Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಕೇಂದ್ರ ಸಚಿವ ಕುಮಾರಸ್ವಾಮಿ ಮಾರ್ಗದರ್ಶನದಲ್ಲಿ ಪಕ್ಷ ಸಂಘಟಿಸಲು ಪಣ ತೊಟ್ಟಿದ್ದು, ಶೀಘ್ರದಲ್ಲೇ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ಸೊರಬಕ್ಕೆ ಕರೆತರುವ ಮೂಲಕ ತಾಲ್ಲೂಕಿನಲ್ಲಿ ಯುವಕರನ್ನು ಮತ್ತಷ್ಟು ಪಕ್ಷಕ್ಕೆ ಸೆಳೆಯಲು ಕಾರ್ಯತಂತ್ರ ರೂಪಿಸಲಾಗುವುದು ಎಂದು ಜೆಡಿಎಸ್ ಹಿರಿಯ ಮುಖಂಡ ಬಾಸೂರು ಚಂದ್ರೇಗೌಡ ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದಲ್ಲಿ ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಜವಾಬ್ದಾರಿ ಮರೆತ ರಾಜಕೀಯ ಕ್ಷೇತ್ರದಲ್ಲಿ ರಾಜಕಾರಣವು ಇಂದು ವ್ಯಾಪಾರವಾಗಿ ಬದಲಾಗಿದೆ. ಕಳೆದ 40 ವರ್ಷಗಳಿಂದ ಜನರಿಗಾಗಿ ಹೋರಾಟ ಮಾಡುತ್ತಲೇ ಬಂದಿದ್ದೇವೆ. ನಮ್ಮಲ್ಲಿ ಆರ್ಥಿಕ ಶಕ್ತಿ ಇಲ್ಲದಿದ್ದರೂ ಜನರ ಪರವಾಗಿ ಕೆಲಸ ಮಾಡಿದ್ದೇವೆ. ಪಕ್ಷದ ಹಿರಿಯ ಮುಖಂಡರು ಭಿನ್ನಮತ ಮರೆತು ಒಗ್ಗೂಡಿ ಪಕ್ಷ ಸಂಘಟಿಸಬೇಕಿದೆ ಎಂದು ತಿಳಿಸಿದರು. ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಗಣಪತಿ ಮಾತನಾಡಿ, ಟಿ.ಎನ್.ರಾಮಕೃಷ್ಣ ಅವರು ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿದ್ದು, ತಾಲ್ಲೂಕು ಜೆಡಿಎಸ್ ವತಿಯಿಂದ ಅಭಿನಂದನೆ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದರು. ಮುಂಬರುವ ಜಿಲ್ಲಾ, ತಾಲೂಕು,…
ಬೆಂಗಳೂರು : “ಗೌರವದಿಂದ ಇದ್ದರೆ ಸರಿ. ಇಲ್ಲ ಅಂದರೆ ಕಸ ವಿಲೇವಾರಿಗೆ ಅಡ್ಡಿ ಪಡಿಸುವವರು ಶಾಸಕರಾದರೂ ಸರಿ, ಬೇರೆ ಯಾರೇ ಆಗಿದ್ದರೂ ಸಹ ಎಸ್ಮಾ ಕಾಯ್ದೆ ಅಡಿ, ಯಾವುದೇ ಕರುಣೆ ಇಲ್ಲದೇ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಶಾಸಕರ ಮನೆ ಮುಂದೆ ಅಥವಾ ಬಿಜೆಪಿ ಕಚೇರಿ ಎದುರು ಲೋಡ್ ಕಸವನ್ನು ತೆಗೆದುಕೊಂದು ಹೋಗಿ ಹಾಕಬೇಕಾಗುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಎಚ್ಚರಿಕೆ ನೀಡಿದರು. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು. ಮಹದೇವಪುರದಲ್ಲಿ ಕಸ ವಿಲೇವಾರಿಗೆ ಅಡ್ಡಿಪಡಿಸಿರುವ ಬಗ್ಗೆ ಕೇಳಿದಾಗ, “ಶಾಸಕರು ಕಸ ಹಾಕಬಾರದು ಹಾಗೂ ನಮಗೆ ಅನುದಾನ ಬೇಕು ಎಂದು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ಮಂಗಳವಾರದಂದು ಅರವಿಂದ ಲಿಂಬಾವಳಿ, ಇಂದು ದೊಡ್ಡಬಳ್ಳಾಪುರ ಶಾಸಕರು ಬ್ಲಾಕ್ ಮೇಲ್ ಮಾಡಿದ್ದಾರೆ. ಹೀಗೆ ಮಾಡಿದರೆ ಕಸ ಎಲ್ಲಿಗೆ ಹೋಗಬೇಕು? ಕಸವು ಆರ್.ಅಶೋಕ್, ವಿಜಯೇಂದ್ರ ಅಥವಾ ಬಿಜೆಪಿ ಕಚೇರಿಗೆ ಹೋಗಬೇಕಾಗುತ್ತದೆ. ಇವರುಗಳು ಯಾರಿಗೆ ಎಂದು ಬ್ಲಾಕ್ ಮೆಲ್ ಮಾಡುತ್ತಿದ್ದಾರೆ” ಎಂದರು. ಯಾವ ಉದ್ದೇಶಕ್ಕೆ ಶಾಸಕರುಗಳು ಬ್ಲಾಕ್ ಮೆಲ್…
ನವದೆಹಲಿ: ಇಲ್ಲಿ ನಡೆದ ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯ ಸಂದರ್ಭದಲ್ಲಿ ಗೂಗಲ್ ಸಿಇಒ ಸುಂದರ್ ಪಿಚೈ ಅವರೊಂದಿಗಿನ ಉನ್ನತ ಮಟ್ಟದ ಸಭೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಜಾಗತಿಕ ಕೃತಕ ಬುದ್ಧಿಮತ್ತೆ ಭೂದೃಶ್ಯದಲ್ಲಿ ಭಾರತದ ಬೆಳೆಯುತ್ತಿರುವ ಪಾತ್ರವನ್ನು ಎತ್ತಿ ತೋರಿಸಿದರು. ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, “ದೆಹಲಿಯಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆಯ ಸಂದರ್ಭದಲ್ಲಿ ಶ್ರೀ ಸುಂದರ್ ಪಿಚೈ ಅವರನ್ನು ಭೇಟಿಯಾಗಲು ಸಂತೋಷವಾಯಿತು. ಎಐನಲ್ಲಿ ಭಾರತ ಮಾಡುತ್ತಿರುವ ಕೆಲಸ ಮತ್ತು ಈ ಕ್ಷೇತ್ರದಲ್ಲಿ ನಮ್ಮ ಪ್ರತಿಭಾನ್ವಿತ ವಿದ್ಯಾರ್ಥಿಗಳು ಮತ್ತು ವೃತ್ತಿಪರರೊಂದಿಗೆ ಗೂಗಲ್ ಹೇಗೆ ಕೆಲಸ ಮಾಡಬಹುದು ಎಂಬುದರ ಕುರಿತು ಮಾತನಾಡಿದರು.” ಜವಾಬ್ದಾರಿಯುತ ಮತ್ತು ಪ್ರಭಾವಶಾಲಿ ಎಐ ಅಭಿವೃದ್ಧಿಯಲ್ಲಿ ಪ್ರಮುಖ ಧ್ವನಿಯಾಗಲು ಭಾರತವು ಮುಂದಾಗುತ್ತಿದ್ದಂತೆ ಜಾಗತಿಕ ತಂತ್ರಜ್ಞಾನ ದೈತ್ಯರೊಂದಿಗೆ ಸಹಯೋಗವನ್ನು ಗಾಢಗೊಳಿಸುವ ಉದ್ದೇಶವನ್ನು ಈ ಸಂವಾದವು ಪ್ರತಿಬಿಂಬಿಸುತ್ತದೆ. ಫೆಬ್ರವರಿ 16 ರಿಂದ 21 ರವರೆಗೆ ಭಾರತ್ ಮಂಟಪದಲ್ಲಿ ನಡೆಯಲಿರುವ ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯು ಜಾಗತಿಕ ದಕ್ಷಿಣದಲ್ಲಿ ಇದುವರೆಗೆ…
ಶಿವಮೊಗ್ಗ : ಸೊರಬ ತಾಲ್ಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ಫೆ.24 ಮತ್ತು 25 ರಂದು ಶ್ರೀ ರೇಣುಕಮ್ಮ ದೇವಿ ಜಾತ್ರೆ ಮಹೋತ್ಸವ ನಡೆಯಲಿದೆ. ಈ ಜಾತ್ರೆಯ ವೇಳೆಯಲ್ಲಿ ಬೆತ್ತಲೆ ಸೇವೆಯನ್ನು ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶಿಸಿದ್ದಾರೆ. ಇಂದು ಆದೇಶ ಹೊರಡಿಸಿರುವಂತ ಅವರು, ಸೊರಬದ ಚಂದ್ರಗುತ್ತಿಯ ರೇಣುಕಮ್ಮ ದೇವಿ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಈ 2 ದಿನಗಳ ಕಾಲ ಬೆತ್ತಲೆ ಸೇವೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಆದೇಶಿಸಿದ್ದಾರೆ. ಕರ್ನಾಟಕ ಪೊಲೀಸ್ ಕಾಯ್ದೆ 1963 ರ ಕಲಂ 35 ರನ್ವಯ ರೇಣುಕಮ್ಮ ದೇವಿಯ ಜಾತ್ರಾ ಮಹೋತ್ಸವದಲ್ಲಿ ವರದಾ ನದಿಯಲ್ಲಿ ಧಾರ್ಮಿಕ ಸ್ನಾನ ಮಾಡುವುದು, ದೇವರಿಗೆ ಮುಡಿ ಕೊಡುವುದು, ಪಡ್ಲಿಗಿ ತುಂಬಿಸುವುದು ಮತ್ತು ‘ಬೆತ್ತಲೆ ಸೇವೆ’ ಯನ್ನು ನಿಷೇಧಿಸಿ ಆದೇಶ ಹೊರಡಿಸಿರುತ್ತಾರೆ. ಈ ನಿಷೇಧಾಜ್ಞೆಯು ಶ್ರೀ ರೇಣುಕಮ್ಮ ದೇವಿಯ ರಥೋತ್ಸವ, ಪೂಜಾ ಕಾರ್ಯಗಳು ಮತ್ತು ಧಾರ್ಮಿಕ ವಿಧಿವಿಧಾನಗಳನ್ನು ನಡೆಸುವುದಕ್ಕೆ ಅನ್ವಯಿಸುವುದಿಲ್ಲವೆಂದು ತಿಳಿಸಿದ್ದಾರೆ. https://kannadanewsnow.com/kannada/safaris-to-resume-in-the-state-in-a-phased-manner-minister-ishwar-khandre/ https://kannadanewsnow.com/kannada/there-are-no-rules-for-marriage-hall-authorities-to-verify-the-age-records-of-the-bride-and-groom-high-court/ https://kannadanewsnow.com/kannada/attention-state-government-employees-applications-invited-for-the-departmental-examination-of-the-first-session-of-2026/
ಬೆಂಗಳೂರು: ಮಾನವ-ವನ್ಯಜೀವಿ ಸಂಘರ್ಷ ಅದರಲ್ಲೂ ಹುಲಿ ದಾಳಿಯಿಂದ ಸರಣಿ ಸಾವು ಸಂಭವಿಸಿದ ಹಿನ್ನೆಲೆಯಲ್ಲಿ ಕಳೆದ ನವೆಂಬರ್ 7 ರಿಂದ ಸ್ಥಗಿತಗೊಳಿಸಲಾಗಿದ್ದ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಸಫಾರಿಯನ್ನು ತಾಂತ್ರಿಕ ಸಮಿತಿಯ ವರದಿ ಆಧರಿಸಿ ಹಂತ ಹಂತವಾಗಿ ಪುನಾರಂಭಿಸಲು ನಿರ್ಧರಿಸಿರುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದಲ್ಲಿಂದು ಉನ್ನತಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಪರಿಸರ ಪ್ರವಾಸೋದ್ಯಮದ ಧಾರಣಾ ಸಾಮರ್ಥ್ಯವನ್ನು (Eco-Tourism carrying capacity) ವೈಜ್ಞಾನಿಕವಾಗಿ ನಿಗದಿ ಪಡಿಸಲು ರಚಿಸಲಾಗಿರುವ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದ ತಾಂತ್ರಿಕ ಸಮಿತಿ ನೀಡಿರುವ ಪ್ರಾಥಮಿಕ ವರದಿಯ ಪರಾಮರ್ಶೆ ನಡೆಸಿದರು. ಹೆಗ್ಗಡ ದೇವನಕೋಟೆಯಲ್ಲಿ ರೈತರೂ ಸೇರಿದಂತೆ ಸಾವಿರಾರು ಸ್ಥಳೀಯರು, ರೆಸಾರ್ಟ್ ಸಿಬ್ಬಂದಿ ಪ್ರತಿಭಟನೆ ನಡೆಸಿ ಸಫಾರಿ ನಿಲ್ಲಿಸಿರುವುದರಿಂದ ತಮ್ಮ ಜೀವನೋಪಾಯಕ್ಕೆ ಅಡ್ಡಿಯಾಗಿದ್ದು, ಸಫಾರಿ ಪುನಾರಂಭಿಸಬೇಕು ಎಂದು ಮನವಿ ಮಾಡಿರುವ ಹಿನ್ನೆಲೆಯಲ್ಲಿ ಹಾಗೂ ರಾಜ್ಯ ಮತ್ತು ರಾಷ್ಟ್ರಮಟ್ಟದ ಹಲವು ಮಾಧ್ಯಮಗಳಲ್ಲಿ…
ವಿಜಯಪುರ: ಪತ್ನಿಯನ್ನು ಕೊಂದು ಮನೆಯ ಆವರಣದಲ್ಲೇ ಪತಿಯೊಬ್ಬ ಶವ ಹೂತಿಟ್ಟ ಘಟನೆ ವಿಜಯಪುರದಲ್ಲಿ ನಡೆದಿದೆ. 24 ದಿನಗಳ ಬಳಿಕ ಪತಿಯ ಕೊಲೆ ರಹಸ್ಯವನ್ನು ಪೊಲೀಸರು ಬಯಲು ಮಾಡಿದ್ದಾರೆ. ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟದಲ್ಲಿ ಈ ಘಟನೆ ನಡೆದಿದೆ. ಪತ್ನಿ ಸರೋಜಿನಿಯನ್ನು ಕೊಂದಿರುವಂತ ಪತಿ ಪ್ರಭು, ಮನೆಯ ಆವರಣದಲ್ಲೇ ಶವವನ್ನು ಹೂತಿಟ್ಟಿದ್ದಾನೆ. ಇದಕ್ಕೆ ಕಾರಣ ಪತ್ನಿ ಸರೋಜಿನಿ ಹೆಸರಿನಲ್ಲಿ ಪತಿ ಪ್ರಭು ಸಾಲ ಮಾಡಿದ್ದೇ ಕಾರಣ ಎನ್ನಲಾಗಿದೆ. ಸಾಲದ ವಿಷಯವಾಗಿ ಪತಿ ಪ್ರಭು, ಪತ್ನಿ ಸರೋಜಿನಿ ನಡುವೆ ಆಗಾಗ ಜಗಳ ಕೂಡ ಆಗುತ್ತಿತ್ತು. ಇದೇ ಕಾರಣಕ್ಕೆ ಜನವರಿ.23ರಂದು ಇಬ್ಬರ ಮಧ್ಯೆ ಜಗಳ ಉಂಟಾಗಿತ್ತು. ಈ ವೇಳೆ ಪತ್ನಿ ಸರೋಜಿನಿ ತಲೆಗೆ ಪತಿ ಪ್ರಭು ರಾಡ್ ನಿಂದ ಹೊಡೆದಿದ್ದರು. ಈ ಹೊಡೆದ ಹೊಡೆತಕ್ಕೆ ಪತ್ನಿ ಸರೋಜಿನಿ ಸಾವನ್ನಪ್ಪಿದ್ದರು. ಪತ್ನಿ ಸರೋಜಿನಿ(45) ರಾಡ್ ನಿಂದ ತೆಲೆಗೆ ಹೊಡೆದು ಕೊಂದಂತ ಪತಿ ಪ್ರಭು ರತ್ನಾಕರ, ತಮ್ಮ ಮನೆಯ ಆವರಣದಲ್ಲೇ ಗುಂಡಿ ತೆಗೆದು ಹೂತು ಹಾಕಿದ್ದನು. ತನಿಖೆಗೆ ಇಳಿದಂತ ಪೊಲೀಸರು…
ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ತಂಡವು ಮೊದಲ ಬಾರಿಗೆ ರಣಜಿ ಟ್ರೋಫಿ ಫೈನಲ್ಗೆ ಅರ್ಹತೆ ಪಡೆಯುವ ಮೂಲಕ ಇತಿಹಾಸ ಸೃಷ್ಟಿಸಿದೆ. ನಾಲ್ಕನೇ ಇನ್ನಿಂಗ್ಸ್ನಲ್ಲಿ 126 ರನ್ಗಳ ಗುರಿಯನ್ನು ಬೆನ್ನಟ್ಟಿದ ಅವರು ಸೆಮಿಫೈನಲ್ನಲ್ಲಿ ಸ್ಟಾರ್ಗಳಿಂದ ತುಂಬಿದ ಬಂಗಾಳ ತಂಡವನ್ನು ಸೋಲಿಸಿ ಆರು ವಿಕೆಟ್ಗಳನ್ನು ಹೊಂದಿದ್ದರು. ಆಖಿಬ್ ನಬಿ ಸೆಮಿಫೈನಲ್ನಲ್ಲಿ ಜಮ್ಮು ಮತ್ತು ಕಾಶ್ಮೀರದ ಪರ ತಾರೆಯಾಗಿದ್ದರು, ಅವರು ಪಂದ್ಯದಲ್ಲಿ ಒಂಬತ್ತು ವಿಕೆಟ್ಗಳನ್ನು ಕಬಳಿಸಿದರು, ಇದರಲ್ಲಿ ಮೊದಲ ಇನ್ನಿಂಗ್ಸ್ನಲ್ಲಿ ಐದು ವಿಕೆಟ್ಗಳು ಸೇರಿವೆ ಮತ್ತು ಪಂದ್ಯಶ್ರೇಷ್ಠ ಪ್ರಶಸ್ತಿಯನ್ನೂ ಪಡೆದರು. ಅಬ್ದುಲ್ ಸಮದ್ ಮೊದಲ ಇನ್ನಿಂಗ್ಸ್ನಲ್ಲಿ 82 ರನ್ ಗಳಿಸುವ ಮೂಲಕ ಮತ್ತು ಎರಡನೇ ಇನ್ನಿಂಗ್ಸ್ನಲ್ಲಿ ಅಜೇಯ ಪಾತ್ರ ವಹಿಸುವ ಮೂಲಕ ನಿರ್ಣಾಯಕ ಪಾತ್ರ ವಹಿಸಿದರು. ಪಂದ್ಯಕ್ಕೆ ಸಂಬಂಧಿಸಿದಂತೆ, ಸುದೀಪ್ ಕುಮಾರ್ ಘರಾಮಿ ಅವರ 146 ರನ್ಗಳ ಇನಿಂಗ್ಸ್ ಬಂಗಾಳವು ತನ್ನ ಮೊದಲ ಇನ್ನಿಂಗ್ಸ್ನಲ್ಲಿ 328 ರನ್ಗಳ ಸ್ಪರ್ಧಾತ್ಮಕ ಮೊತ್ತವನ್ನು ಗಳಿಸಲು ಸಹಾಯ ಮಾಡಿತು. ನಂತರ ಮೊಹಮ್ಮದ್ ಶಮಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದರು, ಎಂಟು…
ಗದಗ: ಜಿಲ್ಲೆಯಲ್ಲಿ ಬಸ್ ನಿಲ್ದಾಣದಲ್ಲೇ ವಾಮಾಚಾರ ಮಾಡಲಾಗಿದೆ. ಬಸ್ ನಿಲ್ದಾಣದಲ್ಲಿ ಮಾಡಿದಂತ ವಾಮಾಚಾರ ಕಂಡು ಜನರು ಬೆಚ್ಚಿ ಬಿದ್ದಿರುವಂತ ಘಟನೆ ನಡೆದಿದೆ. ಗದಗ ಜಿಲ್ಲೆಯ ಮುಂಡರಗಿಯ ಹುಡ್ರೋ ಕಾಲೋನಿಯಲ್ಲಿರೋ ಬಸ್ ನಿಲ್ದಾಣದಲ್ಲಿಯೇ ವಾಮಾಚಾರ ನಡೆಸಲಾಗಿದೆ. ಬಸ್ ನಿಲ್ದಾಣದಲ್ಲಿ ಕಲರ್ ಬಣ್ಣದ ರಂಗೋಲಿ ಹಿಟ್ಟಿನಿಂದ ರಂಗೋಲಿ ಹಾಕಿರುವಂತ ದುಷ್ಕರ್ಮಿಗಳು ಅದರಲ್ಲಿ ಕಪ್ಪು ಗೊಂಬೆ, ಮೊಟ್ಟೆ, ಎಲೆ ಅಡಿಕೆ, ನಿಂಬೆ ಹಣ್ಣು ಇರಿಸಿರೋದು ಪತ್ತೆಯಾಗಿದೆ. ಗದಗದ ಮುಂಡರಗಿಯ ಹುಡ್ರೋ ಕಾಲೋನಿಯ ಬಸ್ ನಿಲ್ದಾಣದಲ್ಲಿನ ವಾಮಾಚಾರ ಕಂಡು ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ. ಈ ದುಷ್ ಕೃತ್ಯ ಎಸಗಿದಂತ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಬಂಧಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಆಗಮಿಸಿ, ತನಿಖೆ ಕೈಗೊಂಡಿದ್ದಾರೆ. https://kannadanewsnow.com/kannada/state-government-orders-media-to-conduct-interviews-at-designated-location-in-vidhana-soudha/ https://kannadanewsnow.com/kannada/there-are-no-rules-for-marriage-hall-authorities-to-verify-the-age-records-of-the-bride-and-groom-high-court/
ಬೆಂಗಳೂರು: ಮಾಧ್ಯಮದವರು ವಿಧಾನಸೌಧ ಕಟ್ಟದಲ್ಲಿ ಅವರಿಗೆ ನಿಗದಿಪಡಿಸಲಾದ ಸ್ಥಳದಲ್ಲಿ ಮಾತ್ರ ಸಂದರ್ಶನ ಮಾಡುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಆ ಮೂಲಕ ವಿಧಾನಸೌಧದ ಒಳಗಡೆ ಮಾಧ್ಯಮದವರಿಗೆ ನಿರ್ಬಂಧ ಹೇರಿದ್ದು, ಈಗ ವಿವಾದಕ್ಕೆ ಕಾರಣವಾಗಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ವಾರ್ತಾ ಮತ್ತು ಪ್ರಚಾರ ಇಲಾಖೆಯ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ವಾರ್ತಾ ಮತ್ತು ಪ್ರಚಾರ ಇಲಾಖೆಯು ಶಿಫಾರಸ್ಸು ಮಾಡುವ ಮಾಧ್ಯಮ ಪ್ರತಿನಿಧಿಗಳಿಗೆ ಮಾತ್ರ ಸಿಆಸು ಇಲಾಖೆ(ಕಾರ್ಯಕಾರಿ)ಯಲ್ಲಿ ಗುರುತಿನ ಚೀಟಿ ವಿತರಿಸಲಾಗುತ್ತಿದೆ ಎಂದಿದ್ದಾರೆ. ಈ ರೀತಿರುತಿನ ಚೀಟಿ ಹೊಂದಿರುವ ಎಲ್ಲಾ ಪತ್ರಿಕಾ ಮಾಧ್ಯಮ ಪ್ರತಿನಿಧಿಗಳಿಗೆ ಭದ್ರತಾ ಹಿತದೃಷ್ಟಿಯಿಂದ ವಿಧಾನಸೌಧ ಪಶ್ಚಿಮ ದ್ವಾರದ ಪೋರ್ಟಿಕೋ ಬಳಿ ನಿಗದಿಪಡಿಸಲಾಗಿರುವ ಸ್ಥಳದಲ್ಲಿ ಮಾತ್ರ ಬೈಟ್ ಹೇಳಿಕೆಗಳನ್ನು ಪಡೆದುಕೊಳ್ಳುವಂತೆ ಹಾಗೂ ವಿಧಾನಸೌಧ ಒಳ ಪ್ರವೇಶಿಸುವ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿಗಳು/ಮಾನ್ಯ ಉಪ ತೆಗೆದುಕೊಳ್ಳಲು/ಸಂದರ್ಶನಕ್ಕಾಗಿ ಮುಖ್ಯಮಂತ್ರಿಗಳು/ಮಾನ್ಯ ಸಚಿವರುಗಳು/ಗಣ್ಯ ವ್ಯಕ್ತಿಗಳಿಂದ ಬೈಟ್ ಹಿಂಬಾಲಿಸದಂತೆ ಸೂಕ್ತ ಸಲಹೆ/ಸೂಚನೆಗಳನ್ನು ನೀಡುವೆಂತೆ ತಮಗೆ ತಿಳಿಸಲು ನಿರ್ದೇಶಿಸಿದ್ದಾರೆ. ರಾಜ್ಯ ಸರ್ಕಾರದಿಂದ…
ಶಿವಮೊಗ್ಗ: ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ರೇಡಿಯಾಲಜಿಸ್ಟ್ ತಜ್ಞ ವೈದ್ಯರ ಕೊರತೆಯಿಂದಾಗಿ ರೋಗಿಗಳಿಗೆ ಚಿಕಿತ್ಸೆ ಸಮಸ್ಯೆಯಾಗಿತ್ತು. ಇದೀಗ ರಾಜ್ಯ ಸರ್ಕಾರವು ಕೌನ್ಸಿಲಿಂಗ್ ಮೂಲಕ ರೇಡಿಯಾಲಜಿಸ್ಟ್ ತಜ್ಞ ವೈದ್ಯರನ್ನು ನೇಮಿಸಿ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆದೇಶ ಹೊರಡಿಸಲಾಗಿದ್ದು, 2025ನೇ ಸಾಲಿನಲ್ಲಿ ವೈದ್ಯಕೀಯ ಸ್ನಾತಕೋತ್ತರ, ಡಿಎನ್ ಬಿ ವ್ಯಾಸಂಗ ಪೂರೈಸಿದ ಸೇವಾನಿರತ ವೈದ್ಯರುಗಳಿಗೆ TRIAD ಸಮಾಲೋಚನೆಯಲ್ಲಿ ಸ್ಥಳ ನಿಯುಕ್ತಿಗೊಳಿಸಲಾಗಿದೆ. ಈ ಆದೇಶದಂತೆ ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಧಾರವಾಡದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮೆಡಿಕಲ್ ಕಾಲೇಜಿನಲ್ಲಿ ಎಂ.ಡಿ ರೇಡಿಯಾಲಜಿಸ್ಟ್ ವ್ಯಾಸಂಗ ಮಾಡಿದಂತ ಡಾ.ಅಪೂರ್ವ.ಕೆ.ಎ ಅವರನ್ನು ನೇಮಕ ಮಾಡಲಾಗಿದೆ. https://kannadanewsnow.com/kannada/honeytrap-gang-arrested-for-extorting-money-by-threatening-people-in-hassan/ https://kannadanewsnow.com/kannada/there-are-no-rules-for-marriage-hall-authorities-to-verify-the-age-records-of-the-bride-and-groom-high-court/














