Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಕಾಂತಾರ ದೈವದ ಕೂಗಿನ ಅನುಕರಣೆಯನ್ನು ರಾಹುಕೇತು ಚಿತ್ರದಲ್ಲಿ ಮಾಡದಂತೆ ಸೆನ್ಸಾರ್ ಮಂಡಳಿ ಬ್ರೇಕ್ ಹಾಕಿದೆ. ರಾಹುಕೇತು ಚಿತ್ರದಲ್ಲಿ ಕಾಂತಾರ ದೈವದ ಕೂಗಿನ ಅನುಕರಣೆ ಮಾಡಲಾಗಿತ್ತು. ಈ ಸಿನಿಮಾದಲ್ಲಿ ದೈವದ ಧ್ವನಿಗೆ ಸೆನ್ಸಾರ್ ಮಂಡಳಿಯು ಬಳಕೆ ಮಾಡದಂತೆ ಬ್ರೇಕ್ ಹಾಕಲಾಗಿದೆ. ಪುಲ್ಕಿತ್ ಸಾಮ್ರಾಟ್, ವರುಣ್ ಶರ್ಮಾ ಅಭಿನಯದ ರಾಹುಕೇತು ಚಿತ್ರ ಇದಾಗಿದೆ. ಈ ಚಿತ್ರದಲ್ಲಿ ಕಾಂತಾರ ಚಿತ್ರದ ದೈವದ ಕೂಗನ್ನು ರಾಹುಕೇತು ಚಿತ್ರದಲ್ಲಿ ಬಳಸಲಾಗಿತ್ತು. ಈ ಶಬ್ದವನ್ನು ಬದಲಿಸುವಂತೆ ಸೆನ್ಸಾರ್ ಮಂಡಳಿ ಸೂಚಿಸಿದೆ. ಇನ್ನೂ ಚಿತ್ರದಲ್ಲಿ ತೋರಿಸಲಾಗಿದ್ದ ಮಧ್ಯದ ಬೆರಳಿನ ಸನ್ನೆ ಬದಲಿಸಲು ಸೂಚಿಸಲಾಗಿದೆ. ಚಿತ್ರದಲ್ಲಿ ಬಳಸಿದ ಸಂಸ್ಕೃತ ಶ್ಲೋಕಕಕ್ಕೆ ದೃಢೀಕರಣ ಪತ್ರಸಲ್ಲಿಸಲು ಸೂಚನೆ ನೀಡಲಾಗಿದೆ. ಎಲ್ಲಾ ಮದ್ಯದ ಬ್ರ್ಯಾಂಡ್ ಗಳ ಹೆಸರು ತೆಗೆದು ಹಾಕಲು ನಿರ್ದೇಶಿಸಲಾಗಿದೆ. ಅಂದಹಾಗೇ ಇದೇ ಜನವರಿ.16ರಂದು ರಾಹುಕೇತು ಸಿನಿಮಾ ತೆರೆ ಕಾಣಲಿದೆ. ಇಂತಹ ಚಿತ್ರದಲ್ಲಿ ಬಳಸಿರುವಂತ ಕಾಂತಾರ ದೈವದ ಕೂಗು, ಮಧ್ಯದ ಬೆರಳು ಪ್ರದರ್ಶನಕ್ಕೆ ಕತ್ತರಿ ಹಾಕೋದಕ್ಕೆ ಸೆನ್ಸಾರ್ ಮಂಡಳಿ ಖಡಕ್ ಸೂಚನೆ ನೀಡಿದೆ. https://kannadanewsnow.com/kannada/special-session-from-11-am-on-january-22-decision-in-state-cabinet-meeting/…
ಬೆಂಗಳೂರು: ಬಳ್ಳಾರಿ ವಿಷಯ ರಾಜ್ಯದಲ್ಲಿ ದೊಡ್ಡ ಸದ್ದು ಮಾಡುವ ಸಂದರ್ಭದಲ್ಲೇ ಶಿಡ್ಲಘಟ್ಟದಲ್ಲೂ ಬ್ಯಾನರ್ ಹಾಕಿದ್ದಾರೆ. ಬ್ಯಾನರ್ ಹಾಕಲು ಅನುಮತಿ ಪಡೆದಿದ್ದೀರಾ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಪ್ರಶ್ನಿಸಿದ್ದಾರೆ. ಪತ್ರವನ್ನೂ ನೀಡಿಲ್ಲ ಹಣ ಕಟ್ಟಿಲ್ಲ; ಅನುಮತಿ ಪಡೆದಿಲ್ಲ ಎಂದು ಕಮೀಷನರ್ ಹೇಳಿದ್ದಾಗಿ ಗಮನ ಸೆಳೆದರು. ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಕಾಂಗ್ರೆಸ್ ನಾಯಕರ ಅಟ್ಟಹಾಸ ರಾಜ್ಯದಲ್ಲಿ ಹೆಚ್ಚಾಗಿದೆ. ದರ್ಪ ಹೆಚ್ಚಾಗಿದೆ. ಮುಖ್ಯಮಂತ್ರಿಗಳು ರಾಜೀವ್ ಗೌಡರನ್ನು ಬಂಧಿಸಬೇಕು. ಕಾನೂನು ಕೈಗೆತ್ತಿಕೊಳ್ಳುವ ಮಾತನಾಡಿದ ಇವರನ್ನು ಗೂಂಡಾ ಕಾಯ್ದೆ ಅಡಿಯಲ್ಲಿ ತಕ್ಷಣ ಬಂಧಿಸಬೇಕು. ಇಲ್ಲವಾದರೆ, ಇದನ್ನು ನಾವು ರಾಜ್ಯಮಟ್ಟದ ವರೆಗೆ ತೆಗೆದುಕೊಂಡು ಹೋಗುತ್ತೇವೆ ಎಂದು ಎಚ್ಚರಿಸಿದರು. ಕಾಂಗ್ರೆಸ್ ನಾಯಕರು ಇಂಥ ದುಂಡಾವರ್ತಿ ಮಾಡುವುದು ಸರಿಯೇ ಎಂದು ಕೇಳಿದರು. ನಿಂದನೆಯ ಹಿನ್ನೆಲೆಯಲ್ಲಿ ಪೌರಕಾರ್ಮಿಕರೂ ಅಲ್ಲಿ ಧರಣಿ ಕುಳಿತಿದ್ದಾರೆ. ಇದನ್ನು ಬಿಜೆಪಿ ವಿಶೇಷ ಆದ್ಯತೆ ಮೇಲೆ ತೆಗೆದುಕೊಳ್ಳಲಿದೆ. ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಆಕ್ಷೇಪಿಸಿದರು. ಇವತ್ತು ಬೆಳಿಗ್ಗೆಯಿಂದ ಮಾಧ್ಯಮಗಳಲ್ಲಿ…
ಬೆಂಗಳೂರು: ಜನವರಿ.22ರ ಬೆಳಗ್ಗೆ 11 ಗಂಟೆಯಿಂದ ವಿಧಾನ ಮಂಡಲದ ಅಧಿವೇಶನ ನಡೆಸಲು ರಾಜ್ಯ ಸಂಪುಟ ಸಭೆಯಲ್ಲಿ ನಿರ್ಧರಿಸಿರುವುದಾಗಿ ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ. ಇಂದು ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಜನವರಿ.22ರಿಂದ ವಿಧಾನಮಂಡಲ ಅಧಿವೇಶನ ನಡೆಸಲು ಸಂಪುಟ ಸಭಎಯಲ್ಲಿ ನಿರ್ಧರಿಸಲಾಗಿದೆ. ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ರಾಜ್ಯಪಾಲರ ಭಾಷಣ ಅನುಮೋದಿಸಲು ಸಿಎಂಗೆ ಪರಮಾಧಿಕಾರ ನೀಡಲಾಗಿದೆ ಎಂದರು. ವಿಬಿ ಜಿ ರಾಮ್ ಜಿ ಪರಿಣಾಮಗಳ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಲಾಗುತ್ತದೆ. ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚಿಸಿ ನಿರ್ಣಯಿಸಲು ನಿರ್ಧರಿಸಲಾಗಿದೆ.ಜನವರಿ.22ರಿಂದ 31ರವರೆಗೆ ವಿಧಾನಮಂಡಲ ಅಧಿವೇಶನಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ ಎಂಬುದಾಗಿ ತಿಳಿಸಿದರು.
ನವದೆಹಲಿ: ಇರಾನ್ ನಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಹಲವಾರು ಸಾವು-ನೋವುಗಳು ಸಂಭವಿಸಿದ್ದಾವೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮುಂದಿನ ಸೂಚನೆಯವರೆಗೂ ಭಾರತೀಯರು ಇರಾನ್ ಗೆ ಪ್ರಯಾಣವನ್ನು ಮಾಡಬೇಡಿ ಎಂಬುದಾಗಿ ಕೇಂದ್ರ ಸರ್ಕಾರ ಸಲಹೆ ಮಾಡಿದೆ. ಇಂದು ಹೊಸ ಮಾರ್ಗಸೂಚಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, ಇರಾನ್ ನಲ್ಲಿ ಪ್ರತಿಭಟನೆಗಳು ತೀವ್ರ ಸ್ವರೂಪವನ್ನು ಪಡೆದುಕೊಳ್ಳುತ್ತಿವೆ. ಭಾರತೀಯರ ಸುರಕ್ಷತೆಯ ದೃಷ್ಠಿಯಿಂದ ಮುಂದಿನ ಸೂಚನೆಯವರೆಗೂ ಇರಾನ್ ಗೆ ಪ್ರಯಾಣ ಮಾಡದಂತೆ ಸಲಹೆ ಮಾಡಿದೆ. ಏನಿದೆ ಕೇಂದ್ರ ಗೃಹ ಇಲಾಖೆಯ ಸೂಚನೆಯಲ್ಲಿ.? ಜನವರಿ 5, 2025 ರಂದು ಭಾರತ ಸರ್ಕಾರ ಹೊರಡಿಸಿದ ಸಲಹೆಯ ಮುಂದುವರಿಕೆಯಾಗಿ ಮತ್ತು ಇರಾನ್ನಲ್ಲಿನ ವಿಕಸನಗೊಳ್ಳುತ್ತಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಪ್ರಸ್ತುತ ಇರಾನ್ನಲ್ಲಿರುವ ಭಾರತೀಯ ಪ್ರಜೆಗಳು (ವಿದ್ಯಾರ್ಥಿಗಳು, ಯಾತ್ರಿಕರು, ವ್ಯಾಪಾರಸ್ಥರು ಮತ್ತು ಪ್ರವಾಸಿಗರು) ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವಿಧಾನಗಳ ಮೂಲಕ ಇರಾನ್ನಿಂದ ಹೊರಹೋಗಲು ಸೂಚಿಸಲಾಗಿದೆ. ಎಲ್ಲಾ ಭಾರತೀಯ ನಾಗರಿಕರು ಮತ್ತು ಪಿಐಒಗಳು ಸರಿಯಾದ ಎಚ್ಚರಿಕೆ ವಹಿಸಬೇಕು, ಪ್ರತಿಭಟನೆಗಳು ಅಥವಾ ಪ್ರದರ್ಶನಗಳ ಪ್ರದೇಶಗಳನ್ನು ತಪ್ಪಿಸಬೇಕು, ಇರಾನ್ನಲ್ಲಿರುವ…
ಬೆಂಗಳೂರು: ಜನವರಿ.22ರಂದು ವಿಶೇಷ ಅಧಿವೇಶನ ಕರೆಯೋದಕ್ಕೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಂಪುಟ ಸಭೆಯಲ್ಲಿ ಜನವರಿ.22ರ ಬೆಳಗ್ಗೆ 11 ಗಂಟೆಯಿಂದ ವಿಶೇಷ ಅಧಿವೇಶನ ಕರೆಯಲು ನಿರ್ಧರ ಕೈಗೊಳ್ಳಲಾಗಿದೆ. ವಿಶೇಷ ಅಧಿವೇಶನ ನಡೆಸಲು ಇಂದಿನ ರಾಜ್ಯ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಜನವರಿ.22ರಿಂದ ನಡೆಯಲಿರುವಂತ ವಿಶೇಷ ಅಧಿವೇಶನದಲ್ಲಿ ಯಾವೆಲ್ಲ ವಿಚಾರಗಳನ್ನು ಚರ್ಚಿಸಲಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ. https://kannadanewsnow.com/kannada/threat-to-shidlaghatta-municipal-commissioner-complaint-to-police-against-congress-leader-rajeev-gowda/
ಬೆಂಗಳೂರು: ರಾಜ್ಯ ಸರ್ಕಾರವು ಫೆಬ್ರವರಿ.13ರಂದು ಸರ್ಕಾರಕ್ಕೆ ಸಾವಿರ ದಿನ ಪೂರೈಸಿದ ಹಿನ್ನಲೆಯಲ್ಲಿ ಸಮಾವೇಶ ಮಾಡಲು ಹೊರಟಿದೆ. ಇದು ಯಾವ ಸಾಧನೆಗೆ ಈ ಸಂಭ್ರಮಾಚರಣೆ ಎಂಬುದಾಗಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದಂತ ಅವರು, ಸಿಎಂ ಸಿದ್ಧರಾಮಯ್ಯನವರೇ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರೇ, ಸಾವಿರ ದಿನಗಳ ಆಡಳಿತದ ಹೆಸರಲ್ಲಿ ಸಂಭ್ರಮಿಸಲು ಹೊರಟಿರುವ ನಿಮಗೆ ರಾಜ್ಯದ ವಾಸ್ತವ ಸ್ಥಿತಿ ಅರಿವಿದೆಯೇ? ನಿಮ್ಮ ಈ ‘ಸಂಭ್ರಮ’ ಜನಾಕ್ರೋಶವನ್ನು ಅಣಕಿಸುವ ವಿಕೃತ ಮನಸ್ಸಿನ ಅಟ್ಟಹಾಸದಂತೆ ಕಾಣುತ್ತಿದೆ ಎಂದಿದ್ದಾರೆ. ಖಜಾನೆ ಖಾಲಿ ಮಾಡಿದ ಸಾಧನೆಗಾ? ರಾಜ್ಯದ ಸಾಲದ ಹೊರೆ ₹7.64 ಲಕ್ಷ ಕೋಟಿ ದಾಟಿದೆ, ಪ್ರತಿಯೊಬ್ಬ ಕನ್ನಡಿಗನ ಮೇಲೆ ₹1 ಲಕ್ಷಕ್ಕೂ ಹೆಚ್ಚಿನ ಸಾಲದ ಹೊರೆ ಇದೆ. ಅವೈಜ್ಞಾನಿಕ ಯೋಜನೆಗಳಿಗಾಗಿ, ಕಮಿಷನ್ ದಾಹಕ್ಕಾಗಿ, ಭ್ರಷ್ಟಾಚಾರಕ್ಕಾಗಿ, ಅಭಿವೃದ್ಧಿ ಕಾಮಗಾರಿಗಳನ್ನು ಸಂಪೂರ್ಣ ಸ್ಥಗಿತಗೊಳಿಸಿ, ರಾಜ್ಯವನ್ನು ದಿವಾಳಿಯ ಅಂಚಿಗೆ ತಳ್ಳಿದ್ದಕ್ಕಾ ಈ ಸಂಭ್ರಮ? ಎಂದು ಕೇಳಿದ್ದಾರೆ. ಬಡವರ ಜೇಬಿಗೆ ಕತ್ತರಿ ಹಾಕಿದ್ದಕ್ಕಾ?: ನೀರು, ಹಾಲು,…
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಬ್ಯಾನರ್ ತೆರವುಗೊಳಿಸೋ ವಿಚಾರಕ್ಕಾಗಿ ಕಾಂಗ್ರೆಸ್ ಮುಖಂಡರೊಬ್ಬರು ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆಗೆ ಅಶ್ಲೀಲವಾಗಿ ನಿಂದಿಸಿದ್ದರು. ಈ ಆಡಿಯೋ ವೈರಲ್ ಕೂಡ ಆಗಿತ್ತು. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ವಿರುದ್ಧ ಪೌರಾಯುಕ್ತೆ ಪೊಲೀಸರಿಗೆ ದೂರು ನೀಡಿದ್ದಾರೆ. ಶಿಡ್ಲಘಟ್ಟ ನಗರಸಭೆ ಆಯುಕ್ತೆಗೆ ಕೈ ಮುಖಂಡ ಬೆದರಿಕೆ ವಿಚಾರವಾಗಿ ರಾಜೀವ್ ಗೌಡ ವಿರುದ್ಧ ನಗರಸಭೆ ಆಯುಕ್ತೆ ಅಮೃತಾಗೌಡ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ರಾಜೀವ್ ಗೌಡ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ. ಈ ಘಟನೆಯಿಂದ ನನಗೆ ಮಾನಸಿಕವಾಗಿ ತೀವ್ರ ಆಘಾತವಾಗಿದೆ. ಆತ್ಮಸ್ಥೈರ್ಯ ಕುಂದಿಸಿದ್ದಾರೆ. ಕೇಂದ್ರಸ್ಥಾನದಲ್ಲಿ ಒಬ್ಬಳೇ ವಾಸವಿದ್ದೇನೆ. ಸೂಕ್ತ ರಕ್ಷಣೆ ನೀಡುವಂತೆಯೂ ದೂರಿನಲ್ಲಿ ಕೋರಿದ್ದಾರೆ.
ಬೆಂಗಳೂರು: ಜರ್ಮನಿಯ ಫೆಡರಲ್ ಚಾನ್ಸಲರ್ ರಾಜ್ಯ ಭೇಟಿಯು ಖಾಸಗಿ ಕಾರ್ಯಕ್ರಮವಾಗಿದೆ. ಇದರಲ್ಲೂ ಬಿಜೆಪಿಯ ರಾಜಕೀಯ ನಾಚಿಕೆಗೇಡಿತನ ಎಂಬುದಾಗಿ ಸಚಿವ ಎಂ.ಬಿ ಪಾಟೀಲ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಜರ್ಮನಿಯ ಫೆಡರಲ್ ಚಾನ್ಸಲರ್ ಗೌರವಾನ್ವಿತ ಶ್ರೀ ಫ್ರಿಡ್ರಿಕ್ ಮೆರ್ಝ್ ಅವರ ರಾಜ್ಯ ಭೇಟಿ ಸಂಪೂರ್ಣವಾಗಿ ಖಾಸಗಿ ಹಾಗೂ ಪೂರ್ವನಿಗದಿಯಾಗಿತ್ತು. ಜರ್ಮನಿ ಮೂಲದ ಬಾಷ್ (Bosch) ಕಂಪೆನಿ ಮತ್ತು ಐಐಎಸ್ಸಿ (IISc)ಗೆ ಭೇಟಿ ನೀಡುವುದಷ್ಟೇ ಅವರ ಉದ್ದೇಶವಾಗಿತ್ತು. ರಾಜ್ಯ ಸರ್ಕಾರದೊಂದಿಗೆ ಯಾವುದೇ ಅಧಿಕೃತ ಸಭೆ, ಮಾತುಕತೆಗಳೇ ಇರಲಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. ಅಧಿಕೃತ ಕಾರ್ಯಕ್ರಮಗಳೇ ಇಲ್ಲದಿದ್ದಾಗ ಮುಖ್ಯಮಂತ್ರಿ ಅವರ ಹಾಜರಾತಿ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಅಂತಹ ಕಾರ್ಯಕ್ರಮಗಳು ಇದ್ದಿದ್ದರೆ, ಮಾನ್ಯ ಮುಖ್ಯಮಂತ್ರಿಗಳೇ ಸ್ವತಃ ಅವರನ್ನು ಸ್ವಾಗತಿಸುತ್ತಿದ್ದರು ಎಂಬ ಸತ್ಯವನ್ನು ಬಿಜೆಪಿ ಉದ್ದೇಶಪೂರ್ವಕವಾಗಿ ಮರೆಮಾಚುತ್ತಿದೆ ಎಂಬುದಾಗಿ ತಿಳಿಸಿದ್ದಾರೆ. ಮುಖ್ಯಮಂತ್ರಿಗಳ ಸೂಚನೆಯಂತೆ, ಸರ್ಕಾರದ ಪರವಾಗಿ ಶಿಷ್ಟಾಚಾರದಂತೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಔಪಚಾರಿಕವಾಗಿ ಸ್ವಾಗತ-ಬೀಳ್ಕೊಡುಗೆ ನೆರವೇರಿಸಲಾಯಿತು ಎಂದು ಹೇಳಿದ್ದಾರೆ.…
ಬೆಂಗಳೂರು: ನಗರಸಭೆಯ ಪೌರಾಯುಕ್ತೆಗೆ ಅಶ್ಲೀಲವಾಗಿ ಕಾಂಗ್ರೆಸ್ ಮುಖಂಡನೊಬ್ಬ ನಿಂದಿಸಿರುವಂತ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರದ ನಗರಸಭೆಯ ಪೌರಾಯುಕ್ತೆಗೆ ಅಶ್ಲೀಲವಾಗಿ ನಿಂದಿಸಿದ್ದು, ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಆಡಿಯೋವನ್ನು ಶೇರ್ ಮಾಡಿರುವಂತ ಜೆಡಿಎಸ್ ಪಕ್ಷವು, ಕರ್ನಾಟಕ ಕಾಂಗ್ರೆಸ್ ಪಕ್ಷದ ದುರಾಡಳಿತದಲ್ಲಿ ಕಾಂಗ್ರೆಸ್ ಮುಖಂಡರ ಗೂಂಡಾಗಿರಿ ಜೋರಾಗಿದೆ. ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ ಸಿನಿಮಾದ ಪ್ಲೆಕ್ಸ್ʼಗಳನ್ನು ತೆರವುಗೊಳಿಸಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವಾಚ್ಯವಾಗಿ, ಅಶ್ಲೀಲ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದಾನೆ ಎಂಬುದಾಗಿ ಕಿಡಿಕಿಡಿಯಾಗಿದೆ. ಶಿಡ್ಲಘಟ್ಟದ ಕೋಟೆ ಸರ್ಕಲ್ ರಸ್ತೆಗಳಲ್ಲಿ ಅನುಮತಿ ಪಡೆಯದೆ, ಅಕ್ರಮವಾಗಿ ಫ್ಲೆಕ್ಸ್ ಬ್ಯಾನರ್ ಅಳವಡಿಸಿದ್ದಕ್ಕೆ, ಪೌರಾಯುಕ್ತೆ ಅಮೃತಗೌಡ ಅವರು, ರಸ್ತೆಯಲ್ಲಿ ಅಪಘಾತ ಹೆಚ್ಚಿದ್ದು, ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಬ್ಯಾನರ್ಗಳನ್ನು ತೆರವುಗೊಳಿಸಿದ್ದಾರೆ ಎಂದಿದೆ. ಇದಕ್ಕೆ ಕಾಂಗ್ರೆಸ್ ಮುಖಂಡ ದೂರವಾಣಿ ಕರೆ ಮಾಡಿ, ಬ್ಯಾನರ್ ತೆಗೆಸಿದವರನ್ನು ‘ಬೆಂಕಿ ಹಾಕಿ ಸುಟ್ಟು ಹಾಕುತ್ತೇನೆ, ಚಪ್ಪಲಿಯಲ್ಲಿ ಹೊಡೆಸುತ್ತೇನೆ,…
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಪಕ್ಷದ ದುರಾಡಳಿತದಲ್ಲಿ ಕಾಂಗ್ರೆಸ್ ಮುಖಂಡರ ಗೂಂಡಾಗಿರಿ ಜೋರಾಗಿದೆ. ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ ಸಿನಿಮಾದ ಪ್ಲೆಕ್ಸ್ʼಗಳನ್ನು ತೆರವುಗೊಳಿಸಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವಾಚ್ಯವಾಗಿ, ಅಶ್ಲೀಲ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದಾನೆ ಎಂಬುದಾಗಿ ಜೆಡಿಎಸ್ ಕಿಡಿಕಿಡಿಯಾಗಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಜಾತ್ಯಾತೀತ ಜನತಾ ದಳವು, ಶಿಡ್ಲಘಟ್ಟದ ಕೋಟೆ ಸರ್ಕಲ್ ರಸ್ತೆಗಳಲ್ಲಿ ಅನುಮತಿ ಪಡೆಯದೆ, ಅಕ್ರಮವಾಗಿ ಫ್ಲೆಕ್ಸ್ ಬ್ಯಾನರ್ ಅಳವಡಿಸಿದ್ದಕ್ಕೆ, ಪೌರಾಯುಕ್ತೆ ಅಮೃತಗೌಡ ಅವರು, ರಸ್ತೆಯಲ್ಲಿ ಅಪಘಾತ ಹೆಚ್ಚಿದ್ದು, ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಬ್ಯಾನರ್ಗಳನ್ನು ತೆರವುಗೊಳಿಸಿದ್ದಾರೆ ಎಂದಿದೆ. ಇದಕ್ಕೆ ಕಾಂಗ್ರೆಸ್ ಮುಖಂಡ ದೂರವಾಣಿ ಕರೆ ಮಾಡಿ, ಬ್ಯಾನರ್ ತೆಗೆಸಿದವರನ್ನು ‘ಬೆಂಕಿ ಹಾಕಿ ಸುಟ್ಟು ಹಾಕುತ್ತೇನೆ, ಚಪ್ಪಲಿಯಲ್ಲಿ ಹೊಡೆಸುತ್ತೇನೆ, ಕಾರ್ಯಕರ್ತರನ್ನು ಕರೆಸಿ ದಂಗೆ ಎಬ್ಬಿಸುತ್ತೇನೆ ಎಂದು ಮಹಿಳಾಧಿಕಾರಿಗೆ ಅಶ್ಲೀಲವಾಗಿ ನಿಂದಿಸಿ ಬೆದರಿಕೆಯೊಡ್ಡಿದ್ದಾನೆ ಎಂದು ಹೇಳಿದೆ. ಸಿಎಂ ಸಿದ್ಧರಾಮಯ್ಯ, ಗೃಹ ಸಚಿವರ…













