Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಇಂಗ್ಲಿಷ್‌ನಲ್ಲಿ ಒಂದು ಪ್ರಸಿದ್ಧ ಗಾದೆಯಿದೆ – “An apple a day keeps the doctor away” (ದಿನಕ್ಕೊಂದು ಸೇಬು ತಿಂದರೆ ವೈದ್ಯರಿಂದ ದೂರವಿರಬಹುದು). ಇತ್ತೀಚಿನ ಆಧುನಿಕ ವೈದ್ಯಕೀಯ ಸಂಶೋಧನೆಗಳು ಮತ್ತು ಪೌಷ್ಟಿಕಾಂಶ ತಜ್ಞರ ಪ್ರಕಾರ ಈ ಮಾತು ಅಕ್ಷರಶಃ ಸತ್ಯ. ನಮ್ಮ ದೇಹಕ್ಕೆ ಕಾಡುವ ಸಣ್ಣಪುಟ್ಟ ಇನ್ಫೆಕ್ಷನ್‌ಗಳಿಂದ ಹಿಡಿದು ದೀರ್ಘಕಾಲದ ಕಾಯಿಲೆಗಳವರೆಗೆ, ಬಹುತೇಕ ಎಲ್ಲಾ ಕಾಯಿಲೆಗಳ ವಿರುದ್ಧ ಹೋರಾಡುವ ಅದ್ಭುತ ಶಕ್ತಿ ಸೇಬಿನಲ್ಲಿದೆ. ಹಾಗಾದರೆ, ಈ ಒಂದು ಹಣ್ಣು ನಮ್ಮ ದೇಹದಲ್ಲಿ ಹೇಗೆ ರೋಗಗಳ ವಿರುದ್ಧ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತದೆ? ಇದರ ಪ್ರಮುಖ ಆರೋಗ್ಯ ಪ್ರಯೋಜನಗಳು ಇಲ್ಲಿವೆ: 1. ಕರುಳಿನ ಆರೋಗ್ಯದ ರಕ್ಷಕ (Gut Health Guardian) ಸೇಬು ಹಣ್ಣಿನಲ್ಲಿ ‘ಪೆಕ್ಟಿನ್’ (Pectin) ಎಂಬ ಕರಗುವ ನಾರಿನಂಶ (Soluble Fiber) ಹೇರಳವಾಗಿದೆ. ಇದು ನಮ್ಮ ಕರುಳಿನಲ್ಲಿರುವ ಒಳ್ಳೆಯ ಬ್ಯಾಕ್ಟೀರಿಯಾಗಳಿಗೆ (Probiotics) ಆಹಾರವಾಗಿ ಕೆಲಸ ಮಾಡುತ್ತದೆ. ಕರುಳಿನ ಆರೋಗ್ಯ ಉತ್ತಮವಾಗಿದ್ದರೆ ದೇಹದ ರೋಗನಿರೋಧಕ ಶಕ್ತಿ ತಂತಾನೇ ಹೆಚ್ಚುತ್ತದೆ ಮತ್ತು ಜೀರ್ಣಕ್ರಿಯೆಯ…

Read More

ಬೆಂಗಳೂರು: ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ಮತ್ತು ಅಲ್ಪಸಂಖ್ಯಾತರನ್ನು ಓಲೈಸಲು ಆಳಂದದ ಶ್ರೀ ರಾಘವ ಚೈತನ್ಯ ಮಂದಿರದ ಮೇಲೆ ದಾಳಿ ಮಾಡಿದವರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕಾಂಗ್ರೆಸ್ ಸರ್ಕಾರ ವಾಪಸ್ ಪಡೆದಿದೆ ಎಂದು ವಿಧಾನಪರಿಷತ್ತಿನ ವಿರೋಧಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದ್ದಾರೆ. ಕಲಬುರ್ಗಿಯ ಆಳಂದದಲ್ಲಿ ಪವಿತ್ರ ಶ್ರೀ ರಾಘವ ಚೈತನ್ಯ ಶಿವಲಿಂಗಕ್ಕೆ ಅಪಮಾನ ಎಸಗಿ, ಕೋಮು ಉದ್ವಿಗ್ನತೆ ಸೃಷ್ಟಿಸಿದ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಉಂಟುಮಾಡಿದ ಹಾಗೂ ಪೆÇಲೀಸ್ ಅಧಿಕಾರಿಗಳ ಮೇಲೆಯೇ ಹಲ್ಲೆ ನಡೆಸಿದ ಗಂಭೀರ ಪ್ರಕರಣಗಳ ಹಲವು ಕೇಸ್‍ಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ಮುಂದಾಗಿರುವುದು ಅತ್ಯಂತ ಆಘಾತಕಾರಿ ಮತ್ತು ಖಂಡನೀಯ. ಇಂತಹ ಸಮಾಜವಿರೋಧಿ ಹಾಗೂ ಕ್ರಿಮಿನಲ್ ತತ್ವಗಳ ಬೆನ್ನಿಗೆ ನಿಲ್ಲುವ ಮೂಲಕ ಕಾಂಗ್ರೆಸ್ ಸರ್ಕಾರ ತಾನು ಜನವಿರೋಧಿ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಈ ಹಿನ್ನೆಲೆಯಲ್ಲಿ, ಸಂವಿಧಾನವಿರೋಧಿ ಹಾಗೂ ಜನವಿರೋಧಿಯಾದ ಈ ಆದೇಶವನ್ನು ತಕ್ಷಣವೇ ರದ್ದುಪಡಿಸುವಂತೆ ಗೌರವಾನ್ವಿತ ರಾಜ್ಯಪಾಲರಿಗೆ ಇಂದು ಮನವಿ ಸಲ್ಲಿಸಲಾಯಿತು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ ಅವರು, ಘಟನೆಯ…

Read More

ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ನೈಸರ್ಗಿಕ ಮತ್ತು ಪೌಷ್ಟಿಕಾಂಶಯುಕ್ತ ಆಹಾರಗಳಿಗೆ ಆದ್ಯತೆ ನೀಡುವುದು ಇಂದಿನ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಅವಶ್ಯಕ. ಇಂತಹ ಸೂಪರ್‌ಫುಡ್‌ಗಳಲ್ಲಿ ಮೊಳಕೆ ಬರಿಸಿದ ಕಾಳುಗಳು (Sprouts) ಮುಂಚೂಣಿಯಲ್ಲಿವೆ. ಧಾನ್ಯಗಳು ಅಥವಾ ಕಾಳುಗಳನ್ನು ಮೊಳಕೆ ಬರಿಸಿದಾಗ ಅವುಗಳಲ್ಲಿನ ಪೋಷಕಾಂಶಗಳ ಮೌಲ್ಯವು ದುಪ್ಪಟ್ಟಾಗುತ್ತದೆ. ಮೊಳಕೆಕಾಳುಗಳನ್ನು ನಿಯಮಿತವಾಗಿ ಸೇವಿಸುವುದರಿಂದ ನಮ್ಮ ದೇಹಕ್ಕೆ ಸಿಗುವ 7 ಪ್ರಮುಖ ಆರೋಗ್ಯ ಪ್ರಯೋಜನಗಳು ಇಲ್ಲಿವೆ: 1. ಜೀರ್ಣಕ್ರಿಯೆ ಸುಧಾರಿಸುತ್ತದೆ (Improves Digestion) ಮೊಳಕೆ ಬರಿಸಿದ ಕಾಳುಗಳಲ್ಲಿ ಜೀವಂತ ಎಂಜೈಮ್‌ಗಳು (Enzymes) ಅತ್ಯಧಿಕ ಪ್ರಮಾಣದಲ್ಲಿರುತ್ತವೆ. ಇವು ನಾವು ತಿನ್ನುವ ಆಹಾರವನ್ನು ಸುಲಭವಾಗಿ ಒಡೆಯಲು ಮತ್ತು ಜೀರ್ಣಿಸಿಕೊಳ್ಳಲು ದೇಹಕ್ಕೆ ಸಹಾಯ ಮಾಡುತ್ತವೆ. ಅಲ್ಲದೆ, ಇದರಲ್ಲಿರುವ ಸಮೃದ್ಧ ನಾರಿನಂಶ (Fiber) ಮಲಬದ್ಧತೆಯ ಸಮಸ್ಯೆಯನ್ನು ನಿವಾರಿಸಿ, ಕರುಳಿನ ಆರೋಗ್ಯವನ್ನು ವೃದ್ಧಿಸುತ್ತದೆ. 2. ಪೋಷಕಾಂಶಗಳ ಗಣಿ (Rich in Nutrients) ಕಾಳುಗಳನ್ನು ಮೊಳಕೆ ಬರಿಸುವ ಪ್ರಕ್ರಿಯೆಯಲ್ಲಿ ಅವುಗಳಲ್ಲಿರುವ ವಿಟಮಿನ್ ಮತ್ತು ಖನಿಜಾಂಶಗಳ ಪ್ರಮಾಣವು ಗಣನೀಯವಾಗಿ ಹೆಚ್ಚುತ್ತದೆ. ವಿಶೇಷವಾಗಿ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್…

Read More

ಬೆಂಗಳೂರು: ಅಂಗಡಿಗೆ ಹೋಗಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವಾಗ ಬ್ಯಾಂಕ್ ಅಕೌಂಟ್‌ನಲ್ಲಿ ದುಡ್ಡಿಲ್ಲವೆಂದು ಟೆನ್ಷನ್ ಮಾಡಿಕೊಳ್ಳುವ ಅಗತ್ಯ ಇನ್ಮುಂದೆ ಇಲ್ಲ! ಭಾರತದ ಪ್ರಮುಖ ಡಿಜಿಟಲ್ ಪಾವತಿ ಸಂಸ್ಥೆ ‘ಭಾರತ್‌ಪೇ’, ಯೆಸ್ ಬ್ಯಾಂಕ್ ಸಹಯೋಗದೊಂದಿಗೆ ‘ಭಾರತ್‌ಪೇ ಫ್ಲೆಕ್ಸ್’ ಎಂಬ ವಿನೂತನ ಸೇವೆಯನ್ನು ಆರಂಭಿಸಿದೆ. ಏನಿದು ಭಾರತ್‌ಪೇ ಫ್ಲೆಕ್ಸ್? ಸಾಮಾನ್ಯವಾಗಿ ನಾವು ಯುಪಿಐ ಮೂಲಕ ಪಾವತಿ ಮಾಡಿದಾಗ, ಆ ಹಣ ನೇರವಾಗಿ ನಮ್ಮ ಬ್ಯಾಂಕ್ ಖಾತೆಯಿಂದ ಕಡಿತಗೊಳ್ಳುತ್ತದೆ. ಆದರೆ, ‘ಭಾರತ್‌ಪೇ ಫ್ಲೆಕ್ಸ್’ ಎಂಬುದು ಯುಪಿಐ ಆಧಾರಿತ ಸಾಲದ ಸೌಲಭ್ಯವಾಗಿದೆ. ಗ್ರಾಹಕರು ಅಂಗಡಿಗಳಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಪಾವತಿ ಮಾಡಲು, ಆನ್‌ಲೈನ್ ಶಾಪಿಂಗ್ ಮಾಡಲು, ಕರೆಂಟ್ ಬಿಲ್ ಕಟ್ಟಲು, ರೀಚಾರ್ಜ್ ಮಾಡಲು ಹಾಗೂ ಪೆಟ್ರೋಲ್ ಹಾಕಿಸಲು ಈ ‘ಕ್ರೆಡಿಟ್ ಲೈನ್’ (ಸಾಲ ಸೌಲಭ್ಯ) ಅನ್ನು ಬಳಸಬಹುದು. ಆಕಸ್ಮಿಕವಾಗಿ ಎದುರಾಗುವ ತುರ್ತು ಖರ್ಚುಗಳನ್ನು ನಿಭಾಯಿಸಲು ಇದು ಗ್ರಾಹಕರಿಗೆ ನೆರವಾಗಲಿದೆ. ಬಡ್ಡಿ ಇಲ್ಲ, ಇಎಂಐ ಪಾವತಿಗೂ ಅವಕಾಶ * ಬಡ್ಡಿ-ಮುಕ್ತ ಅವಧಿ: ಗ್ರಾಹಕರು ಪಾವತಿಸಿದ (ಬಳಸಿದ) ಹಣವನ್ನು…

Read More

ಬೆಂಗಳೂರು: ಜೂನ್ 3 ರ ನಾಳೆ ನೂತನ ಮುಖ್ಯಮಂತ್ರಿಗಳ ಪ್ರಮಾಣ ವಚನ ಸಮಾರಂಭದ ಹಿನ್ನಲೆಯಲ್ಲಿ ಬೆಂಗಳೂರಲ್ಲಿ  ಸುಗಮ ಸಂಚಾರಕ್ಕಾಗಿ ಪರ್ಯಾಯ ಮಾರ್ಗ ಹಾಗೂ ಮಾರ್ಗಸೂಚಿಗಳನ್ನು ಸಂಚಾರ ಪೊಲೀಸರು ಸಲಹೆ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು,  ದಿನಾಂಕ 03.06.2026 ರಂದು ಸಂಜೆ 04:00 ಗಂಟೆಗೆ ಕಬ್ಬನ್ಪಾರ್ಕ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಲೋಕಭವನದ ಗಾಜಿನ ಮನೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳ ಪ್ರಮಾಣ ವಚನ ಸಮಾರಂಭವನ್ನು ನಿಗದಿಪಡಿಸಲಾಗಿದೆ. ಈ ಅತ್ಯಂತ ಪ್ರಮುಖ ಕಾರ್ಯಕ್ರಮಕ್ಕೆ ದೇಶದ ಹಾಗೂ ರಾಜ್ಯದ ಅತಿಗಣ್ಯ ಮತ್ತು ಗಣ್ಯ ವ್ಯಕ್ತಿಗಳು ಭಾಗವಹಿಸಲಿದ್ದಾರೆ. ಭದ್ರತೆ ಮತ್ತು ನಿಯಂತ್ರಣದ ಹಿತದೃಷ್ಟಿಯಿಂದ ಲೋಕಭವನಕ್ಕೆ ಆಹ್ವಾನಿತರಿಗೆ ಮಾತ್ರ ಪ್ರವೇಶವಿದ್ದು, ಸಾರ್ವಜನಿಕರ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲಾಗಿದೆ. ಸಿ.ಬಿ.ಡಿ. ವ್ಯಾಪ್ತಿಯಲ್ಲಿರುವ ಲೋಕಭವನದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ಹಾಗೂ ರೇಸ್‌ಕೋರ್ಸ್‌ ರಸ್ತೆಯ ಸಾರ್ವಜನಿಕ ಕಾರ್ಯಕ್ರಮದ ನಿಮಿತ್ತ ನಗರದಲ್ಲಿ ಹೆಚ್ಚಿನ ಸಂಚಾರ ದಟ್ಟಣೆಯಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ, ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ದಿನಾಂಕ: 03.06.2026 ರಂದು ಮಧ್ಯಾಹ್ನ 12:00…

Read More

ಬೆಂಗಳೂರು: ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ ಅಡ್ಡಿಯಾಗಿದ್ದ ಕಠಿಣ ಷರತ್ತುಗಳನ್ನು ತೆಗೆದು, ನಿಯಮಾವಳಿ ಸರಳೀಕರಣ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಕೆಯುಡಬ್ಲ್ಯೂಜೆ ಸ್ವಾಗತಿಸಿದೆ. ಬೀದರನಲ್ಲಿ ನಡೆದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಒತ್ತಾಯಕ್ಕೆ ಸ್ಪಂಧಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅದೇ ವೇದಿಕೆಯಲ್ಲಿ ಕಠಿಣ ಷರತ್ತುಗಳನ್ನು ಕೈಬಿಡುವುದಾಗಿ ಭರವಸೆ ನೀಡಿದ್ದರು. ಸರ್ಕಾರಕ್ಕೆ ಮೂರು ವರ್ಷ ತುಂಬಿದಾಗ ಕೆಯುಡಬ್ಲ್ಯೂಜೆ ಏರ್ಪಡಿಸಿದ್ದ ಸಂವಾದದಲ್ಲಿ ಭಾಗವಹಿಸಿದ್ದ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಈ ಬಗ್ಗೆ ವಾರದೊಳಗೆ ಕ್ರಮ ವಹಿಸುವುದಾಗಿ ತಿಳಿಸಿದ್ದರು. ಸಿಎಂ ಸೂಚನೆ ಮೇರೆಗೆ ಹೊಸ ಆದೇಶ ಹೊರಬಿದ್ದಿದೆ. ಪೂರ್ಣಾವಧಿಗೆ ಸೀಮಿತವಾಗಿದ್ದನ್ನು ಬದಲಿಸಿ, ಅರೆಕಾಲಿಕ ವರದಿಗಾರರಿಗೂ ಯೋಜನೆ ವಿಸ್ತರಿಸಲಾಗಿದೆ. ಸೌಲಭ್ಯ ಪಡೆಯಲು 11 ತಿಂಗಳ ಲೈನೇಜ್ ಪಡೆದಿರುವ ಬ್ಯಾಂಕ್ ಸ್ಟೇಟ್ ಮೆಂಟ್ ಕಡ್ಡಾಯವಾಗಿದ್ದನ್ನು ಷರತ್ತಿನಲ್ಲಿ ಕೈಬಿಡಲಾಗಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಸತತ ಹೋರಾಟಕ್ಕೆ ಸ್ಪಂಧಿಸಿ ಬೇಡಿಕೆ ಈಡೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ…

Read More

ಬೆಂಗಳೂರು: ಜೂನ್ 3 ರ ನಾಳೆ ನೂತನ ಮುಖ್ಯಮಂತ್ರಿಗಳ ಪ್ರಮಾಣ ವಚನ ಸಮಾರಂಭದ ಹಿನ್ನಲೆಯಲ್ಲಿ ಬೆಂಗಳೂರಲ್ಲಿ  ಸುಗಮ ಸಂಚಾರಕ್ಕಾಗಿ ಪರ್ಯಾಯ ಮಾರ್ಗ ಹಾಗೂ ಮಾರ್ಗಸೂಚಿಗಳನ್ನು ಸಂಚಾರ ಪೊಲೀಸರು ಸಲಹೆ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು,  ದಿನಾಂಕ 03.06.2026 ರಂದು ಸಂಜೆ 04:00 ಗಂಟೆಗೆ ಕಬ್ಬನ್ಪಾರ್ಕ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಲೋಕಭವನದ ಗಾಜಿನ ಮನೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳ ಪ್ರಮಾಣ ವಚನ ಸಮಾರಂಭವನ್ನು ನಿಗದಿಪಡಿಸಲಾಗಿದೆ. ಈ ಅತ್ಯಂತ ಪ್ರಮುಖ ಕಾರ್ಯಕ್ರಮಕ್ಕೆ ದೇಶದ ಹಾಗೂ ರಾಜ್ಯದ ಅತಿಗಣ್ಯ ಮತ್ತು ಗಣ್ಯ ವ್ಯಕ್ತಿಗಳು ಭಾಗವಹಿಸಲಿದ್ದಾರೆ. ಭದ್ರತೆ ಮತ್ತು ನಿಯಂತ್ರಣದ ಹಿತದೃಷ್ಟಿಯಿಂದ ಲೋಕಭವನಕ್ಕೆ ಆಹ್ವಾನಿತರಿಗೆ ಮಾತ್ರ ಪ್ರವೇಶವಿದ್ದು, ಸಾರ್ವಜನಿಕರ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲಾಗಿದೆ. ಸಿ.ಬಿ.ಡಿ. ವ್ಯಾಪ್ತಿಯಲ್ಲಿರುವ ಲೋಕಭವನದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ಹಾಗೂ ರೇಸ್‌ಕೋರ್ಸ್‌ ರಸ್ತೆಯ ಸಾರ್ವಜನಿಕ ಕಾರ್ಯಕ್ರಮದ ನಿಮಿತ್ತ ನಗರದಲ್ಲಿ ಹೆಚ್ಚಿನ ಸಂಚಾರ ದಟ್ಟಣೆಯಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ, ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ದಿನಾಂಕ: 03.06.2026 ರಂದು ಮಧ್ಯಾಹ್ನ 12:00…

Read More

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಮತ್ತು ಬಿಜೆಪಿ ವಲಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡು ಬಿಜೆಪಿಯ ಪ್ರಮುಖ ನಾಯಕ ಕೆ. ಅಣ್ಣಾಮಲೈ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಉಸ್ತುವಾರಿ ನಿತಿನ್ ನಬಿನ್ ಅವರಿಗೆ ಬರೋಬ್ಬರಿ 5 ಪುಟಗಳ ಸುದೀರ್ಘ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ಮಾಜಿ ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ಅವರು ಪೊಲೀಸ್ ಉದ್ಯೋಗಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ತಮಿಳುನಾಡಿನಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವಲ್ಲಿ ಮತ್ತು ಆಡಳಿತಾರೂಢ ಡಿಎಂಕೆ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸುವ ಮೂಲಕ ದೇಶಾದ್ಯಂತ ಗಮನ ಸೆಳೆದಿದ್ದರು. ರಾಜೀನಾಮೆ ಪತ್ರದಲ್ಲಿ ಏನಿದೆ? ವರದಿಗಳ ಪ್ರಕಾರ, ಅಣ್ಣಾಮಲೈ ಅವರು ಸಲ್ಲಿಸಿರುವ 5 ಪುಟಗಳ ಸುದೀರ್ಘ ಪತ್ರದಲ್ಲಿ ಹಲವು ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ. ಪಕ್ಷದಲ್ಲಿ ತಮಗಿದ್ದ ಜವಾಬ್ದಾರಿಗಳು, ತಮಿಳುನಾಡಿನಲ್ಲಿ ಪಕ್ಷದ ಬೆಳವಣಿಗೆಗಾಗಿ ತಾವು ನಡೆಸಿದ ಹೋರಾಟಗಳು, ಇತ್ತೀಚಿನ ರಾಜಕೀಯ ವಿದ್ಯಮಾನಗಳು ಹಾಗೂ ತಮ್ಮ ವೈಯಕ್ತಿಕ ನಿರ್ಧಾರಗಳ ಬಗ್ಗೆ ಅವರು ಈ…

Read More

ನವದೆಹಲಿ: ವಿವಾಹವಾದ ನಂತರವೂ ತಮ್ಮ ಪೋಷಕರನ್ನೇ ಆಶ್ರಯಿಸಿರುವ ಮಹಿಳೆಯರಿಗೆ ಸುಪ್ರೀಂ ಕೋರ್ಟ್ ಭಾರಿ ಸಮಾಧಾನಕರ ಸುದ್ದಿಯೊಂದನ್ನು ನೀಡಿದೆ. ಸರ್ಕಾರಿ ನೌಕರರು ಸೇವೆಯಲ್ಲಿದ್ದಾಗ ಮೃತಪಟ್ಟರೆ, ಅವರ ಸ್ಥಾನದಲ್ಲಿ ನೀಡಲಾಗುವ ಅನುಕಂಪದ ಆಧಾರದ ನೇಮಕಾತಿಗೆ (Compassionate Appointment) ವಿವಾಹಿತ ಪುತ್ರಿಯರೂ ಅರ್ಹರು ಎಂದು ಸರ್ವೋಚ್ಚ ನ್ಯಾಯಾಲಯವು ಸ್ಪಷ್ಟಪಡಿಸಿದೆ. ಲಿಂಗ ಸಮಾನತೆಯ ನಿಟ್ಟಿನಲ್ಲಿ ಈ ತೀರ್ಪು ಅತ್ಯಂತ ಮಹತ್ವದ್ದಾಗಿದ್ದು, ಹೆಣ್ಣುಮಕ್ಕಳ ಹಕ್ಕುಗಳನ್ನು ಎತ್ತಿಹಿಡಿದಿದೆ. ‘ವೈವಾಹಿಕ ಸ್ಥಿತಿ’ ತಾರತಮ್ಯಕ್ಕೆ ಕಾರಣವಾಗಬಾರದು ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ನೀಡುವಾಗ ವಿವಾಹಿತ ಪುತ್ರಿಯರನ್ನು ಪ್ರಕ್ರಿಯೆಯಿಂದ ಹೊರಗಿಡುವುದು ಸಂಪೂರ್ಣ ತಾರತಮ್ಯ ಮತ್ತು ಅಸಂವಿಧಾನಿಕ ಎಂದು ನ್ಯಾಯಾಲಯ ಹೇಳಿದೆ. “ಒಬ್ಬ ವ್ಯಕ್ತಿಯ ವೈವಾಹಿಕ ಸ್ಥಿತಿಯು ಆಕೆಯ ಉದ್ಯೋಗದ ಅರ್ಹತೆಯನ್ನು ನಿರ್ಧರಿಸುವ ಮಾನದಂಡವಾಗಬಾರದು. ಇನ್ನು ಮುಂದೆ ವಿವಾಹಿತ ಪುತ್ರಿಯರೂ ಸಹ ಅನುಕಂಪದ ನೇಮಕಾತಿಗೆ ಸಮಾನವಾಗಿ ಅರ್ಹರಾಗಿದ್ದಾರೆ,” ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಮಹಿಳೆಯರ ಹಕ್ಕುಗಳ ಮೊಟಕುಗೊಳಿಸುವಂತಿಲ್ಲ ಮದುವೆಯಾಗಿದೆ ಎಂಬ ಒಂದೇ ಒಂದು ಕಾರಣಕ್ಕಾಗಿ ಮಹಿಳೆಯರ ಹಕ್ಕುಗಳನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ವಿವಾಹವೆಂಬುದು…

Read More

​ಶಿವಮೊಗ್ಗ: 2026-27ನೇ ಸಾಲಿಗೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಉಳವಿಯಲ್ಲಿರುವ ‘ಕರ್ನಾಟಕ ಪಬ್ಲಿಕ್ ಸ್ಕೂಲ್’ (KPS) ನಲ್ಲಿ ಖಾಲಿ ಇರುವ ಹಿಂದಿ ಭಾಷೆ ಹಾಗೂ ಸಮಾಜ ವಿಜ್ಞಾನ ವಿಷಯಗಳ ಅತಿಥಿ ಶಿಕ್ಷಕರ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಲಾಖಾ ಷರತ್ತುಗಳಿಗೆ ಒಳಪಟ್ಟು ಮೆರಿಟ್ ಆಧಾರದ ಮೇಲೆ ಈ ನೇಮಕಾತಿ ನಡೆಯಲಿದೆ. ​ಪ್ರಮುಖ ದಿನಾಂಕಗಳು: ​ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ: 01-06-2026 ​ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-06-2026 ​ಅರ್ಜಿ ಪರಿಶೀಲಿಸುವ ದಿನಾಂಕ: 11-06-2026 ​ನೇಮಕಾತಿ ಆದೇಶ ನೀಡುವ ದಿನಾಂಕ: 15-06-2026 ​ಕರ್ತವ್ಯಕ್ಕೆ ಹಾಜರಾಗುವ ದಿನಾಂಕ: 15-06-2026 ​ಅಭ್ಯರ್ಥಿಗೆ ಇರಬೇಕಾದ ಅರ್ಹತೆಗಳು: ​ಅಭ್ಯರ್ಥಿಗಳು ಬಿ.ಎ. ಪದವಿಯಲ್ಲಿ ಹಿಂದಿ ಭಾಷೆಯನ್ನು ಒಂದು ವಿಷಯವನ್ನಾಗಿ ಅಭ್ಯಾಸ ಮಾಡಿರಬೇಕು. ​ಬಿ.ಇಡಿ. (B.Ed) ಪದವಿಯಲ್ಲಿ ಇತಿಹಾಸವನ್ನು ಬೋಧನಾ ವಿಷಯವನ್ನಾಗಿ (Method) ಓದಿರಬೇಕು. ​ಅತಿಥಿ ಶಿಕ್ಷಕರನ್ನು ಆಯಾ ಹುದ್ದೆಗೆ ನಿಗದಿಪಡಿಸಿದ ಕನಿಷ್ಠ ವಿದ್ಯಾರ್ಹತೆಯನ್ನು ಪರಿಗಣಿಸಿ, ಸಂಪೂರ್ಣವಾಗಿ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ​ಅರ್ಜಿ ಜೊತೆ ಸಲ್ಲಿಸಬೇಕಾದ…

Read More