Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (Karnataka Union Of Working Journalist-KUWJ) ರಾಜ್ಯ ಅಧ್ಯಕ್ಷರಾಗಿ ಶಿವಾನಂದ ತಗಡೂರು ಅವರು ಪುನಾರಾಯ್ಕೆಯಾಗಿದ್ದಾರೆ. 2025-28ನೇ ಸಾಲಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಒಂದೇ ನಾಮಪತ್ರ ಬಂದಿದ್ದರಿಂದ ಅವಿರೋಧ ಆಯ್ಕೆಯಾದಂತಾಗಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕು ಕುಗ್ರಾಮ ತಗಡೂರು ಗ್ರಾಮದ ರೈತ ಕುಟುಂಬದ ಶ್ರೀಮತಿ ಕಮಲಮ್ಮ ಮತ್ತು ವೀರೇಗೌಡ ದಂಪತಿಗಳ ಪುತ್ರನಾಗಿ ಜನಿಸಿದ ಟಿ.ವಿ.ಶಿವಾನಂದ (ಆನಂದ) ಅವರು ತೊಂಬತ್ತರ ದಶಕದಲ್ಲಿ ಪತ್ರಿಕೋದ್ಯಮ ಪ್ರವೇಶಿಸಿದವರು. ಬಾಗೂರು-ನವಿಲೆ ಸುರಂಗ ಸಂತ್ರಸ್ತರ ಪರವಾಗಿ ಹೋರಾಟ ಸಂಘಟಿಸಿದ್ದ ಅವರು, ಹಾಸನ ಜಿಲ್ಲಾ ನೀರಾವರಿ ಹೋರಾಟ ಸಮಿತಿಗಳ ಒಕ್ಕೂಟ, ರೈತ ಹಿತ ರಕ್ಷಣಾ ಸಮಿತಿ, ಹಾಸನ ಜಿಲ್ಲಾ ಸಾಕ್ಷರತಾ ಆಂದೋಲನ ಸಮಿತಿ ಸಂಚಾಲಕರಾಗಿ ದುಡಿದವರು. ಹಲವು ಜನಪರ ಚಳವಳಿಯಲ್ಲಿ ಮುಂದಾಳಾಗಿ ಗುರುತಿಸಿಕೊಳ್ಳುತ್ತಲೇ ಪತ್ರಕರ್ತರಾಗಿ ಮಾಗಿದವರು. 2004ರಲ್ಲಿ ಹಾಸನ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಅಧ್ಯಕ್ಷರಾಗಿದ್ದಾಗ ಸುಸಜ್ಜಿತ ಪತ್ರಕರ್ತರ ಭವನವನ್ನು ನಿರ್ಮಾಣ…
ಬೆಂಗಳೂರು: ಎಂ.ಎಸ್ಸಿ. (ನರ್ಸಿಂಗ್). ಎಂಪಿಟಿ, ಎಂ.ಎಸ್ಸಿ. ಎ.ಎಚ್.ಎಸ್., ಪಿಬಿ ಬಿ.ಎಸ್ಸಿ. (ನರ್ಸಿಂಗ್). ಬಿ.ಎಸ್ಸಿ. ಎ.ಎಚ್.ಎಸ್. (ಲ್ಯಾಟರಲ್ ಎಂಟ್ರಿ) ಕೋರ್ಸುಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಗೆ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಅ.30ರ ಮಧ್ಯಾಹ್ನ 3ಗಂಟೆವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ತಾತ್ಕಾಲಿಕ ಸೀಟು ಹಂಚಿಕೆಯ ಫಲಿತಾಂಶವನ್ನು ಅ.30ರ ರಾತ್ರಿ 8ರ ನಂತರ ಹಾಗೂ ಅಂತಿಮ ಸೀಟು ಹಂಚಿಕೆಯ ಫಲಿತಾಂಶವನ್ನು ಅ.31ರ ಬೆಳಿಗ್ಗೆ 11 ನಂತರ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಶುಲ್ಕ ಪಾವತಿ ಹಾಗೂ ಸೀಟು ಖಾತರಿ ಚೀಟಿ ಡೌನ್ ಲೋಡ್ ಮಾಡಿಕೊಳ್ಳಲು ನ.1ರಿಂದ ನ.5ರ ಸಂಜೆ 4ರವರೆಗೆ ಅವಕಾಶವಿರುತ್ತದೆ. ಹಿಂದಿನ ಸುತ್ತಿನಲ್ಲಿ ಶುಲ್ಕ ಪಾವತಿಸಿದ್ದರೆ ಈ ಸುತ್ತಿನಲ್ಲಿ ಹಂಚಿಕೆಯಾದ ಸೀಟಿಗೆ ಹೊಂದಾಣಿಕೆ ಮಾಡಿಕೊಳ್ಳಲಾಗುತ್ತದೆ. ಸೀಟು ಹಂಚಿಕೆಯಾದವರು ನ.5ರ ಸಂಜೆ 6ರೊಳಗೆ ಆಯಾ ಕಾಲೇಜಿನಲ್ಲಿ ಪ್ರವೇಶ ಪಡೆಯಬೇಕು ಎಂದು ವಿವರಿಸಿದ್ದಾರೆ. ಈ ಸುತ್ತಿನಲ್ಲಿ ಸೀಟು ಹಂಚಿಕೆಯಾದಲ್ಲಿ ಅಥವಾ ಮೊದಲ ಸುತ್ತಿನಲ್ಲಿ ಹಂಚಿಕೆಯಾಗಿರುವ ಸೀಟು ದೃಢಪಟ್ಟಲ್ಲಿ…
ಮೈಸೂರು: ಮೈಸೂರು ನ್ಯೂ ಗೂಡ್ಸ್ ಟರ್ಮಿನಲ್ ಮತ್ತು ನಾಗನಹಳ್ಳಿ ನಡುವೆ ರಸ್ತೆ ಕೆಳಸೇತುವೆ ಕಾಮಗಾರಿಗಾಗಿ ಲೈನ್ ಬ್ಲಾಕ್ ಲಭ್ಯವಿಲ್ಲದ ಕಾರಣ, ಈ ಹಿಂದೆ ಮರುನಿಗದಿಪಡಿಸಲಾದ, ನಿಯಂತ್ರಿಸಲಾದ ಹಾಗೂ ಭಾಗಶಃ ರದ್ದುಗೊಳಿಸಲಾದ ಕೆಳಗಿನ ರೈಲು ಸೇವೆಗಳು ಎಂದಿನಂತೆ ಅದೇ ಮಾರ್ಗ ಮತ್ತು ಸಮಯದಲ್ಲಿ ಪುನರಾರಂಭ ಆಗಲಿವೆ. ರೈಲು ಸಂಖ್ಯೆ. 66579 ಕೆ.ಎಸ್.ಆರ್. ಬೆಂಗಳೂರು – ಅಶೋಕಪುರಂ ಮೆಮೂ ಮತ್ತು ರೈಲು ಸಂಖ್ಯೆ. 66554 ಅಶೋಕಪುರಂ – ಕೆ.ಎಸ್.ಆರ್. ಬೆಂಗಳೂರು ಮೆಮೂ, ದಿನಾಂಕ 29, 31 ಅಕ್ಟೋಬರ್, 19, 21, 26, 28 ನವೆಂಬರ್ ಮತ್ತು 17, 19 ಡಿಸೆಂಬರ್ 2025 ರಂದು ಈ ಹಿಂದೆ ಭಾಗಶಃ ರದ್ದುಗೊಳಿಸಲಾಗಿತ್ತು, ಈಗ ಅದೇ ಮಾರ್ಗದಲ್ಲಿ ಮತ್ತು ವೇಳಾಪಟ್ಟಿಯ ಪ್ರಕಾರ ಸಂಚರಿಸಲಿವೆ. ರೈಲು ಸಂಖ್ಯೆ. 16552 ಅಶೋಕಪುರಂ – ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ ಎಕ್ಸಪ್ರೆಸ್, ಈ ಹಿಂದೆ ದಿನಾಂಕ 29, 31 ಅಕ್ಟೋಬರ್, 19, 21, 26, 28 ನವೆಂಬರ್ ಮತ್ತು 17, 19 ಡಿಸೆಂಬರ್ 2025 ರಂದು…
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ(ಕೆಯುಡಬ್ಲೂಜೆ) ರಾಜ್ಯ ಅಧ್ಯಕ್ಷರಾಗಿ ಶಿವಾನಂದ ತಗಡೂರು ಅವರು ಪುನಾರಾಯ್ಕೆಯಾಗಿದ್ದಾರೆ. ಈ ಮೂಲಕ ಸತತ ಮೂರನೇ ಅವಧಿಗೆ ಕೆಯುಡಬ್ಲೂಜೆ ಸಂಘದ ರಾಜ್ಯಾಧ್ಯಕ್ಷರಾಗಿ ಶಿವಾನಂದ ತಗಡೂರು ಆಯ್ಕೆಯಾಗಿದ್ದಾರೆ. 2025-28ನೇ ಸಾಲಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಒಂದೇ ನಾಮಪತ್ರ ಬಂದಿದ್ದರಿಂದ ಅವಿರೋಧ ಆಯ್ಕೆಯಾದಂತಾಗಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕು ಕುಗ್ರಾಮ ತಗಡೂರು ಗ್ರಾಮದ ರೈತ ಕುಟುಂಬದ ಕಮಲಮ್ಮ ಮತ್ತು ವೀರೇಗೌಡ ದಂಪತಿಗಳ ಪುತ್ರನಾಗಿ ಜನಿಸಿದ ಟಿ.ವಿ.ಶಿವಾನಂದ (ಆನಂದ) ಅವರು ತೊಂಬತ್ತರ ದಶಕದಲ್ಲಿ ಪತ್ರಿಕೋದ್ಯಮ ಪ್ರವೇಶಿಸಿದವರು. ಬಾಗೂರು-ನವಿಲೆ ಸುರಂಗ ಸಂತ್ರಸ್ತರ ಪರವಾಗಿ ಹೋರಾಟ ಸಂಘಟಿಸಿದ್ದ ಅವರು, ಹಾಸನ ಜಿಲ್ಲಾ ನೀರಾವರಿ ಹೋರಾಟ ಸಮಿತಿಗಳ ಒಕ್ಕೂಟ, ರೈತ ಹಿತ ರಕ್ಷಣಾ ಸಮಿತಿ, ಹಾಸನ ಜಿಲ್ಲಾ ಸಾಕ್ಷರತಾ ಆಂದೋಲನ ಸಮಿತಿ ಸಂಚಾಲಕರಾಗಿ ದುಡಿದವರು. ಹಲವು ಜನಪರ ಚಳವಳಿಯಲ್ಲಿ ಮುಂದಾಳಾಗಿ ಗುರುತಿಸಿಕೊಳ್ಳುತ್ತಲೇ ಪತ್ರಕರ್ತರಾಗಿ ಮಾಗಿದವರಾಗಿದ್ದಾರೆ. 2004ರಲ್ಲಿ ಹಾಸನ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಅಧ್ಯಕ್ಷರಾಗಿದ್ದಾಗ…
ಬೆಂಗಳೂರು: ಸಾಗರ ತಾಲ್ಲೂಕಿನ ಶರಾವತಿ ಕಣಿವೆಯಲ್ಲಿ ನಿರ್ಮಿಸಲು ಹೊರಟಿರುವಂತ ಸರ್ಕಾರದ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯಿಂದಾಗಿ ಪರಿಸರ, ಜೀವ ವೈವಿಧ್ಯತೆ ನಾಶವಾಗಲಿದೆ ಎಂಬುದಾಗಿ ರೈತ ಮುಖಂಡ ದಿನೇಶ್ ಶಿರವಾಳ ತಿಳಿಸಿದ್ದಾರೆ. ಇಂದು ಬೆಂಗಳೂರಿನ ಗಾಂಧಿ ಭವನದಲ್ಲಿ, ಪಶ್ಚಿಮ ಘಟ್ಟಗಳ ಉಳಿವಿಗಾಗಿ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿಲ್ಲಿಸಬೇಕೆಂದು ಪರಿಸರಾಸಕ್ತರೂ, ರೈತರ ದುಂಡುಮೇಜಿನ ಸಭೆಯನ್ನು ಏರ್ಪಡಿಸಲಾಗಿತ್ತು. ಈ ಸಭೆಯಲ್ಲಿ ಮಾತನಾಡಿದಂತ ಅವರು, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯಿಂದ ಕೇವಲ 300 ರಿಂದ 400 ಎಕ್ರೆ ಜಮೀನು ಮಾತ್ರ ಉಪಯೋಗಿಸುತ್ತೇವೆಂದು ಹೇಳುತ್ತಾರೆ. ಆದರೆ ಸುಮಾರು ಸಾವಿರದಿಂದ 1000 ಎಕರೆ ಅರಣ್ಯ ಪ್ರದೇಶ ಬಳಸಿಕೊಳ್ಳಲಾಗುತ್ತಿದೆ. ಇದರಲ್ಲಿ ಲಕ್ಷಾಂತರ ಮರಗಳು ಧರೆಗೆ ಉರುಳುತ್ತಿವೆ. ಅರಣ್ಯ ಇಲಾಖೆ ಹಾಗೂ ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘನೆ ಮಾಡಿ, ಕೇಂದ್ರ ಸರ್ಕಾರದಿಂದ ಅನುಮತಿಯನ್ನು ಪಡೆಯದೆ, ರಾಜ್ಯ ಸರ್ಕಾರವು ಯೋಜನೆಗೆ ಹಣವನ್ನು ಬಿಡುಗಡೆಗೊಳಿಸಿದೆ ಎಂಬುದಾಗಿ ಕಿಡಿಕಾರಿದರು. 1 ಯೂನಿಟ್ ವಿದ್ಯುತ್ ಉತ್ಪಾದನೆ ಮಾಡಲು ನಾಲ್ಕರಿಂದ ಐದು ರೂಪಾಯಿ…
ಬೆಂಗಳೂರು: ಬೆಂಗಳೂರು ನಗರದಲ್ಲಿ ಸುರಂಗ ಮಾರ್ಗ ಮಾಡೋ ಮಾತುಗಳು ಬಹಳ ಚರ್ಚೆಗೆ ಬಂದಿದೆ. ಸುರಂಗ ಮಾರ್ಗ ಆಮೇಲೆ ಮಾಡೋಣ. ಆದರೆ, ರುದ್ರಭೂಮಿಯಲ್ಲಿ ಕೆಲಸ ಮಾಡುವ 147 ಜನ ಕಾರ್ಮಿಕರಿಗೆ ಹಣ ಕೊಡೋ ಯೋಗ್ಯತೆ ಇದೆಯೇ ಇಲ್ಲವೇ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಶ್ನಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾವಿರಾರು ಕೋಟಿ ಖರ್ಚಿನಲ್ಲಿ ಸುರಂಗ ಕೊರೆಯೋ ಮಾತನಾಡುವ ಕಾಂಗ್ರೆಸ್ ನವರು, 147 ಜನರಿಗೆ ಸಂಬಳ ಕೊಟ್ಟಿಲ್ಲ. ಅನೇಕರಿಗೆ ಸಂಬಳ ಕೊಡದೆ ವಂಚನೆ ಮಾಡಿದ್ದಾರೆ. ಅನೇಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಸ್ತುವಾರಿ ಸಚಿವರು ಜಿಲ್ಲೆಗಳಿಗೆ ಹೋಗ್ತಿದ್ದಾರಾ.? ರಸ್ತೆ ಗುಂಡಿ ಮುಚ್ಚಲು ಆಗ್ತಿಲ್ಲ ನಿಮಗೆ ಎಂದು ಕೇಳಿದರು. ಸುರಂಗ ಎಂಬುದು ದೋಚುವ ತಂತ್ರ ಅಷ್ಟೇ ಎಂದು ಆರೋಪಿಸಿದ ಅವರು, ಬಿಹಾರ ಚುನಾವಣೆಗೆ ಹಣ ಕಳಿಸಲು ಎಲ್ಲೆಲ್ಲಿ ಸಭೆ ಆಗ್ತಿದೆ. ಡಿನ್ನರ್ ಪಾರ್ಟಿ, ಬ್ರೇಕ್ ಫಾಸ್ಟ್ ಮೀಟಿಂಗ್ ಆಗ್ತಿದೆ. ಅದಕ್ಕೆ ಕಾಂಗ್ರೆಸ್ ಕಚೇರಿಗೇ ದೊಡ್ಡ ಬೀಗ ಹಾಕಬೇಕು ಅಂತ ರಾಜಣ್ಣ ಹೇಳಿದ್ದಾರೆ ಎಂದು…
ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು ಮಹಿಳಾ ಆಯವ್ಯಯ ಹಾಗೂ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳಡಿ ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಸ್ನಾತಕೋತ್ತರ ಪದವೀಧರರಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ಅವಕಾಶ ಕಲ್ಪಿಸಿದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು. ಬರವಣಿಗೆಯಲ್ಲಿ ಪರಿಣತಿ ಹೊಂದಿರುವ, ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 2021-2022, 2022-23, 2023-24 ಹಾಗೂ 2024-2025ನೇ ಶೈಕ್ಷಣಿಕ ವರ್ಷದಲ್ಲಿ ಯಾವುದೇ ವಿಷಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪ್ರವೇಶ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಒಟ್ಟು 21 ಅಭ್ಯರ್ಥಿಗಳಿಗೆ ಇಂಟರ್ನ್ಶಿಪ್ ಅವಕಾಶ ಒದಗಿಸಲಾಗುವುದು. ವಿವರ: ಮಹಿಳಾ ಆಯವ್ಯಯದಡಿ 08 ಮಹಿಳೆಯರು, ಪರಿಶಿಷ್ಟ ಜಾತಿ ಉಪಯೋಜನೆಯಡಿ 09 ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ 4 ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಇಂಟರ್ನ್ಶಿಪ್ ಅವಕಾಶ ಕಲ್ಪಿಸಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ವಿವಿಧ ಮಾಧ್ಯಮ…
ಬೆಂಗಳೂರು: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡಮಿ ಅಧ್ಯಕ್ಷ ಸ್ಥಾನದಿಂದ ಡಾ.ಗೋವಿಂದ ಸ್ವಾಮಿ ಅವರನ್ನು ಕಿಕ್ ಔಟ್ ಮಾಡಲಾಗಿದೆ. ಅಧ್ಯಕ್ಷ ಸ್ಥಾನದಿಂದ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್.ಗೀತಾಬಾಯಿ ಅಧಿಸೂಚನೆ ಹೊರಡಿಸಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.ಎ.ಅ.ಗೋವಿಂದ ಸ್ವಾಮಿ, ರಾಮನಗರ, ಅಧ್ಯಕ್ಷರು, ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡಮಿ ಇವರನ್ನು ಅಧ್ಯಕ್ಷ ಸ್ಥಾನದಿಂದ ತಕ್ಷಣದಿಂದ ಜಾರಿಗೆ ಬರುವಂತೆ ರದ್ದು ಪಡಿಸಿ ಅದೇಶಿಸಿದ್ದಾರೆ. https://kannadanewsnow.com/kannada/abandon-33-marks-to-pass-sslc-puc-speaker-writes-to-minister-madhu-bangarappa/ https://kannadanewsnow.com/kannada/big-alert-fake-eno-has-entered-the-market-find-out-which-one-is-genuine/
ಒಂದು ವೇಳೆ ನಿಮ್ಮ ಮನೆಯಲ್ಲಿ ಯಾವುದೇ ರೀತಿಯ ಮಾಟ ಮಂತ್ರ ಪ್ರಯೋಗವಾಗಿದ್ದರೆ ಹಾಗೂ ಕೆಟ್ಟ ದೃಷ್ಟಿ ಬಿದ್ದಿದ್ದರೆ ಅದನ್ನು ಹೋಗಲಾಡಿಸಿ ಮನೆಯಲ್ಲಿ ಶಾಂತಿ ಹಾಗೂ ನೆಮ್ಮದಿ ದೊರಕಬೇಕು ಎಂದರೆ ನಾವು ಹೇಳುವ ಈ ಸರಳ ತಂತ್ರವನ್ನು ಪ್ರಯೋಗ ಮಾಡಿದರೆ ಈ ಎಲ್ಲಾ ತೊಂದರೆಗಳಿಂದ ಮುಕ್ತಿಯನ್ನು ಪಡೆದುಕೊಳ್ಳಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ…
ಬೆಂಗಳೂರು: ರಾಜ್ಯದಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಒಳಮೀಸಲಾತಿ ಜಾರಿಗೊಳಿಸಲಾಗಿದೆ. ಜಾತಿ ಪ್ರಮಾಣ ಪತ್ರ ಯಾವ ರೀತಿಯಲ್ಲಿ ನೀಡಬೇಕು ಎಂಬ ಕುರಿತು ವಿವರವಾದ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿಯ ಅನುಷ್ಠಾನದ ಕುರಿತಂತೆ ಇರುವ ಸಮಸ್ಯೆಗಳ ಬಗ್ಗೆ ನಡೆದ ಸಭೆಯ ಮುಖ್ಯಾಂಶಗಳು: • ಒಳ ಮೀಸಲಾತಿ ಕುರಿತಾಗಿ ಸಚಿವ ಸಂಪುಟ ಸಭೆಯ ತೀರ್ಮಾನಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಬೇಕು. ರೋಸ್ಟರ್ ಜಾರಿ ಕುರಿತಾಗಿ ಎಲ್ಲರ ಅಹವಾಲುಗಳನ್ನು ಆಲಿಸಬೇಕು. ಯಾವುದೇ ಜಾತಿಗಳಿಗೂ ರೋಸ್ಟರ್ನಲ್ಲಿ ಅನ್ಯಾಯವಾಗದಂತೆ ಖಾತ್ರಿಪಡಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು. • ಜಾತಿ ಪ್ರಮಾಣ ಪತ್ರ ಯಾವ ರೀತಿಯಲ್ಲಿ ನೀಡಬೇಕು ಎಂಬ ಕುರಿತು ವಿವರವಾದ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಲಾಗಿದೆ. ನೇಮಕಾತಿಗೆ ಇದ್ದ ನಿರ್ಬಂಧವನ್ನು ತೆರವುಗೊಳಿಸಿದ ಬಳಿಕ ಅಭ್ಯರ್ಥಿಗಳ ವಯೋಮಿತಿಯನ್ನು ಒಂದು ಅವಧಿಗೆ ಹೆಚ್ಚಳ ಮಾಡಲಾಗಿದೆ. ಕೆಇಎಯಲ್ಲಿ ಈಗಾಗಲೇ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. • ಒಳ ಮೀಸಲಾತಿ ಜಾರಿ…
 
		



 










