Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ಬೆಸ್ಕಾಂನ ವೈಟ್ಫೀಲ್ಡ್ ವಿಭಾಗ ಮತ್ತು ಇ-4 ಉಪವಿಭಾಗ ಕಚೇರಿಯ ನೂತನ ಕಟ್ಟಡವನ್ನು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಶುಕ್ರವಾರ ಉದ್ಘಾಟಿಸಿದರು. ಕಚೇರಿಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಇದುವರೆಗೆ ವೈಟ್ಫೀಲ್ಡ್ ವಿಭಾಗ ಹಾಗೂ ಇ-4 ಉಪವಿಭಾಗ ಕಚೇರಿ ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿತ್ತು. ಇದೀಗ ಇಮ್ಮಡಿಹಳ್ಲಿ ಮುಖ್ಯರಸ್ತೆಯ ಗಾಂಧೀಪುರದಲ್ಲಿ ನಿರ್ಮಾಣಗೊಂಡಿರುವ ಒಂದೇ ಕಟ್ಟಡದಲ್ಲಿ ಕಾರ್ಯನಿರ್ವಹಿಸಲಿದ್ದು ಗ್ರಾಹಕರಿಗೆ ಅನುಕೂಲಕರವಾಗಲಿದೆ,” ಎಂದರು. ಈ ಜಾಗ ಪಡೆಯಲು ನೆರವಾದ ಶಾಸಕಿ ಮಂಜುಳಾ ಅರವಿಂದ್ ಲಿಂಬಾವಳಿ ಅವರಿಗೆ ಧನ್ಯವಾದ ಹೇಳಿದ ಸಚಿವರು, “ನಗರದ ಪ್ರಮುಖ ಪ್ರದೇಶವಾಗಿರುವ ವೈಟ್ಫೀಲ್ಡ್ನಲ್ಲಿ ವಿಭಾಗದಲ್ಲಿ 3,88,917 ಕ್ಕೂ ಹೆಚ್ಚಿನ ಗ್ರಾಹಕರಿದ್ದಾರೆ. ಸಾರ್ವಜನಿಕರಿಗೆ ನೂತನ ಕಚೇರಿ ಬೆಸ್ಕಾಂನ ಹತ್ತು ಹಲವು ಸೇವೆಗಳನ್ನು ತ್ವರಿತವಾಗಿ ಒದಗಿಸಲು ನೆರವಾಗಲಿದೆ,” ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮಹದೇವಪುರ ಕ್ಷೇತ್ರ ಶಾಸಕಿ ಮಂಜುಳ ಅರವಿಂದ ಲಿಂಬಾವಳಿ, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್.ಶಿವಶಂಕರ, ಬೆಸ್ಕಾಂ ತಾಂತ್ರಿಕ ನಿರ್ದೇಶಕ ಹೆಚ್.ಜೆ.ರಮೇಶ್…
ಬೆಂಗಳೂರು : ನಿನ್ನೆ ರಾತ್ರಿ ಮದುವೆಯೊಂದರಲ್ಲಿ ನಾನು ಹಾಗೂ ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದು ನಿಜ. ರಾಜ್ಯ ಹಾಗೂ ಪಕ್ಷದ ವಿಚಾರ ಮಾತನಾಡಿದ್ದೇವೆ. ನಾನು ಹಾಗೂ ಸತೀಶ್ ಜಾರಕಿಹೊಳಿ ಸಹೋದ್ಯೋಗಿಗಳು. ನಮ್ಮನ್ನು ವೈರಿಗಳಂತೆ ಯಾಕೆ ನೋಡುತ್ತೀರಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ. ಕೆಐಎಡಿಬಿಎ ನೂತನ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ಸತೀಶ್ ಜಾರಕಿಹೋಳಿ ಅವರ ಭೇಟಿ ಬಗ್ಗೆ ಕೇಳಿದಾಗ, “ನಾವು ಮಧ್ಯಾಹ್ನ ಸಚಿವ ಸಂಪುಟ ಸಭೆಯಲ್ಲಿ ಇರುತ್ತೇವೆ, ರಾತ್ರಿ ಊಟಕ್ಕೆ ಸೇರುತ್ತೇವೆ, ಬೆಳಗ್ಗೆ ತಿಂಡಿಗೆ ಸೇರುತ್ತೇವೆ. ಇವೆಲ್ಲ ಇದ್ದೇ ಇರುತ್ತವೆ. ರಾಜಕೀಯದಲ್ಲಿ ಸ್ನೇಹ, ಬಾಂಧವ್ಯ, ನೆಂಟಸ್ಥನ ಇದ್ದೇ ಇರುತ್ತದೆ” ಎಂದರು. “ಈಗ ನಾನು ಹಾಗೂ ಎಂ.ಬಿ. ಪಾಟೀಲ್ ಅವರು ಸುಮಾರು ಒಂದು ಗಂಟೆ ಕಾಲ ಮಾತಾಡಿದ್ದೇವೆ. ರಾಜ್ಯಕ್ಕೆ ಬಂಡವಾಳ ಹೂಡಿಕೆದಾರರನ್ನು ಹೇಗೆ ಆಕರ್ಷಿಸಬೇಕು. ಆಂಧ್ರ ಪ್ರದೇಶ ಹಾಗೂ ತಮಿಳುನಾಡು ಹೇಗೆ ನಮಗೆ ಸ್ಪರ್ಧೆ ನೀಡುತ್ತಿದೆ. ತೆಲಂಗಾಣದಲ್ಲಿ ಸದ್ಯದಲ್ಲೇ ಜಾಗತಿಕ ಸಮಾವೇಶ ನಡೆಯಲಿದ್ದು, ಜಾಗತಿಕ…
ಬೆಂಗಳೂರು: ಕ್ರಿಸ್ಮಸ್ ಮತ್ತು ಹೊಸ ವರ್ಷದ ಸಂದರ್ಭದಲ್ಲಿ ಹೆಚ್ಚಿದ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ಕಾರವಾರ ನಡುವೆ ಪ್ರತಿಯೊಂದು ದಿಕ್ಕಿನಲ್ಲಿ ಎರಡು ಟ್ರಿಪ್’ಗಳೊಂದಿಗೆ ವಿಶೇಷ ರೈಲುಗಳನ್ನು ಕಾರ್ಯಾಚರಣೆ ಮಾಡಲಿದೆ. ರೈಲು ಸಂಖ್ಯೆ 06267 ಯಶವಂತಪುರ–ಕಾರವಾರ ವಿಶೇಷ ಎಕ್ಸ್’ಪ್ರೆಸ್ ರೈಲು ಡಿಸೆಂಬರ್ 24 ಮತ್ತು 27, 2025 ರಂದು ಮಧ್ಯಾಹ್ನ 12 ಗಂಟೆಗೆ ಯಶವಂತಪುರದಿಂದ ಹೊರಟು, ಮರುದಿನ ಬೆಳಿಗ್ಗೆ 6.10 ಗಂಟೆಗೆ ಕಾರವಾರವನ್ನು ತಲುಪಲಿದೆ. ಮರಳಿ ಬರುವ ರೈಲು ಸಂಖ್ಯೆ 06268 ಕಾರವಾರ–ಯಶವಂತಪುರ ವಿಶೇಷ ಎಕ್ಸ್’ಪ್ರೆಸ್ ರೈಲು ಡಿಸೆಂಬರ್ 25 ಮತ್ತು 28, 2025 ರಂದು ಮಧ್ಯಾಹ್ನ 12 ಗಂಟೆಗೆ ಕಾರವಾರದಿಂದ ಹೊರಟು, ಮರುದಿನ ಬೆಳಗಿನ ಜಾವ 4.30 ಗಂಟೆಗೆ ಯಶವಂತಪುರವನ್ನು ತಲುಪಲಿದೆ. ಈ ರೈಲುಗಳು ಮಾರ್ಗಮಧ್ಯೆ ಚಿಕ್ಕಬಾಣಾವರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಬಂಟವಾಳ, ಸುರತ್ಕಲ್, ಮುಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್ ಮತ್ತು ಅಂಕೋಲಾ…
ನವದೆಹಲಿ: ರಷ್ಯಾದ ಪ್ರವಾಸಿಗರಿಗೆ ಭಾರತ ಶೀಘ್ರದಲ್ಲೇ ಉಚಿತ ಇ-ವೀಸಾ ಸೌಲಭ್ಯವನ್ನು ಜಾರಿಗೆ ತರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಘೋಷಿಸಿದ್ದು, ಅರ್ಜಿಗಳನ್ನು 30 ದಿನಗಳಲ್ಲಿ ಪ್ರಕ್ರಿಯೆಗೊಳಿಸಲಾಗುವುದು. ನವದೆಹಲಿಯಲ್ಲಿ ನಡೆದ ದ್ವಿಪಕ್ಷೀಯ ಮಾತುಕತೆಯ ನಂತರ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಈ ಘೋಷಣೆ ಹೊರಬಿದ್ದಿದೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಈ ಉಪಕ್ರಮವು ಜನರಿಂದ ಜನರಿಗೆ ಸಂಬಂಧಗಳನ್ನು ಹೆಚ್ಚಿಸುವ ಮತ್ತು ಎರಡೂ ದೇಶಗಳ ನಡುವೆ ಪ್ರವಾಸೋದ್ಯಮವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದರು. ಈ ವರ್ಷದ ಅಕ್ಟೋಬರ್ನಲ್ಲಿ ಕಲ್ಮಿಕಿಯಾದಲ್ಲಿ ನಡೆದ ಅಂತರರಾಷ್ಟ್ರೀಯ ಬೌದ್ಧ ವೇದಿಕೆಯಲ್ಲಿ ಲಕ್ಷಾಂತರ ಭಕ್ತರು ಭಗವಾನ್ ಬುದ್ಧನ ಪವಿತ್ರ ಅವಶೇಷಗಳ ಆಶೀರ್ವಾದವನ್ನು ಪಡೆದರು ಎಂದು ಅವರು ಹೇಳಿದರು. ಈ ವರ್ಷ ಅಕ್ಟೋಬರ್ನಲ್ಲಿ ಕಲ್ಮಿಕಿಯಾದಲ್ಲಿ ನಡೆದ ಅಂತರರಾಷ್ಟ್ರೀಯ ಬೌದ್ಧ ವೇದಿಕೆಯಲ್ಲಿ ಲಕ್ಷಾಂತರ ಭಕ್ತರು ಭಗವಾನ್ ಬುದ್ಧನ ಪವಿತ್ರ ಅವಶೇಷಗಳ ಆಶೀರ್ವಾದವನ್ನು ಪಡೆದರು. “ನಾವು ಶೀಘ್ರದಲ್ಲೇ ರಷ್ಯಾದ ನಾಗರಿಕರಿಗೆ ಇ-ಟೂರಿಸ್ಟ್ ವೀಸಾ ಮತ್ತು ಗುಂಪು ಪ್ರವಾಸಿ ವೀಸಾ…
ಬೆಂಗಳೂರು: ರಾಜಕೀಯದಲ್ಲಿ ಎಷ್ಟೇ ಪ್ರೀತಿ- ವಿಶ್ವಾಸಗಳಿದ್ದರೂ ಹೊಂದಾಣಿಕೆಯ ನಾಟಕ ನನ್ನ ಬಳಿ ಇಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ. ವಿಧಾನಸೌಧದ ವಿರೋಧ ಪಕ್ಷದ ನಾಯಕರ ಕಚೇರಿಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು ಪ್ರಶ್ನೆಗೆ ಉತ್ತರ ನೀಡಿದರು. ವಾಚ್ ವಿಚಾರದಲ್ಲಿ ನನ್ನ ಹೇಳಿಕೆಯಿಂದ ಡಿ.ಕೆ.ಶಿವಕುಮಾರರಿಗೆ ಬೇಸರ ಆದರೆ ನಾನೇನೂ ಮಾಡಲಾಗದು ಎಂದು ಸ್ಪಷ್ಟಪಡಿಸಿದರು. ಈಗಲೂ ಅವರ ಹೂಬ್ಲೋಟ್ ವಾಚ್ ಕಾಣುತ್ತಿಲ್ಲ ಎಂದು ತಿಳಿಸಿದರು. ಅದು ಅಫಿಡವಿಟ್ನಲ್ಲಿಲ್ಲ. ಈಗ ನೀವು ಕಾರ್ಟಿಯರ್ ವಾಚ್ ವಿಚಾರವನ್ನು ಲೋಕಾಯುಕ್ತಕ್ಕೆ ಕೊಟ್ಟಿದ್ದೀರಿ. ಹಿಂದೆ ಅಫಿಡವಿಟ್ನಲ್ಲಿ ಕೊಟ್ಟಿಲ್ಲ; ಅದು ಕೂಡ ಅಪರಾಧವೇ ಎಂದು ಗಮನ ಸೆಳೆದರು. ಇನ್ನೊಂದು ಪ್ರಶ್ನೆಗೆ ಉತ್ತರ ನೀಡಿದ ಅವರು, ಇದನ್ನು ಬಹಳ ಬೆಳೆಸಬೇಕೆಂಬುದು ನನ್ನ ಉದ್ದೇಶವಲ್ಲ; ಸಂದರ್ಭಕ್ಕೆ ತಕ್ಕಂತೆ ವಿಷಯವನ್ನು ಜನರ ಗಮನಕ್ಕೆ ತರುವ ಕೆಲಸ ಮಾಡಿದ್ದೇನೆ. ಶಿವಕುಮಾರರನ್ನು ಇವತ್ತಿನಿಂದ ನಾನು ನೋಡುತ್ತಿಲ್ಲ. ಕಾಲೇಜಿನಿಂದ ನೋಡುತ್ತ ಬಂದಿದ್ದೇನೆ. ಅವರ ಕಾಲೇಜಿನ ಸ್ನೇಹಿತರಲ್ಲಿ ನಾನೂ ಒಬ್ಬ. ಅವರು ಇವತ್ತು ದೊಡ್ಡ…
ಬೆಂಗಳೂರು: “ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ ನೀಡುವೆ, ಇಲ್ಲವಾದರೆ ಅವರು ರಾಜೀನಾಮೆ ನೀಡುತ್ತಾರಾ..” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸವಾಲೆಸೆದರು. ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ವಾಚ್ ಕದ್ದದ್ದೋ, ಕೊಂಡದ್ದೋ ಎಂಬ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಾರಾಯಣಸ್ವಾಮಿ ಅವರಿಗೆ ಇನ್ನೂ ಅನುಭವವಿಲ್ಲ. ಯಾವುದಾದರೂ ವಿಚಾರದ ಬಗ್ಗೆ ಮಾತನಾಡಬೇಕಾದರೆ ಕನಿಷ್ಟ ಪರಿಜ್ಞಾನ ಇರಬೇಕು. ಬರೀ ಪ್ರಚಾರಕ್ಕೆ ಮಾತನಾಡುವುದಲ್ಲ. ಅವರಿಗಿಂತ ಹೆಚ್ಚು ಜವಾಬ್ದಾರಿಯಿಂದ ನಾನು ವರ್ತಿಸುತ್ತೇನೆ. ಅವರೂ ಜವಾಬ್ದಾರಿಯಿಂದ ಕೆಲಸ ಮಾಡುವುದನ್ನು ಕಲಿಯಬೇಕು. ನಾನು ಪ್ರದರ್ಶಿಸಿರುವ ದಾಖಲೆ ವಿಚಾರ ಒತ್ತಟ್ಟಿಗೆ ಇರಲಿ, ಅವರೇ ಹೋಗಿ ಲೋಕಾಯುಕ್ತದಲ್ಲಿ ಪರಿಶೀಲನೆ ಮಾಡಲಿ. ಅಲ್ಲಿ ಸಲ್ಲಿಸಿರುವ ಆದಾಯ ಅಫಿಡವಿಟ್ ಸಾರ್ವಜನಿಕ ದಾಖಲೆಯಾಗಿದ್ದು, ಅದನ್ನು ಅವರೂ ಪಡೆಯಬಹುದು. 2018 ಹಾಗೂ 2023ರಲ್ಲಿ ತೋರಿಸಿಲ್ಲ…
ಬೆಂಗಳೂರು : ರಾಜ್ಯದಲ್ಲಿ ಕೈಗಾರಿಕಾ ತಂತ್ರಜ್ಞಾನ ನಾವೀನ್ಯತಾ ಪಾರ್ಕ್ (ಐಟಿಐಪಿ) ಸ್ಥಾಪಿಸಲು ತೈವಾನ್ನ ಅಲಿಜನ್ಸ್ ಇಂಟರ್ನ್ಯಾಷನಲ್ ಕಂಪನಿ ಲಿಮಿಟೆಡ್, ರಾಜ್ಯ ಸರ್ಕಾರದ ಜೊತೆಗೆ ಮಹತ್ವದ ತಿಳಿವಳಿಕೆ ಒಪ್ಪಂದಕ್ಕೆ (ಎಂಒಯು) ಇಂದು ಇಲ್ಲಿ ಸಹಿ ಹಾಕಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಎಲೆಕ್ಟ್ರಾನಿಕ್ಸ್, ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಐಟಿ, ಬಿಟಿ ಕಾರ್ಯದರ್ಶಿ ಡಾ. ಮಂಜುಳಾ ಎನ್. ಅವರ ಸಮ್ಮುಖದಲ್ಲಿ ಈ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಎಲೆಕ್ಟ್ರಾನಿಕ್ಸ್, ಐಟಿ, ಬಿಟಿ ಮತ್ತು ಎಸ್ಆಂಡ್ಟಿ ಇಲಾಖೆಯ ನಿರ್ದೇಶಕ ರಾಹುಲ್ ಎಸ್. ಸಂಕನೂರ ಹಾಗೂ ಅಲಿಜನ್ಸ್ ಗ್ರೂಪ್ನ ಉಪಾಧ್ಯಕ್ಷ ಲಾರೆನ್ಸ್ ಚೆನ್ ಅವರು ತಿಳಿವಳಿಕೆ ಒಪ್ಪಂದ ಪತ್ರಕ್ಕೆ (ಎಂಒಯು) ಸಹಿ ಹಾಕಿದರು. ಈ ಯೋಜನೆಯನ್ನು ಅಲಿಜನ್ಸ್ ಗ್ರೂಪ್ (Allegiance Group) ಸುಮಾರು ₹ 1,000 ಕೋಟಿ ಮೊತ್ತದ ಬಂಡವಾಳ ಹೂಡಿಕೆಯೊಂದಿಗೆ ಕಾರ್ಯಗತಗೊಳಿಸಲಿದೆ. 5 ವರ್ಷಗಳ ಅವಧಿಯಲ್ಲಿ ʼಐಟಿಐಪಿʼಯಲ್ಲಿ ಕಾರ್ಯನಿರ್ವಹಿಸುವ ಕಂಪನಿಗಳ ಮೂಲಕ ಸುಮಾರು…
ಶಿವಮೊಗ್ಗ: ಉಡುಪಿಯಲ್ಲಿ ರಂಗಭೂಮಿ ( ರಿ) ಉಡುಪಿ ಸಂಸ್ಥೆ ಏರ್ಪಡಿಸಿದ್ದ 46 ನೇ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆಯಲ್ಲಿ ಸಾಗರದ ಸ್ಪಂದನ ರಂಗತಂಡ ಮಂಜುನಾಥ್ ಎಲ್ ಬಡಿಗೇರ ಅವರ ನಿರ್ದೇಶನದಲ್ಲಿ ಅಭಿನಯಿಸಿದ ಪ್ರಾಣಪದ್ಮಿನಿ ನಾಟಕಕ್ಕೆ ತೃತೀಯ ಶ್ರೇಷ್ಠ ನಾಟಕ ಬಹುಮಾನ ಲಭಿಸಿದೆ. ಈ ನಾಟಕದ ರಂಗಬೆಳಕು ವಿಭಾಗದಲ್ಲಿ ಜೀವನ್ ಕುಮಾರ್ ಬಿ ಹೆಗ್ಗೋಡು- ಪ್ರಥಮ. ಸಂಗೀತ ವಿಭಾಗದಲ್ಲಿ ಭಾರ್ಗವ ಹೆಗ್ಗೋಡು , ಅರುಣ್ ಕುಮಾರ್ ದ್ವಿತೀಯ ಶ್ರೇಷ್ಠ ನಟಿ ವಿಭಾಗದಲ್ಲಿ ಭೂಮಿ ತೃತೀಯ ಶ್ರೇಷ್ಠ ನಟ ವಿಭಾಗದಲ್ಲಿ ಕಾರ್ತಿಕ್ ಕೆ ತೃತೀಯ ಮೆಚ್ಚುಗೆ ಬಹುಮಾನ ವಿವೇಕ್ ನಾಯಕ್ ಎಂ ಬಿ ಪಡೆದಿದ್ದಾರೆ. ನವೆಂಬರ್ 23 ರಿಂದ ಡಿಸೆಂಬರ್ 4 ರವರೆಗೆ ನಡೆದಿದ್ದ ಈ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಭಾಗಗಳ 12 ರಂಗತಂಡಗಳು ಭಾಗವಹಿಸಿದ್ದವು. ತೀರ್ಪುಗಾರರಾಗಿ ಕೆ ಜಿ ಮಹಾಬಲೇಶ್ವರ್ , ನಟರಾಜ ಹೊನ್ನವಳ್ಳಿ , ರಾಮುರಂಗಾಯಣ, ಗಣೇಶ್ ಕುಮಾರ್ ಎಲ್ಲೂರು, ಶಶಿಕಲಾ ಜೋಷಿ ಕಾರ್ಯನಿರ್ವಹಿಸಿದ್ದರು.
ಬೆಂಗಳೂರು: ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕೆಯುಡಬ್ಲ್ಯೂಜೆ ಮಾಜಿ ಅಧ್ಯಕ್ಷ, ರಣಕಹಳೆ ಪ್ರಾದೇಶಿಕ ಪತ್ರಿಕೆಯ ಸಂಪಾದಕರಾದಂತ ಬಿ.ಪಿ ಪ್ರಕಾಶ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ. ಇಂದು ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಕರ್ನಾಯಕ ನಗರಾಭಿವೃದ್ಧಿ ಪ್ರಾಧಿಕಾರ ಕಾಯ್ದೆ 1987ರ ಕಲಂ3ರ ಉಪ ಕಲಂ 3(ಎ) ಮತ್ತು 3(ಎಂ) ಹಾಗೂ 3(4) ಅಡಿಯಲ್ಲಿ ಈ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು, ಸದಸ್ಯರನ್ನಾಗಿ ಈ ಕೆಳಕಂಡವರನ್ನು ನಾಮನಿರ್ದೇಶನ ಮಾಡಿ ಆದೇಶಿಸಿದ್ದಾರೆ. ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಬಿ.ಪಿ ಪ್ರಕಾಶ್ ಅವರನ್ನು ನೇಮಕ ಮಾಡಿದ್ದರೇ, ಸದಸ್ಯರನ್ನಾಗಿ ಇದ್ರೀಸ್ ಖಾನ್, ಕಾರ್ತಿಕ್ ಕೆ.ಜೆ, ಎನ್ ಎಸ್ ಮಹೇಶ್ ಹಾಗೂ ಕಮಲಮ್ಮ ಅವರನ್ನು ನೇಮಕ ಮಾಡಲಾಗಿದೆ. ವರದಿ; ಗಿರೀಶ್ ರಾಜ್, ಮಂಡ್ಯ https://kannadanewsnow.com/kannada/a-massive-response-to-the-public-meeting-held-by-mla-gopalakrishna-belur-in-sagar/
ಶಿವಮೊಗ್ಗ: ಸಾಗರದ ನಗರಸಭೆ ಆವರಣದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ನಡೆಸಿದಂತ ಜನ ಸಂಪರ್ಕ ಸಭೆಗೆ ಭರ್ಜರಿ ರೆಸ್ಪಾನ್ಸ್ ದೊರೆತಿದೆ. ಸಾರ್ವಜನಿಕರ ಅಹವಾಲುಗಳಿಗೆ ಸ್ಥಳದಲ್ಲಿಯೇ ಪರಿಹರಿಸುವಂತ ಕೆಲಸ ಮಾಡಿದರು. ಜೊತೆ ಜೊತೆಗೆ ಸರಿಯಾಗಿ ಕರ್ತವ್ಯ ನಿರ್ವಹಿಸದಂತ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಚಳಿಬಿಡಿಸಿದಂತ ಪ್ರಸಂಗವೂ ನಡೆಯಿತು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ನಗರಸಭೆ ಆವರಣದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಜನ ಸಂಪರ್ಕ ಸಭೆಯನ್ನು ನಡೆಸಿದರು. ಕೆಲ ದಿನಗಳ ಹಿಂದೆ ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಜನ ಸಂಪರ್ಕ ಸಭೆ ನಡೆಸಿದ್ದ ಬಳಿಕ, ನಗರ ವ್ಯಾಪ್ತಿಯಲ್ಲಿ ಇದೇ ಮೊದಲ ಬಾರಿಗೆ ನಡೆಸಿದಂತ ಶಾಸಕರ ಜನ ಸಂಪರ್ಕ ಸಭೆಗೆ ಉತ್ತಮ ಪ್ರತಿಸ್ಪಂದನೆ ದೊರೆಯಿತು. 214 ಅರ್ಜಿ, ತಾಳ್ಮೆಯಿಂದಲೇ ಶಾಸಕರು ಅಹವಾಲು ಸ್ವೀಕಾರ, ಪರಿಹಾರ ಕುಡಿಯುವ ನೀರು, ಬೀದಿ ದೀಪ, ಸ್ವಚ್ಛತೆ, ನಗರೋತ್ಥಾನದ ಕೆಲಸ, ಸಾಗರ ನಗರದ ಆಯ ಕಟ್ಟಿನ ಜಾಗಗಳಲ್ಲಿ ಹೆಚ್ಚುತ್ತಿರುವ ಗಾಂಜಾ ವ್ಯಸನಿಗಳು ಹಾಗೂ ತ್ಯಾಜ್ಯದ ಸಮಸ್ಯೆ ಕುರಿತಂತೆ ಸಾಗರ ನಗರಸಭೆ ಆವರಣದಲ್ಲಿ ಗುರುವಾರ…














