Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಕಲಬುರಗಿ: ತುಮಕೂರಿನಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ ಆಯೋಜಿಸಿರುವುದು ಯಾವ ಪುರುಷಾರ್ಥಕ್ಕೆ. ಈ ಮೂರು ವರ್ಷದಲ್ಲಿ ಸರ್ಕಾರ ಕಡಿದು ಕಟ್ಟೆ ಹಾಕಿದ್ದು ಏನು ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಅವರು ಪ್ರಶ್ನಿಸಿದ್ದಾರೆ. ಈ ಕೂರಿತು ಪತ್ರಿಕಾ ಪ್ರಕಟಣೆ ಹೋರಡಿಸಿದ ಅವರು, ಬಿಜೆಪಿ ಸರ್ಕಾರದ ಅವಧಿಯ ಯೋಜನೆಗಳನ್ನು ತಮ್ಮ ಸರ್ಕಾರದ ಯೋಜನೆಗಳು ಎಂಬಂತೆ ಈಗಿನ ಕಾಂಗ್ರೆಸ್ ಸರ್ಕಾರ ಬಿಂಬಿಸಿಕೊಳ್ಳುತ್ತಿದೆ. ಹುಬ್ಬಳ್ಳಿಯಲ್ಲಿ ಭಾರಿ ಸಂಖ್ಯೆಯಲ್ಲಿ ಹಕ್ಕುಪತ್ರ ವಿತರಣೆ ಕಾರ್ಯಕ್ರಮವನ್ನು ಈ ಸರ್ಕಾರ ಆಯೋಜಿಸಿತ್ತು. ಅದೂ ಕೂಡ ಬಿಜೆಪಿ ಸರ್ಕಾರದ ನಿರ್ಧಾರ. ಹಳೆ ಸರ್ಕಾರದ ಕೆಲಸಗಳನ್ನು ತಮ್ಮ ಕೆಲಸ ಎಂದು ಜನರಿಗೆ ತೋರಿಸುತ್ತಿದ್ದಾರೆ ಎಂದು ದೂರಿದರು. ತುಮಕೂರು ಸಮಾವೇಶ ನಗೆಪಾಟಲಿಗೆ ಈಡಾಗಿದೆ. ಇದರ ಬಗ್ಗೆ ಜನರೇ ನಗುತ್ತಿದ್ದಾರೆ. ಬಿಜೆಪಿ ಈ ಸಮಾವೇಶಕ್ಕೆ ಕೌಂಟರ್ ಆಗಿ ಏನೂ ಮಾಡುವುದಿಲ್ಲ. ಎಂದರು. ಇವರು ಏನಾದರೂ ಸಾಧನೆ ಮಾಡಿದ್ದರೆ ಬಾಗಲಕೋಟೆ ಮತ್ತು ದಾವಣಗೆರೆ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿಗಳು ಹಲವು ದಿನ ಬೀಡು ಬಿಡಬೇಕಾದ ಸ್ಥಿತಿ ಇರುತ್ತಿರಲಿಲ್ಲ. ಮತದಾನಕ್ಕೂ…
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನಾದ್ಯಂತ ಜೂನ್ 1ರಿಂದ ಶಾಲೆಗಳು ಪ್ರಾರಂಭಗೊಳ್ಳುತ್ತಿದ್ದು, ಶಾಲಾ ಆರಂಭೋತ್ಸವದ ಮೊದಲ ದಿನವೇ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ (BEO) ಸದಾನಂದ ಸ್ವಾಮಿ ತಿಳಿಸಿದರು. ಇಲ್ಲಿನ ಗುರುಭವನದಲ್ಲಿ ಮಂಗಳವಾರ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ತಾಲ್ಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಪಠ್ಯಪುಸ್ತಕಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು. ದಾಖಲಾದ ಎಲ್ಲಾ ಮಕ್ಕಳಿಗೆ ಪುಸ್ತಕ ವಿತರಣೆ 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾಲ್ಲೂಕಿನ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಉಚಿತವಾಗಿ ಮತ್ತು ಖಾಸಗಿ ಶಾಲೆಗಳಿಗೆ ನಿಗದಿತ ಬೆಲೆಯಲ್ಲಿ ಪಠ್ಯಪುಸ್ತಕಗಳನ್ನು ವಿತರಿಸಲಾಗಿದೆ. ಇವುಗಳನ್ನು ಈಗಾಗಲೇ ಸಿ.ಆರ್.ಪಿ.ಗಳ (CRP) ಮೂಲಕ ಆಯಾ ಶಾಲೆಗಳಿಗೆ ತಲುಪಿಸಲಾಗಿದೆ. ಜೂನ್ 1ರಂದೇ ದಾಖಲಾದ ಎಲ್ಲಾ ಮಕ್ಕಳಿಗೆ ಪುಸ್ತಕ ವಿತರಿಸುವಂತೆ ಮತ್ತು ಶಿಕ್ಷಕರು ಸಿಆರ್ಪಿಗಳ ಮೂಲಕ ಪುಸ್ತಕ ಪಡೆದು ಸಮರ್ಪಕವಾಗಿ ದಾಖಲಿಸಿಕೊಳ್ಳುವಂತೆ ಬಿಇಓ ಸೂಚನೆ ನೀಡಿದರು. ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗೆ ಇಂದಿನಿಂದಲೇ ತಯಾರಿ ತಾಲ್ಲೂಕಿನಲ್ಲಿ 2025-26ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ…
ಶಿವಮೊಗ್ಗ: ಮಠಮಂದಿರಗಳು ಸಂಸ್ಕೃತ ಭಾಷೆಯನ್ನು ಬೆಳೆಸುವ ನಿಟ್ಟಿನಲ್ಲಿ ತಮ್ಮದೇ ಆದ ವಿಶಿಷ್ಟ ಕೊಡುಗೆಯನ್ನು ನೀಡುತ್ತಿವೆ. ಸಂಸ್ಕೃತ ಪ್ರಸಾರ ಮಾಡುವ ನಿಟ್ಟಿನಲ್ಲಿ ಶಿಬಿರಗಳನ್ನು ಆಯೋಜಿಸಿರುವ ಇಲ್ಲಿನ ಶಂಕರಮಠದ ಪರಿಕಲ್ಪನೆ ಅತ್ಯಂತ ಅಭಿನಂದಾರ್ಹ ಎಂದು ಸಾಗರದಲ್ಲಿ ಆರೋಗ್ಯ ಇಲಾಖೆ ನೌಕರರ ಸಂಘದ ಹಿರಿಯ ಸಲಹೆಗಾರರಾದ ಮಾ.ಸ. ನಂಜುಂಡಸ್ವಾಮಿ ತಿಳಿಸಿದರು. ಇಲ್ಲಿನ ಶೃಂಗೇರಿ ಶಂಕರಮಠದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ‘ಬಾಲಭಾರತಿ ಸಂಸ್ಕಾರ ಸುಧಾ ಬೇಸಿಗೆ ಶಿಬಿರ’ದ ಸಮಾರೋಪ ಸಮಾರಂಭ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಉಚಿತ ಶಿಬಿರದ ಮೂಲಕ ಸಂಸ್ಕಾರ ಬಿತ್ತುವ ಕೆಲಸ: ಕಳೆದ 14 ದಿನಗಳ ಕಾಲ ನ್ಯಾಯವಾದಿ ಶ್ರಾವ್ಯ ಹೆಗಡೆ ದಂಪತಿಗಳ ನೇತೃತ್ವದಲ್ಲಿ ನಡೆದ ಈ ಶಿಬಿರವು ಮಕ್ಕಳಲ್ಲಿ ಸಂಸ್ಕಾರ ಬಿತ್ತುವ ಕೆಲಸ ಮಾಡಿದೆ. ಇತ್ತೀಚಿನ ವರ್ಷಗಳಲ್ಲಿ ಬೇಸಿಗೆ ರಜಾ ಶಿಬಿರಗಳು ಕೇವಲ ವ್ಯವಹಾರಿಕ ಕೇಂದ್ರಗಳಾಗುತ್ತಿದ್ದು, ಹಣ ಗಳಿಕೆಗೆ ಮಾತ್ರ ಸೀಮಿತವಾಗುತ್ತಿವೆ ಎಂಬ ದೂರುಗಳಿವೆ. ಆದರೆ, ಶಂಕರಮಠವು ಯಾವುದೇ ಶುಲ್ಕವಿಲ್ಲದೆ ಉಚಿತವಾಗಿ ಮಕ್ಕಳಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಕಲ್ಪಿಸಿ ಈ…
ಬೆಳಗಾವಿ: ಬಡ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡುವ ಯೋಜನೆಯಲ್ಲಿ ಕೋಟ್ಯಂತರ ರೂಪಾಯಿ ಸರ್ಕಾರದ ಹಣ ದುರುಪಯೋಗಪಡಿಸಿಕೊಂಡ ಆರೋಪದ ಹಿನ್ನೆಲೆಯಲ್ಲಿ, ಕೊಳಚೆ ನಿರ್ಮೂಲನಾ ಮಂಡಳಿಯ (Slum Development Board) ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಮನೆ ಮತ್ತು ಕಚೇರಿ ಸೇರಿದಂತೆ ಒಟ್ಟು 8 ಕಡೆಗಳಲ್ಲಿ ಲೋಕಾಯುಕ್ತ ಪೊಲೀಸರು ಭರ್ಜರಿ ದಾಳಿ ನಡೆಸಿದ್ದಾರೆ. ಬೆಳಗಾವಿ ಲೋಕಾಯುಕ್ತ ಕಚೇರಿಯಲ್ಲಿ ದಾಖಲಾಗಿದ್ದ ವಂಚನೆ ಹಾಗೂ ಸರ್ಕಾರದ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಠಾತ್ ಕಾರ್ಯಾಚರಣೆ ಕೈಗೊಳ್ಳಲಾಗಿದೆ. 600 ಕುಟುಂಬಗಳ ಮನೆ ಹಣ ಲೂಟಿ: 23 ಕೋಟಿ ವಂಚನೆ! ಬೆಳಗಾವಿ ಕೊಳಚೆ ನಿರ್ಮೂಲನಾ ಮಂಡಳಿಯ ಅಧಿಕಾರಿಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಡವರಿಗಾಗಿ ನೀಡಿದ್ದ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸುಮಾರು 600 ಬಡ ಕುಟುಂಬಗಳಿಗೆ ಮನೆ ನಿರ್ಮಾಣ ಮಾಡಿಕೊಡದೆಯೇ ಹಣ ಲೂಟಿ ಮಾಡಲಾಗಿದೆ. ಯೋಜನೆಗಾಗಿ ಬಿಡುಗಡೆಯಾಗಿದ್ದ ಒಟ್ಟು 33 ಕೋಟಿ ರೂಪಾಯಿ ಅನುದಾನದ ಪೈಕಿ, ಬರೋಬ್ಬರಿ 23 ಕೋಟಿ ರೂಪಾಯಿ ಹಣವನ್ನು ಅಧಿಕಾರಿಗಳು ಹಾಗೂ…
ತುಮಕೂರು: ರಾಜ್ಯದ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಕಟಿಬದ್ಧವಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ರಾಜ್ಯ ಸರ್ಕಾರಕ್ಕೆ ಮೂರು ವರ್ಷಗಳು ಪೂರೈಸಿರುವ ಸಂಭ್ರಮದ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ “ಪ್ರಗತಿಯತ್ತ ಕರ್ನಾಟಕ” ಮೂರು ವರ್ಷಗಳ ಸಾರ್ಥಕ ಸೇವೆಯ ಸಮರ್ಪಣೆ ಸಮಾವೇಶವನ್ನು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ತುಮಕೂರು ಜಿಲ್ಲೆಯಲ್ಲಿ ನಡೆದಿರುವ 682 ಕೋಟಿ ಮೊತ್ತದ ಬೃಹತ್ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಹಾಗೂ ಕಂದಾಯ ಇಲಾಖೆಯ ಹಕ್ಕು ಪತ್ರಗಳನ್ನು ವಿತರಿಸಿದ ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು ಬಡವರು, ರೈತರು, ಕಾರ್ಮಿಕರು ಮತ್ತು ಶೋಷಿತರ ಸ್ವಾಭಿಮಾನದ ಬದುಕಿಗಾಗಿ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಇದಕ್ಕಾಗಿ ಈ ನಾಲ್ಕು ವರ್ಷಗಳಲ್ಲಿ ಬರೋಬ್ಬರಿ 2 ಲಕ್ಷ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗುತ್ತಿದೆ ಎಂದರು. ಹಲವು ದಶಕಗಳಿಂದ ರಾಜ್ಯದ ಹಟ್ಟಿ, ತಾಂಡ,…
ಬೆಂಗಳೂರು: ತಾತ್ಕಾಲಿಕವಾಗಿ ವಿದ್ಯುತ್ ಮೀಟರ್ಗೆ ಸಂಪರ್ಕ ಕಲ್ಪಿಸಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಬೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತ (AEE) ಹಾಗೂ ವಿದ್ಯುತ್ ಗುತ್ತಿಗೆದಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ನಗರದ ಜೆ.ಪಿ. ನಗರದ ಬಳಿಯ ಗೌರವ್ ನಗರದಲ್ಲಿರುವ ಬೆಸ್ಕಾಂ ಕಚೇರಿಯಲ್ಲಿ ಈ ದಾಳಿ ನಡೆದಿದ್ದು, ಬೆಸ್ಕಾಂ ಎಇಇ ಮನೋಜ್ ಕುಮಾರ್ ಮತ್ತು ವಿದ್ಯುತ್ ಗುತ್ತಿಗೆದಾರ ಕಾಂತರಾಜು ಬಂಧಿತ ಆರೋಪಿಗಳಾಗಿದ್ದಾರೆ. ಘಟನೆಯ ವಿವರ: ರಘುರಾಜ್ ಎಂಬುವವರು ತಮ್ಮ ಕಟ್ಟಡದ ತಾತ್ಕಾಲಿಕ ಮೀಟರ್ಗೆ ವಿದ್ಯುತ್ ಪೂರೈಕೆ ಕಲ್ಪಿಸುವಂತೆ ಬೆಸ್ಕಾಂ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಈ ಕೆಲಸ ಮಾಡಿಕೊಡಲು ಎಇಇ ಮನೋಜ್ ಕುಮಾರ್ 50,000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅಲ್ಲದೆ, ಲಂಚದ ಹಣವನ್ನು ವಿದ್ಯುತ್ ಗುತ್ತಿಗೆದಾರ ಕಾಂತರಾಜು ಕೈಗೆ ನೀಡುವಂತೆ ಅರ್ಜಿದಾರ ರಘುರಾಜ್ ಅವರಿಗೆ ಸೂಚಿಸಿದ್ದರು. ಲಂಚ ನೀಡಲು ಇಷ್ಟವಿಲ್ಲದ ರಘುರಾಜ್ ಅವರು ಈ ಕುರಿತು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ, ಇಂದು ರಘುರಾಜ್ ಅವರಿಂದ ಗುತ್ತಿಗೆದಾರ ಕಾಂತರಾಜು 50,000 ರೂಪಾಯಿ ಲಂಚದ ಹಣವನ್ನು…
ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್. ಅಂಬೇಡ್ಕರ್, ಅಟಲ್ ಬಿಹಾರಿ ವಾಜಪೇಯಿ ಸೇರಿದಂತೆ ಇತರ ಸರ್ಕಾರಿ ಹಾಸ್ಟೆಲ್ ಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ಈ ಸೀಟು ಹಂಚಿಕೆಗೆ ಏನಾದರೂ ಆಕ್ಷೇಪಣೆಗಳು ಅಥವಾ ಬದಲಾವಣೆಗಳು ಇದ್ದಲ್ಲಿ ಮೇ 21ರೊಳಗೆ ಆಯಾ ಶಾಲೆಗಳಲ್ಲಿಯೇ ಲಿಖಿತವಾಗಿ ಸಲ್ಲಿಸಲು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ಸೂಚಿಸಿದ್ದಾರೆ.
ಶಿವಮೊಗ್ಗ: ಮೀಸಲು ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಜಾಗದಲ್ಲಿ ಅಕ್ರಮವಾಗಿ ಮಣ್ಣಿನಲ್ಲಿ ಮುಚ್ಚಿಡಲಾಗಿದ್ದ ಬೀಟೆ ಜಾತಿಯ ಮರದ ನಾಟಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಯಶಸ್ವಿಯಾಗಿ ಪತ್ತೆ ಹಚ್ಚಿ, ಜಪ್ತಿ ಮಾಡಿದ್ದಾರೆ. ಈ ಸಂಬಂಧ ಹೊಸನಗರ ವಲಯ ಅರಣ್ಯ ಕಚೇರಿಯಲ್ಲಿ ಮೊಕದ್ದಮೆ ದಾಖಲಾಗಿದೆ. ಘಟನೆಯ ವಿವರ ಖಚಿತ ಮಾಹಿತಿ ಮೇರೆಗೆ ಹೊಸನಗರ ತಾಲ್ಲೂಕಿನ ಕೆರೆಹಳ್ಳಿ ಹೋಬಳಿ, ನಂದ್ರಿ ಗ್ರಾಮದ ಸರ್ವೆ ನಂಬರ್ 15ರ ನಂದ್ರಿ ಮೀಸಲು ಅರಣ್ಯಕ್ಕೆ ಹೊಂದಿಕೊಂಡಿರುವ ವರ್ಗಾವಣೆಗೊಂಡ ಅರಣ್ಯ ಪ್ರದೇಶದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದರು. ಅಲ್ಲಿನ ಒತ್ತುವರಿ ಜಮೀನಿನಲ್ಲಿರುವ ಕೃಷಿ ಹೊಂಡದ ಪಕ್ಕದಲ್ಲಿ, ಅಂದಾಜು 2 ರಿಂದ 3 ವರ್ಷಗಳ ಹಿಂದೆ ಕಡಿತಲೆ ಮಾಡಲಾಗಿದ್ದ 14 ಬೀಟೆ ಜಾತಿಯ ಮರದ ನಾಟದ ತುಂಡುಗಳನ್ನು ಮಣ್ಣಿನಲ್ಲಿ ಮುಚ್ಚಿ ಅಕ್ರಮವಾಗಿ ದಾಸ್ತಾನು ಮಾಡಿಟ್ಟಿರುವುದು ಪತ್ತೆಯಾಗಿದೆ. ಸದ್ಯ ಈ ಎಲ್ಲಾ ಬೀಟೆ ಮರದ ತುಂಡುಗಳನ್ನು ಅರಣ್ಯ ಇಲಾಖೆಯು ತನ್ನ ವಶಕ್ಕೆ (ಅಮಾನತ್ತು) ಪಡೆದುಕೊಂಡಿದೆ. ಇದರ ಮೌಲ್ಯ 6.50 ಲಕ್ಷಕ್ಕೂ ಹೆಚ್ಚು ಎಂದು ಹೇಳಲಾಗುತ್ತಿದೆ. ಆರೋಪಿ…
ಮಡಿಕೇರಿ: ಕೊಡಗಿನ ಪ್ರಸಿದ್ಧ ದುಬಾರೆ ಆನೆ ಶಿಬಿರದಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಸಾಕಾನೆಗಳ ನಡುವೆ ನಡೆದ ಭೀಕರ ಕಾಳಗದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ‘ಮಾರ್ತಾಂಡ’ ಆನೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದೆ. ಇದೇ ಕಾಳಗದ ವೇಳೆ ಆನೆಗಳ ಕೆಳಗೆ ಸಿಲುಕಿ ಪ್ರವಾಸಿ ಮಹಿಳೆಯೊಬ್ಬರು ಸಹ ಮೃತಪಟ್ಟಿದ್ದಾರೆ. ಈ ಅನಿರೀಕ್ಷಿತ ಮತ್ತು ಊಹಿಸಲೂ ಆಗದ ದುರ್ಘಟನೆಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ದಸರಾ ಆನೆ ‘ಕಂಜನ್’ಗೆ ಶಾಕ್: ಜಂಬೂಸವಾರಿಯಿಂದ ಕೊಕ್! ಮಾರ್ತಾಂಡ ಆನೆಯ ಮೇಲೆ ದಾಳಿ ನಡೆಸಿ, ಸಾವಿಗೆ ಕಾರಣವಾದ ದಸರಾ ಆನೆ ‘ಕಂಜನ್’ ವಿರುದ್ಧ ಅರಣ್ಯ ಇಲಾಖೆ ಕಠಿಣ ಕ್ರಮ ಕೈಗೊಂಡಿದೆ. ಇನ್ಮುಂದೆ ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿಗೆ ಕಂಜನ್ ಆನೆಯನ್ನು ಬಳಸದಂತೆ ಸಚಿವ ಈಶ್ವರ ಖಂಡ್ರೆ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಈ ಮೂಲಕ ಕಂಜನ್ ಆನೆಯನ್ನು ದಸರಾ ಮಹೋತ್ಸವದಿಂದ ಸಂಪೂರ್ಣವಾಗಿ ಹೊರಗಿಡಲಾಗಿದೆ.…
ಕುಕನೂರು: ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಬಾಲಕಿಯರು ಕಾಲುಜಾರಿ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿರುವ ಅತ್ಯಂತ ದಾರುಣ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲ್ಲೂಕಿನ ಯರೇಹಂಚಿನಾಳ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗದಗ ಜಿಲ್ಲೆಯ ತಿಮ್ಮಾಪುರ ಗ್ರಾಮದ ನಿವಾಸಿಗಳಾದ ಲಕ್ಷ್ಮವ್ವ ಹರಣಿಶಿಕಾರಿ ಮತ್ತು ಮುತ್ತವ್ವ ಹರಣಿಶಿಕಾರಿ ಎಂದು ಗುರುತಿಸಲಾಗಿದೆ. ಬಟ್ಟೆ ತೊಳೆಯಲು ಹೋದಾಗ ಸಂಭವಿಸಿದ ದುರಂತ: ಬಾಲಕಿಯರಿಬ್ಬರು ಯರೇಹಂಚಿನಾಳ ಗ್ರಾಮದ ಬಳಿ ಇರುವ ಕೃಷಿ ಹೊಂಡಕ್ಕೆ ಬಟ್ಟೆ ತೊಳೆಯಲೆಂದು ಹೋಗಿದ್ದರು. ಈ ಸಂದರ್ಭದಲ್ಲಿ ಬಟ್ಟೆ ತೊಳೆಯುವಾಗ ಆಕಸ್ಮಿಕವಾಗಿ ಕಾಲುಜಾರಿ ಹೊಂಡದ ನೀರಿಗೆ ಬಿದ್ದಿದ್ದಾರೆ. ನೀರಿನ ಆಳ ಹೆಚ್ಚಾಗಿದ್ದರಿಂದ ಇಬ್ಬರಿಗೂ ಈಜಲು ಬಾರದೆ ಹೊಂಡದಲ್ಲೇ ಮುಳುಗಿ ಉಸಿರುಗಟ್ಟಿ ಕೊನೆಯುಸಿರೆಳೆದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಸಾರ್ವಜನಿಕರು ಬಾಲಕಿಯರ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಒಂದೇ ಗ್ರಾಮದ ಇಬ್ಬರು ಹೆಣ್ಣುಮಕ್ಕಳು ಈ ರೀತಿ ದುರ್ಮರಣಕ್ಕೀಡಾಗಿರುವುದು ಹೆತ್ತವರ ಒಡಲು ಸೀಳುವಂತೆ ಮಾಡಿದ್ದು, ತಿಮ್ಮಾಪುರ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಘಟನೆಗೆ ಸಂಬಂಧಿಸಿದಂತೆ ಕುಕನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು…














