Author: kannadanewsnow09

ಅಕ್ಷಯ ತೃತೀಯ ಎಂದಾಕ್ಷಣ ನಮಗೆ ಮೊದಲು ನೆನಪಿಗೆ ಬರುವುದು ಚಿನ್ನವನ್ನು ಖರೀದಿಸುವುದು. ಈ ಅಕ್ಷಯ ತೃತಿಯ ದಿನದಂದು ಕುಬೇರನ ತಾಯಿ ಮಹಾಲಕ್ಷ್ಮಿ ಆಶೀರ್ವಾದ ಪಡೆದಳು ಎಂಬ ಪ್ರತೀತಿಯೂ ಇದೆ. ಈ ದಿನ ತಾಯಿ ಮಹಾಲಕ್ಷ್ಮಿಯನ್ನು ಪೂಜಿಸುವಷ್ಟೇ ಮಹತ್ವವನ್ನು ಈ ದಿನ ಕುಬೇರನಿಗೆ ನೀಡಬೇಕು. ಈ ದಿನದಂದು ನೀವು ಈ ಒಂದು ಸರಳ ಪರಿಹಾರವನ್ನು ಮಾಡಿದರೆ, ಸಂಪತ್ತಿನ ಅಧಿಪತಿಯಾದ ಕುಬೇರನು ನಿಮಗೆ ಸಂಪತ್ತು ಮತ್ತು ಸಮೃದ್ಧಿಯನ್ನು ನೀಡುತ್ತಾನೆ, ಅದು ಉತ್ತಮ ಫಲಿತಾಂಶಗಳನ್ನು ನೀಡುತ್ತದೆ ಎಂದು ಆಧ್ಯಾತ್ಮಿಕತೆ ಹೇಳುತ್ತದೆ . ಅದು ಏನೆಂದು ಕಂಡುಹಿಡಿಯಿರಿ ಮತ್ತು ಅದನ್ನು ಖರೀದಿಸಿ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು…

Read More

ಬೆಂಗಳೂರು: ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡಲು, ನೈಋತ್ಯ ರೈಲ್ವೆಯು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-  ರೂಪ್ಸಾ – ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣಗಳ ನಡುವೆ ಮೂರು ಟ್ರಿಪ್‌ಗಳ ವಿಶೇಷ ರೈಲು ಸೇವೆಯನ್ನು ಓಡಿಸಲಿದೆ.  ರೈಲು ಸಂಖ್ಯೆ 06545 ಎಸ್.ಎಂ.ವಿ.ಟಿ. ಬೆಂಗಳೂರು – ರೂಪ್ಸಾ ವಿಶೇಷ ಎಕ್ಸ್‌ಪ್ರೆಸ್ ಏಪ್ರಿಲ್ 15, ಏಪ್ರಿಲ್ 22 ಮತ್ತು ಏಪ್ರಿಲ್ 29 ರಂದು (ಬುಧವಾರ) ಸಂಜೆ 04:35 ಗಂಟೆಗೆ  ಎಸ್.ಎಂ.ವಿ.ಟಿ.  ಬೆಂಗಳೂರು ನಿಲ್ದಾಣದಿಂದ ಹೊರಟು, ಮರುದಿನ ರಾತ್ರಿ 08:30 ಕ್ಕೆ ರೂಪ್ಸಾ ತಲುಪಲಿದೆ. ರೈಲು ಸಂಖ್ಯೆ 06546 ರೂಪ್ಸಾ – ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್‌ಪ್ರೆಸ್ ಏಪ್ರಿಲ್ 16, ಏಪ್ರಿಲ್ 23 ಮತ್ತು ಏಪ್ರಿಲ್ 30 ರಂದು (ಗುರುವಾರ) ರಾತ್ರಿ 11:30 ಕ್ಕೆ ರೂಪ್ಸಾ ನಿಲ್ದಾಣದಿಂದ ಹೊರಟು, ಶನಿವಾರ ಬೆಳಿಗ್ಗೆ 05:30 ಕ್ಕೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ. ಈ ರೈಲುಗಳಿಗೆ  ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರ್‌ಪೇಟೆ, ಕಾಟ್ಪಾಡಿ, ರೇಣಿಗುಂಟಾ, ನೆಲ್ಲೂರು, ಓಂಗೋಲ್, ವಿಜಯವಾಡ, ರಾಜಮಂಡ್ರಿ, ವಿಜಯನಗರಂ, ಶ್ರೀಕಾಕುಳಂ…

Read More

ಬೆಂಗಳೂರು: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಪರೀಕ್ಷೆ- 1 ಮತ್ತು ಪರೀಕ್ಷೆ-2 ರಲ್ಲಿ ಪಡೆದ ಅಂಕಗಳ ಪೈಕಿ ಯಾವುದು ಅತ್ಯಧಿಕವೊ ಆ ಅಂಕಗಳನ್ನೇ ಸಿಇಟಿ ಫಲಿತಾಂಶಕ್ಕೆ ಪರಿಗಣಿಸಲಾಗುವುದು. ಈ ವಿಷಯದಲ್ಲಿ ಗೊಂದಲ ಬೇಡ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಸ್ಪಷ್ಟಪಡಿಸಿದ್ದಾರೆ. ಕೆಲ ಅಭ್ಯರ್ಥಿಗಳು ಪರೀಕ್ಷೆ-1 ರಲ್ಲಿ ಪಡೆದ ಅಂಕಗಳನ್ನು ಉತ್ತಮಪಡಿಸಿಕೊಳ್ಳಲು ಎರಡನೇ ಪರೀಕ್ಷೆ ಕೂಡ ತೆಗೆದುಕೊಳ್ಳುತ್ತಿದ್ದಾರೆ. ಅಂತಹವರಿಗೆ ಕಳೆದ ವರ್ಷದಂತೆ ಎರಡೂ ಪರೀಕ್ಷೆಗಳಲ್ಲಿ ಪಡೆದ ಅತ್ಯಧಿಕ ಅಂಕಗಳನ್ನು ಸಿಇಟಿ ರಾಂಕ್ ಗೆ ಪರಿಗಣಿಸಲಾಗುತ್ತದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ದ್ವಿತೀಯ ಪಿಯುಸಿಯ ಎರಡೂ ಪರೀಕ್ಷೆ ಗಳ ಫಲಿತಾಂಶ ಬಂದ ನಂತರವೇ ಸಿಇಟಿ ಫಲಿತಾಂಶ ಪ್ರಕಟಿಸುವುದು. ಹೀಗಾಗಿ ಎರಡನೇ ಪರೀಕ್ಷೆಯ ಅಂಕಗಳನ್ನು ಪರಿಗಣಿಸುವುದಿಲ್ಲ ಎನ್ನುವುದು ಸುಳ್ಳು. ಇಂತಹ ವದಂತಿಗಳಿಗೆ‌ ಕಿವಿ ಕೊಡಬೇಡಿ ಎಂದು ಹೇಳಿದರು. ಕರ್ನಾಟಕ ರಾಜ್ಯ ಪಠ್ಯ ಕ್ರಮದ ಪಿಯುಸಿ ಅಭ್ಯರ್ಥಿಗಳಿಗೆ ಮಾತ್ರ ಈ ಎರಡು ಪರೀಕ್ಷೆಗಳ ನಿಯಮ‌ ಅನ್ವಯ ವಾಗುತ್ತದೆ. ಉಳಿದಂತೆ ಕೇಂದ್ರ ಹಾಗೂ…

Read More

ಬೆಂಗಳೂರು: ದೂರದೂರಿಗೆ ರೈಲಿನಲ್ಲಿ ಪ್ರಯಾಣಿಸುವಾಗ ಊಟ-ತಿಂಡಿಯದ್ದೇ ದೊಡ್ಡ ಚಿಂತೆ. ರೈಲ್ವೆ ನಿಲ್ದಾಣಗಳಲ್ಲಿ ಇಳಿದು ತರಾತುರಿಯಲ್ಲಿ ಆಹಾರ ಖರೀದಿಸುವ ಆತಂಕವನ್ನು ದೂರ ಮಾಡಲು, ಭಾರತದ ಪ್ರಮುಖ ಎಐ-ಆಧಾರಿತ ರೈಲು ಟಿಕೆಟ್ ಬುಕಿಂಗ್ ಪ್ಲಾಟ್‌ಫಾರ್ಮ್‌ಗಳಾದ ‘ಇಕ್ಸಿಗೋ’ ಮತ್ತು ‘ಕನ್ಫರ್ಮ್ ಟಿಕೆಟ್’, ಜನಪ್ರಿಯ ಫುಡ್ ಡೆಲಿವರಿ ಸಂಸ್ಥೆ ‘ಸ್ವಿಗ್ಗಿ’ ಜೊತೆ ಮಹತ್ವದ ಒಪ್ಪಂದ ಮಾಡಿಕೊಂಡಿವೆ. ಈ ಮೂಲಕ ‘ಫುಡ್ ಆನ್ ಟ್ರೈನ್’ ಸೇವೆಯನ್ನು ಉನ್ನತೀಕರಿಸಲಾಗಿದ್ದು, ಇನ್ಮುಂದೆ ಪ್ರಯಾಣಿಕರು ದೇಶದ 160ಕ್ಕೂ ಹೆಚ್ಚು ರೈಲು ನಿಲ್ದಾಣಗಳಲ್ಲಿ 40,000ಕ್ಕೂ ಅಧಿಕ ಪ್ರತಿಷ್ಠಿತ ರೆಸ್ಟೋರೆಂಟ್‌ಗಳಿಂದ ತಮಗೆ ಇಷ್ಟವಾದ, ತಾಜಾ ಹಾಗೂ ಸ್ವಚ್ಛವಾದ ಆಹಾರವನ್ನು ನೇರವಾಗಿ ತಮ್ಮ ಸೀಟಿಗೆ ತರಿಸಿಕೊಳ್ಳಬಹುದಾಗಿದೆ. ಬುಕಿಂಗ್ ಹೇಗೆ? ಡೆಲಿವರಿಗೆ ಗ್ಯಾರಂಟಿ ಏನು? ಗ್ರಾಹಕರು ತಮ್ಮ ಇಕ್ಸಿಗೋ ಅಥವಾ ಕನ್ಫರ್ಮ್ ಟಿಕೆಟ್ ಆಪ್‌ಗಳನ್ನು ಅಪ್‌ಡೇಟ್ ಮಾಡಿ, ಹೋಂಪೇಜ್‌ನಲ್ಲಿರುವ ‘ಆರ್ಡರ್ ಫುಡ್ ಆನ್ ಟ್ರೇನ್’ ಆಯ್ಕೆಯನ್ನು ಕ್ಲಿಕ್ ಮಾಡಬೇಕು. ಅಲ್ಲಿ ತಮ್ಮ ರೈಲ್ವೆ ಟಿಕೆಟ್‌ನ ಪಿಎನ್‌ಆರ್‌ ಸಂಖ್ಯೆಯನ್ನು ನಮೂದಿಸಿದರೆ, ಮುಂದಿನ ಯಾವ ನಿಲ್ದಾಣದಲ್ಲಿ ಆಹಾರ ಪಡೆಯಬಹುದು ಎಂಬ ಆಯ್ಕೆಗಳು…

Read More

ನವದೆಹಲಿ: ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ಪರಿಷ್ಕರಣೆ ಮತ್ತು ಅದರಲ್ಲಿನ ಅಕ್ರಮಗಳ ಕುರಿತಾದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಇಂದು ಅತ್ಯಂತ ಮಹತ್ವದ ಅವಲೋಕನ ಮಾಡಿದೆ. “ಮತದಾರರ ಪಟ್ಟಿಯಲ್ಲಿ ಹೆಸರು ಹೊಂದುವುದು ಮತ್ತು ಅಲ್ಲಿಯೇ ಮುಂದುವರಿಯುವುದು ಮತದಾರರ ಸಾಂವಿಧಾನಿಕ ಹಕ್ಕು. ಕೇವಲ ಚುನಾವಣೆ ಹತ್ತಿರವಿದೆ ಎಂಬ ಕಾರಣಕ್ಕೆ ನಾವು ಕಾನೂನುಬದ್ಧ ಪ್ರಕ್ರಿಯೆಗಳ ಬಗ್ಗೆ ಕುರುಡಾಗಲು ಸಾಧ್ಯವಿಲ್ಲ” ಎಂದು ನ್ಯಾಯಾಲಯ ಹೇಳಿದೆ. ಸುಪ್ರೀಂ ಕೋರ್ಟ್ ಹೇಳಿದ್ದೇನು? ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಲ್ಲಿನ ದೋಷಗಳ ಕುರಿತಾದ ಅರ್ಜಿಯನ್ನು ಆಲಿಸಿದ ಸುಪ್ರೀಂ ಕೋರ್ಟ್ ಪೀಠವು ಈ ಕೆಳಗಿನ ಪ್ರಮುಖ ಅಂಶಗಳನ್ನು ಪ್ರಸ್ತಾಪಿಸಿದೆ: ಹಕ್ಕುಗಳ ರಕ್ಷಣೆ: ಪ್ರತಿಯೊಬ್ಬ ಅರ್ಹ ಮತದಾರನಿಗೂ ತನ್ನ ಹೆಸರನ್ನು ಮತದಾರರ ಪಟ್ಟಿಯಲ್ಲಿ ಉಳಿಸಿಕೊಳ್ಳುವ ಹಕ್ಕಿದೆ. ಯಾವುದೇ ನಾಗರಿಕನ ಮತದಾನದ ಹಕ್ಕಿಗೆ ಧಕ್ಕೆ ಬರಬಾರದು ಎಂದು ಕೋರ್ಟ್ ಒತ್ತಿ ಹೇಳಿದೆ. ಚುನಾವಣೆ ಎಂಬ ನೆಪ ಬೇಡ: ಚುನಾವಣೆಗಳು ಎದುರಿಗಿದ್ದಾಗ ಆ ಪ್ರಕ್ರಿಯೆಯನ್ನು ಗಂಭೀರವಾಗಿ ಪರಿಗಣಿಸಬೇಕು ನಿಜ, ಆದರೆ ಅದರ ಹೆಸರಿನಲ್ಲಿ ಮತದಾರರ ಪಟ್ಟಿಯಲ್ಲಿನ ಲೋಪದೋಷಗಳನ್ನು…

Read More

ಬೆಂಗಳೂರು : “ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ ಜರುಗಿಸಲಾಗುವುದು” ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಎಚ್ಚರಿಕೆ ನೀಡಿದರು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. 25 ಜನ ಶಾಸಕರು ದೆಹಲಿಗೆ ತೆರಳಿರುವ ಬಗ್ಗೆ ಕೇಳಿದಾಗ, “ಪಕ್ಷದ ಶಿಸ್ತನ್ನು ಎಲ್ಲಾ ಶಾಸಕರು ಕಾಪಾಡಬೇಕು. ಪಕ್ಷಕ್ಕೆ ಗೌರವ ನೀಡಬೇಕು. ಮಾಧ್ಯಮಗಳ ಮುಂದೆ ಪಕ್ಷದ ಗೌರವವನ್ನು ಹಾಳು ಮಾಡಬಾರದು. ಮುಖ್ಯಮಂತ್ರಿಗಳೂ ಸಹ ಈಗಾಗಲೇ ಈ ವಿಚಾರದ ಬಗ್ಗೆ ಹೇಳಿದ್ದಾರೆ. ಮುಂದಕ್ಕೆ ಎಲ್ಲರ ಭವಿಷ್ಯ ಪಕ್ಷದಲ್ಲಿದೆಯೇ ಹೊರತು ಮಾಧ್ಯಮಗಳಲ್ಲಿ ಇಲ್ಲ” ಎಂದರು. ಶಾಸಕರು ದೆಹಲಿಗೆ ತೆರಳುವ ಮುಂಚೆ ನಿಮ್ಮ ಬಳಿ ಚರ್ಚೆ ಮಾಡಿದ್ದಾರೆಯೇ ಎಂದು ಕೇಳಿದಾಗ, “ಒಂದಷ್ಟು ಜನ ಮಾಡಿದ್ದಾರೆ. ಹೈಕಮಾಂಡ್ ಬಳಿ ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪೇನಿಲ್ಲ. ಮೊದಲ ಹಾಗೂ ಎರಡನೇ ಬಾರಿ ಗೆದ್ದಿರುವವರೂ ಮಂತ್ರಿಗಳಾಗಬಹುದು.…

Read More

ನವದೆಹಲಿ: ಬಹುಚರ್ಚಿತ ‘ಲ್ಯಾಂಡ್ ಫಾರ್ ಜಾಬ್’ (ಉದ್ಯೋಗಕ್ಕಾಗಿ ಭೂಮಿ ನೀಡಿದ ಹಗರಣ) ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ರೈಲ್ವೆ ಸಚಿವ ಹಾಗೂ ಆರ್‌ಜೆಡಿ ಸುಪ್ರೀಂ ಲಾಲು ಪ್ರಸಾದ್ ಯಾದವ್ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ ಕಾನೂನು ಹಿನ್ನಡೆ ನೀಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿರುವ ಎಫ್‌ಐಆರ್ (FIR) ಮತ್ತು ಚಾರ್ಜ್‌ಶೀಟ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ನ್ಯಾಯಾಲಯದ ಪ್ರಮುಖಾಂಶಗಳು: ವಿಚಾರಣೆಗೆ ಅಸ್ತು: ನ್ಯಾಯಮೂರ್ತಿಗಳಾದ ಎಂ.ಎಂ. ಸುಂದ್ರೇಶ್ ಮತ್ತು ಎನ್. ಕೋಟೀಶ್ವರ್ ಸಿಂಗ್ ಅವರನ್ನೊಳಗೊಂಡ ಪೀಠವು ಈ ಪ್ರಕರಣದ ವಿಚಾರಣೆಯನ್ನು ಮುಂದುವರಿಸಲು ಅನುಮತಿ ನೀಡಿದೆ. ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ: ಲಾಲು ಯಾದವ್ ಅವರಿಗೆ ವಿಚಾರಣಾ ನ್ಯಾಯಾಲಯದ ಮುಂದೆ ಖುದ್ದಾಗಿ ಹಾಜರಾಗುವುದರಿಂದ ವಿನಾಯಿತಿ ನೀಡುವ ಮೂಲಕ ಕೋರ್ಟ್ ಸಣ್ಣ ಸಮಾಧಾನಕರ ನಿರ್ಧಾರ ನೀಡಿದೆ. ಕಾನೂನು ವಾದಕ್ಕೆ ಅವಕಾಶ: ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17A ಅಡಿಯಲ್ಲಿ ಅಗತ್ಯವಿರುವ ಪೂರ್ವಾನ್ವಯ ಅನುಮತಿಯ ಬಗ್ಗೆ ಲಾಲು ಯಾದವ್ ಅವರು ವಿಚಾರಣಾ ನ್ಯಾಯಾಲಯದಲ್ಲಿ ತಮ್ಮ ಕಾನೂನು…

Read More

ಬೆಂಗಳೂರು ಗ್ರಾಮಾಂತರ: ವಾಹನ ಸವಾರರಿಂದ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿದ್ದ ನೆಲಮಂಗಲದ ಇಬ್ಬರು ಆರ್‌ಟಿಓ (RTO) ಅಧಿಕಾರಿಗಳು ಇಂದು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಾಯುಕ್ತ ಎಸ್ಪಿ ಡಾ. ಕೋನ ವಂಶಿ ಕೃಷ್ಣ ಅವರ ನೇತೃತ್ವದಲ್ಲಿ ಈ ಯಶಸ್ವಿ ದಾಳಿ ನಡೆದಿದೆ. ಬಂಧಿತ ಅಧಿಕಾರಿಗಳು ಲೋಕಾಯುಕ್ತ ಅಧಿಕಾರಿಗಳು ನೆಲಮಂಗಲ ಆರ್‌ಟಿಓ ಕಚೇರಿಯ ಇನ್ಸ್ಪೆಕ್ಟರ್‌ಗಳಾದ ದಿನೇಶ್ ಹಾಗೂ ಕಿರಣ್ ಎಂಬುವವರನ್ನು ವಶಕ್ಕೆ ಪಡೆದಿದ್ದಾರೆ. ಇಬ್ಬರೂ ಅಧಿಕಾರಿಗಳು ವಾಹನ ತಪಾಸಣೆಯ ಹೆಸರಿನಲ್ಲಿ ಚಾಲಕರಿಂದ ಹಣ ಪಡೆಯುತ್ತಿದ್ದರು ಎನ್ನಲಾಗಿದೆ. ಕಾರ್ಯಾಚರಣೆಯ ವಿವರ ನೆಲಮಂಗಲ ಭಾಗದಲ್ಲಿ ಪ್ರತಿನಿತ್ಯ ವಾಹನಗಳ ತಪಾಸಣೆ ನಡೆಸುವ ನೆಪದಲ್ಲಿ ಈ ಅಧಿಕಾರಿಗಳು ಚಾಲಕರಿಂದ ಲಂಚ ಪಡೆದು ಕಳುಹಿಸುತ್ತಿದ್ದಾರೆ ಎಂಬ ದೂರುಗಳು ಕೇಳಿಬಂದಿದ್ದವು. ಖಚಿತ ಮಾಹಿತಿಯ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಇಂದು ಹಠಾತ್ ದಾಳಿ ನಡೆಸಿ, ಲಂಚ ಪಡೆಯುತ್ತಿದ್ದ ವೇಳೆ ಇಬ್ಬರನ್ನೂ ಟ್ರ್ಯಾಪ್ ಮಾಡಿದ್ದಾರೆ. ವಿಚಾರಣೆ ಮುಂದುವರಿಕೆ ಸದ್ಯ ಇಬ್ಬರೂ ಅಧಿಕಾರಿಗಳನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಪೊಲೀಸರು, ಲಂಚದ ಹಣದ…

Read More

ಬಾಗಲಕೋಟೆ: ಇತ್ತೀಚೆಗಷ್ಟೇ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿಗಳ ವಿರುದ್ಧ ಕೇಳಿಬಂದಿದ್ದ ಲೈಂಗಿಕ ದೌರ್ಜನ್ಯದ ಆರೋಪಗಳು ಸುಳ್ಳು ಎಂದು ಸಂತ್ರಸ್ತ ಮಹಿಳೆ ವಿಡಿಯೋ ಬಿಡುಗಡೆ ಮಾಡಿದ್ದಾರೆ. “ನನ್ನ ಮೇಲೆ ಯಾವುದೇ ಅಸಭ್ಯ ವರ್ತನೆ ನಡೆದಿಲ್ಲ, ಶ್ರೀಗಳ ವಿರುದ್ಧ ನಾನು ದೂರು ನೀಡಿಲ್ಲ” ಎಂದು ಅವರು ಹೇಳಿದ್ದಾರೆ. ದೂರಿನ ಬಗ್ಗೆ ಮಹಿಳೆಯ ಸ್ಪಷ್ಟನೆ ಟಿವಿಯಲ್ಲಿ ವರದಿ ಬಂದಾಗಲೇ ನನಗೆ ಈ ವಿಚಾರ ತಿಳಿದಿದ್ದು ಎಂದು ಮಹಿಳೆ ಹೇಳಿದ್ದಾರೆ. “ನಾನು ಶ್ರೀಗಳ ವಿರುದ್ಧ ಯಾವುದೇ ದೂರು ನೀಡಿಲ್ಲ. ಯಾರೋ ದುಷ್ಕರ್ಮಿಗಳು ನನ್ನ ಹೆಸರನ್ನು ದುರ್ಬಳಕೆ ಮಾಡಿಕೊಂಡು ಸುಳ್ಳು ದೂರು ನೀಡಿದ್ದಾರೆ. ನನ್ನ ಮತ್ತು ಸ್ವಾಮೀಜಿ ನಡುವೆ ಇರುವುದು ಕೇವಲ ಭಕ್ತೆ ಹಾಗೂ ಗುರುವಿನ ಪವಿತ್ರ ಸಂಬಂಧ ಮಾತ್ರ” ಎಂದು ಅವರು ಸ್ಪಷ್ಟಪಡಿಸಿದ್ದಾರೆ. ವಿಜಯಪುರದ ಗಲಾಟೆ ಕುರಿತು ವಿವರಣೆ ವಿಜಯಪುರದಲ್ಲಿ ನಡೆದ ಗಲಾಟೆಯ ಬಗ್ಗೆಯೂ ಮಾತನಾಡಿದ ಅವರು, “ಆ ಸಮಯದಲ್ಲಿ ನಾನು ಕೇವಲ ಶ್ರೀಗಳ ಜೊತೆ ಮಾತನಾಡಬೇಕು ಎಂದು ಕರೆದಿದ್ದೆ. ಆಗ ನನ್ನ ಸಂಬಂಧಿಯೊಬ್ಬರು ಕೂಗಾಡಿದ್ದರೇ…

Read More

ಹಾಸನ: “ಪ್ರೀತಿ ಕುರುಡು” ಎಂಬ ಮಾತಿದೆ. ಆದರೆ ಹಾಸನದಲ್ಲಿ ನಡೆದ ಈ ಘಟನೆ ನೋಡಿದರೆ, ಆ ಕುರುಡು ಪ್ರೀತಿ ಮನುಷ್ಯನ ಸಂಬಂಧಗಳ ಮೌಲ್ಯವನ್ನೇ ಹೇಗೆ ಹೊಸಕಿ ಹಾಕುತ್ತದೆ ಎಂಬುದು ಸಾಬೀತಾಗಿದೆ. ಮದುವೆಯಾಗಿ ಎಂಟು ವರ್ಷಗಳ ಸುದೀರ್ಘ ಸಂಸಾರ, ಕಣ್ಣೆದುರೇ ಆಟವಾಡುವ ಏಳು ವರ್ಷದ ಮಗ, ಪ್ರೀತಿಯಿಂದ ಸಾಕಿ ಸಲಹಿದ ಪೋಷಕರು… ಇವೆಲ್ಲವನ್ನೂ ಕೇವಲ ಕ್ಷಣಿಕ ಸುಖಕ್ಕಾಗಿ ಗಾಳಿಗೆ ತೂರಿದ ಮಹಿಳೆಯೊಬ್ಬಳು ಪ್ರಿಯಕರನೊಂದಿಗೆ ಕಾರಿನಲ್ಲೇ ಮದುವೆಯಾಗಿರುವ ವಿಚಿತ್ರ ಘಟನೆ ಈಗ ಜಿಲ್ಲೆಯಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದೆ. ಸಂಬಂಧಿಕರ ನಡುವೆಯೇ ನಡೆದಿದ್ದ ಸುಂದರ ಸಂಸಾರ ಅರಕಲಗೂಡು ತಾಲೂಕಿನ ಮುಂಡಗೋಡು ಗ್ರಾಮದ ಹರ್ಷಿತಾ ಎಂಬಾಕೆಗೆ 2017ರಲ್ಲಿ ಹಾಸನ ತಾಲೂಕಿನ ಮುಕಂದೂರು ಗ್ರಾಮದ ಪ್ರಕಾಶ್ ಎಂಬುವವರ ಜೊತೆ ವಿವಾಹವಾಗಿತ್ತು. ಪ್ರಕಾಶ್ ಬೇರಾರೂ ಅಲ್ಲ, ಹರ್ಷಿತಾಳ ಸ್ವಂತ ಅತ್ತೆಯ ಮಗ. ಕುಟುಂಬದವರ ಸಮ್ಮುಖದಲ್ಲಿ ಸಂಪ್ರದಾಯಬದ್ಧವಾಗಿ ನಡೆದ ಈ ಮದುವೆಯಲ್ಲಿ ದಂಪತಿಗೆ ಏಳು ವರ್ಷದ ಮುದ್ದಾದ ಗಂಡು ಮಗನಿದ್ದಾನೆ. ಎಂಟು ವರ್ಷಗಳ ಕಾಲ ಈ ಸಂಸಾರ ಸುಗಮವಾಗಿಯೇ ಸಾಗಿತ್ತು. ಆದರೆ…

Read More