Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಅನ್ನಭಾಗ್ಯ’ (Annabhagya) ಯೋಜನೆಯಡಿ ಅಕ್ಕಿ ವಿತರಣೆಯಲ್ಲಿ ಉಂಟಾಗಿದ್ದ ವ್ಯತ್ಯಯದ ಕುರಿತು ಮಾಧ್ಯಮಗಳ ನಿರಂತರ ವರದಿಯ ಬೆನ್ನಲ್ಲೇ ಆಹಾರ ಇಲಾಖೆ ಎಚ್ಚೆತ್ತುಕೊಂಡಿದೆ. ತನ್ನ ಹಳೆಯ ಆದೇಶವನ್ನು ಬದಲಾಯಿಸಿರುವ ರಾಜ್ಯ ಸರ್ಕಾರ, ಇದೇ ಜೂನ್ ತಿಂಗಳಿನಿಂದ ರೇಷನ್ ಕಾರ್ಡ್ದಾರರಿಗೆ ಪೂರ್ಣ 10 ಕೆಜಿ ಅಕ್ಕಿ ವಿತರಿಸಲು ತುರ್ತು ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಕಳೆದ ಕೆಲವು ಸಮಯದಿಂದ ಅನ್ನಭಾಗ್ಯ ಯೋಜನೆಯಡಿ ರಾಜ್ಯ ಸರ್ಕಾರ ನೀಡಬೇಕಿದ್ದ ಅಕ್ಕಿ ವಿತರಣೆ ಸಂಪೂರ್ಣ ಸ್ಥಗಿತಗೊಂಡಿತ್ತು. ಫಲಾನುಭವಿಗಳಿಗೆ ಕೇವಲ ಕೇಂದ್ರ ಸರ್ಕಾರದ ಯೋಜನೆಯಡಿ ಸಿಗುತ್ತಿದ್ದ ಅಕ್ಕಿ ಮಾತ್ರ ತಲುಪುತ್ತಿತ್ತು. ಇದರ ಬೆನ್ನಲ್ಲೇ ಆಹಾರ ಇಲಾಖೆಯು “ಕಳೆದ ಎರಡು ತಿಂಗಳಿನಿಂದ 6 ಕೆಜಿ ರಾಗಿ ಮತ್ತು 4 ಕೆಜಿ ಅಕ್ಕಿ ವಿತರಿಸಲಾಗುವುದು” ಎಂದು ಹೊಸ ಆದೇಶ ಹೊರಡಿಸಿತ್ತು. ಬಡ ಜನರಿಗೆ ಅಕ್ಕಿಯ ಬದಲಾಗಿ ಕಡ್ಡಾಯವಾಗಿ ರಾಗಿ ನೀಡುತ್ತಿರುವುದರಿಂದ ಉಂಟಾಗುತ್ತಿದ್ದ ತೊಂದರೆ ಹಾಗೂ ಅನ್ನಭಾಗ್ಯ ಯೋಜನೆ ಹಳಿ ತಪ್ಪುತ್ತಿರುವ ಕುರಿತು ಮಾಧ್ಯಮಗಳಲ್ಲಿ ನಿರಂತರವಾಗಿ ಜನಾಭಿಪ್ರಾಯದ ವರದಿಗಳನ್ನು ಪ್ರಸಾರ ಮಾಡಿ…
ದಾವಣಗೆರೆ: ಹರಿಹರ ತಾಲೂಕಿನ ರಾಜನಹಳ್ಳಿಯ ಜಗದ್ಗುರು ಹರಿಹರ ಬ್ರಹ್ಮಾನಂದ ಮಹಾಸಂಸ್ಥಾನದ ಪೀಠಾಧಿಪತಿಯಾದ ವಚನಾನಂದ ಸ್ವಾಮೀಜಿ (Vachanananda Swamiji) ಅವರ ವಿರುದ್ಧ ದಾಖಲಾಗಿದ್ದ ಪೋಕ್ಸೋ (POCSO) ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ (Chargesheet) ಸಲ್ಲಿಸಿದ್ದಾರೆ. ಮೈನರ್ ಬಾಲಕಿ ನೀಡಿದ್ದ ದೂರಿನ ಅನ್ವಯ ದಾವಣಗೆರೆ ಜಿಲ್ಲೆಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪದಡಿ ಪೋಕ್ಸೋ ಕಾಯ್ದೆಯಡಿ ಮೊಕದ್ದಮೆ ದಾಖಲಾಗಿತ್ತು. ಈ ಪ್ರಕರಣದ ತನಿಖೆಯನ್ನು ನಡೆಸಿದ ತನಿಖಾಧಿಕಾರಿಗಳು, ಅಗತ್ಯ ಸಾಕ್ಷ್ಯಾಧಾರಗಳನ್ನು ಕಲೆಹಾಕಿ ದಾವಣಗೆರೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ಪ್ರಕರಣದ ಹಿನ್ನೆಲೆ: ಕಳೆದ ವರ್ಷ ಮಠದ ಆವರಣದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಸಂಬಂಧ ಸಂತ್ರಸ್ತೆ ಮತ್ತು ಆಕೆಯ ಕುಟುಂಬದವರು ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್ಐಆರ್ (FIR) ದಾಖಲಿಸಿಕೊಂಡಿದ್ದರು. ಪ್ರಕರಣ ದಾಖಲಾದ ಬಳಿಕ ನ್ಯಾಯಾಲಯದಿಂದ ಮುಂಗಡ ಜಾಮೀನು ಪಡೆದಿದ್ದ ವಚನಾನಂದ ಸ್ವಾಮೀಜಿ, ತಮ್ಮ…
ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡುವ ಐತಿಹಾಸಿಕ ಗ್ಯಾರಂಟಿ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಸಾರಿಗೆ ಸಚಿವರಾದ ಬೈರತಿ ಸುರೇಶ್ ಅವರು ಈ ವಿಷಯವನ್ನು ಘೋಷಿಸಿದ್ದಾರೆ. ಈಗಾಗಲೇ ಹಣ ಪಾವತಿ ಮಾಡಿ ಬಸ್ ಪಾಸ್ ಖರೀದಿಸಿರುವ ವಿದ್ಯಾರ್ಥಿಗಳಿಗೆ ಆ ಹಣವನ್ನು ವಾಪಸ್ ನೀಡಲಾಗುವುದು ಎಂದೂ ಅವರು ವಿದ್ಯಾರ್ಥಿ ಸಮೂಹಕ್ಕೆ ಸಿಹಿ ಸುದ್ದಿ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಅವರು, ಇದುವರೆಗೆ ವಿದ್ಯಾರ್ಥಿನಿಯರಿಗೆ ಮಾತ್ರ ಉಚಿತ ಬಸ್ ಪಾಸ್ ವಿತರಣೆ ಮಾಡಲಾಗುತ್ತಿತ್ತು. ಇದೀಗ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಗಂಡುಮಕ್ಕಳಿಗೂ ಈ ಸೌಲಭ್ಯವನ್ನು ಕಲ್ಪಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದರು. ಉಚಿತ ಬಸ್ ಪಾಸ್ ವಿತರಣೆಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗಿದ್ದು, ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು. ಎಲ್ಲಾ ಮಕ್ಕಳಿಗೂ ಸೌಲಭ್ಯ ಬಡವ ಶ್ರೀಮಂತ ಎನ್ನದೇ ಪ್ರತಿಯೊಬ್ಬ ಮಕ್ಕಳೂ ಆರ್ಥಿಕ ಹೊರೆ ಇಲ್ಲದೇ ತಮ್ಮ ವಿದ್ಯಾಭ್ಯಾಸ ಮಾಡಬೇಕೆಂಬುದು ನಮ್ಮ ಸರ್ಕಾರದ ಪ್ರಮುಖ ಉದ್ದೇಶವಾಗಿದೆ.…
ದುಬೈ: ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿರುವ 2027ರ ಐಸಿಸಿ ಪುರುಷರ ಏಕದಿನ ವಿಶ್ವಕಪ್ (ICC Men’s ODI World Cup) ಟೂರ್ನಿಯು ಅಕ್ಟೋಬರ್ 4 ರಿಂದ ನವೆಂಬರ್ 21 ರವರೆಗೆ ನಡೆಯುವ ಸಾಧ್ಯತೆಯಿದೆ ಎಂದು ‘ಇಎಸ್ಪಿಎನ್ ಕ್ರಿಕ್ಇನ್ಫೋ’ (ESPNcricinfo) ವರದಿ ಮಾಡಿದೆ. ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ನಮೀಬಿಯಾ ದೇಶಗಳು ಜಂಟಿಯಾಗಿ ಈ ಜಾಗತಿಕ ಕ್ರಿಕೆಟ್ ಹಬ್ಬಕ್ಕೆ ಆತಿಥ್ಯ ವಹಿಸಲಿವೆ. ಕಳೆದ ಮೇ ತಿಂಗಳಲ್ಲಿ ಅಹಮದಾಬಾದ್ನಲ್ಲಿ ನಡೆದ ಐಸಿಸಿ ಮಂಡಳಿ ಸಭೆಯಲ್ಲಿ ಈ ದಿನಾಂಕಗಳ ಕುರಿತು ತಾತ್ಕಾಲಿಕ ಒಪ್ಪಂದವಾಗಿದ್ದು, ಜುಲೈನಲ್ಲಿ ಎಡಿನ್ಬರ್ಗ್ನಲ್ಲಿ ನಡೆಯಲಿರುವ ಐಸಿಸಿ ವಾರ್ಷಿಕ ಸಾಮಾನ್ಯ ಸಭೆಯಲ್ಲಿ (AGM) ಅಂತಿಮ ಮುದ್ರೆ ಬೀಳುವ ನಿರೀಕ್ಷೆಯಿದೆ. ಆತಿಥ್ಯ ಹಂಚಿಕೆ ಮತ್ತು ಕ್ರೀಡಾಂಗಣಗಳು ಟೂರ್ನಿಯಲ್ಲಿ ಒಟ್ಟು 54 ಪಂದ್ಯಗಳು ನಡೆಯಲಿದ್ದು, ಆತಿಥ್ಯದ ಸಿಂಹಪಾಲು ದಕ್ಷಿಣ ಆಫ್ರಿಕಾ ಪಾಲಾಗಿದೆ. ದಕ್ಷಿಣ ಆಫ್ರಿಕಾ: 8 ಕ್ರೀಡಾಂಗಣಗಳಲ್ಲಿ ಕನಿಷ್ಠ 41 ಪಂದ್ಯಗಳು ನಡೆಯಲಿವೆ. ಜಿಂಬಾಬ್ವೆ: ಹರಾರೆ ಸ್ಪೋರ್ಟ್ಸ್ ಕ್ಲಬ್, ಬುಲವಾಯೊದ ಕ್ವೀನ್ಸ್ ಮತ್ತು ವಿಕ್ಟೋರಿಯಾ ಫಾಲ್ಸ್ ಸೇರಿದಂತೆ…
ವಾಷಿಂಗ್ಟನ್: ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ತುತ್ತತುದಿಗೆ ತಲುಪಿದ್ದು, “ಇಂದು ರಾತ್ರಿ ಇರಾನ್ ಮೇಲೆ ಅಮೆರಿಕ ಅತ್ಯಂತ ಭೀಕರವಾಗಿ ದಾಳಿ ನಡೆಸಲಿದೆ” ಎಂದು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಘೋಷಿಸಿದ್ದಾರೆ. ಈ ಮೂಲಕ ಜಾಗತಿಕ ಮಟ್ಟದಲ್ಲಿ ಮತ್ತೊಂದು ಮಹಾಯುದ್ಧದ ಭೀತಿ ಎದುರಾಗಿದೆ. ತಮ್ಮ ಅಧಿಕೃತ ‘ಟ್ರುತ್ ಸೋಷಿಯಲ್’ (Truth Social) ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, ಇರಾನ್ನ ಪ್ರಮುಖ ತೈಲ ರಫ್ತು ಕೇಂದ್ರವಾಗಿರುವ ‘ಖಾರ್ಗ್ ದ್ವೀಪ’ (Kharg Island) ಸೇರಿದಂತೆ ಅಲ್ಲಿನ ಇಂಧನ ಮೂಲಸೌಕರ್ಯಗಳನ್ನು ಅಮೆರಿಕ ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳಲಿದೆ ಎಂದು ಅತ್ಯಂತ ಕಠಿಣ ಸಂದೇಶ ರವಾನಿಸಿದ್ದಾರೆ. ಟ್ರಂಪ್ ಅವರ ಪೋಸ್ಟ್ನಲ್ಲೇನಿದೆ? “ಇರಾನ್ನ ನೌಕಾಪಡೆ, ವಾಯುಪಡೆ, ರಾಡಾರ್, ವಿಮಾನ ವಿರೋಧಿ ವ್ಯವಸ್ಥೆ ಹಾಗೂ ಇತರೆಲ್ಲಾ ರಕ್ಷಣಾತ್ಮಕ ಮತ್ತು ಆಕ್ರಮಣಕಾರಿ ಸಾಮರ್ಥ್ಯಗಳು ಈಗಾಗಲೇ ಸಂಪೂರ್ಣವಾಗಿ ಧ್ವಂಸಗೊಂಡಿವೆ. ಇಂತಹ ಪರಿಸ್ಥಿತಿಯಲ್ಲಿ, ಅಮೆರಿಕ ಇಂದು ರಾತ್ರಿ ಇರಾನ್ ಮೇಲೆ ಅತ್ಯಂತ ಭೀಕರವಾಗಿ ಮುಗಿಬೀಳಲಿದೆ (VERY HARD TONIGHT).” “ಅಷ್ಟೇ ಅಲ್ಲದೆ, ಮುಂದಿನ ದಿನಗಳಲ್ಲಿ…
ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಡಿ.ಕೆ. ಶಿವಕುಮಾರ್ ಅವರು ಇಂದು ಮೊದಲ ಬಾರಿಗೆ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು. ಈ ಕುರಿತು ತಮ್ಮ ಅಧಿಕೃತ ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿಗಳು, ಪ್ರಧಾನಿಯವರೊಂದಿಗಿನ ಭೇಟಿ ಅತ್ಯಂತ ಸಕಾರಾತ್ಮಕವಾಗಿತ್ತು ಎಂದು ತಿಳಿಸಿದ್ದಾರೆ. ಅಭಿವೃದ್ಧಿ ಆದ್ಯತೆಗಳ ಕುರಿತು ಸುದೀರ್ಘ ಚರ್ಚೆ ಭೇಟಿಯ ವೇಳೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ಪ್ರಧಾನಿ ಮೋದಿ ಅವರೊಂದಿಗೆ ಮುಖ್ಯಮಂತ್ರಿಗಳು ಚರ್ಚಿಸಿದರು. ವಿಶೇಷವಾಗಿ: ಮೂಲಸೌಕರ್ಯ ಮತ್ತು ಹೂಡಿಕೆ: ರಾಜ್ಯದಲ್ಲಿ ಮೂಲಸೌಕರ್ಯ ವೃದ್ಧಿ ಹಾಗೂ ಹೊಸ ಹೂಡಿಕೆಗಳನ್ನು ಆಕರ್ಷಿಸುವ ಕುರಿತು. ನಗರಾಭಿವೃದ್ಧಿ ಮತ್ತು ಸಾರಿಗೆ: ನಗರ ಪ್ರದೇಶಗಳ ಚಲನಶೀಲತೆ (Urban Mobility) ಮತ್ತು ಸ್ಮಾರ್ಟ್ ಯೋಜನೆಗಳ ಅನುಷ್ಠಾನ. ನೀರಾವರಿ ಮತ್ತು ನಾವೀನ್ಯತೆ: ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳು ಹಾಗೂ ತಂತ್ರಜ್ಞಾನ-ನಾವೀನ್ಯತೆಗೆ (Innovation) ನೀಡಬೇಕಾದ ಆದ್ಯತೆಗಳು. ಜನಕಲ್ಯಾಣ ಯೋಜನೆಗಳು: ಸಾರ್ವಜನಿಕರ ಜೀವನಮಟ್ಟವನ್ನು ನೇರವಾಗಿ ಸುಧಾರಿಸುವ ವಿವಿಧ…
ನವದೆಹಲಿ: ನವದೆಹಲಿ ಪ್ರವಾಸದಲ್ಲಿರುವ ತಿಪಟೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಷಡಕ್ಷರಿ ಅವರು ಇಂದು ಬೆಳಗ್ಗೆ ಇಲ್ಲಿನ ಕರ್ನಾಟಕ ಭವನದಲ್ಲಿ ದಿಢೀರ್ ಅಸ್ವಸ್ಥಗೊಂಡಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಶಾಸಕರನ್ನು ಆಸ್ಪತ್ರೆಗೆ ದಾಖಲಿಸಿ, ಅಗತ್ಯ ತುರ್ತು ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಕಲ್ಪಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಶಾಸಕರನ್ನು ಆಸ್ಪತ್ರೆಗೆ ಸೇರಿಸಿದ ಬಳಿಕ ಡಿಸಿಎಂ ಡಾ. ಜಿ. ಪರಮೇಶ್ವರ್ ಅವರು ಎರಡನೇ ಬಾರಿಗೆ ಖುದ್ದಾಗಿ ಆಸ್ಪತ್ರೆಗೆ ಭೇಟಿ ನೀಡಿ ಷಡಕ್ಷರಿ ಅವರ ಆರೋಗ್ಯ ಸ್ಥಿತಿಯನ್ನು ಮತ್ತೊಮ್ಮೆ ವಿಚಾರಿಸಿದರು. ಆರೋಗ್ಯ ಸ್ಥಿರ – ಆತಂಕ ಬೇಡ ಎಂದ ವೈದ್ಯರು: ಆಸ್ಪತ್ರೆಯ ಭೇಟಿಯ ಸಂದರ್ಭದಲ್ಲಿ ಡಿಸಿಎಂ ಅವರು ಶಾಸಕರಿಗೆ ಚಿಕಿತ್ಸೆ ನೀಡುತ್ತಿರುವ ತಜ್ಞ ವೈದ್ಯರ ತಂಡದೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದರು. ಷಡಕ್ಷರಿ ಅವರ ಆರೋಗ್ಯದ ಸ್ಥಿತಿಗತಿಯ ಕುರಿತು ಸಂಪೂರ್ಣ ಮಾಹಿತಿ ಪಡೆದುಕೊಂಡ ಅವರು, ಶಾಸಕರಿಗೆ ಅಗತ್ಯವಿರುವ ಎಲ್ಲ ರೀತಿಯ ಉನ್ನತ ಹಾಗೂ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ನೀಡಿದರು.…
ವಾಷಿಂಗ್ಟನ್: ಅಮೆರಿಕ ಮತ್ತು ಇರಾನ್ ನಡುವಿನ ಜಾಗತಿಕ ಸಂಘರ್ಷ ತಾರಕಕ್ಕೇರಿದ್ದು, “ಇಂದು ರಾತ್ರಿ ಇರಾನ್ ಮೇಲೆ ಅಮೆರಿಕ ಅತ್ಯಂತ ಭೀಕರವಾದ ದಾಳಿ ನಡೆಸಲಿದೆ” ಎಂದು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಘೋಷಿಸಿದ್ದಾರೆ. ಅಮೆರಿಕ ಪ್ರಸ್ತಾಪಿಸಿದ್ದ ಶಾಂತಿ ಒಪ್ಪಂದದ ನಿಯಮಗಳನ್ನು ಒಪ್ಪಿಕೊಳ್ಳಲು ಇರಾನ್ ನಿರಾಕರಿಸಿದ ಬೆನ್ನಲ್ಲೇ ಉಭಯ ದೇಶಗಳ ನಡುವೆ ವಾಯು ದಾಳಿಗಳು ನಡೆದಿವೆ. ಇದರಿಂದ ಕೋಪಗೊಂಡಿರುವ ಟ್ರಂಪ್ ಈ ಗಂಭೀರ ಎಚ್ಚರಿಕೆಯನ್ನು ನೀಡಿದ್ದು, ಮಧ್ಯಪ್ರಾಚ್ಯದಲ್ಲಿ ಭೀಕರ ಯುದ್ಧದ ಮುನ್ಸೂಚನೆ ಸಿಕ್ಕಂತಾಗಿದೆ. ತಮ್ಮ ‘ಟ್ರುತ್ ಸೋಶಿಯಲ್’ (Truth Social) ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, “ಇರಾನ್ನ ನೌಕಾಪಡೆ, ವಾಯುಪಡೆ, ರಾಡಾರ್, ವಿಮಾನ ವಿರೋಧಿ ರಕ್ಷಣಾ ವ್ಯವಸ್ಥೆ ಹಾಗೂ ಇತರೆಲ್ಲಾ ರಕ್ಷಣಾತ್ಮಕ ಮತ್ತು ಆಕ್ರಮಣಕಾರಿ ಸಾಮರ್ಥ್ಯಗಳು ಈಗಾಗಲೇ ನಾಶವಾಗಿವೆ! ಆದರೂ, ಇಂದು ರಾತ್ರಿ ಅಮೆರಿಕ ಇರಾನ್ ಮೇಲೆ ಅತ್ಯಂತ ಪ್ರಬಲವಾದ ದಾಳಿಯನ್ನು ಮಾಡಲಿದೆ” ಎಂದು ಬರೆದುಕೊಂಡಿದ್ದಾರೆ. ಇರಾನ್ ತೈಲ ಮಾರುಕಟ್ಟೆ ಮೇಲೆ ಅಮೆರಿಕ ಕಣ್ಣು ತಮ್ಮ ಎಚ್ಚರಿಕೆಯನ್ನು ಮತ್ತಷ್ಟು ತೀವ್ರಗೊಳಿಸಿರುವ ಡೊನಾಲ್ಡ್…
ಇಂದಿನ ಆಧುನಿಕ ಜೀವನಶೈಲಿಯಲ್ಲಿ ಸೋಡಾ, ಸಾಫ್ಟ್ ಡ್ರಿಂಕ್ಸ್ ಮತ್ತು ಪ್ಯಾಕ್ ಮಾಡಿದ ಹಣ್ಣಿನ ರಸಗಳಂತಹ ಸಕ್ಕರೆಯುಕ್ತ ಪಾನೀಯಗಳು (Sugar-Sweetened Beverages) ನಮ್ಮ ದೈನಂದಿನ ಜೀವನದ ಭಾಗವಾಗಿಬಿಟ್ಟಿವೆ. ಆದರೆ, ಇವುಗಳ ನಿರಂತರ ಸೇವನೆ ಜೀವಕ್ಕೇ ಕಂಟಕವಾಗಬಹುದು ಎಂದು ಇತ್ತೀಚಿನ ಜಾಗತಿಕ ಅಧ್ಯಯನವೊಂದು ಎಚ್ಚರಿಸಿದೆ. ಸುಮಾರು 1.5 ಮಿಲಿಯನ್ಗಿಂತಲೂ ಹೆಚ್ಚು ವಯಸ್ಕರನ್ನು ಒಳಗೊಂಡ 18 ವರ್ಷಗಳ ಸುದೀರ್ಘ ಸಂಶೋಧನೆಯು, ಸಕ್ಕರೆಯುಕ್ತ ಪಾನೀಯಗಳ ಅತಿಯಾದ ಸೇವನೆಯಿಂದ ಲಿವರ್ ಕ್ಯಾನ್ಸರ್ (ಯಕೃತ್ತಿನ ಕ್ಯಾನ್ಸರ್) ಅಪಾಯ ಗಣನೀಯವಾಗಿ ಹೆಚ್ಚುತ್ತದೆ ಎಂಬುದನ್ನು ಬಹಿರಂಗಪಡಿಸಿದೆ. ಪ್ರಸಿದ್ಧ ವೈದ್ಯಕೀಯ ನಿಯತಕಾಲಿಕೆ ‘JAMA Network Open’ ನಲ್ಲಿ ಪ್ರಕಟವಾದ ಈ ವರದಿಯು, ನಾವು ಪ್ರತಿದಿನ ಕುಡಿಯುವ ಸಿಹಿ ಪಾನೀಯಗಳು ನಮ್ಮ ಯಕೃತ್ತಿನ ಮೇಲೆ ಹೇಗೆ ದೀರ್ಘಕಾಲದ ದುಷ್ಪರಿಣಾಮ ಬೀರುತ್ತವೆ ಎಂಬುದನ್ನು ಎತ್ತಿ ತೋರಿಸುತ್ತದೆ. ಅಧ್ಯಯನ ನಡೆದಿದ್ದು ಹೇಗೆ? ಯುಎಸ್ ಮತ್ತು ಯುರೋಪ್ನ 11 ವಿಭಿನ್ನ ದೀರ್ಘಕಾಲೀನ ಸಂಶೋಧನೆಗಳ ದತ್ತಾಂಶಗಳನ್ನು (Data) ಕ್ರೋಢೀಕರಿಸಿ ಈ ಬೃಹತ್ ಅಧ್ಯಯನವನ್ನು ನಡೆಸಲಾಗಿದೆ. ಒಟ್ಟು ಪಾಲ್ಗೊಂಡವರು: 15 ಲಕ್ಷಕ್ಕೂ ಹೆಚ್ಚು…
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯನ್ನು ದುರುಪಯೋಗದಿಂದ ತಡೆದು, ಅರ್ಹರಿಗೆ ಮಾತ್ರ ತಲುಪಿಸುವ ನಿಟ್ಟಿನಲ್ಲಿ ಯೋಜನೆ ಪರಿಷ್ಕರಣೆಗೆ ಆಗ್ರಹಿಸಲಾಗಿದೆಯೇ ಹೊರತು, ಯೋಜನೆಯನ್ನು ನಿಲ್ಲಿಸುವ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ವಿಧಾನಪರಿಷತ್ ಶಾಸಕರಾದ ದಿನೇಶ್ ಗೂಳಿಗೌಡ ಅವರು ಸ್ಪಷ್ಟಪಡಿಸಿದ್ದಾರೆ. ವಿರೋಧ ಪಕ್ಷದ ವರು ಗೃಹಲಕ್ಷ್ಮಿ ಯೋಜನೆ ಕುರಿತು ಇಲ್ಲದ ಅಪಪ್ರಚಾರಗಳನ್ನು ಮಾಡುತ್ತಿದ್ದು, ಸಾರ್ವಜನಿಕರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ. ವಿರೋಧ ಪಕ್ಷದ ನಾಯಕರ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಅವರು ಜರೆದಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಸುಮಾರು 1 ಕೋಟಿ 24 ಲಕ್ಷಕ್ಕೂ ಅಧಿಕ ಮಹಿಳಾ ಯಜಮಾನಿಯರಿಗೆ ಪ್ರತಿ ತಿಂಗಳು ತಲಾ 2,000 ರೂಪಾಯಿಗಳಂತೆ ಗೃಹಲಕ್ಷ್ಮಿ ಯೋಜನೆಯ ಹಣ ತಲುಪುತ್ತಿದೆ. ಇತ್ತೀಚಿನ ಅಂಕಿ-ಅಂಶಗಳ ಪ್ರಕಾರ, ಯೋಜನೆಯ ಫಲಾನುಭವಿಗಳಾಗಿದ್ದ ಸುಮಾರು 1 ಲಕ್ಷದ 95 ಸಾವಿರಕ್ಕೂ ಹೆಚ್ಚು ಕುಟುಂಬದ ಯಜಮಾನಿಯರು ಮರಣ ಹೊಂದಿದ್ದಾರೆ. ಆದಾಗ್ಯೂ, ತಾಂತ್ರಿಕ ಕಾರಣಗಳಿಂದಾಗಿ ಮೃತಪಟ್ಟವರ ಬ್ಯಾಂಕ್ ಖಾತೆಗಳಿಗೂ ಇನ್ನೂ ಹಣ ಸಂದಾಯವಾಗುತ್ತಿರುವುದು…














