Author: kannadanewsnow09

ನವದೆಹಲಿ: ಭಾರತೀಯ ರಿಯಾಲಿಟಿ ಟೆಲಿವಿಷನ್ ಮತ್ತು ನೇಪಾಳಿ ಸಿನಿಮಾ ರಂಗದ ಪ್ರಸಿದ್ಧ ವ್ಯಕ್ತಿ ಪ್ರಶಾಂತ್ ತಮಾಂಗ್ ಅವರು 43 ನೇ ವಯಸ್ಸಿನಲ್ಲಿ ನಿಧನರಾದರು. ಇಂಡಿಯನ್ ಐಡಲ್ ಸೀಸನ್ 3 ವಿಜೇತರನ್ನು 11 ಜನವರಿ 2026 ರಂದು ನವದೆಹಲಿಯ ದ್ವಾರಕಾದಲ್ಲಿರುವ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಘೋಷಿಸಲಾಯಿತು.  ಪ್ರಶಾಂತ್ ತಮಾಂಗ್ ನಿಧನಕ್ಕೆ ಕಲಾವಿದರು, ಸಮುದಾಯದ ಮುಖಂಡರು ಮತ್ತು ಅಭಿಮಾನಿಗಳಿಂದ ಸಂತಾಪಗಳು ಹರಿದು ಬಂದಿವೆ. ಭಾರತೀಯ ಗೂರ್ಖಾ ಪರಿಷತ್ (ಅಸ್ಸಾಂ ರಾಜ್ಯ)ದ ಪ್ರಧಾನ ಕಾರ್ಯದರ್ಶಿ ನಂದಾ ಕಿರಾತಿ ದಿವಾನ್ ಅವರು ಎಕ್ಸ್ ಮತ್ತು ಫೇಸ್‌ಬುಕ್‌ನಲ್ಲಿ ಪೋಸ್ಟ್‌ಗಳ ಮೂಲಕ ಈ ನಷ್ಟಕ್ಕೆ ಸಂತಾಪ ಸೂಚಿಸಿದ್ದಾರೆ. ದಿವಾನ್ ಈ ಸುದ್ದಿಯನ್ನು “ಭರಿಸಲಾಗದ ನಷ್ಟ” ಎಂದು ಕರೆದರು ಮತ್ತು ಪ್ರಶಾಂತ್ ತಮಾಂಗ್ ಗೂರ್ಖಾ ಪ್ರದರ್ಶಕರು ಭಾರತ ಮತ್ತು ವಿದೇಶಗಳಲ್ಲಿ ಮನ್ನಣೆ ಪಡೆಯಲು ಹೇಗೆ ಸಹಾಯ ಮಾಡಿದರು ಎಂಬುದನ್ನು ಒತ್ತಿ ಹೇಳಿದರು. ಪ್ರಶಾಂತ್ ತಮಾಂಗ್ ಸಾವು ಮತ್ತು ಇಂಡಿಯನ್ ಐಡಲ್ ಸೀಸನ್ 3 ವಿಜೇತರಾಗಿ ಪರಂಪರೆ ಪ್ರಶಾಂತ್ ತಮಾಂಗ್ 1983 ರ…

Read More

ಬೆಂಗಳೂರು:ಕಾಂಗ್ರೆಸ್ ಪಕ್ಷಕ್ಕೆ ಸರ್ಕಾರಕ್ಕೆ ಪಾಠ ಹೇಳುವುದನ್ನು ಬಿಟ್ಟು ರಾಜ್ಯದ ಅಭಿವೃದ್ಧಿಯತ್ತ ಪ್ರಾಮಾಣಿಕ ಪ್ರಯತ್ನ ಮಾಡಲಿ. ರಾಜ್ಯದ ಅಭಿವೃದ್ಧಿಗೆ ಸಹಕಾರ ನೀಡಲಿ, ತಮ್ಮ ಧ್ವನಿಯನ್ನು ರಾಜ್ಯದ ಪರವಾಗಿ ಗಟ್ಟಿಗೊಳಿಸಲಿ ಎಂಬುದಾಗಿ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಒತ್ತಾಯಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಮನರೇಗಾ ಯೋಜನೆಗೆ ಸಂಬಂಧಪಟ್ಟಂತೆ ಕರ್ನಾಟಕದ ಎನ್.ಡಿ.ಎ ನಾಯಕರು ಬಹಿರಂಗ ಚರ್ಚೆಗೆ ಸಿದ್ದ ಎಂದು ಹೇಳುವುದರ ಮೂಲಕ ತಮ್ಮ ಬೌದ್ಧಿಕ ದಿವಾಳಿತನವನ್ನು ಸಾಬೀತು ಪಡಿಸಿದ್ದಾರೆ. ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ರಾಜ್ಯ ಬಿಜೆಪಿ ಅಧ್ಯಕ್ಷರಾದ ವಿಜಯೇಂದ್ರ ವಿರೋಧ ಪಕ್ಷದ ನಾಯಕರಾದ R ಅಶೋಕ್ ಜಂಟಿ ಪತ್ರಿಕಾ ಗೋಷ್ಠಿ ಮುಖಾಂತರ ಬಹಿರಂಗ ಚರ್ಚೆಗೆ ಕರೆ ನೀಡಿದ್ದಾರೆ. ಬಹಿರಂಗ ಚರ್ಚೆಗೆ ವಿಶೇಷ ವಿಧಾನ ಸಭೆಯ ಅಧಿವೇಶನ ಮೂಲಕ ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್ ಸರ್ಕಾರ ಈಗಾಗಲೇ ಅವರಿಗೆ ಮುಕ್ತ ಅವಕಾಶವನ್ನು ನೀಡಿದೆ. ಮನರೇಗಾ ಯೋಜನೆಗೆ ಸಂಬಂಧಪಟ್ಟಂತೆ ಲೋಕಸಭೆಯಲ್ಲಿ ಮತ್ತು ರಾಜ್ಯಸಭೆಯಲ್ಲಿ…

Read More

ಬೆಂಗಳೂರು: ಸಾವಿರಾರು ಕೋಟಿ ರೂ.ಗಳ ಬೃಹತ್ ಅಕ್ರಮ ಗಣಿಗಾರಿಕೆ ಕೇಸ್ ಮರೆಮಾಚಲು ಬೇಕಂತಲ್ಲೇ ಶಾಸಕ ಜರ್ನಾದನ್ ರೆಡ್ಡಿ, ಬ್ಯಾನರ್ ಗಲಾಟೆ ಶುರು ಮಾಡಿಸಿದ್ದರೆ ಎಂಬ ಗುಮಾನಿ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಈ ಬಗ್ಗೆ ಬಳ್ಳಾರಿಯ ಜನರು ಹಲವು ರೀತಿಯಲ್ಲಿ ವ್ಯಾಖ್ಯಾನಿಸುತ್ತಿದ್ದಾರೆ. ಸುಪ್ರೀಂಕೋರ್ಟ್‌‌ ಮುಂದೆ ಬರುವ ಓಬಳಾಪುರಂ ಮೈನಿಂಗ್ ಕೇಸ್‌‌ನ ವಿಚಾರಣೆ ಮರೆಮಾಚಲು, ಕೇಸ್ ಕುರಿತು ವಿಷಯಾಂತರಕ್ಕೆ ಅನಗತ್ಯವಾಗಿ ಬ್ಯಾನರ್ ಗಲಾಟೆಯನ್ನೇ ದೊಡ್ಡದಾಗಿ ಮಾಡ್ತಿದ್ದಾರೆ ಎನ್ನಲಾಗುತ್ತಿದೆ.  ಓಬಳಾಪುರಂ ಮೈನಿಂಗ್ ಕೇಸ್‌‌‌‌ನಲ್ಲಿ ಸಿಬಿಐ ಕೋರ್ಟ್ 2025ರ ಮೇ.6 ರಂದು ಜರ್ನಾದನ್‌‌‌‌ರೆಡ್ಡಿಗೆ 7 ವರ್ಷ ಶಿಕ್ಷೆ ಪ್ರಕಟಿಸಿತ್ತು. ಆದರೆ, ತೆಲಂಗಾಣ ಹೈಕೋರ್ಟ್ ಶಿಕ್ಷೆ ರದ್ದುಗೊಳಿಸಿ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಈ ಬಗ್ಗೆ ಸಿಬಿಐ , ಸುಪ್ರೀಂಕೋರ್ಟ್‌‌ಗೆ ಮೇಲ್ಮನವಿ ಸಲ್ಲಿಸಿದೆ. ಅಲ್ಲದೆ, ಸುಪ್ರೀಂಕೋರ್ಟ್‌‌‌‌ನಲ್ಲಿ ಜನಾರ್ದನ ರೆಡ್ಡಿ ಆಕ್ಷೇಪಣೆ ಅರ್ಜಿ ಸಲ್ಲಿಸಿದ್ದಾರೆ. ಇದು ಮುಂದಿನ ವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆ‌. ಇದನ್ನು ಮರೆಮಾಚಲು ಬಳ್ಳಾರಿಯ ಬ್ಯಾನರ್ ಗಲಾಟೆಯನ್ನು ರೆಡ್ಡಿಯವರು ದೊಡ್ಡದಾಗಿ ಬಿಂಬಿಸಿರುವ ಬಗ್ಗೆ…

Read More

ಅಂಗೈಯಲ್ಲಿ ಪರ್ವತವನ್ನು ಹಿಡಿದಿರುವ ಹನುಮಂತನ ಚಿತ್ರ ಅಥವಾ ರೂಪವು ಹಿಂದೂ ಧರ್ಮದಲ್ಲಿ ಅತ್ಯಂತ ಶಕ್ತಿಶಾಲಿ ಮತ್ತು ಸ್ಪೂರ್ತಿದಾಯಕ ಸಂಕೇತವಾಗಿದೆ. ಇದು ರಾಮಾಯಣದ ‘ಲಂಕಾ ದಹನ’ ಮತ್ತು ಯುದ್ಧದ ಸಂದರ್ಭದಲ್ಲಿ ಬರುವ ದ್ರೋಣಗಿರಿ ಪರ್ವತವನ್ನು ಹೊತ್ತು ತಂದ ಪ್ರಸಂಗವನ್ನು ನೆನಪಿಸುತ್ತದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,…

Read More

ಮಂಗಳೂರು : ದ್ವೇಷ ಭಾಷಣ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕಾರವಾಗಿದ್ದು ರಾಜ್ಯಪಾಲರು ಇದನ್ನು ವಾಪಸ್ಸು ಕಳಿಸಿಲ್ಲ, ತಿರಸ್ಕರಿಸಿಲ್ಲ ಅಥವಾ ಅಂಕಿತವನ್ನೂ ಹಾಕಿಲ್ಲ . ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ಪಾದಯಾತ್ರೆ ಏಕೆ ಕೈಗೊಳ್ಳಬೇಕು ಬಳ್ಳಾರಿಯಿಂದ ಬಿಜೆಪಿ ಪಾದಯಾತ್ರೆ ಮಾಡುವ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ನಾವು ಹಿಂದೆ ಪಾದಯಾತ್ರೆ ಮಾಡಿದ್ದು, ಬಳ್ಳಾರಿಯಲ್ಲಿ ಕಾನೂನುಬಾಹಿರ ಗಣಿಗಾರಿಕೆ ಮಾಡುತ್ತಿರುವ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ಮಾಡಿದಾಗ ರೆಡ್ಡಿ ಸಹೋದರರು ಹಾಗೂ ಯಡಿಯೂರಪ್ಪ ಅವರು ಸವಾಲು ಹಾಕಿದ್ದರು. ಅದಕ್ಕಾಗಿ ಪಾದಯಾತ್ರೆ ಕೈಗೊಳ್ಳಲಾಯಿತು. ಇವರು ಪಾದಯಾತ್ರೆ ಏಕೆ ಮಾಡಬೇಕು ಎಂದು ಪ್ರಶ್ನಿಸಿದರು. ಬ್ಯಾನರ್ ತೆಗೆದದ್ದು ಬಳ್ಳಾರಿ ಘಟನೆಗೆ ಪ್ರಚೋದನೆ ಬಳ್ಳಾರಿಯಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆ ಉದ್ಘಾಟನೆ ಬಗ್ಗೆ ಹಾಕಿದ್ದ ಬ್ಯಾನರನ್ನು ತೆಗೆಯಬೇಕಾದ ಅಗತ್ಯವೇನಿತ್ತು? ಅದನ್ನು ತೆಗೆದದ್ದೆ ಘಟನೆಗೆ ಪ್ರಚೋದನೆ ಆಯಿತು ಎಂದರು. ಜನಾರ್ದನ ರೆಡ್ಡಿ , ಶ್ರೀರಾಮುಲು ಅವರು ಸ್ಥಾನ ಕಳೆದುಕೊಂಡಿದ್ದರಿಂದ ಅಸೂಯೆಯಿಂದ…

Read More

ಶಿವಮೊಗ್ಗ : ಕಳೆದ ಎರಡೂ ಮುಕ್ಕಾಲು ವರ್ಷದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ವಿವಿಧ ಯೋಜನೆಯಡಿ ತಾಲ್ಲೂಕಿನ ಅಭಿವೃದ್ದಿಗೆ 667.42 ಕೋಟಿ ರೂ. ಅನುದಾನ ತಂದಿದ್ದಾರೆ. ಶಾಸಕರ ಅಭಿವೃದ್ದಿಪರ ಕೆಲಸಗಳನ್ನು ನೋಡಲಾಗದೆ ಬಿಜೆಪಿಯವರು ಹೊಟ್ಟೆಕಿಚ್ಚು ಪಟ್ಟುಕೊಂಡು, ಸುಳ್ಳು ಫ್ಲೆಕ್ಸ್ಗಳನ್ನು ಹಾಕಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಸಾಗರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಕಲಸೆ ಚಂದ್ರಪ್ಪ ತಿಳಿಸಿದರು. ಇಂದು ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ತಮಗೆ ಅಧಿಕಾರ ಸಿಕ್ಕಿದಾಗ ಅಭಿವೃದ್ದಿ ಮಾಡದೆ ಜನರಿಂದ ತಿರಸ್ಕಾರಕ್ಕೆ ಒಳಗಾಗಿ ಸೋತು ಮೂಲೆ ಸೇರಿರುವ ಹರತಾಳು ಹಾಲಪ್ಪ ತಮ್ಮ ಚೇಲಾಗಳ ಮೂಲಕ ಅನುದಾನದ ಫ್ಲೆಕ್ಸ್ಗಳನ್ನು ಹಾಕಿ ಕೀಳುಮಟ್ಟದ ರಾಜಕಾರಣ ಮಾಡುತ್ತಿರುವುದನ್ನು ಕಾಂಗ್ರೇಸ್ ಪಕ್ಷ ಪ್ರಬಲವಾಗಿ ಖಂಡಿಸುತ್ತದೆ ಎಂದು ಹೇಳಿದರು. ತಾಲ್ಲೂಕಿನಲ್ಲಿ ಬೇಳೂರು ಶಾಸಕರಾದ ಮೇಲೆ ಬೇರೆಬೇರೆ ಯೋಜನೆಗೆ ಸರ್ಕಾರದಿಂದ ಸಾಕಷ್ಟು ಅನುದಾನ ಬಂದಿದೆ. ಅದಕ್ಕೆ ಸಂಬಂಧಿಸಿದ ಆದೇಶ ಪ್ರತಿಯನ್ನು ನಾವು ಬಿಡುಗಡೆ ಮಾಡಲು ಸಿದ್ದರಿದ್ದೇವೆ. ರಂಗಮAದಿರ ನಿರ್ಮಾಣಕ್ಕೆ 4.80 ಕೋಟಿ…

Read More

ಶಿವಮೊಗ್ಗ : ಮಾರಿಕಾಂಬಾ ಜಾತ್ರೆ ಅಂಗವಾಗಿ ಹೆಲಿ ಟೂರಿಸಂ ಹಾಗೂ ಗಣಪತಿ ಕೆರೆಯಲ್ಲಿ ಬೋಟಿಂಗ್ ವ್ಯವಸ್ಥೆ ಮಾಡಲಾಗಿದೆ. ಜಾತ್ರೆಗೆ ಬರುವ ಭಕ್ತಾದಿಗಳಿಗೆ ಇದು ಹೊಸ ಮನರಂಜನೆ ನೀಡಲಿದೆ ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಮಾರಿಕಾಂಬಾ ದೇವಸ್ಥಾನದಲ್ಲಿ ಮಾರಿಕಾಂಬಾ ಜಾತ್ರೆ ಅಂಗವಾಗಿ ಹೊರತರಲಾಗಿರುವ ಮೂರು ವರ್ಷದ ಮಾಹಿತಿಯನ್ನು ಒಳಗೊಂಡ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದಂತ ಅವರು, ಜಾತ್ರೆಯಲ್ಲಿ ಅಮ್ಯೂಸ್‌ಮೆಂಟ್ ಪಾರ್ಕ್ ಜೊತೆಗೆ ಇಂತಹ ಜನಾಕರ್ಷಕ ಚಟುವಟಿಕೆಗಳನ್ನು ಆಯೋಜಿಸುವ ಉದ್ದೇಶ ಹೊಂದಲಾಗಿದೆ ಎಂದರು. ಸಾಗರದ ಮಾರಿಕಾಂಬ ದೇವಿ ಜಾತ್ರೆ ತಯಾರಿ ಭರದಿಂದ ನಡೆಯುತ್ತಿದ್ದು ಎಲ್ಲ ಸಮಿತಿಗಳು ತಮ್ಮ ಕೆಲಸವನ್ನು ನಿರ್ವಹಿಸಿ ಜಾತ್ರೆ ಯಶಸ್ಸಿಗೆ ಟೊಂಕ ಕಟ್ಟಿ ಕೆಲಸ ಮಾಡುತ್ತಿವೆ. ಜಾತ್ರೆ ಹಿನ್ನೆಲೆಯಲ್ಲಿ ಸರ್ಕಾರಿ ಕಟ್ಟಡ ಹಾಗೂ ಖಾಸಗಿ ಕಟ್ಟಡಗಳ ಕಾಂಪೋಡ್‌ಗಳಿಗೆ ಸುಣ್ಣಬಣ್ಣ ಮಾಡಲಾಗುತ್ತಿದೆ. ಸಾರ್ವಜನಿಕರು ಸಹ ನಮ್ಮೊಂದಿಗೆ ಎಲ್ಲ ಕೆಲಸಗಳಿಗೆ ಸಹಕಾರ ನೀಡುತ್ತಿದ್ದಾರೆ. ಊರು ಪ್ರವೇಶ ಮಾಡುವ ಕಡೆಗಳಲ್ಲಿ…

Read More

ಉತ್ತರ ಕನ್ನಡ: ಜಿಲ್ಲೆಯಲ್ಲಿ ಜೆಡಿಎಸ್ ಸ್ಥಳೀಯ ನಾಯಕಿಯ ಪುತ್ರನ ಕಿರುಕುಳಕ್ಕೆ ಬೇಸತ್ತು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಕಾರವಾರ ತಾಲ್ಲೂಕಿನ ಕದ್ರಾ ಗ್ರಾಮದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲ್ಲೂಕಿನ ಕದ್ರಾ ಗ್ರಾಮದಲ್ಲಿ ಜೆಡಿಎಸ್ ಸ್ಥಳೀಯ ನಾಯಕಿಯ ಪುತ್ರ ಚಿರಾಗ್ ಚಂದ್ರಹಾಸ ಕೋಠಾರಕರ ಎಂಬಾತ ಹಿಂದೆ ಬಿದ್ದಿದ್ದನಂತೆ. ಆತ ಪ್ರೀತಿಯನ್ನು ರಿಶಾಲ್(20) ನಿರಾಕರಿಸಿದ್ದಳು. ಆದರೂ ರಿಶಾಲ್ ಹಿಂದೆ ಚಂದ್ರಹಾಸ ಬಿದ್ದಿದ್ದನಂತೆ. ಈ ಹಿನ್ನಲೆಯಲ್ಲಿ ಕದ್ರಾ ಗ್ರಾಮದ ಕೆಪಿಸಿಎಲ್ ಕಾಲೋನಿಯ ನಿವಾಸದಲ್ಲಿ ರಿಶಾಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೀಗಾಗಿ ಚಂದ್ರಹಾಸ ವಿರುದ್ಧ ಪ್ರಕರಣ ದಾಖಲಾಗಿದೆ. ಯುವಕ ಚಂದ್ರಹಾಸ್ ಜೆಡಿಎಸ್ ಸ್ಥಳೀಯ ನಾಯಕಿ ಚೈತ್ರಾ ಕೋಠಾರಕರ ಪುತ್ರನಾಗಿದ್ದಾನೆ. ರಿಶಾಲ್ ತಂದೆ ಕ್ರಿಸ್ತೋದ್ ಫ್ರಾನ್ಸಿಸ್ ದೂರಿನ ಮೇರೆಗೆ ಕೇಸ್ ದಾಖಲಾಗಿದೆ. ದೂರಿನಲ್ಲಿ ಮನೆ ಬಳಿ ಬಂದು ತನ್ನನ್ನು ಪ್ರೀತಿಸುವಂತೆ ಚಿರಾಗ್ ಪ್ರೀಡಿಸುತ್ತಿದ್ದ. ಪ್ರೀತಿ ನಿರಾಕರಿಸಿದ್ದಕ್ಕೆ ಬೇಗ ಸತ್ತು ಹೋಗು ಎಂದಿದ್ದ. ಇದರಿಂದ ನೊಂದು ಮನೆಯಲ್ಲೇ ರಿಶಾಲ್ ನೇಣಿಗೆ ಶರಣಾಗಿರುವುದಾಗಿ ಉಲ್ಲೇಖಿಸಿದ್ದಾರೆ. ಈ ದೂರಿನ ಹಿನ್ನಲೆಯಲ್ಲಿ ಕದ್ರಾ…

Read More

ಕಲಬುರ್ಗಿ: ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯ ಇಂಗ್ಲೀಷ್ ಪತ್ರಿಕೆ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಡಿಡಿಪಿಐ ನೀಡಿದಂತ ದೂರಿನ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಾಗಿದೆ. ದ್ವಿತೀಯ ಪಿಯುಸಿ ಇಂಗ್ಲೀಷ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಈ ಸಂಬಂಧ ಕಲಬುರ್ಗಿ ಸ್ಟೇಷನ್ ಬಜಾರ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಡಿಡಿಪಿಐ ಸುರೇಶ್ ಅಕ್ಕಣ್ಣ ನೀಡಿದಂತ ದೂರಿನನ್ವಯ ಕಿಡಿಗೇಡಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಂದಹಾಗೆ ಜನವರಿ.8ರಂದು ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆ ನಡೆದಿತ್ತು. ಪರೀಕ್ಷೆಯ ಹಿಂದಿನ ದಿನ ಇಂಗ್ಲೀಷ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. https://kannadanewsnow.com/kannada/bjp-is-playing-retail-politics-by-implementing-flex-in-the-name-of-grants-mla-gopalakrishna-belur-kidi/

Read More

ಶಿವಮೊಗ್ಗ : ಬಿಜೆಪಿಯವರು ಅತ್ಯಂತ ಕೀಳುಮಟ್ಟದ ರಾಜಕೀಯ ಮಾಡುತ್ತಿದ್ದಾರೆ. ಅನುದಾನದ ಹೆಸರಿನಲ್ಲಿ ಫ್ಲೆಕ್ಸ್ ಅಳವಡಿಸಿ ಚಿಲ್ಲರೆ ರಾಜಕಾರಣ ಮಡುವ ಮೂಲಕ ಜನರನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಜೋಸೆಫ್ ನಗರದಲ್ಲಿ ನಗರೋತ್ಥಾನ ಯೋಜನೆಯಡಿ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದಂತ ಅವರು, ನಗರವ್ಯಾಪ್ತಿಯಲ್ಲಿ 60ಕ್ಕೂ ಹೆಚ್ಚು ರಸ್ತೆ ಕಾಮಗಾರಿಗಳು ನಡೆಯುತ್ತಿದೆ. ನಾನು ಮುಖ್ಯಮಂತ್ರಿಗಳಿಗೆ ಮನವಿ ಮಾಡಿ ವಿಶೇಷ ಅನುದಾನ ತಂದಿದ್ದೇನೆ. ಹಣ ಬಂದಿಲ್ಲ ಎಂದು ಬಿಜೆಪಿಯವರು ಬೊಗಳೆ ಬಿಡುತ್ತಿದ್ದಾರೆ. ಯಾರು ಶಾಸಕರು ಇರುತ್ತಾರೋ ಅವರ ಅವಧಿಯಲ್ಲಿ ಒಂದಷ್ಟು ಅನುದಾನ ಬಿಡುಗಡೆಯಾಗಿರುತ್ತದೆ. ಅವರ ನಂತರ ಬರುವ ಮತ್ತೊಬ್ಬ ಶಾಸಕರು ಅದನ್ನು ವಿನಿಯೋಗ ಮಾಡುತ್ತಾರೆ. ಕಾಗೋಡು ತಿಮ್ಮಪ್ಪ ಅವರು 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದ ಆಡಳಿತ ಸೌಧವನ್ನು ಹಾಲಪ್ಪ ಶಾಸಕರಾಗಿದ್ದಾಗ ಉದ್ಘಾಟನೆ ಮಾಡಿದ್ದಾರೆ. ಅವರ ಅವಧಿಯಲ್ಲಿ ಉಳಿದ ಸಣ್ಣಪುಟ್ಟ ಅನುದಾನದ ಕಾಮಗಾರಿ ಈಗ…

Read More