Author: kannadanewsnow09

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆ.ಎಸ್.ಆರ್.ಟಿ.ಸಿ) ಬಸ್ಸುಗಳಲ್ಲಿ ಪ್ರಯಾಣಿಸುವಾಗ ತುರ್ತು ಪರಿಸ್ಥಿತಿಗಳಲ್ಲಿ ಪ್ರಯಾಣಿಕರ ರಕ್ಷಣೆಗೆ ಅಗತ್ಯವಿರುವ ಹಲವಾರು ಸುರಕ್ಷತಾ ವ್ಯವಸ್ಥೆಗಳನ್ನು ಒದಗಿಸಲಾಗಿದೆ. ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿದೆ. ತುರ್ತು ಪರಿಸ್ಥಿತಿಯಲ್ಲಿ ಪ್ರಯಾಣಿಕರು ತೆಗೆದುಕೊಳ್ಳಬೇಕಾದ ಕ್ರಮಗಳು: ಎಲ್ಲಾ ಬಸ್ಸುಗಳ ಒಳಭಾಗದಲ್ಲಿ ಪ್ಯಾನಿಕ್ ಬಟನ್ಗಕಳನ್ನು ಅಳವಡಿಸಲಾಗಿದೆ. ಅಗ್ನಿ ಅವಘಡ, ವೈದ್ಯಕೀಯ ತುರ್ತು ಪರಿಸ್ಥಿತಿ, ಪ್ರಯಾಣಿಕರ ಸುರಕ್ಷತೆಗೆ ಅಪಾಯ ಈ ತುರ್ತು ಸಂದರ್ಭಗಳಲ್ಲಿ ಮಾತ್ರ ಪ್ಯಾನಿಕ್ ಬಟನ್ ಒತ್ತಬೇಕು. ಪ್ಯಾನಿಕ್ ಬಟನ್ ಒತ್ತಿದ ಕೂಡಲೇ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ತಲುಪುತ್ತದೆ. ಅಗ್ನಿ ನಂದಕ (ಫೈರ್ ಎಕ್ಸಿಂಗ್ಲಿಷರ್): ಕೆ.ಎಸ್.ಆರ್.ಟಿ.ಸಿ ಬಸ್ಸುಗಳಲ್ಲಿ ಅಗ್ನಿ ನಂದಕಗಳನ್ನು ಒದಗಿಸಲಾಗಿದೆ. ಅಗ್ನಿ ಅವಘಡ ಸಂಭವಿಸಿದಲ್ಲಿ ತಕ್ಷಣ ಚಾಲಕರಿಗೆ ಮಾಹಿತಿ ನೀಡಬೇಕು. ತರಬೇತಿ ಪಡೆದಿದ್ದರೆ ಅಗ್ನಿ ನಂದಕವನ್ನು ಸಿಬ್ಬಂದಿಯ ಸೂಚನೆಗಳನ್ನು ಶಾಂತವಾಗಿ ಅನುಸರಿಸಬೇಕು. ತುರ್ತು ನಿರ್ಗಮನ ದ್ವಾರ: ತುರ್ತು ನಿರ್ಗಮನ ದ್ವಾರಗಳನ್ನು ಸ್ಪಷ್ಟವಾಗಿ ಗುರುತಿಸಲಾಗಿದೆ. ಸಾಮಾನ್ಯ ಬಾಗಿಲುಗಳು ತೆರೆಯಲು ಆಗದಿದ್ದಾಗ ಅಥವಾ ಸೂಚನೆ ದೊರೆತಾಗ ಮಾತ್ರ ತುರ್ತು ನಿರ್ಗಮನ ದ್ವಾರವನ್ನು…

Read More

ಬೆಂಗಳೂರು : ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯು ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಮೊಬೈಲ್ ಆಧಾರಿತ ಹಾಜರಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಿ ಆದೇಶ ಹೊರಡಿಸಿದೆ. ಇಲಾಖೆಯು ಈಗಾಗಲೇ ಚಾಲ್ತಿಯಲ್ಲಿದ್ದ ಬಯೋಮೆಟ್ರಿಕ್ ಹಾಜರಾತಿಯನ್ನು ರದ್ದುಗೊಳಿಸಿ, ಮೊಬೈಲ್ ಆಧಾರಿತ ಹಾಜರಾತಿಯ (ಕರ್ನಾಟಕ ಹಾಜರಾತಿ ನಿರ್ವಹಣಾ ವ್ಯವಸ್ಥೆ) ಮೂಲಕ ಕಡ್ಡಾಯವಾಗಿ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಾತಿ ನೀಡಬೇಕೆಂದು ಎಂದು ಸೂಚಿಸಿದೆ. ಈ ಹೊಸ ಹಾಜರಾತಿ ವ್ಯವಸ್ಥೆಯನ್ನು ಅನುಸರಿಸದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವೇತನವನ್ನು ಕಡಿತಗೊಳಿಸುವುದರ ಜೊತೆಗೆ ನಡತೆ ನಿಯಮದ ಉಲ್ಲಂಘನೆ ಎಂದು ಪರಿಗಣಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಪ್ರಧಾನ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ “ಸಖಿ” ಒನ್ ಸ್ಟಾಪ್ ಸೆಂಟರ್ ನಲ್ಲಿ ಕಾರ್ಯನಿರ್ವಹಿಸಲು ಗುತ್ತಿಗೆ ಆಧಾರ ಮೇಲೆ ಘಟಕ ಆಡಳಿತಾಧಿಕಾರಿಗಳು 03 ಹುದ್ದೆ, ಆಪ್ತ ಸಮಾಲೋಚಕರ 03 ಹುದ್ದೆ, ಸಮಾಜ ಸೇವಾ ಕಾರ್ಯಕರ್ತರ / ಕೇಸ್ ವರ್ಕರ್ 07 ಹುದ್ದೆ, ಕಾನೂನು ಸಲಹೆಗಾರರು, ವಕೀಲರು (ಪ್ಯಾರಾ ಲೀಗಲ್ ) 03 ಹುದ್ದೆ ಮತ್ತು ವಿವಿದೋದ್ದೇಶ ಸ್ವಚ್ಛತಗಾರರು / ಸೆಕ್ಯೂರಿಟಿ 08 ಹುದ್ದೆಗೆ ಆಯ್ಕೆ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಹತೆ : ಘಟಕ ಆಡಳಿತಾಧಿಕಾರಿಗಳು ಹುದ್ದೆಗೆ ಎಂ.ಎಸ್ ಡಬ್ಲೂ., ಸ್ನಾತಕೋತ್ತರ ಕಾನೂನು ಪದವಿ., ಎಂ.ಎಸ್.ಸಿ ಹೋಮ್ ಸೈನ್ಸ್ (ಹ್ಯೂಮನ್ ಡೆವೆಲಪ್ ಮೆಂಟ್ & ಫ್ಯಾಮಿಲಿರಿಲೇಷನ್) ಎಂ.ಎಸ್.ಸಿ. ಸೈಕಾಲಜಿ., ಎಂ.ಎಸ್.ಸಿ ಸೈಕಿಯಾಟ್ರಿ ಹೊಂದಿರಬೇಕು. ಸರ್ಕಾರಿ / ಸ್ವಯಂ ಸೇವಾಸಂಸ್ಥೆಗಳಲ್ಲಿ ಕನಿಷ್ಠ 05 ವರ್ಷಗಳ ಸಮಾಲೋಚನ ಅನುಭವ ಹೊಂದಿರಬೇಕು. ಕಂಪ್ಯೂಟರ್ ಬಳಕೆಯಲ್ಲಿ, ಕನ್ನಡ / ಇಂಗ್ಲೀಷ್ ಬೆರಳಚ್ಚು, ಗೂಗಲ್ ಶೀಟ್ ಎಂ.ಎಸ್. ಆಫೀಸ್ ಹಾಗೂ ಪಿ.ಪಿ.ಟಿ ಯಲ್ಲಿ…

Read More

ಬೆಂಗಳೂರು : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2025-26ನೆ ಸಾಲಿನ ಸಾಧನೆ ಯೋಜನೆಯ ಸೌಲಭ್ಯ ಪಡೆಯಲು ಅರ್ಹ ವಿಕಲಚೇತರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ 31, 2026 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ. ಆಸಕ್ತ ವಿಕಲೇಚತನ ಫಲಾನುಭವಿಗಳು ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಮತ್ತು ಸೇವಾ ಸಿಂಧು ಪೋರ್ಟಲ್ (https://sevasindhu.karnataka.gov.in/sevasindhu/DepartmentServices) ನಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ, ಸುಧಾರಣಾ ಸಂಸ್ಥೆಗಳ ಸಂಕೀರ್ಣ ಹೊಸೂರು ರಸ್ತೆ, ಬೆಂಗಳೂರು ನಗರ ಜಿಲ್ಲೆ-560029 ಅಥವಾ ದೂರವಾಣಿ ಸಂಖ್ಯೆ-080-29752324 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಧಾರವಾಡ : ಧಾರವಾಡ ಪ್ರಾದೇಶಿಕ ತೋಟಗಾರಿಕಾ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ (ಕುಂಬಾಪುರ ಫಾರ್ಮ)ವು ವೈಜ್ಞಾನಿಕ ಪದ್ದತಿಯಿಂದ ಗೋಡಂಬಿ ಬೆಳೆಯ ಕುರಿತು ಉಚಿತ ತರಬೇತಿ ಬಗ್ಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಜನವರಿ 19, 2026 ರಂದು ಹಮ್ಮಿಕೊಳ್ಳಲಾಗಿದೆ. ತರಬೇತಿಯಲ್ಲಿ ಗೋಡಂಬಿ ಬೆಳೆಗೆ ಸಂಬಂಧಿಸಿದ ಸುಧಾರಿತ ತಂತ್ರಜ್ಞಾನಗಳು, ತಳಿಗಳ ಆಯ್ಕೆ, ತೋಟ ನಿರ್ವಹಣೆ, ಪೋಷಕಾಂಶ ನಿರ್ವಹಣೆ, ಕೀಟ-ರೋಗ ನಿಯಂತ್ರಣ ಹಾಗೂ ಕೋಯ್ಲುತ್ತರ ತಂತ್ರಜ್ಞಾನದ ಕುರಿತು ನುರಿತ ಹಾಗೂ ಅನುಭವವುಳ್ಳ ತಜ್ಞರಿಂದ ತಾಂತ್ರಿಕ ಮಾಹಿತಿಯನ್ನು ನೀಡಲಾಗುತ್ತದೆ. ಆಸಕ್ತ ರೈತರು ಧಾರವಾಡ ತೋ.ವಿ.ಶಿ.ಕೇಂದ್ರ, ಪ್ರಾ.ತೋ.ಸಂ.ವಿ.ಕೇಂದ್ರದ ಮುಖ್ಯಸ್ಥೆ ಡಾ. ಪಲ್ಲವಿ ಜಿ. ಮೊಬೈಲ್ ನಂ: 7892770955 ಗೆ ಜನವರಿ 17, 2026 ರೊಳಗಾಗಿ ನೊಂದಾಯಿಸಕೊಳ್ಳಬೇಕೇಂದು ಪ್ರಾದೇಶಿಕ ತೋಟಗಾರಿಕಾ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರವು ಪ್ರಕಟಣೆ ತಿಳಿಸಿದೆ.

Read More

ಬೆಂಗಳೂರು: ಸಾಮಾಜಿಕ ಜಾಲತಾಣಗಳ ಬಗ್ಗೆ ಶಿಕ್ಷಕರು ಹಾಗೂ ಪಾಲಕರು ಮಕ್ಕಳಿಗೆ ಸೂಕ್ತವಾಗಿ ಅರಿವು ಮೂಡಿಸಬೇಕು. ಆಗಷ್ಟೇ ಮಕ್ಕಳಿಗೆ ಆನ್‌ಲೈನ್‌ ಸುರಕ್ಷತೆ ಸೂಕ್ತವಾಗಿ ತಿಳಿಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಚೈಲ್ಡ್ ಫಂಡ್ ಇಂಡಿಯಾ ಇವರ ಸಹಯೋಗದಲ್ಲಿ ಮಕ್ಕಳ ಆನ್ ಲೈನ್ ಸುರಕ್ಷತೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಇಂದಿನ ಮಕ್ಕಳು ನಮ್ಮ ದೇಶದ ಭವಿಷ್ಯ, ಆದರೆ ಇಂದು ಮಕ್ಕಳ ಬೆಳವಣಿಗೆಗೆ ಮೊಬೈಲ್‌ ಅಡ್ಡಪರಿಣಾಮ ಬೀರುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು. ನಮ್ಮ ಕಾಲದಲ್ಲಿ ಮೊಬೈಲ್‌ ಗೀಳು ಇರಲಿಲ್ಲ, ನಾವು ಕೇಳಿ, ನೋಡಿ ಕಲಿಯುತ್ತಿದ್ದೇವು. ಆದರೆ, ಇಂದಿನ ಮಕ್ಕಳಿಗೆ ಎಲ್ಲವೂ ರೆಡಿಮೇಡ್‌ ಸಿಗುತ್ತಿವೆ. ಇಂದಿನ ಮಕ್ಕಳು ಹುಟ್ಟಿನಿಂದಲೇ ಮೊಬೈಲ್‌ ನೋಡುತ್ತಾ ಬೆಳೆಯುತ್ತಾರೆ. ಅವರಿಗೆ ಎಲ್ಲವೂ ಕುಂತಲ್ಲೇ, ನಿಂತಲ್ಲೇ ಸಿಗುತ್ತವೆ. ಇದು ಮಕ್ಕಳ ಬೆಳವಣಿಗೆಗೆ ಮಾರಕವಾಗಿದೆ…

Read More

ಬೆಂಗಳೂರು:ಕರ್ನಾಟಕ ನಾವೀನ್ಯತೆ ಪ್ರಾಧಿಕಾರದ ಅಡಿಯಲ್ಲಿ ಒಟ್ಟಾರೆ ವಿನ್ಯಾಸ, ಕಾರ್ಯಾಚರಣೆಯ ಕೆಲಸದ ಹರಿವುಗಳು, ಅನುಷ್ಠಾನ ಕಾರ್ಯವಿಧಾನಗಳು, ಕಾನೂನು ವಿಶ್ಲೇಷಣೆ ಮತ್ತು ಜಾಗತಿಕ ಮಾನದಂಡಗಳ ನಿಯಂತ್ರಕದಂತಹ ಉದ್ದೇಶಿತ ಸ್ಯಾಂಡ್ಬಾಕ್ಸ್ ಚೌಕಟ್ಟನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಪರಿಶೀಲಿಸಿದರು. ನಿಯಂತ್ರಕ ಸ್ಯಾಂಡ್ಬಾಕ್ಸ್ ಚೌಕಟ್ಟನ್ನು ಕಾರ್ಯಗತಗೊಳಿಸಲು ಮತ್ತು ಕಾರ್ಯಗತಗೊಳಿಸಲು ಸಹಾಯ ಮಾಡುವ ಅಸ್ತಿತ್ವದಲ್ಲಿರುವ ಕೆ.ಐ.ಎ ಕಾಯಿದೆಗೆ ಕೆಲವು ನಿರ್ಣಾಯಕ ತಿದ್ದುಪಡಿಗಳನ್ನು ಸಚಿವರು ಸೂಚಿಸಿದರಲ್ಲದೆ, ಅಗತ್ಯವಿರುವಲ್ಲಿ ರಾಜ್ಯ ನಿಯಮಗಳ ಸಮಂಜಸವಾದ ಸಡಿಲಿಕೆಯೊಂದಿಗೆ, ಸ್ಯಾಂಡ್ಬಾಕ್ಸ್ ನವೀನ ತಂತ್ರಜ್ಞಾನ ಗಳನ್ನು ನಿಯಂತ್ರಿತ ಪರಿಸರದಲ್ಲಿ ಪರೀಕ್ಷಿಸಲು ಅನುವು ಮಾಡಿಕೊಡುತ್ತದೆ ಎಂದು ಹೇಳಿದರು. ಸ್ಯಾಂಡ್ಬಾಕ್ಸ್ ಚೌಕಟ್ಟನ್ನು ಔಪಚಾರಿಕವಾಗಿ ಪರಿಚಯಿಸುವ ಮೊದಲು ಅಂತಿಮ ಚೌಕಟ್ಟನ್ನು ಸ್ಟಾರ್ಟ್ಅಪ್ಗಳು, ಉದ್ಯಮ, ರಾಜ್ಯ ಸರ್ಕಾರದ ಇಲಾಖೆಗಳು ಮತ್ತು ಚಿಂತಕರ ಟ್ಯಾಂಕ್ಗಳೊಂದಿಗೆ ಸಮಾಲೋಚನೆಗಾಗಿ ಶೀಘ್ರದಲ್ಲೇ ತೆರೆದಿಡಲಾಗುವುದು ಎಂದು ಈ ಸಂದರ್ಭದಲ್ಲಿ ಹೇಳಿದ ಸಚಿವ ಪ್ರಿಯಾಂಕ್ ಖರ್ಗೆ ಅವರು ಜವಾಬ್ದಾರಿಯುತ ಮತ್ತು ಸುರಕ್ಷಿತವಾಗಿ ಉಳಿಯುವ ಚೌಕಟ್ಟನ್ನು ನಿರ್ಣಾಯಕವಾಗಿ ತಂತ್ರಜ್ಞಾನ-ಪರವಾಗಿ ರೂಪಿಸುವುದು ನಮ್ಮ…

Read More

ಬೆಂಗಳೂರು: ಭಾರತದ ಹೆಸರಾಂತ ಪರಿಸರ ತಜ್ಞ, ಪರಿಸರ ವಿಜ್ಞಾನ ಕೇಂದ್ರದ ಸಂಸ್ಥಾಪಕ ಹಾಗೂ ಪಶ್ಚಿಮಘಟ್ಟ ಪರಿಸರ ಅಧ್ಯಯನದ ತಜ್ಞರ ಸಮಿತಿ (ಗಾಡ್ಗೀಳ್ ಆಯೋಗ)ದ ಅಧ್ಯಕ್ಷರಾಗಿದ್ದ ಮಾಧವ ಗಾಡ್ಗೀಳ್ ಅವರ ನಿಧನದ ಸುದ್ದಿ ತಿಳಿದು ಅತೀವ ದುಃಖವಾಯಿತು ಎಂಬುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸಂತಾಪ ಸೂಚಿಸಿದ್ದಾರೆ. ಪರಿಸರ ಸಂರಕ್ಷಣೆಗೆ ಮತ್ತು ಜೀವವೈವಿಧ್ಯತೆಯ ವಿಶ್ವದ ಅದ್ಭುತ ತಾಣಗಳಲ್ಲಿ ಒಂದಾದ ಪಶ್ಚಿಮಘಟ್ಟದ ಉಳಿವಿಗೆ ಮತ್ತು ಸಂರಕ್ಷಣೆಗೆ ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟಿದ್ದ ಗಾಡ್ಗೀಳ್ ಅವರು ತಮ್ಮ 83ನೇ ವಯಸ್ಸಿನಲ್ಲಿ ನಮ್ಮನ್ನು ಅಗಲಿದ್ದು, ಅವರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ. ಹಲವು ನದಿಗಳ ಮೂಲ, ಆಮ್ಲಜನಕದ ಕಣಜ ಹಾಗೂ ಮುಂಗಾರು ಮಾರುತಗಳನ್ನು ತಡೆದು ದೇಶವ್ಯಾಪಿ ಮಳೆಯಾಗಲು ಸಹಕಾರಿಯಾಗಿರುವ ಪಶ್ಚಿಮಘಟ್ಟಗಳ ಗಿರಿ ಪ್ರದೇಶಗಳು ಗಣಿಗಾರಿಕೆ ಹಾಗೂ ಮಾಲಿನ್ಯ ಕಾರಕ ಕೈಗಾರಿಕೆಗಳಿಂದ ಕ್ರಮೇಣ ನಾಶವಾಗುತ್ತಿರುವ ಬಗ್ಗೆ ಸದಾ ತಮ್ಮ ಕಳವಳ…

Read More

ಮಂಡ್ಯ : ಮದ್ದೂರು ನಗರದ ಪೇಟೆ ಬೀದಿಯ ಪುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಯಿತು. ಪೇಟೆ ಬೀದಿ ರಸ್ತೆಯ ಕೊಲ್ಲಿ ವೃತ್ತದಿಂದ ಪ್ರವಾಸಿ ಮಂದಿರದ ವೃತ್ತದವರೆಗೆ ತೆರವು ಕಾರ್ಯಾಚರಣೆಯಲ್ಲಿ ನಗರಸಭೆ, ಲೋಕೋಪಯೋಗಿ ಹಾಗೂ ಮದ್ದೂರು ಪೋಲೀಸ್ ಠಾಣೆಯ ಇನ್ಸ್ಪೆಕ್ಟರ್ ನವೀನ್ ಅವರ ನೇತೃತ್ವದಲ್ಲಿ ಬಿಗಿ ಭದ್ರತೆಯಲ್ಲಿ ಅಂಗಡಿ ಮುಂಗಟ್ಟುಗಳ ಸರಕು, ತಗಡಿನಶೀಟ್ ಮತ್ತು ಇತರೆ ವಸ್ತುಗಳನ್ನು ಫುಟ್‌ಪಾತ್ ಮೇಲೆ ಹಾಕಿದ್ದನ್ನು ತೆರವುಗೊಳಿಸಿದರು. ಇದೇ ವೇಳೆ ನಗರಸಭಾ ಪೌರಾಯುಕ್ತರಾದ ರಾಧಿಕಾ ಅವರು ಮಾತನಾಡಿ, ಮದ್ದೂರು ನಗರದ ಪೇಟೆ ಬೀದಿ ರಸ್ತೆಯಲ್ಲಿ ಅಡ್ಡಾದಿಡ್ಡಿ ವಾಹನ ಪಾರ್ಕಿಂಗ್ ಮಾಡುವುದು. ಬಹುತೇಕ ಅಂಗಡಿಯವರು ತಮ್ಮ ಅಂಗಡಿಗಳ ಸರಕನ್ನು ಪುಟ್ ಪಾತ್ ಒತ್ತುವರಿ ಮಾಡಿಕೊಂಡು ಹಾಕುವುದರಿಂದ ವಾಹನ ಹಾಗೂ ಸಾರ್ವಜನಿಕರು ಸಂಚಾರ ಮಾಡುವುದು ಕಷ್ಟವಾಗುತ್ತದೆ ಎಂದು ನಗರಸಭೆಗೆ ಈ ಬಗ್ಗೆ ನಾಗರಿಕರು ಹಲವು ಬಾರಿ ಮನವಿ ಮಾಡಿದ್ದರು. ಈ ಹಿನ್ನಲೆ ಎಲ್ಲಾ ಸಿಬ್ಬಂದಿಯೊಂದಿಗೆ ತೆರವು ಕಾರ್ಯಾಚರಣೆ ಮಾಡಲಾಗುತ್ತಿದೆ. ಪಾದಚಾರಿ ಮಾರ್ಗದಲ್ಲಿ ಯಾವುದೇ ನಾಮಫಲಕ ಅಂಗಡಿ ಸರಕುಗಳನ್ನು ಇಡದೆ…

Read More

ಬೆಂಗಳೂರು : ರಾಜಕೀಯದಲ್ಲಿ ಕುಮಾರಸ್ವಾಮಿ ಅವರಿಗಿಂತ ಹೆಚ್ಚಿನ ಅನುಭವವಿದೆ. ನಾನು ಸಿಎಂ ಆಗದೇ ಇರಬಹುದು, ಆದರೆ ಆಡಳಿತ ವಿಚಾರದಲ್ಲಿ ಅವರಿಗಿಂತ ಅನುಭವ ಹೊಂದಿದ್ದೇನೆ. ಅವರಿಂದ ಕಲಿಯುವ ಅಗತ್ಯ ನನಗಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಜೊತೆ ನಡೆಸಿದ ಸಭೆಗೆ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿರುವ ಬಗ್ಗೆ ಕೇಳಿದಾಗ, “ನಾನು ಬಹಳ ಕಾಲ ಸಚಿವನಾಗಿ ಕೆಲಸ ಮಾಡಿದ್ದೇನೆ. ಆಡಳಿತ ಹೇಗೆ ಮಾಡಬೇಕು, ಯಾರ ಜೊತೆ ಸಭೆ ಮಾಡಬೇಕು, ಮಾಡಬಾರದು ಎಂಬುದು ನನಗೆ ಚೆನ್ನಾಗಿ ಗೊತ್ತಿದೆ” ಎಂದು ತಿರುಗೇಟು ನೀಡಿದರು.

Read More