Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಒಂದು ಸಣ್ಣ ವಿಡಿಯೋ ಇಡೀ ನಗರವನ್ನೇ ಆತಂಕಕ್ಕೆ ತಳ್ಳಬಲ್ಲದು ಎಂಬುದಕ್ಕೆ ಬೆಂಗಳೂರಿನ ಈ ‘ಜಾಂಬಿ ಡ್ರಗ್’ ಪ್ರಕರಣವೇ ಸಾಕ್ಷಿ. ರಸ್ತೆಯಲ್ಲಿ ವ್ಯಕ್ತಿಯೊಬ್ಬ ಕಿಂಚಿತ್ತೂ ಚಲನೆಯಿಲ್ಲದೆ, ಕಲ್ಲಿನಂತೆ ನಿಂತಿರುವ ವಿಡಿಯೋ ಕಂಡು ಬೆಚ್ಚಿಬಿದ್ದಿದ್ದ ಜನತೆಗೆ ಈಗ ಸಮಾಧಾನಕರ ಸುದ್ದಿಯೊಂದು ಸಿಕ್ಕಿದೆ. ಬೆಂಗಳೂರು ಪೊಲೀಸ್ ಕಮೀಷನರ್ ಸೀಮಂತ್ ಕುಮಾರ್ ಸಿಂಗ್ ಈ ಕುರಿತು ತನಿಖೆ ನಡೆಸಿ, ಆತಂಕಕ್ಕೆ ಯಾವುದೇ ಕಾರಣವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಸಲಿಗೆ ಏನಿದು ‘ಜಾಂಬಿ ಡ್ರಗ್’ ವದಂತಿ? ‘ಎಕ್ಸ್’ (X) ಮತ್ತು ಇನ್ಸ್ಟಾಗ್ರಾಮ್ನಲ್ಲಿ ವೈರಲ್ ಆಗಿದ್ದ ವಿಡಿಯೋದಲ್ಲಿ, ಬಾಗಲೂರು ಭಾಗದ ನಿಟ್ಟೆ ಮೀನಾಕ್ಷಿ ಕಾಲೇಜು ಬಳಿ ವ್ಯಕ್ತಿಯೊಬ್ಬ ಅರೆಪ್ರಜ್ಞಾವಸ್ಥೆಯಲ್ಲಿ, ಯಾವುದೇ ಅರಿವಿಲ್ಲದೆ ದೀರ್ಘಕಾಲ ನಿಂತಿರುವುದು ಕಂಡುಬಂದಿತ್ತು. ಇದನ್ನು ಕಂಡ ಕೆಲವು ನೆಟ್ಟಿಗರು, ಅಮೆರಿಕದಲ್ಲಿ ಭೀತಿ ಹುಟ್ಟಿಸಿರುವ ‘ಕ್ಸೈಲಾಜಿನ್’ (Xylazine) ಎಂಬ ಮಾರಕ ‘ಜಾಂಬಿ ಡ್ರಗ್’ ಬೆಂಗಳೂರಿಗೆ ಕಾಲಿಟ್ಟಿದೆ ಎಂದು ಪೋಸ್ಟ್ ಮಾಡಿದ್ದರು. “ಬೆಂಗಳೂರು ‘ಉಡ್ತಾ ಬೆಂಗಳೂರು’ ಆಗುತ್ತಿದೆ, ಪೋಷಕರೇ ಎಚ್ಚರ!” ಎಂಬ ಒಕ್ಕಣೆಯೊಂದಿಗೆ…
ಬೆಂಗಳೂರು: “ಕ್ರಿಮಿನಲ್ ಕಾನೂನುಗಳನ್ನು ಮನುಷ್ಯರ ವಿರುದ್ಧ ಬಳಸಬಹುದೇ ಹೊರತು, ಜೀವವಿಲ್ಲದ ವಸ್ತುಗಳ (Inanimate Objects) ವಿರುದ್ಧವಲ್ಲ” ಎಂಬ ಮಹತ್ವದ ವೀಕ್ಷಣೆಯೊಂದಿಗೆ ಕರ್ನಾಟಕ ಹೈಕೋರ್ಟ್ ಡ್ರೋನ್ ಹಾರಾಟಕ್ಕೆ ಸಂಬಂಧಿಸಿದ ಎಫ್ಐಆರ್ ಒಂದನ್ನು ರದ್ದುಗೊಳಿಸಿದೆ. ಪ್ರಕರಣದ ಹಿನ್ನೆಲೆ: ಬೆಂಗಳೂರಿನ ಯಲಹಂಕ ಸಮೀಪದ ಖಾಸಗಿ ಆಸ್ತಿಯೊಂದರ ಮೇಲೆ ಡ್ರೋನ್ ಹಾರಾಟ ನಡೆಸಲಾಗಿತ್ತು ಎಂಬ ಆರೋಪದ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಈ ಡ್ರೋನ್ ಹಾರಾಟವು ಅತಿಕ್ರಮ ಪ್ರವೇಶ (Trespass) ಮತ್ತು ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡಿದೆ ಎಂದು ದೂರು ನೀಡಲಾಗಿತ್ತು. ಈ ಎಫ್ಐಆರ್ ರದ್ದು ಕೋರಿ ಡ್ರೋನ್ ಮಾಲೀಕರು ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ನೀಡಿದ ಪ್ರಮುಖ ಅಂಶಗಳು: ನಿರ್ಜೀವ ವಸ್ತುವಿನ ಅತಿಕ್ರಮಣ: ಭಾರತೀಯ ದಂಡ ಸಂಹಿತೆಯ (IPC) ಪ್ರಕಾರ ‘ಅತಿಕ್ರಮಣ’ (Trespass) ಎಂದರೆ ಒಬ್ಬ ವ್ಯಕ್ತಿಯು ಮತ್ತೊಬ್ಬರ ಆಸ್ತಿಗೆ ಉದ್ದೇಶಪೂರ್ವಕವಾಗಿ ಪ್ರವೇಶ ಮಾಡುವುದು. ಆದರೆ, ಡ್ರೋನ್ ಎಂಬುದು ಒಂದು ಯಂತ್ರ. ಒಂದು ಯಂತ್ರವು ತನ್ನಷ್ಟಕ್ಕೆ ತಾನೇ ಅಪರಾಧ ಎಸಗುವ ಉದ್ದೇಶ ಹೊಂದಿರಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.…
ಪ್ರಯಾಗ್ರಾಜ್ (ಯುಪಿ): ಸರ್ಕಾರದ ‘ಸರ್ವಾಧಿಕಾರಿ’ ಧೋರಣೆಯ ಆದೇಶಗಳು ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವಾದ ಪತ್ರಿಕಾ ರಂಗದ ಸ್ವಾಯತ್ತತೆಯನ್ನು ಕುಂದಿಸಬಹುದು ಎಂದು ಅಲಹಾಬಾದ್ ಹೈಕೋರ್ಟ್ ಎಚ್ಚರಿಸಿದೆ. ಪತ್ರಿಕೆಯೊಂದಕ್ಕೆ ಸರ್ಕಾರಿ ಜಾಹೀರಾತುಗಳನ್ನು ಸ್ಥಗಿತಗೊಳಿಸಿದ ಜಿಲ್ಲಾಧಿಕಾರಿಯ ಕ್ರಮವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಪ್ರಕರಣದ ಹಿನ್ನೆಲೆ: ಪ್ರಖ್ಯಾತ ಹಿಂದಿ ಪತ್ರಿಕೆ ‘ಅಮರ್ ಉಜಾಲ’ (Amar Ujala) ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ವಿವೇಕ್ ಸರನ್ ಮತ್ತು ಅಜಿತ್ ಕುಮಾರ್ ಅವರಿದ್ದ ಪೀಠ ನಡೆಸಿತು. ಸಂಭಾಲ್ ಜಿಲ್ಲೆಯ ಗುರುದ್ವಾರ ವಿವಾದವೊಂದಕ್ಕೆ ಸಂಬಂಧಿಸಿದಂತೆ ಪತ್ರಿಕೆಯು ವರದಿಯೊಂದನ್ನು ಪ್ರಕಟಿಸಿತ್ತು. ಈ ವರದಿಯಿಂದ ಅಸಮಾಧಾನಗೊಂಡ ಜಿಲ್ಲಾಧಿಕಾರಿ (DM), ಪತ್ರಿಕೆಗೆ ನೀಡಲಾಗುತ್ತಿದ್ದ ಸರ್ಕಾರಿ ಜಾಹೀರಾತುಗಳನ್ನು ಸ್ಥಗಿತಗೊಳಿಸಿ ಆದೇಶ ಹೊರಡಿಸಿದ್ದರು. ನ್ಯಾಯಾಲಯದ ಪ್ರಮುಖ ವೀಕ್ಷಣೆಗಳು: ಸ್ವಾಯತ್ತತೆಗೆ ಧಕ್ಕೆ: “ಅಧಿಕಾರಿಗಳು ಹೊರಡಿಸುವ ಇಂತಹ ಸರ್ವಾಧಿಕಾರಿ ಆದೇಶಗಳು ಪತ್ರಿಕಾ ರಂಗದ ಸ್ವತಂತ್ರ ಅಸ್ತಿತ್ವದ ಮೇಲೆ ನೇರ ಪ್ರಹಾರ ಮಾಡುತ್ತವೆ” ಎಂದು ಪೀಠವು ಅಸಮಾಧಾನ ವ್ಯಕ್ತಪಡಿಸಿದೆ. ತಿದ್ದುಪಡಿ ಪ್ರಕಟಿಸಿದರೂ ಕ್ರಮ: ಪತ್ರಿಕೆಯು ತನ್ನ…
ಬೆಂಗಳೂರು: ನಗರದಲ್ಲಿ ‘ಝಾಂಬಿ ಡ್ರಗ್’ (Zombie Drug) ಹಾವಳಿ ಶುರುವಾಗಿದೆ ಎಂಬಂತೆ ವೈರಲ್ ಆಗಿದ್ದ ವಿಡಿಯೋ ಸಂಪೂರ್ಣ ಆಧಾರರಹಿತವಾಗಿದ್ದು, ಇಂತಹ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ತನಿಖೆಯಲ್ಲಿ ಬಯಲಾದ ಸತ್ಯಾಂಶ: ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರವಾಗಿ ವರ್ತಿಸುತ್ತಿದ್ದ ಯುವಕನ ವಿಡಿಯೋವೊಂದು ‘ಝಾಂಬಿ ಡ್ರಗ್’ ಪ್ರಭಾವ ಎಂದು ಬಿಂಬಿತವಾಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಆಯುಕ್ತರು, “ವಿಡಿಯೋದಲ್ಲಿದ್ದ ಯುವಕನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಆತ ಯಾವುದೇ ಮಾದಕ ದ್ರವ್ಯ ಸೇವಿಸಿಲ್ಲ ಎಂಬುದು ದೃಢಪಟ್ಟಿದೆ. ಕೇವಲ ಊಹೆಗಳ ಮೇಲೆ ಒಬ್ಬ ವ್ಯಕ್ತಿಯ ಬಗ್ಗೆ ಅಪಪ್ರಚಾರ ಮಾಡುವುದು ಅಪರಾಧ,” ಎಂದು ತಿಳಿಸಿದ್ದಾರೆ. ಪ್ರಮುಖ ಬೆಳವಣಿಗೆಗಳು: ವಿಡಿಯೋ ಅಪ್ಲೋಡ್ ಮಾಡಿದವನ ಬಂಧನ: ಸುಳ್ಳು ಮಾಹಿತಿಯೊಂದಿಗೆ ಮೊದಲು ವಿಡಿಯೋ ಹಂಚಿಕೊಂಡಿದ್ದ ವ್ಯಕ್ತಿಯನ್ನು ಬಾಗಲೂರು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಬಂಧಿತ ವ್ಯಕ್ತಿ ತಾನು ಮಾಡಿದ ತಪ್ಪಿಗೆ ಕ್ಷಮೆ ಯಾಚಿಸಿ ವಿಡಿಯೋ ಬಿಡುಗಡೆ ಮಾಡಿದ್ದಾನೆ.…
ನವದೆಹಲಿ: ವಿವಾದಾತ್ಮಕ ಪತ್ರಕರ್ತೆ ರಾಣಾ ಅಯೂಬ್ ಅವರ ಹಳೆಯ ಟ್ವೀಟ್ಗಳ ವಿರುದ್ಧ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ, ಸಾಮಾಜಿಕ ಜಾಲತಾಣ ದೈತ್ಯ ‘ಎಕ್ಸ್’ (ಹಿಂದಿನ ಟ್ವಿಟರ್) ತನ್ನ ‘ಸೇಫ್ ಹಾರ್ಬರ್’ (Safe Harbour) ಕಾನೂನು ರಕ್ಷಣೆಯನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ ಎಂದು ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್ಗೆ ತಿಳಿಸಿದೆ. ಸುದ್ದಿಯ ಮುಖ್ಯಾಂಶಗಳು: ಏನಿದು ಪ್ರಕರಣ?: ರಾಣಾ ಅಯೂಬ್ ಅವರು ಹಿಂದೂ ದೇವತೆಗಳು ಮತ್ತು ವಿನಾಯಕ ದಾಮೋದರ್ ಸಾವರ್ಕರ್ ಅವರ ಬಗ್ಗೆ ಅವಹೇಳನಕಾರಿ ಟ್ವೀಟ್ ಮಾಡಿದ್ದಾರೆ ಎಂದು ಆರೋಪಿಸಿ ವಕೀಲರೊಬ್ಬರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಕೇಂದ್ರದ ವಾದ: ಈ ಸಂಬಂಧ ಎಕ್ಸ್ ಸಂಸ್ಥೆಗೆ ನೋಟಿಸ್ ನೀಡಿದ್ದರೂ, ವಿವಾದಾತ್ಮಕ ಪೋಸ್ಟ್ಗಳನ್ನು ತೆಗೆದುಹಾಕಲು ಸಂಸ್ಥೆ ವಿಳಂಬ ಮಾಡಿದೆ. ಐಟಿ ಕಾಯ್ದೆಯ ನಿಯಮಗಳನ್ನು ಪಾಲಿಸದಿದ್ದರೆ, ಮಧ್ಯವರ್ತಿ ಸಂಸ್ಥೆಗಳಿಗೆ ಸಿಗುವ ಕಾನೂನು ರಕ್ಷಣೆ (immunity) ರದ್ದಾಗಲಿದೆ ಎಂದು ಕೇಂದ್ರ ಸರ್ಕಾರ ಪ್ರಮಾಣಪತ್ರ ಸಲ್ಲಿಸಿದೆ. ಸೇಫ್ ಹಾರ್ಬರ್ ಎಂದರೇನು?: ಐಟಿ ಕಾಯ್ದೆಯ ಸೆಕ್ಷನ್ 79ರ ಅಡಿಯಲ್ಲಿ, ಬಳಕೆದಾರರು ಪೋಸ್ಟ್ ಮಾಡುವ ವಿಷಯಗಳಿಗೆ ಸಾಮಾಜಿಕ ಜಾಲತಾಣಗಳು…
ಬೆಂಗಳೂರು: ನಿನ್ನೆ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಗೊಂಡಿತ್ತು. ಈ ಪರೀಕ್ಷೆಯಲ್ಲಿ 100 ಅಂಕಕ್ಕೆ 111 ಅಂಕ, 600ಕ್ಕೆ 683 ಅಂಕ ನೀಡಿ ಪಿಯು ಬೋರ್ಡ್ ಮಹಾ ಎಡವಟ್ಟು ಮಾಡಿರುವುದು ಬೆಳಕಿಗೆ ಬಂದಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದಂತ ವಿದ್ಯಾರ್ಥಿಯೊಬ್ಬನಿಗೆ ಹಿಂದಿ ಪರೀಕ್ಷೆಯಲ್ಲಿ 100 ಅಂಕಗಳಿದ್ದರೂ, 111 ಅಂಕಗಳನ್ನು ನೀಡಿ ಎಡವಟ್ಟು ಮಾಡಲಾಗಿದೆ. ಹಿಂದಿ ವಿಷಯದ ಥಿಯರಿಯಲ್ಲಿ ವಿದ್ಯಾರ್ಥಇ 94 ಅಂಕ ಬಂದಿದ್ದರೇ, ಕಾಲೇಜಿನಿಂದ 17 ಆಂತರೀಕ ಅಂಕಗಳನ್ನು ನೀಡಲಾಗಿದೆ. ಇಲ್ಲಿ 80 ಅಂಕಗಳಿಗೆ 94 ಅಂಕ ನೀಡಿದ್ದು ಹೇಗೆ ಎನ್ನುವಂತ ಯಕ್ಷ ಪ್ರಶ್ನೆ ಕಾಡುತ್ತಿದೆ. ಇನ್ನೂ ದ್ವಿತೀಯ ಪಿಯುಸಿ ಒಟ್ಟು ಪರೀಕ್ಷೆಯ ಅಂಕಗಳು 600 ಆಗಿವೆ. ಆದರೇ ಓರ್ವ ವಿದ್ಯಾರ್ಥಿಗೆ 600 ಅಂಕಗಳಿಗೆ 683 ನೀಡಲಾಗಿದೆ. 6 ವಿಷಯದಲ್ಲೂ 100 ಅಂಕಗಳಿಗೆ 100ಕ್ಕೂ ಹೆಚ್ಚು ಅಂಕ ನೀಡಿದ್ದರ ಪರಿಣಾಮ 683 ಅಂಕಗಳನ್ನು ಪಡೆದಿರುವುದಾಗಿ ತಪ್ಪಾಗಿ ನಮೂದಿಸಿ ಎಡವಟ್ಟು ಮಾಡಲಾಗಿದೆ. ಇದಷ್ಟೇ ಎಲ್ಲದೇ ಡಿಜಿ ಲಾಕರ್ ನಲ್ಲಿ ಕೆಲವರ ಅಂಕಪಟ್ಟಿ ಸರಿಯಾಗಿ…
BREAKING: ಹುಲಿಕಲ್ ಘಾಟ್ ದುರಂತ: ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಹುಲಿಕಲ್ ಘಾಟಿಯಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಮೃತಪಟ್ಟ ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಘಾತ ಮತ್ತು ಮರುಕ ವ್ಯಕ್ತಪಡಿಸಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ‘ಎಕ್ಸ್’ (X) ಖಾತೆಯಲ್ಲಿ ಬರೆದುಕೊಂಡಿರುವ ಮುಖ್ಯಮಂತ್ರಿಗಳು, ಘಟನೆಯ ಬಗ್ಗೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಸಂಪೂರ್ಣ ಮಾಹಿತಿ ಪಡೆದುಕೊಂಡಿರುವುದಾಗಿ ತಿಳಿಸಿದ್ದಾರೆ. https://TWITTER.com/i/status/2042522775534121400 ಪರಿಹಾರದ ವಿವರ: ಕುಟುಂಬಕ್ಕೆ ಆಧಾರವಾಗಿದ್ದ ದುಡಿಯುವ ಜೀವಗಳು ಈ ದುರಂತದಲ್ಲಿ ಬಲಿಯಾಗಿರುವುದು ಅತ್ಯಂತ ನೋವಿನ ಸಂಗತಿ ಎಂದು ಸಿಎಂ ಬೇಸರ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ: ಮಾನವೀಯ ನೆಲೆಯಲ್ಲಿ ಮೃತಪಟ್ಟ ಪ್ರತಿಯೊಬ್ಬ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಸರ್ಕಾರದಿಂದ ಘೋಷಿಸಲಾಗಿದೆ. “ಮೃತ ದುರ್ದೈವಿ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ಸದಸ್ಯರಿಗೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ…
ಬೆಂಗಳೂರು: ಎಸ್.ಎಸ್.ಎಲ್.ಸಿ ತೃತೀಯ ಭಾಷಾ ಪರೀಕ್ಷೆಯಲ್ಲಿ ಅಂಕಗಳ ಬದಲಿಗೆ ಗ್ರೇಡ್ ನೀಡುವ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ಹೈಕೋರ್ಟ್ ವಜಾಗೊಳಿಸಿದೆ. ಅಷ್ಟೇ ಅಲ್ಲದೆ, ಸರಿಯಾದ ದಾಖಲೆಗಳಿಲ್ಲದೆ ಅರ್ಜಿ ಸಲ್ಲಿಸಿದ್ದಕ್ಕಾಗಿ ಅರ್ಜಿದಾರರಿಗೆ 1 ಲಕ್ಷ ರೂಪಾಯಿ ದಂಡ ವಿಧಿಸಿ ನ್ಯಾಯಾಲಯ ಬಿಸಿ ಮುಟ್ಟಿಸಿದೆ. ಪ್ರಕರಣದ ಹಿನ್ನೆಲೆ: ರಾಜ್ಯ ಸರ್ಕಾರವು ಈ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗಳಿಗೆ ಅಂಕಗಳ ಬದಲು ಗ್ರೇಡ್ ನೀಡಲು ನಿರ್ಧರಿಸಿತ್ತು. ಸರ್ಕಾರದ ಈ ಕ್ರಮವು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದು ಆರೋಪಿಸಿ ಹೆಚ್.ಎನ್. ಚಂದನಾ ಮತ್ತು ಎಸ್.ವೆಂಕಟೇಶ್ ಎಂಬುವರು ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯದ ಕೆಂಗಣ್ಣಿಗೆ ಕಾರಣವೇನು? ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠವು ಅರ್ಜಿದಾರರ ನಡೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ದಂಡ ವಿಧಿಸಲು ಮುಖ್ಯ ಕಾರಣಗಳೆಂದರೆ: ದಾಖಲೆಗಳ ಕೊರತೆ: ಸರ್ಕಾರದ ಅಧಿಕೃತ ಆದೇಶದ ಪ್ರತಿ ಅಥವಾ ದಾಖಲೆಗಳನ್ನು ಒದಗಿಸದೆ ಕೇವಲ ಪತ್ರಿಕಾ ವರದಿಗಳನ್ನು ಆಧರಿಸಿ…
ಶಿವಮೊಗ್ಗ: ಇಂದು ಪ್ರಕಟವಾದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಸಾಗರದ ಎಂಡಿಎಫ್ (MDF) ಸ್ವತಂತ್ರ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶುಭಮಂಗಳ ಅವರು ಅತ್ಯುತ್ತಮ ಅಂಕಗಳನ್ನು ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಅಂಕಗಳ ವಿವರ: ಶುಭಮಂಗಳ ಅವರು ಒಟ್ಟು 600 ಅಂಕಗಳಿಗೆ 569 ಅಂಕಗಳನ್ನು (94.83%) ಪಡೆಯುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ವಿಷಯವಾರು ಅಂಕಗಳು ಈ ಕೆಳಗಿನಂತಿವೆ: ಕನ್ನಡ: 98 ಇಂಗ್ಲಿಷ್: 91 ಭೌತಶಾಸ್ತ್ರ (Physics): 96 ರಸಾಯನಶಾಸ್ತ್ರ (Chemistry): 92 ಗಣಿತ (Mathematics): 94 ಜೀವಶಾಸ್ತ್ರ (Biology): 98 ಗ್ರಾಮೀಣ ಪ್ರತಿಭೆಯ ಮಿಂಚು: ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ ಸಮೀಪದ ಕಾನಹಳ್ಳಿಯ ಕರಿಬಸಪ್ಪ ಹಾಗೂ ಸುಜಾತ ದಂಪತಿಗಳ ಪುತ್ರಿಯಾದ ಶುಭಮಂಗಳ ಅವರು ಮೂಲತಃ ಗ್ರಾಮೀಣ ಭಾಗದ ಪ್ರತಿಭೆ. ತಮ್ಮ ಪ್ರೌಢಶಾಲಾ ಶಿಕ್ಷಣವನ್ನು ಉಳವಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಮುಗಿಸಿದ್ದ ಇವರು, ಎಸ್ಎಸ್ಎಲ್ಸಿಯಲ್ಲೂ ಶಾಲೆಗೆ ಪ್ರಥಮ ಸ್ಥಾನ ಪಡೆದು ಉತ್ತೀರ್ಣರಾಗಿದ್ದರು. ತಮ್ಮ ಮಗಳ ಈ ಸಾಧನೆಗೆ…
ಬೆಂಗಳೂರು: ಈ ತಿಂಗಳ 11ರಂದು ನಗರದಲ್ಲಿ ನಡೆಯಲಿರುವ ಜೆಡಿಎಸ್ ಪಕ್ಷದ ಗ್ರೇಟರ್ ಬೆಂಗಳೂರು ಸಮಾವೇಶವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಗ್ರೇಟರ್ ಬೆಂಗಳೂರು ಜೆಡಿಎಸ್ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ಅವರು ಪಕ್ಷದ ರಾಜ್ಯ ಕಚೇರಿಯಲ್ಲಿ ಮಹಿಳಾ ಮುಖಂಡರು ಮತ್ತು ನಾಯಕರ ಮಹತ್ವದ ಸಭೆ ನಡೆಸಿದರು. ಅಲ್ಲದೆ ಗ್ರೇಟರ್ ಬೆಂಗಳೂರು ಚುನಾವಣೆಗೆ ಕಾರ್ಯಕರ್ತರು ಮತ್ತು ಮುಖಂಡರನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಕೂಡ ಸಭೆಯಲ್ಲಿ ಸಮಲೋಚನೆ ನಡೆಸಲಾಯಿತು. ಹೆಚ್ಚು ಪ್ರಮಾಣದಲ್ಲಿ ಮಹಿಳೆಯರು ಸಮಾವೇಶದಲ್ಲಿ ಪಾಲ್ಗೊಳ್ಳುವ ಬಗ್ಗೆ ನಾಯಕಿಯರ ಜೊತೆ ಚರ್ಚೆ ನಡೆಸಲಾಯಿತು ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು. ಕೊಮ್ಮಘಟ್ಟದ ನೈಸ್ ಗ್ರೌಂಡ್ ನಲ್ಲಿ ನಡೆಯಲಿರುವ ಈ ಸಮಾವೇಶದಲ್ಲಿ ಪಕ್ಷದ ಮಹಿಳಾ ಕಾರ್ಯಕರ್ತರು ಮತ್ತು ನಾಯಕಿಯರು ದೊಡ್ಡ ಪ್ರಮಾಣದಲ್ಲಿ ಪಾಲ್ಗೊಳ್ಳಬೇಕು. ಸಮಾವೇಶದ ಯಶಸ್ವಿಗೆ ಎಲ್ಲರೂ ಒಮ್ಮತ ಮತ್ತು ಒಗ್ಗಟ್ಟಿನಿಂದ ದುಡಿಮೆ ಮಾಡಬೇಕು ಎಂದು ಸಭೆಯಲ್ಲಿ ಅವರು ಕರೆ ನೀಡಿದರು. ಸಮಾವೇಶದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು, ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹಾಗೂ ಯುವ ಜನತಾದಳ…














