Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನರ ಮೇಲೆ ಸಾಲದ ಹೊರೆ ಹೇರಿದ್ದಾರೆ. ಈ ಬಜೆಟ್ ಸೇರಿದಂತೆ 4,39,254 ಕೋಟಿ ರೂ. ಸಾಲವನ್ನು ಸಿಎಂ ಮಾಡಿದ್ದು, ಖಾಲಿ ಚೊಂಬನ್ನು ಜನತೆಗೆ ನೀಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಲ ಮಾಡಿ ತುಪ್ಪ ತಿನ್ನು ಎನ್ನುವಂತಹ ಉಪ್ಪು, ಹುಳಿ ಖಾರ ಇಲ್ಲದ ಆಯವ್ಯಯವನ್ನು ಸಿಎಂ ಸಿದ್ದರಾಮಯ್ಯ ಮಂಡಿಸಿದ್ದಾರೆ. ಯಾವುದೇ ಹೊಸ ಯೋಜನೆಗಳಿಲ್ಲ ಕೇವಲ ʼಸಾಲʼದ ಯೋಜನೆಗಳೇ ತುಂಬಿವೆ. ಕಳೆದ ಮೂರು ವರ್ಷಗಳಲ್ಲಿ ಸಿದ್ದರಾಮಯ್ಯ 4,39,254 ಕೋಟಿ ರೂ. ಸಾಲದ ಹೊರೆಯನ್ನು ರಾಜ್ಯದ ಜನರ ತಲೆ ಮೇಲೆ ಹೇರಿದ್ದಾರೆ. ಈ ಹಣಕ್ಕೆ ಬಡ್ಡಿ ಪಾವತಿಸಲು ಕೂಡ ಆಗದ ಪರಿಸ್ಥಿತಿ ಬಂದಿದೆ. ವಿತ್ತೀಯ ಕೊರತೆ 97,000 ಕೋಟಿ ರೂ. ಆಗಿದೆ. ಸಿದ್ದರಾಮಯ್ಯನವರು ಇನ್ನೂ ಮುಂದುವರಿದರೆ ಸಾಲದ ಹೊರೆ 10 ಲಕ್ಷ ಕೋಟಿ ರೂ. ಆಗಲಿದೆ. ಸಿದ್ದರಾಮಯ್ಯನವರು ಹಿಂದಿನ ಎಲ್ಲ ಮುಖ್ಯಮಂತ್ರಿಗಳನ್ನು ಮೀರಿಸಿ ಹತ್ತು ಪಟ್ಟು ಅಧಿಕ ಸಾಲ ಮಾಡಿದ್ದಾರೆ ಎಂದರು. ನೀರಾವರಿ…
ಶಿವಮೊಗ್ಗ: ನಗರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಚುರುಕುಗೊಂಡಿದ್ದು, ಸುಮಾರು 6 ಸಾವಿರ ಅರ್ಹವಲ್ಲದ ಮತದಾರರನ್ನು ಪಟ್ಟಿಯಿಂದ ಕೈಬಿಡಲು ಉದ್ದೇಶಿಸಲಾಗಿದೆ ಎಂದು ಸಾಗರದ ಉಪವಿಭಾಗಾಧಿಕಾರಿ ವಿರೇಶ್ ಕುಮಾರ್ ತಿಳಿಸಿದ್ದಾರೆ. ನಗರಸಭೆ ಕಚೇರಿಯಲ್ಲಿ ಶುಕ್ರವಾರ ನಡೆದ ಬಿ.ಎಲ್.ಓ.ಗಳು ಹಾಗೂ ನಗರಸಭೆ ಮಾಜಿ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ಬೇರೆ ಕಡೆ ಮತದಾನದ ಹಕ್ಕು ಹೊಂದಿರುವವರು, ವಿದೇಶ ಅಥವಾ ಹೊರರಾಜ್ಯಗಳಿಗೆ ವಲಸೆ ಹೋದವರು ಮತ್ತು ವಿಳಾಸವಿದ್ದರೂ ವಾಸವಿಲ್ಲದವರನ್ನು ಗುರುತಿಸಿ ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು. ಮ್ಯಾಪಿಂಗ್ ಬಾಕಿ: ತಾಲ್ಲೂಕಿನಲ್ಲಿ ಇನ್ನೂ 41 ಸಾವಿರ ಮತದಾರರ ಮ್ಯಾಪಿಂಗ್ ಕಾರ್ಯ ಬಾಕಿ ಉಳಿದಿದ್ದು, ಅದನ್ನು ಪೂರ್ಣಗೊಳಿಸಬೇಕಿದೆ. ಕಾರ್ಯತತ್ಪರತೆ: ನಗರಸಭೆ ವ್ಯಾಪ್ತಿಯಲ್ಲಿ ಮ್ಯಾಪಿಂಗ್ ಕಾರ್ಯ ನಿರೀಕ್ಷಿತ ಮಟ್ಟದಲ್ಲಿ ನಡೆದಿಲ್ಲ. ಬಿಎಲ್ಓಗಳು ಭೇಟಿ ನೀಡಿದಾಗ ಮತದಾರರು ಲಭ್ಯವಿಲ್ಲದ ಕಾರಣ, ಮತ್ತೊಂದು ಸುತ್ತಿನ ಸಭೆ ನಡೆಸಿ ಹೊರಗುಳಿದವರನ್ನು ಸಂಪರ್ಕಿಸಲು ಸೂಚಿಸಲಾಗಿದೆ. ಗುರಿ: ನಕಲಿ ಮತದಾರರನ್ನು ತಡೆಗಟ್ಟುವುದು ಮತ್ತು ಎರಡು ಕಡೆ ಮತ ಹೊಂದಿರುವವರನ್ನು ಪತ್ತೆ ಹಚ್ಚುವುದು ಆಡಳಿತದ ಮುಖ್ಯ ಉದ್ದೇಶವಾಗಿದೆ. ಮುಂದಿನ…
ಶಿವಮೊಗ್ಗ : ಶಿಕಾರಿಪುರ ತೋಟಗಾರಿಕೆ ಇಲಾಖೆಯು 2025-26 ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿಯಲ್ಲಿ ಹೈಬ್ರಿಡ್ ಹಾಗೂ ಸುಧಾರಿತ ತಳಿಯ ತರಕಾರಿ ಬೀಜಗಳನ್ನು ಉಚಿತವಾಗಿ ವಿತರಣೆ ಮಾಡುತ್ತಿದ್ದು, ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಎಲ್ಲಾ ವರ್ಗದ ರೈತರು ಅರ್ಜಿಯೊಂದಿಗೆ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪುಸ್ತಕ ಹಾಗೂ ಪ. ಜಾತಿ ಮತ್ತು ಪ. ಪಂಗಡದ ರೈತರಾಗಿದ್ದಲ್ಲಿ ಜಾತಿ ಪ್ರಮಾಣದ ಪ್ರತಿಗಳನ್ನು ಕಛೇರಿಗೆ ಸಲ್ಲಿಸುವುದು. ಮೊದಲು ಬಂದವರಿಗೆ ಮೊದಲ ಆಧ್ಯತೆ ಎಂದು ಶಿಕಾರಿಪುರ ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಶಿಕಾರಿಪುರ ತೋಟಗಾರಿಕೆ ಇಲಾಖೆಯನ್ನು ಅಥವಾ ಹತ್ತಿರದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸುವುದು. https://kannadanewsnow.com/kannada/cm-siddaramaiah-presented-a-budget-for-building-a-new-karnataka-mlc-dinesh-gooligouda-praises/ https://kannadanewsnow.com/kannada/cm-siddaramaiah-sets-another-record-presents-budget-while-standing-for-3-hours-and-30-minutes/
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯವು ‘ನವ ಕರ್ನಾಟಕ’ ನಿರ್ಮಾಣದ ಆಶಯವನ್ನು ಹೊಂದಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಹಾಗೂ ಶಾಸಕ ದಿನೇಶ್ ಗೂಳಿಗೌಡ ಬಣ್ಣಿಸಿದ್ದಾರೆ. ಈ ಬಾರಿಯ ಬಜೆಟ್ನಲ್ಲಿ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುವುದಷ್ಟೇ ಅಲ್ಲದೆ, ಹೊಸ ಅಭಿವೃದ್ಧಿ ಯೋಜನೆಗಳಿಗೆ ಒತ್ತು ನೀಡಲಾಗಿದೆ. ವಿಶೇಷವಾಗಿ ಗ್ಯಾರಂಟಿ ಯೋಜನೆಗಳಿಗಾಗಿ 51 ಸಾವಿರ ಕೋಟಿ ರೂ.ಗಳನ್ನು ಮೀಸಲಿಡುವ ಮೂಲಕ, “ಸರ್ಕಾರ ಗ್ಯಾರಂಟಿಗಳನ್ನು ನಿಲ್ಲಿಸುತ್ತದೆ” ಎಂಬ ವಿರೋಧ ಪಕ್ಷಗಳ ಅಪಪ್ರಚಾರಕ್ಕೆ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳು ತಕ್ಕ ಉತ್ತರ ನೀಡಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದು ಕೇವಲ ಘೋಷಣೆಗಳ ಬಜೆಟ್ ಆಗಿರದೆ ರೈತರು, ಶ್ರಮಿಕ ವರ್ಗ ಹಾಗೂ ಯುವಜನತೆ ಸೇರಿದಂತೆ ಸಮಾಜದ ಎಲ್ಲಾ ವರ್ಗದವರನ್ನು ಒಳಗೊಂಡ ಸಮಗ್ರ ಮತ್ತು ಜನಪರ ಬಜೆಟ್ ಆಗಿದೆ. ರಾಜ್ಯದ ಆರ್ಥಿಕ ಶಿಸ್ತನ್ನು ಕಾಪಾಡುತ್ತಲೇ ಬಡವರ ಪರವಾದ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿರುವುದು ಈ ಬಜೆಟ್ನ ವೈಶಿಷ್ಟ್ಯ ಎಂದು ದಿನೇಶ್ ಗೂಳಿಗೌಡ ಹರ್ಷ…
ಬೆಂಗಳೂರು: “ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ” ಎಂಬ ನಮ್ಮ ಸರ್ಕಾರದ ಮೂಲ ಆಶಯಕ್ಕೆ ತಕ್ಕಂತೆ ಅತ್ಯುತ್ತಮ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ್ದಾರೆ ಎಂದು ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಅಂತರ್ಜಲ ವೃದ್ಧಿ ಹಾಗೂ ಕೆರೆಗಳ ಮರುಪೂರಣಕ್ಕೆ ಬಜೆಟ್ನಲ್ಲಿ ಸಿಂಹಪಾಲು ನೀಡಲಾಗಿದೆ. ರಾಜ್ಯಾದ್ಯಂತ ಏತ ನೀರಾವರಿ, ಚೆಕ್ಡ್ಯಾಂ ಹಾಗೂ ಕೆರೆಗಳ ಪುನಶ್ಚೇತನದ ಕಾಮಗಾರಿಗಳಿಗೆ ಬರೋಬ್ಬರಿ 1,793 ಕೋಟಿ ರೂ. ಮೀಸಲಿಟ್ಟಿರುವುದು ಐತಿಹಾಸಿಕ ಹೆಜ್ಜೆ. ಹೆಚ್.ಎನ್. ವ್ಯಾಲಿ ಹಾಗೂ ವೃಷಭಾವತಿ ವ್ಯಾಲಿ ಯೋಜನೆಗಳ ಮೂಲಕ ಶಿಡ್ಲಘಟ್ಟ, ಚಿಂತಾಮಣಿ, ಹೊಸಕೋಟೆ, ನೆಲಮಂಗಲ ಮತ್ತು ದೊಡ್ಡಬಳ್ಳಾಪುರ ಭಾಗದ ನೂರಾರು ಕೆರೆಗಳಿಗೆ 1,027 ಕೋಟಿ ರೂ.ಗಳಿಗೂ ಅಧಿಕ ವೆಚ್ಚದಲ್ಲಿ ನೀರು ತುಂಬಿಸುವ ಮೂಲಕ ಬಯಲುಸೀಮೆಯ ನೀರಿನ ದಾಹ ತೀರಿಸಲಾಗುತ್ತಿದೆ. ಅಲ್ಲದೆ, ಕೆರೆ ಬಳಕೆದಾರರ ಸಂಘಗಳ ಬಲವರ್ಧನೆಗೂ ಸರ್ಕಾರ ಒತ್ತು ನೀಡಿದೆ,” ಎಂದು ತಿಳಿಸಿದ್ದಾರೆ. “ಮತ್ತೊಂದೆಡೆ, ರಾಜ್ಯದ ಭವಿಷ್ಯದ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಸಾಲ ಮಾಡಿ ಕಾಂಗ್ರೆಸ್ ನಾಯಕರನ್ನು ಸಾಕುತ್ತಿದೆ. ಸರಕಾರವು ಕಾಂಗ್ರೆಸ್ಸಿಗರಿಗೆ ಗಂಜಿ ಕೇಂದ್ರವಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ರಾಜ್ಯದ್ದು ಈಗ ₹4.48 ಲಕ್ಷ ಕೋಟಿ ಗಾತ್ರದ ಬಜೆಟ್ ಆಗಿದ್ದು ರಾಜ್ಯದ ಈಗಿನ ಒಟ್ಟು ಸಾಲ ₹8.24 ಲಕ್ಷ ಕೋಟಿ ಆಗಿದೆ. ಈ ಸಾಲ ಕಳೆದ ವರ್ಷದಿಂದ ಈ ವರ್ಷಕ್ಕೆ ₹1.16 ಲಕ್ಷ ಕೋಟಿಯಿಂದ ₹1.32 ಲಕ್ಷ ಕೋಟಿಗೆ ಏರಿದೆ!! ಮುಂದಿನ ವರ್ಷಕ್ಕೆ ₹9 ಲಕ್ಷ ಕೋಟಿ ಮೀರುವುದು ಗ್ಯಾರಂಟಿ. ಈ ಸಾಲದ ಗ್ಯಾರಂಟಿ ಭೀತಿ ಹುಟ್ಟಿಸುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಸಾಲದ ದುಡ್ಡು ಕಾಂಗ್ರೆಸ್ಸಿಗರ ಕಿಸೆಗೆ ಹೋಗಿ ಸೇರುತ್ತಿದೆ: ಸಾಲ ಮಾಡುತ್ತಿದ್ದೀರಿ, ಸರಿ. ಅದನ್ನು ಏನಕ್ಕೆ ಬಳಕೆ ಮಾಡುತ್ತಿದ್ದೀರಿ? ಸಾಲಕ್ಕೆ ತಕ್ಕಂತೆ ಬಂಡವಾಳ ವೆಚ್ಚವೂ ಆಗಬೇಕಲ್ಲವೇ? ದುರಂತವೆಂದರೆ, ಬಂಡವಾಳ ವೆಚ್ಚ ಎಲ್ಲಿದೆಯೋ ಕಳೆದ ಮೂರು…
ನವದೆಹಲಿ: ಕೇಂದ್ರ ಲೋಕಸೇವಾ ಆಯೋಗವು (UPSC) 2025ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಯ (CSE) ಅಂತಿಮ ಫಲಿತಾಂಶವನ್ನು ಇಂದು, ಅಂದರೆ ಮಾರ್ಚ್ 6, 2026 ರಂದು ಪ್ರಕಟಿಸಿದೆ. ಈ ಬಾರಿ ಒಟ್ಟು 958 ಅಭ್ಯರ್ಥಿಗಳು ಭಾರತೀಯ ಆಡಳಿತ ಸೇವೆ (IAS), ಭಾರತೀಯ ವಿದೇಶಾಂಗ ಸೇವೆ (IFS), ಭಾರತೀಯ ಪೊಲೀಸ್ ಸೇವೆ (IPS) ಮತ್ತು ಇತರ ಕೇಂದ್ರ ಸೇವೆಗಳಿಗೆ ನೇಮಕಗೊಳ್ಳಲು ಶಿಫಾರಸು ಮಾಡಲ್ಪಟ್ಟಿದ್ದಾರೆ. ರಾಜಸ್ಥಾನದ ಅನುಜ್ ಅಗ್ನಿಹೋತ್ರಿಗೆ ಅಗ್ರಸ್ಥಾನ: ಆಯೋಗವು ಬಿಡುಗಡೆ ಮಾಡಿರುವ ಮೆರಿಟ್ ಪಟ್ಟಿಯ ಪ್ರಕಾರ, ರಾಜಸ್ಥಾನದ ರಾವತ್ಭಾಟದವರಾದ ಅನುಜ್ ಅಗ್ನಿಹೋತ್ರಿ ಅವರು ದೇಶಕ್ಕೇ ಮೊದಲ ರ್ಯಾಂಕ್ (AIR 1) ಪಡೆಯುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಇವರನ್ನು ಅನುಸರಿಸಿ ರಾಜೇಶ್ವರಿ ಸುವೆ ಎಂ ಅವರು ಎರಡನೇ ಸ್ಥಾನವನ್ನು ಹಾಗೂ ಆಕಾಂಶ್ ಧುಲ್ ಅವರು ಮೂರನೇ ಸ್ಥಾನವನ್ನು ಅಲಂಕರಿಸಿದ್ದಾರೆ. ಟಾಪ್ 10 ಸಾಧಕರ ಪಟ್ಟಿ ಇಲ್ಲಿದೆ: ಅಧಿಕೃತ ಮೆರಿಟ್ ಪಟ್ಟಿಯಂತೆ ಅಗ್ರ 10 ಸ್ಥಾನಗಳನ್ನು ಪಡೆದ ಸಾಧಕರು ಈ ಕೆಳಗಿನಂತಿದ್ದಾರೆ: ರ್ಯಾಂಕ್…
ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ. ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ ಸಿದ್ದರಾಮಯ್ಯನವರು ಎಂಬುದಾಗಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಒಂದು ಮಾತು ಸ್ಪಷ್ಟ; ಕರ್ನಾಟಕದ ಆರ್ಥಿಕತೆ ಹಿಂಜರಿಕೆಯತ್ತ ಸಾಗಿದೆ. ಸಿಎಜಿ ವರದಿ, ರಿಸರ್ವ್ ಬ್ಯಾಂಕ್ ಕೊಟ್ಟಿರುವ ಎಚ್ಚರಿಕೆಗಿಂತ ದೊಡ್ಡ ಆರ್ಥಿಕ ಅಪಾಯಕ್ಕೆ ಸಿಲುಕಿದೆ ಕರ್ನಾಟಕ. ಮುಂದಿನ ದಿನಗಳು ಇನ್ನೂ ದುರ್ಬರವಾಗಿವೆ. ಕಾಂಗ್ರೆಸ್ ಸರಕಾರವನ್ನು ರಾಜ್ಯದ ಜನರು ಕ್ಷಮಿಸುವುದಿಲ್ಲ ಎಂದಿದ್ದಾರೆ. ಈ ಆಯವ್ಯಯ ಕರ್ಣಕಠೋರ ಮತ್ತು ರಾಜ್ಯಕ್ಕೆ ಭಾರ. ಏಕೆಂದರೆ, ಮುಖ್ಯಮಂತ್ರಿಗಳು ಕೇಂದ್ರದ ನಿಂದನೆಯನ್ನು ಈ ಬಾರಿಯೂ ಮುಂದುವರಿಸಿದರು, ಅದು ಅಗತ್ಯವಿರಲಿಲ್ಲ. ಒಕ್ಕೂಟ ವ್ಯವಸ್ಥೆಯ ಮೂಲತತ್ವವನ್ನೇ ಮರೆತು ತಮ್ಮ ಸರಕಾರದ ಕೆಟ್ಟ ಮಾದರಿಯನ್ನು ಪ್ರಚಾರ ಮಾಡಿಕೊಂಡು ಆತ್ಮರತಿ ಮೆರೆದಿದ್ದಾರೆ. 16ನೇ ಹಣಕಾಸು ಆಯೋಗದಲ್ಲಿ ರಾಜ್ಯದ ತೆರಿಗೆ ಪಾಲನ್ನು 3.61%ರಿಂದ 4.7%ಗೆ ಏರಿಸಲಾಗಿದೆ. ಇದರಿಂದ ಅನಾಮತ್ತಾಗಿ…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ದಾಖಲೆಯ 17ನೇ ಬಜೆಟ್ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿಕೋನ, ಸಾಮಾಜಿಕ ನ್ಯಾಯ ಮತ್ತು ಪ್ರಾದೇಶಿಕ ಅಸಮತೋಲನ ನಿವಾರಣೆಯ ಸಮಗ್ರ ದೃಷ್ಟಿಕೋನವನ್ನು ಪ್ರತಿಫಲಿಸುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಕಾಂಗ್ರೆಸ್ ಸರಕಾರದ ಜನಪರ ಆಡಳಿತಕ್ಕೆ ಈ ಬಜೆಟ್ ಉಜ್ವಲ ಸಾಕ್ಷಿಯಾಗಿದೆ ಎಂದು ಬಣ್ಣಿಸಿದ್ದಾರೆ. ಸಿದ್ದರಾಮಯ್ಯ ಅವರು ಬಜೆಟ್ ಗಾತ್ರವನ್ನು 4.48 ಲಕ್ಷ ಕೋಟಿ ರೂಪಾಯಿಗಳಿಗೆ ಏರಿಸಿರುವುದು ರಚನಾತ್ಮಕ ಕ್ರಮವಾಗಿದೆ. ಇದಕ್ಕೆ ತಕ್ಕಂತೆ ಬಂಡವಾಳ ವೆಚ್ಚವನ್ನೂ ಅವರು ಘೋಷಿಸಿದ್ದಾರೆ. ಇವೆಲ್ಲವೂ ಅಭಿವೃದ್ಧಿ ಕಾರ್ಯಗಳಿಗೆ ವೇಗವನ್ನು ತಂದುಕೊಡಲಿದ್ದು, ಅಪಾರ ಸಂಖ್ಯೆಯಲ್ಲಿ ಉದ್ಯೋಗಗಳನ್ನು ಸೃಷ್ಟಿಸಲಿವೆ ಎಂದು ಅವರು ಪ್ರತಿಪಾದಿಸಿದ್ದಾರೆ. ರೈತ ಕಲ್ಯಾಣ, ಕೈಗಾರಿಕಾ ಪ್ರಗತಿ, ಪ್ರವಾಸೋದ್ಯಮ, ನೀರಾವರಿ, ತೋಟಗಾರಿಕೆ, ಹೈನುಗಾರಿಕೆ, ಮೀನುಗಾರಿಕೆ, ಪ್ರಾಥಮಿಕ ಮತ್ತು ಉನ್ನತ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಿಗೆ ಬಜೆಟ್ ಸಾಕಷ್ಟು ಆದ್ಯತೆ ನೀಡಿದೆ. ಇದು ಸುಸ್ಥಿರ ಬೆಳವಣಿಗೆಗೆ ದಾರಿ ಮಾಡಿಕೊಡಲಿದೆ ಎಂದು ಪಾಟೀಲ…
ಬೆಂಗಳೂರು : ರಾಜ್ಯ ಬಜೆಟ್ನಲ್ಲಿ ʻಮುಖ್ಯಮಂತ್ರಿ ಸೌರ ಕೃಷಿ ಯೋಜನೆʼ ಎಂಬ ಹೊಸ ಕಾರ್ಯಕ್ರಮವನ್ನು ಘೋಷಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ರೈತರ ಕೃಷಿ ಪಂಪ್ ಸೆಟ್ಗಳಿಗೆ ಹಗಲು ವೇಳೆ 7 ತಾಸು ವಿದ್ಯುತ್ ಪೂರೈಸುವ ಬದ್ಧತೆಯನ್ನು ಸಾಕಾರಗೊಳಿಸುತ್ತಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಬಜೆಟ್ ಕುರಿತು ಗುರುವಾರ ಪ್ರತಿಕ್ರಿಯೆ ನೀಡಿರುವ ಸಚಿವರು, “ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ತೀವ್ರ ಬರಗಾಲ ಇದ್ದರೂ ರೈತರಿಗೆ 7 ಗಂಟೆ ವಿದ್ಯುತ್ ಪೂರೈಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿತ್ತು. ಇದಕ್ಕೆ ಪೂರಕವಾಗಿ ನಾವು ಕೇಂದ್ರ ಪುರಸ್ಕೃತ ಕುಸುಮ್- ಸಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಮೂಲಕ ಕೃಷಿ ಫೀಡರ್ಗಳನ್ನು ಸೌರೀಕರಣಗೊಳಿಸಿ ರೈತರಿಗೆ ಹಗಲು ವೇಳೆ ವಿದ್ಯುತ್ ನೀಡಲು ಪ್ರಯತ್ನಿಸಿದ್ದೆವು. ಇದೇ ಮಾದರಿಯಲ್ಲಿ ಈಗ ಸುಮಾರು 3000 ಮೆಗಾವ್ಯಾಟ್ ಸೌರ ವಿದ್ಯುತ್ ಉತ್ಪಾದಿಸಿ ರೈತರ ಪಂಪ್ ಸೆಟ್ಗಳಿಗೆ ಹಗಲು ವೇಳೆ ವಿದ್ಯುತ್ ಪೂರೈಸುವ ʻಮುಖ್ಯಮಂತ್ರಿ ಸೌರ ಕೃಷಿ ಯೋಜನೆʼ ಜಾರಿಗೊಳಿಸುವುದಾಗಿ ಹೇಳಿದ್ದಾರೆ. ಅಲ್ಲದೆ, ಕೃಷಿ…














