Author: kannadanewsnow09

ಬೆಂಗಳೂರು: ಕಲಾರಸಿಕರಿಗೆ ರಸದೌತಣ ಬಡಿಸಲು ಪರಮ್ ಫೌಂಡೇಶನ್ ಸಜ್ಜಾಗಿದೆ. ಇದೇ ಡಿಸೆಂಬರ್ 18ರಂದು ಬೆಂಗಳೂರಿನ ಚೌಡಯ್ಯ ಮೆಮೋರಿಯಲ್‌ ಹಾಲ್‌ನಲ್ಲಿ ಸಂಜೆ 6.30ಕ್ಕೆ ಅಂತಾರಾಷ್ಟ್ರೀಯ ನೃತ್ಯ ಪ್ರದರ್ಶನ ಕಿಂಟ್ಸುಗಿ ನಡೆಯಲಿದೆ. ʻʻಕಿಂಟ್ಸುಗಿ” (Kintsugi) ಜಪಾನಿನ ಒಂದು ವಿಶೇಷ ಕಲೆಯಾಗಿದ್ದು, ಬಿರುಕುಗೊಂಡ ಪಿಂಗಾಣಿಗೆ ಬಂಗಾರದ ಬೆಸುಗೆ ಹಾಕಿ ಆ ಮೂಲಕ ನ್ಯೂನತೆ ಬದಲು ಸೌಂದರ್ಯದ ಭಾಗವಾಗಿ ಕಾಣುವಂತೆ ಮಾಡಲಾಗುತ್ತದೆ. ಅಂದರೆ ಒಡೆದ ಪಿಂಗಾಣಿಗೆ ಚಿನ್ನದ ಪುಡಿಯ ಮಿಶ್ರಣದಿಂದ ಕೂಡಿಸಿ ಚೆಂದ ಗಾಣಿಸುವ ಕಲೆಗೆ ‘ಕಿಂಟ್ಸುಗಿ’ ಎಂದು ಕರೆಯಲಾಗುತ್ತದೆ. ಹೀಗೆ ಮಿಶ್ರಣ ಮಾಡುವುದರಿಂದ ಆ ಪಿಂಗಾಣಿಯು ಸುಂದರವಾಗಿ ಕಾಣುವುದಲ್ಲದೆ, ಅದು ಮತ್ತಷ್ಟು ಮೌಲ್ಯವರ್ಧಿತವಾಗಿ ಕಾಣಿಸುತ್ತದೆ. ಜೊತೆಗೆ ಇನ್ನಷ್ಟು ಬಲಶಾಲಿಯೂ ಆಗುತ್ತದೆ ಎಂಬ ನಂಬಿಕೆಯನ್ನು ಜಪಾನ್‌ನಲ್ಲಿ ಹೊಂದಲಾಗಿದೆ. ಇದರ ಮೂಲ ಆಶಯವನ್ನು ಇಟ್ಟುಕೊಂಡು ನೃತ್ಯದ ರೂಪ ಪಡೆದಿರುವುದೇ ಈ ‘ಕಿಂಟ್ಸುಗಿ’. ಇಲ್ಲಿ ನೃತ್ಯದ ಮೂಲಕ ಒಡೆದ ಮನಸುಗಳನ್ನು ಬೆಸೆಯುವ ಕಾರ್ಯವನ್ನು ಮಾಡಲಾಗುತ್ತದೆ ಎಂಬ ಆಶಯವನ್ನೇ ಈ ‘ಕಿಂಟ್ಸುಗಿ’ ಡಾನ್ಸ್‌ ಹೊಂದಿದೆ. ಈ ಕಿಂಟ್ಸುಗಿ ತತ್ವವನ್ನು ಬಳಸಿಕೊಂಡು ಪರಮ್‌…

Read More

ಶಿವಮೊಗ್ಗ : ಸಾಗರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಸುವರ್ಣ ಮಹೋತ್ಸವ ಶಾಶ್ವತ ನೆನಪಿನ ಕಾರ್ಯಕ್ರಮವಾಗಬೇಕು. ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ ಹಳೇಯ ವಿದ್ಯಾರ್ಥಿಗಳು ಸಹಸ್ರ ಸಂಖ್ಯೆಯಲ್ಲಿ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಕಾಲೇಜು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಬಿ.ಎ.ಇಂದೂಧರ ಬೇಸೂರು ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ಸುವರ್ಣ ಮಹೋತ್ಸವ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದಂತ ಅವರು, ಕಾಲೇಜು ಒಂದರ ಸುವರ್ಣ ಮಹೋತ್ಸವ ಎಂದರೆ ಅಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳಿಗೆ ದೊಡ್ಡ ಹಬ್ಬ ಇದ್ದಂತೆ. ಹಬ್ಬದ ರೀತಿಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಪೂರ್ಣ ನೆಹರೂ ಮೈದಾನವನ್ನು ಸುವರ್ಣ ಸಂಭ್ರಮಕ್ಕಾಗಿ ಸಜ್ಜುಗೊಳಿಸಲಾಗುತ್ತಿದೆ. ಸುಮಾರು ೫೩ ವರ್ಷದಲ್ಲಿ ೬೦ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಓದಿ ಉನ್ನತ ಸ್ಥಾನದಲ್ಲಿದ್ದಾರೆ. ಅವರನ್ನು ಎದುರುಗೊಳ್ಳುವುದೇ ಒಂದು ಸಂಭ್ರಮ ಎಂದರು. ಇದೇ ಡಿಸೆಂಬರ್ 23 ಮತ್ತು 24೪ರಂದು ಎರಡು ದಿನ ಸುವರ್ಣ ಮಹೋತ್ಸವ ನಡೆಯಲಿದೆ. ಡಿ.23ಕ್ಕೆ 95 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ…

Read More

ಶಿವಮೊಗ್ಗ : ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಮಂಗನ ಕಾಯಿಲೆಗೆ ಸಂಬಂಧಿಸಿದಂತೆ ಈತನಕ  274 ಸ್ಯಾಂಪಲ್‌ಗಳನ್ನು ಪರೀಕ್ಷೆ ಮಾಡಿದ್ದು ಈತನಕ ಯಾವುದೇ ಸೋಂಕು ಕಂಡು ಬಂದಿಲ್ಲ. ಹೊಸನಗರ ತಾಲ್ಲೂಕಿನಲ್ಲಿ 169 ಸ್ಯಾಂಪಲ್‌ಗಳನ್ನು ಪರೀಕ್ಷೆ ಮಡಿದ್ದು 8 ಪ್ರಕರಣ ಪತ್ತೆಯಾಗಿದೆ ಎಂಬುದಾಗಿ ಸಾಗರ ಉಪವಿಭಾಗಾಧಿಕಾರಿ ವಿರೇಶ್ ಕುಮಾರ್ ತಿಳಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಕೆ.ಎಫ್.ಡಿ. ಮತ್ತು ಪಲ್ಸ್ ಪೊಲೀಯೋ ಕುರಿತು ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಾಗರ ತಾಲ್ಲೂಕಿನಲ್ಲಿ ಕೆಎಫ್‌ಡಿ ಸಂಬಂಧ ಕಟ್ಟೆಚ್ಚರ ವಹಿಸಲಾಗಿದೆ. ಹೊಸನಗರ ತಾಲ್ಲೂಕಿನ ಸೋನಲೆ ವ್ಯಾಪ್ತಿಯಲ್ಲಿ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ಈ ಪ್ರಾಥಮಿಕ ಕೇಂದ್ರವ್ಯಾಪ್ತಿಯನ್ನು ಹಾಟ್‌ಸ್ಪಾಟ್ ಎಂದು ಗುರುತಿಸಲಾಗಿದೆ. ಈ ಭಾಗದಲ್ಲಿ ಇನ್ನಷ್ಟು ಜನರ ರಕ್ತಮಾದರಿ ಸಂಗ್ರಹಿಸಿ ಪರಿಶೀಲನೆ ನಡೆಸಲಾಗುತ್ತಿದೆ ಎಂದರು. ಸಾಗರ ಉಪವಿಭಾಗೀಯ ಅಸ್ಪತ್ರೆಯಲ್ಲಿ ಮಂಗನ ಕಾಯಿಲೆಗಾಗಿ 10 ಬೆಡ್‌ನ ವಿಶೇಷ ಘಟಕ ಪ್ರಾರಂಭಿಸಲಾಗಿದೆ. ಕೆಲವು ಪ್ರಮುಖ ಸ್ಥಳಗಳಲ್ಲಿ ಅಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ನವೆಂಬರ್‌ನಿಂದ…

Read More

ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಡಿಸೆಂಬರ್ 14 ರಂದು ಧರ್ಮಶಾಲಾದಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟಿ20ಐ ಪಂದ್ಯಕ್ಕೆ ಅನಾರೋಗ್ಯದ ಕಾರಣದಿಂದ ಗೈರುಹಾಜರಾಗಿದ್ದ ಭಾರತದ ಸ್ಟಾರ್ ಆಲ್‌ರೌಂಡರ್ ಅಕ್ಷರ್ ಪಟೇಲ್ ಅವರನ್ನು ನಡೆಯುತ್ತಿರುವ ಸರಣಿಯಿಂದ ಹೊರಗುಳಿದಿದ್ದಾರೆ. ಡಿಸೆಂಬರ್ 17 ರಂದು ಲಕ್ನೋದಲ್ಲಿ ಮತ್ತು ಡಿಸೆಂಬರ್ 19 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಉಳಿದ ಎರಡು ಪಂದ್ಯಗಳಿಗೆ ಅವರು ಲಭ್ಯವಿಲ್ಲದಿರುವ ಎಂಬುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಇಂದು ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ದೃಢಪಟಿಸಿದೆ. https://twitter.com/BCCI/status/2000568936820289945 ಅನಾರೋಗ್ಯದ ಕಾರಣ ದಕ್ಷಿಣ ಆಫ್ರಿಕಾ ವಿರುದ್ಧದ ಉಳಿದ ಎರಡು ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಟಿ20ಐಗಳಿಂದ ಟೀಮ್ ಇಂಡಿಯಾ ಆಲ್‌ರೌಂಡರ್ ಅಕ್ಷರ್ ಪಟೇಲ್ ಅವರನ್ನು ಹೊರಗಿಡಲಾಗಿದೆ. ಆದಾಗ್ಯೂ, ಅವರು ಲಕ್ನೋದಲ್ಲಿ ತಂಡದಲ್ಲಿದ್ದಾರೆ, ಅಲ್ಲಿ ಅವರನ್ನು ಮತ್ತಷ್ಟು ವೈದ್ಯಕೀಯವಾಗಿ ನಿರ್ಣಯಿಸಲಾಗುತ್ತದೆ ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ. ಅಕ್ಷರ್ ಅವರ ಬದಲಿಯಾಗಿ, ಬಂಗಾಳದ ಸ್ಪಿನ್-ಬೌಲಿಂಗ್ ಆಲ್‌ರೌಂಡರ್ ಶಹಬಾಜ್ ಅಹ್ಮದ್ ಅವರನ್ನು ಭಾರತದ ತಂಡಕ್ಕೆ ಸೇರಿಸಲಾಗಿದೆ. ಪುರುಷರ…

Read More

ಶ್ರೀನಗರ: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಕಸೂರ್ ಜಿಲ್ಲೆಯ ಮೂಲದ, ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಕಾರ್ಯಕರ್ತ ಸಾಜಿದ್ ಜಾಟ್ ಅವರನ್ನು ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿಂದಿನ ಪ್ರಮುಖ ಸಂಚುಕೋರ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಹೆಸರಿಸಿದೆ. ಈ ದಾಳಿಯಲ್ಲಿ 25 ಪ್ರವಾಸಿಗರು ಮತ್ತು ಸ್ಥಳೀಯ ನಾಗರಿಕ ಸಾವನ್ನಪ್ಪಿದರು. ಗಡಿಯಾಚೆಯಿಂದ ಕಾರ್ಯನಿರ್ವಹಿಸುತ್ತಿರುವ ನಿರ್ವಾಹಕರಿಗೆ ಈ ದಾಳಿಯ ಸಂಚನ್ನು ಔಪಚಾರಿಕವಾಗಿ ಪತ್ತೆಹಚ್ಚಲಾಗಿದೆ. ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಶಾಸನಬದ್ಧ ಗಡುವಿಗೆ ಮುಂಚಿತವಾಗಿ ಜಮ್ಮುವಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಲಾದ 1,597 ಪುಟಗಳ ಚಾರ್ಜ್‌ಶೀಟ್‌ನಲ್ಲಿ, ಸಾಜಿದ್ ಜಾಟ್ ಸೇರಿದಂತೆ ಏಳು ಆರೋಪಿಗಳನ್ನು ಸಂಸ್ಥೆ ಹೆಸರಿಸಿದೆ. ಲಷ್ಕರ್-ಎ-ತೊಯ್ಬಾ ಮತ್ತು ಅದರ ಪ್ರಾಕ್ಸಿ ಸಂಘಟನೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಮೂಲಕ ದಾಳಿಯನ್ನು ಸಂಘಟಿಸಿದ ಪಾಕಿಸ್ತಾನ ಮೂಲದ ನಿರ್ವಾಹಕ ಎಂದು ಸಂಸ್ಥೆ ವಿವರಿಸಿದೆ. ಪಹಲ್ಗಾಮ್ ಬಳಿಯ ಜನಪ್ರಿಯ ಪ್ರವಾಸಿ ತಾಣವಾದ ಬೈಸರನ್ ಹುಲ್ಲುಗಾವಲಿನಲ್ಲಿ ಈ ದಾಳಿ ನಡೆದಿದ್ದು, ಪ್ರವಾಸಿ…

Read More

ಬೆಂಗಳೂರು: ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯ ವಿಚಾರ ಬಿಸಿ ಬಿಸಿಯಾಗಿ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಏನು ಹೇಳಿದ್ದಾರೆ ಅಂತ ಮುಂದೆ ಓದಿ. ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ಮೊಟ್ಟೆಯಲ್ಲಿ ಕ್ಯಾನ್ಸರ್‌ ಉಂಟುಮಾಡುವ ಅಂಶಗಳು ಕಂಡುಬಂದಿವೆ ಎಂಬುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿರುವ ವದಂತಿಗೆ ಜನರು ಭಯಪಡುವ ಅಗತ್ಯ ಇಲ್ಲ. ರಾಜ್ಯಾದ್ಯಂತ ಉಂಟಾಗಿರುವ ಆತಂಕವನ್ನು ಗಂಭೀರವಾಗಿ ಪರಿಗಣಿಸಿ ಮೊಟ್ಟೆಗಳ ಮಾದರಿಗಳನ್ನು ಸಂಗ್ರಹಿಸಿ, ಪರೀಕ್ಷೆ ನಡೆಸಲು ನಿರ್ದೇಶನ ನೀಡಲಾಗಿದೆ ಎಂದಿದ್ದಾರೆ. ಮೊಟ್ಟೆಗಳ ಬಗೆಗೆ ಉಂಟಾಗಿರುವ ಸಂಶಯಕ್ಕೆ ಅನುಸಾರವಾಗಿ ಪರೀಕ್ಷೆ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾದರೆ, ಸಂಬಂಧಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂಬುದಾಗಿ ಎಚ್ಚರಿಸಿದ್ದಾರೆ. ಇದೇ ರೀತಿಯಲ್ಲಿ ಈ ಹಿಂದೆ ಮೊಟ್ಟೆ ವಿಚಾರದಲ್ಲಿ ವದಂತಿ ಹರಡಿದಾಗ ನಡೆಸಿದ್ದ ಪರೀಕ್ಷೆಗಳಲ್ಲಿ ಮೊಟ್ಟೆಯಲ್ಲಿ ಯಾವುದೇ ರೀತಿಯ ಹಾನಿಕಾರಕ ಅಂಶಗಳು ಕಂಡುಬಂದಿರಲಿಲ್ಲ ಹಾಗಾಗಿ ಯಾವುದೇ ರೀತಿಯ ಸಮಸ್ಯೆ ಆಗುವುದಿಲ್ಲ ಎಂಬ ಭರವಸೆಯಿದೆ. ನಾಗರೀಕರು ನಿರ್ಭೀತಿಯಿಂದ ಇರುವಂತೆ ಕೋರಿದ್ದಾರೆ. https://kannadanewsnow.com/kannada/shock-for-those-who-travelled-without-tickets-in-ksrtc-buses-7-61-lakh-fine-collected-from-3974-people/ https://kannadanewsnow.com/kannada/shamanur-shivashankarappa-cremated-with-full-government-honors-only-the-memory-of-the-generous-donor-remains/

Read More

ಮಂಡ್ಯ : ಮದ್ದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ನೀರಾವರಿ ಯೋಜನೆಗಳ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸುವ ಮೂಲಕ ಬೇಸಿಗೆ ಬೆಳೆಗೆ ಯಾವುದೇ ರೀತಿಯ ಲೋಪವಾಗದಂತೆ ರೈತರಿಗೆ ಅನುಕೂಲ ಕಲ್ಪಿಸಬೇಕೆಂದು ಶಾಸಕ ಕೆ.ಎಂ.ಉದಯ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮದ್ದೂರು ತಾಲೂಕಿನ ಕದಲೂರು ಗ್ರಾಮದ ಶಾಸಕ ಕೆ.ಎಂ.ಉದಯ್ ಅವರ ಕಚೇರಿಯಲ್ಲಿ ಸೋಮವಾರ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಈಗಾಗಲೇ ಕಾವೇರಿ ನೀರಾವರಿ ನಿಗಮದ ಮೂಲಕ 400 ಕೋಟಿ ಗೂ ಹೆಚ್ಚಿನ ಅನುದಾನದಲ್ಲಿ ಕೆರೆಗಳ ಅಭಿವೃದ್ಧಿ, ನಾಲೆಗಳ ಆಧುನಿಕರಣ ಹಾಗೂ ಹೂಳು ತೆಗೆಯುವ ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ. ಹೀಗಾಗಿ ಮುಂಬರುವ ಬೇಸಿಗೆ ಬೆಳೆ ವೇಳೆಗೆ ಕಾಮಗಾರಿಗಳನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಸರಾಗವಾಗಿ ಹರಿಯುವಂತೆ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದರು. ಕ್ಷೇತ್ರದ ವ್ಯಾಪ್ತಿಯಲ್ಲಿ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ಬನ್ನಹಳ್ಳಿ ಸೇರಿದಂತೆ ಹಲವು ಏತ ನೀರಾವರಿ ಯೋಜನೆಗಳ ಕಾಮಗಾರಿಗಳು ಶೀಘ್ರದಲ್ಲೇ…

Read More

ಬೆಂಗಳೂರು: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಿಗೆ ಸರ್ಕಾರ ನೇಮಿಸಿರುವಂತ ಆಡಳಿತಾಧಿಕಾರಿ ನೇಮಕ ರದ್ದುಗೊಳಿಸಲು ಹೈಕೋರ್ಟ್ ನಕಾರ ವ್ಯಕ್ತಪಡಿಸಿದೆ. ಈ ಕುರಿತಂತೆ 71 ರಿಟ್ ಅರ್ಜಿಗಳು ಸಲ್ಲಿಕೆಯಾಗಿದ್ದವು. ಇವುಗಳನ್ನು ಹೈಕೋರ್ಟ್ ಇಂದು ವಿಚಾರಣೆ ನಡೆಸಿ, ಇತ್ಯರ್ಥಪಡಿಸಿದೆ. ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ 71 ರಿಟ್ ಅರ್ಜಿ ಸಲ್ಲಿಸಿದ್ದವುಗಳನ್ನು ಇತ್ಯರ್ಥ ಪಡಿಸಲಾಗಿದೆ. ಅವಧಿ ಮುಗಿದ ನಗರಸಭೆ, ಪುರಸಭೆಗಳಿಗೆ ಸರ್ಕಾರ ಆಡಳಿತಾಧಿಕಾರಿ ನೇಮಿಸಲಾಗಿತ್ತು. ಕ್ಷೇತ್ರ ಪುನರ್ವಿಂಗಡನೆಗೆ 150 ದಿನ ಬೇಕಿರುವುದರಿಂದ ಆಡಳಿತಾಧಿಕಾರಿ ನೇಮಕ ಮಾಡಲಾಗಿತ್ತು. ಸಂವಿಧಾನದ 243(ಯು) ನಂತೆ 5 ವರ್ಷ ಅವಧಿ ನಿಗದಿಯಾಗಿದೆ. ಅವಧಿ ಮುಗಿದ ಮೇಲೆ ಹಾಲಿ ಸದಸ್ಯ, ಅಧ್ಯಕ್ಷರನ್ನು ಮುಂದುವರಿಸಲಾಗದು. ಹೀಗಾಗಿ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಿಸಲಾಗಿದೆ ಎಂಬುದಾಗಿ ಸರ್ಕಾರ ವಾದಿಸಿತ್ತು. ಸರ್ಕಾರದ ಪರ ಹೆಚ್ಚುವರಿ ಎಜಿ ಪ್ರತಿಮಾ ಹೊನ್ನಾಪುರ ವಾದಿಸಿದರು. ಈ ವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು ಆಡಳಿತಾಧಿಕಾರಿ ನೇಮಕದಲ್ಲಿ ಮಧ್ಯಪ್ರವೇಶಿಸಲು ನಕಾರ ವ್ಯಕ್ತಪಡಿಸಿದೆ. https://kannadanewsnow.com/kannada/husband-commits-suicide-after-killing-wife-over-family-dispute/ https://kannadanewsnow.com/kannada/are-you-making-this-mistake-beware-your-irctc-account-will-be-banned-more-than-3-crore-accounts-have-already-been-banned/

Read More

ಬೆಂಗಳೂರು ದಕ್ಷಿಣ: ಜಿಲ್ಲೆಯಲ್ಲಿ ಕೌಟುಂಬಿಕ ಕಲಹದಿಂದ ಪತ್ನಿಯನ್ನು ಹತ್ಯೆಗೈದು ಪತಿಯೂ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ರಾಮನಗರ ತಾಲ್ಲೂಕಿನ ಹಾಲನಹಳ್ಳಿಯಲ್ಲಿ ನಡೆದಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲ್ಲೂಕಿನ ಹಾಲನಹಳ್ಳಿಯಲ್ಲಿ ಕೌಟುಂಬಿಕ ಕಲಹದಿಂದ ಪತ್ನಿ ವತ್ಸಲ(25) ಹತ್ಯೆ ಮಾಡಿ, ಪತಿ ನವೀನ್(35) ನೇಣಿಗೆ ಶರಣಾಗಿದ್ದಾರೆ. ಈ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/allegations-of-opening-a-restaurant-illegally-fir-filed-against-bastin-pub-owned-by-actress-shilpa-shetty/ https://kannadanewsnow.com/kannada/are-you-making-this-mistake-beware-your-irctc-account-will-be-banned-more-than-3-crore-accounts-have-already-been-banned/

Read More

ಬೆಂಗಳೂರು: ಅವಧಿ ಮೀರಿ ಮಧ್ಯ ಸರಬರಾಜು ಮಾಡುತ್ತಿದ್ದ ಆರೋಪದಡಿ ನಟಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿನ್ ಪಬ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಬೆಂಗಳೂರಲ್ಲಿ ಇರುವಂತ ನಟಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿನ್ ಪಬ್ ನಲ್ಲಿ ಅವಧಿ ಮೀರಿ ಅನಧಿಕೃತವಾಗಿ ರೆಸ್ಟೋರೆಂಟ್ ತೆರೆಯುತ್ತಿರುವ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ 103 ಕೆಪಿ ಆಕ್ಟ್ ಅಡಿ ಸುಮೋಟೋ ದೂರನ್ನು ಪೊಲೀಸರು ದಾಖಲಿಸಿಕೊಂಡು ಎಫ್ಐಆರ್ ದಾಖಲಿಸಿದ್ದಾರೆ. ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸೆಂಟ್ ಮಾರ್ಕ್ಸ್ ರಸ್ತೆಯಲ್ಲಿರುವಂತ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿನ್ ಪಬ್ ಮತ್ತು ರೆಸ್ಟೋರೆಂಟ್ ಇದಾಗಿದೆ. ಇದಲ್ಲದೇ ರೆಸಿಡೆನ್ಸಿ ರಸ್ತೆಯಲ್ಲಿರುವ ಸೋರ್ ಬ್ಯಾರಿ ಪಬ್ ವಿರುದ್ಧವೂ ಕೇಸ್ ದಾಖಲಾಗಿದೆ. ಹೀಗೆ ಅವಧಿ ಮೀರಿ ಗ್ರಾಹಕರಿಗೆ ಅನುವು ಮಾಡಿಕೊಟ್ಟಿದ್ದ ಎರಡು ಪಬ್ ಗಳಿಗೆ ಪೊಲೀಸರು ಎಫ್ಐಆರ್ ದಾಖಲಿಸಿ, ಬಿಸಿ ಮುಟ್ಟಿಸಿದ್ದಾರೆ. ನಿಯಮ ಉಲ್ಲಂಘಿಸಿದ ಪಬ್ ಗಳ ಮ್ಯಾನೇಜರ್, ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. https://kannadanewsnow.com/kannada/senior-congress-mla-shamanur-shivashankarappa-shivaikya-kailash-shiva-ganaradhana-on-december-26th/ https://kannadanewsnow.com/kannada/shamanur-shivashankarappa-cremated-with-full-government-honors-only-the-memory-of-the-generous-donor-remains/

Read More