Subscribe to Updates
Get the latest creative news from FooBar about art, design and business.
Author: kannadanewsnow09
ಚಳ್ಳಕೆರೆ : ಸ್ಥಳೀಯ ಪ್ರಗತಿ ವಿದ್ಯಾಲಯದಲ್ಲಿ ಶಾಲೆಯ ಸ್ಮರಣ ಸಂಚಿಕೆ (ವಾರ್ಷಿಕ ಪತ್ರಿಕೆ) ಯನ್ನು ಗೌರವಾನ್ವಿತ ಸಂಸದರಾದ ಗೋವಿಂದ ಕಾರಜೋಳ್ ಅವರು ಬಿಡುಗಡೆ ಮಾಡಿ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿದರು. ಕಾರ್ಯಕ್ರಮವನ್ನು ಶಾಲೆಯ ಪ್ರಾಂಶುಪಾಲರು , ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಸಮ್ಮುಖದಲ್ಲಿ ಭಾವಪೂರ್ಣವಾಗಿ ನಡೆಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಶಾಲಾ ವಿದ್ಯಾರ್ಥಿಗಳು ಸ್ವಾಗತ ಗೀತೆಯನ್ನು ಹಾಡಿ ಅತಿಥಿಗಳನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಸ್ಮರಣ ಸಂಚಿಕೆ ಯನ್ನು ಬಿಡುಗಡೆ ಮಾಡಿದ ಬಳಿಕ ಮಾತನಾಡಿದ ಸಂಸದರಾದ ಗೋವಿಂದ ಕಾರಜೋಳ ಅವರು, ಶಾಲಾ ವಾರ್ಷಿಕ ಪತ್ರಿಕೆ ವಿದ್ಯಾರ್ಥಿಗಳ ಸೃಜನಶೀಲತೆ, ಚಿಂತನೆ ಮತ್ತು ಪ್ರತಿಭೆಯನ್ನು ಹೊರಹೊಮ್ಮಿಸುವ ಅತ್ಯುತ್ತಮ ವೇದಿಕೆಯಾಗಿದೆ ಎಂದು ಹೇಳಿದರು. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಾಹಿತ್ಯ, ವಿಜ್ಞಾನ ಮತ್ತು ಕಲಾ ಕ್ಷೇತ್ರಗಳಲ್ಲಿಯೂ ತಮ್ಮ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು. ನಂತರ ಶಾಲಾ ಅಧ್ಯಕ್ಷರಾದ ಶ್ರೀ ರಮೇಶ್ ಬಾಬು ಅವರು ಮಾತನಾಡಿ ಈ ಸ್ಮರಣ ಸಂಚಿಕೆ ಯಲ್ಲಿ ವಿದ್ಯಾರ್ಥಿಗಳ ಕಥೆಗಳು, ಕವನಗಳು, ವಿಜ್ಞಾನ…
ಕಾರವಾರ : ಸೀಬರ್ಡ್ ನೌಕಾನಲೆ ಯೋಜನೆಗೆ ಭೂ ಸ್ವಾದೀನಪಡಿಸಿಕೊಂಡ ಪ್ರಕರಣಗಳಿಗೆ ಸಂಬಂಧಿಸಿದಂತೆ 18 (1) ಅಡಿಯಲ್ಲಿನ 5 ಪ್ರಕರಣ ಮತ್ತು 28 ಬಿ ಅಡಿಯಲ್ಲಿನ 112 ಪ್ರಕರಣಗಳಿಗೆ ಒಟ್ಟು ರೂ.27.70 ಕೋಟಿಗಳ ಹೆಚ್ಚುವರಿ ಪರಿಹಾರವನ್ನು ಬಿಡುಗಡೆಗೊಳಿಸಿದ್ದು, ಇವುಗಳಲ್ಲಿ ಅಗತ್ಯ ದಾಖಲೆಗಳನ್ನು ಒದಗಿಸಿದ 35 ಪ್ರಕರಣಗಳಲ್ಲಿನ ಫಲಾನುಭವಿಗಳಿಗೆ ರೂ.6.87 ಕೋಟಿ ಪರಿಹಾರವನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಶನಿವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿತರಿಸಿದರು. ನಂತರ ಮಾತನಾಡಿದ ಅವರು ಸೀಬರ್ಡ್ ನೌಕಾನಲೆ ಯೋಜನೆಗೆ ಭೂ ಸ್ವಾದೀನಪಡಿಸಿಕೊಂಡ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಾಕಿ ಪರಿಹಾರದ ಮೊತ್ತವನ್ನು ಪಾವತಿಗೆ ಇರುವ ಸಮಸ್ಯೆಗಳ ಕುರಿತು ಕೇಂದ್ರ ರಕ್ಷಣಾ ಸಚಿವರಿಗೆ ಮನವಿಯನ್ನು ಸಲ್ಲಿಸಿದ್ದು, ಅದರಂತೆ ಇದಕ್ಕಾಗಿ ವಿಶೇಷ ಅಧಿಕಾರಿಯನ್ನು ಸಚಿವರು ನೇಮಕ ಮಾಡಿದ ನಂತರ ಪರಿಹರದ ಮೊತ್ತ ಬಿಡುಗಡೆ ಕಾರ್ಯ ಶೀಘ್ರಗೊಂಡಿದ್ದು, ಇದುವರೆಗೆ ರೂ.35 ಕೋಟಿ ಬಿಡುಗಡೆಗೊಂಡಿದೆ. ಬಾಕಿ ಉಳಿದಿರುವ 215 ಪ್ರಕರಣಗಳಿಗೆ ಬಿಡುಗಡೆಯಗಬೇಕಾದ ರೂ.28.82 ಕೋಟಿ ಮೊತ್ತ ಕೂಡಾ ತ್ವರಿತಗತಿಯಲ್ಲಿ ಬಿಡುಗಡೆಗೊಳ್ಳಲಿದೆ ಎಂದರು. ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ…
ಶಿವಮೊಗ್ಗ : ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಳ್ಳುವುದರ ಬಗ್ಗೆ ನನಗೆ ನಂಬಿಕೆ ಇಲ್ಲ. ಬದಲಾದ ದಿನಮಾನಗಳಿಗೆ ತಕ್ಕಂತೆ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಜನ್ಮದಿನ ಆಚರಿಸುವಾಗ ತಿರಸ್ಕರಿಸಲು ಆಗುವುದಿಲ್ಲ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಹುಟ್ಟುಹಬ್ಬದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ರಕ್ತದಾನ ಮಾಡಿದವರಿಗೆ ಪ್ರಮಾಣಪತ್ರ ವಿತರಿಸಿ ಮಾತನಾಡಿದಂತ ಅವರು, ನನ್ನ ಜನ್ಮದಿನವನ್ನು ಸಮಾಜಮುಖಿ ಕೆಲಸಗಳ ಜೊತೆ ಅಭಿಮಾನಿಗಳು ಆಚರಿಸುತ್ತಿರುವುದು ಸಂತೋಷ ತಂದಿದೆ. ಜನ್ಮದಿನದ ಹಿನ್ನೆಲೆಯಲ್ಲಿ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಕಾರ್ಯಕರ್ತರು ಒಂದು ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಹೊಸನಗರ, ಸಾಗರದ ಗೋಶಾಲೆಗಳಿಗೆ ಮಹಿಳಾ ಮೋರ್ಚಾದ ವತಿಯಿಂದ ಮೇವು ನೀಡಲಾಗಿದೆ. ಯುವ ಮೋರ್ಚಾ ರಕ್ತದಾನ ಶಿಬಿರ ನಡೆಸುವ ಮೂಲಕ ಅನುಕರಣೀಯ ಕೆಲಸ ಮಾಡಿದ್ದಾರೆ ಎಂದು ಹೇಳಿದರು. ರೋಟರಿ ರಕ್ತನಿಧಿ ಕೇಂದ್ರದ ಗೌರವಾಧ್ಯಕ್ಷೆ ಡಾ. ರಾಜನಂದಿನಿ ಕಾಗೋಡು ಮಾತನಾಡಿ, ಹರತಾಳು ಹಾಲಪ್ಪ…
ಮೈಸೂರು : ದೇವರೆಂಬ ನಂಬಿಕೆಯು ಜಾತಿಧರ್ಮಗಳನ್ನು ಮೀರಿದಂಥದ್ದು. ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಬೇಕೆಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು HD ಕೋಟೆಯ ಶಿರಮಹಳ್ಳಿಯಲ್ಲಿ ಶ್ರೀ ಲಕ್ಷ್ಮಿ ದೇವಿ ಅಮ್ಮನವರ ನೂತನ ದೇವಾಲಯವನ್ನು ಉದ್ಘಾಟಿಸಿ ಮಾತನಾಡಿದರು. HD ಕೋಟೆಯ ಶಿರಮಹಳ್ಳಿಯ ಜನರು ದೈವಭಕ್ತರು. ದೇಗುಲದಲ್ಲಿ ಸ್ಥಾಪಿಸುವ ಪ್ರತಿಮೆಯಲ್ಲಿ ದೇವರನ್ನು ಕಾಣುವುದು ನಮ್ಮ ನಂಬಿಕೆ. ಬಸವಾದಿ ಶರಣರು, ದೇವರು ಎಲ್ಲೆಡೆಯೂ , ಎಲ್ಲರಲ್ಲಿಯೂ ಇದ್ದಾನೆ ಎಂದಿದ್ದರು. ನಮ್ಮ ಪ್ರಾರ್ಥನೆಯಲ್ಲಿ ಇತರರ ಒಳಿತನ್ನೂ ಕೇಳಬೇಕಾಗಿದ್ದು, ದೇವರೆಂಬ ನಂಬಿಕೆಯು ಜಾತಿಧರ್ಮಗಳನ್ನು ಮೀರಿದಂಥದ್ದು. ಯಾವ ಜಾತಿಧರ್ಮಗಳು ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕೆಂದೇ ತಿಳಿಸುತ್ತದೆ ಎಂದರು. ಜಾತಿಧರ್ಮಗಳ ಮರೆತು ಜನರು ಒಗ್ಗಟ್ಟಾಗಬೇಕು ಸಮಾಜದ ಪಟ್ಟಭದ್ರಹಿತಾಸಕ್ತಿಗಳು , ಸಮಾಜದ ಜಾತಿವ್ಯವಸ್ಥೆ ಹಾಗೂ ಅಸಮಾನತೆಗಳನ್ನು ಬೆಂಬಲಿಸುತ್ತಾರೆ. ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳು ನಡೆಯುತ್ತಿವೆ. ಇಂತಹ ಕುಶಕ್ತಿಗಳ ಬಗ್ಗೆ ನಾವು ಜಾಗೃತರಾಗಿರಬೇಕು. ಇಂದು ಲಕ್ಷ್ಮೀ ದೇಗುಲದ ಉದ್ಘಾಟನೆಯನ್ನು ಜಾತ್ರೆಯ ರೀತಿಯಲ್ಲಿ ಆಯೋಜಿಸಿರುವುದು ಸಂತಸದ ವಿಚಾರ. ಜಾತಿಧರ್ಮಗಳ ಬೇಧ…
ಶೀವಮೊಗ್ಗ : ನಗರ ಸ್ಥಳೀಯ ಸಂಸ್ಥೆ ಮತ್ತು ಪಂಚಾಯತ್ ರಾಜ್ ಚುನಾವಣೆ ನಡೆಸದೆ ಕಾಂಗ್ರೇಸ್ ಪಕ್ಷ ರಾಜೀವ್ ಗಾಂಧಿ ಅವರ ಆಶಯಕ್ಕೆ ದ್ರೋಹ ಬಗೆದಿದೆ. ಮಹಾತ್ಮಾ ಗಾಂಧೀಜಿ ಅವರ ಗ್ರಾಮ ಸ್ವರಾಜ್ ಕಲ್ಪನೆಯನ್ನು ಕಾಂಗ್ರೇಸ್ ಪಕ್ಷ ಮೂಲೆಗುಂಪು ಮಾಡಿದೆ ಎಂದು ಕಾಂಗ್ರೇಸ್ ಮಾಜಿ ಜಿಲ್ಲಾಧ್ಯಕ್ಷ ತೀ.ನ.ಶ್ರೀನಿವಾಸ್ ಗಂಭೀರ ಆರೋಪ ಮಾಡಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪ್ರಕೃತಿ ವಿಕೋಪ, ಯುದ್ದ ಇನ್ನಿತರೆ ತುರ್ತು ಸಂದರ್ಭದಲ್ಲಿ ಮಾತ್ರ ಚುನಾವಣೆ ನಡೆಸಬಾರದು ಎನ್ನುವ ನಿಯಮವಿದೆ. ಆದರೆ ಕಳೆದ ಐದು ವರ್ಷಗಳಿಂದ ಬಿಜೆಪಿ ಮತ್ತು ಕಾಂಗ್ರೇಸ್ ಪಕ್ಷ ಜಿಲ್ಲಾ, ತಾಲ್ಲೂಕು ಪಂಚಾಯ್ತಿ ಚುನಾವಣೆ ನಡೆಸದೆ ಸ್ಥಳೀಯ ಸಂಸ್ಥೆಗೆ ಆಯ್ಕೆಯಾಗಬೇಕಾಗಿದ್ದ ಚುನಾಯಿತ ಪ್ರತಿನಿಧಿಗಳಿಗೆ ಅನ್ಯಾಯ ಮಾಡಿದ್ದಾರೆ ಎಂದು ಹೇಳಿದರು. ಲೋಕಸಭೆ, ವಿಧಾನಸಭೆ ಚುನಾವಣೆ ಕಾಲಕಾಲಕ್ಕೆ ನಡೆಯುತ್ತದೆ. ಆದರೆ ನಗರ ಸ್ಥಳೀಯ ಸಂಸ್ಥೆ, ಪಂಚಾಯತ್ ರಾಜ್ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುತ್ತಿಲ್ಲ. ಸಂವಿಧಾನದ ಕಲಂ 73 ಮತ್ತು 74ರ…
ಶಿವಮೊಗ್ಗ: ಮುಖ್ಯಮಂತ್ರಿಗಳು ದಾಖಲೆಯ ಬಜೆಟ್ ಮಂಡಿಸಿದ್ದಾರೆ. ಮೂಲಭೂತ ಸೌಲಭ್ಯಕ್ಕೆ ಹೆಚ್ಚಿನ ಒತ್ತು ಬಜೆಟ್ನಲ್ಲಿ ಮಾಡಿದ್ದಾರೆ. ಅಭಿವೃದ್ದಿಗಾಗಿ ನರೇಂದ್ರ ಮೋದಿ ಸಹ ಸಾಲ ಮಾಡಿದ್ದಾರೆ. ಬಿಜೆಪಿಯವರು ಸಾಲ ರಾಮಯ್ಯ ಎಂದು ಟೀಕೆ ಮಾಡುತ್ತಿದ್ದಾರೆ. ಹಾಗಾದರೆ ಅವರು ಸಾಲ ಮಾಡಿಲ್ಲವೇ, ಅವರ ಆಡಳಿತ ಇರುವ ರಾಜ್ಯಗಳಲ್ಲಿ ಸಾಲ ಮಾಡಿಲ್ಲವೇ ಎಂದು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಪ್ರಶ್ನಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕೇಂದ್ರದಿoದ 31 ಸಾವಿರ ಕೋಟಿ ರೂ. ಬರಬೇಕಾಗಿತ್ತು. ಅದು ಕೇವಲ 11 ಸಾವಿರ ಕೋಟಿ ಮಾತ್ರ ಬಂದಿದೆ. ಇದು ರಾಜ್ಯ ಸರ್ಕಾರದ ಮೇಲೆ ಆರ್ಥಿಕ ಹೊರೆ ಹೊರಿಸಿದೆ. ಜೆಜೆಎಂಗೆ ಬರಬೇಕಾದ ಹಣ ಬಿಡುಗಡೆ ಕೇಂದ್ರ ಮಾಡಿಲ್ಲ. ಕೇಂದ್ರದ ಪಾಲು ಬಹುತೇಕ ಕಾಮಗಾರಿಗಳಿಗೆ ಬಿಡುಗಡೆ ಮಾಡಿಲ್ಲ ಎಂದು ಕಿಡಿಕಾರಿದರು. ರಾಜ್ಯ ಸರ್ಕಾರ ಈಗಾಗಲೆ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿ ಚುನಾವಣೆಗೆ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಮೊದಲು ಗ್ರಾಮ ಪಂಚಾಯ್ತಿ ಚುನಾವಣೆ ನಡೆಸಲು ಸರ್ಕಾರ ಗಮನ ಹರಿಸಿದೆ. ಇದರ ಜೊತೆಗೆ…
ಶಿವಮೊಗ್ಗ: 11 ಕೋಟಿ ರೂ. ವೆಚ್ಚದಲ್ಲಿ ಸಾಗರದ ಹಾನಂಬಿ ಹೊಳೆಗೆ ಚಾನಲ್ ನಿರ್ಮಾಣ ಮಾಡಲಾಗುತ್ತಿದೆ. ಸುಮಾರು 50 ಕೋಟಿ ರೂ. ವೆಚ್ಚದಲ್ಲಿ ಹಾನಂಬಿ ಹಳ್ಳಕ್ಕೆ ಚಾನಲ್ ನಿರ್ಮಿಸಿ, ಮಳೆಯಿಂದ ಆಗುವ ಹಾನಿಯನ್ನು ತಡೆಯಬೇಕು ಎನ್ನುವ ಉದ್ದೇಶ ಹೊಂದಲಾಗಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರೂ ನಗರದಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಇಲಾಖೆ ವತಿಯಿಂದ ಹಾನಂಬಿಹಳ್ಳ ದುರಸ್ತಿಗೆ 1 ಕೋಟಿ ರೂ. ವೆಚ್ಚದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದಂತ ಅವರು, ಹಾನಂಬಿ ಹಳ್ಳ ಮಳೆಗಾಲದಲ್ಲಿ ಉಕ್ಕಿ ಅಕ್ಕಪಕ್ಕದ ಮನೆಗಳ ಜೊತೆಗೆ ವಿನೋಬಾ ನಗರದ ಕೆಲವು ಬಡಾವಣೆಗಳಿಗೆ ಸಹ ನೀರು ನುಗ್ಗುತಿತ್ತು. ಸಾಕಷ್ಟು ಮನೆಗಳು ಕೊಚ್ಚಿಕೊಂಡು ಹೋದ ಉದಾಹರಣೆಗಳಿವೆ. ಈ ಹಿನ್ನೆಲೆಯಲ್ಲಿ ಜನರ ದೂರಿನ ಮೇರೆಗೆ ಮೊದಲು 10 ಕೋಟಿ, ಈಗ 1 ಕೋಟಿ ರೂ. ಬಿಡುಗಡೆ ಮಾಡಿದ್ದು ಸದ್ಯದಲ್ಲಿಯೆ ಉಳಿದ 40 ಕೋಟಿ ಹಣವನ್ನು ಉಪ…
ಬೆಂಗಳೂರು: ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಕೋರಿದ್ದ ಅರ್ಜಿದಾರರಿಗೆ ಮಾಹಿತಿ ನೀಡದೇ ನಿರ್ಲಕ್ಷ್ಯ ತೋರಿದ್ದ ಬಿಡಿಎ ಅಧಿಕಾರಿಯೊಬ್ಬರಿಗೆ ಕರ್ನಾಟಕ ಮಾಹಿತಿ ಆಯೋಗ 4 ಪ್ರತ್ಯೇಕ ಪ್ರಕರಣಗಳಲ್ಲಿ 1 ಲಕ್ಷ ದಂಡ ವಿಧಿಸಿದೆ. ಅದೇ ರೀತಿ ಬಿಡಿಎ ಮತ್ತೊಬ್ಬ ಅಧಿಕಾರಿಗೆ ಕೂಡ ಪ್ರಕರಣವೊಂದರಲ್ಲಿ ಮಾಹಿತಿ ನೀಡದಿದ್ದಕ್ಕಾಗಿ 25 ಸಾವಿರ ರೂ ದಂಡ ವಿಧಿಸಿದೆ. ಉಮೇಶ್, ಉಪಕಾರ್ಯದರ್ಶಿ -1 ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಇವರೇ ಮಾಹಿತಿ ಆಯೋಗದಿಂದ 1 ಲಕ್ಷ ರೂ ದಂಡನೆಗೆ ಒಳಗಾದ ಅಧಿಕಾರಿ. ಅದೇ ರೀತಿ ಸಿ.ಎಲ್ ಶಿವಕುಮಾರ್ ಕಾರ್ಯದರ್ಶಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಇವರಿಗೆ ಪ್ರತ್ಯೇಕ ಪ್ರಕರಣವೊಂದರಲ್ಲಿ ಆಯೋಗ 25 ಸಾವಿರ ರೂ ದಂಡ ಹಾಕಿದೆ. ಮಾಹಿತಿ ಹಕ್ಕು ಕಾಯ್ದೆಯಡಿ ಎಲ್ಲಾ ಸಾರ್ವಜನಿಕ ಪ್ರಾಧಿಕಾರಗಳು ಕಾಯ್ದೆಯ ಕಲಂ 4 ರ ಅನ್ವಯ ತಮ್ಮ ಪ್ರಾಧಿಕಾರಗಳ ಹೊಣೆಗಾರಿಕೆಯನ್ನು ಕಾಲಕಾಲಕ್ಕೆ ನಿರ್ವಹಿಸಿದ ಕುರಿತು ತಮ್ಮ ವೆಬ್ಸೈಟ್ನಲ್ಲಿ ಅಧಿಕೃತವಾಗಿ ಪ್ರಕಟಿಸಬೇಕು ಮತ್ತು ನಿರ್ವಹಿಸಿರಬೇಕು. ಈ ಬಗ್ಗೆ ದೇಶದ ಸರ್ವೋಚ್ಚ ನ್ಯಾಯಾಲಯ ಕೂಡ ಮಾಹಿತಿ ಹಕ್ಕು…
ಬೆಂಗಳೂರು : ಕ್ಷುಲ್ಲಕ ಕಾರಣಕ್ಕೆ ದಂಪತಿಗಳ ನಡುವೆ ನಡೆದ ಗಲಾಟೆಯು ಗೃಹಿಣಿಯೊಬ್ಬರ ಬಲಿ ಪಡೆದಿದೆ. ಕಳೆದ ಮೂರು ದಿನಗಳ ಹಿಂದೆ ಮಾಡಿದ ಸಾಂಬಾರ್ ಅನ್ನೇ ಪತಿಗೆ ಬಡಿಸಿದ್ದಕ್ಕೆ ನಡೆದ ಜಗಳವು ಆತ್ಮಹತ್ಯೆಯಲ್ಲಿ ಅಂತ್ಯವಾಗಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ನಡೆದಿದೆ. ಏನಿದು ಘಟನೆ? ಮೃತರನ್ನು ಕಾವ್ಯ (27) ಎಂದು ಗುರುತಿಸಲಾಗಿದೆ. ಇವರು ರಂಗಸ್ವಾಮಿ ಎಂಬುವವರನ್ನು ಐದು ವರ್ಷಗಳ ಹಿಂದೆ ವಿವಾಹವಾಗಿದ್ದರು. ಈ ದಂಪತಿಗೆ ನಾಲ್ಕು ವರ್ಷದ ಒಂದು ಮಗುವಿದೆ. ಲಭ್ಯವಿರುವ ಮಾಹಿತಿಯ ಪ್ರಕಾರ, ಕಾವ್ಯ ಅವರು ಮೂರು ದಿನಗಳ ಹಿಂದೆ ಸಾಂಬಾರ್ ತಯಾರಿಸಿದ್ದರು. ಅದೇ ಸಾಂಬಾರನ್ನು ಫ್ರಿಡ್ಜ್ನಲ್ಲಿಟ್ಟು ಬಿಸಿ ಮಾಡಿ ಕಳೆದ ಮೂರು ದಿನಗಳಿಂದ ಪತಿಗೆ ಬಡಿಸುತ್ತಿದ್ದರು ಎನ್ನಲಾಗಿದೆ. ವಿಕೋಪಕ್ಕೆ ತಿರುಗಿದ ಜಗಳ ಸತತವಾಗಿ ಮೂರು ದಿನಗಳಿಂದ ಒಂದೇ ಸಾಂಬಾರ್ ನೀಡಿದ್ದಕ್ಕೆ ಆಕ್ರೋಶಗೊಂಡ ಪತಿ ರಂಗಸ್ವಾಮಿ, ಪತ್ನಿಯ ಜೊತೆ ತೀವ್ರ ಜಗಳವಾಡಿದ್ದಾರೆ. ಕಾವ್ಯ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಲು ಯತ್ನಿಸಿದ್ದಾರೆ ಎಂದು ವರದಿಯಾಗಿದೆ. ಇದರಿಂದ ತೀವ್ರವಾಗಿ ಮನನೊಂದ ಕಾವ್ಯ,…
ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ 4ನೇ ಸುತ್ತಿನ (ಸ್ಟ್ರೇ ವೇಕೆನ್ಸಿ) ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ಪ್ರಕಟಿಸಿದ್ದು, ಈ ಮೂಲಕ 2025ನೇ ಸಾಲಿನ ಕೌನ್ಸೆಲಿಂಗ್ ಪ್ರಕ್ರಿಯೆ ಮುಗಿದಂತಾಗಿದೆ. ಈ ಸುತ್ತಿಗೆ ಲಭ್ಯ ಇದ್ದ ಒಟ್ಟು 898 ಕ್ಲಿನಿಕಲ್ ಸೀಟುಗಳ ಪೈಕಿ 115 ಸೀಟು ಹಂಚಿಕೆಯಾಗಿದೆ. ಇನ್ನೂ 783 ಸೀಟು ಹಂಚಿಕೆಯಾಗದೆ ಬಾಕಿ ಉಳಿದಿವೆ ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ತಿಳಿಸಿದ್ದಾರೆ. ಸೀಟು ಹಂಚಿಕೆಯಾದವರು ಮಾ.9ರಿಂದ 11ರೊಳಗೆ ಶುಲ್ಕ ಪಾವತಿಸಿ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಬೇಕು. ಮಾ.12ರೊಳಗೆ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ಅವರು ವಿವರಿಸಿದ್ದಾರೆ. https://kannadanewsnow.com/kannada/modi-who-is-ruining-the-countrys-reputation-globally-should-resign-cm-siddaramaiah/ https://kannadanewsnow.com/kannada/four-arrested-including-nurse-for-honey-trapping-businessman-in-kheda-and-demanding-rs-25-lakh/














