Author: kannadanewsnow09

ಶ್ರೀನಗರ: ಇತ್ತೀಚೆಗೆ ಮಹಿಳಾ ವೈದ್ಯರ ಮುಖದಿಂದ ಮುಸುಕನ್ನು ತೆಗೆದಿದ್ದಕ್ಕಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ಪಿಡಿಪಿ ನಾಯಕಿ ಇಲ್ಟಿಜಾ ಮುಫ್ತಿ ಶುಕ್ರವಾರ ಪೊಲೀಸರಿಗೆ ದೂರು ನೀಡಿದ್ದಾರೆ. ಆದಾಗ್ಯೂ, ಜೆಡಿ-ಯು ಮುಖ್ಯಸ್ಥರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆಯೇ ಎಂಬುದರ ಕುರಿತು ಪೊಲೀಸರಿಂದ ಯಾವುದೇ ಮಾಹಿತಿ ಬಂದಿಲ್ಲ. ಮುಸ್ಲಿಮರಲ್ಲಿ, ವಿಶೇಷವಾಗಿ ಮಹಿಳೆಯರಲ್ಲಿ ಅಪಾರ ಯಾತನೆ ಮತ್ತು ನೋವನ್ನುಂಟುಮಾಡಿದ ಒಂದು ನೀಚ ಘಟನೆಯನ್ನು ನಿಮ್ಮ ಗಮನಕ್ಕೆ ತರಲು ನಾನು ಬರೆಯುತ್ತಿದ್ದೇನೆ. ಕೆಲವು ದಿನಗಳ ಹಿಂದೆ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸರ್ಕಾರಿ ಸಮಾರಂಭದಲ್ಲಿ ಸಾರ್ವಜನಿಕವಾಗಿ ಸಾರ್ವಜನಿಕವಾಗಿ ನೋಡುತ್ತಿದ್ದಾಗ ಯುವ ಮುಸ್ಲಿಂ ವೈದ್ಯರ ‘ನಖಾಬ್’ ಅನ್ನು ಕೆಡವಿದಾಗ ನಾವು ಆಘಾತ, ಭಯಾನಕತೆ ಮತ್ತು ಆತಂಕದಿಂದ ನೋಡಿದ್ದೇವೆ ಎಂದು ಮುಫ್ತಿ ಕೋಥಿಬಾಗ್ ಎಸ್‌ಎಚ್‌ಒಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ವಿಷಯವನ್ನು ಇನ್ನಷ್ಟು ಹದಗೆಡಿಸಿದ ವಿಷಯವೆಂದರೆ ಉಪಮುಖ್ಯಮಂತ್ರಿ ಸೇರಿದಂತೆ ಸುತ್ತಮುತ್ತಲಿನ ಜನರ ಅಸಮಾಧಾನಕರ ಪ್ರತಿಕ್ರಿಯೆ, ಅವರು ನಕ್ಕರು ಮತ್ತು ಸಂತೋಷದಿಂದ ವೀಕ್ಷಿಸಿದರು ಎಂದು ಅವರು ಹೇಳಿದರು. ಆಕೆಯ ‘ನಖಾಬ್’…

Read More

ಬೆಂಗಳೂರು: ರಾಜ್ಯ ರಾಜಧಾನಿಯ ಸಮೀಪ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು `ಬೆಂಗಳೂರು ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್’ನ (ಬಿಐಎಎಲ್) ಅನುಮತಿ ಬೇಕೆನ್ನುವುದು ನಮ್ಮ ಅರಿವಿನಲ್ಲಿದೆ. ಇದಕ್ಕೆ 2033ರವರೆಗೂ ಕಾಲಾವಕಾಶವಿದೆ. ಹೀಗಾಗಿಯೇ, ದೂರದೃಷ್ಟಿ ಇಟ್ಟುಕೊಂಡು ಈಗಿನಿಂದಲೇ ಉಳಿದ ಕೆಲಸಗಳನ್ನು ನಾವು ಆರಂಭಿಸಿದ್ದೇವೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಶುಕ್ರವಾರ ಹೇಳಿದ್ದಾರೆ. ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕುರಿತು ಸಂಸತ್ ಅಧಿವೇಶನದಲ್ಲಿ ಪ್ರಸ್ತಾಪವಾಗಿರುವ ಹಿನ್ನೆಲೆಯಲ್ಲಿ ಅವರು ಪ್ರತಿಕ್ರಿಯಿಸಿದ್ದಾರೆ. ದೇವನಹಳ್ಳಿಯ ಸಮೀಪದಲ್ಲಿ ಈಗ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಕ್ರಿಯವಾಗಿದೆ. ಇದು ಆರಂಭವಾಗುವಾಗಲೇ 2033ರವರೆಗೂ 150 ಕಿ.ಮೀ. ಸುತ್ತಮುತ್ತಲಿನ ಪ್ರದೇಶದಲ್ಲಿ ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸಬಾರದೆಂಬ ಷರತ್ತು ಇದೆ. ಏತನ್ಮಧ್ಯೆ ಹೊಸದೆಹಲಿ ಮತ್ತು ನವೀ ಮುಂಬೈಗಳಲ್ಲಿ ಇಂತಹ ಷರತ್ತುಗಳನ್ನು ಸಡಿಲಿಸಿ, ಎರಡನೆಯ ಏರ್ಪೋರ್ಟುಗಳ ನಿರ್ಮಾಣಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇದನ್ನು ಸಂದರ್ಭ ನೋಡಿಕೊಂಡು ಬಗೆಹರಿಸಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. ಒಂದು ವಿಮಾನ ನಿಲ್ದಾಣ ಬರಬೇಕೆಂದರೆ ಸ್ಥಳದ ಆಯ್ಕೆ, ಅದರ ಪರಿಶೀಲನೆ, ಭೂಸ್ವಾಧೀನ, ಪರಿಹಾರ…

Read More

ಬೆಳಗಾವಿ ಸುವರ್ಣಸೌಧ: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು,  ಸುವರ್ಣ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮುಂದೆ “ಆರೋಗ್ಯ ಸೇತು  ಸಂಚಾರಿ ಆರೋಗ್ಯ ಘಟಕ” ಗಳ ಲೋಕಾರ್ಪಣೆ ನೆರವೇರಿಸಿದರು. “ದೂರದ ಹಳ್ಳಿಗೂ ಹತ್ತಿರದ ಆರೈಕೆ” ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ, ರವರಿಂದ   ದಿನಾಂಕ: 19-12-2025 ರಂದು 10:00 ಗಂಟೆಗೆ, ಸುವರ್ಣ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮುಂದೆ “ಆರೋಗ್ಯ ಸೇತು  ಸಂಚಾರಿ ಆರೋಗ್ಯ ಘಟಕ” ಗಳ ಲೋಕಾರ್ಪಣೆ ಮಾಡಲಿದ್ದಾರೆ. ನಿಮ್ಮ ಆರೋಗ್ಯ ನಮ್ಮ ಆದ್ಯತೆ” ಆಶಯದೊಂದಿಗೆ ಸಮಾಜದ ಪ್ರತಿಯೊಬ್ಬ ನಾಗರೀಕರಿಗೂ ಗುಣಮಟ್ಟ ಆರೋಗ್ಯ ಸೇವೆಗಳನ್ನು ನೀಡುವ ಹಲವು ಉಪಕ್ರಮಗಳನ್ನು ಕಾಲಕಾಲಕ್ಕೆ ಸರ್ಕಾರವು ರೂಪಿಸಿದೆ. ಸಂಪರ್ಕರಹಿತ ಪ್ರದೇಶಗಳು, ದುರ್ಗಮ ಪ್ರದೇಶಗಳು ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಮನೆಯ ಬಾಗಿಲಲ್ಲೇ ಆರೋಗ್ಯ ಸೇವೆಗಳನ್ನು ನೀಡುವ ಉದ್ದೇಶದಿಂದ 81 “ಸಂಚಾರಿ ಆರೋಗ್ಯ ಘಟಕ” ಗಳನ್ನು ಪ್ರಾರಂಭಿಸಲಾಗುವುದು. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 49 ಸಂಚಾರಿ ಆರೋಗ್ಯ ಘಟಕಗಳನ್ನು ಮತ್ತು ರಾಜ್ಯ ಸರ್ಕಾರದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅನುದಾನದಡಿಯಲ್ಲಿ 32 ಪರಿಶಿಷ್ಟ ಜಾತಿ…

Read More

ಬೆಳಗಾವಿ: ದಲಿತರ ಉದ್ಧಾರ ಮಾಡದೇ ವಂಚನೆಗೆ ಕಾರಣರಾದ ಸಚಿವ ಮಹದೇವಪ್ಪ ಅವರು ತಕ್ಷಣ ರಾಜೀನಾಮೆ ಕೊಡಬೇಕೆಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಒತ್ತಾಯಿಸಿದ್ದಾರೆ. ಮಾಧ್ಯಮಗೋಷ್ಠಿಯಲ್ಲಿ ಇಂದು ಇಲ್ಲಿ ಮಾತನಾಡಿದ ಅವರು, ಸಚಿವ ಮಹದೇವಪ್ಪ ಅವರು ದಲಿತ ವಿರೋಧಿ ಎಂದು ಆಕ್ಷೇಪಿಸಿದರು. ಇವರು ಕೇವಲ ತಮ್ಮ ಬಾಸ್‍ಗಳನ್ನು ಓಲೈಕೆ ಮಾಡಿಕೊಂಡು ಲೂಟಿ ಮಾಡಿ, ಇವರ ಕುಟುಂಬಗಳನ್ನು ಉದ್ಧಾರ ಮಾಡುತ್ತಿದ್ದಾರೆ; ಸಮುದಾಯಗಳ ಉದ್ಧಾರ ಇವರಿಂದ ಆಗುತ್ತಿಲ್ಲ ಎಂದು ಟೀಕಿಸಿದರು. ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರಿಗೆ ಅಪಮಾನ ಮಾಡುವ ರೀತಿಯಲ್ಲಿ ನೀವು ಇವತ್ತು ಅಧಿಕಾರ ನಡೆಸುತ್ತಿದ್ದೀರಿ ಎಂದು ಆರೋಪಿಸಿದರು. ಡಾ. ಅಂಬೇಡ್ಕರ್ ಅವರು ಬದುಕಿದ್ದರೆ ಇಂಥವರನ್ನು ಎಲ್ಲಿಡಬೇಕೋ ಅಲ್ಲಿ ಇಡುತ್ತಿದ್ದರು ಎಂದು ತಿಳಿಸಿದರು. ಇವರು ದಲಿತರ ಸರ್ವನಾಶ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು. ಎಸ್‍ಇಪಿ, ಟಿಎಸ್‍ಪಿ ಹಣದ ಲೂಟಿ, ಜನರಿಗೆ ವಂಚನೆ ಕಾರ್ಯ ನಡೆಯುತ್ತಿದೆ. ಅವರಿಗೆ ಏನೂ ಸಿಗದಂತೆ ಮಾಡುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಒಳ ಮೀಸಲಾತಿಯಲ್ಲೂ ಸಂಪೂರ್ಣ ತಾರತಮ್ಯ ಒಳ…

Read More

ನವದೆಹಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು, ಹುಣಸೆ, ಹಲಸು ಮತ್ತು ನೇರಳೆ ಮುಂತಾದ ಪೌಷ್ಟಿಕಾಂಶಯುಕ್ತ ಹಣ್ಣಿನ ಬೆಳೆಗಳಿಗಾಗಿ ಪ್ರತ್ಯೇಕವಾದ ರಾಷ್ಟ್ರೀಯ ಮಂಡಳಿ ಸ್ಥಾಪಿಸುವ ಪ್ರಸ್ತಾಪ ಮಾಡಿದ್ದಾರೆ. ಸಂಸತ್ ಭವನದಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಅವರೊಂದಿಗೆ ಕೃಷಿ ಸಚಿವರನ್ನು ಭೇಟಿಯಾದ ಮಾಜಿ ಪ್ರಧಾನಿಗಳು ತಮ್ಮ ಪ್ರಸ್ತಾವನೆ ಕುರಿತ ಪತ್ರವನ್ನು ನೀಡಿದರು. ಮಾಜಿ ಪ್ರಧಾನಿಗಳಾದ ದೇವೇಗೌಡರು ಹುಣಸೆ, ಹಲಸು ಮತ್ತು ನೇರಳೆ ಔಷಧ ಗುಣಗಳುಳ್ಳ ಪೌಷ್ಟಿಕಾಂಶಯುಕ್ತ ಹಣ್ಣಿನ ಬೆಳೆಗಳಾಗಿವೆ, ಇವುಗಳನ್ನು ಶತಮಾನಗಳಿಂದ ಭಾರತದಲ್ಲಿ ಬೆಳೆಯಲಾಗುತ್ತಿದೆ. ಈ ಬೆಳೆಗಳು ಸಾವಯವವಾಗಿ ಬೆಳೆಯುತ್ತವೆ, ಪ್ರಕೃತಿಯಲ್ಲಿ ಇವು ಸಶಕ್ತವಾಗಿ ಬೆಳೆಯುತ್ತವೆ. ಕಡಿಮೆ ಮಳೆಯ ಅಗತ್ಯವಿರುತ್ತದೆ ಮತ್ತು ಕಡಿಮೆ ವೆಚ್ಚದಲ್ಲಿ ಬೆಳೆಸಲಾಗುತ್ತದೆ ಎಂದು ಅವರು ಕೃಷಿ ಸಚಿವರ ಗಮನಸೆಳೆದರು. ಹುಣಸೆ ಹಣ್ಣನ್ನು ದೇಶಾದ್ಯಂತ ವ್ಯಾಪಕವಾಗಿ ಬೆಳೆಯಲಾಗುತ್ತದೆ, ಮಧ್ಯ,…

Read More

ಮಂಡ್ಯ: ಜಿಲ್ಲೆಯಲ್ಲಿ ರೈಲ್ವೆ ಇಲಾಖೆಯ ಪರೀಕ್ಷೆಗಳಲ್ಲಿ ಕನ್ನಡ ಭಾಷೆ ಕಡ್ಡಾಯಕ್ಕೆ ಆಗ್ರಹಿಸಿ ಪ್ರತಿಭಟನೆಯನ್ನು ಕನ್ನಡ ಪರ ಸಂಘಟನೆಗಳಿಂದ ನಡೆಸಲಾಯಿತು. ಈ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶವನ್ನು ಕನ್ನಡ ಪರ ಸಂಘಟನೆಗಳ ಮುಖಂಡರು ಹೊರ ಹಾಕಿದಂತ ಘಟನೆಯೂ ನಡೆಯಿತು. ಮಂಡ್ಯದ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಇಲಾಖೆಯ ಪರೀಕ್ಷೆಯಲ್ಲಿ ಕನ್ನಡ ಭಾಷೆ ಕಡ್ಡಾಯಗೊಳಿಸುವಂತೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಸರ್ಕಾರ ಹಾಗೂ ಸಂಸದರ ವಿರುದ್ದ ಘೋಷಣೆ ಕೂಗಿ ಆಕ್ರೋಶವನ್ನು ಹೊರ ಹಾಕಲಾಯಿತು. ರಾಜ್ಯದ ರೈಲ್ವೆ ಇಲಾಖೆಯ ಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆ ಕಡೆಗಣಿಸಿದ್ದಾರೆ. ಇಂಗ್ಲಿಷ್ ಹಾಗೂ ಹಿಂದಿ ಭಾಷೆಗೆ ಮಾತ್ರ ಒತ್ತುಕೊಟ್ಟು ಕನ್ನಡ ವಿರೋಧಿ ಧೋರಣೆ ಮಾಡಿದೆ. ರಾಜ್ಯದ ರೈಲ್ವೆ ಇಲಾಖೆ ಪರೀಕ್ಷೆಗಳನ್ನ ಕನ್ನಡ ಕಡ್ಡಾಯವಾಗಬೇಕು‌. ಕನ್ನಡ ಭಾಷೆಗೆ ಹೆಚ್ಚಿನ ಆದ್ಯತೆ ಸಿಕ್ಕಿ ನ್ಯಾಯ ಸಿಗಬೇಕು ಎಂಬುದಾಗಿ ಆಗ್ರಹಿಸಿದರು. ತುಮಕೂರು ಚಾಮರಾಜನಗರ ರೈಲ್ವೆ ಮಾರ್ಗ ಅನುಷ್ಠಾನಗೊಳಿಸಿ. ಬ್ಯಾಂಕ್, ಅಂಚೆ,ಕಚೇರಿ, ರೈಲ್ವೆ ರಕ್ಷಣಾ ಆಡಳಿತದಲ್ಲಿ ಕನ್ನಡ ಕಡ್ಡಾಯವಾಗಿರಲಿ. ಕನ್ನಡದ…

Read More

ಬೆಳಗಾವಿ: ರಾಜ್ಯದ ಯಜಮಾನಿ ಮಹಿಳೆಯರಿಗೆ ಗುಡ್ ನ್ಯೂಸ್ ಎನ್ನುವಂತೆ ಗೃಹ ಲಕ್ಷ್ಮೀ ಯೋಜನೆಯ ಸೆಪ್ಟೆಂಬರ್ ತಿಂಗಳ ಹಣವನ್ನು ಬಿಡುಗಡೆ ಮಾಡಲಾಗಿದೆ. ಹೊಸ ವರ್ಷಕ್ಕೂ ಮುನ್ನವೇ ಗೃಹ ಲಕ್ಷ್ಮೀ ಯೋಜನೆ ಹಣ ಯಜಮಾನಿಯರ ಖಾತೆಗೆ ಜಮಾ ಮಾಡಲಾಗಿದೆ. ಆ ಮೂಲಕ ಹೊಸ ವರ್ಷಕ್ಕೂ ಮುನ್ನವೇ ಯಜಮಾನಿಯರಿಗೆ ಸಿಹಿಸುದ್ದಿ ನೀಡಲಾಗಿದೆ. ಈ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಧಾನಸಭೆಯಲ್ಲೇ ಮಾಹಿತಿ ನೀಡಿದ್ದಾರೆ. ಸೆಪ್ಟೆಂಬರ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಯಜಮಾನಿಯರ ಬ್ಯಾಂಕ್ ಖಾತೆಗೆ ಜಮಾ ಮಾಡಿರುವುದಾಗಿ ತಿಳಿಸಿದ್ದಾರೆ. ಅಂದಹಾಗೇ ಡಿಸೆಂಬರ್.16ರಂದು ಆರ್ಥಿಕ ಇಲಾಖೆಯಿಂದ ಸೆಪ್ಟೆಂಬರ್ ತಿಂಗಳ ಕಂತಿನ ಹಣ ಬಿಡುಗಡೆ ಮಾಡಲಾಗಿದೆ. ಹೊಸ ವರ್ಷಕ್ಕೂ ಮುನ್ನವೇ ಗೃಹ ಲಕ್ಷ್ಮೀಯರ ಬ್ಯಾಂಕ್ ಖಾತೆಗೆ ಹಣವು ಜಮಾ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಸೆಪ್ಟೆಂಬರ್ ತಿಂಗಳ ಗೃಹ ಲಕ್ಷ್ಮೀ ಯೋಜನೆಯ ಹಣವನ್ನು ಬಿಡುಗಡೆ ಮಾಡಲಾಗಿದ್ದು, ಅಕ್ಟೋಬರ್, ನವೆಂಬರ್, ಡಿಸೆಂಬರ್ ಹಣ ಬರಬೇಕಿದೆ. ಅದು ಯಾವಾಗ ಜಮಾ ಆಗಲಿದೋ ಎನ್ನುವ ಚಿಂತೆಯಲ್ಲಿ ಯಜಮಾನಿಯರಿದ್ದಾರೆ. https://kannadanewsnow.com/kannada/kea-to-conduct-competitive-examination-for-recruitment-to-various-departmental-vacancies-tomorrow-compliance-with-these-rules-is-mandatory/ https://kannadanewsnow.com/kannada/big-news-for-the-attention-of-the-people-of-the-state-here-is-information-about-the-schemes-available-from-various-corporations-of-the-karnataka-government/

Read More

ಬೆಂಗಳೂರು: ಬಿಡಿಎ, ಬೆಂಗಳೂರು ಜಲಮಂಡಳಿ, ತಾಂತ್ರಿಕ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿಗೆ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ಡಿ.20ರಿಂದ 22ರವರೆಗೆ ಲಿಖಿತ ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಗಿ ಕ್ರಮಗಳನ್ನು ಕೈಗೊಂಡಿದೆ. ವಿವಿಧ ಹುದ್ದೆಗಳಿಗೆ ಕಲ್ಯಾಣ ಕರ್ನಾಟಕದ ಒಟ್ಟು‌ 24,800 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು ಅಷ್ಟೂ‌ ಮಂದಿಗೆ ಮೂರು ದಿನಗಳ ಕಾಲ ಪರೀಕ್ಷೆ ನಡೆಸಲಾಗುತ್ತದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದರು. ಅತ್ಯಂತ ಪಾರದರ್ಶಕ ಹಾಗೂ ಅಕ್ರಮಗಳಿಗೆ ಅವಕಾಶ ಇಲ್ಲದಂತೆ ಪರೀಕ್ಷೆಗಳನ್ನು ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೊಠಡಿಯಲ್ಲಿ ಸಿಸಿಟಿವಿ ಜತೆಗೆ ಜಾಮರ್ ಕೂಡ ಹಾಕಿದ್ದು, ಎಲೆಕ್ಟ್ರಾನಿಕ್ ವಸ್ತುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಮುಖಚಹರೆ ಪತ್ತೆ ತಂತ್ರಜ್ಞಾನ ಬಳಸಿಯೇ ಅಭ್ಯರ್ಥಿಗಳನ್ನು ಪರೀಕ್ಷಾ ಕೇಂದ್ರದ ಒಳಗೆ ಬಿಡಲಾಗುತ್ತದೆ. ವಸ್ತ್ರ ಸಂಹಿತೆ ಇದ್ದು ಅಭ್ಯರ್ಥಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅವರು ಹೇಳಿದ್ದಾರೆ. ಡಿ.20ರಂದು ಬೆಂಗಳೂರಿನ ಏಳು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 3,486 ಮಂದಿ ತೆಗೆದುಕೊಂಡಿದ್ದಾರೆ. ಬೆಂಗಳೂರು,…

Read More

ಬೆಳಗಾವಿ: ಎರಡೂವರೆ ವರ್ಷ ಮುಖ್ಯಮಂತ್ರಿ ಅಂತ ತೀರ್ಮಾನ ಆಗಿಲ್ಲ. ಶಾಸಕರು 5 ವರ್ಷಕ್ಕೆ ಸಿಎಂ ಆಯ್ಕೆ ಮಾಡಿದ್ದಾರೆ. ನಾನು ಐದು ವರ್ಷಕ್ಕೆ ಸಿಎಂ ಆಯ್ಕೆಯಾಗಿದ್ದೇನೆ ಎಂಬುದಾಗಿ ಹೇಳುವ ಮೂಲಕ ಪಕ್ಷದೊಳಗಿನ ವಿರೋಧಿಗಳಿಗೂ ಸಿದ್ಧರಾಮಯ್ಯ ಗುನ್ನಾ ಹೊಡೆದಿದ್ದಾರೆ. ವಿಧಾನಸಭೆಯಲ್ಲಿ ಉತ್ತರ ಕರ್ನಾಟಕ ಚರ್ಚೆಗೆ ಉತ್ತರ ಕೊಡುತ್ತಲೇ ಬಿಜೆಪಿ ಸದಸ್ಯರ ಕಾಲೆಳೆಯುವ ಮಾತುಗಳಿಗೆ ಪ್ರತ್ಯುತ್ತರಿಸಿದಂತ ಸಿಎಂ ಸಿದ್ಧರಾಮಯ್ಯ ಅವರು, ಎಲ್ಲಿಯೂ ಎರಡೂವರೆ ವರ್ಷಕ್ಕೆ ಅಂತ ಹೇಳೇ ಇಲ್ಲ. ಆ ತೀರ್ಮಾನ ಆಗಿಲ್ಲ. ಈಗ ನಾನೇ ಮುಖ್ಯಮಂತ್ರಿ. ಮುಂದೆಯೂ ನಾನೇ ಇರುತ್ತೇನೆ ಎಂದರು. ಈಗ ನಾನು ಮುಖ್ಯಮಂತ್ರಿಯಾಗಿದ್ದೇನೆ. ನನ್ನ ಪ್ರಕಾರ ಕಾಂಗ್ರೆಸ್ ಹೈಕಮಾಂಡ್ ನನ್ನ ಪರವಾಗಿಯೇ ಇದೆ. ಈಗಲೂ ನಾನೇ ಮುಖ್ಯಮಂತ್ರಿ, ಹೈಕಮಾಂಡ್ ಹೇಳೋವರೆಗೂ ನಾನೇ ಸಿಎಂ. ನನಗೆ ದೈಹಿಕ ನಿಶ್ಯಕ್ತಿ ಇರಬಹುದು, ಆದರೇ ರಾಜಕೀಯ ನಿಶ್ಯಕ್ತಿ ಇಲ್ಲ. ಜನರ ಆಶೀರ್ವಾದ ಇದ್ದರೇ ಮಾತ್ರ ಅಧಿಕಾರ ಇರುತ್ತದೆ. ನಾನು ಹಣೆಯ ಬರಹದಲ್ಲಿ ನಂಬಿಕೆ ಇಟ್ಟಿದ್ದೇನೆ. ನಮಗೆ ಯಾರೂ ನಿರ್ದೇಶನ ಕೊಡೋರು ಇಲ್ಲ, ನಮಗೆ ನಾವೇ ನಿರ್ದೇಶಕರು.…

Read More

ಶಿವಮೊಗ್ಗ : ಕ್ರಿಸ್‌ಮಸ್ ರಜೆಯ ಹಿನ್ನಲೆಯಲ್ಲಿ ಸಾರ್ವಜನಿಕರು ಮೃಗಾಲಯ ವೀಕ್ಷಣೆಗೆ ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಕಾರಣ ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಪ್ರಕೃತಿ ಶಿಕ್ಷಣ ನೀಡುವ ಸಲುವಾಗಿ ಹುಲಿ-ಸಿಂಹಧಾಮದಲ್ಲಿನ ಜೂ ಹಾಗೂ ಸಫಾರಿ ವೀಕ್ಷಣೆಯನ್ನು ಡಿ.23 ಮತ್ತು 30 ರ ಮಂಗಳವಾರವೂ ಸಹ ತೆರೆದಿರುತ್ತದೆ. ಪ್ರವಾಸಿಗರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳುವಂತೆ ತ್ಯಾವರೆಕೊಪ್ಪ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಮುಂದಿನ ಶೈಕ್ಷಣಿಕ ವರ್ಷದೊಳಗೆ 11 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣ: ಸಚಿವ ಮಧು ಬಂಗಾರಪ್ಪ ರಾಜ್ಯದಲ್ಲಿ 41,088 ಸರ್ಕಾರಿ ಪ್ರಾಥಮಿಕ ಶಾಲೆಗಳಿವೆ. 1,78,935 ಹುದ್ದೆಗಳು ಮಂಜೂರಾಗಿದ್ದು, ಈ ಪೈಕಿ 1,33,345 ಹುದ್ದೆಗಳು ಭರ್ತಿಯಾಗಿದ್ದು, 45,590 ಹುದ್ದೆಗಳು ಖಾಲಿ ಇರುತ್ತವೆ. ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ನೇಮಕಾತಿ ಮಾಡಲು ಈಗಾಗಲೇ ಕ್ರಮ ವಹಿಸಲಾಗಿದೆ. ರಾಜ್ಯದಲ್ಲಿ 5,024 ಸರ್ಕಾರಿ ಪ್ರೌಢ ಶಾಲೆಗಳಿದ್ದು, ಈ ಪ್ರೌಢಶಾಲೆಗಳಿಗೆ 44,144 ಹುದ್ದೆಗಳು ಮಂಜೂರಾಗಿರುತ್ತವೆ.…

Read More