್ಲ, ಅವರಲ್ಲಿ ಆತ್ಮ ವಿಶ್ವಾಸ, ಸ್ವಾವಲಂಬನೆ ಮತ್ತು ಹೊಸ ಆರಂಭದತ್ತ ದಿಟ್ಟ ಹೆಜ್ಜೆಯನ್ನು ಪ್ರತಿನಿಧಿಸುತ್ತದೆ,” ಎಂದು ಹೇಳಿದರು. “ಕೇಳಚಂದ್ರ…
ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಬಂಧನದ ಭೀತಿ ಎದುರಾಗಿದೆ. ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ, ಬಿಗ್ ಶಾಕ್ ನೀಡಿದೆ. ಬಿಕ್ಲು ಶಿವ ಕೊಲೆ ಕೇಸಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದಂತ ಹೈಕೋರ್ಟ್ ಪೀಠವು ವಿಚಾರಣೆ ನಡೆಸಿ, ವಜಾಗೊಳಿಸಿದೆ. ಭೈರತಿ ಬಸವರಾಜ್, ಬಿಕ್ಲು ಶಿವ ಮಧ್ಯೆ ಮೊದಲೇ ವೈಮನಸ್ಸಿತ್ತು. ಫೆಬ್ರವರಿ.18, 2025ರಂದೇ ಜೀವ ಬೆದರಿಕೆ ಬಗ್ಗೆ ದೂರು ನೀಡಿದ್ದಾನೆ. ಬಿಎ ಬಸವರಾಜ್ ಗೆ ಜಗ್ಗ ಆಲಿಯಾಸ್ ಜಗದೀಶ್ ಪರಿಚಿತ. ಜಗ್ಗ ಆಲಿಯಾಸ್ ಜಗದೀಶ್ ಪರಿಚಿತನೆಂಬುದಕ್ಕೆ ಸಾಕ್ಷ್ಯಗಳಿವೆ. ಪೋಟೋ, ಸಿಡಿಆರ್, ಹಳೆಯ ದೂರಿನ ಬಗ್ಗೆ ತನಿಖೆ ಅಗತ್ಯವಿದೆ. ಆರೋಪಿಯ ವಿವರಣೆ ಪಡೆಯಲು ತನಿಖೆಗೆ ಒಳಪಡಿಸಬೇಕಿದೆ ಎಂಬುದಾಗಿ ಬಿಕ್ಲು ಶಿವ ಪರ ವಕೀಲರು ವಾದಿಸಿದ್ದರು. ಇನ್ನೂ ತನಿಖೆ ಸ್ವರೂಪ ಹೇಗಿರಬೇಕೆಂಬುದನ್ನ…













