Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಳಗಾವಿ: ನಗರದ ಉದ್ಯಮಭಾಗ ಕೈಗಾರಿಕಾ ಪ್ರದೇಶದಲ್ಲಿ ಭಾರಿ ಪ್ರಮಾಣದ ಜೀವಂತ ಗುಂಡುಗಳು (ಲೈವ್ ಬುಲೆಟ್ಗಳು) ಪತ್ತೆಯಾಗಿದ್ದು, ಇಡೀ ನಗರದಲ್ಲಿ ಆತಂಕ ಮೂಡಿಸಿದೆ. ಕಸದ ರಾಶಿಯಲ್ಲಿ ಒಟ್ಟು 59 ಜೀವಂತ ಗುಂಡುಗಳು ಪತ್ತೆಯಾಗಿದ್ದು, ಸ್ಥಳೀಯರು ಹಾಗೂ ಪೊಲೀಸರು ಬೆಚ್ಚಿಬಿದ್ದಿದ್ದಾರೆ. ಕಸ ವಿಂಗಡಣೆ ವೇಳೆ ಸಿಕ್ಕಿದ ಗನ್ ಬುಲೆಟ್ಸ್: ನಗರದ ಉದ್ಯಮಭಾಗ ಕೈಗಾರಿಕಾ ಪ್ರದೇಶದಲ್ಲಿ ಪೌರಕಾರ್ಮಿಕರು ಎಂದಿನಂತೆ ಕಸ ಸಂಗ್ರಹಿಸಿ, ಅದನ್ನು ವಿಂಗಡಣೆ ಮಾಡುತ್ತಿದ್ದರು. ಈ ವೇಳೆ ಕಸದ ರಾಶಿಯೊಳಗೆ ಸಂಶಯಾಸ್ಪದ ವಸ್ತುಗಳು ಕಂಡುಬಂದಿವೆ. ಹತ್ತಿರ ಹೋಗಿ ಪರಿಶೀಲಿಸಿದಾಗ ಅವು ಬಂದೂಕಿನ ಜೀವಂತ ಗುಂಡುಗಳೆಂದು ತಿಳಿದುಬಂದಿದೆ. ತಕ್ಷಣವೇ ಪೌರಕಾರ್ಮಿಕರು ಈ ಬಗ್ಗೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರಿಂದ ತೀವ್ರ ತನಿಖೆ: ವಿಷಯ ತಿಳಿಯುತ್ತಿದ್ದಂತೆಯೇ ಉದ್ಯಮಭಾಗ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ, ಕಸದ ರಾಶಿಯಲ್ಲಿದ್ದ 59 ಜೀವಂತ ಗುಂಡುಗಳನ್ನು ವಶಕ್ಕೆ ಪಡೆದಿದ್ದಾರೆ. ಇಷ್ಟೊಂದು ಭಾರಿ ಪ್ರಮಾಣದ ಗುಂಡುಗಳು ಕಸದ ತೊಟ್ಟಿಗೆ ಹೇಗೆ ಬಂದವು? ಇದನ್ನು ಇಲ್ಲಿ ತಂದು ಎಸೆದವರು ಯಾರು? ಎಂಬಿತ್ಯಾದಿ ಪ್ರಶ್ನೆಗಳು ಪೊಲೀಸರನ್ನು…
ಶಿವಮೊಗ್ಗ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಸಚಿವರಾದರೆ ಈ ಕ್ಷೇತ್ರದಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳು ನಡೆಯಲಿವೆ. ಅದರಲ್ಲೂ ಮುಖ್ಯವಾಗಿ ಹಿಂದುಳಿದ ವರ್ಗಗಳಾದ ಈಡಿಗ ಸಮಾಜ ಸೇರಿದಂತೆ ಇತರ ಹಿಂದುಳಿದ ವರ್ಗಗಳ ಅಭ್ಯುದಯಕ್ಕಾಗಿ ಅವರು ಶ್ರಮಿಸುತ್ತಾರೆ ಎಂಬ ಕಾರಣಕ್ಕಾಗಿ ನಮ್ಮ ವರ್ಣಪುರ ಪೀಠದ ಶ್ರೀಗಳು ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದಾರೆ ಎಂದು ಸಾಗರದ ಕಾಂಗ್ರೆಸ್ ಮುಖಂಡ ಚೇತನ್ ರಾಜ್ ಕಣ್ಣೂರು ಹೇಳಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಒಬ್ಬ ವ್ಯಕ್ತಿ ಶಾಸಕ ಸ್ಥಾನದಲ್ಲಿರುವಾಗ ಸಮಾಜದ ಮುಖಂಡರು ಮತ್ತು ಸ್ವಾಮೀಜಿಗಳು ಅವರ ಚಟುವಟಿಕೆಗಳನ್ನು ಗಮನಿಸುವುದು ಸಹಜ. ಇಂದು ಗೋಪಾಲಕೃಷ್ಣ ಬೇಳೂರು ಅವರು ಕೇವಲ ಸಾಗರ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿಲ್ಲ. ಉಡುಪಿ, ಮಂಗಳೂರು, ತೀರ್ಥಹಳ್ಳಿ, ಸೊರಬ, ಶಿಕಾರಿಪುರ, ಶಿರಸಿ, ಸಿದ್ದಾಪುರ ಸೇರಿದಂತೆ ಎಲ್ಲಾ ಕಡೆಗಳಲ್ಲೂ ಸಮಾಜದ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದಾರೆ. ಸಮಾಜದ ಪರವಾಗಿ ನಿಂತು ಸಹಕಾರಗಳನ್ನು ನೀಡುತ್ತಿದ್ದಾರೆ. ಇದನ್ನು…
ಗೋವಾ / ಬೆಂಗಳೂರು : ‘ಅನುಷ್ಠಾನದ ಹಂತದಲ್ಲಿರುವ ಅತ್ಯಧಿಕ ಪವನ ವಿದ್ಯತ್ ಸಾಮರ್ಥ್ಯ’ಕ್ಕಾಗಿ ರಾಷ್ಟ್ರೀಯ ಮಟ್ಟದ ಪ್ರಶಸ್ತಿಯನ್ನು ಕರ್ನಾಟಕ ತನ್ನದಾಗಿಸಿಕೊಡಿದೆ. ಗೋವಾದಲ್ಲಿ ನಡೆದ 2026ನೇ ಸಾಲಿನ ವಿಶ್ವ ಪವನ ದಿನಾಚರಣೆಯಲ್ಲಿ ಕರ್ನಾಟಕಕ್ಕೆ ಪ್ರತಿಷ್ಠಿತ “ಹೈಯೆಸ್ಟ್ ವಿಂಡ್ ಕ್ಯಾಪಾಸಿಟಿ ಪೈಪ್ಲೈನ್” ಪ್ರಶಸ್ತಿ ಸಂದಿದೆ. ಕೇಂದ್ರದ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಪ್ರಲ್ಹಾದ್ ಜೋಶಿ ಅವರಿಂದ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪ್ಪಯ್ಯ ಈ ಪ್ರಶಸ್ತಿ ಸ್ವೀಕರಿಸಿದರು. 9 ಗಿಗಾ ವ್ಯಾಟ್ ಸಾಮರ್ಥ್ಯದ ಪವನ ವಿದ್ಯುತ್ ಯೋಜನೆಗಳು ಅನುಷ್ಠಾನ ಹಂತದಲ್ಲಿದೆ. ನವ ಮತ್ತು ನವೀಕರಿಸಬಹುದಾದ ಇಂಧನ ರಾಜ್ಯ ಸಚಿವ ಶ್ರೀಪಾದ್ ಯೆಸ್ಸೊ ನಾಯಕ್ ಹಾಗೂ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದ ಕಾರ್ಯದರ್ಶಿ ಸಂತೋಷ್ ಕುಮಾರ್ ಸಾರಂಗಿ, ಗೋವಾದ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವ ರಾಮಕೃಷ್ಣ ಧವಳೀಕರ್ ಅವರ ಸಮ್ಮುಖದಲ್ಲಿ ಪ್ರಶಸ್ತಿ ವಿತರಿಸಲಾಯಿತು. ಈ ಪ್ರಶಸ್ತಿಯೊಂದಿಗೆ ಪವನ ಶಕ್ತಿಯ ಉತ್ಪಾದನೆಯನ್ನು ಹೆಚ್ಚಿಸುವ ಮೂಲಕ ನವೀಕರಿಸಬಹುದಾದ ಇಂಧನ…
ಶಿವಮೊಗ್ಗ: ಇತ್ತೀಚೆಗೆ ಸಾಗರದಲ್ಲಿ ನಡೆದ ಸಮುದಾಯದ ಸಭೆಯೊಂದರಲ್ಲಿ ಭಾಗವಹಿಸಿದ್ದ ಶ್ರೀಗಳು, ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಹಿರಿತನ ಹಾಗೂ ಸಮಾಜಕ್ಕೆ ಅವರು ನೀಡಿರುವ ಕೊಡುಗೆಯನ್ನು ಪರಿಗಣಿಸಿ ಅವರಿಗೆ ಸಚಿವರನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದ್ದರು. ಆದರೆ ಅನಂತಪುರ ಭಾಗದ ಬಿಜೆಪಿ ಮುಖಂಡರೊಬ್ಬರು ಶ್ರೀಗಳ ಈ ಹೇಳಿಕೆಯನ್ನು ವಿರೋಧಿಸಿ, ಬೇಳೂರು ಅವರ ಹೆಸರನ್ನು ಪ್ರಸ್ತಾಪಿಸಿದ್ದೇ ತಪ್ಪು ಎನ್ನುವ ರೀತಿಯಲ್ಲಿ ಮಾತನಾಡಿರುವುದು ಖಂಡನೀಯ ಎಂದು ಮಾಜಿ ತಾಲ್ಲೂಕು ಪಂಚಾಯತಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಸೋಮಶೇಖರ್ ಲಾವಿಗೇರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಮುಖಂಡನ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ”ಪ್ರಶ್ನಿಸುವ ನೈತಿಕತೆ ನಿನಗೆ ಎಲ್ಲಿದೆ?” ”ನಮ್ಮ ಜನಾಂಗದ ನಾಯಕರ ಬಗ್ಗೆ ಶ್ರೀಗಳು ಮಾತನಾಡಿದಾಗ, ಅದನ್ನು ಪ್ರಶ್ನಿಸುವ ನೈತಿಕತೆ ನಿನಗೆ ಎಲ್ಲಿದೆ? ಗೋಪಾಲಕೃಷ್ಣ ಬೇಳೂರು ಅವರು ಮೂರು ಬಾರಿ ಶಾಸಕರಾಗಿ ಆಯ್ಕೆಯಾದವರು ಮತ್ತು ನಮ್ಮ ಜಿಲ್ಲೆಯಲ್ಲೇ ಅತ್ಯಂತ ಹಿರಿಯ…
ಶಿವಮೊಗ್ಗ: ಕೇಂದ್ರ ಸರ್ಕಾರದ ವಿದ್ಯುತ್ ಖಾಸಗೀಕರಣ ನೀತಿಯನ್ನು ಕರ್ನಾಟಕ ರಾಜ್ಯ ರೈತ ಸಂಘವು ಆರಂಭದಿಂದಲೂ ತೀವ್ರವಾಗಿ ವಿರೋಧಿಸುತ್ತಾ ಬಂದಿದೆ ಎಂದು ಸಂಘದ ರಾಜ್ಯ ಉಪಾಧ್ಯಕ್ಷರಾದ ಶಿವಾನಂದ ಕುಗ್ವೆ ತಿಳಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ದೆಹಲಿಯಲ್ಲಿ ನಡೆದ ಐತಿಹಾಸಿಕ ರೈತ ಚಳುವಳಿಯ ಸಂದರ್ಭದಲ್ಲಿ ಕಾರ್ಪೊರೇಟ್ ಕಂಪನಿಗಳ ಪರವಾಗಿದ್ದ ಮೂರು ಕೃಷಿ ಕಾಯ್ದೆಗಳ ಜೊತೆಗೆ ವಿದ್ಯುತ್ ಖಾಸಗೀಕರಣ ನೀತಿಯನ್ನೂ ಕೇಂದ್ರ ಸರ್ಕಾರ ಹಿಂಪಡೆಯುವುದಾಗಿ ಭರವಸೆ ನೀಡಿತ್ತು. ಆದರೆ, ಈಗ ಅದೇ ನೀತಿಯನ್ನು ಕದ್ದುಮುಚ್ಚಿ ಜಾರಿಗೆ ತರಲು ಸರ್ಕಾರ ಹೊರಟಿದೆ ಎಂದು ಅವರು ಆಕ್ಷೇಪಿಸಿದರು. ಟಾಟಾ ಕಂಪನಿಯಿಂದ ಜಾಹೀರಾತು: ಆಕ್ಷೇಪಣೆಗೆ ಜೂನ್ 23 ಕೊನೆ ದಿನ ಮುಂಬೈ ಮೂಲದ ಟಾಟಾ ಕಂಪನಿಯು ಕರ್ನಾಟಕದ ಸುಮಾರು 19 ಜಿಲ್ಲೆಗಳಲ್ಲಿ ಸಾರ್ವಜನಿಕ ವಿದ್ಯುತ್ ಪ್ರಸರಣ ಕಂಪನಿಗಳಿಗೆ (ಮೆಸ್ಕಾಂ, ಹೆಸ್ಕಾಂ, ಬೆಸ್ಕಾಂ ಇತ್ಯಾದಿ) ಪರ್ಯಾಯವಾಗಿ ತಾನೇ ವಿದ್ಯುತ್ ಸೇವೆ ಒದಗಿಸುವುದಾಗಿ ಜಾಹೀರಾತು ನೀಡಿದೆ. ಈ ಬಗ್ಗೆ ಸಾರ್ವಜನಿಕರಿಂದ…
ಬದಲಾಗುತ್ತಿರುವ ಇಂದಿನ ಆಧುನಿಕ ಜೀವನಶೈಲಿ, ತೀವ್ರತರವಾದ ಮಾನಸಿಕ ಒತ್ತಡ ಹಾಗೂ ಪರಸ್ಪರ ಸಂವಹನದ ಕೊರತೆಯಿಂದಾಗಿ ಅನೇಕ ದಂಪತಿಗಳ ಲೈಂಗಿಕ ಜೀವನ (Sex Life) ಹಳಿತಪ್ಪುತ್ತಿದೆ. ಲೈಂಗಿಕ ಆರೋಗ್ಯ ತಜ್ಞರ ಪ್ರಕಾರ, ಬಹುತೇಕ ಜನರು ತಮ್ಮ ಲೈಂಗಿಕ ಜೀವನದಲ್ಲಿ ಸಮಸ್ಯೆಗಳು ತೀವ್ರವಾಗಿ ಉಲ್ಬಣಗೊಂಡು, ದಾಂಪತ್ಯದಲ್ಲಿ ಬಿರುಕು ಮೂಡುವವರೆಗೂ ಅದರ ಆರಂಭಿಕ ಸಂಕೇತಗಳನ್ನು ಗುರುತಿಸುವುದೇ ಇಲ್ಲ ಅಥವಾ ಸಂಪೂರ್ಣವಾಗಿ ನಿರ್ಲಕ್ಷಿಸುತ್ತಾರೆ. ನಿಮ್ಮ ದಾಂಪತ್ಯ ಜೀವನ ಸುಖಮಯವಾಗಿರಲು ಮತ್ತು ಯಾವುದೇ ದೊಡ್ಡ ಸಮಸ್ಯೆ ಎದುರಾಗುವ ಮುನ್ನವೇ ಎಚ್ಚೆತ್ತುಕೊಳ್ಳಲು ಸಹಾಯ ಮಾಡುವ ಪ್ರಮುಖ ಸಂಕೇತಗಳು ಮತ್ತು ಅವುಗಳ ಪರಿಹಾರಗಳ ವಿವರ ಇಲ್ಲಿದೆ: 1. ನಿರಂತರವಾಗಿ ಕಡಿಮೆಯಾಗುವ ಕಾಮಾಸಕ್ತಿ (Low Libido) ಕೆಲವೊಮ್ಮೆ ದಣಿವು ಅಥವಾ ಕೆಲಸದ ಒತ್ತಡದಿಂದಾಗಿ ಲೈಂಗಿಕತೆಯಿಂದ ದೂರವಿರುವುದು ಸಾಮಾನ್ಯ. ಆದರೆ, ಯಾವುದೇ ದೈಹಿಕ ಕಾರಣಗಳಿಲ್ಲದೆ ನಿರಂತರವಾಗಿ ಸಂಗಾತಿಯ ಮೇಲಿನ ಆಕರ್ಷಣೆ ಅಥವಾ ಕಾಮಾಸಕ್ತಿ ಕಡಿಮೆಯಾಗುತ್ತಿದ್ದರೆ, ಅದು ದಾಂಪತ್ಯದಲ್ಲಿ ಏನೋ ಸರಿಯಿಲ್ಲ ಎಂಬುದರ ಮೊದಲ ಸಂಕೇತವಾಗಿದೆ. ಇದನ್ನು ಕೇವಲ “ದಣಿವು” ಎಂದು ನಿರ್ಲಕ್ಷಿಸದೆ, ಅದರ ಹಿಂದಿನ…
ಅಮೆರಿಕ ಮತ್ತು ಇರಾನ್ ನಡುವಿನ ಸೈನಿಕ ಕದನವು ಕೇವಲ ಆ ಎರಡು ದೇಶಗಳಿಗಷ್ಟೇ ಹಾನಿ ಮಾಡಿಲ್ಲ. ಬದಲಾಗಿ, ಜಗತ್ತಿನ ಹತ್ತು-ಹಲವು ರಾಷ್ಟ್ರಗಳ ಅಭಿವೃದ್ಧಿಯ ವೇಗಕ್ಕೆ ಗಂಭೀರ ಬ್ರೇಕ್ ಹಾಕಿದೆ. “ಈ ಕದನ ಹೀಗೇ ಮುಂದುವರಿದರೆ ಜಗತ್ತು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ 50 ವರ್ಷಗಳಷ್ಟು ಹಿಂದಕ್ಕೆ ಹೋಗಲಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಜಾಗತಿಕ ಸಮುದಾಯಕ್ಕೆ ಮುನ್ನೆಚ್ಚರಿಕೆಯನ್ನೂ ನೀಡಿದ್ದರು. 2026ರ ಫೆಬ್ರವರಿ 28ರಂದು ಅಮೆರಿಕ ಮತ್ತು ಇಸ್ರೇಲ್ ದೇಶಗಳು ಜಂಟಿಯಾಗಿ ಇರಾನ್ ಮೇಲೆ ಅನಿರೀಕ್ಷಿತ ದಾಳಿ ನಡೆಸುವ ಮೂಲಕ ಈ ಯುದ್ಧ ಆರಂಭವಾಗಿತ್ತು. ವಿಶ್ವದ ಅತಿ ದೊಡ್ಡ ಆರ್ಥಿಕತೆ (ಅಮೆರಿಕ) ಮತ್ತು ಅತಿ ದೊಡ್ಡ ತೈಲ ಶಕ್ತಿ (ಇರಾನ್) ನಡುವೆ ನಡೆದ ಈ ಸುದೀರ್ಘ ಹೋರಾಟ ಕೊನೆಗೂ ಶಾಂತಿ ಒಪ್ಪಂದದೊಂದಿಗೆ ಮುಕ್ತಾಯಗೊಂಡಿದೆ. ಆದರೆ, ಈ ಮೂರೂವರೆ ತಿಂಗಳ ಅವಧಿಯಲ್ಲಿ ಸಂಭವಿಸಿದ ಹಾನಿ ಮಾತ್ರ ಕಲ್ಪನೆಗೂ ನಿಲುಕದಂತದ್ದಾಗಿದೆ. ಮೊದಲ 15 ದಿನಗಳಲ್ಲೇ ಮರಣಮೃದಂಗ ಯುದ್ಧ ಆರಂಭವಾದ ಮೊದಲ ಎರಡು ವಾರಗಳಲ್ಲಿಯೇ (2026ರ ಮಾರ್ಚ್…
ಶಿವಮೊಗ್ಗ: ಸಾಗರ ನಗರಸಭೆಯ ಮಹಿಳಾ ಪೌರಕಾರ್ಮಿಕರೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದರೂ, ನಗರಸಭೆ ಪೌರಕಾರ್ಮಿಕರ ಮೇಸ್ತ್ರಿ ನಾಗರಾಜ ಸ್ವಾಮಿಯನ್ನು ಈವರೆಗೂ ಬಂಧಿಸದ ಪೊಲೀಸ್ ಇಲಾಖೆಯ ಕ್ರಮವನ್ನು ಖಂಡಿಸಿ ಸೋಮವಾರ ದಲಿತ ಸಂಘರ್ಷ ಸಮಿತಿಗಳ (DSS) ಒಕ್ಕೂಟದ ವತಿಯಿಂದ ನಗರಸಭೆ ಎದುರಿನ ಗಾಂಧಿ ಪ್ರತಿಮೆ ಸಮೀಪ ಬೃಹತ್ ಪ್ರತಿಭಟನೆ ನಡೆಸಲಾಯಿತು. ಸಾಗರದ ‘ಪ್ರಜ್ವಲ್ ರೇವಣ್ಣ’ನಂತೆ ವರ್ತಿಸುತ್ತಿದ್ದಾನೆ ಕಾಮುಕ ಮೇಸ್ತ್ರಿ: ಎನ್. ಲಲಿತಮ್ಮ ಆಕ್ರೋಶ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ನಗರಸಭೆ ಮಾಜಿ ಅಧ್ಯಕ್ಷೆ ಎನ್.ಲಲಿತಮ್ಮ, ಸಾಗರ ನಗರಸಭೆಯಲ್ಲಿ ನಾಗರಾಜ್ ಮೇಸ್ತ್ರಿಯ ಉಪಟಳ ಮತ್ತು ಕಾಮುಕ ವರ್ತನೆಯಿಂದಾಗಿ ಮರ್ಯಾದಸ್ಥ ಹೆಣ್ಣುಮಕ್ಕಳು ನೆಮ್ಮದಿಯಿಂದ ಕೆಲಸ ಮಾಡಲು ಸಾಧ್ಯವಾಗದ ವಾತಾವರಣ ನಿರ್ಮಾಣವಾಗಿದೆ. ಈತ ಹಣ, ರಾಜಕೀಯ ಪ್ರಭಾವ ಮತ್ತು ದುರಹಂಕಾರದಿಂದ ಮೆರೆಯುತ್ತಾ ಸಾಗರದ ‘ಪ್ರಜ್ವಲ್ ರೇವಣ್ಣ’ನಂತೆ ವರ್ತಿಸುತ್ತಿದ್ದಾನೆ ಎಂದು ಗುಡುಗಿದರು. ಮಹಿಳಾ ಪೌರ ಕಾರ್ಮಿಕರೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಬಗ್ಗೆ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿ ವಾರ ಕಳೆದರೂ, ತನ್ನ ಚಾಣಾಕ್ಷತನ ಬಳಸಿ…
ವಿಜಯಪುರ: ಬೈಕ್ಗೆ ಟಿಪ್ಪರ್ ವಾಹನವೊಂದು ಹಿಂಬದಿಯಿಂದ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ, ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಅತ್ಯಂತ ಕ್ರೂರವಾಗಿ ಸಾವನ್ನಪ್ಪಿರುವ ದುರಂತ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನಲ್ಲಿ ನಡೆದಿದೆ. ಚಡಚಣ ತಾಲ್ಲೂಕಿನ ಮರೂರು ಬಳಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಈ ಜವರಾಯನ ಅಟ್ಟಹಾಸ ನಡೆದಿದೆ. ಮೃತರ ವಿವರ: ಅಪಘಾತದಲ್ಲಿ ಗೋರನಾಳ ಗ್ರಾಮದ ನಿವಾಸಿಗಳಾದ ಧರ್ಮಣ್ಣಾ ಹೊಸಮನಿ (41) ಮತ್ತು ಬೀರಪ್ಪ ಪೂಜಾರಿ (25) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಸ್ಥಳದಲ್ಲೇ ಹಾರಿಹೋಯಿತು ಪ್ರಾಣ ಪಕ್ಷಿ: ಧರ್ಮಣ್ಣಾ ಮತ್ತು ಬೀರಪ್ಪ ಇಬ್ಬರೂ ಬೈಕ್ನಲ್ಲಿ ರಾಷ್ಟ್ರೀಯ ಹೆದ್ದಾರಿ 52ರ ಮೂಲಕ ಚಡಚಣ ತಾಲ್ಲೂಕಿನ ಮರಗೂರು ಮಾರ್ಗವಾಗಿ ಸಂಚರಿಸುತ್ತಿದ್ದರು ಎನ್ನಲಾಗಿದೆ. ಈ ವೇಳೆ ವೇಗವಾಗಿ ಬಂದ ಟಿಪ್ಪರ್ ಇವರ ಬೈಕ್ಗೆ ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರೂ ಸವಾರರು ಹೆದ್ದಾರಿಗೆ ಬಿದ್ದು ತೀವ್ರ ರಕ್ತಸ್ರಾವ ಹಾಗೂ ಗಂಭೀರ ಗಾಯಗಳಿಂದಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು…
ಮಂಡ್ಯ: ಜಿಲ್ಲೆಯ ಮಾರದೇವನಹಳ್ಳಿಯಲ್ಲಿರುವ ಉಚಿತ ಗುರುಕುಲ ಶ್ರೀ ಸತ್ಯ ಸಾಯಿ ಶಾರದಾನಿಕೇತನಂ ವಿದ್ಯಾಸಂಸ್ಥೆಯ 12ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ ಎಲ್ಲ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿ ಹೊಸ ದಾಖಲೆ ಬರೆದಿದ್ದಾರೆ. 6ನೇ ತರಗತಿಯಿಂದ 12ನೇ ತರಗತಿಯವರೆಗೆ ಉಚಿತ ಮೌಲ್ಯಾಧಾರಿತ ಶಿಕ್ಷಣವನ್ನು ನೀಡುವಲ್ಲಿ ಹೆಸರು ಮಾಡಿರುವ ಈ ಸತ್ಯ ಸಾಯಿ ವಿದ್ಯಾಸಂಸ್ಥೆಯು, ಏಪ್ರಿಲ್ ತಿಂಗಳಲ್ಲಿ ನಡೆದ 12ನೇ ತರಗತಿಯ (ಸೀನಿಯರ್ ಸೆಕೆಂಡರಿ) ವಿದ್ಯಾರ್ಥಿಗಳ ಅಂತಿಮ ಪರೀಕ್ಷೆ ಪ್ರಕಟವಾಗಿದೆ. ಗುರುಕುಲದ ಕಲಾ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ 55 ವಿದ್ಯಾರ್ಥಿಗಳು 12ನೇ ತರಗತಿಯ ಪರೀಕ್ಷೆಗೆ( NIOS ಪಠ್ಯಕ್ರಮ) ಹಾಜರಾಗಿದ್ದು, ಎಲ್ಲಾ 55 ವಿದ್ಯಾರ್ಥಿಗಳು ಸಹ ಡಿಸ್ಟಿಂಕ್ಷನ್ (75% ಮೇಲೆ) ನಲ್ಲಿ ತೇರ್ಗಡೆಯಾಗಿದ್ದಾರೆ. ಮೂವರು ವಿದ್ಯಾರ್ಥಿಗಳು ಶೇಕಡಾ ನೂರರಷ್ಟು ಅಂಕ ಗಳಿಸಿದ್ದಾರೆ. ಡಾಟಾ ಎಂಟ್ರಿ ಮತ್ತು ಆಪರೇಷನ್ (DEO) ವಿದ್ಯಾರ್ಥಿಗಳಾದ ಸುನಿಲ್ ಹೆಗ್ಗರಡ್ಡಿ, ಕಿರಣ್ ಎಂ ಪಿ ಹಾಗೂ ಗಿರೀಶ್ ಕೆ ಅವರು ಶೇಕಡಾ ನೂರು ಅಂಕ ಗಳಿಸಿದ್ದಾರೆ. ಈ ಕುರಿತು ಮಾತನಾಡಿದ ಗುರುಕುಲಾಧ್ಯಕ್ಷ ಗೌರವ್ ಎಂ,…














