Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ‘ಜಲ ಜೀವನ್ ಮಿಷನ್’ (JJM) ಯೋಜನೆಯನ್ನು ಮರುಸಂಘಟಿಸಿ, ‘ಜಲ ಜೀವನ್ ಮಿಷನ್ 2.0’ ಅನುಷ್ಠಾನಕ್ಕೆ ಮಹತ್ವದ ಅನುಮೋದನೆ ನೀಡಿದೆ. ಈ ಯೋಜನೆಯು ಇನ್ನು ಮುಂದೆ ಕೇವಲ ಮೂಲಸೌಕರ್ಯ ನಿರ್ಮಾಣಕ್ಕೆ ಸೀಮಿತವಾಗದೆ, ಮನೆ ಮನೆಗೆ ನಿರಂತರ ಮತ್ತು ಸುಸ್ಥಿರ ನೀರು ಸರಬರಾಜು ಮಾಡುವ ‘ಸೇವಾ ವಿತರಣೆ’ಯ ಮೇಲೆ ಕೇಂದ್ರೀಕರಿಸಲಿದೆ. ಯೋಜನೆಯ ಪ್ರಮುಖ ಮುಖ್ಯಾಂಶಗಳು: ಬೃಹತ್ ಅನುದಾನ: ಯೋಜನೆಯ ಒಟ್ಟು ವೆಚ್ಚವನ್ನು ₹8.69 ಲಕ್ಷ ಕೋಟಿಗೆ ಏರಿಸಲಾಗಿದೆ. ಇದರಲ್ಲಿ ಕೇಂದ್ರ ಸರ್ಕಾರದ ಪಾಲು ₹3.59 ಲಕ್ಷ ಕೋಟಿ ಇರಲಿದ್ದು, ಈ ಹಿಂದೆ ಘೋಷಿಸಿದ್ದಕ್ಕಿಂತ ₹1.51 ಲಕ್ಷ ಕೋಟಿ ಹೆಚ್ಚುವರಿ ಧನಸಹಾಯವನ್ನು ಒದಗಿಸಲಾಗುತ್ತಿದೆ. ‘ಸುಜಲಂ ಭಾರತ್’ ಡಿಜಿಟಲ್ ಚೌಕಟ್ಟು: ರಾಷ್ಟ್ರಮಟ್ಟದಲ್ಲಿ ಏಕರೂಪದ ಡಿಜಿಟಲ್ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು. ಪ್ರತಿ ಹಳ್ಳಿಗೂ ‘ಸುಜಲ ಗಾಂವ್’ (Sujal Gaon) ಎಂಬ ವಿಶಿಷ್ಟ ಗುರುತಿನ ಸಂಖ್ಯೆ ನೀಡಲಾಗುವುದು. ಮೂಲದಿಂದ ಮನೆಬಾಗಿಲಿನವರೆಗೆ ನೀರಿನ ಸರಬರಾಜನ್ನು ಡಿಜಿಟಲ್…
ವಿಧಾನಪರಿಷತ್ : ಆನೆ-ಮಾನವ ಸಂಘರ್ಷ ನಿಯಂತ್ರಿಸಲು 2025-26ನೇ ಸಾಲಿನಲ್ಲಿ ಮಡಿಕೇರಿ ವಿಭಾಗಕ್ಕೆ 7 ಕಿ.ಮೀ ಮತ್ತು ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲು ಹಳಿ ತಡೆಗೋಡೆ ಮಂಜೂರಾಗಿದ್ದು, ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ವಿಧಾನ ಪರಿಷತ್ತಿಗಿಂದು ತಿಳಿಸಿದ್ದಾರೆ. ಶೂನ್ಯವೇಳೆಯಲ್ಲಿ ಸುಜಾ ಕುಶಾಲಪ್ಪ ಅವರ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಫೆ.28ರಂದು ಕಾಡಿನಂಚಿನ ನಿವಾಸಿ 17 ವರ್ಷದ ಬಾಲಕಿ ಆನೆ ದಾಳಿಯಿಂದ ಮೃತಪಟ್ಟಿದ್ದರೆ, ಮಾ.9ರಂದು ಕಾಡಿನೊಳಗೇ ವಾಸಿಸುತ್ತಿದ್ದ 55 ವರ್ಷದ ಬುಡಕಟ್ಟು ಮಹಿಳೆ ಸಾವಿಗೀಡಾಗಿದ್ದಾರೆ ಇದು ಅತ್ಯಂತ ನೋವಿನ ಸಂಗತಿ ಎಂದರು. ಜೀವ ಅತ್ಯಂತ ಅಮೂಲ್ಯವಾದ್ದು, ಇದಕ್ಕೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ. ಅರಣ್ಯ ಇಲಾಖೆ ಮಾನವ-ವನ್ಯಜೀವಿ ಸಂಘರ್ಷ ತಡೆಯಲು ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆನೆ ನಿಗ್ರಹ ಕಂದಕ, ಸೌರ ವಿದ್ಯುತ್ ಬೇಲಿ ನಿರ್ವಹಣೆ ಮಾಡಲಾಗುತ್ತಿದೆ. 2 ಆನೆ ಕಾರ್ಯಪಡೆ ಕಾರ್ಯನಿರ್ವಹಿಸುತ್ತಿದೆ. ಈಗ 2 ಪುಂಡಾನೆಗಳ ಸೆರೆಗೆ ಮುಖ್ಯ ವನ್ಯಜೀವಿ ಪರಿಪಾಲಕರು ಆದೇಶ…
ಬೆಂಗಳೂರು: ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಎದುರಾಗಲಿರುವ ಕುಡಿಯುವ ನೀರಿನ ಅಭಾವವನ್ನು ಎದುರಿಸಲು ಮೊದಲ ಆದ್ಯತೆಯಾಗಿ ಖಾಸಗಿ ಬೋರ್ವೆಲ್ಗಳನ್ನು ಬಾಡಿಗೆ ಮುಖಾಂತರ ಪಡೆಯಲಾಗುವುದಲ್ಲದೆ, ಅಗತ್ಯವಿರುವ ಸ್ಥಳದಲ್ಲಿ ಟ್ಯಾಂಕರ್ ಮೂಲಕ ನೀರನ್ನು ಸರಬರಾಜು ಮಾಡಲು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ನೀರು ಬತ್ತಿ ಹೋಗಿರುವ ಕೊಳವೆ ಬಾವಿಗಳನ್ನು ಫ್ಲಶಿಂಗ್ ಮತ್ತು ಆಳಗೊಳಿಸುವುದರೊಂದಿಗೆ ನೀರಿನ ಮೂಲಗಳನ್ನು ಹೆಚ್ಚಿಸಲಾಗುವುದು, ಅನಿವಾರ್ಯ ಸಂದರ್ಭಗಳಲ್ಲಿ ಕೊಳವೆಬಾವಿಗಳನ್ನು ಕೊರೆಯುವುದು ಅತ್ಯಗತ್ಯವೆಂದು ಕಂಡು ಬಂದಲ್ಲಿ, ಸಂಬಂಧಪಟ್ಟ ಭೂವಿಜ್ಞಾನಿಗಳ ವರದಿಯನುಸಾರ ಸೂಕ್ತ ಕ್ರಮ ಕೈಗೊಂಡು ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಲು ಕಾಮಗಾರಿಗಳನ್ನು ಕೈಗೊಳ್ಳಲು ತಿಳಿಸಲಾಗಿದೆ ಎಂದೂ ಸಚಿವರು ಮಾಹಿತಿ ನೀಡಿದ್ದಾರೆ. ರಾಜ್ಯವು ಮೂಲತಃ ಶುಷ್ಕ ಪ್ರದೇಶವಾಗಿರುವುದರಿಂದ ಬೇಸಿಗೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಹಾಲಿ ಇರುವ ಬಹುತೇಕ ಜಲಮೂಲಗಳು ಬತ್ತಿಹೋಗಿ ಗ್ರಾಮದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಂಭವವಿರುತ್ತದೆ. ಸದರಿ…
ನವದೆಹಲಿ: ಅಂತರರಾಷ್ಟ್ರೀಯ ಪಂದ್ಯದ ಸಮಯದಲ್ಲಿ ಅನುಚಿತ ಮತ್ತು/ಅಥವಾ ಅಪಾಯಕಾರಿ ರೀತಿಯಲ್ಲಿ ಆಟಗಾರನ ಮೇಲೆ ಅಥವಾ ಹತ್ತಿರ ಚೆಂಡನ್ನು (ಅಥವಾ ಕ್ರಿಕೆಟ್ ಉಪಕರಣಗಳ ಯಾವುದೇ ವಸ್ತುವನ್ನು) ಎಸೆಯುವುದಕ್ಕೆ ಸಂಬಂಧಿಸಿದ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ನೀತಿ ಸಂಹಿತೆಯ ಆರ್ಟಿಕಲ್ 2.9 ಅನ್ನು ಅರ್ಷ್ದೀಪ್ ಉಲ್ಲಂಘಿಸಿದ್ದಾರೆ ಎಂದು ಕಂಡುಬಂದಿದೆ ಎಂದು ಐಸಿಸಿ ಮಾಧ್ಯಮ ಪ್ರಕಟಣೆ ಮಂಗಳವಾರ ತಿಳಿಸಿದೆ. https://twitter.com/ICC/status/2031314874203267562 ನ್ಯೂಜಿಲೆಂಡ್ ಇನ್ನಿಂಗ್ಸ್ನ 11 ನೇ ಓವರ್ನಲ್ಲಿ ಅರ್ಶ್ದೀಪ್ ತನ್ನ ಫಾಲೋ-ಥ್ರೂನಲ್ಲಿ ಚೆಂಡನ್ನು ಫೀಲ್ಡಿಂಗ್ ಮಾಡಿ ಆಕ್ರಮಣಕಾರಿಯಾಗಿ ಮತ್ತು ಅನುಚಿತವಾಗಿ ಎಸೆದು ಬ್ಯಾಟರ್ ಡ್ಯಾರಿಲ್ ಮಿಚೆಲ್ ಅವರ ಪ್ಯಾಡ್ಗಳಿಗೆ ಹೊಡೆದರು. ಎಮಿರೇಟ್ಸ್ ಐಸಿಸಿ ಎಲೈಟ್ ಪ್ಯಾನಲ್ ಆಫ್ ಮ್ಯಾಚ್ ರೆಫರಿಗಳ ಆಂಡಿ ಪೈಕ್ರಾಫ್ಟ್ ಪ್ರಸ್ತಾಪಿಸಿದ ಶಿಕ್ಷೆಯನ್ನು ಅರ್ಶ್ದೀಪ್ ಒಪ್ಪಿಕೊಂಡರು, ಆದ್ದರಿಂದ ಔಪಚಾರಿಕ ವಿಚಾರಣೆಯ ಅಗತ್ಯವಿರಲಿಲ್ಲ. ಆನ್-ಫೀಲ್ಡ್ ಅಂಪೈರ್ಗಳಾದ ರಿಚರ್ಡ್ ಇಲಿಂಗ್ವರ್ತ್ ಮತ್ತು ಅಲೆಕ್ಸ್ ವಾರ್ಫ್, ಮೂರನೇ ಅಂಪೈರ್ ಅಲ್ಲಾಹುದ್ದೀನ್ ಪಾಲೇಕರ್ ಮತ್ತು ನಾಲ್ಕನೇ ಅಂಪೈರ್ ಆಡ್ರಿಯನ್ ಹೋಲ್ಡ್ಸ್ಟಾಕ್ ಆರೋಪವನ್ನು ಹೊರಿಸಿದರು. ಲೆವೆಲ್ 1 ಉಲ್ಲಂಘನೆಗೆ ಕನಿಷ್ಠ…
ಬೆಂಗಳೂರು: ಇಸ್ರೇಲ್, ಇರಾನ್ ಮತ್ತು ಅಮೆರಿಕ ನಡುವಿನ ಜಾಗತಿಕ ಯುದ್ಧದ ಭೀತಿ ಇದೀಗ ನೇರವಾಗಿ ಕನ್ನಡಿಗರ ಅಡುಗೆ ಮನೆಯ ಮೇಲೆ ಪರಿಣಾಮ ಬೀರಿದೆ. ಪೆಟ್ರೋಲಿಯಂ ಉತ್ಪನ್ನಗಳ ಸರಬರಾಜಿನಲ್ಲಿ ಉಂಟಾಗಿರುವ ವ್ಯತ್ಯಯದಿಂದಾಗಿ ರಾಜ್ಯಾದ್ಯಂತ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ (Commercial LPG) ಕೊರತೆ ತೀವ್ರಗೊಂಡಿದ್ದು, ಹೋಟೆಲ್ ಉದ್ಯಮ ಅಕ್ಷರಶಃ ಬೀದಿಗೆ ಬೀಳುವ ಆತಂಕ ಎದುರಿಸುತ್ತಿದೆ. ಜಿಲ್ಲಾವಾರು ಪರಿಸ್ಥಿತಿ: ಎಲ್ಲೆಲ್ಲಿ ಏನಾಗುತ್ತಿದೆ? ಕಲಬುರಗಿ: ಕಳೆದ ಎರಡು ದಿನಗಳಿಂದ ವಾಣಿಜ್ಯ ಸಿಲಿಂಡರ್ ಪೂರೈಕೆ ಸಂಪೂರ್ಣ ಸ್ಥಗಿತಗೊಂಡಿದೆ. ನಗರದ 300ಕ್ಕೂ ಹೆಚ್ಚು ಹೋಟೆಲ್ಗಳು ಮುಚ್ಚುವ ಹಂತಕ್ಕೆ ತಲುಪಿವೆ. ಪರ್ಯಾಯ ವ್ಯವಸ್ಥೆ ಇಲ್ಲದೆ ಮಾಲೀಕರು ಕಂಗಾಲಾಗಿದ್ದಾರೆ. ರಾಯಚೂರು: ನಾಲ್ಕು ಸಿಲಿಂಡರ್ ಕೇಳಿದರೆ ಕೇವಲ ಎರಡು ಮಾತ್ರ ಸಿಗುತ್ತಿವೆ. ಸಿಲಿಂಡರ್ ಕೊರತೆಯಿಂದಾಗಿ ಮಸಾಲಾ ದೋಸೆ, ಸೆಟ್ ದೋಸೆಯಂತಹ ಪ್ರಮುಖ ತಿಂಡಿಗಳ ತಯಾರಿಕೆಯನ್ನು ಹೋಟೆಲ್ ಮಾಲೀಕರು ತಾತ್ಕಾಲಿಕವಾಗಿ ನಿಲ್ಲಿಸಿದ್ದಾರೆ. ಬಳ್ಳಾರಿ: ದೊಡ್ಡ ಸಿಲಿಂಡರ್ಗಳ ಲಭ್ಯತೆ ಇಲ್ಲದ ಕಾರಣ, ಅನಿವಾರ್ಯವಾಗಿ 5 ಕೆಜಿಯ ಸಣ್ಣ ಸಿಲಿಂಡರ್ಗಳನ್ನು ಬಳಸಲಾಗುತ್ತಿದೆ. ಇದರಿಂದ ಸಾಗಾಟದ ವೆಚ್ಚ ಮತ್ತು…
ನವದೆಹಲಿ: ದೇಶದಲ್ಲಿ ಎಲ್ಪಿಜಿ (ಅಡುಗೆ ಅನಿಲ) ಕೊರತೆಯಿದೆ ಎಂಬ ವದಂತಿಗಳಿಗೆ ಕೇಂದ್ರ ಸರ್ಕಾರ ಮಂಗಳವಾರ ತೆರೆ ಎಳೆದಿದೆ. ವಾಣಿಜ್ಯ ಸಿಲಿಂಡರ್ಗಳ ಅಭಾವದ ಕುರಿತು ಕೇಳಿಬಂದಿದ್ದ ಆತಂಕಗಳ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಕೇಂದ್ರ ಸರ್ಕಾರಿ ಮೂಲಗಳು, ದೇಶದಲ್ಲಿ ಅನಿಲ ಪೂರೈಕೆ ಸ್ಥಿರವಾಗಿದೆ ಮತ್ತು ಯಾವುದೇ ಬಿಕ್ಕಟ್ಟಿನ ಪರಿಸ್ಥಿತಿ ಇಲ್ಲ ಎಂದು ತಿಳಿಸಿವೆ. ಸರ್ಕಾರ ನೀಡಿದ ಪ್ರಮುಖ ಸ್ಪಷ್ಟನೆಗಳು: ಉತ್ಪಾದನೆ ಹೆಚ್ಚಳ: ಈ ಹಿಂದಿನ ಸೂಚನೆಯಂತೆ ತೈಲ ಸಂಸ್ಕರಣಾಗಾರಗಳು ಎಲ್ಪಿಜಿ ಉತ್ಪಾದನೆಯನ್ನು ಸುಮಾರು ಶೇ. 10 ರಷ್ಟು ಹೆಚ್ಚಿಸಿವೆ. ಪ್ರಸ್ತುತ ಎಲ್ಲಾ ಸಂಸ್ಕರಣಾಗಾರಗಳು ಶೇ. 100 ರಷ್ಟು ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತಿವೆ. ಅಕ್ರಮ ದಾಸ್ತಾನು ತಡೆ: ಸಿಲಿಂಡರ್ಗಳ ಕಾಳಸಂತೆ ಮತ್ತು ಅಕ್ರಮ ದಾಸ್ತಾನು ತಡೆಯಲು ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ವಿತರಣೆಯಲ್ಲಿನ ಅಕ್ರಮಗಳನ್ನು ಪತ್ತೆಹಚ್ಚಲು ಮಾನಿಟರಿಂಗ್ ಅವಧಿಯನ್ನು 21 ದಿನಗಳಿಂದ 25 ದಿನಗಳಿಗೆ ವಿಸ್ತರಿಸಲಾಗಿದೆ. ಅಗತ್ಯ ವಸ್ತುಗಳ ಕಾಯ್ದೆ ಜಾರಿ: ಅಕ್ರಮ ಸಂಗ್ರಹಣೆ ತಡೆಯಲು ‘ಅಗತ್ಯ ವಸ್ತುಗಳ ಕಾಯ್ದೆ’ಯ (Essential Commodities Act) ನಿಬಂಧನೆಗಳನ್ನು ಜಾರಿಗೊಳಿಸಲಾಗಿದೆ.…
ಬೆಂಗಳೂರು: ಅಡುಗೆ ಅನಿಲ (LPG) ಪ್ರತಿಯೊಂದು ಮನೆಯ ಅವಶ್ಯಕತೆ. ಆದರೆ, ಇತ್ತೀಚಿನ ದಿನಗಳಲ್ಲಿ ಗಲ್ಫ್ ಯುದ್ಧದಂತಹ ಜಾಗತಿಕ ವಿದ್ಯಮಾನಗಳನ್ನೇ ನೆಪ ಮಾಡಿಕೊಂಡು, ಕೆಲವು ಗ್ಯಾಸ್ ಏಜೆನ್ಸಿಗಳು ಮತ್ತು ಡೆಲಿವರಿ ಸಿಬ್ಬಂದಿ ಗ್ರಾಹಕರಿಂದ ಹೆಚ್ಚುವರಿ ಹಣ ವಸೂಲಿ ಮಾಡುತ್ತಿರುವ ದೂರುಗಳು ಕೇಳಿಬರುತ್ತಿವೆ. ಒಂದು ವೇಳೆ ನಿಮ್ಮ ಗ್ಯಾಸ್ ಏಜೆನ್ಸಿ ಕೂಡ ನಿಮ್ಮಿಂದ ₹915.50 (ನಿಗದಿತ ದರ) ಕ್ಕಿಂತ ಹೆಚ್ಚು ಹಣ ಕೇಳುತ್ತಿದ್ದರೆ ಅಥವಾ ಅಸಭ್ಯವಾಗಿ ವರ್ತಿಸುತ್ತಿದ್ದರೆ, ಸುಮ್ಮನಿರಬೇಡಿ. ಇವರ ವಿರುದ್ಧ ದೂರು ನೀಡಲು ಅವಕಾಶವಿದೆ. ಏಜೆನ್ಸಿಗಳು ಮಾಡುವ ಸಾಮಾನ್ಯ ಅಕ್ರಮಗಳೇನು? ಹೆಚ್ಚುವರಿ ಚಾರ್ಜ್: ಡೆಲಿವರಿ ಚಾರ್ಜ್ ಹೆಸರಿನಲ್ಲಿ ₹100 ರಿಂದ ₹500 ರವರೆಗೆ ಅಧಿಕ ಹಣ ವಸೂಲಿ ಮಾಡುವುದು. ಕೃತಕ ಅಭಾವ: ‘ಸ್ಟಾಕ್ ಇಲ್ಲ’ ಎಂಬ ನೆಪವೊಡ್ಡಿ ಸಿಲಿಂಡರ್ ನೀಡಲು ನಿರಾಕರಿಸುವುದು. ತೂಕದಲ್ಲಿ ವ್ಯತ್ಯಾಸ: ಸಿಲಿಂಡರ್ನಲ್ಲಿ ಗ್ಯಾಸ್ ಪ್ರಮಾಣ ಕಡಿಮೆ ಇರುವುದು. ಅಸಭ್ಯ ವರ್ತನೆ: ರೀಫಿಲ್ ಪೂರೈಕೆಯಲ್ಲಿ ವಿಳಂಬ ಮತ್ತು ಗ್ರಾಹಕರ ಪ್ರಶ್ನೆಗಳಿಗೆ ಉಡಾಫೆ ಉತ್ತರ ನೀಡುವುದು. ದೂರು ದಾಖಲಿಸುವುದು ಹೇಗೆ? ಇಲ್ಲಿವೆ…
ನವದೆಹಲಿ: ದೇಶದಲ್ಲಿ ಎಲ್ಪಿಜಿ (ಅಡುಗೆ ಅನಿಲ) ಕೊರತೆಯಿದೆ ಎಂಬ ವದಂತಿಗಳಿಗೆ ಕೇಂದ್ರ ಸರ್ಕಾರ ಮಂಗಳವಾರ ತೆರೆ ಎಳೆದಿದೆ. ವಾಣಿಜ್ಯ ಸಿಲಿಂಡರ್ಗಳ ಅಭಾವದ ಕುರಿತು ಕೇಳಿಬಂದಿದ್ದ ಆತಂಕಗಳ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಸರ್ಕಾರಿ ಮೂಲಗಳು, “ದೇಶದಲ್ಲಿ ಅನಿಲ ಪೂರೈಕೆ ಸ್ಥಿರವಾಗಿದೆ ಮತ್ತು ಯಾವುದೇ ಬಿಕ್ಕಟ್ಟಿನ ಪರಿಸ್ಥಿತಿ ಇಲ್ಲ” ಎಂದು ತಿಳಿಸಿವೆ. ಸರ್ಕಾರ ನೀಡಿದ ಪ್ರಮುಖ ಸ್ಪಷ್ಟನೆಗಳು: ಉತ್ಪಾದನೆ ಹೆಚ್ಚಳ: ಈ ಹಿಂದಿನ ಸೂಚನೆಯಂತೆ ತೈಲ ಸಂಸ್ಕರಣಾಗಾರಗಳು ಎಲ್ಪಿಜಿ ಉತ್ಪಾದನೆಯನ್ನು ಸುಮಾರು ಶೇ. 10 ರಷ್ಟು ಹೆಚ್ಚಿಸಿವೆ. ಪ್ರಸ್ತುತ ಎಲ್ಲಾ ಸಂಸ್ಕರಣಾಗಾರಗಳು ಶೇ. 100 ರಷ್ಟು ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತಿವೆ. ಅಕ್ರಮ ದಾಸ್ತಾನು ತಡೆ: ಸಿಲಿಂಡರ್ಗಳ ಕಾಳಸಂತೆ ಮತ್ತು ಅಕ್ರಮ ದಾಸ್ತಾನು ತಡೆಯಲು ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ವಿತರಣೆಯಲ್ಲಿನ ಅಕ್ರಮಗಳನ್ನು ಪತ್ತೆಹಚ್ಚಲು ಮಾನಿಟರಿಂಗ್ ಅವಧಿಯನ್ನು 21 ದಿನಗಳಿಂದ 25 ದಿನಗಳಿಗೆ ವಿಸ್ತರಿಸಲಾಗಿದೆ. ಅಗತ್ಯ ವಸ್ತುಗಳ ಕಾಯ್ದೆ ಜಾರಿ: ಅಕ್ರಮ ಸಂಗ್ರಹಣೆ ತಡೆಯಲು ‘ಅಗತ್ಯ ವಸ್ತುಗಳ ಕಾಯ್ದೆ’ಯ (Essential Commodities Act) ನಿಬಂಧನೆಗಳನ್ನು ಜಾರಿಗೊಳಿಸಲಾಗಿದೆ. ಆದರೆ,…
ಚಿಕ್ಕಬಳ್ಳಾಪುರ: ಪ್ರಪಂಚವನ್ನೇ ನೋಡದ 40 ದಿನದ ಹಸುಗೂಸನ್ನು ಕತ್ತು ಹಿಸುಕಿ ಹತ್ಯೆಗೈದಿದ್ದ ಅಜ್ಜಿಯನ್ನು ಚೇಳೂರು ಠಾಣೆ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಮಗುವಿನ ಸಾವನ್ನು ಅನಾರೋಗ್ಯ ಎಂದು ಬಿಂಬಿಸಿ ನಾಟಕವಾಡಿದ್ದ ಅಜ್ಜಿ ಮೆಹಬೂಬಿ, ಎಫ್ಎಸ್ಎಲ್ (FSL) ವರದಿಯಿಂದಾಗಿ ಅಂತಿಮವಾಗಿ ಪೊಲೀಸರ ಅತಿಥಿಯಾಗಿದ್ದಾಳೆ. ಘಟನೆಯ ಹಿನ್ನೆಲೆ: 2025ರ ಡಿಸೆಂಬರ್ 24ರಂದು ಜಿಲ್ಲೆಯ ಚೇಳೂರು ಪಟ್ಟಣದಲ್ಲಿ ಈ ಘಟನೆ ನಡೆದಿತ್ತು. ಮೆಹಬೂಬಿ ಎಂಬಾಕೆಯ ಮೊಮ್ಮಗಳು ಅನ್ಯಧರ್ಮದ ಯುವಕನನ್ನು ಪ್ರೇಮವಿವಾಹವಾಗಿದ್ದಳು. ಬಾಣಂತನಕ್ಕಾಗಿ ಅಜ್ಜಿಯ ಮನೆಗೆ ಬಂದಿದ್ದ ಸಂದರ್ಭದಲ್ಲಿ, ಈಕೆಯ 40 ದಿನದ ಗಂಡು ಮಗು ನಿಗೂಢವಾಗಿ ಸಾವನ್ನಪ್ಪಿತ್ತು. “ಮಗುವಿಗೆ ಉಸಿರಾಟದ ಸಮಸ್ಯೆ ಇತ್ತು” ಎಂದು ನಂಬಿಸಿದ ಅಜ್ಜಿ, ಗುಟ್ಟಾಗಿ ಮಗುವಿನ ಅಂತ್ಯಸಂಸ್ಕಾರವನ್ನೂ ನೆರವೇರಿಸಿದ್ದಳು. ಸಾವಿನ ರಹಸ್ಯ ಬಯಲಾಗಿದ್ದು ಹೇಗೆ? ಅಜ್ಜಿಯ ನಡವಳಿಕೆಯ ಮೇಲೆ ಅನುಮಾನಗೊಂಡ ಸ್ವಂತ ಮೊಮ್ಮಗಳೇ ಚೇಳೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ದೂರಿನ ಮೇರೆಗೆ ಮಣ್ಣು ಮಾಡಿದ್ದ ಮಗುವಿನ ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು. ಇತ್ತೀಚೆಗೆ ಬಂದ ಎಫ್ಎಸ್ಎಲ್ ವರದಿಯಲ್ಲಿ ಮಗುವನ್ನು ಕತ್ತು…
ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಳ್ಳಾರಿ, ವಿಜಯನಗರ ಮತ್ತು ಕೊಪ್ಪಳ ಈ ಮೂರೂ ಜಿಲ್ಲೆಗಳ ಜನರಿಗೆ ಅನುಕೂಲವಾಗುವಂತೆ ಸೂಕ್ತ ಸ್ಥಳದಲ್ಲಿ ವಿಮಾನ ನಿಲ್ದಾಣ ನಿರ್ಮಿಸಿದರೆ ಹೇಗೆ ಎನ್ನುವ ಚಿಂತನೆ ಇದೆ. ಆದರೆ, ಈ ಸಂಬಂಧ ಮೂರೂ ಜಿಲ್ಲೆಗಳ ಜನಪ್ರತಿನಿಧಿಗಳನ್ನು ಸೇರಿಸಿಕೊಂಡು ಮುಖ್ಯಮಂತ್ರಿ ಜತೆ ಸಭೆ ನಡೆಸಿದ ನಂತರ ಅಂತಿಮ ತೀರ್ಮಾನ ಮಾಡಲಾಗುವುದು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರು ವಿಧಾನ ಪರಿಷತ್ತಿಗೆ ತಿಳಿಸಿದರು. ಬಿಜೆಪಿ ಸದಸ್ಯ ವೈ ಎಂ ಸತೀಶ್ ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಅವರು ಮಂಗಳವಾರ ಉತ್ತರಿಸಿದರು. ಬಳ್ಳಾರಿಯಲ್ಲಿ ವಿಮಾನ ನಿಲ್ದಾಣ ನಿರ್ಮಿಸುವ ಆಲೋಚನೆ ಬಂದಿದ್ದು 2010ರಲ್ಲಿ. ಇದಕ್ಕಾಗಿ 900 ಎಕರೆ ಸ್ವಾಧೀನ ಪಡಿಸಿಕೊಳ್ಳಲಾಗಿತ್ತು. ಚೆನ್ನೈನ ಮೆ.ಮಾರ್ಗ್ ಶ್ರೀಕೃಷ್ಣದೇವರಾಯ ಏರ್ಪೋರ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ವಿಮಾನ ನಿಲ್ದಾಣ ನಿರ್ಮಿಸಲು ವಹಿಸಿ, ಭೂಮಿಯನ್ನು ಹಸ್ತಾಂತರಿಸಲಾಗಿತ್ತು. ಆದರೆ, ಆ ಸಂಸ್ಥೆಯು ನಿಯಮಾನುಸಾರ 2 ವರ್ಷವಾದರೂ ಕೆಲಸ ಶುರು ಮಾಡಲಿಲ್ಲ. ಹೀಗಾಗಿ, ಅದರೊಂದಿಗಿನ ಒಪ್ಪಂದ ರದ್ದಾಗಿದೆ. ಇದಾದ ಮೇಲೆ, ಯೋಜನೆಗೆ…














