Author: kannadanewsnow09

ಬೆಂಗಳೂರು: ಸಾರಿಗೆ ಬಸ್ಸುಗಳು ಅಪಘಾತ, ಅವಘಡದಂತ ಸಂದರ್ಭದಲ್ಲಿ ರಿಪೇರಿ ಮಾಡೋದು ಕಷ್ಟವಾಗಿತ್ತು. ಇನ್ಮುಂದೆ ಇದು ಆಗೋದಿಲ್ಲ. ಕಾರಣ ಅಪಘಾತ ಹಾಗೂ ಅವಘಡ ಉಂಟಾದ ಸಂದರ್ಭದಲ್ಲಿ ತುರ್ತು ಸ್ಪಂದಿಸಲು ನೆರವಾಗುವಂತ ಅಪಘಾತ ತುರ್ತು ಸ್ಪಂದನ ವಾಹನಗಳಿಗೆ ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು. ಇಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಅಪಘಾತ ಹಾಗೂ ಅವಘಡ ಉಂಟಾದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಲು “ಅಪಘಾತ ತುರ್ತು ಸ್ಪಂದನ ವಾಹನ” ಗಳಿಗೆ (Accident Emergency Response Vehicle) ಚಾಲನೆ ನೀಡಿದರು. ಈ ವಾಹನಗಳು ನಿಗಮದ ಬಸ್ಸುಗಳು ಮಾರ್ಗ ಮಧ್ಯೆ ಅಪಘಾತ/ ಅವಘಡಕ್ಕೀಡಾಗಿ (ಬ್ರೇಕ್ ಡೌನ್) ದುರಸ್ಥಿಗೊಂಡಲ್ಲಿ ಸದರಿ ವಾಹನವನ್ನು ಶೀಘ್ರವಾಗಿ ರಿಪೇರಿಗೊಳಿಸುವ ಸಲುವಾಗಿ ಮೊಬೈಲ್ ವರ್ಕಷಾಪ್ ಮಾದರಿಯಲ್ಲಿ ಸೇರ್ಪಡೆಗೊಳಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು. ಈ ಎರಡು ವಾಹನಗಳನ್ನು ಬೆಂಗಳೂರು ಹಾಗೂ ಮೈಸೂರು ಕೇಂದ್ರ ಸ್ಥಳಗಳಲ್ಲಿ ನಿಯೋಜಿಸಲಾಗುವುದು. ಇದರಿಂದ ಬೆಂಗಳೂರು ಸುತ್ತಮುತ್ತ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ಪ್ರದೇಶದಲ್ಲಿ ಉಂಟಾಗುವ ಅಪಘಾತ/ಅವಘಢಗಳನ್ನು…

Read More

ದಿಕ್ಕುಗಳು ಶುಭದ ಸಂಕೇತಗಳಾಗಬಹುದು ಕೆಲವು ಸಂಪ್ರದಾಯಗಳ ಆಧಾರದ ಮೇಲೆ. ಹಿಂದೂ ಸಂಪ್ರದಾಯದಲ್ಲಿ, ದಿಕ್ಕುಗಳು ಶುಭ ಮತ್ತು ಅಶುಭಗಳ ಹೆಸರುಗಳನ್ನು ಹೊಂದಿದ್ದು, ಶುಭದ ದಿಕ್ಕುಗಳಲ್ಲಿ ನಡೆದ ಕ್ರಿಯೆಗಳು ಹೆಚ್ಚು ಪ್ರಾಸಂಗಿಕವಾಗಿ ಹೋಗಬಹುದು. ಹಾಗಾಗಿ ಯಾವುದೇ ಶುಭ ಕಾರ್ಯ ನಡೆಯುವ ವೇಳೆ ಕೊಡ ಸೂಕ್ತ ದಿಕ್ಕು ಗಳ ಆಧಾರದ ಮೇಲೆ ಪೂಜೆ ಸಲ್ಲಿಸಲಾಗುವುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು…

Read More

ಶಿವಮೊಗ್ಗ: ಸಾಗರದ ಅಡಿಕೆ ಪರಿಷ್ಕರಣ ಮತ್ತು ಮಾರಾಟ ಸಹಕಾರ ಸಂಘ ನಿಯಮಿತದ ಅಧ್ಯಕ್ಷರಾದಂತ ಬಿ.ಎ ಇಂದೂಧರ ಹಾಗೂ ಪ್ರಧಾನ ಕಾರ್ಯದರ್ಶಿ ಹೆಚ್.ಎನ್ ಲಂಬೋದರ ಅವರು ಜೊತೆಗೂಡಿ 2026ನೇ ಸಾಲಿನ ಸಂಘದ ಕ್ಯಾಲೆಂಡರ್ ಹಾಗೂ ಡೈರಿಯನ್ನು ಬಿಡುಗಡೆ ಮಾಡಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಸಾಗರ ಅಡಿಕೆ ಪರಿಷ್ಕರಣ ಮತ್ತು ಮಾರಾಟ ಸಹಕಾರ ಸಂಘ ನಿಯಮಿತದ(APSCOS) 2026ರ ದಿನಚರಿ ಹಾಗೂ ಕ್ಯಾಲೆಂಡರ್ ಅನ್ನು ಬಿಡುಗಡೆಗೊಳಿಸಲಾಯಿತು. ಆಪ್ಸ್ ಕೋಸ್ ಅಧ್ಯಕ್ಷರಾದಂತ ಬಿ.ಎ ಇಂದೂಧರ ಹಾಗೂ ಪ್ರಧಾನ ಕಾರ್ಯದರ್ಶಿ ಹೆಚ್.ಎನ್ ಲಂಬೋದರ ಅವರು ಡೈಲಿ ಹಾಗೂ ಕ್ಯಾಲೆಂಡರ್ ಬಿಡುಗಡೆ ಮಾಡಿದರು. ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು… https://kannadanewsnow.com/kannada/application-invited-for-inter-caste-marriage-incentive-apply-like-this-to-get-2-50-lakhs-3-lakhs/ https://kannadanewsnow.com/kannada/parents-take-note-how-to-get-a-blue-aadhaar-card-for-your-children-heres-the-information/

Read More

ಬೆಂಗಳೂರು: PGNEET-25: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಸೇವಾನಿರತ ಅಭ್ಯರ್ಥಿಗಳ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು KEA ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಸೀಟು ಹಂಚಿಕೆಯ ಫಲಿತಾಂಶಕ್ಕೆ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ. PGNEET_MEED_ALLOT_2025_INS_final_12122025kannada.pdf ಎಂಬುದಾಗಿ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರಾದಂತ ಹೆಚ್.ಪ್ರಸನ್ನ ತಿಳಿಸಿದ್ದಾರೆ. https://twitter.com/KEA_karnataka/status/1999732043362836945 https://kannadanewsnow.com/kannada/dense-fog-causes-series-of-accidents-on-greater-noida-expressway-several-injured/ https://kannadanewsnow.com/kannada/parents-take-note-how-to-get-a-blue-aadhaar-card-for-your-children-heres-the-information/

Read More

ಗ್ರೇಟರ್ ನೋಯ್ಡಾ: ಗ್ರೇಟರ್ ನೋಯ್ಡಾದ ಪೂರ್ವ ಪೆರಿಫೆರಲ್ ಎಕ್ಸ್‌ಪ್ರೆಸ್‌ವೇಯಲ್ಲಿ ಶುಕ್ರವಾರ ಸುಮಾರು ಒಂದು ಡಜನ್ ವಾಹನಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪೊಲೀಸರ ಪ್ರಕಾರ, ದಟ್ಟವಾದ ಮಂಜಿನಿಂದಾಗಿ ಸರಣಿ ಅಪಘಾತ ಸಂಭವಿಸಿದೆ. ದಟ್ಟ ಮಂಜು ಆವರಿಸಿದ್ದರಿಂದಾಗಿ ಹಲವಾರು ವಾಹನಗಳು ಅಪಘಾತಕ್ಕೆ ಈಡಾಗಿರುವುದಾಗಿ ಹೇಳಿದ್ದಾರೆ. ಸರಣಿ ಅಪಘಾತದಿಂದ ಹಲವರಿಗೆ ಗಾಯ ಚಕ್ರಸೈನ್‌ಪುರ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಜನನಿಬಿಡ ಪ್ರದೇಶದಲ್ಲಿ ದೀರ್ಘ ಸಂಚಾರ ದಟ್ಟಣೆ ಉಂಟಾಗಿದೆ. ಗೋಚರತೆ ಕಡಿಮೆ ಇರುವ ಪರಿಸ್ಥಿತಿಯಲ್ಲಿ ಚಾಲಕರು ಪ್ರತಿಕ್ರಿಯಿಸಲು ಕಷ್ಟಪಟ್ಟ ಕಾರಣ ವಾಹನಗಳು ಗಂಟೆಗಟ್ಟಲೆ ಸಿಲುಕಿಕೊಂಡವು. ಅಪಘಾತದಲ್ಲಿ ಮಹಿಳೆ ಸೇರಿದಂತೆ ಹಲವಾರು ವ್ಯಕ್ತಿಗಳು ಗಾಯಗೊಂಡರು. ಅವರಿಗೆ ತಕ್ಷಣ ವೈದ್ಯಕೀಯ ನೆರವು ನೀಡಲಾಯಿತು ಮತ್ತು ಅವರು ಸುರಕ್ಷಿತರಾಗಿದ್ದಾರೆ ಎಂದು ವರದಿಯಾಗಿದೆ. https://twitter.com/vani_mehrotra/status/1999727076107255891 ಹೆದ್ದಾರಿಯಲ್ಲಿ ಸಂಚಾರ ಸ್ಥಗಿತ ಸರಣಿ ಅಪಘಾತದ ನಂತರ, ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿತು. ಪೊಲೀಸರು, ಟೋಲ್ ಪ್ಲಾಜಾ ನಿರ್ವಹಣೆಯೊಂದಿಗೆ ತ್ವರಿತ ಕ್ರಮ ಕೈಗೊಂಡು ಹಾನಿಗೊಳಗಾದ ವಾಹನಗಳನ್ನು ತೆರವುಗೊಳಿಸಲು ಕ್ರೇನ್‌ಗಳನ್ನು ನಿಯೋಜಿಸಿದರು. ಸಾಮಾನ್ಯ…

Read More

ನವದೆಹಲಿ: ಇಸ್ರೋ ಡಿಸೆಂಬರ್ 15 ರಂದು ಶ್ರೀಹರಿಕೋಟಾದಿಂದ ಬ್ಲೂಬರ್ಡ್ -6 ಎಂಬ ದೊಡ್ಡ ಅಮೇರಿಕನ್ ಸಂವಹನ ಉಪಗ್ರಹವನ್ನು ಉಡಾವಣೆ ಮಾಡಲಿದೆ. ಈ ಉಪಗ್ರಹವು ತುಂಬಾ ಭಾರವಾಗಿದ್ದು, ಇದು ಭಾರತವು ಇದುವರೆಗೆ ಎತ್ತಿರುವ ಅತಿದೊಡ್ಡ ವಾಣಿಜ್ಯ ಉಪಗ್ರಹಗಳಲ್ಲಿ ಒಂದಾಗಿದೆ. ಈ ಮಿಷನ್ ಭಾರತ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವೆ ಬೆಳೆಯುತ್ತಿರುವ ಬಾಹ್ಯಾಕಾಶ ಪಾಲುದಾರಿಕೆಯನ್ನು ತೋರಿಸುತ್ತದೆ. ಎರಡೂ ದೇಶಗಳು ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಹತ್ತಿರದಲ್ಲಿ ಕಾರ್ಯನಿರ್ವಹಿಸುತ್ತಿವೆ. ಈ ಮಿಷನ್ ಇಸ್ರೋದ ಶಕ್ತಿಶಾಲಿ LVM3 ಉಡಾವಣಾ ವಾಹನ ಅಥವಾ ರಾಕೆಟ್ ಅನ್ನು ಬಳಸುತ್ತದೆ. ಈ ರಾಕೆಟ್ ಬ್ಲೂಬರ್ಡ್ -6 ಅನ್ನು ಹೊತ್ತೊಯ್ಯುತ್ತದೆ ಮತ್ತು ಅದನ್ನು ಕಡಿಮೆ-ಭೂಮಿಯ ಕಕ್ಷೆಯಲ್ಲಿ ಇರಿಸುತ್ತದೆ, ಅಂದರೆ ವೇಗದ ಸಂವಹನಕ್ಕಾಗಿ ಭೂಮಿಗೆ ಹತ್ತಿರದಲ್ಲಿದೆ. ಕಡಿಮೆ ಭೂಮಿಯ ಕಕ್ಷೆ ಎಂದರೆ ಉಪಗ್ರಹಗಳು ಸಮುದ್ರ ಮಟ್ಟದಿಂದ ಸುಮಾರು 160 ರಿಂದ 2,000 ಕಿಲೋಮೀಟರ್ ಎತ್ತರದಲ್ಲಿ ಭೂಮಿಗೆ ಹತ್ತಿರ ಹಾರುತ್ತವೆ. ಇದು ವೇಗವಾದ ಸಂಕೇತಗಳು, ತ್ವರಿತ ಡೇಟಾ ವರ್ಗಾವಣೆ ಮತ್ತು ನೆಲದ ಕೇಂದ್ರಗಳಿಂದ ಸುಲಭ ನಿಯಂತ್ರಣವನ್ನು ಅನುಮತಿಸುತ್ತದೆ. ಉಪಗ್ರಹವು…

Read More

ಬೆಂಗಳೂರು: ಕಾಂಗ್ರೆಸ್ ನಾಯಕರಿಂದಲೇ ‘ಕೈ’ಪಕ್ಷದ ದಲಿತ ವಿರೋಧಿ ಧೋರಣೆ ಬಟಾಬಯಲು ಮಾಡಲಾಗಿದೆ ಎಂಬುದಾಗಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, “ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ಕೆಲ ನಿಗಮ, ಮಂಡಳಿಗಳ ಸಾಧನೆ ಶೂನ್ಯವಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ನಡೆದಿದ್ದು, ಕಾಂಗ್ರೆಸ್ ಸರ್ಕಾರದಲ್ಲಿ ಪರಿಶಿಷ್ಟರ ಹಣ ದೋಚುವುದು ಸರಾಗವಾಗಿದೆ” ಎಂದು ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಶ್ರೀ ಸುಧಾಮ ದಾಸ್ ಅವರು ಸಿಎಂ ಸಿದ್ಧರಾಮಯ್ಯ ಹಾಗೂ ಸಚಿವ ಹೆಚ್.ಸಿ ಮಹದೇವಪ್ಪ ಅವರ ಭ್ರಷ್ಟಾಚಾರಕ್ಕೆ ಸರ್ಟಿಫಿಕೇಟ್ ಕೊಟ್ಟಿದ್ದಾರೆ ಎಂದಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನೂರಾರು ಕೋಟಿ ಭ್ರಷ್ಟಾಚಾರ ಆಗಿದೆ ಎಂದು ಸ್ವತಃ ಸಿಎಂ ಸಿದ್ದರಾಮಯ್ಯನವರೇ ಸದನದಲ್ಲಿ ಒಪ್ಪಿಕೊಂಡ ನಂತರ ಈಗ ಮತ್ತೊಬ್ಬ ಕಾಂಗ್ರೆಸ್ ನಾಯಕ ಸದನದಲ್ಲೇ ಸರ್ಕಾರದ ದಲಿತ ವಿರೋಧಿ ನೀತಿಗಳ ಬಗ್ಗೆ ಆರೋಪ ಮಾಡಿರುವುದು ನಾಚಿಕೆಗೇಡು ಎಂದು ವಾಗ್ಧಾಳಿ ನಡೆಸಿದ್ದಾರೆ. ಈ ಸರ್ಕಾರಕ್ಕೆ ಕಿಂಚಿತ್ತಾದರೂ ನಾಚಿಕೆ, ಮಾನ, ಮರ್ಯಾದೆ ಇದ್ದರೆ, ಒಂದು…

Read More

ಶಿವಮೊಗ್ಗ: ಡಿ.17ರಂದು ಬುಧವಾರದಂದು ಸಾಗರವನ್ನು ಜಿಲ್ಲೆಯಾಗಿ ಮಾಡಬೇಕು ಎಂಬುದಾಗಿ ಒತ್ತಾಯಿಸಿ ಸಾಗರ ಬಂದ್ ಮಾಡುವುದಾಗಿ ಸಾಗರ ಜಿಲ್ಲೆ ಹೋರಾಟ ಸಮಿತಿಯ ತಿ.ನಾ ಶ್ರೀನಿವಾಸ್ ಘೋಷಿಸಿದ್ದಾರೆ. ಈ ಕುರಿತು ಸಾಗರ ನಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯನ್ನು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಗರ ಜಿಲ್ಲೆ ಮಾಡಬೇಕು ಎಂಬ ಒತ್ತಾಯಕ್ಕೆ ಸರ್ಕಾರ ಸರಿಯಾಗಿ ಸ್ಪಂದಿಸುತ್ತಿಲ್ಲ. ಈ ಹಿನ್ನಲೆಯಲ್ಲಿ ಡಿಸೆಂಬರ್.17ರಂದು ಸಾಗರ ಬಂದ್ ಮಾಡುವುದಾಗಿ ತಿಳಿಸಿದರು. ಸಾಗರ ತಾಲ್ಲೂಕು ಅಭಿವೃದ್ಧಿ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ. ಶಿಕಾರಿಪುರ, ತೀರ್ಥಹಳ್ಳಿಯಲ್ಲಿ ರಸ್ತೆ ಅಗಲೀಕರಣ ಆದಷ್ಟು ಸಾಗರದಲ್ಲಿ ಆಗಿಲ್ಲ. ಸೊರಬ ರಸ್ತೆ ಅಗಲೀಕರಣ ನೆನೆಗುದಿಗೆ ಬಿದ್ದಿದೆ. ಯುಜಿಡಿ ಕಾಮಗಾರಿ 16 ವರ್ಷದಿಂದ ಸರಿಯಾಗಿ ನಡೆಯುತ್ತಿಲ್ಲ. ಜೋಗ ಕಾಮಗಾರಿ ಕುಂಟುತ್ತಾ ಸಾಗಿದೆ. ಸಾಗರ ತಾಲ್ಲೂಕಿನ ಅಭಿವೃದ್ಧಿಗೆ ಕಾಣದ ಕೈಗಳಿಂದ ತಡೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಶಾಸಕರು ನಮ್ಮ ಮನವಿಗೆ ಸ್ಪಂದಿಸಿ ಮುಖ್ಯಮಂತ್ರಿಗೆ ಪತ್ರ ಬರೆದಿದ್ದರು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಗೆ ಸಾಗರ ಜಿಲ್ಲಾ ಹೋರಾಟ ಸಮಿತಿಯ ನಿಯೋಗ ಕರೆದೊಯ್ಯಲು ಹಿಂದೇಟು…

Read More

ಮಂಡ್ಯ: ಜಿಲ್ಲೆಯಲ್ಲಿ ರೈತರ ಮಕ್ಕಳಿಗೆ ಹೆಣ್ಣು ಕೊಡಲು ಮುಂದಾಗದ ಪರಿಸ್ಥಿತಿ ಇದೆ. ಈ ಸಂದರ್ಭದಲ್ಲಿ ರೈತರ ಮಕ್ಕಳಿಗೆ ಹೆಣ್ಣು ಕೊಡೋದಕ್ಕೆ ಪ್ರೋತ್ಸಾಹಿಸೋದಕ್ಕೆ ಸರ್ಕಾರದ ಮುಂದೆ ಈ ಬೇಡಿಕೆಯನ್ನು ಇರಿಸಿ, ಬಿಜೆಪಿ, ರೈತ ಸಂಘಟನೆಗಳು ವಿನೂತನ ಪ್ರತಿಭಟನೆಯನ್ನು ಮಾಡಿದರು. ಅಲ್ಲದೇ ಡಿಸಿ ಮೂಲಕ ತಮ್ಮ ಬೇಡಿಕೆ ಈಡೇರಿಕೆಗಾಗಿ ಮನವಿಯನ್ನು ಸರ್ಕಾರಕ್ಕೆ ಸಲ್ಲಿಸಲಾಯಿತು. ಮಂಡ್ಯ ಬಿಜೆಪಿಯಿಂದ ವಿನೂತನ ಹೋರಾಟವನ್ನು ನಡೆಸಲಾಯಿತು. ಅವಿವಾಹಿತ ರೈತ ಯುವಕರ ಪರ ಮಂಡ್ಯ ಬಿಜೆಪಿ ಟೀಂ ನಿಂತಿತು. ಮಂಡ್ಯ ಡಿಸಿ ಕಚೇರಿ ಬಳಿ ಬಿಜೆಪಿ ಕಾರ್ಯಕರ್ತರಿಂದ ವಿಭಿನ್ನ ಪ್ರತಿಭಟನೆ ನಡೆಸಲಾಯಿತು. ಹೆಣ್ಣು ಸಿಗದ ಯುವಕರಿಂದ ಮಠಕ್ಕೆ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವ್ಯಂಗ್ಯ ಮಾಡಿತು. ರೈತ ಮಕ್ಕಳ ಪರ ಬಿಜೆಪಿಯಿಂದ ರಾಜ್ಯ ಸರ್ಕಾರಕ್ಕೆ ವಿಶೇಷ ಮನವಿ ಮಾಡಲಾಯಿತು. ಕೈಯಲ್ಲಿ ತಾಂಬೂಲ ಹಿಡಿದು, ವಧುವಿನಂತೆ ಬಟ್ಟೆ ತೊಟ್ಟು, ಹಣೆಗೆ ಬಾಸಿಂಗ ಕಟ್ಟಿ ಡಿಸಿ ಕಚೇರಿಗೆ ಬಂದು ಅಣಕು ಪ್ರದರ್ಶನ ನೀಡಲಾಯಿತು. ಮಂಡ್ಯದ ಡಿಸಿ ಕಚೇರಿ ಬಳಿ ಬಿಜೆಪಿ…

Read More

ಬೆಂಗಳೂರು: ರಾಜ್ಯದ ನಗರಸಭೆ, ಪುರಸಭೆ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಪೌರಕಾರ್ಮಿಕರಿಗೆ ಸರ್ಕಾರದಿಂದಲೇ ವೇತನ ಪಾವತಿಸುವ ಕುರಿತಂತೆ ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂಬುದಾಗಿ ಪೌರಾಡಳಿತ ಸಚಿವ ರಹೀಂ ಖಾನ್ ತಿಳಿಸಿದ್ದಾರೆ. ಈ ಮೂಲಕ ರಾಜ್ಯದ ಪೌರ ಕಾರ್ಮಿಕರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಸಿದ್ದು ಸವದಿ ಅವರ ಪ್ರಶ್ನೆಗೆ ಪೌರಾಡಳಿತ ಸಚಿವರಾದ ರಹೀಂ ಖಾನ್‌ ಅವರ ಉತ್ತರಿಸಿದರು. ಕಳೆದ 2022ಕ್ಕೂ ಮುನ್ನ ನಗರ ಸ್ಥಳೀಯ ಸಂಸ್ಥೆಗಳ ಪೌರಕಾರ್ಮಿಕರಿಗೆ ಎಸ್‍ಎಫ್‍ಸಿ ಅನುದಾನದಡಿ ವೇತನ ಪಾವತಿಸಲಾಗುತ್ತಿತ್ತು. ಆದರೆ ಸ್ಥಳೀಯ ಸಂಸ್ಥೆಗಳು ಉತ್ತಮವಾಗಿ ತೆರಿಗೆ ಸಂಗ್ರಹಿಸಿ, ಆತ್ಮ ನಿರ್ಭರವಾಗಬೇಕು. ಆರ್ಥಿಕವಾಗಿ ಸಬಲತೆಯನ್ನು ಸಾಧಿಸಬೇಕು ಎಂಬ ಉದ್ದೇಶದಿಂದ ಶೇ. 40 ರಷ್ಟು ಸರ್ಕಾರದಿಂದ ಹಾಗೂ ಶೇ. 60 ರಷ್ಟು ನಗರ ಸ್ಥಳೀಯ ಸಂಸ್ಥೆಗಳೇ ತಮ್ಮ ಆದಾಯದ ಅನುದಾನದಿಂದ ಪಾವತಿಸುವಂತೆ ಸೂಚನೆ ನೀಡಲಾಗಿರುತ್ತದೆ ಎಂದರು. https://twitter.com/KarnatakaVarthe/status/1999410679032480069

Read More