Subscribe to Updates
Get the latest creative news from FooBar about art, design and business.
Author: kannadanewsnow09
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: 2026 ರ ಐಸಿಸಿ ಪುರುಷರ ಟಿ 20 ವಿಶ್ವಕಪ್ ಮತ್ತು ಜನವರಿಯಲ್ಲಿ ನ್ಯೂಜಿಲೆಂಡ್ ವಿರುದ್ಧದ ಟಿ 20 ಐ ಸರಣಿಗಾಗಿ ಭಾರತೀಯ ಕ್ರಿಕೆಟ್ ತಂಡದ ತಂಡವನ್ನು ಮುಂಬೈನ ಬಿಸಿಸಿಐ ಕಚೇರಿಯಲ್ಲಿ ಶನಿವಾರ ನಾಯಕ ಸೂರ್ಯಕುಮಾರ್ ಯಾದವ್ ಮತ್ತು ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಪ್ರಕಟಿಸಿದರು. ಭಾರತವು ನಮೀಬಿಯಾ, ನೆದರ್ಲ್ಯಾಂಡ್ಸ್, ಪಾಕಿಸ್ತಾನ ಮತ್ತು ಯುನೈಟೆಡ್ ಸ್ಟೇಟ್ಸ್ ಜೊತೆ ಗ್ರೂಪ್ ಎ ನಲ್ಲಿ ಸ್ಥಾನ ಪಡೆದಿದೆ. ತಂಡವು ಫೆಬ್ರವರಿ 7 ರಂದು ಮುಂಬೈನಲ್ಲಿ ಯುಎಸ್ಎ ವಿರುದ್ಧ ವಿಶ್ವಕಪ್ ಅಭಿಯಾನವನ್ನು ಪ್ರಾರಂಭಿಸಲಿದೆ. ಭಾರತೀಯ ಕಾಲಮಾನ ಮಧ್ಯಾಹ್ನ 01:30 ಕ್ಕೆ ಘೋಷಿಸಬೇಕಿದ್ದ ತಂಡವು ಸುಮಾರು 35 ನಿಮಿಷಗಳ ಕಾಲ ವಿಳಂಬವಾಯಿತು, ಏಕೆಂದರೆ ಅಹಮದಾಬಾದ್ನಲ್ಲಿದ್ದ ಸೂರ್ಯಕುಮಾರ್ ಯಾದವ್ ಸಭೆಗಾಗಿ ಮುಂಬೈಗೆ ತಡವಾಗಿ ಬಂದಿಳಿದರು. ಹೀಗಿದೆ 2026 ರ ಟಿ20 ವಿಶ್ವಕಪ್ಗಾಗಿ ಭಾರತ ತಂಡ ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಾರ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ತಿಲಕ್ ವರ್ಮಾ, ಅಕ್ಷರ್…
ಬೆಂಗಳೂರು: ಹಿರಿಯ ಪತ್ರಕರ್ತ ಹಾಗೂ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷ ದೊಡ್ಡ ಬೊಮಯ್ಯ ಅವರು ಇಂದು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಕರ್ನಾಟಕ ಪತ್ರಕರ್ತರ ಸಹಕಾರ ಸಂಘವು ಸಂತಾಪ ಸೂಚಿಸಿದೆ. ಹಿರಿಯ ಪತ್ರಕರ್ತರ ದೊಡ್ಡ ಬೊಮ್ಮಯ್ಯ ಅವರು ಮೂಲತಃ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ರೊಪ್ಪ ಗ್ರಾಮದ ದೊಡ್ಡಯ್ಯ ಮತ್ತು ಚಿಕ್ಕಮ ದಂಪತಿಯ ಪುತ್ರರಾದ ದೊಡ್ಡಬೊಮಯ್ಯ ಅವರು ಈ ಮೊದಲು ಸಂಜೆವಾಣಿ ಮತ್ತು ಪ್ರಸ್ತುತ ಇಂದು ಸಂಜೆ ಪತ್ರಿಕೆಯಲ್ಲಿ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಆಕಾಶವಾಣಿ ಮತ್ತು ದೂರದರ್ಶನದಲ್ಲಿ ಅರೆಕಾಲಿಕ ಸಹಾಯಕ ಸುದ್ದಿ ಸಂಪಾದಕರಾಗಿ ಕೆಲಸ ಮಾಡಿದ್ದರು. ಸುಮಾರು 30 ವರ್ಷ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದ ಅವರು, ಅಪಾರವಾದ ಆತ್ಮೀಯ ಬಳಗವನ್ನು ಗಳಿಸಿಕೊಂಡಿದ್ದರು. ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನದ ಕಾರ್ಯಕಲಾಪಗಳ ವರದಿಗಾಗಿ ತೆರಳಿದ್ದ ಅವರು ಇಂದು ಬೆಳಗ್ಗೆ ಬೆಂಗಳೂರಿಗೆ ವಾಪಸ್ಸಾಗಿದರು. ಕೆಎಸ್ಆರ್ಟಿಸಿ ಬಸ್ ನಿಂದ ಇಳಿದು, ಬಾಗಲೂರಿನಲ್ಲಿರುವ ತಮ ಮನೆ ತಲುಪಲು ಬಿಎಂಟಿಸಿ ಬಸ್ ಹತ್ತಿದ್ದ ಸಂದರ್ಭದಲ್ಲಿ ತೀವ್ರ ಹೃದಯಾಘಾತವಾಗಿದೆ. ಸಹಪ್ರಯಾಣಿಕರು ಉಪಚರಿಸಿದ ಹೊರತಾಗಿಯೂ…
ಶಿವಮೊಗ್ಗ: ನಿವೃತ್ತಿಯ ಬಳಿಕ ಹಲವಾರು ಪತ್ರಕರ್ತರು ಸಂಕಷ್ಟದ ಜೀವನ ನಡೆಸುತ್ತಿದ್ದಾರೆ. ಅವರೆಲ್ಲರಿಗೂ ಪಿಂಚಣಿ ನಿಯಮ ಸಡಿಲಗೊಂಡರೇ ಪಿಂಚಣಿ ದೊರೆಯುವ ಕೆಲಸ ಆಗಲಿದೆ. ಆ ನಿಟ್ಟಿನಲ್ಲಿ ಸರ್ಕಾರ, ಕೆಯುಡಬ್ಲೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರ ಕಾರ್ಯಪ್ರವೃತ್ತರಾಗಲಿ ಎಂಬುದಾಗಿ ಮಾಹಿತಿ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ ಅಭಿಪ್ರಾಯ ಪಟ್ಟರು. ಇಂದು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದರು. ಪತ್ರಕರ್ತರು ಕೆಲಸದ ಕಡೆಗೆ ಗಮನ ಕೊಟ್ಟು ಆರೋಗ್ಯದ ಕಡೆ ಗಮನ ಹರಿಸುತ್ತಿಲ್ಲ. ಇಂದು ಹಿರಿಯ ಪತ್ರಕರ್ತರ ದೊಡ್ಡ ಬೊಮ್ಮಯ್ಯ ಅವರನ್ನು ಕಳೆದುಕೊಳ್ಳುವಂತಾಗಿದೆ ಎಂಬುದಾಗಿ ಸಂತಾಪ ನುಡಿಗಳನ್ನಾಡಿದರು. ಪತ್ರಕರ್ತರ ಕೆಲಸದ ಜೊತೆಗೆ ಆರೋಗ್ಯದ ಕಡೆಗೂ ಗಮನ ಹರಿಸಬೇಕು. ವ್ಯಾಯಾಮದಂತಹ ದಿನ ಚರಿಗಳನ್ನು ರೂಢಿಸಿಕೊಳ್ಳಬೇಕು. ಆರೋಗ್ಯದ ಕಡೆ ಗಮನ ಕೊಡಿ. ಕುಟುಂಬದ ಜೊತೆಗೆ ಸಮಯ ನೀಡಿ ಎಂದು ಸಲಹೆ ಮಾಡಿದರು. ಕೆಯುಡಬ್ಲೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಉತ್ತಮ ಕೆಲಸ ಮಾಡುತ್ತಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಅಂತೂ ಸಂಕಷ್ಟದಲ್ಲಿ ಇದ್ದಂತಹ ಪತ್ರಕರ್ತರಿಗೆ ನೆರವಾದರು…
ಬೆಂಗಳೂರು: ಇಂದು ಹಿರಿಯ ಪತ್ರಕರ್ತರ ದೊಡ್ಡಬೊಮ್ಮಯ್ಯ(63) ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ನಿಧನಕ್ಕೆ KUWJ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಸಂತಾಪ ಸೂಚಿಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು ಬೆಳಗಾವಿ ಅಧಿವೇಶನ ಮುಗಿಸಿ ಬೆಂಗಳೂರಿಗೆ ಇಂದು ಬೆಳಿಗ್ಗೆಯಷ್ಟೆ ಬಂದಿಳಿದಿದ್ದ ಹಿರಿಯ ಪತ್ರಕರ್ತ ದೊಡ್ಡಬೊಮ್ಮಯ್ಯ (63) ಹೃದಯಾಘಾತದಿಂದ ಮೃತಪಟ್ಟಿದ್ದು,ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ ಎಂದು ತಿಳಿಸಿದ್ದಾರೆ. ಕೆಯುಡಬ್ಲ್ಯೂಜೆ ಸಂತಾಪ: ಸಂಜೆವಾಣಿ, ಇಂದುಸಂಜೆ ಪತ್ರಿಕೆ ವರದಿಗಾರರಾಗಿದ್ದ, ಪ್ರೆಸ್ ಕ್ಲಬ್ ನಲ್ಲೂ ಹಲವಾರು ಬಾರಿ ಪದಾಧಿಕಾರಿಯಾಗಿ ಕ್ರೀಯಾಶೀಲ ಸಂಘಟಕರಾಗಿದ್ದ ದೊಡ್ಡಬೊಮ್ಮಯ್ಯ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ(KUWJ)ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸಂತಾಪ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಸುವರ್ಣ ಸೌಧ: ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ ಕಾರ್ಮಿಕರಿಗೆ ಪಾಲಿಕೆಗಳಿಂದಲೇ ವೇತನವನ್ನು ನೇರವಾಗಿ ಪಾವತಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಶುಕ್ರವಾರ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ವೇದವ್ಯಾಸ ಕಾಮತ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 13 ಮಹಾನಗರ ಪಾಲಿಕೆಗಳಲ್ಲಿನ ಕಾರ್ಮಿಕರಿಗೆ ಪಾಲಿಕೆಗಳೇ ನೇರವಾಗಿ ವೇತನ ಪಾವತಿಸಬೇಕೆಂಬುದು ನಮ್ಮ ಸರ್ಕಾರ ಆಶಯವಾಗಿದೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅಲ್ಲಿಂದ ಒಪ್ಪಿಗೆ ಸಿಕ್ಕರೆ ಎಲ್ಲರಿಗೂ ನೇರವಾಗಿ ವೇತನವನ್ನು ಪಾವತಿಸಲಾಗುತ್ತದೆ ಎಂದು ಭರವಸೆ ನೀಡಿದರು. ಎಲ್ಲಾ ಮಹಾನಗರಪಾಲಿಕೆಗಳಲ್ಲಿ 30 ಸಾವಿರಕ್ಕೂ ಅಧಿಕ ಕಾರ್ಮಿಕರು ಗುತ್ತಿಗೆ/ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರನ್ನು ಖಾಯಂಗೊಳಿಸುವ ಬಗ್ಗೆ ಸಲ್ಲಿಸಲಾಗಿದ್ದ ಪ್ರಸ್ತಾವನೆಯನ್ನು ಹಣಕಾಸು ಇಲಾಖೆ ತಿರಸ್ಕರಿಸಿದೆ. ಇಲಾಖೆಗೆ ಆರ್ಥಿಕ ಹೊರೆ ಹೆಚ್ಚಾಗುವುದರಿಂದ ಇವರೆಲ್ಲರನ್ನೂ ಖಾಯಂಗೊಳಿಸಲು ಸಾಧ್ಯವಾಗುವುದಿಲ್ಲ.…
ಬೆಂಗಳೂರು: ನಾಳೆ ಹಳದಿ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರವು ಒಂದು ಗಂಟೆ ತಡವಾಗಿ ಆರಂಭವಾಗಲಿದೆ ಅಂತ ಬಿಎಂಆರ್ ಸಿಎಲ್ ತಿಳಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್) ಪ್ರಯಾಣಿಕರಿಗೆ ತಿಳಿಸುವುದೇನೆಂದರೆ, ಕಾರ್ಯಾಚರಣೆಯನ್ನು ಇನ್ನಷ್ಟು ಸುಧಾರಿಸುವ ಉದ್ದೇಶದಿಂದ ಕೈಗೊಳ್ಳಲಾಗುತ್ತಿರುವ ತುರ್ತು ವ್ಯವಸ್ಥಾ ನಿರ್ವಹಣೆ / ನವೀಕರಣ ಕಾರ್ಯಗಳ ಹಿನ್ನೆಲೆಯಲ್ಲಿ 21 ಡಿಸೆಂಬರ್ 2025 (ಭಾನುವಾರ) ರಂದು ಹಳದಿ ಮಾರ್ಗದ ಮೆಟ್ರೋ ರೈಲು ಸೇವೆಗಳು ನಿಗದಿತ ಸಮಯಕ್ಕಿಂತ ಒಂದು ಗಂಟೆ ತಡವಾಗಿ ಆರಂಭವಾಗಲಿವೆ ಎಂದಿದೆ. ಈ ಹಿನ್ನೆಲೆಯಲ್ಲಿ, ಹಳದಿ ಮಾರ್ಗದಲ್ಲಿ ಮೊದಲ ರೈಲು ಸೇವೆ ಬೆಳಿಗ್ಗೆ 7.00 ಗಂಟೆಯ ಬದಲಾಗಿ ಬೆಳಿಗ್ಗೆ 8.00 ಗಂಟೆಗೆ ಪ್ರಾರಂಭವಾಗಿದ್ದು, ನಂತರ ಭಾನುವಾರದ ಸಾಮಾನ್ಯ ವೇಳಾಪಟ್ಟಿಯಂತೆ ಕಾರ್ಯಾಚರಿಸಲಿದೆ. ಈ ಬದಲಾವಣೆ ಕೇವಲ ಒಂದು ದಿನಕ್ಕೆ ಮಾತ್ರ ಅನ್ವಯವಾಗಿದ್ದು, ಅಂದರೆ 21.12.2025 ರಂದು ಹಳದಿ ಮಾರ್ಗಕ್ಕೆ ಮಾತ್ರ ಸೀಮಿತವಾಗಿರುತ್ತದೆ ಎಂದು ತಿಳಿಸಿದೆ. ನೇರಳೆ ಹಾಗೂ ಹಸಿರು ಮಾರ್ಗಗಳಲ್ಲಿ ಮೆಟ್ರೋ ರೈಲು…
ಬೆಳಗಾವಿ ಸುವರ್ಣಸೌಧ : ರಾಜ್ಯ ಸರ್ಕಾರ ಬಿ.ಪಿ.ಎಲ್.ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆಸಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಹಾಗೂ ಶ್ರವಣಬೆಳಗೊಳ ಶಾಸಕ ಬಾಲಕೃಷ್ಣ.ಸಿ.ಎನ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ಬಿ.ಪಿ.ಎಲ್ ಕಾರ್ಡ್ದಾರರ ಆದಾಯ ಮಿತಿಯನ್ನು ರೂ.1.20 ಲಕ್ಷಕ್ಕೆ ಮಿತಿಗೊಳಿಸಿದೆ. ಆದರೆ ಕೂಲಿ ಕೆಲಸಗಾರರಿಗೂ ಪ್ರತಿದಿನ ರೂ.500 ಕೂಲಿ ದೊರೆಯುತ್ತದೆ. ಇದರ ಆಧಾರದಲ್ಲಿ ಕೂಲಿ ಮಾಡುವವರ ಆದಾಯವೂ ವರ್ಷಕ್ಕೆ ರೂ.1.80 ಲಕ್ಷಕ್ಕೂ ಅಧಿಕವಾಗುತ್ತಿದೆ. ಈ ಹಿನ್ನಲೆಯಲ್ಲಿ ಪರಿಷ್ಕರಿಸಲು ಚಿಂತನೆ ನಡೆದಿದೆ ಎಂದರು. ಕೇಂದ್ರ ಸರ್ಕಾರ ರಾಜ್ಯದಲ್ಲಿ 7,75,206 ಶಂಕಾಸ್ಪದ ಪಡಿತರ ಫಲಾನುಭವಿಗಳನ್ನು ಗುರುತಿಸಿದೆ. ರಾಜ್ಯದಲ್ಲಿ 4.53 ಲಕ್ಷ ಬಿ.ಪಿ.ಎಲ್ ಹಾಗೂ 1.25 ಲಕ್ಷ ಎ.ಪಿ.ಎಲ್ ಕಾರ್ಡ್ ಹೊಂದಿರುವ…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಕಚೇರಿಯ ಸಮಯದಲ್ಲಿ ಅನಧಿಕೃತವಾಗಿ ಹೊರ ಹೋಗುವುದಕ್ಕೆ ಸರ್ಕಾರ ಬ್ರೇಕ್ ಹಾಕಿದೆ. ಅಲ್ಲದೇ ಕಡ್ಡಾಯವಾಗಿ ಚಲನವಲನ ವಹಿ ನಿರ್ವಹಣೆ ಮಾಡುವುದಕ್ಕೂ ಖಡಕ್ ಸೂಚನೆ ನೀಡಿ, ಸರ್ಕಾರಿ ನೌಕರರಿಗೆ ಶಾಕ್ ನೀಡಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯ ಸರ್ಕಾರದ ಕಛೇರಿಗಳಲ್ಲಿ ಸರ್ಕಾರಿ ನೌಕರರು ಚಲನವಲನ ವಹಿ (Movement Register) ಮತ್ತು ನಗದು ಘೋಷಣೆ ವಹಿ (Cash Declaration Register) ಯನ್ನು ನಿರ್ವಹಣೆ ಮಾಡದಿರುವುದು, ಸಭ್ಯ ಉಡುಗೆ ತೊಡುಗೆಗಳನ್ನು ಧರಿಸದಿರುವ ಕುರಿತು ಸಾರ್ವಜನಿಕರಿಂದ/ ಸಂಘ ಸಂಸ್ಥೆಗಳಿಂದ ಹಲವಾರು ದೂರುಗಳು ಸ್ವೀಕೃತವಾಗುತ್ತಿವೆ. ಈ ಕುರಿತು ಈ ಹಿಂದೆ ಹಲವು ಸುತ್ತೋಲೆಗಳನ್ನು ಹೊರಡಿಸಲಾಗಿರುತ್ತದೆ. ಆದಾಗ್ಯೂ ಸದರಿ ಸುತ್ತೋಲೆಗಳನ್ನು ಪಾಲನೆ ಮಾಡದಿರುವುದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದ್ದು, ಈ ಕೆಳಕಂಡ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಿರ್ದೇಶಿಸಿದ್ದಾರೆ. 1. ಚಲನವಲನ ವಹಿ ನಿರ್ವಹಣೆ(Movement Register): ಕಚೇರಿ ವೇಳೆಯಲ್ಲಿ ಸರ್ಕಾರಿ ನೌಕರರ ಚಲನವಲನವನ್ನು ನಿಯಂತ್ರಿಸಲು ಚಲನವಲನ…
ಬೆಂಗಳೂರು: ಮಾಜಿ ಸಚಿವ ಬಿ.ನಾಗೇಂದ್ರಗೆ ಇಡಿ ಬಿಗ್ ಶಆಕ್ ನೀಡಿದೆ. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಮಾಜಿ ಸಚಿವ ಬಿ.ನಾಗೇಂದ್ರಗೆ ಸೇರಿದ 8.07 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಯನ್ನು ಜಪ್ತಿ ಮಾಡಿದೆ. ಈ ಕುರಿತಂತೆ ಇಡಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (MVSTDCL) ನಿಧಿಯ ದುರುಪಯೋಗ ಮತ್ತು ದುರುಪಯೋಗಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, 2002 ರ ಹಣ ವರ್ಗಾವಣೆ ತಡೆ ಕಾಯ್ದೆ (PMLA) ನಿಬಂಧನೆಗಳ ಅಡಿಯಲ್ಲಿ, ಬೆಂಗಳೂರು ಪ್ರಾದೇಶಿಕ ಕಚೇರಿಯ ಜಾರಿ ನಿರ್ದೇಶನಾಲಯ (ED) ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಸೇರಿದ ಸುಮಾರು ₹8.07 ಕೋಟಿ ಮೌಲ್ಯದ ವಸತಿ/ವಾಣಿಜ್ಯ ಭೂಮಿ ಮತ್ತು ಕಟ್ಟಡಗಳು ಸೇರಿದಂತೆ ನಾಲ್ಕು (4) ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ ಎಂದಿದೆ. KMVSTDCL ನಿಂದ ಹಣದ ದುರುಪಯೋಗ ಮತ್ತು ದುರುಪಯೋಗಕ್ಕೆ ಸಂಬಂಧಿಸಿದ ಅಪರಾಧಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಪೊಲೀಸರು…
ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಕೊಡಕಣಿ ಬಳಿಯಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದೆ. ಒಂಟಿ ಸಲಗ ಸಾಗಿದಂತ ಮಾರ್ಗದಲ್ಲಿ ಅಲ್ಲಲ್ಲಿ ರೈತರ ಬೆಳೆಯನ್ನು ನಾಶ ಪಡಿಸಿರೋದಾಗಿ ಹೇಳಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನಲ್ಲಿ ಕಾಡಾನೆಗಳ ದಾಳಿ ಮುಂದುವರೆದಿದೆ. ಕೆಲ ದಿನಗಳ ಹಿಂದೆ ಉಳವಿ ಹೋಬಳಿಯಲ್ಲಿ ಕಾಣಿಸಿಕೊಂಡಿದ್ದಂತ ಕಾಡಾನೆಗಳು, ಮರಳಿ ಬಂದ ದಾರಿಯಲ್ಲೇ ಸಾಗುತ್ತಿದ್ದರೇ, ಅತ್ತಿಂದಲೇ ಒಂಟಿ ಸಲಗವೊಂದು ಸೊರಬ ತಾಲ್ಲೂಕಿಗೆ ಎಂಟ್ರಿಯಾಗಿದೆ. ಕಳೆದ ರಾತ್ರಿ 2.30ಯಿಂದ 3 ಗಂಟೆಯ ಸುಮಾರಿಗೆ ತೋಗರ್ಸಿ ಬಳಿಯ ಹರಿಗೆ, ಕೋಡಿಹಳ್ಳಿ ಎನ್ನುವಂತ ಊರುಗಳಲ್ಲಿ ಕಾಣಿಸಿಕೊಂಡು, ಬಳಿಕ ಸೊರಬದ ಕೊಡಕಣಿಗೆ ಮರಳಿದೆ. ಬೆಳಗಿನ ಜಾವ 6 ಗಂಟೆಯ ಹಾಗೆ ಕೊಡಕಣಿಯ ರೈತರು ನೋಡಿದ್ದಾರೆ ಎಂಬುದಾಗಿ ಅರಣ್ಯ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ. ರೈತರ ಮಾಹಿತಿ ಆಧರಿಸಿ ಸೊರಬದ ಅರಣ್ಯ ಇಲಾಖೆಯಿಂದ ಕೊಡಕಣಿ ಬಳಿಯಲ್ಲಿ ಥರ್ಮಲ್ ಡ್ರೋನ್ ಮೂಲಕ ಒಂಟಿ ಸಲಗ ಪತ್ತೆ ಹಚ್ಚೋದಕ್ಕೆ ಕಾರ್ಯಾಚರಣೆ ನಡೆಸಲಾಗುತ್ತಿದೆ. ಆದರೇ ಅದು ಸಾಧ್ಯವಾಗಿಲ್ಲ. ಸದ್ಯ ಕೊಡಕಣಿ, ಪುರ ಭಾಗದಲ್ಲಿ ಒಂಟಿ ಸಲಗ…














