Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು: ರಾಜ್ಯದ ರಾಜಕೀಯ ಇತಿಹಾಸದಲ್ಲಿ ಇಂದು ಮತ್ತೊಂದು ಪ್ರಮುಖ ಅಧ್ಯಾಯ ಬರೆಯಲಾಗುತ್ತಿದ್ದು, ನೂತನ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಅವರು ಇಂದು ಸಂಜೆ ಅಧಿಕೃತವಾಗಿ ಗದ್ದುಗೆಗೇರಲಿದ್ದಾರೆ. ಇಂದು ಸಂಜೆ 4:05ಕ್ಕೆ ಮುಹೂರ್ತ ರಾಜ್ಯದ ಜನತೆ ತೀವ್ರ ಕುತೂಹಲದಿಂದ ಕಾಯುತ್ತಿದ್ದ ಆ ಕ್ಷಣಕ್ಕೆ ಕಾಲ ಕೂಡಿಬಂದಿದ್ದು, ಇಂದು ಸಂಜೆ ಸರಿಯಾಗಿ 4:05 ಗಂಟೆಗೆ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ. ಅವರೊಂದಿಗೆ ಸಚಿವರ ದಂಡೂ ಕೂಡ ಪ್ರಮಾಣವಚನ ಸ್ವೀಕರಿಸಲಿದ್ದು, ರಾಜಧಾನಿಯಲ್ಲಿ ಇದಕ್ಕಾಗಿ ಭರ್ಜರಿ ಸಿದ್ಧತೆಗಳು ನಡೆದಿವೆ. ಸಾಂಪ್ರದಾಯಿಕ ರೇಷ್ಮೆ ಉಡುಗೆಯಲ್ಲಿ ‘ಕನಕಪುರ ಬಂಡೆ’ ತಮ್ಮ ಜೀವನದ ಅತ್ಯಂತ ಪ್ರಮುಖ ಹಾಗೂ ಐತಿಹಾಸಿಕ ದಿನದಂದು ಡಿ.ಕೆ. ಶಿವಕುಮಾರ್ ಅವರು ಸಂಪೂರ್ಣ ಸಾಂಪ್ರದಾಯಿಕ ಶೈಲಿಯಲ್ಲಿ ಮಿಂಚಲಿದ್ದಾರೆ. ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಸುಸಂದರ್ಭದಲ್ಲಿ ಅವರು ಸಾಂಪ್ರದಾಯಿಕ ರೇಷ್ಮೆ ಪಂಚೆ, ಜುಬ್ಬ ಹಾಗೂ ಶಲ್ಯ ಧರಿಸಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳಲಿದ್ದಾರೆ. ಪ್ರಮಾಣವಚನಕ್ಕೂ ಮುನ್ನ ತಾಯಿಯ ಆಶೀರ್ವಾದ ಪಡೆದ ಡಿಕೆಶಿ ಮುಖ್ಯಮಂತ್ರಿಯಾಗಿ…
ಮಳೆಗಾಲ ಆರಂಭವಾಗುತ್ತಿದ್ದಂತೆ ಮಾರುಕಟ್ಟೆಯಲ್ಲಿ ಹೆಚ್ಚಾಗಿ ಕಂಡುಬರುವ ಹಣ್ಣುಗಳಲ್ಲಿ ನೇರಳೆ ಹಣ್ಣು (Jamun Fruit) ಪ್ರಮುಖವಾದದ್ದು. ಗಾಢ ನೆರಳೆ ಬಣ್ಣದ, ಹುಳಿ-ಸಿಹಿ ಮಿಶ್ರಿತ ಈ ಹಣ್ಣು ಕೇವಲ ನಾಲಿಗೆಗೆ ರುಚಿ ನೀಡುವುದು ಮಾತ್ರವಲ್ಲದೆ, ಆರೋಗ್ಯಕ್ಕೂ ಹತ್ತು ಹಲವು ಪ್ರಯೋಜನಗಳನ್ನು ನೀಡುತ್ತದೆ. ವಿಶೇಷವಾಗಿ ಮಧುಮೇಹಿಗಳಿಗೆ (Diabetes) ಇದು ಸಂಜೀವಿನಿ ಎಂದೇ ಪ್ರಸಿದ್ಧಿಯಾಗಿದೆ. ಆದರೆ, ನಾಣ್ಯಕ್ಕೆ ಎರಡು ಮುಖಗಳಿರುವಂತೆ, ಅಮೃತದಂತಿರುವ ಈ ನೇರಳೆ ಹಣ್ಣು ಕೂಡ ಎಲ್ಲರಿಗೂ ಸೂಕ್ತವಲ್ಲ. ಕೆಲವು ನಿರ್ದಿಷ್ಟ ಆರೋಗ್ಯ ಸಮಸ್ಯೆ ಇರುವವರು ನೇರಳೆ ಹಣ್ಣನ್ನು ತಿನ್ನುವುದರಿಂದ ಅವರ ಸಮಸ್ಯೆ ಮತ್ತಷ್ಟು ಉಲ್ಬಣಗೊಳ್ಳಬಹುದು. ಹಾಗಾದರೆ, ಯಾರೆಲ್ಲಾ ನೇರಳೆ ಹಣ್ಣನ್ನು ತಿನ್ನಬಾರದು? ಅದರ ಅಡ್ಡಪರಿಣಾಮಗಳೇನು? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. 1. ಕಡಿಮೆ ರಕ್ತದ ಸಕ್ಕರೆ ಮಟ್ಟ (Hypoglycemia) ಇರುವವರು ನೇರಳೆ ಹಣ್ಣಿನಲ್ಲಿ ರಕ್ತದ ಸಕ್ಕರೆ ಮಟ್ಟವನ್ನು ಗಣನೀಯವಾಗಿ ಕಡಿಮೆ ಮಾಡುವ ಗುಣವಿದೆ. ಮಧುಮೇಹ ಇರುವವರಿಗೆ ಇದು ಪ್ರಯೋಜನಕಾರಿಯಾದರೂ, ಈಗಾಗಲೇ ರಕ್ತದಲ್ಲಿ ಸಕ್ಕರೆ ಮಟ್ಟ ಕಡಿಮೆ ಇರುವವರು (ಹೈಪೋಗ್ಲೈಸೀಮಿಯಾ) ಇದನ್ನು ಸೇವಿಸಿದರೆ ಸಕ್ಕರೆ ಮಟ್ಟ…
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿಗೆ ನೂತನವಾಗಿ ನಿಯುಕ್ತಿಗೊಂಡು ಅಧಿಕಾರ ಸ್ವೀಕರಿಸಿರುವ ತಹಶೀಲ್ದಾರ್ ಡಾ. ಪ್ರತಿಭಾ ಅವರನ್ನು ಇಂದು ತಾಲ್ಲೂಕು ಸರ್ಕಾರಿ ನೌಕರರ ಸಂಘದ ವತಿಯಿಂದ ಆತ್ಮೀಯವಾಗಿ ಅಭಿನಂದಿಸಲಾಯಿತು. ಇಲ್ಲಿನ ತಾಲೂಕು ಕಚೇರಿಯಲ್ಲಿ ನೂತನ ತಹಶೀಲ್ದಾರರನ್ನು ಭೇಟಿಯಾದ ಸಂಘದ ಪದಾಧಿಕಾರಿಗಳು, ಅವರಿಗೆ ಶಾಲು ಹೊದಿಸಿ, ಹೂಗುಚ್ಛ ನೀಡಿ ಗೌರವಿಸಿ ಮುಂದಿನ ಅಧಿಕಾರಾವಧಿಗೆ ಶುಭ ಹಾರೈಸಿದರು. ಎಲ್ಲರ ಸಹಕಾರದೊಂದಿಗೆ ಜನಸ್ನೇಹಿ ಆಡಳಿತ: ಡಾ. ಪ್ರತಿಭಾ ಆಶ್ವಾಸನೆ ಅಭಿನಂದನೆ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ್ ಡಾ. ಪ್ರತಿಭಾ ಅವರು, “ತಾಲ್ಲೂಕಿನಾದ್ಯಂತ ಸಾರ್ವಜನಿಕರಿಗೆ ತೊಂದರೆಯಾಗದಂತೆ ಜನಸ್ನೇಹಿ ಆಡಳಿತ ನೀಡಲು ನಾನು ಬದ್ಧಳಾಗಿದ್ದೇನೆ. ಇದಕ್ಕೆ ಕಂದಾಯ ಇಲಾಖೆ ಸೇರಿದಂತೆ ಎಲ್ಲ ಸಿಬ್ಬಂದಿ ವರ್ಗದವರ ಸಕಾರಾತ್ಮಕ ಸಹಕಾರ ಅತ್ಯಗತ್ಯ. ಎಲ್ಲರನ್ನೂ ಒಟ್ಟಿಗೆ ಕೊಂಡೊಯ್ದು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತೇನೆ” ಎಂದು ತಿಳಿಸಿದರು. ಸಮಸ್ಯೆಗಳಿಗೆ ಶೀಘ್ರ ಪರಿಹಾರ ಸಿಗಲಿ: ಸಂತೋಷ್ ಕುಮಾರ್ ಆಶಯ ಇದೇ ಸಂದರ್ಭದಲ್ಲಿ ಮಾತನಾಡಿದ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಂತೋಷ್ ಕುಮಾರ್.ಎನ್ ಅವರು, “ನೂತನ ತಹಶೀಲ್ದಾರರ ಆಡಳಿತಾವಧಿಯಲ್ಲಿ ತಾಲೂಕಿನಲ್ಲಿ ಉತ್ತಮ…
ಬೆಂಗಳೂರು : ನೂತನ ಮುಖ್ಯಮಂತ್ರಿಯಾಗಿ ರಾಜ್ಯದ ಚುಕ್ಕಾಣಿ ಹಿಡಿಯಲಿರುವ ಡಿ.ಕೆ. ಶಿವಕುಮಾರ್ ಅವರ ನೇತೃತ್ವ ಹಾಗೂ ಪಕ್ಷದ ವರಿಷ್ಠರ ಮಾರ್ಗದರ್ಶನದಲ್ಲಿ ಸರ್ಕಾರ ಉತ್ತಮ ಆಡಳಿತ ನೀಡಲಿದ್ದು, ರಾಜ್ಯದ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಸಂಪುಟಕ್ಕೆ ಸೇರ್ಪಡೆಯಾಗಲಿರುವ ಕಾಂಗ್ರೆಸ್ ಮುಖಂಡ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಅವರು, ಸುದ್ದಿಗಾರರೊಂದಿಗೆ ಮಾತನಾಡಿ, ತಮ್ಮ ಮೇಲೆ ಮತ್ತೊಮ್ಮೆ ವಿಶ್ವಾಸವಿಟ್ಟು ನೂತನ ಸಚಿವ ಸಂಪುಟದಲ್ಲಿ ಸ್ಥಾನ ನೀಡಿರುವ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧೀ, ವರಿಷ್ಠರಾದ ಸೋನಿಯಾಗಾಂಧಿ ಮತ್ತು ರಾಜ್ಯ ಉಸ್ತುವಾರಿಗಳಾದ ರಣದೀಪ್ ಸುರ್ಜೇವಾಲಾ, ಕೆ.ಸಿ. ವೇಣುಗೋಪಾಲ್ ಮತ್ತು ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಿಡಬ್ಲ್ಯುಸಿ ಸದಸ್ಯರಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು. ಪಕ್ಷದ ವರಿಷ್ಠರ ವಿಶ್ವಸಕ್ಕೆ ಚ್ಯುತಿಯಾಗದಂತೆ ಪ್ರಾಮಾಣಿಕತೆಯಿಂದ, ದಕ್ಷತೆಯಿಂದ ರಾಜ್ಯದ ಅಭಿವೃದ್ಧಿ ಮತ್ತು ಕಲ್ಯಾಣ ಕರ್ನಾಟಕದ ಅದರಲ್ಲೂ ಬೀದರ್ ಜಿಲ್ಲೆಯ ಅಭಿವೃದ್ಧಿಗಾಗಿ ಶಕ್ತಿ ಮೀರಿ ಶ್ರಮಿಸುವುದಾಗಿ ಈಶ್ವರ ಖಂಡ್ರೆ…
ಶಿವಮೊಗ್ಗ: ಸಾಗರ ಲಯನ್ಸ್ ಕ್ಲಬ್, ರಾಜರತ್ನ ಹಾಗೂ ಜನಸ್ನೇಹಿ ಇವೆಂಟ್ಸ್ ಸಹಯೋಗದೊಂದಿಗೆ ಇದೇ ತಿಂಗಳ ಜೂನ್ 5, 6 ಮತ್ತು 7 ರಂದು ಸಾಗರದ ರಾಘವೇಶ್ವರ ಸಭಾಭವನದಲ್ಲಿ ಬೃಹತ್ ‘ಹಲಸು ಮತ್ತು ಮಾವಿನ ಮೇಳ’ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಾಗರ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಡಾ. ಪ್ರಸನ್ನ ಅವರು ಪ್ರಕಟಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮೇಳದ ಸಂಪೂರ್ಣ ವಿವರಗಳನ್ನು ಹಂಚಿಕೊಂಡ ಅವರು, ಪ್ರತಿ ವರ್ಷದಂತೆ ಕೇವಲ ವಾಣಿಜ್ಯ ಉದ್ದೇಶಕ್ಕಾಗಿ ಮಾತ್ರವಲ್ಲದೆ, ಕೃಷಿ ಕ್ಷೇತ್ರದಲ್ಲಿ ವಿಭಿನ್ನವಾಗಿ ಏನಾದರೂ ಸಾಧನೆ ಮಾಡಬೇಕೆಂಬ ಉದ್ದೇಶದಿಂದ ಈ ಬಾರಿ ಹಲಸು ಮತ್ತು ಮಾವಿನ ಮೇಳವನ್ನು ಆಯೋಜಿಸಲಾಗಿದೆ ಎಂದರು. ಜೂನ್ 5ರಂದು ಮೇಳದ ಉದ್ಘಾಟನೆ ಮತ್ತು ಕೃಷಿಕರಿಗೆ ಸನ್ಮಾನ ಉದ್ಘಾಟನೆ: ಸಾಗರ ಕ್ಷೇತ್ರದ ಜನಪ್ರಿಯ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರು ಮೇಳದ ಮಳಿಗೆಗಳನ್ನು ಉದ್ಘಾಟಿಸಲಿದ್ದಾರೆ. ಲಯನ್ಸ್ ಕ್ಲಬ್ ಅಧ್ಯಕ್ಷರಾದ ಡಾ. ಪ್ರಸನ್ನ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸಭಾ ಕಾರ್ಯಕ್ರಮ ಉದ್ಘಾಟನೆ: ಪರಿಸರ…
ಶಿವಮೊಗ್ಗ: ರಾಜಕೀಯ ನಾಯಕರನ್ನು ಇಷ್ಟಪಡುವ, ಆರಾಧಿಸುವ ಅಭಿಮಾನಿಗಳನ್ನು ನಾವು ಸಾಕಷ್ಟು ನೋಡಿದ್ದೇವೆ. ಆದರೆ ಶಿವಮೊಗ್ಗ ಜಿಲ್ಲೆಯ ಸಾಗರದ ನಾಗರಾಜ್ ಗುಡ್ಡೇಮನೆ ಅವರ ಅಭಿಮಾನ ಮಾತ್ರ ನಿಜಕ್ಕೂ ವಿಶಿಷ್ಟ ಮತ್ತು ಅನನ್ಯ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮೇಲಿನ ಅಪ್ಪಟ ಅಭಿಮಾನದಿಂದಾಗಿ ನಾಗರಾಜ್ ಅವರು ತಮ್ಮ ಎರಡು ಕೈಗಳ ಭುಜಗಳ ಮೇಲೆ ಡಿ.ಕೆ.ಶಿ ಅವರ ಚಿತ್ರವನ್ನು ಟ್ಯಾಟೋ (ಹಚ್ಚೆ) ಹಾಕಿಸಿಕೊಳ್ಳುವ ಮೂಲಕ ತಮ್ಮ ಅಭಿಮಾನದ ಭಕ್ತಿಯನ್ನು ಮೆರೆದಿದ್ದಾರೆ. 8 ಗಂಟೆಗಳ ಕಾಲ ನೋವು ಭರಿಸಿ ಹಚ್ಚೆ! ಡಿ.ಕೆ. ಶಿವಕುಮಾರ್ ಅವರು ಈ ಹಿಂದೆ ಇಡಿ (ED) ಪ್ರಕರಣದಲ್ಲಿ ದೆಹಲಿಯ ತಿಹಾರ್ ಜೈಲು ಸೇರಿ, ಬಳಿಕ ಬಿಡುಗಡೆಯಾದ ದಿನವೇ ನಾಗರಾಜ್ ಈ ಸಾಹಸಕ್ಕೆ ಕೈಹಾಕಿದ್ದರು. ಬೆಂಗಳೂರಿನಲ್ಲಿ ಡಿಕೆ ಶಿವಕುಮಾರ್ ಜೈಲಿನಿಂದ ಬಿಡುಗಡೆಯಾದ ಅದೇ ದಿನದಂದು, ಸಾಗರದಲ್ಲಿ ನಾಗರಾಜ್ ಅವರು ಸತತ 8 ಗಂಟೆಗಳ ಕಾಲ ತೀವ್ರ ನೋವನ್ನು ಲೆಕ್ಕಿಸದೆ ತಮ್ಮ ಎರಡೂ ಭುಜಗಳ ಮೇಲೆ ನೆಚ್ಚಿನ ನಾಯಕನ ಚಿತ್ರವನ್ನು ಕೆತ್ತಿಸಿಕೊಂಡಿದ್ದಾರೆ. ಇವರ ಒಂದು ಭುಜದ…
ನವದೆಹಲಿ: ಕರ್ನಾಟಕ ರಾಜಕಾರಣದಲ್ಲಿ ಮತ್ತೊಂದು ಪ್ರಮುಖ ಬೆಳವಣಿಗೆಯಾಗಿದ್ದು, ಹಿರಿಯ ನಾಯಕ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಅತ್ಯುನ್ನತ ಜವಾಬ್ದಾರಿಯೊಂದನ್ನು ನೀಡಿದೆ. ಕಾಂಗ್ರೆಸ್ ಪಕ್ಷದ ಪರಮೋಚ್ಛ ನಿರ್ಧಾರ ಕೈಗೊಳ್ಳುವ ಅಂಗವಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (CWC – Congress Working Committee) ಸದಸ್ಯರನ್ನಾಗಿ ಸಿದ್ದರಾಮಯ್ಯ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ಎಐಸಿಸಿ (AICC) ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಜೂನ್ 2, 2026 ರಂದು ನವದೆಹಲಿಯ ಅಕ್ಬರ್ ರಸ್ತೆಯ ಕಾಂಗ್ರೆಸ್ ಪ್ರಧಾನ ಕಚೇರಿಯಿಂದ ಈ ಕುರಿತು ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದಾರೆ. ಗೌರವಾನ್ವಿತ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಆದೇಶದ ಮೇರೆಗೆ ಈ ಪ್ರಮುಖ ನೇಮಕಾತಿ ನಡೆದಿದೆ. ರಾಜ್ಯದಲ್ಲಿ ಸಚಿವ ಸಂಪುಟ ರಚನೆಯ ಕಸರತ್ತು ಭರದಿಂದ ಸಾಗುತ್ತಿರುವ ಬೆನ್ನಲ್ಲೇ, ಸಿದ್ದರಾಮಯ್ಯ ಅವರಿಗೆ ರಾಷ್ಟ್ರ ಮಟ್ಟದ ಉನ್ನತ ಸಮಿತಿಯಲ್ಲಿ ಸ್ಥಾನ ನೀಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಬೆಂಗಳೂರು: “ಸಚಿವರ ಆಯ್ಕೆ ವಿಚಾರವಾಗಿ ಮಾಧ್ಯಮಗಳಲ್ಲಿ ಬರುತ್ತಿರುವ ಹೆಸರುಗಳು ಅಧಿಕೃತವಲ್ಲ. ಇಂದು ಬೆಳಗ್ಗೆ 10 ಗಂಟೆ ಅಥವಾ ಮಧ್ಯಾಹ್ನದ ವೇಳೆಗೆ ಹೈಕಮಾಂಡ್ ನಾಯಕರು ಸಚಿವರ ಪಟ್ಟಿ ಬಿಡುಗಡೆ ಮಾಡಲಿದ್ದಾರೆ” ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಡಿ.ಕೆ. ಶಿವಕುಮಾರ್ ಅವರು ಘೋಷಿಸಿದರು . ಮಂಗಳವಾರದಂದು ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು. “ಸಚಿವರ ಆಯ್ಕೆ ವಿಚಾರವಾಗಿ ಹೈಕಮಾಂಡ್ ನಾಯಕರು ಚರ್ಚೆ ಮಾಡಿದ್ದು, ನಮ್ಮ ಅಭಿಪ್ರಾಯವನ್ನು ತಿಳಿಸಿದ್ದೇವೆ. ಹೈಕಮಾಂಡ್ ನಾಯಕರು ಅಂತಿಮ ತೀರ್ಮಾನ ಮಾಡಲಿದ್ದಾರೆ. ದೆಹಲಿ ನಾಯಕರು ನಮಗೆ ಪಟ್ಟಿ ರವಾನೆ ಮಾಡಿದ ಬಳಿಕ, ನಾವು ಅದನ್ನು ರಾಜಭವನಕ್ಕೆ ಕಳುಹಿಸಿಕೊಡುತ್ತೇವೆ” ಎಂದು ತಿಳಿಸಿದರು. ಬೇರೆ ದಿನ ಕಾಂಗ್ರೆಸ್ ಭವನ ಶಂಕುಸ್ಥಾಪನೆ “ಇಂದು ಸಂಜೆ ನಡೆಯಬೇಕಿದ್ದ ಕಾಂಗ್ರೆಸ್ ಭವನ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಬೇರೊಂದು ದಿನ ನಡೆಸಲು ತೀರ್ಮಾನಿಸಿದ್ದೇವೆ. ಆಹ್ವಾನ ಪತ್ರಿಕೆ ಪಡೆದಿರುವ ಬ್ಲಾಕ್, ಜಿಲ್ಲಾ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಗ್ಯಾರಂಟಿ ಸಮಿತಿಯವರು ಕಾಂಗ್ರೆಸ್ ಕಚೇರಿಯ ಭಾರತ ಜೋಡೋ ಭವನಕ್ಕೆ…
ಬೆಂಗಳೂರು: “ಸಚಿವರ ಆಯ್ಕೆ ವಿಚಾರವಾಗಿ ಮಾಧ್ಯಮಗಳಲ್ಲಿ ಬರುತ್ತಿರುವ ಹೆಸರುಗಳು ಅಧಿಕೃತವಲ್ಲ. ಇಂದು ಬೆಳಗ್ಗೆ 10 ಗಂಟೆ ಅಥವಾ ಮಧ್ಯಾಹ್ನದ ವೇಳೆಗೆ ಹೈಕಮಾಂಡ್ ನಾಯಕರು ಸಚಿವರ ಪಟ್ಟಿ ಬಿಡುಗಡೆ ಮಾಡಲಿದ್ದಾರೆ” ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಡಿ.ಕೆ. ಶಿವಕುಮಾರ್ ಅವರು ಘೋಷಿಸಿದರು . ಮಂಗಳವಾರದಂದು ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು. “ಸಚಿವರ ಆಯ್ಕೆ ವಿಚಾರವಾಗಿ ಹೈಕಮಾಂಡ್ ನಾಯಕರು ಚರ್ಚೆ ಮಾಡಿದ್ದು, ನಮ್ಮ ಅಭಿಪ್ರಾಯವನ್ನು ತಿಳಿಸಿದ್ದೇವೆ. ಹೈಕಮಾಂಡ್ ನಾಯಕರು ಅಂತಿಮ ತೀರ್ಮಾನ ಮಾಡಲಿದ್ದಾರೆ. ದೆಹಲಿ ನಾಯಕರು ನಮಗೆ ಪಟ್ಟಿ ರವಾನೆ ಮಾಡಿದ ಬಳಿಕ, ನಾವು ಅದನ್ನು ರಾಜಭವನಕ್ಕೆ ಕಳುಹಿಸಿಕೊಡುತ್ತೇವೆ” ಎಂದು ತಿಳಿಸಿದರು. ಬೇರೆ ದಿನ ಕಾಂಗ್ರೆಸ್ ಭವನ ಶಂಕುಸ್ಥಾಪನೆ “ಇಂದು ಸಂಜೆ ನಡೆಯಬೇಕಿದ್ದ ಕಾಂಗ್ರೆಸ್ ಭವನ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಬೇರೊಂದು ದಿನ ನಡೆಸಲು ತೀರ್ಮಾನಿಸಿದ್ದೇವೆ. ಆಹ್ವಾನ ಪತ್ರಿಕೆ ಪಡೆದಿರುವ ಬ್ಲಾಕ್, ಜಿಲ್ಲಾ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಗ್ಯಾರಂಟಿ ಸಮಿತಿಯವರು ಕಾಂಗ್ರೆಸ್ ಕಚೇರಿಯ ಭಾರತ ಜೋಡೋ ಭವನಕ್ಕೆ…
ನವದೆಹಲಿ: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ರಚನೆಯ ಚಟುವಟಿಕೆಗಳು ಬಿರುಸಿನಿಂದ ಸಾಗುತ್ತಿರುವ ಬೆನ್ನಲ್ಲೇ, ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಹಿರಿಯ ನಾಯಕ ಸಿದ್ದರಾಮಯ್ಯ ಅವರಿಗೆ ರಾಷ್ಟ್ರ ಮಟ್ಟದ ಅತ್ಯುನ್ನತ ಜವಾಬ್ದಾರಿಯನ್ನು ನೀಡಲಾಗಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (CWC) ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಮಲ್ಲಿಕಾರ್ಜುನ ಖರ್ಗೆ ಆದೇಶದ ಮೇರೆಗೆ ನೇಮಕಾತಿ ಕಾಂಗ್ರೆಸ್ ಪಕ್ಷದ ಪರಮೋಚ್ಛ ನಿರ್ಧಾರಗಳನ್ನು ಕೈಗೊಳ್ಳುವ ಅತ್ಯುನ್ನತ ಸಮಿತಿ ಎನಿಸಿಕೊಂಡಿರುವ ಸಿಡಬ್ಲ್ಯೂಸಿಗೆ (CWC) ಸಿದ್ದರಾಮಯ್ಯ ಅವರನ್ನು ಸೇರ್ಪಡೆಗೊಳಿಸಲು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಅನುಮೋದನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಎಐಸಿಸಿ (AICC) ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ನವದೆಹಲಿಯ ಅಕ್ಬರ್ ರಸ್ತೆಯ ಪ್ರಧಾನ ಕಚೇರಿಯಿಂದ ಜೂನ್ 2, 2026 ರಂದು ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದಾರೆ. ತಕ್ಷಣದಿಂದಲೇ ಜಾರಿಗೆ ಬಂದ ಅಧಿಕೃತ ಆದೇಶ ಈ ಪ್ರಮುಖ ನೇಮಕಾತಿ ಆದೇಶವು ಇಂದಿನಿಂದಲೇ ಕಟ್ಟುನಿಟ್ಟಾಗಿ ಜಾರಿಗೆ ಬರಲಿದೆ ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ. ರಾಜ್ಯದಲ್ಲಿ…














