Subscribe to Updates
Get the latest creative news from FooBar about art, design and business.
Author: kannadanewsnow09
ಅಮೇರಿಕಾ: ಪಶ್ಚಿಮ ಗ್ವಾಟೆಮಾಲಾದ ಇಂಟರ್-ಅಮೆರಿಕನ್ ಹೆದ್ದಾರಿಯಲ್ಲಿ ಪ್ರಯಾಣಿಕರ ಬಸ್ ಕಣಿವೆಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 15 ಜನರು ಸಾವನ್ನಪ್ಪಿದ್ದು, 19 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. “ಈ ಅಪಘಾತದಲ್ಲಿ ಹದಿನೈದು ಜನರು ಸಾವನ್ನಪ್ಪಿದ್ದಾರೆ – 11 ಪುರುಷರು, ಮೂವರು ಮಹಿಳೆಯರು ಮತ್ತು ಒಬ್ಬ ಅಪ್ರಾಪ್ತ ವಯಸ್ಕ” ಎಂದು ಸ್ಥಳೀಯ ಅಗ್ನಿಶಾಮಕ ದಳದ ವಕ್ತಾರ ಲಿಯಾಂಡ್ರೊ ಅಮಡೊ ಹೇಳಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಸುಮಾರು 19 ಗಾಯಾಳುಗಳನ್ನು ಘಟನಾ ಸ್ಥಳಕ್ಕೆ ಸಮೀಪದ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ ಎಂದು ಅವರು ಹೇಳಿದರು. https://twitter.com/Ejercito_GT/status/2004785823330320814 ಈ ಘಟನೆ 172 ಮತ್ತು 174 ಕಿಲೋಮೀಟರ್ಗಳ ನಡುವಿನ ಸೊಲೊಲಾ ಇಲಾಖೆಯಲ್ಲಿ ನಡೆದಿದ್ದು, ಈ ಪ್ರದೇಶವು ದಟ್ಟವಾದ ಮಂಜಿನಿಂದ ಕೂಡಿದ್ದು, ಚಾಲಕರಿಗೆ ಗೋಚರತೆಯನ್ನು ಕಡಿಮೆ ಮಾಡುತ್ತದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ತುರ್ತು ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿರುವಾಗ ನಜ್ಜುಗುಜ್ಜಾದ ಬಸ್ ಕಂದರದಲ್ಲಿ ಆಳವಾಗಿ ಬಿದ್ದಿರುವುದನ್ನು ತೋರಿಸುವ ಫೋಟೋಗಳನ್ನು ಅಗ್ನಿಶಾಮಕ ಇಲಾಖೆ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದೆ. https://kannadanewsnow.com/kannada/powerful-7-0-magnitude-earthquake-hits-taiwan/…
ಬೆಂಗಳೂರು: “ಬೆಂಗಳೂರು ಹಾಗೂ ಸುತ್ತಮುತ್ತಲ ಅವರೆಕಾಯಿ ಸೊಗಡು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆಕರ್ಷಣೆಯಾಗಬೇಕು. ಅದಕ್ಕೆ ಇಂತಹ ಮೇಳಗಳು ನೆರವಾಗಲಿ. ಇದಕ್ಕೆ ಪ್ರೋತ್ಸಾಹ ನೀಡುವುದು ನಮ್ಮ ಕರ್ತವ್ಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ವಾಸವಿ ಸಂಸ್ಥೆಯವರು ಆಯೋಜಿಸಿರುವ ಅವರೆಬೇಳೆ ಮೇಳ ಕಾರ್ಯಕ್ರಮದಲ್ಲಿ ಹಾಗೂ ಅದಕ್ಕೆ ಮೊದಲು ಮಾಧ್ಯಮದವರ ಜತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶನಿವಾರ ಮಾತನಾಡಿದರು. “ಇಂದು ಬೆಳಗ್ಗೆ ರೈತ ಸಂತೆಗೆ ಹೋಗಿ ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ. ಅಲ್ಲಿ ರೈತರು ತಮ್ಮ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದರು. ಅದನ್ನು ನೋಡಿ ಬಹಳ ಸಂತೋಷವಾಯಿತು. ವಾಸವಿ ಸಂಸ್ಥೆಯವರು ಬಸವನಗುಡಿಯಲ್ಲಿ ಅವರೆಕಾಳು ಮೇಳವನ್ನು ಆಯೋಜಿಸಿ ಅವರೇ ಕಾಳಿನಿಂದ ನೂರಾರು ಪದಾರ್ಥ ತಯಾರಿಸಿ ಮಾರಾಟ ಮಾಡುತ್ತಿದ್ದಾರೆ. ಹಣ್ಣುಗಳ ರಾಜ ಮಾವು, ಕಾಳುಗಳ ರಾಜ ಅವರೆಕಾಯಿ. ಮಾಗಡಿ ಅವರೆಕಾಯಿ ತನ್ನ ಸೊಗಡಿಗೆ ಬಹಳ ಪ್ರಸಿದ್ಧಿ. ನಾನು ಜಿಕೆವಿಕೆಯಲ್ಲಿ ನೋಡಿದೆ. ಅಲ್ಲಿ ಅವರೆಕಾಯಿ ಬಿಡಿಸುವ ಯಂತ್ರವನ್ನು ಕೃಷಿ ವಿವಿಯವರು ಕಂಡು ಹಿಡಿದಿದ್ದಾರೆ”…
ಬೆಂಗಳೂರು: ಹುಲಿ ದಾಳಿಯಿಂದ ಮೃತಪಟ್ಟ ವಾಚರ್ ಸಣ್ಣ ಹೈದ ಅವರ ಹತ್ತಿರದ ಬಂಧುಗಳಿಗೆ ವಿಮೆ ಪರಿಹಾರ ಮತ್ತು ಇಲಾಖೆ ನೀಡುವ ಪರಿಹಾರ ಇತ್ಯಾದಿ ಸೇರಿ ಒಟ್ಟಾರೆ 45 ಲಕ್ಷ ರೂ. ಪರಿಹಾರ ನೀಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ. ಚಾಮರಾಜನಗರ ಜಿಲ್ಲೆ ಬಂಡೀಪುರ ಮರಳಳ್ಳ ಶಿಬಿರದ ಬಳಿ ಹುಲಿ ದಾಳಿಗೆ ಎಪಿಸಿ ವಾಚರ್ ಸಣ್ಣಹೈದ (56) ಮೃತಪಟ್ಟಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ದುಃಖದ ಸಂದರ್ಭದಲ್ಲಿ ಸಣ್ಣ ಹೈದ ಅವರ ಕುಟುಂಬದೊಂದಿಗೆ ಇಲಾಖೆ ಮತ್ತು ಸರ್ಕಾರ ನಿಲ್ಲುತ್ತದೆ. ಮೃತರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬದವರಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ. ಪ್ರತಿಯೊಂದು ಜೀವವೂ ಅಮೂಲ್ಯ, ಪರಿಹಾರ ನೀಡುವುದರಿಂದ ಹೋದ ಪ್ರಾಣ ಮರಳಿ ಬರುವುದಿಲ್ಲ ಆದರೂ ಮೃತರ ಕುಟುಂಬಕ್ಕೆ ಆಸರೆಯಾಗಲು, ನಿಯಮಾನುಸಾರ ಮೃತರ ಕುಟುಂಬಕ್ಕೆ 45 ಲಕ್ಷ ಪರಿಹಾರ…
ತೈವಾನ್ನ ತೈಪೆಯ ಆಗ್ನೇಯಕ್ಕೆ 7.0 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ರಾಜಧಾನಿಯಾದ್ಯಂತ ಬಲವಾದ ಕಂಪನದ ಅನುಭವವಾಗಿದೆ ಎಂದು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ. ತೈವಾನ್ನ ಹವಾಮಾನ ಆಡಳಿತದ ಪ್ರಕಾರ, ಭೂಕಂಪವು ರಾಜಧಾನಿ ತೈಪೆಯಲ್ಲಿ ಕಟ್ಟಡಗಳನ್ನು ನಡುಗಿಸಿತು ಮತ್ತು 73 ಕಿ.ಮೀ ಆಳದಲ್ಲಿತ್ತು. ಹಾನಿಯ ಮೌಲ್ಯಮಾಪನ ನಡೆಯುತ್ತಿದೆ ಎಂದು ತೈವಾನ್ನ ರಾಷ್ಟ್ರೀಯ ಅಗ್ನಿಶಾಮಕ ಸಂಸ್ಥೆ ತಿಳಿಸಿದೆ. https://twitter.com/foreignersinTW/status/2004934131583696967 ತೈವಾನ್ ಎರಡು ಟೆಕ್ಟೋನಿಕ್ ಪ್ಲೇಟ್ಗಳ ಜಂಕ್ಷನ್ ಬಳಿ ಇದೆ ಮತ್ತು ಭೂಕಂಪಗಳಿಗೆ ಗುರಿಯಾಗುತ್ತದೆ. https://twitter.com/goswamirishith/status/2004939204976070694
ಹಾವೇರಿ : ವಿಕಸಿತ ಭಾರತ ಕನಸು ನನಸಾಗಬೇಕಾದರೆ ಚಾರಿತ್ರ್ಯವಂತ, ಬುದ್ಧಿವಂತ ಮಕ್ಕಳನ್ನು ನಾವು ಸೃಷ್ಠಿ ಮಾಡಿದರೆ ಈ ದೇಶಕ್ಕೆ ಉಜ್ವಲ ಭವಿಷ್ಯ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ನಂಬಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೆಬೆನ್ನೂರ ಗ್ರಾಮದಲ್ಲಿ ಬಳ್ಳಾರಿ ರುದ್ರಪ್ಪ ಶಿಕ್ಷಣ ಸಂಸ್ಥೆಯ 15 ನೇಯ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮೊಟೆಬೆನ್ನೂರಿನಲ್ಲಿ ಶಿಕ್ಷಣ ಕ್ರಾಂತಿ ಮಾಡಿದವರು ಬಳ್ಳಾರಿ ಸಹೋದರರು, ಕೃಷಿ ಮಾಡಿಕೊಂಡು ಬೆವರು ಸುರಿಸಿ ದುಡಿದು ಸಮಾಜದಲ್ಲಿ ಕಷ್ಟ ಪಟ್ಟು ಮುಂದೆ ಬಂದವರು. ಅವರು ಹಾಕಿಕೊಂಡಿರುವ ಮಾರ್ಗದರ್ಶನದಿಂದ ಮುಂದೆ ಬಂದಿರುವ ಪೀಳಿಗೆ ಸಮಾಜಕ್ಕೆ ಏನಾದರೂ ಕೊಡಬೇಕೆಂಬ ಕಾರಣದಿಂದ ಶಿಕ್ಷಣ ಸಂಸ್ಥೆಯನ್ನು ಆರಂಭಿಸಿದ್ದಾರೆ. ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಉತ್ತಮ ಶಿಕ್ಷಣ ನೀಡಲು ಬಹಳಷ್ಟು ಶ್ರಮ ವಹಿಸಿ ಸಂಸ್ಥೆಗಳನ್ನು ಕಟ್ಟಿ ಯಶಸ್ವಿಯಾಗಿದ್ದಾರೆ. ಅವರಿಗೆ ಎಲ್ಲರ ಪರವಾಗಿ ಅಭಿನಂದನೆಗಳು. ಈ ಶಿಕ್ಷಣ ಸಂಸ್ಥೆಗಳು ಇರದಿದ್ದರೆ ಇಲ್ಲಿಯ…
ಮುಂಬೈ : ರಿಲಯನ್ಸ್ ಸಂಸ್ಥಾಪಕ ಹಾಗೂ ಮಾಜಿ ಅಧ್ಯಕ್ಷರಾದ ಧೀರೂಭಾಯಿ ಅಂಬಾನಿಯವರ 93ನೇ ಜಯಂತಿ ಹಿನ್ನೆಲೆಯಲ್ಲಿ ರಿಲಯನ್ಸ್ ಫೌಂಡೇಷನ್ 2025–26ನೇ ಶೈಕ್ಷಣಿಕ ಸಾಲಿನ ತನ್ನ ಪ್ರತಿಷ್ಠಿತ ಪದವಿ (UG) ಮತ್ತು ಸ್ನಾತಕೋತ್ತರ (PG) ವಿದ್ಯಾರ್ಥಿವೇತನಗಳ ಫಲಿತಾಂಶ ಪ್ರಕಟಿಸಿದೆ. ಈ ವರ್ಷ ದೇಶಾದ್ಯಂತ 5,000 ಯುಜಿ ಹಾಗೂ 100 ಪಿಜಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಆಯ್ಕೆಯಾದ ಯುಜಿ ವಿದ್ಯಾರ್ಥಿಗಳಿಗೆ ಗರಿಷ್ಠ ₹2 ಲಕ್ಷ ಹಾಗೂ ಪಿಜಿ ವಿದ್ಯಾರ್ಥಿಗಳಿಗೆ ಗರಿಷ್ಠ ₹6 ಲಕ್ಷವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ. ಇದು 2022ರಲ್ಲಿ ಘೋಷಿಸಿದಂತೆ, ಮುಂದಿನ 10 ವರ್ಷಗಳಲ್ಲಿ 50,000 ವಿದ್ಯಾರ್ಥಿ ವೇತನಗಳನ್ನು ನೀಡುವ ರಿಲಯನ್ಸ್ ಫೌಂಡೇಷನ್ನ ಬದ್ಧತೆಯ ಭಾಗವಾಗಿದೆ. ಇದುವರೆಗೆ ಫೌಂಡೇಷನ್ ಒಟ್ಟು 33,471 ವಿದ್ಯಾರ್ಥಿವೇತನಗಳನ್ನು ವಿತರಿಸಿದೆ. ದೇಶಾದ್ಯಂತ ವ್ಯಾಪಕವಾಗಿ ಭಾಗಿ: 2025–26ನೇ ಸಾಲಿಗೆ ಆಯ್ಕೆ ಪ್ರಕ್ರಿಯೆ ಸ್ಪರ್ಧಾತ್ಮಕವಾಗಿತ್ತು. 1.25 ಲಕ್ಷಕ್ಕೂ ಹೆಚ್ಚು ಅರ್ಜಿಗಳಲ್ಲಿ ಆಯ್ಕೆಯಾದ 5,100 ವಿದ್ಯಾರ್ಥಿಗಳು 28 ರಾಜ್ಯಗಳು ಮತ್ತು 4 ಕೇಂದ್ರಾಡಳಿತ ಪ್ರದೇಶಗಳಿಂದ ಬಂದಿದ್ದು, 15,544 ಶೈಕ್ಷಣಿಕ ಸಂಸ್ಥೆಗಳನ್ನು ಪ್ರತಿನಿಧಿಸುತ್ತಿದ್ದಾರೆ. ಇದು…
ಬೆಂಗಳೂರು : “ನಗರದ ವಿದ್ಯಾರ್ಥಿಗಳಿಗೆ ಹಳ್ಳಿ ಬದುಕಿನ ಬಗ್ಗೆ ಅರಿವು ಮೂಡಿಸಲು ಪಠ್ಯಕ್ರಮ ರೂಪಿಸಬೇಕು. ಈ ಬಗ್ಗೆ ಕೃಷಿ ಸಚಿವರು ಹಾಗೂ ಕೃಷಿ ವಿವಿ ಉಪಕುಲಪತಿಗಳು ರೂಪುರೇಷೆ ಸಿದ್ಧಪಡಿಸಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸೂಚಿಸಿದರು. ಬೆಂಗಳೂರು ಹೆಬ್ಬಾಳದ ಜಿಕೆವಿಕೆ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ರೈತ ಸಂತೆ ಹಾಗೂ ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು. “ಒಂದು ವರ್ಷದ ಹಿಂದೆ ನಾನು ಅಮೆರಿಕಕ್ಕೆ ಹೋದಾಗ ಸ್ಯಾಮ್ ಪಿತ್ರೋಡಾ ಅವರನ್ನು ಭೇಟಿ ಮಾಡಿದ್ದೆ. ಅವರು ಬೆಂಗಳೂರು ವಿದ್ಯಾರ್ಥಿಗಳಿಗೆ ಪಠ್ಯಕ್ರಮದಲ್ಲಿ 2-3 ದಿನಗಳ ಕಾಲ ಹಳ್ಳಿ ಬದುಕಿನ ಪ್ರವಾಸ ಆಯೋಜಿಸಬೇಕು. ಆಮೂಲಕ ಅವರಿಗೆ ಹಳ್ಳಿ ಬದುಕಿನ ಪರಿಸ್ಥಿತಿ ಬಗ್ಗೆ ಅರಿವು ಮೂಡಿಸಬೇಕು. ಈ ಬಗ್ಗೆ ನಿಮ್ಮ ಸರ್ಕಾರ ಚಿಂತನೆ ಮಾಡಬೇಕು ಎಂದು ಸಲಹೆ ನೀಡಿದ್ದರು” ಎಂದು ತಿಳಿಸಿದರು. “ನಾನು ಆರನೇ ತರಗತಿಯಲ್ಲಿದ್ದಾಗ ನ್ಯಾಷನಲ್ ಸ್ಕೂಲ್ ನಿಂದ ಕಾರ್ಮಲ್ ಶಾಲೆಗೆ ಸೇರಿದೆ. ಆಗ ರೈತ ಮುಖ್ಯನೋ, ಜವಾನ ಮುಖ್ಯನೋ ಎಂಬ…
ಮಂಡ್ಯ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾಚಾರ, ದೌರ್ಜನ್ಯ ಖಂಡಿಸಿ ಹಿಂದೂ ಪರ ಸಂಘಟನೆಗಳು ಮದ್ದೂರು ನಗರದಲ್ಲಿ ಶನಿವಾರ ಸಂಜೆ ಪಂಜಿನ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಮದ್ದೂರು ನಗರದ ಶ್ರೀ ಉಗ್ರ ನರಸಿಂಹ ಸ್ವಾಮಿ ದೇವಾಲಯದಿಂದ ಪ್ರವಾಸಿ ಮಂದಿರದ ವೃತ್ತದವರೆಗೆ ಹಿಂದೂ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿ ವಂದೇ ಮಾತರಂ ಹಾಗೂ ನಾವೆಲ್ಲ ಒಂದು ನಾವೆಲ್ಲ ಹಿಂದೂ ಎಂಬ ಘೋಷಣೆಗಳನ್ನು ಕೂಗಿ ಬಾಂಗ್ಲಾದೇಶದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ಉದ್ದೇಶಿಸಿ ಹಿಂದೂ ಮುಖಂಡ ಕೆ.ಟಿ.ನವೀನ್ ಮಾತನಾಡಿ, ಬಾಂಗ್ಲಾದೇಶದಲ್ಲಿ ಇತ್ತಿಚೆಗೆ ಹತ್ಯೆಗೀಡಾದ ದೀಪು ಚಂದ್ರ ದಾಸ್ ಎಂಬ ಹಿಂದೂ ಯುವಕನನ್ನು ಬಹಿರಂಗವಾಗಿ ಸುಟ್ಟು ಹಾಕಿರುವ ಕೃತ್ಯವು ಅಮಾನವೀಯ ಮತ್ತು ಧರ್ಮದ ಹೆಸರಿನಲ್ಲಿ ಮಾನವೀಯತೆಯ ವಿರುದ್ಧ ನಡೆದ ಅಪರಾಧವಾಗಿದ್ದು, ಅವರ ಸಾವಿಗೆ ನ್ಯಾಯ ಸಿಗಬೇಕೆಂದು ಆಗ್ರಹಿಸಿದರು. ಈ ಪ್ರತಿಭಟನೆಯಲ್ಲಿ ಬಿಜೆಪಿ ಅಧ್ಯಕ್ಷ ಶಿವದಾಸ್ ಸತೀಶ್, ಎಂ.ಸಿ.ಸಿದ್ದು, ರವಿಕುಮಾರ್, ಕದಲೂರು ಸುರೇಶ್, ಮಧುಕುಮಾರ್, ಮಲ್ಲಿಕಾರ್ಜುನ, ಅಭಿಷೇಕ್, ಪಂಚಮಿ ಗುರು, ಗಿರೀಶ್ ಮತ್ತಿತರರು…
ಮಕ್ಕಳಿಗೆ ಬ್ರಹ್ಮೋಪದೇಶದಲ್ಲಿ ತಂದೆ ಗುರಸ್ಥಾನದಲ್ಲಿ ಗಾಯತ್ರೀ ಮಂತ್ರೋಪದೇಶವನ್ನು ಮಾಡುತ್ತಾರೆ. ಗಾಯತ್ರೀ ಮಂತ್ರೋಪದೇಶ ಪಡೆಯದಿದ್ದರೆ ಯಾವದೇ ಪೂಜೆ ಪುನಸ್ಕಾರ , ಕರ್ಮ ಏನೂ ಮಾಡಲು ಅಧಿಕಾರವಿಲ್ಲ ಅದಕ್ಕಾಗಿಯೇ ಮೊದಲು ಏಂಟು ವರ್ಷಕ್ಕೆ ಮಕ್ಕಳಿಗೆ ಬ್ರಹ್ಮೋಪದೇಶ ಮಾಡುತ್ತಿದ್ದರು. ಆದರೆ ಈಗ ಬರೀ ಆಡಂಬರಕ್ಕೆ ಮಹತ್ವ , ಕೆಲವರಂತೂ ಮದುವೆ ಮುಂದೆ ಮಾಡಿದರಾಯಿತು ಅನ್ನುವವರು ಇದ್ದಾರೆ. ಯಾವ ವಯಸ್ಸಿನಲ್ಲಿ ಮಕ್ಕಳಿಗೆ ಏನು ಸಂಸ್ಕಾರ ಕೊಡಬೇಕೊ ಅದನ್ನು ಕೊಡಬೇಕು…. ಮಕ್ಕಳಿಗೆ ಸರಿ ವಯಸ್ಸಿಗೆ ಉಪನಯನ ಮಾಡುವದರಿಂದ ಮತ್ತು ಪ್ರತಿ ದಿನ ಗಾಯತ್ರೀ ಮಂತ್ರ ಪಠಣೆ ದಿಂದ ದೈಹಿಕ ,ಮಾನಸಿಕ ವಿದ್ಯೆ ಬುದ್ಧಿ ಏಲ್ಲದರಲ್ಲೂ ತೆಜಸ್ಸನ್ನು ಪಡಿತಾರೆ…. ಈ ಪೋಸ್ಟ ಇಷ್ಟವಾದರೆ ಶೇರ ಮಡಿ ವಿಶ್ವಾಮಿತ್ರ ಮಹರ್ಷಿ ಗಳೇ ಹೇಳುವಂತೆ ನಾಲ್ಕು ವೇದಗಳು ಹುಡುಕಿದರೂ ಈ ಮಂತ್ರಕ್ಕೆ ಸರಿ ಹೊಂದುವ ಬೇರೆ ಮಂತ್ರವಿಲ್ಲ , ಸಮಸ್ತ ವೇದಗಳು , ಯಜ್ಞಗಳೂ , ದಾನಗಳೂ, ವಿವಿಧ ತಪಸ್ಸುಗಳು ದಾನಗಳು ಸೇರಿಸಿದರೂ ಈ ಗಾಯತ್ರೀ ಮಂತ್ರದ ಮಹಾತ್ಮೆಗೆ ಸಮವಾಗಲಾರದು.. ಪ್ರಧಾನ ಗುರುಗಳು…
ಬೆಂಗಳೂರು: ಭಾರತೀಯ ಜ್ಞಾನ ಪರಂಪರೆಯನ್ನು ಆಧುನಿಕ ವಿಜ್ಞಾನದೊಂದಿಗೆ ಬೆಸೆಯುವ ವಿಶಿಷ್ಟ ಪ್ರಯತ್ನವೊಂದಕ್ಕೆ ಉದ್ಯಾನನಗರಿ ಬೆಂಗಳೂರು ಸಾಕ್ಷಿಯಾಗುತ್ತಿದೆ. ಪರಮ್ ಫೌಂಡೇಶನ್ ಮತ್ತು ವೇದಾಂತ ಭಾರತಿ ಜಂಟಿಯಾಗಿ ವಿದ್ಯಾರ್ಥಿಗಳಿಗಾಗಿ ‘ ವೇದಾಂತ ಮೇಕಥಾನ್’ (Vedanta Makeathon) ಎಂಬ ಎರಡು ತಿಂಗಳ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡಿವೆ. ವೇದಾಂತ ಮೇಕಥಾನ್: ಪ್ರಶ್ನೆಗಳು ಅನುಭವಗಳಾಗಿ ಬದಲಾಗುವ ವಿಶಿಷ್ಟ ವೇದಿಕೆ ಪರಮ್ ಫೌಂಡೇಶನ್ ಮತ್ತು ವೇದಾಂತ ಭಾರತಿ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿರುವ ‘ವೇದಾಂತ ಮೇಕಥಾನ್’ (Vedanta Makeathon), ಭಾರತೀಯ ಜ್ಞಾನ ಪರಂಪರೆ (Indian Knowledge Systems) ಮತ್ತು ಆಧುನಿಕ ವಿಜ್ಞಾನವನ್ನು ಬೆಸೆಯುವ ಒಂದು ಅಪೂರ್ವ ಪ್ರಯೋಗವಾಗಿದೆ. ಎರಡು ತಿಂಗಳ ಕಾಲ ನಡೆಯುವ ಈ ನವೀನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವೇದಾಂತದ ‘ಮಾಯೆ’, ‘ಚೈತನ್ಯ’ದಂತಹ ದಾರ್ಶನಿಕ ವಿಚಾರಗಳನ್ನು ದೃಷ್ಟಿ ಭ್ರಮೆ (Illusions) ಅಥವಾ ನರವಿಜ್ಞಾನದಂತಹ ಆಧುನಿಕ ತಂತ್ರಜ್ಞಾನದೊಂದಿಗೆ ಜೋಡಿಸಿ, ಸಂವಾದಾತ್ಮಕ ಪ್ರದರ್ಶಿಕೆಗಳನ್ನು (Interactive Exhibits) ಸಿದ್ಧಪಡಿಸಲಿದ್ದಾರೆ. ತಜ್ಞರ ಮಾರ್ಗದರ್ಶನದಲ್ಲಿ ಮೂಡಿಬರುವ ಈ ಸೃಜನಶೀಲ ಮಾದರಿಗಳು ಅಂತಿಮವಾಗಿ ಜನವರಿ 29 ರಿಂದ ಫೆಬ್ರುವರಿ 1ರ…














