Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಇತ್ತೀಚಿನ ದಿನಗಳಲ್ಲಿ ವಾಟ್ಸಾಪ್ (WhatsApp) ಬಳಕೆದಾರರನ್ನು ಕಾಡುವ ದೊಡ್ಡ ಸಮಸ್ಯೆ ಎಂದರೆ, ಯಾರೆಂದೋ ಗೊತ್ತಿಲ್ಲದವರು ಅಥವಾ ಪರಿಚಯಸ್ಥರು ನಮ್ಮ ಅನುಮತಿ ಇಲ್ಲದೆಯೇ ಅನಗತ್ಯ ಗ್ರೂಪ್‌ಗಳಿಗೆ ನಮ್ಮನ್ನು ಆಡ್ (Add) ಮಾಡುವುದು. ಇದರಿಂದ ದಿನವಿಡೀ ಬರುವ ನೂರಾರು ನೋಟಿಫಿಕೇಶನ್‌ಗಳು ಮತ್ತು ಅನಗತ್ಯ ಸಂದೇಶಗಳು ಕಿರಿಕಿರಿ ಉಂಟುಮಾಡುತ್ತವೆ. ಆದರೆ, ವಾಟ್ಸಾಪ್‌ನಲ್ಲಿರುವ ಒಂದು ಅದ್ಭುತ ಸೆಟ್ಟಿಂಗ್ ಬಳಸಿ, ನಿಮ್ಮ ಪರ್ಮಿಷನ್ ಇಲ್ಲದೆ ಯಾರೂ ನಿಮ್ಮನ್ನು ಯಾವುದೇ ಗ್ರೂಪ್‌ಗೆ ಸೇರಿಸದಂತೆ “ಫುಲ್ ಲಾಕ್” ಮಾಡಬಹುದು. ಅದನ್ನು ಹೇಗೆ ಮಾಡುವುದು ಎಂಬುದರ ಸರಳ ಸ್ಟೆಪ್ಸ್ ಇಲ್ಲಿದೆ: 🛠️ ಹಂತ-ಹಂತವಾಗಿ ಗ್ರೂಪ್ ಬ್ಲಾಕ್ ಮಾಡುವುದು ಹೇಗೆ? ಮೊದಲಿಗೆ: ನಿಮ್ಮ ಮೊಬೈಲ್‌ನಲ್ಲಿ WhatsApp Open ಮಾಡಿ. ಎರಡನೇ ಹಂತ: ಮೇಲ್ಭಾಗದಲ್ಲಿರುವ ಮೂರು ಚುಕ್ಕೆಗಳನ್ನು (Three Dots) ಒತ್ತಿ Settings → Privacy → Groups ಆಯ್ಕೆಗೆ ಹೋಗಿ. ಮೂರನೇ ಹಂತ: ಅಲ್ಲಿ ನಿಮಗೆ “Who can add me to groups” (ಯಾರು ನನ್ನನ್ನು ಗ್ರೂಪ್‌ಗೆ ಸೇರಿಸಬಹುದು) ಎಂಬ ಆಪ್ಶನ್ ಸಿಗುತ್ತದೆ.…

Read More

ಇಂದಿನ ಡಿಜಿಟಲ್ ಯುಗದಲ್ಲಿ ಸ್ಮಾರ್ಟ್‌ಫೋನ್ ಇಲ್ಲದೆ ಒಂದು ಕ್ಷಣವೂ ಇರಲು ಸಾಧ್ಯವಿಲ್ಲ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಸ್ಮಾರ್ಟ್‌ಫೋನ್ ಹಳೆಯದಾದಂತೆಲ್ಲಾ ಅದರ ಬ್ಯಾಟರಿ ಸಾಮರ್ಥ್ಯ ಕುಸಿಯುತ್ತಾ ಹೋಗುತ್ತದೆ. ದಿನಕ್ಕೆ ಎರಡು-ಮೂರು ಬಾರಿ ಚಾರ್ಜ್ ಮಾಡಬೇಕಾದ ಕಿರಿಕಿರಿ ಎದುರಾಗುತ್ತದೆ. ನೀವು ಕೂಡ ಇಂತಹ ಸಮಸ್ಯೆಯನ್ನು ಎದುರಿಸುತ್ತಿದ್ದರೆ, ಬ್ಯಾಟರಿ ಬದಲಿಸುವ ಯೋಚನೆ ಮಾಡುವ ಮೊದಲು ನಿಮ್ಮ ಫೋನ್‌ನಲ್ಲಿ ಕೆಲವು ಸಣ್ಣ ಸೆಟ್ಟಿಂಗ್‌ಗಳನ್ನು ಬದಲಾಯಿಸಿಕೊಳ್ಳಿ. ಇದರಿಂದ ಬ್ಯಾಟರಿ ಬಾಳಿಕೆಯನ್ನು ಗಮನಾರ್ಹವಾಗಿ ಹೆಚ್ಚಿಸಬಹುದು. ಆ ಸುಲಭ ಟಿಪ್ಸ್‌ಗಳು ಇಲ್ಲಿವೆ: 1. ಸ್ಕ್ರೀನ್ ಸೆಟ್ಟಿಂಗ್ಸ್‌ಗಳ ಮೇಲೆ ಗಮನವಿರಲಿ ಫೋನ್‌ನ ಬ್ಯಾಟರಿ ಅತಿ ಹೆಚ್ಚು ಖಾಲಿಯಾಗುವುದು ಅದರ ಡಿಸ್‌ಪ್ಲೇ ಅಥವಾ ಸ್ಕ್ರೀನ್‌ನಿಂದಲೇ. ಹೀಗಾಗಿ ಸ್ಕ್ರೀನ್ ಸೆಟ್ಟಿಂಗ್ಸ್‌ನಲ್ಲಿ ಈ ಕೆಳಗಿನ ಬದಲಾವಣೆಗಳನ್ನು ಮಾಡಿಕೊಳ್ಳಿ: ಬ್ರೈಟ್‌ನೆಸ್ ಕಡಿಮೆ ಮಾಡಿ: ಯಾವಾಗಲೂ ಫೋನ್ ಬ್ರೈಟ್‌ನೆಸ್ ಅನ್ನು ಗರಿಷ್ಠ ಮಟ್ಟದಲ್ಲಿ ಇಡಬೇಡಿ. ಅಗತ್ಯಕ್ಕೆ ತಕ್ಕಂತೆ ಕಡಿಮೆ ಮಾಡಿ ಅಥವಾ ‘ಆಟೋ ಬ್ರೈಟ್‌ನೆಸ್’ (Auto Brightness) ಮೋಡ್ ಆನ್ ಮಾಡಿ. ಸ್ಕ್ರೀನ್ ಟೈಮ್‌ಔಟ್ ಅವಧಿ ತಗ್ಗಿಸಿ: ನೀವು…

Read More

ಚಿತ್ರದುರ್ಗ: ಜಿಲ್ಲೆಯ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ ಹಾಗೂ ನೇಕಾರಿಕೆ ಆಧಾರಿತ ಉಪ ಕಸುಬುಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಮಿಕರಿಗೆ ಕೈಮಗ್ಗ ಮತ್ತು ಜವಳಿ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. 2026-27ನೇ ಸಾಲಿನ ‘ನೇಕಾರ ಸಮ್ಮಾನ್ ಯೋಜನೆ’ಯಡಿ ವಾರ್ಷಿಕ ₹5,000 ಆರ್ಥಿಕ ಸಹಾಯಧನ ಪಡೆಯಲು ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಯಾರೆಲ್ಲಾ ಈ ಯೋಜನೆಗೆ ಅರ್ಹರು? ಹಳೇ ಫಲಾನುಭವಿಗಳು: ಕಳೆದ 2025-26ನೇ ಸಾಲಿನಲ್ಲಿ ಈಗಾಗಲೇ ಈ ಯೋಜನೆಯ ಸೌಲಭ್ಯ ಪಡೆದಿರುವ ನೇಕಾರರು ಪ್ರಸ್ತುತ ವರ್ಷವೂ ಅರ್ಹರಾಗಿರುತ್ತಾರೆ. ಆದರೆ, ಅವರಲ್ಲಿ ಮೃತರಾದವರು, ವೃತ್ತಿಯನ್ನು ಕೈಬಿಟ್ಟವರು ಮತ್ತು ಬೇರೆ ಪ್ರದೇಶಗಳಿಗೆ ವಲಸೆ ಹೋದವರನ್ನು ಪಟ್ಟಿಯಿಂದ ಹೊರಗಿಡಲಾಗುತ್ತದೆ. ಹೊಸ ನೇಕಾರರು: ಕಳೆದ ವರ್ಷ ಈ ಯೋಜನೆಗೆ ನೋಂದಾಯಿಸಿಕೊಳ್ಳಲು ಸಾಧ್ಯವಾಗದ ಅರ್ಹ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ ಈ ಬಾರಿ ಹೊಸದಾಗಿ ಅರ್ಜಿ ಸಲ್ಲಿಸಲು ಸುವರ್ಣಾವಕಾಶ ನೀಡಲಾಗಿದೆ. ಕಡ್ಡಾಯ ನಿಯಮ: ಸೌಲಭ್ಯ ಪಡೆಯಬಯಸುವ ನೇಕಾರರು ಪ್ರಸ್ತುತ ನೇಕಾರಿಕೆ ವೃತ್ತಿಯಲ್ಲೇ ಮುಂದುವರಿದಿರಬೇಕು ಹಾಗೂ ಸರ್ಕಾರದ ಪ್ರಧಾನ ಮಂತ್ರಿ ಜೀವನ ಜ್ಯೋತಿ…

Read More

ಹಲಸಿನ ಹಣ್ಣು ತನ್ನ ವಿಶಿಷ್ಟ ರುಚಿ ಮತ್ತು ಪರಿಮಳಕ್ಕೆ ಜಗತ್ತಿನಾದ್ಯಂತ ಪ್ರಸಿದ್ಧವಾಗಿದೆ. ಆದರೆ ಸಾಮಾನ್ಯವಾಗಿ ನಾವು ಹಲಸಿನ ಹಣ್ಣನ್ನು ತಿಂದ ನಂತರ ಅದರ ಬೀಜಗಳನ್ನು ಕಸಕ್ಕೆ ಎಸೆದುಬಿಡುತ್ತೇವೆ. ಆದರೆ, ಹಲಸಿನ ಬೀಜಗಳು (Jackfruit Seeds) ಕೇವಲ ತ್ಯಾಜ್ಯವಲ್ಲ, ಅವು ಆರೋಗ್ಯದ ದೃಷ್ಟಿಯಿಂದ ಪೋಷಕಾಂಶಗಳ ಮಹಾನ್ ಗಣಿಯಾಗಿವೆ. ಇವುಗಳಲ್ಲಿ ಪ್ರೊಟೀನ್, ಕಾರ್ಬೋಹೈಡ್ರೇಟ್‌ಗಳು, ನಾರು ಪದಾರ್ಥ (ಫೈಬರ್) ಮತ್ತು ಪ್ರಮುಖ ಜೀವಸತ್ವಗಳು ಸಮೃದ್ಧವಾಗಿವೆ. ಸಂಶೋಧನೆಗಳ ಪ್ರಕಾರ, ಹಲಸಿನ ಬೀಜಗಳನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹಕ್ಕೆ ಸಿಗುವ 7 ಪ್ರಮುಖ ಆರೋಗ್ಯ ಪ್ರಯೋಜನಗಳು ಇಲ್ಲಿವೆ: 1. ರಕ್ತಹೀನತೆ (Anaemia) ನಿವಾರಣೆ ಹಲಸಿನ ಬೀಜಗಳಲ್ಲಿ ಕಬ್ಬಿಣದ (Iron) ಅಂಶ ಹೇರಳವಾಗಿದೆ. ಇದು ದೇಹದಲ್ಲಿ ಹಿಮೋಗ್ಲೋಬಿನ್ ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ಕೆಂಪು ರಕ್ತಕಣಗಳ ಸಂಖ್ಯೆಯನ್ನು ವೃದ್ಧಿಸಲು ಸಹಾಯ ಮಾಡುತ್ತದೆ. ನಿಯಮಿತವಾಗಿ ಇದರ ಸೇವನೆಯಿಂದ ರಕ್ತಹೀನತೆ ದೂರವಾಗುತ್ತದೆ, ರಕ್ತ ಪರಿಚಲನೆ ಸುಧಾರಿಸುತ್ತದೆ ಮತ್ತು ದೇಹದ ಆಯಾಸ ಕಡಿಮೆಯಾಗುತ್ತದೆ. 2. ಜೀರ್ಣಕ್ರಿಯೆ ಮತ್ತು ಕರಳಿನ ಆರೋಗ್ಯ ವೃದ್ಧಿ ಈ ಬೀಜಗಳಲ್ಲಿ ಆಹಾರದ ನಾರಿನಂಶ…

Read More

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಗೆ ಇದೀಗ ದೊಡ್ಡ ಮಟ್ಟದ ಸರ್ಜರಿ ಮಾಡಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಉಚಿತ ಗ್ಯಾರಂಟಿಗಳ ಹಣ ಅನರ್ಹರ ಪಾಲಾಗುತ್ತಿರುವುದನ್ನು ತಡೆಯಲು ಮತ್ತು ಯೋಜನೆಯನ್ನು ಸಂಪೂರ್ಣವಾಗಿ ಪರಿಷ್ಕರಿಸಲು ಸರ್ಕಾರ ಕಠಿಣ ಹೆಜ್ಜೆ ಇಟ್ಟಿದೆ. ರಾಜ್ಯದಲ್ಲಿ ಸದ್ಯ 1.24 ಕೋಟಿ ಗೃಹಲಕ್ಷ್ಮಿ ಫಲಾನುಭವಿಗಳಿದ್ದು, ಇದರಲ್ಲಿ ನಡೆಯುತ್ತಿರುವ ಹಣದ ದುರುಪಯೋಗವನ್ನು ತಡೆಗಟ್ಟುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ. ಇತ್ತೀಚಿನ ತನಿಖೆಗಳಲ್ಲಿ ಸತ್ತವರ ಹೆಸರಿಗೂ ದುಡ್ಡು ಹೋಗುತ್ತಿರುವುದು, ಹೆಸರೇ ಇಲ್ಲದ ಬ್ಯಾಂಕ್‌ಗಳಿಗೆ ಹಣ ಪಾವತಿಯಾಗಿರುವುದು ಹಾಗೂ ಕರ್ನಾಟಕದಲ್ಲೇ ಇಲ್ಲದ ಹೊರರಾಜ್ಯದ ಬ್ಯಾಂಕ್‌ ಖಾತೆಗಳಿಗೂ ಗೃಹಲಕ್ಷ್ಮಿ ಹಣ ಜಮೆಯಾಗಿರುವ ಆಘಾತಕಾರಿ ಸತ್ಯಗಳು ಬೆಳಕಿಗೆ ಬಂದಿವೆ. 68 ಸಾವಿರಕ್ಕೂ ಹೆಚ್ಚು ಮೃತ ಮಹಿಳೆಯರ ಖಾತೆಗೆ ಹಣ ಜಮೆ! ಗೃಹಲಕ್ಷ್ಮಿ ಯೋಜನೆಯಡಿ ಜರಡಿ ಹಿಡಿಯಲು ಸರ್ಕಾರ ಮುಂದಾದಾಗ ಸಿಕ್ಕಿರುವ ಅಂಕಿ-ಅಂಶಗಳು ನಿಜಕ್ಕೂ ಬೆಚ್ಚಿಬೀಳಿಸುವಂತಿವೆ. ಮೃತ ಫಲಾನುಭವಿಗಳು: ಬರೋಬ್ಬರಿ 68,776 ಮೃತ ಮಹಿಳೆಯರ ಬ್ಯಾಂಕ್ ಅಕೌಂಟ್‌ಗಳಿಗೆ ಇಂದಿಗೂ ಗೃಹಲಕ್ಷ್ಮಿ ಯೋಜನೆಯ ಹಣ ಪಾವತಿಯಾಗುತ್ತಿದೆ.…

Read More

ಬೆಂಗಳೂರು : “ಆದಾಯ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬಲು, ನಮ್ಮ ಸರ್ಕಾರ ಪ್ರೀತಿಯಿಂದ ಕೊಟ್ಟಿರುವ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. ವೈದೇಹಿ ಆಸ್ಪತ್ರೆ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುತ್ತಿದೆ ಎಂದು ವಿರೋಧ ಪಕ್ಷಗಳು ಪ್ರಚಾರ ಮಾಡುತ್ತಿವೆಯಲ್ಲ ಎಂದು ಕೇಳಿದಾಗ, “ಅವರುಗಳಿರುವುದೇ ಟೀಕೆ ಮಾಡಲು. ನಾವು ಏನೇ ಒಳ್ಳೆಯದು ಮಾಡಲು ಮುಂದಾದರೂ ಅದಕ್ಕೆ ಅಡ್ಡಗಾಲು ಹಾಕುವುದಕ್ಕೆ ವಿರೋಧ ಪಕ್ಷಗಳಿರುವುದು. ಅವರ ಕೈಯಲ್ಲಿ ಆಗದಿದ್ದ ಕೆಲಸ ನಾವು ಮಾಡುತ್ತಿದ್ದೇವೆ. ಗ್ಯಾರಂಟಿ ಯೋಜನೆ ಅರ್ಹ ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳಲು ಸರ್ಕಾರ ಮುಂದಾಗಿದೆ. ಆರಂಭದಲ್ಲಿ ಕೆಲವು ಫಲಾನುಭವಿಗಳು ಬೇರೆಯವರ ದೂರವಾಣಿ ಸಂಖ್ಯೆ ಹಾಗೂ ಇತರೆ ಮಾಹಿತಿ ನೀಡಿದ್ದಾರೆ. ಬೇರೆಯವರ ಖಾತೆಗೆ ಹಣ ಹೋಗುತ್ತಿರುವ ಬಗ್ಗೆ ನಮಗೆ ಮಾಹಿತಿ ಇದೆ. ಫಲಾನುಭವಿಗಳ ಖಾತೆಗೆ ಹಣ ಹೋಗುವಂತೆ ಮಾಡುವುದು ಸರ್ಕಾರದ ಉದ್ದೇಶ” ಎಂದು ತಿಳಿಸಿದರು. “ಸರ್ಕಾರವು ಕರ್ನಾಟಕದವರಿಗೆ ಈ…

Read More

ಶಿವಮೊಗ್ಗ: ಇಡೀ ದೇಶದ ಸಾರ್ವಜನಿಕ ಉದ್ದಿಮೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡುವ ಮೂಲಕ ಕೇಂದ್ರ ಸರ್ಕಾರವು ಬಂಡವಾಳಶಾಹಿಗಳ ಏಜೆಂಟ್ ತರಹ ವರ್ತಿಸುತ್ತಿದೆ. ಇದರ ಮುಂದುವರಿದ ಭಾಗವಾಗಿ ರಾಜ್ಯದ ವಿದ್ಯುತ್ ವಿತರಣಾ ಸಂಸ್ಥೆಗಳನ್ನು ಖಾಸಗೀಕರಣ ಮಾಡಲು ಹೊರಟಿರುವುದರ ವಿರುದ್ಧ ಸಾರ್ವಜನಿಕರು ತೀವ್ರವಾಗಿ ಆಕ್ಷೇಪಣೆ ಸಲ್ಲಿಸಬೇಕು ಎಂದು ಮಲೆನಾಡು ರೈತರ ಹೋರಾಟ ಸಮಿತಿಯ ಪ್ರಮುಖರು ಹಾಗೂ ಸಾಮಾಜಿಕ ಹೋರಾಟಗಾರರಾದ ತೀ ನಾ ಶ್ರೀನಿವಾಸ್ ಕರೆ ನೀಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ನಿವೃತ್ತ ನೌಕರರ ಸಂಘದ ಪ್ರಮುಖರ ಜೊತೆಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು. ​ರಾಷ್ಟ್ರೀಕರಣದ ಇತಿಹಾಸ ಮತ್ತು ಇಂದಿನ ಸ್ಥಿತಿ ​ಹಿಂದೆ ದೇಶದಲ್ಲಿ ನೆಹರೂ ಹಾಗೂ ಇಂದಿರಾ ಗಾಂಧಿಯವರು ಆಡಳಿತ ನಡೆಸುತ್ತಿದ್ದ ಅವಧಿಯಲ್ಲಿ, ಶ್ರೀಮಂತರ ಮತ್ತು ಖಾಸಗಿಯವರ ಒಡೆತನದಲ್ಲಿದ್ದ ದೊಡ್ಡ ದೊಡ್ಡ ಉದ್ದಿಮೆಗಳನ್ನು ರಾಷ್ಟ್ರೀಕರಣ ಮಾಡಲಾಗಿತ್ತು. ಸಾಮಾನ್ಯ ಜನರಿಗೆ ಉತ್ತಮ ಸೇವೆ ಸಿಗಲಿ ಎಂಬ ಉದ್ದೇಶದಿಂದ ಇಂದಿರಾ ಗಾಂಧಿಯವರು ರಾತ್ರೋರಾತ್ರಿ ಬ್ಯಾಂಕುಗಳನ್ನು ರಾಷ್ಟ್ರೀಕರಣಗೊಳಿಸಿ, ದೇಶದ ಕಟ್ಟಕಡೆಯ…

Read More

ಮಂಗಳೂರು : “ಸರ್, ನಮಗೆ ಬರುತ್ತಿರುವ ಅಲ್ಪ ಸಂಬಳದಲ್ಲಿ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ. ಕಳೆದ 15 ವರ್ಷಗಳಿಂದ ಕನಿಷ್ಠ ವೇತನದಲ್ಲೇ ದುಡಿಯುತ್ತಿದ್ದೇವೆ. ದಯವಿಟ್ಟು ನಮ್ಮನ್ನು ಕಾಯಂ ಮಾಡಿ ಹಾಗೂ ವೇತನ ಹೆಚ್ಚಳ ಮಾಡಿ,” ಎಂದು ಗುತ್ತಿಗೆ ಆಧಾರಿತ ಸ್ಟಾಫ್ ನರ್ಸ್ ಒಬ್ಬರು ಆರೋಗ್ಯ ಸಚಿವ ಯು.ಟಿ ಖಾದರ್ ಎದುರು ಕಣ್ಣೀರು ಹಾಕಿದ ಹೃದಯವಿದ್ರಾವಕ ಘಟನೆ ನಡೆದಿದೆ. ಆದರೇ ಸಚಿವರು ಎನ್ ಹೆಚ್ ಎಂ ಗುತ್ತಿಗೆ ನೌಕರರನ್ನು ಖಾಯಂ ಅಸಾಧ್ಯ ಎಂಬುದಾಗಿ ಇದೇ ಸಂದರ್ಭದಲ್ಲಿ ಸ್ಪಷ್ಟ ಪಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ ಖಾದರ್ ಅವರ ಎದುರು ರಾಷ್ಟ್ರೀಯ ಆರೋಗ್ಯ ಅಭಿಯಾನ (NHM) ಅಡಿಯಲ್ಲಿ ಕೆಲಸ ಮಾಡುತ್ತಿರುವ ಸ್ಟಾಫ್ ನರ್ಸ್ ಒಬ್ಬರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ನರ್ಸ್ ಅಳಲು – “ನಮಗೂ ವಯಸ್ಸಾಗುತ್ತಿದೆ”: ನಾವು ಕಳೆದ 15 ವರ್ಷಗಳಿಂದ ಕಡಿಮೆ ಸಂಬಳಕ್ಕೆ ದುಡಿಯುತ್ತಿದ್ದೇವೆ. ಕೋವಿಡ್‌ನಂತಹ ಕಠಿಣ ಸಮಯದಲ್ಲೂ ಪ್ರಾಣದ…

Read More

ನವದೆಹಲಿ: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಜೂನ್ 21 ರಂದು ನಡೆಯಲಿರುವ ನೀಟ್ ಯುಜಿ (NEET UG 2026) ಮರುಪರೀಕ್ಷೆಯ ಅಡ್ಮಿಟ್ ಕಾರ್ಡ್‌ಗಳನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಇದರೊಂದಿಗೆ, ರದ್ದಾಗಿದ್ದ ಮೇ 3ರ ಪರೀಕ್ಷೆಯ ಶುಲ್ಕವನ್ನು ಹಿಂಪಡೆಯಲು ಬಯಸುವ ಅಭ್ಯರ್ಥಿಗಳಿಗೆ ಬ್ಯಾಂಕ್ ಖಾತೆ ವಿವರಗಳನ್ನು ಸರಿಪಡಿಸಲು/ದೃಢೀಕರಿಸಲು ಎನ್‌ಟಿಎ ಹೊಸ ವಿಂಡೋ ಮುಕ್ತಗೊಳಿಸಿದೆ. ಹೊಸ ಮಾರ್ಗಸೂಚಿ ಪ್ರಕಟ; ಧರ್ಮೇಂದ್ರ ಪ್ರಧಾನ್ ಕರೆ: ಮರುಪರೀಕ್ಷೆಗೂ ಮುನ್ನ ಎನ್‌ಟಿಎ ಹೊಸ ಸುರಕ್ಷತಾ ಕ್ರಮಗಳು ಮತ್ತು ಕಠಿಣ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಈ ನಡುವೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ್ದು, “ಯಾವುದೇ ಆತಂಕಕ್ಕೆ ಒಳಗಾಗದೆ, ಆತ್ಮವಿಶ್ವಾಸದಿಂದ ಇರಿ ಮತ್ತು ನಿಮ್ಮ ಅಧ್ಯಯನದ ಕಡೆಗೆ ಗಮನ ಹರಿಸಿ” ಎಂದು ಮನವಿ ಮಾಡಿದ್ದಾರೆ. https://twitter.com/NTA_Exams/status/2066151568198766823 ವಿವಾದಕ್ಕೆ ಕಾರಣವಾಗಿದ್ದ ಪ್ರಶ್ನೆ ಪತ್ರಿಕೆ ಸೋರಿಕೆ: ವೈದ್ಯಕೀಯ ಸಂಸ್ಥೆಗಳ ಪದವಿಪೂರ್ವ ಕೋರ್ಸ್‌ಗಳ ಪ್ರವೇಶಕ್ಕಾಗಿ ದೇಶಾದ್ಯಂತ ಜಂಟಿಯಾಗಿ ನಡೆಸಲಾಗುವ ಈ ನೀಟ್ ಪರೀಕ್ಷೆಯು ಆರಂಭದಿಂದಲೂ ತೀವ್ರ ವಿವಾದಕ್ಕೆ ಸಿಲುಕಿದೆ. ಮೇ…

Read More

ಶಿವಮೊಗ್ಗ: ಕೃಷಿ ವಲಯದಲ್ಲಿ ಯಂತ್ರೋಪಕರಣಗಳ ಬಳಕೆ ಹೆಚ್ಚಾಗುತ್ತಿದ್ದರೂ, ಇಂದಿಗೂ ಎತ್ತುಗಳನ್ನು ಕಟ್ಟಿ ಸಾಂಪ್ರದಾಯಿಕ ಶೈಲಿಯಲ್ಲಿ ನೇಗಿಲು ಹೊಡೆಯುತ್ತಾ, ಒಕ್ಕಲುತನದ ಪ್ರತಿಯೊಂದು ಕೆಲಸವನ್ನೂ ತಾವೇ ಮಾಡುವ ಮೂಲಕ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರ ಸ್ವಗ್ರಾಮದ ಶಾರದಮ್ಮ ಎಂಬ ಮಹಿಳೆ ಎಲ್ಲರಿಗೂ ಮಾದರಿಯಾಗಿದ್ದಾರೆ. ಆದರೇ ಮಳೆಯಾಶ್ರಿತ ಜಮೀನಿಗೆ ಸರ್ಕಾರದ ಬೋರ್ ವೆಲ್ ಸೌಲಭ್ಯ ಸಿಗದೇ ಇರೋದು ದುರಂತವೇ ಸರಿ. ಹೀಗಾಗಿ ನಮಗೊಂದು ಗಂಗಾ ಕಲ್ಯಾಣ ಬೋರ್ ವೆಲ್ ಕೊಡಿಸಿ ಎಂಬುದಾಗಿ ಕ್ಷೇತ್ರದ ಜನಪ್ರತಿನಿಧಿಯನ್ನು ಭಾವುಕವಾಗಿ ಮನವಿ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕಾಗೋಡು ಗ್ರಾಮದ ರೈತ ಮಹಿಳೆ ಶಾರದಮ್ಮ ಪ್ರತಿದಿನ ಎರಡು ಕಿಲೋಮೀಟರ್ ನಡೆದುಕೊಂಡೇ ಬಂದು ಕೃಷಿ ಕಾಯಕದಲ್ಲಿ ತೊಡಗಿಕೊಳ್ಳುವ ಅವರು, ನೀರಾವರಿ ಸೌಲಭ್ಯವಿಲ್ಲದೆ ಎದುರಿಸುತ್ತಿರುವ ಕಷ್ಟಗಳನ್ನು ಈ ವಿಡಿಯೋದಲ್ಲಿ ಬಿಚ್ಚಿಟ್ಟಿದ್ದಾರೆ. 2 ಎಕರೆ ಜಮೀನಿಗೆ ಇಲ್ಲ ನೀರಾವರಿ ಸೌಲಭ್ಯ: ಶಾರದಮ್ಮ ಅವರಿಗೆ ಒಟ್ಟು ಎರಡು ಎಕರೆ ಕೃಷಿ ಭೂಮಿ ಇದೆ. ಆದರೆ, ಈ ಜಮೀನಿಗೆ ಯಾವುದೇ…

Read More