Author: kannadanewsnow09

ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ತೀವ್ರ ಅಡುಗೆ ಅನಿಲ (LPG) ಅಭಾವವನ್ನು ಖಂಡಿಸಿ ಹಾಗೂ ಸಮರ್ಪಕವಾಗಿ ಗ್ಯಾಸ್ ಸಿಲಿಂಡರ್ ಪೂರೈಸುವಂತೆ ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ವತಿಯಿಂದ ನಾಳೆ (ಮಾರ್ಚ್ 17) ನಗರದ ಕೆಂಪೇಗೌಡ ಬಸ್ ನಿಲ್ದಾಣದ (ಮೆಜೆಸ್ಟಿಕ್) ಬಳಿ ‘ಸೌದೆ ಚಳವಳಿ’ ಹಮ್ಮಿಕೊಳ್ಳಲಾಗಿದೆ. ಯದ್ಧ ನಿಲ್ಲಲಿ, ಹಸಿವು ನೀಗಲಿ: ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಇಡೀ ಪ್ರಪಂಚಕ್ಕೆ ತಟ್ಟಿದೆ. ಇದರಿಂದಾಗಿ ಕರ್ನಾಟಕದಲ್ಲೂ ಗ್ಯಾಸ್ ಸಿಲಿಂಡರ್ ಸಿಗದೆ ಹಾಹಾಕಾರ ಉಂಟಾಗಿದೆ. ಯುದ್ಧದಿಂದಾಗಿ ಅಸಂಖ್ಯಾತ ನಿರಪರಾಧಿಗಳು ಮತ್ತು ಸೈನಿಕರು ಸಾವನ್ನಪ್ಪುತ್ತಿರುವುದು ವಿಷಾದನೀಯ ಎಂದು ವಾಟಾಳ್ ಪಕ್ಷದ ಅಧ್ಯಕ್ಷರಾದ ವಾಟಾಳ್ ನಾಗರಾಜ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೋಟೆಲ್ ಉದ್ಯಮ ಮತ್ತು ಸಾರಿಗೆ ಸಂಕಷ್ಟ: ಅಡುಗೆ ಅನಿಲದ ಕೊರತೆಯಿಂದಾಗಿ ಬೆಂಗಳೂರು ನಗರವೊಂದರಲ್ಲೇ ಸುಮಾರು 40 ಸಾವಿರ ಹೋಟೆಲ್‌ಗಳು ಮುಚ್ಚುವ ಭೀತಿ ಎದುರಿಸುತ್ತಿವೆ. ಕೇವಲ ಹೋಟೆಲ್ ಮಾತ್ರವಲ್ಲದೆ ಆಟೋರಿಕ್ಷಾ, ಕ್ಯಾಬ್‌ಗಳು, ಮದುವೆ ಮನೆಗಳು ಹಾಗೂ ಪಿಜಿ (PG) ಸೇರಿದಂತೆ ಅನೇಕ ಕಡೆಗಳಲ್ಲಿ ಆಹಾರಕ್ಕಾಗಿ ಪರದಾಡುವಂತಾಗಿದೆ. ಈ…

Read More

ಬೆಂಗಳೂರು: ರಾಜಧಾನಿಯಿಂದ ಬೀದರ್ ಮತ್ತು ಕಲಬುರಗಿಗೆ ವೈಮಾನಿಕ ಸೇವೆ ಆರಂಭಿಸುವ ಬಗ್ಗೆ ವಿಮಾನಯಾನ ಸಂಸ್ಥೆಗಳು ಇದೇ 23ರೊಳಗೆ ತಮ್ಮ ಪ್ರಸ್ತಾವನೆ ಸಲ್ಲಿಸಬೇಕು. ಇದರ ಬಗ್ಗೆ ಮುಂದಿನ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಈ ಸಂಬಂಧ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸೋಮವಾರ ವಿವಿಧ ವಿಮಾನಯಾನ ಸಂಸ್ಥೆಗಳೊಂದಿಗೆ ಅವರು ತಮ್ಮ ಅಧ್ಯಕ್ಷತೆಯಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಸಚಿವರಾದ ಶರಣಪ್ರಕಾಶ್ ಪಾಟೀಲ್, ಪ್ರಿಯಾಂಕ್ ಖರ್ಗೆ, ರಹೀಂಖಾನ್ ಮತ್ತು ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯ (ಕೆ.ಕೆ.ಆರ್.ಡಿ.ಬಿ) ಅಧ್ಯಕ್ಷ ಡಾ.ಅಜೇಯ್ ಸಿಂಗ್ ಭಾಗವಹಿಸಿದ್ದರು. ಈ ಬಗ್ಗೆ ಮಾತನಾಡಿರುವ ಸಚಿವ ಎಂ ಬಿ ಪಾಟೀಲ, `ಕಲಬುರಗಿ ವಿಮಾನ ನಿಲ್ದಾಣದಿಂದ ಈಗ ವಿಮಾನಸೇವೆ ಸ್ತಬ್ಧವಾಗಿದೆ. ಬೀದರಿನಲ್ಲಿ ಕೆ.ಕೆ.ಆರ್.ಡಿ.ಬಿ ನೆರವಿನಿಂದ ದಿನಕ್ಕೆ ಒಂದು ವಿಮಾನ ಮಾತ್ರ ಸಂಚರಿಸುತ್ತಿದೆ. ಕೇಂದ್ರ ಸರಕಾರವು ಪ್ರಾದೇಶಿಕ ಮಟ್ಟದಲ್ಲಿ ವಿಮಾನಯಾನ ಉತ್ತೇಜಿಸಲು ಉಡಾನ್ ಯೋಜನೆ ಮೂಲಕ ಮೂರು ವರ್ಷ ನೆರವು ನೀಡಿತು. ಆ ಅವಧಿ ಮುಗಿದ ನಂತರ…

Read More

ಬೆಂಗಳೂರು: ನೈರುತ್ಯ ರೈಲ್ವೆ ಇಲಾಖೆಯ ಮುಂಬಡ್ತಿ (ಪದೋನ್ನತಿ) ಪರೀಕ್ಷೆಗಳನ್ನು ಕೇವಲ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ನಡೆಸಲು ಮುಂದಾಗಿರುವ ನಿರ್ಧಾರದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕೆಂಡಾಮಂಡಲವಾಗಿದೆ. ಈ ಅನ್ಯಾಯದ ವಿರುದ್ಧ ನಾಳೆಯಿಂದಲೇ (ಮಂಗಳವಾರ) ರಾಜ್ಯಾದ್ಯಂತ ತೀವ್ರ ಸ್ವರೂಪದ ಪ್ರತಿಭಟನೆ ನಡೆಸುವುದಾಗಿ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಎಚ್ಚರಿಸಿದ್ದಾರೆ. ನಂಬಿಕೆ ದ್ರೋಹದ ಆರೋಪ: ಸೋಮವಾರ ಮಾಧ್ಯಮ ಹೇಳಿಕೆ ನೀಡಿದ ನಾರಾಯಣಗೌಡ ಅವರು, ರೈಲ್ವೆ ಇಲಾಖೆಯು ಕನ್ನಡಿಗ ಉದ್ಯೋಗಿಗಳಿಗೆ ನಂಬಿಕೆ ದ್ರೋಹ ಎಸಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 2025ರ ಸೆಪ್ಟೆಂಬರ್ ಮತ್ತು ನವೆಂಬರ್‌ನಲ್ಲಿ ಹೊರಡಿಸಲಾದ ಗೂಡ್ಸ್ ಟ್ರೇನ್ ಮ್ಯಾನೇಜರ್ (194 ಹುದ್ದೆ) ಮತ್ತು ಹುಬ್ಬಳ್ಳಿ ವಿಭಾಗದ ಎಲ್‌ಡಿಸಿಇ (101 ಹುದ್ದೆ) ಮುಂಬಡ್ತಿ ಅಧಿಸೂಚನೆಗಳಲ್ಲಿ ಕೇವಲ ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳನ್ನಷ್ಟೇ ನೀಡಲಾಗಿತ್ತು. ಈ ಬಗ್ಗೆ ಈ ಹಿಂದೆ ಕರವೇ ಪ್ರತಿಭಟಿಸಿದಾಗ, ರೈಲ್ವೆ ಉನ್ನತಾಧಿಕಾರಿಗಳು ಸಭೆ ನಡೆಸಿ “ಕನ್ನಡದಲ್ಲೂ ಪರೀಕ್ಷೆ ನಡೆಸುತ್ತೇವೆ” ಎಂದು ಭರವಸೆ ನೀಡಿದ್ದರು. ಆದರೆ ಈಗ ಆ ಭರವಸೆ ಹುಸಿಯಾಗಿದೆ ಎಂದು…

Read More

ಬಳ್ಳಾರಿ: ಅಧಿಕಾರಿಗಳ ಸತತ ಕಿರುಕುಳಕ್ಕೆ ಬೇಸತ್ತು ಕೃಷಿ ಇಲಾಖೆಯ ಗುತ್ತಿಗೆ ನೌಕರರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ಗೌರಿಪುರದಲ್ಲಿ ನಡೆದಿದೆ. ಘಟನೆಯ ವಿವರ: ಕೃಷಿ ಇಲಾಖೆಯಲ್ಲಿ ಗುತ್ತಿಗೆ ನೌಕರರಾಗಿ ಕೆಲಸ ಮಾಡುತ್ತಿದ್ದ ಬಿ.ಎನ್. ರಾಜು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಇವರು ಗೌರಿಪುರ ಗ್ರಾಮದ ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾರೆ. ಆತ್ಮಹತ್ಯೆಗೂ ಮುನ್ನ ರಾಜು ಅವರು ಮೂರು ಪುಟಗಳ ಸುದೀರ್ಘ ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ಅಧಿಕಾರಿಗಳ ಕಿರುಕುಳದ ಬಗ್ಗೆ ಎಳೆಎಳೆಯಾಗಿ ವಿವರಿಸಿದ್ದಾರೆ ಎನ್ನಲಾಗಿದೆ. ಅಧಿಕಾರಿಗಳ ಮೇಲೆ ಗಂಭೀರ ಆರೋಪ: ಸಂಡೂರು ಕೃಷಿ ಇಲಾಖೆಯ ಅಧಿಕಾರಿ ರಾಘವೇಂದ್ರ ಎಂಬುವವರು ತಮಗೆ ತೀವ್ರವಾಗಿ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ರಾಜು ತಮ್ಮ ಡೆತ್ ನೋಟ್‌ನಲ್ಲಿ ಆರೋಪಿಸಿದ್ದಾರೆ. ಅಧಿಕಾರಿಗಳ ಕಿರುಕುಳದಿಂದ ಮನನೊಂದು ಬದುಕು ಸಾಕಾಗಿ ಈ ನಿರ್ಧಾರಕ್ಕೆ ಬಂದಿರುವುದಾಗಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ. ಪೊಲೀಸ್ ತನಿಖೆ: ಘಟನಾ ಸ್ಥಳಕ್ಕೆ ಚೋರನೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು…

Read More

ಬೆಂಗಳೂರು: ರಾಜ್ಯದ ಬಿ.ಎಡ್ (B.Ed) ಕಾಲೇಜುಗಳ ಶುಲ್ಕವನ್ನು ಈ ಶೈಕ್ಷಣಿಕ ವರ್ಷದಿಂದಲೇ ಪರಿಷ್ಕರಿಸಲು ಸರ್ಕಾರ ನಿರ್ಧರಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಮಧು ಜಿ. ಮಾದೇಗೌಡ ಅವರ ಪ್ರಶ್ನೆಗೆ ಸಚಿವರು ಈ ಉತ್ತರ ನೀಡಿದ್ದಾರೆ. ಬಿ.ಎಡ್ ಶುಲ್ಕ ಪರಿಷ್ಕರಣೆ ಯಾಕೆ? ರಾಜ್ಯದಲ್ಲಿ ಕಳೆದ ಅನೇಕ ವರ್ಷಗಳಿಂದ ಬಿ.ಎಡ್ ಕಾಲೇಜುಗಳ ಶುಲ್ಕವನ್ನು ಪರಿಷ್ಕರಿಸಲಾಗಿಲ್ಲ. ನೆರೆಯ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಶುಲ್ಕದ ಪ್ರಮಾಣ ಕಡಿಮೆ ಇದೆ. ಈ ಹಿನ್ನೆಲೆಯಲ್ಲಿ ಶುಲ್ಕ ಪರಿಷ್ಕರಣೆಗಾಗಿ ಉನ್ನತ ಶಿಕ್ಷಣ ಇಲಾಖೆಯು 6 ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಿದೆ. ಈ ಸಮಿತಿಯ ವರದಿ ಬಂದ ತಕ್ಷಣ, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಹೊಸ ಶುಲ್ಕ ಜಾರಿಗೆ ಬರಲಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ವಿಶ್ವವಿದ್ಯಾಲಯಗಳಲ್ಲಿ ಏಕರೂಪ ವೇಳಾಪಟ್ಟಿ: ಇದೇ ವೇಳೆ ಉನ್ನತ ಶಿಕ್ಷಣ ಇಲಾಖೆಯ ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ (UUCMS) ಕುರಿತಾಗಿ ರಮೇಶ್ ಬಾಬು ಕೇಳಿದ…

Read More

ಒಂದು ವೇಳೆ ಯಾರಾದರೂ ನಿಮಗೆ ತಿಳಿಯದೆ ಮೋಸವನ್ನು ಮಾಡಿ ಆಸ್ತಿಯನ್ನು ತೆಗೆದುಕೊಂಡಿದ್ದರೆ, ಯಾರಾದರೂ ನಿಮ್ಮ ವಿರುದ್ಧ ಆಸ್ತಿಯ ವಿಚಾರವಾಗಿ ಕೋರ್ಟ್ ಅಲ್ಲಿ ಕೇಸ್ ಹಾಕಿದ್ದರೆ ಹಾಗೂ ಅದರಿಂದ ನಿಮಗೆ ಏನಾದರೂ ನ್ಯಾಯ ದೊರಕುತ್ತಿಲ್ಲ ಎಂದರೆ ಕಾರ್ತವೀರ್ಯಾರ್ಜುನ ಮಂತ್ರದಿಂದ ನೀವು ಕಳೆದುಕೊಂಡ ಆಸ್ತಿಯನ್ನು ಮತ್ತೆ ಪಡೆದುಕೊಳ್ಳಬಹುದು. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564 ಈ ಕಾರ್ತವೀರ್ಯಾರ್ಜುನ…

Read More

ಬೆಂಗಳೂರು: ಕ್ಷುಲ್ಲಕ ಕಾರಣಕ್ಕಾಗಿ ನಡೆದ ಜಗಳವೊಂದು ವಿಕೋಪಕ್ಕೆ ಹೋಗಿ ವ್ಯಕ್ತಿಯೊಬ್ಬರ ಭೀಕರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ ಎಂದು ಸೋಮವಾರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ವಿವರ: ಕೊಲೆಯಾದವರನ್ನು ವಿಲ್ಸನ್ ಗಾರ್ಡನ್ ನಿವಾಸಿ, ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ರಶೀದ್ ಅಹಮದ್ (45) ಎಂದು ಗುರುತಿಸಲಾಗಿದೆ. ಈ ಪ್ರಕರಣದ ಪ್ರಮುಖ ಆರೋಪಿ ಪರ್ವೇಜ್ ಮತ್ತು ರಶೀದ್ ನಡುವೆ ಮೌಲ್ಡ್ (Mold) ಕೆಲಸಕ್ಕೆ ಸಂಬಂಧಿಸಿದಂತೆ ಸಣ್ಣ ಜಗಳ ಶುರುವಾಗಿತ್ತು. ಮಾತಿಗೆ ಮಾತು ಬೆಳೆದು ಜಗಳ ತಾರಕಕ್ಕೇರಿದಾಗ, ಪರ್ವೇಜ್ ಅಹಮದ್ ಅವರ ಕಾಲಿಗೆ ಬ್ಯಾಟ್‌ನಿಂದ ಬಲವಾಗಿ ಹೊಡೆದಿದ್ದಾನೆ. ಈ ವೇಳೆ ರಶೀದ್ ಅವರು ಕೆಳಕ್ಕೆ ಬಿದ್ದು ಅವರ ತಲೆ ಪಾದಚಾರಿ ಮಾರ್ಗದ ಕಲ್ಲಿಗೆ (Pavement) ಜೋರಾಗಿ ಬಡಿದಿದೆ. ತೀವ್ರ ರಕ್ತಸ್ರಾವದಿಂದಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. https://twitter.com/TheRFTeam/status/2033517948816826402 ಆರೋಪಿಗಳ ಬಂಧನ: ಈ ಭೀಕರ ದಾಳಿಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ…

Read More

ಬೆಂಗಳೂರು: ಮುಡಾ ಮಾಜಿ ಆಯುಕ್ತ ಜಿ.ಟಿ ದಿನೇಶ್ ಕುಮಾರ್ ಗೆ ಜನಪ್ರತಿನಿಧಿಗಳ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಆ ಮೂಲಕ ಮುಡಾ ಹಗರಣದಲ್ಲಿ ಮಾಜಿ ಆಯುಕ್ತ ಜಿ.ಟಿ ದಿನೇಶ್ ಕುಮಾರ್ ಗೆ ಬಿಗ್ ರಿಲೀಫ್ ನೀಡಿದೆ. ಮುಡಾ ಪ್ರಕರಣದಲ್ಲಿ ಆರೋಪ ಪಟ್ಟಿ ಸಲ್ಲಿಸಲು ಲೋಕಾಯುಕ್ತ ಪೊಲೀಸರು ವಿಳಂಬ ಧೋರಣೆಯನ್ನು ತೋರಿದ್ದರು. ಈ ಹಿನ್ನಲೆಯಲ್ಲಿ ಮುಡಾ ಮಾಜಿ ಆಯುಕ್ತ ಜಿ.ಟಿ ದಿನೇಶ್ ಕುಮಾರ್ ಗೆ ಜಾಮೀನು ಮಂಜೂರು ಮಾಡಲಾಗಿದೆ. ನಿಗದಿತ ಅವಧಿಯಲ್ಲಿ ಆರೋಪಪಟ್ಟಿ ಸಲ್ಲಿಸದ ಕಾರಣಕ್ಕೆ ಜಾಮೀನು ನೀಡಲಾಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಆದೇಶ ಹೊರಡಿಸಿದ್ದಾರೆ. ಬಂಧನವಾಗಿ 90 ದಿನ ಕಳೆದರೂ ಆರೋಪಪಟ್ಟಿಯನ್ನು ಲೋಕಾಯುಕ್ತ ಪೊಲೀಸರು ಸಲ್ಲಿಸಿರಲಿಲ್ಲ. ಹೀಗಾಗಿ ಜಿ.ಟಿ ದಿನೇಶ್ ಕುಮಾರ್ ಗೆ ಡಿಫಾಲ್ಟ್ ಜಾಮೀನು ನೀಡಿ ಕೋರ್ಟ್ ಆದೇಶಿಸಿದೆ. https://kannadanewsnow.com/kannada/these-are-the-amazing-health-benefits-of-consuming-grapes/ https://kannadanewsnow.com/kannada/bjp-releases-first-list-of-144-candidates-for-west-bengal-assembly-elections/

Read More

ನವದೆಹಲಿ: ಕೇಂದ್ರ ಸಾಹಿತ್ಯ ಅಕಾಡೆಮಿಯು 2025ನೇ ಸಾಲಿನ ವಾರ್ಷಿಕ ಸಾಹಿತ್ಯ ಪ್ರಶಸ್ತಿಗಳನ್ನು ಇಂದು ಪ್ರಕಟಿಸಿದೆ. ಒಟ್ಟು 24 ಭಾರತೀಯ ಭಾಷೆಗಳ ಸಾಹಿತ್ಯ ಕೃತಿಗಳಿಗೆ ಈ ಬಾರಿ ಪ್ರಶಸ್ತಿ ಘೋಷಣೆಯಾಗಿದ್ದು, ಕನ್ನಡದ ಖ್ಯಾತ ಸಾಹಿತಿ ಅಮರೇಶ ನುಗಡೋಣಿ ಅವರ ‘ದಡ ಸೇರಿಸು ತಂದೆ’ ಕಥಾ ಸಂಕಲನಕ್ಕೆ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಗಳ ವಿವರ: ಈ ವರ್ಷದ ಪ್ರಶಸ್ತಿ ಪಟ್ಟಿಯಲ್ಲಿ 8 ಕವನ ಸಂಕಲನಗಳು, 4 ಕಾದಂಬರಿಗಳು, 6 ಸಣ್ಣಕಥೆಗಳ ಸಂಕಲನಗಳು, 2 ಪ್ರಬಂಧಗಳು, ತಲಾ 1 ಸಾಹಿತ್ಯ ವಿಮರ್ಶೆ, ಆತ್ಮಕಥೆ ಮತ್ತು 2 ಸ್ಮರಣ ಲೇಖನಗಳು (Memoirs) ಸ್ಥಾನ ಪಡೆದಿವೆ. ಕನ್ನಡದ ಹೆಮ್ಮೆ: ಕನ್ನಡ ವಿಭಾಗದಲ್ಲಿ ಅಮರೇಶ ನುಗಡೋಣಿ ಅವರ ಕೃತಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಆಯ್ಕೆ ಪ್ರಕ್ರಿಯೆಯಲ್ಲಿ ತೀರ್ಪುಗಾರರಾಗಿ ಡಾ. ಸಿದ್ದಲಿಂಗ ಪಟ್ಟಣಶೆಟ್ಟಿ, ಡಾ. ಜಯಲಲಿತ ಮತ್ತು ಸಹನಾ ಕಾಂತಬೈಲು ಅವರು ಕಾರ್ಯನಿರ್ವಹಿಸಿದ್ದರು. ಪ್ರಮುಖ ವಿಜೇತರ ಪಟ್ಟಿ: ಭಾಷೆ ಕೃತಿಯ ಹೆಸರು (ಪ್ರಕಾರ) ಲೇಖಕರ ಹೆಸರು…

Read More

ನವದೆಹಲಿ: ಭಾರತೀಯ ಜನತಾ ಪಾರ್ಟಿಯಿಂದ ಪಶ್ಚಿಮ ಬಂಗಾಳ ಹಾಗೂ ಕೇರಳ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೆ 144 ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಮಾಡಿದ್ದರೇ, ಕೇರಳ ವಿಧಾನಸಭಾ ಚುನಾವಣೆಗೆ 47 ಅಭ್ಯರ್ಥಿಗಳನ್ನು ಬಿಜೆಪಿ ಘೋಷಣೆ ಮಾಡಿದೆ. ಬಿಜೆಪಿಯಿಂದ ಕೇರಳ ವಿಧಾನಸಭಾ ಚುನಾವಣೆಗೆ 47 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ನವದೆಹಲಿ: ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ ಸೋಮವಾರ 47 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಂಜೇಶ್ವರ ಸ್ಥಾನದಿಂದ ಪಕ್ಷವು ಕೆ. ಸುರೇಂದ್ರನ್ ಅವರನ್ನು ಕಣಕ್ಕಿಳಿಸಿದೆ. ಕೋಜಿಕೋಡ್ ಉತ್ತರದಿಂದ ನವ್ಯ ಹರಿದಾಸ್. ಕಾಂಜಿರಪ್ಪಳ್ಳಿಯಿಂದ ಅಡ್ವೊಕೇಟ್ ಜಾರ್ಜ್ ಕುರಿಯನ್, ಕಜಕೂಟಂನಿಂದ ವಿ. ಮುರಳೀಧರನ್ ಮತ್ತು ನೇಮಮ್ ನಿಂದ ರಾಜ್ಯ ಅಧ್ಯಕ್ಷ ರಾಜೀವ್ ಚಂದ್ರಶೇಖರ್. ರಾಜ್ಯವು ಏಪ್ರಿಲ್ 9 ರಂದು ಎಲ್ಲಾ 140 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಸಲಿದ್ದು, ಮೇ 4 ರಂದು ಮತ ಎಣಿಕೆ ನಡೆಯಲಿದೆ. https://twitter.com/ANI/status/2033498351837077658 ಭಾನುವಾರದಂದು,…

Read More