Author: kannadanewsnow09

ಹುಬ್ಬಳ್ಳಿ: ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ. ಪ್ರತಿ ದಿನ ಅತ್ಯಾಚಾರ, ದೌರ್ಜನ್ಯ, ಆತ್ಮಹತ್ಯೆ, ಕೊಲೆ ನಡೆಯುತ್ತಿವೆ. ಹುಬ್ಬಳ್ಳಿಯ ನೇಹಾ ಕೊಲೆ ಪ್ರಕರಣದಿಂದ ಹಿಡಿದು ಈ ಸರ್ಕಾರದಲ್ಲಿ ಇಂದಿಗೂ ನಿಂತಿಲ್ಲ. ಇದರ ವಿರುದ್ಧ ಸಾಮಾಜಿಕ ಜಾಗೃತಿ ಮಾಡಬೇಕು. ಮಹಿಳೆಯರಿಗೆ ತಿಂಗಳಿಗೆ ಎರಡು ಸಾವಿರ ಕೊಟ್ಟು ಬಾಯಿ ಮುಚ್ಚಿಸಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಭಾರತೀಯ ಜನತಾ ಪಾರ್ಟಿ ಕರ್ನಾಟಕ ಮಹಿಳಾ ಮೋರ್ಚಾದ ವತಿಯಿಂದ ಇಂದು ಹುಬ್ಬಳ್ಳಿಯ ಅರವಿಂದ ನಗರದಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಾಲಯದಲ್ಲಿ ಉತ್ತರ ಕರ್ನಾಟಕ ವಿಭಾಗದ ಮಹಿಳಾ ಮೋರ್ಚಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಕರ್ನಾಟಕದ ಭವಿಷ್ಯದ ಮಹಿಳಾ ಶಕ್ತಿ ಇಲ್ಲಿ ಸೇರಿದೆ ಅಂತ ಅನಿಸುತ್ತಿದೆ. ಭವಿಷ್ಯದ ದೃಷ್ಟಿ ಇಟ್ಟುಕೊಂಡು ತಮ್ಮನ್ನು ಇಲ್ಲಿ ಸೇರಿಸಿದ್ದಾರೆ. ಅನ್ಯಾಯದ ವಿರುದ್ಧ ಧ್ವನಿ ಎತ್ತಲು ತಮ್ಮನ್ನು ಸಂಘಟನೆ ಮಾಡಲು ಸೇರಿಸಿದ್ದಾರೆ. ಅದರ ಮೂಲಕ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಭವ್ಯ ಭವಿಷ್ಯ ಬರೆಯಲು ಸೇರಿಸಿದ್ದಾರೆ. ಈಗ ನಿಮ್ಮ ನಾಯಕತ್ವದ ಗುಣಗಳನ್ನು…

Read More

ಬೆಂಗಳೂರು : “ಈ ಸರ್ಕಾರ ಅಪಾರ್ಟ್ಮೆಂಟ್ ನಿವಾಸಿಗಳು ಹಾಗೂ ಮನೆ ಖರೀದಿದಾರರ ಪರವಾಗಿ ನಿಲ್ಲುತ್ತದೆ. ಈ ಕಾರಣಕ್ಕೆ ಕರ್ನಾಟಕ ಅಪಾರ್ಟ್ಮೆಂಟ್ ಮಾಲೀಕತ್ವ ಮತ್ತು ನಿರ್ವಹಣೆ ವಿಧೇಯಕ 2025ಕ್ಕೆ ಸಂಬಂಧಿಸಿದಂತೆ ಅಪಾರ್ಟ್ಮೆಂಟ್ ಅಸೋಸಿಯೇಷನ್ ಗಳ ಪ್ರತಿನಿಧಿಗಳ ಅಭಿಪ್ರಾಯ ಸಂಗ್ರಹಿಸುತ್ತಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕರ್ನಾಟಕ ಅಪಾರ್ಟ್ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ವಿಧೇಯಕ 2025 ಕುರಿತು ಅಪಾರ್ಟ್ಮೆಂಟ್ ಅಸೋಸಿಯೇಷನ್ ಗಳ ಪ್ರತಿನಿಧಿಗಳೊಂದಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಶನಿವಾರ ಸಂವಾದ ನಡೆಸಿ ಮಾತನಾಡಿದರು. “ಯಾರೆಲ್ಲಾ ಈ ಸಂವಾದ ಕಾರ್ಯಕ್ರಮದಲ್ಲಿ ನಿಮ್ಮ ಸಲಹೆ ನೀಡಲು ಸಾಧ್ಯವಾಗಿಲ್ಲವೋ ಅವರುಗಳು gbasuggesion@gmail.com ಗೆ ನಿಮ್ಮ ಮೇಲ್ ಮಾಡಬಹುದಾಗಿದೆ. 10 ದಿನಗಳಲ್ಲಿ ನಿಮ್ಮ ಸಲಹೆ ಕಳುಹಿಸಿ. ನಾನು ಎಲ್ಲವನ್ನು ಪರಿಶೀಲಿಸುತ್ತೇನೆ. ನಿಮ್ಮ ಸಲಹೆ, ಸಮಸ್ಯೆಗಳನ್ನು ನಾನು ಆಲಿಸಿದ್ದೇನೆ. ನಿಮ್ಮ ಸಲಹೆಗಳು ಅತ್ಯುತ್ತಮವಾಗಿವೆ. ನಿಮ್ಮ ಸಮಸ್ಯೆಗಳ ಬಗ್ಗೆ ಅರಿವಿದೆ. ನಾನೂ ಅಪಾರ್ಟ್ ಮೆಂಟ್ ಗಳನ್ನು ಹೊಂದಿದ್ದೇನೆ. ನಿಮ್ಮ ಜೊತೆ ನಿಂತು, ಸಮಸ್ಯೆ…

Read More

ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಎನ್ನುವಂತೆ, ಜನವರಿ.15, 2026ರವರೆಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ಕುರಿತಂತೆ ಸಮಾಜ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಿದ್ದು, ಮಕ್ಕಳ ಆರಂಭಿಕ ಶಿಕ್ಷಣಕ್ಕೆ ಬೆಂಬಲವಾಗಿ ಸಮಾಜ ಕಲ್ಯಾಣ ಇಲಾಖೆಯಿಂದ 1ರಿಂದ 10ನೇ ತರಗತಿಯ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ನೀಡುತ್ತಿದೆ ಎಂದಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-01-2026 ಆಗಿರುತ್ತದೆ. ಅರ್ಜಿಯನ್ನು https://ssp.postmatric.karnataka.gov.in/ssppre/ ಲಿಂಕ್ ನಲ್ಲಿ ಆನ್ ಲೈನ್ ಮೂಲಕ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 9482300400ಗೆ ಕರೆ ಮಾಡಿ ಎಂದಿದೆ. https://kannadanewsnow.com/kannada/it-is-true-that-vote-theft-has-taken-place-appropriate-action-will-be-taken-against-it-dcm-d-k-shivakumar/ https://kannadanewsnow.com/kannada/parents-take-note-how-to-get-a-blue-aadhaar-card-for-your-children-heres-the-information/

Read More

ಬೆಂಗಳೂರು : “ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತ ಕಳ್ಳತನ ನಡೆದಿರುವುದು ಸತ್ಯ. ಹೀಗಾಗಿ ಬಿಜೆಪಿ ಮಾಜಿ ಶಾಸಕ ಗುತ್ತೇದಾರ್ ಅವರ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ ಮಾಡುವ ಮೂಲಕ ಮತ ಕಳ್ಳತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸ ಹಾಗೂ ವಿಧಾನಸೌಧದಲ್ಲಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. ಮತದಾರರ ಹಕ್ಕಿನ ರಕ್ಷಣೆಗೆ ಹೋರಾಟ ಆರಂಭ ಆಳಂದ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಸುಭಾಷ್ ಗುತ್ತೇದಾರ್ ಅವರ ಮೇಲೆ ಚಾರ್ಜ್ ಶೀಟ್ ಸಲ್ಲಿಕೆಯಾಗಿರುವ ಬಗ್ಗೆ ಕೇಳಿದಾಗ, “ಈ ಪ್ರಕರಣದಲ್ಲಿ ಯಾವುದೇ ಮುಚ್ಚುಮರೆಯಿಲ್ಲ. ಅಕ್ರಮ ನಡೆದಿರುವುದು ಸತ್ಯ. ಗಂಭೀರವಾದ ತನಿಖೆ ನಡೆಸಿ ಚಾರ್ಜ್ ಶೀಟ್ ಹಾಕಿದ್ದಾರೆ. ಈ ವಿಚಾರದ ಬಗ್ಗೆ ನಮ್ಮ ಶಾಸಕರು ಮಂಗಳವಾರದಂದು ಸದನದಲ್ಲಿ ದನಿ ಎತ್ತಲಿದ್ದಾರೆ. ಇದು ಕೇವಲ ಕರ್ನಾಟಕದ ದನಿಯಲ್ಲ. ಇಡೀ ಭಾರತದ ದನಿ. ಜನರ ಕೃಪೆಯಿಂದ ನಾವು ಇಲ್ಲಿ ಅಧಿಕಾರಕ್ಕೆ ಬಂದಿದ್ದೇವೆ” ಎಂದರು. “ತನಿಖೆ…

Read More

ಬೆಂಗಳೂರು : “ಮಾನವ ಧರ್ಮದ ಸೇವೆ ಮಾಡಬೇಕು ಎಂದವರು ಮಾತ್ರ ವೈದ್ಯ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಸೇವಾ ಮನೋಭಾವ ಇಲ್ಲದಿದ್ದವರು ವೈದ್ಯರಾಗಲು ಸಾಧ್ಯವಿಲ್ಲ,” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ಜಯನಗರದ ಯುನೈಟೆಡ್ ಆಸ್ಪತ್ರೆಯ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಸಮಾರಂಭದಲ್ಲಿ, ಆಸ್ಪತ್ರೆಯ ಕ್ರಾಂತಿಕಾರಿ ತುರ್ತು ಚಿಕಿತ್ಸಾ ಯೋಜನೆ ‘ME Care’ (ಮಿ ಕೇರ್) ಅನ್ನು ಉದ್ಘಾಟಿಸಿ ಅವರು ಮಾತನಾಡಿದರು. “ವೈದ್ಯ ವೃತ್ತಿಯಲ್ಲಿ ನಿಸ್ವಾರ್ಥ ಮನೋಭಾವ ಇರಬೇಕು. ಈ ಕೆಲಸದಲ್ಲಿ ಸಾಕಷ್ಟು ಸವಾಲುಗಳು ಇರುತ್ತವೆ. ಇದನ್ನು ಮೀರಿ ನಡೆಯಬೇಕು. ಈಗ ತಂತ್ರಜ್ಞಾನವೂ ಮುಂದುವರೆದು ನಿಮ್ಮ ನೆರವಿಗಿದೆ. ಇದರಿಂದ ಸಾಕಷ್ಟು ಉಪಯೋಗವಾಗಿದೆ,” ಎಂದರು. ಗ್ರಾಮೀಣ ಮತ್ತು ನಗರ ಭಾಗದ ವೈದ್ಯಕೀಯ ಸೇವೆಯ ಕುರಿತು ಮಾತನಾಡಿದ ಡಿಸಿಎಂ, “ಗ್ರಾಮೀಣ ಭಾಗದಲ್ಲಿ ಕೆಲಸ ನಿರ್ವಹಣೆ ಮಾಡಿದ ವೈದ್ಯರಿಗೆ ನಗರ ಭಾಗದಲ್ಲಿ ಕೆಲಸ ಮಾಡುವುದು ಸಾಕಷ್ಟು ಸುಲಭ. ನಗರ ಭಾಗದಲ್ಲಿ ಹಿರಿಯ ವೈದ್ಯರ ಸಲಹೆ ಪಡೆದು ಕಿರಿಯ ವೈದ್ಯರು ಕೆಲಸ ಮಾಡಬೇಕಾಗುತ್ತದೆ. ನಾನು ಸ್ವಲ್ಪ ದಿನ ವೈದ್ಯಕೀಯ…

Read More

ದೈನಂದಿನ ತಪ್ಪದೆ ಹೇಳಬೇಕಾದ ಪ್ರಾರ್ಥನಾ ಶ್ಲೋಕಗಳು ಶ್ರೀ ಗಣಪತಿ ಶ್ಲೋಕ ಅಗಜಾನನ ಪದ್ಮಾರ್ಕಂ ಗಜಾನನಂ ಅಹರ್ನಿಶಂ | ಅನೇಕದಂ ತಂ ಭಕ್ತಾನಾಂ ಏಕದಂತಮುಪಾಸ್ಮಹೇ || ಶ್ರೀ ಕೃಷ್ಣ ಶ್ಲೋಕ ವಸುದೇವಸುತಂ ದೇವಂ ಕಂಸ ಚಾಣೂರ ಮರ್ದನಂ | ದೇವಕೀ ಪರಮಾನಂದಂ ಕೃಷ್ಣಂ ವಂದೇ ಜಗದ್ಗುರುಂ || ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು…

Read More

ಮಂಡ್ಯ :- ಮದ್ದೂರು ನಗರದ ಅಭಿವೃದ್ಧಿಗೆ ಮಾಸ್ಟರ್‌ ಪ್ಲಾನ್‌ ಸಿದ್ಧಪಡಿಸಲಾಗಿದ್ದು, ಅದರಂತೆ ಸಮಗ್ರ ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಶನಿವಾರ ಹೇಳಿದರು. ಮದ್ದೂರು ನಗರಸಭೆ ಕಛೇರಿಯ ನವೀಕರಣ ಹಾಗೂ ಹೆಚ್ಚುವರಿ ಕಟ್ಟಡ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗೆ 2.20 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಮದ್ದೂರು ಪುರಸಭೆಯನ್ನು ಈಗಾಗಲೇ ರಾಜ್ಯ ಸರ್ಕಾರ ನಗರಸಭೆಯನ್ನಾಗಿ ಮೇಲ್ದರ್ಜೆಗೆರಿಸಲಾಗಿದೆ. ಹೀಗಾಗಿ ನಗರದ ಜೊತೆಗೆ 4 ಗ್ರಾಮ ಪಂಚಾಯಿತಿಗಳು ಸಹ ಸೇರ್ಪಡೆಗೊಂಡಿರುವುದರಿಂದ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಹೆಚ್ಚಿನ ಸ್ಥಳಾವಕಾಶದ ಅಗತ್ಯವಿದ್ದು, ಹೀಗಾಗಿ ಹಳೇ ಕಟ್ಟಡವನ್ನು ನವೀಕರಣ ಹಾಗೂ ಹೆಚ್ಚುವರಿ ಕಟ್ಟಡಕ್ಕೆ ಶಿಲಾನ್ಯಾಸ ಮಾಡಲಾಗಿದೆ ಎಂದು ತಿಳಿಸಿದರು. ಮದ್ದೂರು ನಗರಸಭೆ ವ್ಯಾಪ್ತಿಯನ್ನು ಅಭಿವೃದ್ಧಿ ಪಡಿಸಲು ಈಗಾಗಲೇ ಮಾಸ್ಟರ್‌ ಪ್ಲಾನ್‌ ಸಿದ್ಧಪಡಿಸಲಾಗಿದ್ದು, ಅದರಂತೆ ಸಮಗ್ರ ಅಭಿವೃದ್ಧಿ ಪಡಿಸಲಾಗುವುದು. ನಗರಸಭೆ ಕಛೇರಿಯ ಪಕ್ಕದ ತೋಟಗಾರಿಕೆ ಇಲಾಖೆ ಜಾಗದಲ್ಲಿ ನೂತನವಾಗಿ ನಗರಸಭೆ ಕಟ್ಟಡ ನಿರ್ಮಾಣಕ್ಕೆ ಈಗಾಗಲೇ ಜಾಗ ಗುರುತಿಸಲಾಗಿದ್ದು, ಪೌರಾಡಳಿತ ಸಚಿವರಿಗೆ 10 ಕೋಟಿ ರೂ…

Read More

ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಮನೆಯಲ್ಲಿ ಕಳ್ಳತನ ನಡೆದಿರೋದಾಗಿ ತಿಳಿದು ಬಂದಿದೆ. ಬೆಂಗಳೂರಿನಲ್ಲಿ ಇರುವಂತ ಖ್ಯಾತ ಮ್ಯೂಸಿಕ್ ಡೈರೆಕ್ಟರ್ ರಿಕ್ಕಿ ಕೇಜ್ ಮನೆಯ ಮುಂಭಾಗದಲ್ಲಿ ಇದ್ದಂತ ನೀರಿನ ಸಂಪಿನ ಮುಚ್ಚಳವನ್ನೇ ಕಳ್ಳರು ಹೊತ್ತೊಯ್ದಿದ್ದಾರೆ. ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಮನೆಯ ಮುಂಭಾಗದಲ್ಲಿದ್ದಂತ ನೀರಿನ ಸಂಪಿನ ಮುಚ್ಚಳ ಕದ್ದೊಯ್ಯುತ್ತಿರುವಂತ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದ್ವಿಚಕ್ರ ವಾಹನದಲ್ಲಿ ಬಂದಿರುವಂತ ಇಬ್ಬರು ಕಳ್ಳರು, ರಿಕ್ಕಿ ಕೇಜ್ ಮನೆಯ ನೀರಿನ ಸಂಪಿನ ಮುಚ್ಚಳವನ್ನು ಹೊತ್ತೊಯ್ದಿರೋದಾಗಿ ತಮ್ಮ ಎಕ್ಸ್ ಖಾತೆಯಲ್ಲಿ ಬರೆದು ಮಾಹಿತಿ ಹಂಚಿಕೊಂಡಿದ್ದಾರೆ. https://twitter.com/rickykej/status/1999710877021286575 https://kannadanewsnow.com/kannada/cabinet-clears-indias-biggest-education-overhaul-bill-replacing-ugc-aicte/ https://kannadanewsnow.com/kannada/parents-take-note-how-to-get-a-blue-aadhaar-card-for-your-children-heres-the-information/

Read More

ನವದೆಹಲಿ: ಕೇಂದ್ರ ಸಚಿವ ಸಂಪುಟವು ಭಾರತ ಉನ್ನತ ಶಿಕ್ಷಣ ಆಯೋಗ (HECI) ಮಸೂದೆ ಎಂದು ಕರೆಯಲಾಗುತ್ತಿದ್ದ ವಿಕ್ಷಿತ್ ಭಾರತ್ ಶಿಕ್ಷಾ ಅಧಿಕಾರಿ ಮಸೂದೆಯನ್ನು ಅಂಗೀಕರಿಸಿದ ನಂತರ ಭಾರತದ ಉನ್ನತ ಶಿಕ್ಷಣ ಚೌಕಟ್ಟನ್ನು ಪ್ರಮುಖವಾಗಿ ಮರುಹೊಂದಿಸಲು ಸಜ್ಜಾಗಿದೆ. ಕರಡು ಕಾನೂನು UGC, AICTE ಮತ್ತು NCTE ಗಳನ್ನು ಬದಲಿಸಲು ಒಂದೇ ಉನ್ನತ ಶಿಕ್ಷಣ ನಿಯಂತ್ರಕವನ್ನು ರಚಿಸುತ್ತದೆ, ಇದು ದೇಶಾದ್ಯಂತ ಎಲ್ಲಾ ವೈದ್ಯಕೀಯೇತರ ಮತ್ತು ಕಾನೂನೇತರ ಸಂಸ್ಥೆಗಳನ್ನು ಒಳಗೊಂಡಿದೆ. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ (NEP 2020) ವಿವರಿಸಿದಂತೆ ಹೊಸ ಆಯೋಗವು ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಿಗೆ ನಿಯಂತ್ರಣ, ಮಾನ್ಯತೆ ಮತ್ತು ಶೈಕ್ಷಣಿಕ ಮಾನದಂಡಗಳನ್ನು ನಿರ್ವಹಿಸುತ್ತದೆ. ವೈದ್ಯಕೀಯ ಮತ್ತು ಕಾನೂನು ಕಾಲೇಜುಗಳು ತಮ್ಮ ಅಸ್ತಿತ್ವದಲ್ಲಿರುವ ನಿಯಂತ್ರಕರ ಅಡಿಯಲ್ಲಿಯೇ ಉಳಿಯುತ್ತವೆ. 12 ಡಿಸೆಂಬರ್ 2025 ರಂದು ಅನುಮೋದನೆಯು ಇತ್ತೀಚಿನ ದಶಕಗಳಲ್ಲಿ ಭಾರತೀಯ ಉನ್ನತ ಶಿಕ್ಷಣದಲ್ಲಿನ ಅತಿದೊಡ್ಡ ರಚನಾತ್ಮಕ ಬದಲಾವಣೆಗಳಲ್ಲಿ ಒಂದಾಗಿದೆ. ವೀಕ್ಷಿತ್ ಭಾರತ್ ಶಿಕ್ಷಾ ಅಧಿಕಾರಿ ಮಸೂದೆ ಉನ್ನತ ಶಿಕ್ಷಣ ನಿಯಂತ್ರಕ ಮತ್ತು NEP 2020 ದೃಷ್ಟಿಕೋನ NEP…

Read More

ಬೆಂಗಳೂರು: ರಾಜಧಾನಿಯ ಸಮೀಪ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ಸ್ಥಳದ ಅನುಕೂಲ ಮತ್ತು ತಾಂತ್ರಿಕ ಹಾಗೂ ಆರ್ಥಿಕ ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲು ಪರಿಣತ ಸಲಹಾ ಸಂಸ್ಥೆಯ ಆಯ್ಕೆಗಾಗಿ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮವು (ಕೆಎಸ್ಐಐಡಿಸಿ) ಟೆಂಡರ್ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು 2026ರ ಜನವರಿ 12 ಕೊನೆಯ ದಿನವಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರು ಶನಿವಾರ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಅವರು, 2ನೇ ವಿಮಾನ ನಿಲ್ದಾಣಕ್ಕಾಗಿ ರಾಜ್ಯ ಸರಕಾರವು ಕನಕಪುರ ರಸ್ತೆಯಲ್ಲಿರುವ ಚೂಡಹಳ್ಳಿ, ಸೋಮನಹಳ್ಳಿ ಮತ್ತು ನೆಲಮಂಗಲದ ಬಳಿ ಸ್ಥಳಗಳನ್ನು ಗುರುತಿಸಿದೆ. ಭಾರತೀಯ ವಿಮಾನನಿಲ್ದಾಣ ಪ್ರಾಧಿಕಾರದ ಉನ್ನತ ಮಟ್ಟದ ತಂಡವು ಇವುಗಳ ಪರಿಶೀಲನೆ ನಡೆಸಿ ಪ್ರಾಥಮಿಕ ವರದಿ ನೀಡಿದೆ. ಈಗ ಟೆಂಡರಿನಲ್ಲಿ ಆಯ್ಕೆಯಾಗುವ ಸಲಹಾ ಸಂಸ್ಥೆಯು 5 ತಿಂಗಳಲ್ಲಿ ಸರಕಾರಕ್ಕೆ ತನ್ನ ಸಮಗ್ರ ತಾಂತ್ರಿಕ ಮತ್ತು ಆರ್ಥಿಕ ಕಾರ್ಯಸಾಧ್ಯತಾ ವರದಿ ಕೊಡಬೇಕಾಗುತ್ತದೆ ಎಂದಿದ್ದಾರೆ. ಕಳೆದ 5 ವರ್ಷಗಳಲ್ಲಿ ವಾರ್ಷಿಕವಾಗಿ…

Read More