Author: kannadanewsnow09

ನವದೆಹಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು, ಹುಣಸೆ, ಹಲಸು ಮತ್ತು ನೇರಳೆ ಮುಂತಾದ ಪೌಷ್ಟಿಕಾಂಶಯುಕ್ತ ಹಣ್ಣಿನ ಬೆಳೆಗಳಿಗಾಗಿ ಪ್ರತ್ಯೇಕವಾದ ರಾಷ್ಟ್ರೀಯ ಮಂಡಳಿ ಸ್ಥಾಪಿಸುವ ಪ್ರಸ್ತಾಪ ಮಾಡಿದ್ದಾರೆ. ಸಂಸತ್ ಭವನದಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಅವರೊಂದಿಗೆ ಕೃಷಿ ಸಚಿವರನ್ನು ಭೇಟಿಯಾದ ಮಾಜಿ ಪ್ರಧಾನಿಗಳು ತಮ್ಮ ಪ್ರಸ್ತಾವನೆ ಕುರಿತ ಪತ್ರವನ್ನು ನೀಡಿದರು. ಮಾಜಿ ಪ್ರಧಾನಿಗಳಾದ ದೇವೇಗೌಡರು ಹುಣಸೆ, ಹಲಸು ಮತ್ತು ನೇರಳೆ ಔಷಧ ಗುಣಗಳುಳ್ಳ ಪೌಷ್ಟಿಕಾಂಶಯುಕ್ತ ಹಣ್ಣಿನ ಬೆಳೆಗಳಾಗಿವೆ, ಇವುಗಳನ್ನು ಶತಮಾನಗಳಿಂದ ಭಾರತದಲ್ಲಿ ಬೆಳೆಯಲಾಗುತ್ತಿದೆ. ಈ ಬೆಳೆಗಳು ಸಾವಯವವಾಗಿ ಬೆಳೆಯುತ್ತವೆ, ಪ್ರಕೃತಿಯಲ್ಲಿ ಇವು ಸಶಕ್ತವಾಗಿ ಬೆಳೆಯುತ್ತವೆ. ಕಡಿಮೆ ಮಳೆಯ ಅಗತ್ಯವಿರುತ್ತದೆ ಮತ್ತು ಕಡಿಮೆ ವೆಚ್ಚದಲ್ಲಿ ಬೆಳೆಸಲಾಗುತ್ತದೆ ಎಂದು ಅವರು ಕೃಷಿ ಸಚಿವರ ಗಮನಸೆಳೆದರು. ಹುಣಸೆ ಹಣ್ಣನ್ನು ದೇಶಾದ್ಯಂತ ವ್ಯಾಪಕವಾಗಿ ಬೆಳೆಯಲಾಗುತ್ತದೆ, ಮಧ್ಯ,…

Read More

ಮಂಡ್ಯ: ಜಿಲ್ಲೆಯಲ್ಲಿ ರೈಲ್ವೆ ಇಲಾಖೆಯ ಪರೀಕ್ಷೆಗಳಲ್ಲಿ ಕನ್ನಡ ಭಾಷೆ ಕಡ್ಡಾಯಕ್ಕೆ ಆಗ್ರಹಿಸಿ ಪ್ರತಿಭಟನೆಯನ್ನು ಕನ್ನಡ ಪರ ಸಂಘಟನೆಗಳಿಂದ ನಡೆಸಲಾಯಿತು. ಈ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶವನ್ನು ಕನ್ನಡ ಪರ ಸಂಘಟನೆಗಳ ಮುಖಂಡರು ಹೊರ ಹಾಕಿದಂತ ಘಟನೆಯೂ ನಡೆಯಿತು. ಮಂಡ್ಯದ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಇಲಾಖೆಯ ಪರೀಕ್ಷೆಯಲ್ಲಿ ಕನ್ನಡ ಭಾಷೆ ಕಡ್ಡಾಯಗೊಳಿಸುವಂತೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಸರ್ಕಾರ ಹಾಗೂ ಸಂಸದರ ವಿರುದ್ದ ಘೋಷಣೆ ಕೂಗಿ ಆಕ್ರೋಶವನ್ನು ಹೊರ ಹಾಕಲಾಯಿತು. ರಾಜ್ಯದ ರೈಲ್ವೆ ಇಲಾಖೆಯ ಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆ ಕಡೆಗಣಿಸಿದ್ದಾರೆ. ಇಂಗ್ಲಿಷ್ ಹಾಗೂ ಹಿಂದಿ ಭಾಷೆಗೆ ಮಾತ್ರ ಒತ್ತುಕೊಟ್ಟು ಕನ್ನಡ ವಿರೋಧಿ ಧೋರಣೆ ಮಾಡಿದೆ. ರಾಜ್ಯದ ರೈಲ್ವೆ ಇಲಾಖೆ ಪರೀಕ್ಷೆಗಳನ್ನ ಕನ್ನಡ ಕಡ್ಡಾಯವಾಗಬೇಕು‌. ಕನ್ನಡ ಭಾಷೆಗೆ ಹೆಚ್ಚಿನ ಆದ್ಯತೆ ಸಿಕ್ಕಿ ನ್ಯಾಯ ಸಿಗಬೇಕು ಎಂಬುದಾಗಿ ಆಗ್ರಹಿಸಿದರು. ತುಮಕೂರು ಚಾಮರಾಜನಗರ ರೈಲ್ವೆ ಮಾರ್ಗ ಅನುಷ್ಠಾನಗೊಳಿಸಿ. ಬ್ಯಾಂಕ್, ಅಂಚೆ,ಕಚೇರಿ, ರೈಲ್ವೆ ರಕ್ಷಣಾ ಆಡಳಿತದಲ್ಲಿ ಕನ್ನಡ ಕಡ್ಡಾಯವಾಗಿರಲಿ. ಕನ್ನಡದ…

Read More

ಬೆಳಗಾವಿ: ರಾಜ್ಯದ ಯಜಮಾನಿ ಮಹಿಳೆಯರಿಗೆ ಗುಡ್ ನ್ಯೂಸ್ ಎನ್ನುವಂತೆ ಗೃಹ ಲಕ್ಷ್ಮೀ ಯೋಜನೆಯ ಸೆಪ್ಟೆಂಬರ್ ತಿಂಗಳ ಹಣವನ್ನು ಬಿಡುಗಡೆ ಮಾಡಲಾಗಿದೆ. ಹೊಸ ವರ್ಷಕ್ಕೂ ಮುನ್ನವೇ ಗೃಹ ಲಕ್ಷ್ಮೀ ಯೋಜನೆ ಹಣ ಯಜಮಾನಿಯರ ಖಾತೆಗೆ ಜಮಾ ಮಾಡಲಾಗಿದೆ. ಆ ಮೂಲಕ ಹೊಸ ವರ್ಷಕ್ಕೂ ಮುನ್ನವೇ ಯಜಮಾನಿಯರಿಗೆ ಸಿಹಿಸುದ್ದಿ ನೀಡಲಾಗಿದೆ. ಈ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಧಾನಸಭೆಯಲ್ಲೇ ಮಾಹಿತಿ ನೀಡಿದ್ದಾರೆ. ಸೆಪ್ಟೆಂಬರ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಯಜಮಾನಿಯರ ಬ್ಯಾಂಕ್ ಖಾತೆಗೆ ಜಮಾ ಮಾಡಿರುವುದಾಗಿ ತಿಳಿಸಿದ್ದಾರೆ. ಅಂದಹಾಗೇ ಡಿಸೆಂಬರ್.16ರಂದು ಆರ್ಥಿಕ ಇಲಾಖೆಯಿಂದ ಸೆಪ್ಟೆಂಬರ್ ತಿಂಗಳ ಕಂತಿನ ಹಣ ಬಿಡುಗಡೆ ಮಾಡಲಾಗಿದೆ. ಹೊಸ ವರ್ಷಕ್ಕೂ ಮುನ್ನವೇ ಗೃಹ ಲಕ್ಷ್ಮೀಯರ ಬ್ಯಾಂಕ್ ಖಾತೆಗೆ ಹಣವು ಜಮಾ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಸೆಪ್ಟೆಂಬರ್ ತಿಂಗಳ ಗೃಹ ಲಕ್ಷ್ಮೀ ಯೋಜನೆಯ ಹಣವನ್ನು ಬಿಡುಗಡೆ ಮಾಡಲಾಗಿದ್ದು, ಅಕ್ಟೋಬರ್, ನವೆಂಬರ್, ಡಿಸೆಂಬರ್ ಹಣ ಬರಬೇಕಿದೆ. ಅದು ಯಾವಾಗ ಜಮಾ ಆಗಲಿದೋ ಎನ್ನುವ ಚಿಂತೆಯಲ್ಲಿ ಯಜಮಾನಿಯರಿದ್ದಾರೆ. https://kannadanewsnow.com/kannada/kea-to-conduct-competitive-examination-for-recruitment-to-various-departmental-vacancies-tomorrow-compliance-with-these-rules-is-mandatory/ https://kannadanewsnow.com/kannada/big-news-for-the-attention-of-the-people-of-the-state-here-is-information-about-the-schemes-available-from-various-corporations-of-the-karnataka-government/

Read More

ಬೆಂಗಳೂರು: ಬಿಡಿಎ, ಬೆಂಗಳೂರು ಜಲಮಂಡಳಿ, ತಾಂತ್ರಿಕ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿಗೆ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ಡಿ.20ರಿಂದ 22ರವರೆಗೆ ಲಿಖಿತ ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಗಿ ಕ್ರಮಗಳನ್ನು ಕೈಗೊಂಡಿದೆ. ವಿವಿಧ ಹುದ್ದೆಗಳಿಗೆ ಕಲ್ಯಾಣ ಕರ್ನಾಟಕದ ಒಟ್ಟು‌ 24,800 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು ಅಷ್ಟೂ‌ ಮಂದಿಗೆ ಮೂರು ದಿನಗಳ ಕಾಲ ಪರೀಕ್ಷೆ ನಡೆಸಲಾಗುತ್ತದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದರು. ಅತ್ಯಂತ ಪಾರದರ್ಶಕ ಹಾಗೂ ಅಕ್ರಮಗಳಿಗೆ ಅವಕಾಶ ಇಲ್ಲದಂತೆ ಪರೀಕ್ಷೆಗಳನ್ನು ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೊಠಡಿಯಲ್ಲಿ ಸಿಸಿಟಿವಿ ಜತೆಗೆ ಜಾಮರ್ ಕೂಡ ಹಾಕಿದ್ದು, ಎಲೆಕ್ಟ್ರಾನಿಕ್ ವಸ್ತುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಮುಖಚಹರೆ ಪತ್ತೆ ತಂತ್ರಜ್ಞಾನ ಬಳಸಿಯೇ ಅಭ್ಯರ್ಥಿಗಳನ್ನು ಪರೀಕ್ಷಾ ಕೇಂದ್ರದ ಒಳಗೆ ಬಿಡಲಾಗುತ್ತದೆ. ವಸ್ತ್ರ ಸಂಹಿತೆ ಇದ್ದು ಅಭ್ಯರ್ಥಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅವರು ಹೇಳಿದ್ದಾರೆ. ಡಿ.20ರಂದು ಬೆಂಗಳೂರಿನ ಏಳು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 3,486 ಮಂದಿ ತೆಗೆದುಕೊಂಡಿದ್ದಾರೆ. ಬೆಂಗಳೂರು,…

Read More

ಬೆಳಗಾವಿ: ಎರಡೂವರೆ ವರ್ಷ ಮುಖ್ಯಮಂತ್ರಿ ಅಂತ ತೀರ್ಮಾನ ಆಗಿಲ್ಲ. ಶಾಸಕರು 5 ವರ್ಷಕ್ಕೆ ಸಿಎಂ ಆಯ್ಕೆ ಮಾಡಿದ್ದಾರೆ. ನಾನು ಐದು ವರ್ಷಕ್ಕೆ ಸಿಎಂ ಆಯ್ಕೆಯಾಗಿದ್ದೇನೆ ಎಂಬುದಾಗಿ ಹೇಳುವ ಮೂಲಕ ಪಕ್ಷದೊಳಗಿನ ವಿರೋಧಿಗಳಿಗೂ ಸಿದ್ಧರಾಮಯ್ಯ ಗುನ್ನಾ ಹೊಡೆದಿದ್ದಾರೆ. ವಿಧಾನಸಭೆಯಲ್ಲಿ ಉತ್ತರ ಕರ್ನಾಟಕ ಚರ್ಚೆಗೆ ಉತ್ತರ ಕೊಡುತ್ತಲೇ ಬಿಜೆಪಿ ಸದಸ್ಯರ ಕಾಲೆಳೆಯುವ ಮಾತುಗಳಿಗೆ ಪ್ರತ್ಯುತ್ತರಿಸಿದಂತ ಸಿಎಂ ಸಿದ್ಧರಾಮಯ್ಯ ಅವರು, ಎಲ್ಲಿಯೂ ಎರಡೂವರೆ ವರ್ಷಕ್ಕೆ ಅಂತ ಹೇಳೇ ಇಲ್ಲ. ಆ ತೀರ್ಮಾನ ಆಗಿಲ್ಲ. ಈಗ ನಾನೇ ಮುಖ್ಯಮಂತ್ರಿ. ಮುಂದೆಯೂ ನಾನೇ ಇರುತ್ತೇನೆ ಎಂದರು. ಈಗ ನಾನು ಮುಖ್ಯಮಂತ್ರಿಯಾಗಿದ್ದೇನೆ. ನನ್ನ ಪ್ರಕಾರ ಕಾಂಗ್ರೆಸ್ ಹೈಕಮಾಂಡ್ ನನ್ನ ಪರವಾಗಿಯೇ ಇದೆ. ಈಗಲೂ ನಾನೇ ಮುಖ್ಯಮಂತ್ರಿ, ಹೈಕಮಾಂಡ್ ಹೇಳೋವರೆಗೂ ನಾನೇ ಸಿಎಂ. ನನಗೆ ದೈಹಿಕ ನಿಶ್ಯಕ್ತಿ ಇರಬಹುದು, ಆದರೇ ರಾಜಕೀಯ ನಿಶ್ಯಕ್ತಿ ಇಲ್ಲ. ಜನರ ಆಶೀರ್ವಾದ ಇದ್ದರೇ ಮಾತ್ರ ಅಧಿಕಾರ ಇರುತ್ತದೆ. ನಾನು ಹಣೆಯ ಬರಹದಲ್ಲಿ ನಂಬಿಕೆ ಇಟ್ಟಿದ್ದೇನೆ. ನಮಗೆ ಯಾರೂ ನಿರ್ದೇಶನ ಕೊಡೋರು ಇಲ್ಲ, ನಮಗೆ ನಾವೇ ನಿರ್ದೇಶಕರು.…

Read More

ಶಿವಮೊಗ್ಗ : ಕ್ರಿಸ್‌ಮಸ್ ರಜೆಯ ಹಿನ್ನಲೆಯಲ್ಲಿ ಸಾರ್ವಜನಿಕರು ಮೃಗಾಲಯ ವೀಕ್ಷಣೆಗೆ ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಕಾರಣ ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಪ್ರಕೃತಿ ಶಿಕ್ಷಣ ನೀಡುವ ಸಲುವಾಗಿ ಹುಲಿ-ಸಿಂಹಧಾಮದಲ್ಲಿನ ಜೂ ಹಾಗೂ ಸಫಾರಿ ವೀಕ್ಷಣೆಯನ್ನು ಡಿ.23 ಮತ್ತು 30 ರ ಮಂಗಳವಾರವೂ ಸಹ ತೆರೆದಿರುತ್ತದೆ. ಪ್ರವಾಸಿಗರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳುವಂತೆ ತ್ಯಾವರೆಕೊಪ್ಪ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಮುಂದಿನ ಶೈಕ್ಷಣಿಕ ವರ್ಷದೊಳಗೆ 11 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣ: ಸಚಿವ ಮಧು ಬಂಗಾರಪ್ಪ ರಾಜ್ಯದಲ್ಲಿ 41,088 ಸರ್ಕಾರಿ ಪ್ರಾಥಮಿಕ ಶಾಲೆಗಳಿವೆ. 1,78,935 ಹುದ್ದೆಗಳು ಮಂಜೂರಾಗಿದ್ದು, ಈ ಪೈಕಿ 1,33,345 ಹುದ್ದೆಗಳು ಭರ್ತಿಯಾಗಿದ್ದು, 45,590 ಹುದ್ದೆಗಳು ಖಾಲಿ ಇರುತ್ತವೆ. ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ನೇಮಕಾತಿ ಮಾಡಲು ಈಗಾಗಲೇ ಕ್ರಮ ವಹಿಸಲಾಗಿದೆ. ರಾಜ್ಯದಲ್ಲಿ 5,024 ಸರ್ಕಾರಿ ಪ್ರೌಢ ಶಾಲೆಗಳಿದ್ದು, ಈ ಪ್ರೌಢಶಾಲೆಗಳಿಗೆ 44,144 ಹುದ್ದೆಗಳು ಮಂಜೂರಾಗಿರುತ್ತವೆ.…

Read More

ಬೆಂಗಳೂರು: ರಾಜ್ಯ ಮಾಹಿತಿ ಹಕ್ಕು ಆಯುಕ್ತರಾದಂತ ಬದ್ರುದ್ದೀನ್.ಕೆ ಹಾಗೂ ಡಾ.ಹರೀಶ್ ಕುಮಾರ್ ಅವರು ನಾಳೆ ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಮಾಹಿತಿ ಹಕ್ಕು ಕಾಯ್ದೆ ಕುರಿತು ಜಾಗೃತಿ ಕಾರ್ಯಾಗಾರ ಹಾಗೂ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಬಗ್ಗೆ ಕೊಡಗು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದು, ರಾಜ್ಯ ಮಾಹಿತಿ ಹಕ್ಕು ಆಯುಕ್ತರಾದಂತ ಬದ್ರುದ್ದೀನ್.ಕೆ ಹಾಗೂ ಡಾ.ಹರೀಶ್ ಅವರು ದಿನಾಂಕ 20-12-2025ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಮಾಹಿತಿ ಹಕ್ಕು ಕಾಯ್ದೆ ಕುರಿತು ಜಾಗೃತಿ ಕಾರ್ಯಗಾರ ಹಾಗೂ ಸಂವಾದವನ್ನು ಏರ್ಪಡಿಸಿದ್ದು, ಸದರಿ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು, ವಿವಿಧ ಇಲಾಖೆಯ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಪಾಲ್ಗೊಳ್ಳುವಂತೆ ಸೂಚಿಸಿದ್ದಾರೆ. ಕೊಡಗು ಜಿಲ್ಲೆಯ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಕಾರ್ಯಗಾರ, ಸಂವಾದ ಕಾರ್ಯಕ್ರಮ ನಡೆಯಲಿದೆ. ತಪ್ಪದೇ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಪಾಲ್ಗೊಳ್ಳುವಂತೆ ತಿಳಿಸಿದ್ದಾರೆ. ಇದಾದ ಬಳಿಕ ಮಧ್ಯಾಹ್ನ 1ರಿಂದ 2 ಗಂಟೆಯ ವೇಳೆಗೆ ಮಾಹಿತಿ ಹಕ್ಕು ಕಾಯ್ದೆ ಕುರಿತಂತೆ ಸಾರ್ವಜನಿಕರು ಹಾಗೂ ಮಾಧ್ಯಮದ ಪ್ರತಿನಿಧಿಗಳ ಜೊತೆಯಲ್ಲಿ…

Read More

ಜಾಜ್‌ಪುರ: ಗುರುವಾರ ಇಲ್ಲಿನ ಪಾಣಿಕೊಯಿಲಿ ಪೊಲೀಸ್ ವ್ಯಾಪ್ತಿಯ ಖಂಡಾರಾಪುರ-ಸಿಂಗಡ ಗ್ರಾಮದಲ್ಲಿ ಆಸ್ತಿ ವಿವಾದಕ್ಕಾಗಿ 23 ವರ್ಷದ ಯುವಕನೊಬ್ಬ ತನ್ನ ವೃದ್ಧ ಅಜ್ಜಿಯನ್ನು ಮಿನಿ ಟ್ರಕ್‌ ಹರಿಸಿ ಕೊಂದಿರುವಂತ ಶಾಕಿಂಗ್ ಘಟನೆ ನಡೆದಿದೆ. ಮೃತನನ್ನು 70 ವರ್ಷದ ಕುಲಿ ಸಾಹೂ ಎಂದು ಗುರುತಿಸಲಾಗಿದೆ. ಕುಲಿ ಅವರ ಮೊಮ್ಮಗ ಮತ್ತು ಆರೋಪಿ ಕಾರ್ತಿಕ್ ಸಾಹೂ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ವರದಿಗಳ ಪ್ರಕಾರ, ವೃತ್ತಿಯಲ್ಲಿ ರೈತರಾಗಿದ್ದ ಕುಲಿ ಮತ್ತು ಅವರ ಪತಿ ಫೋಯಿನಾ ಸಾಹೂ, ಖಂಡಾರಾಪುರ-ಸಿಂಗಡ ಗ್ರಾಮದ ತಮ್ಮ ಮನೆಯಲ್ಲಿ ವಾಸಿಸುತ್ತಿದ್ದರು. ವೃದ್ಧಾಪ್ಯದ ಕಾರಣ ಅವರ ಆರೋಗ್ಯ ಹದಗೆಟ್ಟಾಗ, ಅವರ ಏಕೈಕ ಪುತ್ರ ನಾರಾಯಣ್ ಅವರನ್ನು ನೋಡಿಕೊಳ್ಳಲಿಲ್ಲ ಎಂದು ವರದಿಯಾಗಿದೆ. ನಂತರ, ವೃದ್ಧ ದಂಪತಿಗಳ ವಿವಾಹಿತ ಮಗಳು ಅನಿತಾ ಸಾಹೂ ಅವರನ್ನು ನೋಡಿಕೊಂಡರು. ಕೆಲವು ವರ್ಷಗಳ ಹಿಂದೆ, ಫೋಯಿನಾ ತನ್ನ ಜಮೀನಿನ ಒಂದು ಭಾಗವನ್ನು ಅನಿತಾಗೆ ಉಡುಗೊರೆಯಾಗಿ ನೀಡಿ ಅವಳ ಹೆಸರಿಗೆ ನೋಂದಾಯಿಸಿದ್ದರು. ಈ ಘಟನೆಯಿಂದ ನಾರಾಯಣ್, ಅವರ ಪತ್ನಿ ಮತ್ತು ಮಕ್ಕಳು ಕೋಪಗೊಂಡಿದ್ದರು.…

Read More

ಬೆಂಗಳೂರು: ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ಕರಾರಸಾ ನಿಗಮದಿಂದ 1000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಆ ಮೂಲಕ ಕ್ರಿಸ್ ಮಸ್ ಹಬ್ಬಕ್ಕೆ ಊರಿಗೆ ಹೊರಟವರಿಗೆ ಕೆ ಎಸ್ ಆರ್ ಟಿ ಸಿ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೆ ಎಸ್ ಆರ್ ಟಿ ಸಿ ಮಾಹಿತಿ ನೀಡಿದ್ದು, ದಿನಾಂಕ:25.12.2025 ರಂದು ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ:19.12.2025, 20.12.2025 ಹಾಗೂ 24.12.2025 ರಂದು ಬೆಂಗಳೂರಿನಿಂದ ಈ ಕೆಳಕಂಡ ಸ್ಥಳಗಳಿಗೆ 1000 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿರುತ್ತದೆ. ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ: 26.12.2025 ಹಾಗೂ 28.12.2025 ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದಿದೆ. ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ,…

Read More

ನಾವು ನಮ್ಮ ಮಕ್ಕಳನ್ನು ಒಳ್ಳೆಯ ಶಾಲೆಗಳಲ್ಲಿ ಓದುವಂತೆ ಮಾಡುತ್ತೇವೆ, ಇದರಿಂದ ನಾವು ಕಷ್ಟಪಟ್ಟರೂ ಅವರು ಓದಬಹುದು ಮತ್ತು ಉತ್ತಮ ಅಂಕಗಳನ್ನು ಪಡೆಯುತ್ತಾರೆ. ಪ್ರಸ್ತುತ ಸನ್ನಿವೇಶದಲ್ಲಿ ಎಲ್ಲಾ ಮಕ್ಕಳು ಒಳ್ಳೆಯ ಮತ್ತು ಬುದ್ಧಿವಂತ ಮಕ್ಕಳು ಮತ್ತು ಓದುವ ಮಕ್ಕಳು. ಆದರೆ ಕೆಲವು ಮಕ್ಕಳು ಪರೀಕ್ಷೆಯ ಸಮಯದಲ್ಲಿ ಓದುವುದೆಲ್ಲವನ್ನೂ ಮರೆತುಬಿಡುತ್ತಾರೆ. ಕೆಲವು ಮಕ್ಕಳು ಯಾವಾಗಲೂ ಸ್ವಲ್ಪ ಜಡವಾಗಿರುತ್ತಾರೆ. ಇದು ಬದಲಾಗಬೇಕಾದರೆ ಸರಸ್ವತಿ ದೇವಿಯ ಕೃಪೆಗೆ ಪಾತ್ರರಾಗಬೇಕು. ಆ ಕೃಪೆಯನ್ನು ಪರಿಪೂರ್ಣವಾಗಿ ಪಡೆಯಲು ಈ ಒಂದು ಸಾಲಿನ ಮಂತ್ರ ಸಾಕು ಎನ್ನುತ್ತದೆ ಆಧ್ಯಾತ್ಮಿಕತೆ . ಈ ಪೋಸ್ಟ್‌ನಲ್ಲಿ, ಮಂತ್ರ ಯಾವುದು ಮತ್ತು ಅದನ್ನು ಹೇಗೆ ಹೇಳಬೇಕೆಂದು ನೀವು ವಿವರವಾಗಿ ನೋಡಬಹುದು. ತಮ್ಮ ಮಕ್ಕಳು ಚೆನ್ನಾಗಿ ಓದಿ ಉತ್ತಮ ಸ್ಥಾನದಲ್ಲಿರಬೇಕು ಎಂಬುದು ಪೋಷಕರ ದೊಡ್ಡ ಕನಸು. ಇಂದು ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಭವಿಷ್ಯವನ್ನು ಹೊಂದಲು ಬೆಳಿಗ್ಗೆಯಿಂದ ಸಂಜೆಯವರೆಗೆ ದಣಿವರಿಯಿಲ್ಲದೆ ಶ್ರಮಿಸುತ್ತಾರೆ. ಅದಕ್ಕೆ ಆಧಾರವೆಂದರೆ ಅವರು ಉತ್ತಮ ಶಿಕ್ಷಣ ಪಡೆಯಬೇಕು. ಈ ಶಿಕ್ಷಣ ಪಡೆಯಲು ನಮ್ಮ ದೊಡ್ಡ ಶಾಲೆಗಳಿಗೆ…

Read More