Author: kannadanewsnow09

ಹಿಂದೂ ಧಾರ್ಮಿಕ ನಂಬಿಕೆಗಳ ಪ್ರಕಾರ ಏಕಾದಶಿ ದಿನದಂದು ಉಪವಾಸ ಮಾಡಿ ವಿಷ್ಣು ವನ್ನು ಆರಾಧಿಸಿದರೆ ಏಳೇಳು ಜನ್ಮಗಳ ಪಾಪ ಕಳೆದು, ಪಿತೃ ದೋಷ ನಿವಾರಣೆ ಆಗಿ ಮೋಕ್ಷ ಸಂಪಾದಿಸುವ ಪುಣ್ಯ ದಿನವೇ ವೈಕುಂಠ ಏಕಾದಶಿ. ಸೂರ್ಯನು ದಕ್ಷಿಣಾಯನದಿಂದ ಉತ್ತರಾಯಣಕ್ಕೆ ಪ್ರವೇಶಿಸುವ ಮೊದಲು ಪ್ರತಿ ವರ್ಷ ಬರುವ ಈ ಏಕಾದಶಿಯನ್ನು “ವೈಕುಂಠ ಏಕಾದಶಿ” ಎಂದು ಕರೆಯಲಾ ಗುತ್ತದೆ ತಾಯಿ. ಇದು ಭಗವಾನ್ ಮಹಾವಿಷ್ಣು ನಿದ್ರೆಯಿಂದ ಎಚ್ಚರಾಗಿ ಮುಕ್ಕೋಟಿ ದೇವತೆಗಳೊಂದಿಗೆ ಗರುಡ ವಾಹನನಾಗಿ ಭೂಲೋಕಕ್ಕೆ ಬಂದು ಭಕ್ತರಿಗೆ ದರ್ಶನ ಕೊಡುವ ಪುಣ್ಯ ದಿನ. ಆದ್ದರಿಂದ ಏಕಾದಶಿಯನ್ನು ‘ಮುಕ್ಕೋಟಿ ಏಕಾದಶಿ’ ಎಂದು ಕರೆಯುತ್ತಾರೆ. ಈ ಶುಭದಿನ ಸ್ವರ್ಗದ ಬಾಗಿಲು ತೆಗೆದಿರುತ್ತದೆ ಎಂಬ ನಂಬಿಕೆ ಇದೆ. ವಿಶೇಷವಾಗಿ ಈ ‘ಏಕಾದಶಿ’ ಯಂದು ವಿಷ್ಣುಗೆ ಸಂಬಂಧಪಟ್ಟ ದೇವಾಲಯಗಳಲ್ಲಿ ಉತ್ತರ ದ್ವಾರಕ್ಕೆ ಹೂವಿನ ಅಲಂಕಾರ ಮಾಡಿ ವಿಶೇಷ ಪೂಜೆ ಮಾಡುತ್ತಾರೆ. ಈ ಮೂಲಕ ಭಕ್ತರಿಗೆ ಉತ್ತರ ದ್ವಾರದ ಮೂಲಕ ಭಗವಂತನ ದರ್ಶನ ಕಲ್ಪಿಸಿರುತ್ತಾರೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ…

Read More

ಮಂಡ್ಯ: ಜಿಲ್ಲೆಯಲ್ಲಿ ರಾಜ್ಯದಲ್ಲೇ ಬೆಚ್ಚಿ ಬೀಳಿಸೋ ಕೃತ್ಯ ಎನ್ನುವಂತೆ ಬಟ್ಟೆ ತೊಳೆಯೋದಕ್ಕೆ ತೆರಳಿದ್ದಂತ ಮಹಿಳೆಯನ್ನು ಕೊಲೆ ಮಾಡಿರುವಂತ ಘಟನೆ ನಡೆದಿದೆ. ಈ ಕೃತ್ಯದ ಹಿಂದೆ ಚಿನ್ನಕ್ಕಾಗಿ ಮಹಿಳೆ ಕೊಲೆ ಮಾಡಿರುವಂತ ಶಂಕೆ ವ್ಯಕ್ತವಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಪಾಲಹಳ್ಳಿಯ ಮಮತಾ (35) ಮೃತ ಮಹಿಳೆಯಾಗಿದ್ದಾರೆ. ಬಟ್ಟೆ ತೊಳೆಯಲು ವರುಣಾ ನಾಲೆಗೆ ಮಮತಾ ತೆರಳಿದ್ದರು. ಪಾಲಹಳ್ಳಿ ಬಳಿಯ ಕ್ಯೂಟ್ ರೆಸಾರ್ಟ್ ಬಳಿಯ ವರುಣ ನಾಲೆಗೆ ಮಮತಾ ಹೋಗಿದ್ದರು. ಇಂತಹ ಮಮತಾ ಕಾಲುವೆಯಲ್ಲಿ ಕೊಲೆಯಾಗಿ ಮೃತಪಟ್ಟಿರುವ ರೀತಿಯಲ್ಲಿ ಶವ ಪತ್ತೆಯಾಗಿದೆ. ಶವದ ಮೈಯಲ್ಲಿದ್ದ ಚಿನ್ನದ ಸರ, ತಾಳಿಸರ, ಕಿವಿಯಲ್ಲಿದ್ದ ಓಲೆ ಬಲವಂತವಾಗಿ ಕಿತ್ತುಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಬಟ್ಟೆ ತೊಳೆಯಲು ಹೋದವರು ಬರುವುದು ತಡವಾದ್ದರಿಂದ ಪತಿಯಿಂದ ಹುಡುಕಾಟದ ವೇಳೆಯಲ್ಲಿ ಮಮತಾ ಶವವಾಗಿ ಪತ್ತೆಯಾಗಿದ್ದಾರೆ. ಮೇಲ್ನೋಟಕ್ಕೆ ಯಾರೋ ದುಷ್ಕರ್ಮಿಗಳು ಚಿನ್ನಕ್ಕಾಗಿ ಮಹಿಳೆಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಶ್ರೀರಂಗಪಟ್ಟಣ ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ, ತನಿಖೆ ಕೈಗೊಂಡಿದ್ದಾರೆ. ಶ್ರೀರಂಗಪಟ್ಟಣ ಪೊಲೀಸ್…

Read More

ಬೆಂಗಳೂರು: ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕವು ಸ್ವಾವಲಂಬನೆ ಸಾಧಿಸುವತ್ತ ಹೆಜ್ಜೆ ಇಟ್ಟಿದ್ದು, ಶೂನ್ಯ ಅಡಚಣೆಯೊಂದಿಗೆ ಗ್ರಾಹಕರಿಗೆ ವಿದ್ಯುತ್ ಪೂರೈಸುವ ಮೂಲಕ ಉತ್ಪಾದನೆ ಮತ್ತು ಸರಬರಾಜಿನಲ್ಲಿ ಸಮನ್ವಯ ಸಾಧಿಸಬೇಕು ಎಂದು ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಅವರು ಇಂಧನ ಇಲಾಖೆ ಇಂಜಿನಿಯರುಗಳಿಗೆ ಕರೆ ನೀಡಿದ್ದಾರೆ. ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿ ಇಂಜಿನಿಯರುಗಳ ಸಂಘದ ವತಿಯಿಂದ ಸೋಮವಾರ ಸರ್ ಎಂ.ವಿ. ಸಭಾಂಗಣದಲ್ಲಿ ಆಯೋಜಿಸಿದ್ದ ಸಂಘದ ಸುವರ್ಣ ಮಹೋತ್ಸವ ಸಂಸ್ಮರಣಾ ಉಪನ್ಯಾಸ, 2026ರ ತಾಂತ್ರಿಕ ದಿನಚರಿ ಬಿಡುಗಡೆ ಹಾಗೂ ನಿವೃತ್ತ ಇಂಜಿನಿಯರುಗಳ ಸಂಘದ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. “ಕೋವಿಡ್ ಬಳಿಕ ವಿದ್ಯುತ್ ಬೇಡಿಕೆ ಸಾಕಷ್ಟು ಪ್ರಮಾಣದಲ್ಲಿ ಏರಿಕೆಯಾದಾಗ ಅಗತ್ಯ ವಿದ್ಯುತ್ ಪೂರೈಸಲು ನಮ್ಮಲ್ಲಿ ಯೋಜನೆಗಳಿರಲಿಲ್ಲ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಸಭೆ ನಡೆಸಿ ಹೆಚ್ಚುವರಿ ವಿದ್ಯುತ್ ಉತ್ಪಾದನೆಗೆ ತ್ವರಿತ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ಅದರ ಪರಿಣಾಮ ರಾಜ್ಯದಲ್ಲಿ ವಿದ್ಯುತ್…

Read More

ನವದೆಹಲಿ: ಮೇ ತಿಂಗಳಲ್ಲಿ ನಡೆದ ಆಪರೇಷನ್ ಸಿಂಧೂರ್ ನಂತರ, ಭಾರತದ ನಿಖರ ದಾಳಿಗಳು ಪ್ರಮುಖ ಮಿಲಿಟರಿ ನೆಲೆಯ ಮೇಲೆ ಬೀರಿದ ಪರಿಣಾಮವನ್ನು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಬಹಿರಂಗವಾಗಿ ಪಾಕಿಸ್ತಾನ ಮತ್ತೊಮ್ಮೆ ಒಪ್ಪಿಕೊಂಡಿದೆ. ಪಾಕಿಸ್ತಾನದ ವಿದೇಶಾಂಗ ಸಚಿವ ಮತ್ತು ಉಪ ಪ್ರಧಾನಿ ಇಶಾಕ್ ದಾರ್ ಅವರು ಶನಿವಾರ ವರ್ಷಾಂತ್ಯದ ಪತ್ರಿಕಾಗೋಷ್ಠಿಯಲ್ಲಿ, ಭಾರತವು ರಾವಲ್ಪಿಂಡಿಯ ಚಕ್ಲಾಲಾ ಪ್ರದೇಶದಲ್ಲಿರುವ ನೂರ್ ಖಾನ್ ವಾಯುನೆಲೆಯನ್ನು ಗುರಿಯಾಗಿಸಿಕೊಂಡಿದೆ ಎಂದು ದೃಢಪಡಿಸಿದರು. ದಾಳಿಯು ಸೇನಾ ನೆಲೆಗೆ ಮತ್ತು ಅಲ್ಲಿ ನೆಲೆಸಿದ್ದ ಗಾಯಗೊಂಡ ಸಿಬ್ಬಂದಿಗೆ ಹಾನಿಯನ್ನುಂಟುಮಾಡಿದೆ ಎಂದು ದಾರ್ ಒಪ್ಪಿಕೊಂಡರು. ವರದಿಗಾರರನ್ನುದ್ದೇಶಿಸಿ ಮಾತನಾಡಿದ ದಾರ್, ಭಾರತವು ಅಲ್ಪಾವಧಿಯಲ್ಲಿಯೇ ಪಾಕಿಸ್ತಾನದ ಭೂಪ್ರದೇಶದ ಮೇಲೆ ಅನೇಕ ಡ್ರೋನ್ ಆಕ್ರಮಣಗಳನ್ನು ನಡೆಸಿದೆ ಎಂದು ಹೇಳಿದರು, ಇದು ಕಾರ್ಯಾಚರಣೆಯ ಪ್ರಮಾಣವನ್ನು ಒತ್ತಿಹೇಳುತ್ತದೆ. ಅವರು (ಭಾರತ) ಪಾಕಿಸ್ತಾನದ ಕಡೆಗೆ ಡ್ರೋನ್‌ಗಳನ್ನು ಕಳುಹಿಸಿದ್ದಾರೆ. 36 ಗಂಟೆಗಳಲ್ಲಿ, ಕನಿಷ್ಠ 80 ಡ್ರೋನ್‌ಗಳನ್ನು ಕಳುಹಿಸಲಾಗಿದೆ… ನಾವು 80 ಡ್ರೋನ್‌ಗಳಲ್ಲಿ 79 ಡ್ರೋನ್‌ಗಳನ್ನು ತಡೆಹಿಡಿಯಲು ಸಾಧ್ಯವಾಯಿತು, ಮತ್ತು ಕೇವಲ ಒಂದು ಡ್ರೋನ್ ಮಾತ್ರ ಮಿಲಿಟರಿ…

Read More

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆ ಸಂದರ್ಭದಲ್ಲಿ ಸುರಕ್ಷತೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಮಾರ್ಗಸೂಚಿಗಳನ್ನು ಪಾಲಿಸುವಂತೆ ಕರ್ನಾಟಕ IG ಮತ್ತು ಡಿಜಿಪಿ ಖಡಕ್ ಆದೇಶವನ್ನು ಮಾಡಿದ್ದಾರೆ. ಈ ಕುರಿತಂತೆ ಸುತ್ತೋಲೆ ಹೊರಡಿಸಿದ್ದು, ಹೊಸ ವರ್ಷದ ಸಂಭ್ರಮಾಚರಣೆಯು ಮದ್ಯಪಾನದ ಪರಿಣಾಮವಾಗಿ ಜನಸಮೂಹದ ಮನಸ್ಥಿತಿಯು ತೀವ್ರಗೊಳ್ಳುವ ಸಾಧ್ಯತೆ ಇರುತ್ತದೆ. ಮದ್ಯಪಾನವು ಜನರ ವಿವೇಕಶಕ್ತಿಯನ್ನು ದುರ್ಬಲಗೊಳಿಸುತ್ತದೆ ಹಾಗೂ ಸಂಕೋಚತಾ/ಹಿಂಜರಿಕಾ ಮನೋಭಾವವನ್ನು ಮೀರುವಂತೆ ಮಾಡುತ್ತದೆ. ಕೌಂಟ್‌ಡೌನ್‌ಗಳು ಮತ್ತು ಸಂಭ್ರಮದ ಕ್ಷಣಗಳಿಂದ ಉಂಟಾಗುವ ಉಲ್ಲಾಸವು ಜನಸಮೂಹದಲ್ಲಿ ಸಾಮೂಹಿಕ ಪ್ರೇರೇಪಣೆಯನ್ನು ಸೃಷ್ಟಿಸಿ, ದಟ್ಟ ಗುಂಪಿನೊಳಗಿರುವ ಕಾರಣ ಯಾವ ನಡೆಗೂ ಅಪಾಯವಿಲ್ಲವೆಂಬ ತಪ್ಪು ಕಲ್ಪನೆಯನ್ನು ಉಂಟುಮಾಡುತ್ತದೆ ಎಂದಿದ್ದಾರೆ. ವೇದಿಕೆಗಳಲ್ಲಿ ಜನಸ್ತೋಮದ ಹರಿವು ಅಥವಾ ಪಟಾಕಿ ಸಿಡಿಸುವಂತಹ ಪ್ರದರ್ಶನಗಳು ಮುಂತಾದ ಹಲವು ಕಾರಣಗಳಿಂದಾಗಿ ಅಪ್ರಜ್ಞಾತ್ಮಕ ವರ್ತನೆಗಳು ಕಂಡುಬರುತ್ತವೆ. ಜನಸಮೂಹದ ಹರಿವನ್ನು ಒಮ್ಮೆಲೇ ಪ್ರೇರೇಪಿಸಿ ಅಪಾಯಕರ ಅಲೆಗಳಂತೆ ರೂಪುಗೊಳ್ಳಬಹುದಾದಂತಹ ಸಂಗೀತದ ತೀವ್ರತೆಯ ಘಟನಾವಳಿಗಳನ್ನು ಪೊಲೀಸ್ ಅಧಿಕಾರಿಗಳು ಗಮನಿಸಬೇಕಿದೆ. ಪಟಾಕಿ ಸಿಡಿಯುವಲ್ಲಿ ವಿಳಂಬವಾದರೆ ನಿರಾಶೆ ಉಂಟಾಗಿ, ಜನಸಮೂಹದ ಸಂಭ್ರಮವು ತಕ್ಷಣವೇ ಅಸಹನೆ ಮತ್ತು ಕೋಪಕ್ಕೆ ತಿರುಗುವ…

Read More

ಬೆಂಗಳೂರು: ಕನ್ನಡ ಪರ ಹೋರಾಟಗಾರರ ಮೇಲೆ ಇರುವಂತ ಕೇಸ್ ಗಳನ್ನು ವಾಪಾಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವಂತ ಜನರಾಜ್ಯೋತ್ಸವ-2025 ಕಾರ್ಯಕ್ರಮವನ್ನು ಉದ್ಘಾಟಿಸಿದ ಬಳಿಕ ಮಾತನಾಡಿದಂತ ಅವರು, ಕನ್ನಡ ಪರ ಹೋರಾಟಗಾರರ ವಿರುದ್ಧದ ಕೇಸ್ ವಾಪಾಸ್ ಪಡೆಯಲಾಗುತ್ತದೆ. ಕೇಸ್ ವಾಪಾಸ್ ಪಡೆಯುವ ಕುರಿತಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಜೊತೆಗೆ ಚರ್ಚಿಸುತ್ತೇನೆ ಎಂದರು. https://kannadanewsnow.com/kannada/accused-arrested-for-sexually-harassing-a-young-woman-at-a-mall-in-bengaluru/ https://kannadanewsnow.com/kannada/newborn-baby-found-behind-college-in-bengaluru/

Read More

ನವದೆಹಲಿ: ಈ ತಿಂಗಳ ಆರಂಭದಲ್ಲಿ ಬಹ್ರೇನ್‌ನಲ್ಲಿ ನಡೆದ ಖಾಸಗಿ ಪಂದ್ಯಾವಳಿಯಲ್ಲಿ ಭಾರತೀಯ ಜೆರ್ಸಿ ಧರಿಸಿ ಭಾರತ ಸಂಬಂಧಿತ ತಂಡವನ್ನು ಪ್ರತಿನಿಧಿಸುತ್ತಿದ್ದ ಅಂತಾರಾಷ್ಟ್ರೀಯ ಆಟಗಾರ ಉಬೈದುಲ್ಲಾ ರಜಪೂತ್ ಅವರ ಮೇಲೆ ಪಾಕಿಸ್ತಾನ ಕಬಡ್ಡಿ ಫೆಡರೇಶನ್ (ಪಿಕೆಎಫ್) ಅನಿರ್ದಿಷ್ಟಾವಧಿ ನಿಷೇಧ ಹೇರಿದೆ. ಶನಿವಾರ ನಡೆದ ಫೆಡರೇಶನ್‌ನ ತುರ್ತು ಸಭೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿಗಳು ತಿಳಿಸಿವೆ. ಪಿಕೆಎಫ್ ಅಥವಾ ಸಂಬಂಧಿತ ಅಧಿಕಾರಿಗಳಿಂದ ಕಡ್ಡಾಯ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ಪಡೆಯದೆ ರಜಪೂತ್ ವಿದೇಶ ಪ್ರವಾಸ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉಬೈದುಲ್ಲಾ ರಜಪೂತ್ ಅನುಮತಿ ಇಲ್ಲದೆ ಭಾಗವಹಿಸಿದ್ದಲ್ಲದೆ, ಭಾರತಕ್ಕೆ ಸಂಬಂಧಿಸಿದ ತಂಡಕ್ಕಾಗಿ ಆಡಿದ್ದಾರೆ, ಅದರ ಜೆರ್ಸಿಯನ್ನು ಧರಿಸಿದ್ದಾರೆ ಮತ್ತು ಪಂದ್ಯದ ಗೆಲುವಿನ ನಂತರ ಭಾರತದ ಧ್ವಜವನ್ನು ತಮ್ಮ ಹೆಗಲ ಮೇಲೆ ಸುತ್ತಿಕೊಂಡಿದ್ದಾರೆ ಎಂದು ಪಿಕೆಎಫ್ ಕಾರ್ಯದರ್ಶಿ ರಾಣಾ ಸರ್ವರ್ ದೃಢಪಡಿಸಿದ್ದಾರೆ. ಸಮಿತಿಯ ಮುಂದೆ ಶಿಸ್ತು ಕ್ರಮವನ್ನು ಪ್ರಶ್ನಿಸುವ ಹಕ್ಕು ರಜಪೂತ್‌ಗೆ ಇದೆ ಎಂದು ಸರ್ವರ್ ಹೇಳಿದರು. ಜಿಸಿಸಿ ಕಪ್‌ನಲ್ಲಿ ಉಬೈದುಲ್ಲಾ ರಜಪೂತ್ ಭಾರತೀಯ…

Read More

ಬೆಂಗಳೂರು: ನಗರದ ಮಾಲ್ ವೊಂದರಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದಂತ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಡಿಸೆಂಬರ್.25ರಂದು ಕ್ರಿಸ್ ಮಸ್ ಆಚರಣೆ ವೇಳೆ ಯುವತಿಗೆ ಲೈಂಗಿಕ ಕಿರುಕುಳ ನೀಡಲಾಗಿತ್ತು. ಮಾಲ್ ನಲ್ಲಿ ಸ್ನೇಹಿತೆಯರೊಂದಿಗೆ ಕ್ರಿಸ್ ಮಸ್ ಆಚರಿಸುತ್ತಿದ್ದ ವೇಳೆಯಲ್ಲಿ ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ವಿಕೃತಿಯನ್ನು ಮೆರೆದಿದ್ದನು. ಈ ವೇಳೆಯಲ್ಲಿ ಸ್ಥಳದಲ್ಲಿದ್ದ ಮಹದೇವಪುರ ಠಾಣೆಯ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಯುವತಿಗೆ ಲೈಂಗಿಕ ಕಿರುಕುಳ ನೀಡಿದಂತ ಆರೋಪಿಯನ್ನು ವಿಚಾರಣೆ ಮಾಡಿದಾಗ ಗುವಾಹಟಿ ಮೂಲದ ಮನೋಜ್(27) ಎಂಬುದಾಗಿ ತಿಳಿದು ಬಂದಿದೆ. ಡೆಲಿವರಿ ಬಾಯ್ ಆಗಿ ಕೆಲಸವನ್ನು ಆರೋಪಿ ಮನೋಜ್ ಶಾ ಮಾಡುತ್ತಿದ್ದನು ಎಂಬುದಾಗಿ ತಿಳಿದು ಬಂದಿದೆ. ಈ ಸಂಬಂಧ ಮಹದೇವಪುರ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಆರೋಪಿಯನ್ನು ಬಂಧಿಸಿ ಜೈಲಿಗಟ್ಟಲಾಗಿದೆ. https://kannadanewsnow.com/kannada/kodimath-sris-explosive-prediction-regarding-the-change-of-cm-in-the-state/ https://kannadanewsnow.com/kannada/newborn-baby-found-behind-college-in-bengaluru/

Read More

ಹಾವೇರಿ: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕಾಗಿ ಸ್ಪೋಟ ಭವಿಷ್ಯವನ್ನು ಕೋಡಿಮಠದ ಶ್ರೀಗಳು ನುಡಿದಿದ್ದಾರೆ. ಅದು ಏನು ಅಂತ ಮುಂದೆ ಓದಿ.. ಹಾವೇರಿಯಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಕೋಡಿ ಮಠ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಅಂಬಲಿ ಹಳಸಿತು, ಕಂಬಳಿ ಹಾಸೀತು ಅಂತ ಹೇಳಿದ್ದೆ. ಕೈಲಾಸದಲ್ಲಿ ಕೈ ಪೂಜೆ ಮಾಡುತ್ತೆ ಎಂಬುದಾಗಿ ಸಹ ಹೇಳಿದ್ದೆ. ಹಕ್ಕಬುಕ್ಕರು ವಿಜಯನಗರ ಸಾಮ್ರಾಜ್ಯ ಉಳಿಸಿದರು. ಸಂಗೊಳ್ಳಿ ರಾಯಣ್ಣ ಕಿತ್ತೂರು ಸಾಮ್ರಾಜ್ಯ ಉಳಿಸಿದರು. ಕುರುಬ ಸಮಾಜದವರು ಪ್ರಕೃತಿಯಲ್ಲಿ ಭವಿಷ್ಯ ಕಂಡವರು. ಹಾಲು ಮತ ಸಮಾಜ ದೈವಿಬಲವುಳ್ಳ ಪುರಾತನ ಮತ ಎಂದಿದ್ದಾರೆ. ಹಾಲುಮತದಿಂದ ಅಧಿಕಾರ ಬಿಡಿಸಿಕೊಳ್ಳೋದ ಕಷ್ಟ ಎಂಬುದಾಗಿ ಹೇಳುವ ಮೂಲಕ ಸಿಎಂ ಬದಲಾವಣೆ ಕಷ್ಟ ಕಷ್ಟ ಎಂಬುದಾಗಿ ಪ್ರಾಸಂಗಿಕವಾಗಿ ಕೋಡಿಮಠ ಶ್ರೀಗಳು ಭವಿಷ್ಯ ನುಡಿದಿದ್ದಾರೆ. https://kannadanewsnow.com/kannada/attention-kadugolla-community-gane-trust-invites-applications-for-a-consultation-meeting/ https://kannadanewsnow.com/kannada/newborn-baby-found-behind-college-in-bengaluru/

Read More

ಚಿತ್ರದುರ್ಗ: ಜಿಲ್ಲೆಯಲ್ಲಿ ಗಣೆ ಟ್ರಸ್ಟ್ ಮೂಲಕ ಕಾಡುಗೊಲ್ಲ ಸಮುದಾಯದ ಅರಿವು, ಜಾಗೃತಿ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಇದೀಗ ಸಮುದಾಯದ ಯುವಕ-ಯುವತಿಯರಿಗಾಗಿ ಬುಡಕಟ್ಟು ಸಮುದಾಯದ ಸಾಹಿತ್ಯ, ಸಂಸ್ಕೃತಿ, ಅರಿವು ಎಂಬ ವಿಷಯದ ಕುರಿತಂತೆ ವಿಚಾರ ಕಮ್ಮಟವನ್ನು ಜನವರಿ.10, 11ರಂದು ಆಯೋಜಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಗಣೆ ಟ್ರಸ್ಟ್ ನ ಡಾ.ಪ್ರೇಮಾ ಅವರು ಮಾಹಿತಿ ನೀಡಿದ್ದು, ಗಣೇಟ್ರಸ್ಟ್ (ರಿ), ಹಿರಿಯೂರು, ಬುಡಕಟ್ಟು ಮಹಿಳಾ ಜಾಗೃತಿ ಮತ್ತು ಸಬಲೀಕರಣಕ್ಕಾಗಿ ಶ್ರಮಿಸುತ್ತಿರುವ ಒಂದು ಸಂಸ್ಥೆ ಆಗಿದೆ. ಈಗಾಗಲೇ ಕಾಡುಗೊಲ್ಲರ ಹಟ್ಟಿಗಳಲ್ಲಿ ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದ್ದು, ಅಂತಯೇ ಕಾಡುಗಲ್ಲ ಸಮುದಾಯದ ಯುವತಿ ಯುವಕರಿಗಾಗಿ ಬುಡಕಟ್ಟು ಸಮುದಾಯ ಸಾಹಿತ್ಯ ಸಂಸ್ಕೃತಿ ಅರಿವು ಎಂಬುವ ವಿಷಯದಡಿಯಲ್ಲಿ ತುಮಕೂರು ಜಿಲ್ಲೆ, ಶಿರಾ ತಾಲೂಕಿನಲ್ಲಿ ಇದೆ 2026 ಜನವರಿ 10 ಮತ್ತು 11 ಶನಿವಾರ ಮತ್ತು ಭಾನುವಾರ ಈ ಎರಡು ದಿನಗಳಂದು ವಿಚಾರ ಕಮ್ಮಟವನ್ನು (ವರ್ಕ್ ಷಾಪ್)ಏರ್ಪಡಿಸಲಾಗಿದೆ ಎಂದಿದ್ದಾರೆ. ಈ ಕಮ್ಮಟದಲ್ಲಿ ಕಾಡುಗೊಲ್ಲ ಬುಡಕಟ್ಟು ಸಾಹಿತ್ಯ, ಸಂಸ್ಕೃತಿ ಮತ್ತು…

Read More