Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ನಾವು ನಿತ್ಯವೂ ಸವಿಯುವ ಅನೇಕ ರುಚಿಕರವಾದ ಆಹಾರ ಪದಾರ್ಥಗಳು ಯಾವುದೇ ಶೆಫ್‌ಗಳು ಯೋಚಿಸಿ, ಪ್ಲಾನ್ ಮಾಡಿ ಸಿದ್ಧಪಡಿಸಿದ ರೆಸಿಪಿಗಳಲ್ಲ! ಬದಲಿಗೆ, ಅಡುಗೆಮನೆಯಲ್ಲಿ ಅಕಸ್ಮಾತ್ ಆಗಿ ನಡೆದ ತಪ್ಪುಗಳು, ಮರೆವು ಹಾಗೂ ವಿಚಿತ್ರ ಪ್ರಯೋಗಗಳಿಂದಲೇ ಇವು ಜನ್ಮತಾಳಿವೆ. ಅಡುಗೆಯಲ್ಲಿ ಆಗುವ ತಪ್ಪುಗಳು ಸಾಮಾನ್ಯವಾಗಿ ಪದಾರ್ಥಗಳನ್ನು ಹಾಳುಮಾಡುತ್ತವೆ. ಆದರೆ, ಇತಿಹಾಸದಲ್ಲಿ ನಡೆದ ಕೆಲವು ವಿಶಿಷ್ಟ ‘ಯಡವಟ್ಟುಗಳು’ ಮಾತ್ರ ಇಂದು ಜಗತ್ತಿನಾದ್ಯಂತ ಕೋಟ್ಯಂತರ ಜನ ಇಷ್ಟಪಡುವ ಸೂಪರ್ ಹಿಟ್ ಆಹಾರಗಳಾಗಿ ಬದಲಾಗಿವೆ. ಹಾಗೆ ಆಕಸ್ಮಿಕವಾಗಿ (by accident) ಆವಿಷ್ಕಾರಗೊಂಡು, ಇಂದು ಜಗತ್ತನ್ನು ಆಳುತ್ತಿರುವ 5 ಪ್ರಸಿದ್ಧ ಆಹಾರಗಳ ರೋಚಕ ಕಥೆ ಇಲ್ಲಿದೆ: 1. ಪೊಟಾಟೋ ಚಿಪ್ಸ್ (Potato Chips) ಇಂದು ಸಿನಿಮಾ ನೋಡುವಾಗಲೋ ಅಥವಾ ಸಂಜೆಯ ಟೀ ಜೊತೆಗೋ ನಮಗೆಲ್ಲರಿಗೂ ಬೇಕೇ ಬೇಕಾಗುವ ಕುರುಕುಲು ತಿಂಡಿ ಪೊಟಾಟೋ ಚಿಪ್ಸ್. ಆದರೆ, ಇದರ ಜನನದ ಹಿಂದೆ ಒಬ್ಬ ಗ್ರಾಹಕನ ಮೇಲಿನ ಸಿಟ್ಟು ಅಡಗಿದೆ! ಇತಿಹಾಸ: 1853ರಲ್ಲಿ ನ್ಯೂಯಾರ್ಕ್‌ನ ರೆಸ್ಟೋರೆಂಟ್‌ ಒಂದರಲ್ಲಿ ಜಾರ್ಜ್ ಕ್ರಮ್ ಎಂಬ ಶೆಫ್ ಕೆಲಸ…

Read More

ಭೋಪಾಲ್: ಮಧ್ಯಪ್ರದೇಶದ ಅನುಪುರ್ ಜಿಲ್ಲೆಯಲ್ಲಿ ಶನಿವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಧಾರ್ಮಿಕ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ಭಕ್ತರಿದ್ದ ಟ್ರ್ಯಾಕ್ಟರ್-ಟ್ರಾಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಆರು ಮಂದಿ ದುರ್ಮರಣಕ್ಕೀಡಾಗಿದ್ದು, ಕನಿಷ್ಠ 39 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಅನುಪುರ್ ಜಿಲ್ಲೆಯ ಗಿಂಜ್ರಿ ಗ್ರಾಮದ ಬಳಿ ಈ ದಾರುಣ ಘಟನೆ ನಡೆದಿದೆ. ಪಡನಿಯಾ ಗ್ರಾಮದಿಂದ ಸುಮಾರು 50ಕ್ಕೂ ಹೆಚ್ಚು ಜನರನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್, ಬಿಜೋರಾ ಗ್ರಾಮದ ಶನಿದೇವ ಮುಕ್ತಿ ಧಾಮ ದೇವಸ್ಥಾನದ ಬಳಿ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಉರುಳಿ ಬಿದ್ದಿದೆ. ಅಪಘಾತದ ತೀವ್ರತೆಗೆ ಟ್ರಾಲಿಯ ಅಡಿಯಲ್ಲಿ ಹಲವು ಪ್ರಯಾಣಿಕರು ಸಿಲುಕಿಕೊಂಡಿದ್ದರಿಂದ ಸ್ಥಳದಲ್ಲಿ ಕಿರುಚಾಟ, ಆಕ್ರಂದನ ಮುಗಿಲು ಮುಟ್ಟಿತ್ತು. ಸ್ಥಳೀಯರು ಮತ್ತು ಪೊಲೀಸರಿಂದ ರಕ್ಷಣಾ ಕಾರ್ಯಾಚರಣೆ ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿದ್ದು, ಗ್ರಾಮಸ್ಥರ ಸಹಾಯದೊಂದಿಗೆ ಭರದಿಂದ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಟ್ರಾಲಿಯ ಅಡಿಯಲ್ಲಿ ಸಿಲುಕಿದ್ದವರನ್ನು ಹೊರತೆಗೆದು ತಕ್ಷಣವೇ ಪಾಲಿಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ…

Read More

ಬೆಂಗಳೂರು: ರಾಜ್ಯ ರಾಜಕಾರಣದ ಮಹತ್ವದ ಬೆಳವಣಿಗೆಯೊಂದರಲ್ಲಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ನೂತನ ನಾಯಕನಾಗಿ ಅವಿರೋಧವಾಗಿ ಆಯ್ಕೆಯಾದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಇಂದು ರಾಜಭವನಕ್ಕೆ ತೆರಳಿ ಸರ್ಕಾರ ರಚಿಸಲು ಅಧಿಕೃತವಾಗಿ ಹಕ್ಕು ಮಂಡಿಸಿದರು. ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾದ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಹಿರಿಯ ನಾಯಕರ ನಿಯೋಗವು, ತಮಗೆ ಶಾಸಕರ ಸಂಪೂರ್ಣ ಬೆಂಬಲವಿರುವ ಅಧಿಕೃತ ಪತ್ರವನ್ನು ಹಸ್ತಾಂತರಿಸಿತು. ಜೊತೆಗೆ ರಾಜ್ಯದಲ್ಲಿ ನೂತನ ಸಂಪುಟ ರಚನೆಗೆ ಅವಕಾಶ ಮಾಡಿಕೊಡಬೇಕು ಎಂದು ಕೋರಿ, ಜೂನ್ 3ರಂದು ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ರಾಜ್ಯಪಾಲರನ್ನು ಅಧಿಕೃತವಾಗಿ ಆಹ್ವಾನಿಸಲಾಯಿತು. ಒಂದೇ ಕಾರಿನಲ್ಲಿ ತೆರಳಿ ಒಗ್ಗಟ್ಟು ಪ್ರದರ್ಶಿಸಿದ ನಾಯಕರು ವಿಧಾನಸೌಧದಲ್ಲಿ ಸಭೆ ಮುಗಿದ ತಕ್ಷಣವೇ ರಾಜಭವನದತ್ತ ಧಾವಿಸಿದ ನಾಯಕರ ನಡೆ ತೀವ್ರ ಕುತೂಹಲ ಮೂಡಿಸಿತ್ತು. ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ, ನೂತನ ಸಿಎಂ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ರಾಜ್ಯ ಕಾಂಗ್ರೆಸ್…

Read More

ಬೆಂಗಳೂರು: ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ನೂತನ ನಾಯಕನಾಗಿ ಸರ್ವಾನುಮತದಿಂದ ಆಯ್ಕೆಯಾದ ಬೆನ್ನಲ್ಲೇ, ಡಿ.ಕೆ. ಶಿವಕುಮಾರ್ ಅವರು ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚಿಸಲು ಅಧಿಕೃತವಾಗಿ ಹಕ್ಕು ಮಂಡಿಸಿದ್ದಾರೆ. ವಿಧಾನಸೌಧದ ಪ್ರಕ್ರಿಯೆಗಳು ಮುಗಿಯುತ್ತಿದ್ದಂತೆ ಕಾಂಗ್ರೆಸ್‌ನ ಪ್ರಮುಖ ನಾಯಕರು ರಾಜಭವನದತ್ತ (ಲೋಕಭವನ) ಧಾವಿಸಿದರು. ಈ ವೇಳೆ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ, ನೂತನ ಸಿಎಂ ಆಗಿ ಆಯ್ಕೆಯಾಗಿರುವ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ್ ಅವರು ಒಂದೇ ಕಾರಿನಲ್ಲಿ ಒಟ್ಟಿಗೆ ಪ್ರಯಾಣಿಸಿದ್ದು ವಿಶೇಷವಾಗಿತ್ತು. ನಾಯಕರ ನಡುವಿನ ಈ ಒಗ್ಗಟ್ಟಿನ ಪ್ರದರ್ಶನ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ. ರಾಜ್ಯಪಾಲರಿಗೆ ಆಹ್ವಾನ ಪತ್ರ ಸಲ್ಲಿಕೆ ರಾಜಭವನಕ್ಕೆ ಆಗಮಿಸಿದ ಕಾಂಗ್ರೆಸ್ ನಿಯೋಗವು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿತು. ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ನೂತನ ನಾಯಕನನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿರುವ ಕುರಿತಾದ ಅಧಿಕೃತ ಪತ್ರವನ್ನು ಈ ಸಂದರ್ಭದಲ್ಲಿ…

Read More

ಬೆಂಗಳೂರು: ಕಾಂಗ್ರೆಸ್ ನೂತನ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾಗಿರುವಂತ ಡಿ.ಕೆ ಶಿವಕುಮಾರ್ ಅವರು ಕರ್ನಾಟಕ ಮುಖ್ಯಮಂತ್ರಿಯಾಗಿ ಜೂನ್.3ರಂದು ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬುದಾಗಿ ಎಐಸಿಸಿ ವೀಕ್ಷಕರಾದಂತ ಕೆ.ಸಿ ವೇಣುಗೋಪಾಲ್ ಘೋಷಿಸಿದ್ದಾರೆ. ಇಂದು ಸಿಎಲ್ ಪಿ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ನೀಡಿದಂತ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ. ಆ ಬಳಿಕ ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕ ಮುಖ್ಯಮಂತ್ರಿ ಆಯ್ಕೆಗೆ ಸೂಚಿಸಲಾಗಿತ್ತು. ಅದರಂತೆ ಇಂದು ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ಸಿಎಲ್ ಪಿ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಅವರ ಆಯ್ಕೆಯನ್ನು ಸಿದ್ಧರಾಮಯ್ಯ ಅವರು ಪ್ರಸ್ತಾಪಿಸಿದರು. ಅದಕ್ಕೆ ಡಾ.ಜಿ ಪರಮೇಶ್ವರ್ ಅವರು ಅನುಮೋದನೆ ನೀಡಿದರು ಎಂದರು. ಜೂನ್.3ರಂದು ಸಂಜೆ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರಿಸಲಿದ್ದಾರೆ. ಅವರು ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಆಹ್ವಾನಿಸಲಿದ್ದಾರೆ ಎಂಬುದಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಕೆ.ಸಿ ವೇಣುಗೋಪಲ್ ತಿಳಿಸಿದರು. ಸಿಎಲ್ ಪಿ ನಾಯಕರಾಗಿ ಡಿ.ಕೆ ಶಿವಕುಮಾರ್…

Read More

ಬೆಂಗಳೂರು: ಸಿದ್ಧರಾಮಯ್ಯ ನಂತ್ರದ ಉತ್ತರಾಧಿಕಾರಿಯಾಗಿ ಡಿಕೆ ಶಿವಕುಮಾರ್ ಅವರನ್ನು ಶಾಸಕಾಂಗ ಪಕ್ಷದ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ಇಂದಿನ ಸಿಎಲ್ ಪಿ ಸಭೆಯಲ್ಲಿ ಡಿ.ಕೆ ಶಿವಕುಮಾರ್ ಪರವಾಗಿ ಶಾಸಕರು ಭರ್ಜರಿ ಬೆಂಬಲ ವ್ಯಕ್ತ ಪಡಿಸಿದ್ದಾರೆ. ಸಿಎಲ್ ಪಿ ಸಭೆಗೆ ಹಾಜರಾಗಿದ್ದಂತ ಬಹುತೇಕ ಶಾಸಕರು ಡಿ.ಕೆ ಶಿವಕುಮಾರ್ ಅವರನ್ನು ನೂತನ ಶಾಸಕಾಂಗ ಪಕ್ಷದ ನಾಯಕನಾಗಿ, ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆಗೆ ಕೈ ಎತ್ತಿ ಬೆಂಬಲ ವ್ಯಕ್ತ ಪಡಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಕಾಂಗ್ರೆಸ್ ಪಕ್ಷದ ಮಹತಕ್ವದ ಶಾಸಕಾಂಕ ಪಕ್ಷದ ಸಭೆ ನಡೆಯಿತು. ಈ ಸಭೆಯಲ್ಲಿ ಶಾಸಕರು, ರಾಜ್ಯ ಸಭೆ ಸದಸ್ಯರು ಭಾಗಿಯಾಗಿದ್ದರು. ಸಿದ್ಧರಾಮಯ್ಯ ತರುವಾಯ ಮುಂದಿನ ಮುಖ್ಯಮಂತ್ರಿ ಆಯ್ಕೆಗಾಗಿ, ಶಾಸಕಾಂಗ ಪಕ್ಷದ ನೂತನ ನಾಯಕನನ್ನಾಗಿ ಆಯ್ಕೆಗೆ ಶಾಸಕರನ್ನು ಕೋರಲಾಯಿತು. ಈ ವೇಳೆ ಸಭೆಯಲ್ಲಿ ಹಾಜರಿದ್ದಂತ ಬಹುತೇಕರು ಕೈ ಎತ್ತಿ ಡಿ.ಕೆ ಶಿವಕುಮಾರ್ ಗೆ ಬೆಂಬಲ ಸೂಚಿಸಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ಸಿಎಲ್ ಪಿ ನಾಯಕ, ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆಯ ಬಗ್ಗೆ…

Read More

ನವದೆಹಲಿ: ಇಂದು (ಮೇ 30, 2026) ನಡೆದ ಸಿಯುಇಟಿ ಯುಜಿ (CUET UG 2026) ಪರೀಕ್ಷೆಯ ಮೊದಲ ಶಿಫ್ಟ್‌ನಲ್ಲಿ ಎದುರಾದ ತಾಂತ್ರಿಕ ಅಡಚಣೆಯಿಂದ ಕಂಗಾಲಾಗಿದ್ದ ಅಭ್ಯರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಬಿಗ್ ರಿಲೀಫ್ ನೀಡಿದೆ. ತಾಂತ್ರಿಕ ಸಮಸ್ಯೆಯಿಂದಾಗಿ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ನಡೆಸಲಾಗುವುದು ಎಂದು ಎನ್‌ಟಿಎ ಅಧಿಕೃತವಾಗಿ ಪ್ರಕಟಿಸಿದೆ. https://twitter.com/NTA_Exams/status/2060687615209472019 ತಾಂತ್ರಿಕ ದೋಷದಿಂದ ಅಭ್ಯರ್ಥಿಗಳಿಗೆ ಸಂಕಷ್ಟ ಮೇ 30 ರ ಶನಿವಾರದಂದು ನಡೆದ ಶಿಫ್ಟ್-1 (Shift-I) ಪರೀಕ್ಷೆಯ ಸಂದರ್ಭದಲ್ಲಿ ದೇಶದ ಕೆಲವು ಪರೀಕ್ಷಾ ಕೇಂದ್ರಗಳಲ್ಲಿ ಹಠಾತ್ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಇದರಿಂದಾಗಿ ಪರೀಕ್ಷೆ ಬರೆಯಲು ಸಜ್ಜಾಗಿದ್ದ ನೂರಾರು ವಿದ್ಯಾರ್ಥಿಗಳು ತೀವ್ರ ಆತಂಕ ಮತ್ತು ಕದಡpoints ಅನುಭವಿಸುವಂತಾಯಿತು. ಈ ದುರದೃಷ್ಟಕರ ಘಟನೆಯಿಂದಾಗಿ ಉಂಟಾದ ಗೊಂದಲಕ್ಕೆ ಎನ್‌ಟಿಎ ವಿಷಾದ ವ್ಯಕ್ತಪಡಿಸಿದೆ. ಮರುಪರೀಕ್ಷೆಗೆ ಯಾರು ಅರ್ಹರು? ಎನ್‌ಟಿಎ ನೀಡಿರುವ ಸ್ಪಷ್ಟನೆಯ ಪ್ರಕಾರ, ಈ ಕೆಳಗಿನ ಮಾನದಂಡಗಳನ್ನು ಹೊಂದಿರುವ ಅಭ್ಯರ್ಥಿಗಳಿಗೆ ಮಾತ್ರ ಮತ್ತೊಮ್ಮೆ ಪರೀಕ್ಷೆ ಬರೆಯುವ ಅವಕಾಶ ಸಿಗಲಿದೆ: ಇಂದು (30.05.2026) ತಮ್ಮ ಪರೀಕ್ಷಾ…

Read More

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆಯ ಪ್ರಕ್ರಿಯೆ ಬೆನ್ನಲ್ಲೇ, ಇದೀಗ ಅಧಿಕಾರ ಹಂಚಿಕೆಯ ಹೋರಾಟ ತೀವ್ರಗೊಂಡಿದೆ. ಆಂತರಿಕ ಗೊಂದಲಗಳು ಕೇವಲ ಸಿಎಂ ಹುದ್ದೆಗೆ ಸೀಮಿತವಾಗಿರದೆ, ಮುಂಬರುವ ಸಂಪುಟ ಪುನರ್‌ ರಚನೆ ಮತ್ತು ಪ್ರಮುಖ ಹುದ್ದೆಗಳಿಗಾಗಿ ಭಾರಿ ಪೈಪೋಟಿ ಆರಂಭವಾಗಿದೆ ಎಂದು ‘ಕನ್ನಡ ನ್ಯೂಸ್ ನೌ.ಕಾಂ’ ವರದಿ ಮಾಡಿದೆ. ಪಕ್ಷದೊಳಗಿನ ಪ್ರಮುಖ ಶಕ್ತಿ ಕೇಂದ್ರಗಳು ಸಂಪುಟ ವಿಸ್ತರಣೆ, ನೂತನ ಕೆಪಿಸಿಸಿ ಅಧ್ಯಕ್ಷರ ಆಯ್ಕೆ, ರಾಜ್ಯಸಭಾ ಸೀಟುಗಳ ಹಂಚಿಕೆ ಹಾಗೂ ವಿವಿಧ ನಿಗಮ-ಮಂಡಳಿಗಳ ನೇಮಕಾತಿಗಳ ಮೇಲೆ ಕಣ್ಣಿಟ್ಟಿದ್ದು, ಹೈಕಮಾಂಡ್ ಮೇಲೆ ಒತ್ತಡ ಹೇರಲು ಸಜ್ಜಾಗಿವೆ. ರಾಜ್ಯ ಕಾಂಗ್ರೆಸ್‌ನಲ್ಲಿ ಪ್ರಸ್ತುತ ಮೂರು ಪ್ರಮುಖ ಬಣಗಳು ಸಕ್ರಿಯವಾಗಿದ್ದು, ಆ ಶಕ್ತಿ ಕೇಂದ್ರಗಳ ಸಂಪೂರ್ಣ ವಿವರ ಇಲ್ಲಿದೆ: 1. ರಾಜ್ಯ ರಾಜಕಾರಣದ 3 ಮುಖ್ಯ ಧ್ರುವಗಳು ರಾಜ್ಯದಲ್ಲಿ ತಮಗೆ ಮತ್ತು ತಮ್ಮ ಬೆಂಬಲಿಗರಿಗೆ ಗರಿಷ್ಠ ಪ್ರಮಾಣದ ಅಧಿಕಾರ ಸಿಗುವಂತೆ ಮಾಡಲು ಹಿರಿಯ ನಾಯಕರು ಆಗಾಗ್ಗೆ ದೆಹಲಿಗೆ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ, ನೂತನ ಮುಖ್ಯಮಂತ್ರಿಯಾಗಿ…

Read More

ಬೆಂಗಳೂರು : ನೂತನ ಸಚಿವ ಸಂಪುಟದಲ್ಲಿ ತಾವು ಉಪ ಮುಖ್ಯಮಂತ್ರಿ ಆಗಬೇಕು ಎಂಬುದು ವೀರಶೈವ ಲಿಂಗಾಯತ ಸಮಾಜದ ಆಶಯವಾಗಿದೆ. ಈ ಬಾರಿ 36 ಲಿಂಗಾಯತ ಶಾಸಕರು ಜಯ ಸಾಧಿಸಿದ್ದು, ಸೂಕ್ತ ಪ್ರಾತಿನಿಧ್ಯ ದೊರಕುತ್ತದೆ ಎಂಬ ವಿಶ್ವಾಸವನ್ನು ಮಾಜಿ ಸಚಿವ ಈಶ್ವರ ಖಂಡ್ರೆ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ವಿವಿಧ ಮಠಾಧಿಪತಿಗಳು, ಹರಚರ ಗುರುಮೂರ್ತಿಗಳು ತಮಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಅವರೆಲ್ಲರ ಅಭಿಮಾನ, ಹಾರೈಕೆಗೆ ತಾವು ಆಭಾರಿ ಎಂದರು. ನಾನು, ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ಸೇವಾದಳದಿಂದ ಸಾರ್ವಜನಿಕ ಜೀವನಕ್ಕೆ ಕಾಲಿಟ್ಟು, ಜಿಲ್ಲಾಧ್ಯಕ್ಷನಾಗಿ, ಶಾಸಕನಾಗಿ, ಕಾರ್ಯಾಧ್ಯಕ್ಷನಾಗಿ, ಸಚಿವನಾಗಿ ಸೇವೆ ಸಲ್ಲಿಸಿದ್ದು, ತಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಲಭಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷನಾಗಿ ಸಂಪುಟದಲ್ಲಿ ತಮ್ಮ ಸಮಾಜದ ಶಾಸಕರಿಗೆ ಹೆಚ್ಚಿನ ಸ್ಥಾನ ನೀಡಬೇಕು ಎಂದು ವರಿಷ್ಠರಿಗೆ ಮನವಿ ಮಾಡಿರುವುದಾಗಿ ತಿಳಿಸಿದ ಈಶ್ವರ ಖಂಡ್ರೆ, ಇಂದು ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ…

Read More

ಶಿವಮೊಗ್ಗ: ಜಿಲ್ಲೆಯ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ನೂತನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಸೋಮಶೇಖರ ಲ್ಯಾವಿಗೆರೆ ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಪಕ್ಷ ಸಂಘಟನೆಯ ದೃಷ್ಟಿಯಿಂದ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ. ಜಿಲ್ಲೆಯಲ್ಲಿ ಬಿಜೆಪಿ ಕಟ್ಟಿಹಾಕಲು ಬೇಳೂರು ಅನಿವಾರ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿಯನ್ನು ಅತ್ಯಂತ ಪ್ರಬಲವಾಗಿ ತಮ್ಮ ನೇರ ಹಾಗೂ ದಿಟ್ಟ ಹೇಳಿಕೆಗಳ ಮೂಲಕ ಕಟ್ಟಿಹಾಕುವ ರಾಜಕೀಯ ಸಾಮರ್ಥ್ಯ ಇರುವುದು ಗೋಪಾಲಕೃಷ್ಣ ಬೇಳೂರು ಅವರಿಗೆ ಮಾತ್ರ ಎಂದು ಸೋಮಶೇಖರ ಲ್ಯಾವಿಗೆರೆ ಹೇಳಿದ್ದಾರೆ. ಕಳೆದ ಎರಡೂವರೆ ದಶಕಗಳಿಂದ ರಾಜ್ಯ ರಾಜಕಾರಣದಲ್ಲಿ ಸಕ್ರಿಯವಾಗಿರುವ ಬೇಳೂರು ಅವರು ಈಗಾಗಲೇ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಕ್ಷೇತ್ರದ ಅಭಿವೃದ್ಧಿಯ ಜೊತೆಗೆ ಜನರೊಂದಿಗೆ ಉತ್ತಮ ಸೌಹಾರ್ದ ಸಂಬಂಧವನ್ನು ಅವರು ಹೊಂದಿದ್ದಾರೆ ಎಂದು ಲ್ಯಾವಿಗೆರೆ ಗುಣಗಾನ ಮಾಡಿದ್ದಾರೆ.…

Read More