Subscribe to Updates
Get the latest creative news from FooBar about art, design and business.
Author: kannadanewsnow09
ಮಂಡ್ಯ : ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಮೂಲಕ ಮಕ್ಕಳ ಪ್ರತಿಭೆಗಳನ್ನು ಗುರುತಿಸಲು ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉತ್ತಮ ವೇದಿಕೆಯಾಗಲಿದೆ ಎಂದು ಶಾಸಕ ಕೆ.ಎಂ.ಉದಯ್ ಅಭಿಪ್ರಾಯಪಟ್ಟರು. ಮದ್ದೂರು ತಾಲೂಕಿನ ಸೋಮನಹಳ್ಳಿಯ ಶ್ರೀ ಸಿದ್ಧಾರೂಢ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಶನಿವಾರ ಆಯೋಜಿಸಿದ್ದ ಶ್ರೀ ಸಿದ್ಧಾರೂಢ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಮಕ್ಕಳ ಪ್ರತಿಭೆ ಅರಳಿಸುವ ವೇದಿಕೆಯಾಗಿದ್ದು, ಶಿಸ್ತು, ಸಂಸ್ಕಾರ, ಸಂಸ್ಕೃತಿ, ಭಾಷಾಭಿಮಾನ ಮತ್ತು ಸಮಾಜ ಪರಿವರ್ತನೆ ಶಾಲೆಯ ಮುಖ್ಯ ಗುರಿಯಾಗಿದೆ. ಎಲ್ಲ ದಾನಕ್ಕಿಂತ ವಿದ್ಯಾದಾನ ಶ್ರೇಷ್ಠವಾದುದು. ವಿದ್ಯೆ ಮನುಷ್ಯನನ್ನು ಬಾಳಿ ಬೆಳಸುತ್ತದೆ. ಎತ್ತರಕ್ಕೆ ಬೆಳೆದ ವ್ಯಕ್ತಿ ಸಮಾಜದ ಪ್ರಗತಿ, ದೇಶದ ಅಭಿವೃದ್ಧಿಗೆ ಶ್ರಮಿಸಬೇಕು. ಈ ಶಾಲೆಯ ವಿದ್ಯಾರ್ಥಿಗಳು ಸಹ ಕಠಿಣ ಪರಿಶ್ರಮದಿಂದ ಓದಿ ಮುಂದೆ ಉನ್ನತ ಸಾಧನೆ ಮಾಡುವ ಮೂಲಕ ಇತರೇ ಮಕ್ಕಳಿಗೆ ಪ್ರೇರಣೆಯಾಗಬೇಕೆಂದು ಕರೆ ನೀಡಿದರು. ಪ್ರತಿ ವರ್ಷವೂ 10ನೇ ತರಗತಿಯ ವಿದ್ಯಾರ್ಥಿಗಳು ಶೇಕಡಾ 90ಕ್ಕಿಂತ ಹೆಚ್ಚು ಫಲಿತಾಂಶ ಸಾಧಿಸುತ್ತಿರುವುದು ಸಂಸ್ಥೆಯ ಶೈಕ್ಷಣಿಕ…
ದಾವಣಗೆರೆ : “ಬಂಜಾರ ಸಮುದಾಯಕ್ಕೆ ಅನ್ಯಾಯವಾದಾಗ ಇವರ ಪರ ನಿಂತು ಹೋರಾಟ ಮಾಡಿದ್ದು ಈ ಡಿ.ಕೆ. ಶಿವಕುಮಾರ್. ಕೆ.ಟಿ ರಾಥೋಡ್ ಅವರ ಕಾಲದಲ್ಲಿ ನಿಮ್ಮನ್ನು ಪರಿಶಿಷ್ಟ ಜಾತಿ ವರ್ಗಕ್ಕೆ ಸೇರಿಸಿ, ತಾಂಡ ಅಭಿವೃದ್ಧಿ ನಿಗಮ ಸ್ಥಾಪಿಸಿ, ನಿಮ್ಮ ಬದುಕಿಗೆ ಹೊಸ ರೂಪ ನೀಡಿದ ಸರ್ಕಾರ ಇದ್ದರೆ ಅದು ಕಾಂಗ್ರೆಸ್ ಸರ್ಕಾರ ಎಂಬ ಇತಿಹಾಸ ಮರೆಯಲು ಸಾಧ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ದಾವಣಗೆರೆ ಜಿಲ್ಲೆಯ ನ್ಯಾಮಿತಿ ತಾಲ್ಲೂಕಿನ ಭಾಯಗಡ್- ಸೊರಗೊಂಡನಕೊಪ್ಪದಲ್ಲಿ ಶನಿವಾರ ನಡೆದ ಸಂತ ಸೇವಾಲಾಲ್ ರವರ 287ನೇ ಜಂಯಂತೋತ್ಸವ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು. ಸೌಹಾರ್ದತೆ ಹಾಗೂ ಸಮಾನತೆ ಸಂದೇಶ ಸಾರಿದ ಮಹಾನ್ ವ್ಯಕ್ತಿ “ನಾವು ಇಂದು ಸಂತ ಸೇವಾಲಾಲ್ ರವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇವೆ. ಸತ್ಯ, ನಿಷ್ಠೆ, ಸಾಮಾಜಿಕ ನ್ಯಾಯ, ಸಾಮರಸ್ಯ, ಸೌಹಾರ್ದತೆ ಹಾಗೂ ಸಮಾನತೆ ಸಂದೇಶ ಸಾರಿದ ಮಹಾನ್ ವ್ಯಕ್ತಿ ಸಂತ ಸೇವಾಲಾಲರು. ಮನುಷ್ಯನಿಗೆ ಧರ್ಮ ಬೇಕು, ಧರ್ಮಕ್ಕೆ ದಯೆ ಬೇಕು. ಈ ಸಂದರ್ಭದಲ್ಲಿ ದಯವಿಲ್ಲದ…
ಮಂಡ್ಯ : ಮದ್ದೂರು ನಗರಸಭೆಗೆ 4 ಗ್ರಾಮ ಪಂಚಾಯತಿಗಳ ಸೇರ್ಪಡೆ ವಿರೋಧಿಸಿ ತಾಲೂಕಿನ ಗೆಜ್ಜಲಗೆರೆ ಹಾಗೂ ಗೊರವನಹಳ್ಳಿ ಗ್ರಾ.ಪಂಗಳ ಮುಂದೆ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹಾಗೂ ಮುಖಂಡರೊಂದಿಗೆ ಶನಿವಾರ ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ನೇತೃತ್ವದಲ್ಲಿ ಕರೆದಿದ್ದ ಸಭೆಯಲ್ಲಿ ಯಾವುದೇ ಒಮ್ಮತಕ್ಕೆ ಬಾರದ ಕಾರಣ ಸಭೆ ವಿಫಲವಾಯಿತು. ಮದ್ದೂರು ತಾಲೂಕಿನ ನಾಲ್ಕು ಗ್ರಾ.ಪಂ.ಗಳಾದ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ ಹಾಗೂ ಸೋಮನಹಳ್ಳಿ ವ್ಯಾಪ್ತಿಯ ಗ್ರಾಮಗಳನ್ನು ನಗರಸಭೆಗೆ ಸೇರಿಸಿಕೊಂಡಿರುವ ಬಗ್ಗೆ ಪ್ರಮುಖವಾಗಿ ಗೆಜ್ಜಲಗೆರೆ ಹಾಗೂ ಗೊರವನಹಳ್ಳಿ 2 ಗ್ರಾಪಂಗಳ ಗ್ರಾಮಸ್ಥರು ಹಾಗೂ ಮುಖಂಡರು ಹಲವು ದಿನಗಳಿಂದ ಗ್ರಾಪಂ ಆವರಣದಲ್ಲಿ ಪ್ರತಿಭಟನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಇಂದು ಸಭೆಯನ್ನು ಕರೆಯಲಾಗಿತ್ತು. ಪ್ರತಿಭಟನೆಯನ್ನು ನಿಲ್ಲಿಸುವಂತೆ ಸಚಿವ ಚಲುವರಾಯಸ್ವಾಮಿ , ಶಾಸಕ ಕೆ.ಎಂ.ಉದಯ್ ಹಾಗೂ ಜಿಲ್ಲಾಡಳಿತ ಮನವಿ ಮಾಡಿತು. ಆದರೆ ನಮಗೆ ನ್ಯಾಯ ಸಿಗವವರೆಗೂ ಯಾವುದೇ ಕಾರಣಕ್ಕೂ ಪ್ರತಿಭಟನೆ ನಿಲ್ಲಿಸಲು ಸಾಧ್ಯವಿಲ್ಲ ಎಂದು ರೈತ ಮುಖಂಡರು ಹೇಳಿದ್ದಾರೆ. ಈಗಾಗಲೇ ಸಂಬಂಧಪಟ್ಟ ವಿಚಾರವು ನ್ಯಾಯಾಲಯದಲ್ಲಿ…
ಕೂದಲಿನ ಬೇರುಗಳು ಗಟ್ಟಿಯಾಗಿ ಉಳಿದರೆ ನಮ್ಮ ಕೂದಲಿನ ಸಾಂದ್ರತೆಯನ್ನು ಯಾರೂ ಕಡಿಮೆ ಮಾಡಲು ಸಾಧ್ಯವಿಲ್ಲ. ಅಂದರೆ, ಉಪ್ಪು ನೀರು, ಧೂಳು ಮತ್ತು ಇತರ ಸಮಸ್ಯೆಗಳು ನಿಮ್ಮ ಕೂದಲಿನ ಬೇರುಗಳನ್ನು ದುರ್ಬಲಗೊಳಿಸಬಹುದು. ಇಂದಿನ ಪರಿಸ್ಥಿತಿಯಲ್ಲಿ ನಿಮ್ಮ ಕೂದಲು ತುಂಬಾ ಉದುರಲು ಪ್ರಾರಂಭಿಸುತ್ತಿದೆಯೇ? ಅದನ್ನು ಸರಿಪಡಿಸಲು ಮನೆಯಲ್ಲಿ ಅನುಸರಿಸಬೇಕಾದ ಸೌಂದರ್ಯ ಸಲಹೆಗಳು ಯಾವುವು ಎಂಬುದನ್ನು ಈ ಪೋಸ್ಟ್ನಲ್ಲಿ ನಾನು ತಿಳಿಯಲಿದ್ದೇನೆ . ಎರಡು ವಿಧದ ಸೌಂದರ್ಯ ಸಲಹೆಗಳನ್ನು ಹೇಳಲಾಗಿದೆ, ನೀವು ಈ ಎರಡು ಸಲಹೆಗಳಲ್ಲಿ ಒಂದನ್ನು ಅನುಸರಿಸಿ ಅಥವಾ ವಾರಕ್ಕೊಮ್ಮೆ ಎರಡೂ ಸಲಹೆಗಳನ್ನು ಅನುಸರಿಸಿದರೆ, ನಿಮ್ಮ ಕೂದಲು ಕಾಡು ಕಾಡಿನಂತೆ ಬೆಳೆಯಲು ಪ್ರಾರಂಭಿಸುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ,…
ನವದೆಹಲಿ: ನವದೆಹಲಿಯಲ್ಲಿ ಸಂಚಾರ ದಟ್ಟಣೆ ಸಮಸ್ಯೆಯಿಂದಾಗಿ, ಫೆಬ್ರವರಿ 16ರಿಂದ 20ರವರೆಗೆ ಸುಪ್ರೀಂ ಕೋರ್ಟ್ ವಕೀಲರಿಗೆ ವರ್ಚುಲ್ ಆಗಿ ಪ್ರಕರಣಗಳ ಅರ್ಜಿ ವಿಚಾರಣೆಯಲ್ಲಿ ಭಾಗಿಯಾಗೋದಕ್ಕೆ ಅವಕಾಶ ನೀಡಿದೆ. ಭಾರತ್ ಮಂಟಪದಲ್ಲಿ ನಡೆಯಲಿರುವ ‘AI ಇಂಪ್ಯಾಕ್ಟ್ ಶೃಂಗಸಭೆ’ಗೆ ಮುಂಚಿತವಾಗಿ, ನ್ಯಾಯಾಲಯದ ಆವರಣದಲ್ಲಿ ಸಂಚಾರ ದಟ್ಟಣೆ ಉಂಟಾಗಬಹುದು ಎಂಬ ಕಾರಣ ನೀಡಿ, ಫೆಬ್ರವರಿ 16 ಮತ್ತು 20, 2026 ರ ನಡುವೆ ವಕೀಲರು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಹಾಜರಾಗಲು ಅನುಮತಿ ನೀಡುವ ಸುತ್ತೋಲೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಹೊರಡಿಸಿದೆ. ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹಾಜರಾಗುವುದು ಐಚ್ಛಿಕವಾಗಿರುತ್ತದೆ ಮತ್ತು ಈ ಅವಧಿಯಲ್ಲಿ ಎಲ್ಲಾ ಪೀಠಗಳು ಹೈಬ್ರಿಡ್ ಮೋಡ್ನಲ್ಲಿ ಕಾರ್ಯನಿರ್ವಹಿಸುತ್ತವೆ ಎಂದು ರಿಜಿಸ್ಟ್ರಿ ಸ್ಪಷ್ಟಪಡಿಸಿದೆ. https://twitter.com/barandbench/status/2022611846734434719 https://kannadanewsnow.com/kannada/a-shocking-incident-on-valentines-day-the-lover-kills-his-mistress-shoots-himself-and-commits-suicide/ https://kannadanewsnow.com/kannada/woman-who-went-to-a-wedding-wearing-jewelry-worth-20-lakhs-mysteriously-disappears/
ನೋಯ್ಡಾ: ಪ್ರೇಮಿಗಳ ದಿನದಂದೇ ಬೆಚ್ಚಿ ಬೀಳಿಸೋ ಘಟನೆಯೊಂದು ನೋಯ್ಡಾದಲ್ಲಿ ನಡೆದಿದೆ. ಪ್ರಿಯಕರನೊಬ್ಬ, ತನ್ನ ಗರ್ಲ್ ಫ್ರೆಂಡ್ ಕೊಂದು, ತಾನೂ ಕಾರಿನೊಳಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ. ಫೆಬ್ರವರಿ 14, ಶನಿವಾರ ನೋಯ್ಡಾದಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಒಬ್ಬ ಪುರುಷ ಮತ್ತು ಮಹಿಳೆಯೊಬ್ಬರು ತಲೆಗೆ ಗುಂಡೇಟಿನಿಂದ ಗಾಯಗಳಾಗಿ ಮೃತಪಟ್ಟಿರುವುದು ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪಿಟಿಐ ವರದಿ ಪ್ರಕಾರ, 32 ವರ್ಷದ ವ್ಯಕ್ತಿ ತನ್ನ 26 ವರ್ಷದ ಗೆಳತಿಗೆ ಗುಂಡು ಹಾರಿಸಿಕೊಂದ ನಂತರ ತನ್ನ ಮೇಲೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ನೋಯ್ಡಾದ ಸೆಕ್ಟರ್ -39 ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಸೆಕ್ಟರ್ 107 ರ ದಾದ್ರಿ ರಸ್ತೆಯಲ್ಲಿರುವ ಪಿಲ್ಲರ್ ಸಂಖ್ಯೆ 84 ರ ಬಳಿ ಕಾರಿನೊಳಗೆ ಸಂಬಂಧದಲ್ಲಿದ್ದರು ಎಂದು ನಂಬಲಾದ ಇಬ್ಬರು ಮೃತರಾಗಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾಹಿತಿ ಪಡೆದ ನಂತರ ಪೊಲೀಸರು ಸ್ಥಳಕ್ಕೆ ತಲುಪಿದಾಗ ಪ್ರೇಮಿಗಳು ಒಳಗೆ ಮೃತಪಟ್ಟಿರುವುದು ಕಂಡುಬಂದಿದೆ.…
ಹಾಸನ: ಸುಮಾರು 20 ಲಕ್ಷ ಮೌಲ್ಯದ ಆಭರಣ ಧರಿಸಿ, ಸಂಬಂಧಿಕರೊಬ್ಬರ ಮದುವೆಗೆ ತೆರಳಿದ್ದಂತ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವಂತ ಘಟನೆ ಹಾಸನದ ಕಲ್ಕೆರೆಯಲ್ಲಿ ಬಳಿಯಲ್ಲಿ ನಡೆದಿದೆ. ಹಾಸನ ತಾಲ್ಲೂಕಿನ ಕಲ್ಕೆರೆ ಗ್ರಾಮ, ಮೂಲತಹ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕು ವ್ಯಾಪ್ತಿಯ ನಿವಾಸಿ ಮಹಿಳೆಯೊಬ್ಬರು ತುಮಕೂರಿಗೆ ಸಂಬಂಧಿಕರೊಬ್ಬರ ಮದುವೆಗಾಗಿ ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣ ಧರಿಸಿ ತೆರಳಿದ್ದರು. ಕಳೆದ ಗುರುವಾರದಂದು ತೆರಳಿದ್ದಂತ ಮಹಿಳೆಯ, ದಿಢೀರ್ ನಿಗೂಢವಾಗಿ ನಾಪತ್ತೆಯಾಗಿದ್ದರು. ನಾಪತ್ತೆಯಾಗಿದ್ದಂತ ಮಹಿಳೆಯ ಬಟ್ಟೆ, ಒಳ ಉಡುಪುಗಳು ರಸ್ತೆ ಬದಿಯಲ್ಲಿ ದೊರೆತಿದ್ದವು. ಈ ಸಂಬಂಧ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭನ್ವಿತಾ ಅವರು ಪೊಲೀಸರ ಮೂರು ತಂಡಗಳನ್ನು ಪತ್ತೆಗಾಗಿ ರಚಿಸಿದ್ದರು. ಇಂದು ಹಾಸನ ತಾಲ್ಲೂಕಿನ ಕಲ್ಕೆರೆ ಕೆರೆ, ಸುತ್ತಮುತ್ತ ಮಹಿಳೆಯ ಪತ್ತೆಗಾಗಿ ಹುಡುಕಾಟ ನಡೆಸಿದರು. ಕಲ್ಕೆರೆ ಕೆರೆಯಲ್ಲಿ ಬೋಟ್ ಮೂಲಕ ಮಹಿಳೆಯ ಪತ್ತೆಗಾಗಿ ಹುಡುಕಾಡಿದರೂ ಯಾವುದೇ ಸುಳಿವು ಸಿಗಲಿಲ್ಲ. ಅಲ್ಲದೇ ಡ್ರೋನ್ ಕ್ಯಾಮರಾ ಮೂಲಕವೂ ಕೆರೆ, ಕೆರೆಯ ಸುತ್ತಮುತ್ತ ಹುಡುಕಾಟವನ್ನು ಪೊಲೀಸರು ನಡೆಸಿದರು. ಆದರೂ ಯಾವುದೇ…
ಬೆಂಗಳೂರು: ನಿನ್ನೆ ದಿಢೀರ್ ಹೃದಯಾಘಾತದಿಂದ ನಿಧನರಾದಂತ ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ಜೋ ಸೈಮನ್ ಅವರ ಅಂತ್ಯಕ್ರಿಯೆಯನ್ನು ಇಂದು ನೆರವೇರಿಸಲಾಯಿತು. ಖ್ಯಾತ ನಿರ್ದೇಶಕ ಜೋ ಸೈಮನ್ ಮಣ್ಣಲ್ಲಿ ಮಣ್ಣಾಗುವ ಮೂಲಕ ಇನ್ನೂ ನೆನಪಾಗಿ ಉಳಿದಿದ್ದಾರೆ. ನಿನ್ನೆ ನಿಧನರಾದಂತ ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ಜೋ ಸೈಮನ್ ಅವರ ಅಂತ್ಯಕ್ರಿಯೆಯನ್ನು ಕ್ರಿಶ್ಚಿಯನ್ ಸಂಪ್ರದಾಯದಂತೆ ನೆರವೇರಿಸಲಾಗಿದೆ. ಶಿಲುಬೆ ಬೆಟ್ಟದ ಬಳಿಯ ಸ್ಮಶಾನದಲ್ಲಿ ಅಂತ್ಯಕ್ರಿಯೆಯನ್ನು ನೆರವೇರಿಸಲಾಗಿದೆ. ಎಸ್.ಎಂ.ಜೋಸೈಮನ್ ಒಬ್ಬ ಕನ್ನಡ ಚಲನಚಿತ್ರದ ನಿರ್ದೇಶಕ ಮತ್ತು ಲೇಖಕ. ಇವರ ಪ್ರಸಿದ್ಧಿ ಪಡೆದ ಚಿತ್ರಗಳಲ್ಲಿ ಸಹೋದರರ ಸವಾಲ್(1977), ಒಂದು ಪ್ರೇಮದ ಕಥೆ(1977), ಬಂಗಾರದ ಗುಡಿ(1976) ಮೊದಲಾದವುಗಳು. ಜೋ ಸೈಮನ್ ಮಂಡ್ಯದವರು.ತಮ್ಮ ಓದನ್ನು ಮಂಡ್ಯದಲ್ಲಿ ಮುಗಿಸಿದ ನಂತರ 1967 ರಲ್ಲಿ ರಗಸ್ಯ ಪೊಲೀಸ್ 115 ಮೂಲಕ ಚಲನಚಿತ್ರ ರಂಗ ಪ್ರವೇಶಿಸಿದರು.ಪ್ರಾರಂಭದಲ್ಲಿ ಅವರು. ಟಚ್ ಅಪ್ ಬಾಯ್, ಸಹಾಯಕ ಮೇಕ್ಅಪ್ ಮ್ಯಾನ್ ಮತ್ತು ಸೆಟ್ ಬಾಯ್ ಆಗಿ ಕೆಲಸ ಮಾಡಿದ್ದರು. ನಂತರ ಅವರು ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಲು ಪ್ರಾರಂಭಿಸಿದ್ದರು. ಅವರು ಕೆ. ಎಸ್. ಆರ್. ದಾಸ್,…
ಬೆಂಗಳೂರು: ಇತ್ತೀಚೆಗೆ ಮಾಜಿ ಪರಿಷತ್ ಸದಸ್ಯ ಪಿ.ರಾಮಯ್ಯ ಅವರು ನಿಧನರಾಗಿದ್ದರು. ಅವರ ನಿಧವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸುವಂತೆ ರಾಜ್ಯ ಸರ್ಕಾರ ಆದೇಶಿಸಿತ್ತು. ಇದೀಗ ಆ ಬಳಿಕ ಅಂತ್ಯಕ್ರಿಯೆಯ ವೇಳೆಯಲ್ಲಿ ಪೊಲೀಸ್ ಬ್ಯಾರಿಕೇಡ್ ಹಾಕಿದ್ದಕ್ಕೆ ಬಿಲ್ ಪಾವತಿಸುವಂತೆ ಬಿಲ್ ನೀಡಿ ರಾಜ್ಯ ಸರ್ಕಾರ ಮತ್ತೊಂದು ಎಡವಟ್ಟು ಮಾಡಿದೆ. ಈ ಎಡವಟ್ಟನ್ನು ಕೆಯುಡಬ್ಲ್ಯೂಜೆ ತೀವ್ರವಾಗಿ ಖಂಡಿಸಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಆಕ್ರೋಶ ಹೊರ ಹಾಕಿರುವಂತ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು, ಹಿರಿಯ ಪತ್ರಕರ್ತರು & ವಿಧಾನ ಪರಿಷತ್ ಮಾಜಿ ಸದಸ್ಯರಾದ ಪಿ.ರಾಮಯ್ಯ ಅವರಿಗೆ ಸರ್ಕಾರಿ ಗೌರವ ಮೂಲಕ ಅಂತ್ಯಸಂಸ್ಕಾರ ಮಾಡಿದ ಕ್ರಮ ಸ್ವಾಗತಾರ್ಹ. ಆದರೆ ಪೊಲೀಸ್ ಬ್ಯಾರಿಕೆಡ್ ಹಾಕಿದ ಬಿಲ್ ನ್ನು ರಾಮಯ್ಯ ಅವರ ಮನೆಗೆ ಕಳುಹಿಸಿದ್ದು ಅವಮಾನವೀಯ ಮತ್ತು ಖಂಡನೀಯ ಹಾಗೂ ಹಿರಿಯ ಜೀವಕ್ಕೆ ಮಾಡಿದ ಅವಮಾನ. ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿದೆ. https://twitter.com/kuwj_r/status/2022627878735917392 https://kannadanewsnow.com/kannada/murder-suspect-escapes-from-police-station/ https://kannadanewsnow.com/kannada/another-major-blunder-by-the-state-government-bill-to-pay-for-government-honorarium-expenses/
ಹುಬ್ಬಳ್ಳಿ: ಕೊಲೆ ಆರೋಪಿಯೊಬ್ಬ ಪೊಲೀಸ್ ಠಾಣೆಯಿಂದಲೇ, ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಎಸ್ಕೇಪ್ ಆಗಿರುವಂತ ಘಟನೆ ಹುಬ್ಬಳ್ಳಿಯ ಬೆಂಡಿಗೇರಿ ಠಾಣೆಯಲ್ಲಿ ನಡೆದಿದೆ. ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿದ್ದಂತ ಪ್ರಜ್ವಲ್ ಎಂಬಾತನನ್ನು ವಶಕ್ಕೆ ಪಡೆದು, ಹುಬ್ಬಳ್ಳಿಯ ಬೆಂಡಿಗೇರಿ ಠಾಣೆಗೆ ಪೊಲೀಸರು ಕರೆತಂದಿದ್ದರು. ಆದರೇ ಕೊಲೆ ಆರೋಪಿ ಪ್ರಜ್ವಲ್ ಪೊಲೀಸರ ಕಣ್ತಪ್ಪಿಸಿ ಠಾಣೆಯಿಂದಲೇ ಎಸ್ಕೇಪ್ ಆಗಿದ್ದಾನೆ. ಈ ಬಗ್ಗೆ ಹುಬ್ಬಳ್ಳಿ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮಾತನಾಡಿ, ಆದಷ್ಟು ಬೇಗ ಠಾಣೆಯಿಂದ ಪರಾರಿಯಾಗಿರುವಂತ ಕೊಲೆ ಆರೋಪಿಯನ್ನು ಹಿಡಿಯುತ್ತೇವೆ. ಪೊಲೀಸರ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿರೋದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಬಗ್ಗೆ ಇನ್ಸ್ ಪೆಕ್ಟರ್ ಗೆ ವರದಿ ನೀಡುವಂತೆ ಸೂಚಿಸಿದ್ದೇನೆ ಎಂದರು. ಹುಬ್ಬಳ್ಳಿಯ ಬೆಂಡಿಗೇರಿ ಠಾಣೆಯಿಂದ ಕೊಲೆ ಆರೋಪಿ ಪ್ರಜ್ವಲ್ ಎಸ್ಕೇಪ್ ಆಗಿದ್ದರ ಬಗ್ಗೆ ವರದಿಯನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ಒಂದು ವೇಳೆ ಪೊಲೀಸರು ಕರ್ತವ್ಯ ಲೋಪ ಎಸಗಿದ್ದರೇ, ಅಂತಹ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಕಮೀಷನರ್ ಎನ್.ಶಶಿಕುಮಾರ್ ಹೇಳಿದ್ದಾರೆ. https://kannadanewsnow.com/kannada/another-major-blunder-by-the-state-government-bill-to-pay-for-government-honorarium-expenses/ https://kannadanewsnow.com/kannada/survey-government-land-within-gram-panchayat-limits-and-protect-it-with-wire-fencing-krs-partys-ravikrishna-reddys-letter-to-minister-priyank-kharge/














