Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ಪೊಲೀಸರು ಬುಧವಾರ ರಾತ್ರಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 100 ಕೆಜಿ ತೂಕದ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ: ಕಾರು ಜಪ್ತಿ ಒರಿಸ್ಸಾದಿಂದ ತುಮಕೂರು ಮಾರ್ಗವಾಗಿ ಮಂಡ್ಯ ಜಿಲ್ಲೆಗೆ ಕಾರೊಂದರಲ್ಲಿ ಅಪಾರ ಪ್ರಮಾಣದ ಗಾಂಜಾ ತರಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈ ಮಾಹಿತಿಯನ್ನಾಧರಿಸಿ ತಕ್ಷಣ ಕಾರ್ಯಪ್ರವೃತ್ತರಾದ ಕೆಸ್ತೂರು ಪೊಲೀಸರು, ಗ್ರಾಮದ ಬಳಿ ಶಂಕಿತ ಕಾರನ್ನು ಅಡ್ಡಗಟ್ಟಿ ತೀವ್ರ ತಪಾಸಣೆ ನಡೆಸಿದ್ದಾರೆ. ಈ ವೇಳೆ ಕಾರಿನಲ್ಲಿ ಗಾಂಜಾ ಸೊಪ್ಪು ಇರುವುದು ಪತ್ತೆಯಾಗಿದ್ದು, ತಕ್ಷಣವೇ ಪೊಲೀಸರು ಗಾಂಜಾ ಸಹಿತ ಕಾರನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳ ಭೇಟಿ, ವಿಚಾರಣೆ ಚುರುಕು ಬೃಹತ್ ಪ್ರಮಾಣದ ಗಾಂಜಾ ಪತ್ತೆಯಾದ ಸುದ್ದಿ ತಿಳಿಯುತ್ತಿದ್ದಂತೆ ಮಂಡ್ಯ ಎಸ್ಪಿ ಶೋಭಾ ರಾಣಿ, ಮಳವಳ್ಳಿ ಡಿವೈಎಸ್ಪಿ ಯಶವಂತ್ ಕುಮಾರ್, ಸಿಪಿಐ ನಾರಾಯಣಿ ಹಾಗೂ ಕೆಸ್ತೂರು ಪಿಎಸ್ಐ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳ ತಂಡ…

Read More

ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಲಖನೌನ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 2ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಪ್ರದರ್ಶನ ತೋರಿ ಅಫ್ಘಾನಿಸ್ತಾನ ವಿರುದ್ಧ 170 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಬೃಹತ್ ಗೆಲುವಿನೊಂದಿಗೆ ಮೂರು ಪಂದ್ಯಗಳ ದ್ವಿಪಕ್ಷೀಯ ಸರಣಿಯಲ್ಲಿ ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಭಾರತ ತಂಡ 2-0 ಅಂತರದಿಂದ ಏಕದಿನ ಸರಣಿಯನ್ನ ತನ್ನದಾಗಿಸಿಕೊಂಡಿದೆ. ಗಿಲ್-ಕಿಶನ್ ರನ್ ಮಳೆ: ಭಾರತಕ್ಕೆ 402 ರನ್‌ಗಳ ಬೃಹತ್ ಮೊತ್ತ ಈ ಪಂದ್ಯದಲ್ಲಿ ಟಾಸ್​ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡದ ಬ್ಯಾಟ್ಸ್​​ಮನ್​​​ಗಳು ಮೈದಾನದ ಮೂಲೆ ಮೂಲೆಗೂ ರನ್​​​ಗಳ ಮಳೆಯನ್ನೇ ಸುರಿಸಿದರು. ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ನಾಯಕ ಶುಬ್​ಮನ್ ಗಿಲ್ ಮತ್ತು ಇಶಾನ್ ಕಿಶನ್ ಅಫ್ಘಾನ್ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದರು. ನಾಯಕನ ಜವಾಬ್ದಾರಿಯುತ ಆಟ ಪ್ರದರ್ಶಿಸಿದ ಶುಬ್​ಮನ್ ಗಿಲ್ ಕೇವಲ 110 ಎಸೆತಗಳಲ್ಲಿ 154 ರನ್ ಚಚ್ಚಿದರೆ, ಮತ್ತೊಂದೆಡೆ ಸಿಡಿಲಮರಿ ಆಟ ಆಡಿದ ಇಶಾನ್ ಕಿಶನ್​ ಕೇವಲ 79 ಎಸೆತಗಳಲ್ಲಿ 125…

Read More

ಮದುವೆಯ ಆರಂಭದ ದಿನಗಳಲ್ಲಿ ದಂಪತಿಗಳ ನಡುವೆ ಪ್ರೀತಿ, ಆಕರ್ಷಣೆ ಮತ್ತು ದೈಹಿಕ ಸಾಮೀಪ್ಯ (ಸಂಬಂಧ) ತುಂಬಾ ಹೆಚ್ಚಿರುತ್ತದೆ. ಆದರೆ ಕಾಲ ಕಳೆದಂತೆ, ಹಲವು ವರ್ಷಗಳ ಒಟ್ಟಿಗೆ ಬಾಳಿದ ನಂತರ, ಅನೇಕ ದಂಪತಿಗಳ ನಡುವೆ ಲೈಂಗಿಕ ಆಕರ್ಷಣೆ ಮತ್ತು ದೈಹಿಕ ಸಂಬಂಧ ನಿಧಾನವಾಗಿ ಕಡಿಮೆಯಾಗುತ್ತಾ ಬರುತ್ತದೆ. ಕೆಲವೊಮ್ಮೆ ಇದು ಸಂಪೂರ್ಣವಾಗಿ ನಿಂತುಹೋಗುವ ಹಂತಕ್ಕೂ ತಲುಪಬಹುದು.  ಇದು ಕೇವಲ ಭಾರತದಲ್ಲಿ ಮಾತ್ರವಲ್ಲ, ವಿಶ್ವಾದ್ಯಂತ ಲಕ್ಷಾಂತರ ದಂಪತಿಗಳು ಎದುರಿಸುತ್ತಿರುವ ಸಾಮಾನ್ಯ ಸಮಸ್ಯೆಯಾಗಿದೆ. ಪ್ರೀತಿ ಮತ್ತು ಸ್ನೇಹ ಇದ್ದರೂ ಸಹ ದೈಹಿಕ ಸಂಬಂಧ ಏಕೆ ದೂರವಾಗುತ್ತದೆ? ಇದಕ್ಕೆ ಸಂಬಂಧಿಸಿದಂತೆ ಮನೋವಿಜ್ಞಾನಿಗಳು ಮತ್ತು ಸಂಬಂಧ ತಜ್ಞರು (Relationship Experts) ಗುರುತಿಸಿರುವ ಪ್ರಮುಖ ಕಾರಣಗಳು ಇಲ್ಲಿವೆ: 1. ಅತಿಯಾದ ದಣಿವು ಮತ್ತು ಜೀವನದ ಜವಾಬ್ದಾರಿಗಳು (Exhaustion and Stress) ಆಧುನಿಕ ಜೀವನಶೈಲಿಯಲ್ಲಿ ದಂಪತಿಗಳಿಬ್ಬರೂ ಕೆಲಸಕ್ಕೆ ಹೋಗುವುದು ಸಾಮಾನ್ಯವಾಗಿದೆ. ಕಚೇರಿಯ ಒತ್ತಡ, ಮನೆಗೆಲಸ, ಮಕ್ಕಳ ಪಾಲನೆ-ಪೋಷಣೆ, ಮತ್ತು ಕುಟುಂಬದ ಆರ್ಥಿಕ ಜವಾಬ್ದಾರಿಗಳನ್ನು ನಿಭಾಯಿಸುವಷ್ಟರಲ್ಲಿ ಇಬ್ಬರೂ ದೈಹಿಕವಾಗಿ ಮತ್ತು ಮಾನಸಿಕವಾಗಿ ತೀವ್ರವಾಗಿ ಸುಸ್ತಾಗುತ್ತಾರೆ.…

Read More

ನಮ್ಮ ದೇಹದಲ್ಲಿರುವ ಕಲ್ಮಶಗಳನ್ನು ಹೊರಹಾಕಿ, ರಕ್ತವನ್ನು ಶುದ್ಧೀಕರಿಸುವಲ್ಲಿ ಮೂತ್ರಪಿಂಡಗಳು (Kidneys) ಅತ್ಯಂತ ಪ್ರಮುಖ ಪಾತ್ರ ವಹಿಸುತ್ತವೆ. ಇತ್ತೀಚಿನ ದಿನಗಳಲ್ಲಿ ಬದಲಾಗುತ್ತಿರುವ ಜೀವನಶೈಲಿ, ಕಳಪೆ ಆಹಾರ ಪದ್ಧತಿ ಮತ್ತು ಕಡಿಮೆ ನೀರು ಕುಡಿಯುವ ಅಭ್ಯಾಸದಿಂದಾಗಿ ಕಿಡ್ನಿ ಸಮಸ್ಯೆಗಳಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಕಿಡ್ನಿಗಳನ್ನು ನೈಸರ್ಗಿಕವಾಗಿ ಸ್ವಚ್ಛವಾಗಿಡಲು ಮತ್ತು ಅವುಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಕೆಲವು ಹಣ್ಣುಗಳು ರಾಮಬಾಣವಾಗಿ ಕೆಲಸ ಮಾಡುತ್ತವೆ. ಮೂತ್ರಪಿಂಡಗಳ ಆರೋಗ್ಯವನ್ನು ವೃದ್ಧಿಸುವ ಅಂತಹ 6 ಅದ್ಭುತ ಹಣ್ಣುಗಳು ಮತ್ತು ಅವುಗಳನ್ನು ಸೇವಿಸುವ ಸರಿಯಾದ ಕ್ರಮಗಳ ಕುರಿತಾದ ವಿಸ್ತೃತ ಮಾಹಿತಿ ಇಲ್ಲಿದೆ: 1. ಆಪಲ್ (ಸೇಬು ಹಣ್ಣು) “ದಿನಕ್ಕೊಂದು ಸೇಬು ತಿಂದರೆ ವೈದ್ಯರಿಂದ ದೂರವಿರಬಹುದು” ಎಂಬ ಗಾದೆ ಕಿಡ್ನಿ ಆರೋಗ್ಯಕ್ಕೂ ಅನ್ವಯಿಸುತ್ತದೆ. ಸೇಬಿನಲ್ಲಿ ‘ಪೆಕ್ಟಿನ್’ ಎಂಬ ಕರಗುವ ನಾರಿನಂಶ (Soluble Fiber) ಸಮೃದ್ಧವಾಗಿದೆ. ಇದು ರಕ್ತದಲ್ಲಿನ ಕೊಲೆಸ್ಟ್ರಾಲ್ ಮತ್ತು ಗ್ಲೂಕೋಸ್ ಮಟ್ಟವನ್ನು ನಿಯಂತ್ರಿಸುವುದಲ್ಲದೆ, ಕಿಡ್ನಿಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡುತ್ತದೆ. ಇದರಲ್ಲಿ ಪೊಟ್ಯಾಸಿಯಮ್ ಅಂಶ ಕಡಿಮೆ ಇರುವುದರಿಂದ ಕಿಡ್ನಿ ರೋಗಿಗಳಿಗೆ ಇದು ಅತ್ಯುತ್ತಮ. ಸೇವಿಸುವ…

Read More

ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಉಚಿತ ಬಸ್ ಪಾಸ್ ಯೋಜನೆಗೆ ಅರ್ಜಿ ಸಲ್ಲಿಕೆ ವೇಳೆ ಎದುರಾಗುತ್ತಿರುವ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಬಗೆಹರಿಸಿ ಪತ್ರಿಕಾ ದಿನಾಚರಣೆ ವೇಳೆಗೆ ಅರ್ಹ ಪತ್ರಕರ್ತರಿಗೆ ಪಾಸ್ ವಿತರಿಸಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಆಗ್ರಹಿಸಿದ್ದಾರೆ. ಈ ಕುರಿತು ಸರ್ಕಾರಕ್ಕೆ ಮನವಿ ಸಲ್ಲಿಸಿರುವ ಅವರು, ಮೊದಲ ಹಂತದಲ್ಲಿ ಸುಮಾರು 5,500 ಪತ್ರಕರ್ತರಿಗೆ ಯೋಜನೆಯ ಪ್ರಯೋಜನ ದೊರೆಯಲಿದ್ದು, ಈ ನಿಟ್ಟಿನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯೋನ್ಮುಖವಾಗಿ ಕೆಲಸ ಮಾಡುತ್ತಿರುವುದು ಸಂತಸದ ಸಂಗತಿ ಎಂದು ಹೇಳಿದ್ದಾರೆ. ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆ ಜಾರಿಗೊಳಿಸಿರುವುದಕ್ಕೆ ಸರ್ಕಾರಕ್ಕೆ ಧನ್ಯವಾದವನ್ನು ಅವರು ಸಲ್ಲಿಸಿದ್ದಾರೆ ಆದರೆ, ಬಸ್ ಪಾಸ್ ಯೋಜನೆಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿದ್ದು, ಅವುಗಳನ್ನು ಕೂಡಲೇ ಪರಿಹರಿಸಿ ಪತ್ರಿಕಾ ದಿನಾಚರಣೆ ಹೊತ್ತಿಗೆ ಅರ್ಜಿ ಸಲ್ಲಿಸಿದ ಎಲ್ಲ ಅರ್ಹ ಪತ್ರಕರ್ತರಿಗೆ ಬಸ್ ಪಾಸ್ ವಿತರಣೆ ಮಾಡಬೇಕು ಎಂದು…

Read More

ಬೆಂಗಳೂರು: “ಕೇವಲ ಪ್ರಚಾರ ಮತ್ತು ವ್ಯೂಸ್ ಗಳಿಸುವುದಕ್ಕಾಗಿ ಜೀವಂತ ಇರುವವರ ಸಾವಿನ ಸುಳ್ಳು ಸುದ್ದಿ ಬಿತ್ತರಿಸುವ ಮುಖೇಡಿಗಳ ಹೆಡೆಮುರಿ ಕಟ್ಟಿ ತಕ್ಷಣವೇ ಪರಪ್ಪನ ಅಗ್ರಹಾರ ಜೈಲಿಗೆ ಅಟ್ಟಬೇಕು” ಎಂದು ಸ್ಯಾಂಡಲ್‌ವುಡ್‌ನ ಹಿರಿಯ ಪೋಷಕ ನಟ ದೊಡ್ಡಣ್ಣ ಸಿಡಿದೆದ್ದಿದ್ದಾರೆ. ತಮ್ಮ ನಿಧನದ ಕುರಿತು ರಾಜ್ಯ ಮಟ್ಟದಲ್ಲಿ ಸುಳ್ಳು ವದಂತಿ ಹರಡಿದ್ದ ಕಿಡಿಗೇಡಿಗಳ ವಿರುದ್ಧ ಅವರು ಬೆಂಗಳೂರಿನ ಸೈಬರ್ ಕ್ರೈಂ ಠಾಣೆಗೆ ಅಧಿಕೃತ ದೂರು ನೀಡಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ನಟ ದೊಡ್ಡಣ್ಣ ಅವರು ವಿಧಿವಶರಾಗಿದ್ದಾರೆ ಎಂಬ ಸುಳ್ಳು ಪೋಸ್ಟ್‌ಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದವು. ಇದರಿಂದ ಆತಂಕಗೊಂಡ ನೂರಾರು ಅಭಿಮಾನಿಗಳು ಮತ್ತು ಚಿತ್ರರಂಗದ ಗಣ್ಯರು ದೊಡ್ಡಣ್ಣ ಅವರಿಗೆ ಸತತ ಫೋನ್ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದರು. ಅಂದೇ ವಿಡಿಯೋ ಬಿಡುಗಡೆ ಮಾಡಿದ್ದ ಹಿರಿಯ ನಟ: ತಮ್ಮ ಸಾವಿನ ಸುಳ್ಳು ವಾರ್ತೆ ಹರಿದಾಡಿದ ದಿನವೇ ಸಾಮಾಜಿಕ ಮಾಧ್ಯಮಗಳ ಮೂಲಕ ವಿಡಿಯೋ ಸಂದೇಶ ರವಾನಿಸಿದ್ದ ದೊಡ್ಡಣ್ಣ, “ನಾನು ಸಂಪೂರ್ಣವಾಗಿ ಆರೋಗ್ಯವಾಗಿದ್ದೇನೆ,…

Read More

ಬೆಂಗಳೂರು : ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಓ) 150 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಕರ್ನಾಟಕ ಲೋಕ ಸೇವಾ ಆಯೋಗದ ಕಾರ್ಯದರ್ಶಿಗಳಿಗೆ ತಿಳಿಸಿದ್ದಾರೆ. ಕೆಪಿಎಸ್.ಸಿ. ಕಾರ್ಯದರ್ಶಿಗೆ ಕಳಿಸಿರುವ ಲಿಖಿತ ಸೂಚನೆಯಲ್ಲಿ ಅವರು, ಗ್ರಾಮೀಣ ಪ್ರದೇಶದ ಪ್ರಗತಿಯಲ್ಲಿ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದ್ದು, ಕಲ್ಯಾಣ ಕರ್ನಾಟಕ ವೃಂದದಲ್ಲಿ 97 ಹಾಗೂ ಉಳಿಕೆ ವೃಂದದಲ್ಲಿ 150 ಪಂಚಾಯ್ತಿ ಅಧಿಕಾರಿಗಳ ಹುದ್ದೆಗಳ ಭರ್ತಿಗೆ 2024ರಲ್ಲಿ ಅಧಿಸೂಚನೆ ಆಗಿದ್ದರೂ ಅಂತಿಮ ಪಟ್ಟಿ ಪ್ರಕಟಿಸದಿರುವ ಬಗ್ಗೆ ಪ್ರಸ್ತಾಪಿಸಿದ್ದಾರೆ. ಹಳ್ಳಿಗಳ ಆತ್ಮ ಗ್ರಾಮಗಳಲ್ಲಿದ್ದು, ಹಳ್ಳಿಗಳ ಅಭಿವೃದ್ಧಿಯಾದಾಗ ಮಾತ್ರವೇ ದೇಶದ ಅಭಿವೃದ್ಧಿ ಸಾಧ್ಯ ಎಂಬ ಮಹಾತ್ಮಾ ಗಾಂಧೀ ಅವರ ಮಾತುಗಳನ್ನು ಉಲ್ಲೇಖಿಸಿರುವ ಈಶ್ವರ ಖಂಡ್ರೆ, ಪಿಡಿಓಗಳ ನೇರ ನೇಮಕಾತಿ ಪ್ರಕ್ರಿಯೆ ನಡೆಸುವ ಸಂಬಂಧ ಕೆ.ಪಿ.ಎಸ್.ಸಿಗೆ 2024ರ ಮಾರ್ಚ್ 14ರಂದು ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ. ಸರ್ಕಾರ, ನೇಮಕಾತಿಯ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ಮಾಡುವ ತೀರ್ಮಾನವನ್ನು ಕೈಗೊಂಡ ಹಿನ್ನೆಲೆಯಲ್ಲಿ…

Read More

ನವದೆಹಲಿ: ಪ್ರಮುಖ ಮೆಸೇಜಿಂಗ್ ಆ್ಯಪ್ ಆದ ಟೆಲಿಗ್ರಾಂ (Telegram) ಸಂಸ್ಥೆಗೆ ದೆಹಲಿ ಹೈಕೋರ್ಟ್‌ನಲ್ಲಿ ತೀವ್ರ ಹಿನ್ನಡೆಯಾಗಿದೆ. ಐಟಿ ನಿಯಮಾವಳಿಗಳನ್ನು ಟೆಲಿಗ್ರಾಂ ನಿರಂತರವಾಗಿ ಉಲ್ಲಂಘಿಸುತ್ತಿದೆ ಎಂದು ಕೇಂದ್ರ ಸರ್ಕಾರವು ನ್ಯಾಯಾಲಯದ ಗಮನಕ್ಕೆ ತಂದ ಬೆನ್ನಲ್ಲೇ, ಕೋರ್ಟ್ ಸಂಸ್ಥೆಗೆ ಯಾವುದೇ ರೀತಿಯ ತುರ್ತು ಪರಿಹಾರ ಅಥವಾ ವಿನಾಯಿತಿ ನೀಡಲು ನಿರಾಕರಿಸಿದೆ. ಕೇಂದ್ರ ಸರ್ಕಾರದ ಮಾಹಿತಿ ತಂತ್ರಜ್ಞಾನ (IT) ನಿಯಮಗಳನ್ನು ಪಾಲಿಸದ ಮತ್ತು ದೇಶದ ಕಾನೂನುಗಳಿಗೆ ಸರಿಯಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಟೆಲಿಗ್ರಾಂ ವಿರುದ್ಧ ಸರ್ಕಾರ ಕಠಿಣ ನಿಲುವು ತಳೆದಿದೆ. ಕೇಂದ್ರ ಸರ್ಕಾರದ ಗಂಭೀರ ಆಕ್ಷೇಪಗಳು ನ್ಯಾಯಾಲಯದಲ್ಲಿ ಈ ಕುರಿತು ವಾದ ಮಂಡಿಸಿದ ಕೇಂದ್ರ ಸರ್ಕಾರದ ಪ್ರತಿನಿಧಿಗಳು, ಟೆಲಿಗ್ರಾಂ ವೇದಿಕೆಯು ಭಾರತದ ಸಾರ್ವಭೌಮತೆ ಮತ್ತು ಸುರಕ್ಷತೆಗೆ ಧಕ್ಕೆ ತರುವಂತಹ ಚಟುವಟಿಕೆಗಳಿಗೆ ಬಳಕೆಯಾಗುತ್ತಿದ್ದರೂ ಸಂಸ್ಥೆಯು ನಿಯಮಗಳನ್ನು ಪಾಲಿಸುತ್ತಿಲ್ಲ ಎಂದು ದೂರಿದ್ದಾರೆ. “ಟೆಲಿಗ್ರಾಂ ನಿಯಮಾವಳಿಗಳನ್ನು ನಿರಂತರವಾಗಿ ಮತ್ತು ಪದೇ ಪದೇ ಉಲ್ಲಂಘಿಸುತ್ತಾ ಬಂದಿದೆ. ಕಾನೂನು ಜಾರಿ ಸಂಸ್ಥೆಗಳು ಕೇಳುವ ಅಗತ್ಯ ಮಾಹಿತಿಯನ್ನು ನೀಡಲು ನಿರಾಕರಿಸುತ್ತಿದೆ” ಎಂದು ಕೇಂದ್ರ ಸರ್ಕಾರ ಕೋರ್ಟ್‌ಗೆ…

Read More

ಶಿವಮೊಗ್ಗ: ಒಬ್ಬ ಅಧಿಕಾರಿಗೆ ಇರಬೇಕಾದ ಅತ್ಯುನ್ನತ ಗುಣ ಯಾವುದು? ನಿಯಮಗಳ ಪಾಲನೆಯೋ ಅಥವಾ ಸಮಯಕ್ಕೆ ತಕ್ಕಂತೆ ತೋರುವ ಜಾಣ್ಮೆಯೋ? ಸಾಗರ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ (BEO) ಸದಾನಂದ ಸ್ವಾಮಿ.ಸಿ ಅವರು ಇಂದು ತೋರಿರುವ ಮಾನವೀಯತೆ ಮತ್ತು ಸಮಯ ಪ್ರಜ್ಞೆ ಇವೆರಡನ್ನೂ ಮೀರಿದ್ದು. ಎದೆ ನೋವಿನಿಂದ ನರಳುತ್ತಿದ್ದ ಶಾಲಾ ಬಾಲಕನೊಬ್ಬನಿಗೆ ತಕ್ಷಣವೇ ಸ್ಪಂದಿಸಿ, ತಮ್ಮದೇ ಇಲಾಖಾ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸುವ ಮೂಲಕ ಆತನ ಪ್ರಾಣ ರಕ್ಷಿಸಿ ಇಡೀ ಸಾರ್ವಜನಿಕ ವಲಯದ ಶ್ಲಾಘನೆಗೆ ಪಾತ್ರರಾಗಿದ್ದಾರೆ. ನೋವಿನ ಹಿನ್ನೆಲೆ, ಸಾಂತ್ವನದ ಜರ್ನಿ: ಕೆಲವೇ ದಿನಗಳ ಹಿಂದಷ್ಟೇ ಸಾಗರ ತಾಲೂಕಿನ ಹಾಳಸಸಿ ಶಾಲೆಯ ಒಂದನೇ ತರಗತಿಯ ಮುಗ್ಧ ಬಾಲಕ ತ್ರಿಲೋಕ ಜೈನ್ ಎಂಬಾತ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದ. ಈ ಕರುಣಾಜನಕ ಘಟನೆಯಿಂದ ನೊಂದಿದ್ದ ಬಿಇಓ ಸದಾನಂದ ಸ್ವಾಮಿ.ಸಿ ಹಾಗೂ ಅವರ ಸಿಬ್ಬಂದಿ ವರ್ಗದವರು ಬುಧವಾರ ತ್ರಿಲೋಕ ಜೈನ್ ಅವರ ಮನೆಗೆ ಭೇಟಿ ನೀಡಿ, ಹೆತ್ತವರಿಗೆ ಸಾಂತ್ವನ ಹೇಳಿ ಭಾರವಾದ ಮನಸ್ಸಿನಿಂದ ಹಿಂತಿರುಗುತ್ತಿದ್ದರು. ಹಾಗೆ ಮರಳುವಾಗ…

Read More

ಬೆಂಗಳೂರು: ಸಾರ್ವಜನಿಕರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಹೊತ್ತಿರುವ ‘ಅದಿತ್ಯ ರಾಜ್ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್’ ಸಂಸ್ಥೆಯ ನ್ಯಾಷನಲ್ ಸೇಲ್ಸ್ ಹೆಡ್ ಸಂದೀಪ್ ಗಿರಿಧರ್ ಅವರಿಗೆ ಬೆಂಗಳೂರಿನ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಬುಧವಾರ ಆದೇಶ ಹೊರಡಿಸಿದೆ. ಹೆಚ್ಚಿನ ಬಡ್ಡಿಯ ಆಸೆ ತೋರಿಸಿ ಸಾರ್ವಜನಿಕರಿಂದ ಬರೋಬ್ಬರಿ 211 ಕೋಟಿ ರೂ. ಹೂಡಿಕೆ ಮಾಡಿಸಿಕೊಂಡು ವಂಚಿಸಿರುವ ಆರೋಪದ ಮೇಲೆ ಬಂಧನದ ಭೀತಿಯಲ್ಲಿದ್ದ ಸಂದೀಪ್ ಗಿರಿಧರ್ (ಪ್ರಕರಣದ 5ನೇ ಆರೋಪಿ) ಅವರಿಗೆ ಇದರಿಂದ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಮಾಸಿಕ ಶೇ. 5ರಷ್ಟು ಬಡ್ಡಿಯ ಆಮಿಷ! ಸಾರ್ವಜನಿಕರಿಗೆ ಮಾಸಿಕ ಶೇ. 5 ರಷ್ಟು ಭಾರಿ ಪ್ರಮಾಣದ ಬಡ್ಡಿ ಹಾಗೂ ಉಳಿತಾಯ ಠೇವಣಿಗೆ ನಿಶ್ಚಿತ ಆದಾಯದ ಆಸೆ ತೋರಿಸಿ ಈ ಕಂಪನಿಯು ಹೂಡಿಕೆ ಮಾಡಿಸಿಕೊಂಡಿತ್ತು. ಬೆಳಗಾವಿಯಲ್ಲಿ ‘ಶಿವಂ ಅಸೋಸಿಯೇಟ್ಸ್’ ಹೂಡಿಕೆ ಅಕ್ರಮ ಬೆಳಕಿಗೆ ಬಂದ ಬೆನ್ನಲ್ಲೇ, ಈ ಆದಿತ್ಯ ರಾಜ್ ಕ್ಯಾಪಿಟಲ್ ಕಂಪನಿಯ ವಹಿವಾಟಿನ ಮೇಲೂ ಅಧಿಕಾರಿಗಳು ಕಣ್ಣಿಟ್ಟಿದ್ದರು. ಸಹಕಾರಿ ಸಂಘಗಳ…

Read More