Subscribe to Updates
Get the latest creative news from FooBar about art, design and business.
Author: kannadanewsnow09
ಬಾಂಗ್ಲಾದೇಶ: ಇಲ್ಲಿನ ಕಾಕ್ಸ್ ಬಜಾರ್ ಜಿಲ್ಲೆಯ ವಾಯುಪಡೆಯ ನೆಲೆಯ ಮೇಲೆ ಸೋಮವಾರ ದುಷ್ಕರ್ಮಿಗಳು ನಡೆಸಿದಂತ ಗುಂಡಿನ ದಾಳಿಯಲ್ಲಿ ಕನಿಷ್ಠ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಮಿಲಿಟರಿ ದೃಢಪಡಿಸಿದೆ. ಮೂಲಗಳ ಪ್ರಕಾರ, ಸಂತ್ರಸ್ತನನ್ನು 30 ವರ್ಷದ ಸ್ಥಳೀಯ ವ್ಯಾಪಾರಿ ಶಿಹಾಬ್ ಕಬೀರ್ ಎಂದು ಗುರುತಿಸಲಾಗಿದೆ. ಬಾಂಗ್ಲಾದೇಶ ಸಶಸ್ತ್ರ ಪಡೆಗಳ ಸಾರ್ವಜನಿಕ ಸಂಪರ್ಕ ವಿಭಾಗವಾದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ಐಎಸ್ಪಿಆರ್) ಸಂಕ್ಷಿಪ್ತ ಹೇಳಿಕೆಯಲ್ಲಿ, “ಕಾಕ್ಸ್ ಬಜಾರ್ ವಾಯುಪಡೆಯ ನೆಲೆಯ ಪಕ್ಕದಲ್ಲಿರುವ ಸಮಿತಿ ಪ್ಯಾರಾದ ಕೆಲವು ಅಪರಾಧಿಗಳು ಕಾಕ್ಸ್ ಬಜಾರ್ ವಾಯುಪಡೆಯ ನೆಲೆಯ ಮೇಲೆ ದಾಳಿ ನಡೆಸಿದರು. ಈ ನಿಟ್ಟಿನಲ್ಲಿ ಬಾಂಗ್ಲಾದೇಶ ವಾಯುಪಡೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದಿದೆ. ಮಾಹಿತಿಯ ಪ್ರಕಾರ ಹಿಂದಿನ ದಿನ ಭೂ ವಿವಾದ ಭುಗಿಲೆದ್ದ ಕೆಲವೇ ಗಂಟೆಗಳ ನಂತರ ಈ ದಾಳಿ ನಡೆದಿದ್ದು, ಇದು ವಾಯುಪಡೆಯ ಸಿಬ್ಬಂದಿ ಮತ್ತು ಸ್ಥಳೀಯ ನಿವಾಸಿಗಳ ನಡುವೆ ಘರ್ಷಣೆಗೆ ಕಾರಣವಾಯಿತು. ಆದಾಗ್ಯೂ, ಸ್ಥಳೀಯರು ಕಲ್ಲುಗಳನ್ನು ಎಸೆದಿದ್ದರಿಂದ ಘರ್ಷಣೆ ಹಿಂಸಾತ್ಮಕವಾಗಿ ಮಾರ್ಪಟ್ಟಿತು, ಇದು ಎರಡೂ ಕಡೆ ಗಾಯಗಳಿಗೆ…
ಬೆಂಗಳೂರು : ಬಸವ ತತ್ವ, ವಚನ ಸಂಸ್ಕೃತಿ, ಶರಣರ ಹೋರಾಟದ ಬಗ್ಗೆ ನಮ್ಮ ಸರ್ಕಾರಕ್ಕೆ ಪೂರ್ಣ ಬದ್ಧತೆ ಇದ್ದು, ಪೂಜ್ಯರ ಬೇಡಿಕೆಗಳಲ್ಲಿ ಸಾಧ್ಯ ಇರುವವಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಕಾವೇರಿ ನಿವಾಸದಲ್ಲಿ ತಮ್ಮನ್ನು ಭೇಟಿಯಾದ ಲಿಂಗಾಯತ ಸ್ವಾಮೀಜಿಗಳು, ಸಚಿವರು, ಶಾಸಕರು, ಸಮಾಜದ ಮುಖಂಡರ ಸಭೆಯಲ್ಲಿ ಮಾತನಾಡಿದರು. ಮೊದಲ ಬಾರಿ ಮುಖ್ಯಮಂತ್ರಿ ಆದಾಗ ಬಸವ ಜಯಂತಿಯಂದೇ ಪ್ರಮಾಣವಚನ ಸ್ವೀಕರಿಸಿದೆ. ಬಸವಣ್ಣನವರ ಭಾವಚಿತ್ರ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯಗೊಳಿಸಿದ್ದು ನಮ್ಮದೇ ಕಾಂಗ್ರೆಸ್ ಸರ್ಕಾರ ಎಂದರು. ಬಸವಣ್ಣನವರ ವಿಚಾರ ಮತ್ತು ಹೋರಾಟ ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಪೂರಕ. ಜಾತಿವಾದಿ ಪಟ್ಟಭದ್ರರಿಗೆ ಬಸವಣ್ಣನವರ ವಿಚಾರಗಳು ಹಿಡಿಸಲ್ಲ. ಪಟ್ಟಭದ್ರರು ಬಹಿರಂಗವಾಗಿ ಬಸವಣ್ಣನವರನ್ನು ವಿರೋಧಿಸಲು ಸಾಧ್ಯವಿಲ್ಲ. ಅದಕ್ಕೇ ಆಂತರಿಕವಾಗಿ ವಿರೋಧಿಸುತ್ತಿದ್ದಾರೆ ಎಂದರು. ಜಾತಿ ವ್ಯವಸ್ಥೆ ಬಹಳ ಗಟ್ಟಿಯಾಗಿ ಬೇರೂರಿದೆ. ಇದಕ್ಕೆ ಪಟ್ಟಭದ್ರರು ನೀರು ಗೊಬ್ಬರ ಹಾಕುತ್ತಿದ್ದಾರೆ. ಜಾತ್ಯತೀತ, ಸಮ ಸಮಾಜ ನಿರ್ಮಾಣ ಮಾಡಲು ಬಸವಣ್ಣನವರ ಹೋರಾಟ ಪೂರಕ. ನಮ್ಮ ಜಾತಿ ವ್ಯವಸ್ಥೆಗೆ ಚಲನೆ…
ನೀವು ಕೇಳಿದರೂ ಕಂಡರಿಯದ ತಿಳಿದುಕೊಳ್ಳುವ ಉಪಯುಕ್ತ ಮಾಹಿತಿಗಳು, ಉಪಯುಕ್ತ ವಿಷಯಗಳು ರಾಶೀಗಳು (12) ಮೇಷ, ವೃಷಭ, ಮಿಥುನ, ಕರ್ಕಾಟಕ ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ. ******* ಋತುಗಳು (6) ಮತ್ತು ಮಾಸ (12) ವಸಂತ (ಚೈತ್ರ-ವೈಶಾಖ), ಗ್ರೀಷ್ಮ (ಜೇಷ್ಠ-ಆಷಾಢ) , ವರ್ಷಾ (ಶ್ರಾವಣ-ಭಾದ್ರಪದ), ಶರದ (ಅಶ್ವಿಜ-ಕಾರ್ತಿಕ), ಹೇಮಂತ (ಮಾರ್ಗಶಿರ-ಪುಷ್ಯ), ಶಿಶಿರ (ಮಾಘ-ಫಾಲ್ಗುಣ). ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಇಲ್ಲಿ ಪರಿಹಾರ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ,…
ಬೆಂಗಳೂರು: ನಗರದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ, ಮಹಿಳೆಯರನ್ನು ಅಕ್ರಮವಾಗಿ ಇರಿಸಿಕೊಂಡು ವೇಶ್ಯಾವಾಟಿಕೆಗೆ ತಳ್ಳಲಾಗುತ್ತಿತ್ತು. ಈ ರೀತಿ ವೇಶ್ಯಾವಾಟಿಕೆಗೆ ತಳ್ಳಿದ್ದಂತ ಇಬ್ಬರು ಸಂತ್ರಸ್ತ ಮಹಿಳೆಯರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಬೆಂಗಳೂರಲ್ಲಿ ಸಿ.ಸಿ.ಬಿ ಮಹಿಳಾ ಸಂರಕ್ಷಣಾ ದಳದ ಭರ್ಜರಿ ಕಾರ್ಯಾಚರಣೆ ನಡೆಸಿದೆ. ಉದ್ಯೋಗ ಕೊಡಿಸುವುದಾಗಿ ನಂಬಿಸಿ, ಮಹಿಳೆಯರನ್ನು ಅಕ್ರಮವಾಗಿಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಯ ಮೇಲೆ ದಾಳಿ, ಇಬ್ಬರು ಸಂತಸ್ತ ಮಹಿಳೆಯರ ರಕ್ಷಣೆ ಮಾಡಲಾಗಿದೆ. ಸಿಸಿಬಿಯ ಮಹಿಳಾ ಸಂರಕ್ಷಣಾ ದಳದ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ದಿನಾಂಕ:18/02/2025 ರಂದು ಬಾತ್ಮೀದಾರರಿಂದ ಖಚಿತ ಮಾಹಿತಿಯೊಂದು ದೊರೆತಿರುತ್ತದೆ. ಮಾಹಿತಿಯಲ್ಲಿ ಬೆಂಗಳೂರು ನಗರ, ಈಶಾನ್ಯ ವಿಭಾಗದ, ಕೋಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಹೊರ ಜಿಲ್ಲೆ/ಹೊರ ರಾಜ್ಯ ದಿಂದ ಇಬ್ಬರು ಮಹಿಳೆಯರನ್ನು ಉದ್ಯೋಗ ಕೊಡಿಸುತ್ತೇನೆಂದು ನಂಬಿಸಿ, ಮಾನವ ಕಳ್ಳ ಸಾಗಣೆಯಲ್ಲಿ ತೊಡಗಿಸಿ, ಮನೆಯಲ್ಲಿರಿಸಿಕೊಂಡು ಇಬ್ಬರಿಗೂ ಹಣದ ಆಮಿಷವೊಡ್ಡಿ, ಮೊಬೈಲ್ ನಂಬರ್ಗಳಿಂದ ಪರಿಚಯಸ್ಥ ಗಿರಾಕಿಗಳನ್ನು ಸಂಪರ್ಕಿಸಿ, ಮನೆಗೆ ಬರಮಾಡಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಾ ಅಕ್ರಮ ಹಣ ಸಂಪಾದನೆ ಮಾಡುತ್ತಿರುವ ಬಗ್ಗೆ ಮಾಹಿತಿಯಲ್ಲಿ ತಿಳಿಸಿರುತ್ತಾರೆ.…
ಶಿವಮೊಗ್ಗ: ಮುಂದಿನ ಶೈಕ್ಷಣಿಕ ಸಾಲಿನಿಂದಲೇ ರಾಜ್ಯದಲ್ಲಿ 8 ರಿಂದ 12 ನೇ ತರಗತಿಯ ವರೆಗಿನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಪಠ್ಯ ಚಟುವಟಿಕೆಗಳೊಂದಿಗೆ ಕೌಶಲ್ಯಧಾರಿತ ತರಗತಿಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಹೇಳಿದರು. ಇವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನಪಾಯ ಇಲಾಖೆ, ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ, ಇವರುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಆಚಾರ್ಯ ತುಳಸಿ ಶಿಕ್ಷಣ ಮಹಾವಿದ್ಯಾಲಯದ ಆವರಣದಲ್ಲಿ ಏರ್ಪಡಿಸಲಾಗಿದ್ದ ಕೌಶಲ್ಯ ಮತ್ತು ರೋಜ್ ಗಾರ್ ಉದ್ಯೋಗಮೇಳವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಮಕ್ಕಳು ಪ್ರಾಥಮಿಕ ಶಿಕ್ಷಣ ಪಡೆಯುವ ಹಂತದಲ್ಲಿಯೇ ಕೌಶಲ್ಯಧಾರಿತ ಶಿಕ್ಷಣ ನೀಡುವುದರಿಂದ ಅವರ ಭವಿಷ್ಯದ ಬದುಕು ಉಜ್ವಲವಾಗಲಿದೆ ಅಲ್ಲದೆ ತಮಗಿಷ್ಟವಾದ ಕ್ಷೇತ್ರದಲ್ಲಿ ನೈಪುನ್ಯತೆ ಪಡೆದು, ಅಪೇಕ್ಷೆಯ ಉದ್ಯೋಗ ಪಡೆದು ಸ್ವಾವಲಂಬಿ ಜೀವನ ನಡೆಸಬಹುದಾಗಿದೆ ಎಂದರು. ತಾಲೂಕು ಮಟ್ಟದಲ್ಲಿ ಉದ್ಯೋಗ ಮೇಳಗಳನ್ನು ಆಯೋಜಿಸಿದಲ್ಲಿ…
ಬೆಂಗಳೂರು: ಫೆಬ್ರವರಿ.26ರಂದು ಮಹಾ ಶಿವರಾತ್ರಿ ಹಿನ್ನಲೆಯಲ್ಲಿ ಬೆಂಗಳೂರಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ ಆದೇಶ ಹೊರಡಿಸಿದೆ. ಈ ಬಗ್ಗೆ ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದು, ದಿನಾಂಕ: 26-02-2025 ಬುಧವಾರದಂದು “ಮಹಾ ಶಿವರಾತ್ರಿ ಹಬ್ಬ”ದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/attack-on-conductor-in-belagavi-condemnable-appropriate-action-will-be-taken-against-culprits-minister-laxmi-hebbalkar/ https://kannadanewsnow.com/kannada/breaking-good-news-for-motorists-in-the-state-hsrp-number-plate-installation-extended-till-march-31/
ಬೆಳಗಾವಿ: ಬೆಳಗಾವಿಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕನ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಸರ್ಕಾರಿ ನೌಕರನ ಮೇಲೆ ಹಲ್ಲೆ ಮಾಡಿದ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇ ಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಕುವೆಂಪುನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ ಸಚಿವರು, ಘಟನೆ ನಡೆದ ತಕ್ಷಣವೇ ನಾನು ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ, ಆರೋಪಿಗಳನ್ನು ಬಂಧಿಸುವಂತೆ ಸೂಚನೆ ನೀಡಿದೆ. ಬೆಳಗಾವಿಯಲ್ಲಿ ಭಾಷಾ ಸೌಹಾರ್ದತೆ ವೃದ್ಧಿಸುತ್ತಿದೆ, ನಾಡ ಪ್ರೇಮ ಪಸರಿಸುತ್ತಿದೆ. ಇದರ ಮಧ್ಯೆ ಸಮಾಜಘಾತುಕ ಕಿಡಿಗೇಡಿಗಳು ಭಾಷೆಯ ಹೆಸರಿನಲ್ಲಿ ಪುಂಡತನ ಮೆರೆಯುತ್ತಿರುವುದು ಅತ್ಯಂತ ಖಂಡನೀಯ ಎಂದರು. ನಾವು ಎಲ್ಲರೂ ಸ್ವರಾಜ್ಯದ ಬಗ್ಗೆ ಮಾತನಾಡುತ್ತೇವೆ. ನಾವು ಮೊದಲಿಗೆ ಭಾರತೀಯರು, ಕನ್ನಡಿಗರು, ಕರ್ನಾಟಕದ ಸುವರ್ಣ ಮಹೋತ್ಸವನ್ನು ಅದ್ದೂರಿಯಾಗಿ ಅಚರಿಸಿದ್ದೇವೆ. ಸ್ವರಾಜ್ಯದ ಬಗ್ಗೆ ಮಾತನಾಡುವಾಗ ಕೆಲವೊಂದು ಪುಂಡರು ಬಂದು ರಾಜಕಾರಣದ ಬೇಳೆ ಬೇಯಿಸಿಕೊಳ್ಳಲು ಮುಂದಾಗಿರುವುದನ್ನು ಖಂಡಿಸುತ್ತೇನೆ ಎಂದು ಹೇಳಿದರು. ನನ್ನ ಕ್ಷೇತ್ರದಲ್ಲಿ ಈ ಘಟನೆ ನಡೆದಿದ್ದು, ನಾವು ಭಾಷಾ ವಿವಾದವನ್ನೇ…
ಬೆಂಗಳೂರು: ನಗರದಲ್ಲಿ ಬೇಸಿಗೆಗೆ ಮುನ್ನವೇ ಬೆಂಗಳೂರಲ್ಲಿ ನೀರಿನ ಅಭಾವ ತಪ್ಪಿಸೋ ನಿಟ್ಟಿನಲ್ಲಿ ಕ್ರಮ ವಹಿಸಲಾಗುತ್ತಿದೆ. ಬೆಂಗಳೂರು ನಗರದಲ್ಲಿರುವಂತ ಆರ್ ಓ ಕೇಂದ್ರಗಳ ನಿರ್ವಹಣೆಯನ್ನು ಬಿಬಿಎಂಯಿಂದ ಬೆಂಗಳೂರು ಜಲಮಂಡಳಿಗೆ ಹಸ್ತಾಂತರಿಸುವಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶಿದ್ದಾರೆ. ಈ ಸಂಬಂಧ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರವನ್ನು ಬರೆದಿದ್ದಾರೆ. ಪತ್ರದಲ್ಲಿಬೆಂಗಳೂರು ನಗರದ ನಾಗರೀಕರಿಗೆ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸುವ ಜವಾಬ್ದಾರಿಯನ್ನು ಬೆಂಗಳೂರು ಜಲಮಂಡಳಿಯು ನಿರ್ವಹಿಸುತ್ತಿದೆ. ಪ್ರಸ್ತುತ ಶುದ್ದ ಕುಡಿಯುವ ನೀರಿನ ಘಟಕ (ಆರ್.ಓ. ಪ್ಲಾಂಟ್ಗಳ) ನಿರ್ವಹಣೆಯನ್ನು ಬಿ.ಬಿ.ಎಂ.ಪಿಯು ನಿರ್ವಹಿಸುತ್ತಿದ್ದು, ಒಂದು ವೇಳೆ ಕೊಳವೆಬಾವಿಗಳು ಬತ್ತು ಹೋದಲ್ಲಿ ಆರ್.ಓ ಘಟಕಕ್ಕೆ ಬೇಕಾಗುವ ನೀರನ್ನು ಬೆಂಗಳೂರು ಜಲಮಂಡಳಿಯ ಮುಖಾಂತರವೇ ಪೂರೈಸಬೇಕಾಗುತ್ತದೆ. ಈ ಸಮಯದಲ್ಲಿ ಸಮನ್ವಯದ ಕೊರತೆ ಉಂಟಾಗಿ ನಾಗರೀಕರಿಗೆ ತೊಂದರೆ ಆಗುವುದನ್ನು ತಪ್ಪಿಸುವ ದೃಷ್ಟಿಯಿಂದ ಹಾಗೂ ಬೆಂಗಳೂರು ನಗರದ ನೀರು ಸರಬರಾಜಿನ ನಿರ್ವಹಣೆಯನ್ನು ಮಾಡುತ್ತಿರುವ ಬೆಂಗಳೂರು ಜಲಮಂಡಳಿಯವರೇ ಆರ್.ಓ. ಪ್ಲಾಂಟ್ಗಳ ನಿರ್ವಹಣೆಯನ್ನು ಮಾಡುವುದು ಸೂಕ್ತವಾಗಿರುತ್ತದೆ ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ, ಕೂಡಲೇ ಆರ್.ಓ ಪ್ಲಾಂಟ್ಗಳ…
ಶಿವಮೊಗ್ಗ: ಸಾಗರ ತಾಲ್ಲೂಕು ಆಡಳಿತದಿಂದ ರೈತರ ಜೊತೆಗೆ ಚೆಲ್ಲಾಟ ಎನ್ನುವಂತೆ ಪದೇ ಪದೇ ಭೂ ನ್ಯಾಯ ಮಂಡಳಿ ಸಭೆ ಮುಂದೂಡಿಕೆ ಮಾಡಲಾಗುತ್ತಿದೆ. ಕೂಡಲೇ ಸಭೆ ನಡೆಸಿ ರೈತರ ಸಮಸ್ಯೆ ಪರಿಹರಿಸುವ ಕೆಲಸ ಮಾಡುವಂತೆ ಸಾಗರ ತಾಲ್ಲೂಕು ರೈತ ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ.ಇ ಒತ್ತಾಯಿಸಿದರು. ಇಂದು ಸಾಗರದ ಉಪ ವಿಭಾಗೀಯ ಅಧಿಕಾರಿಗಳ ಕಚೇರಿ ಬಳಿ ಸಾಗರ ತಾಲ್ಲೂಕು ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಅಲ್ಲದೇ ಎಸಿಗೆ ಮನವಿ ಪತ್ರವನ್ನು ನೀಡಲಾಯಿತು. ಈ ವೇಳೆ ಮಾತನಾಡಿದಂತ ಅವರು, ಭೂ ನ್ಯಾಯ ಮಂಡಳಿ ಸ್ಥಾಪನೆಯಾಗಿ 4 ತಿಂಗಳು ಕಳೆಯುತ್ತಿದೆ. ರೈತರ ಸಮಸ್ಯೆ ಇತ್ಯರ್ಥ ಪಡಿಸಲು ನಾಲ್ಕು ಬಾರಿ ಸಭೆ ಕರೆಯಲಾಗಿತ್ತು. ಆದರೆ ಒಂದು ಸಭೆ ನಡೆಸದೇ ಪದೇ ಪದೇ ಮುಂದೂಡಿಕೆ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು. ಜನವರಿಯಿಂದ ಫೆಬ್ರವರಿ ವರೆಗೆ ನಾಲ್ಕು ಸಭೆ ನಿಗದಿ ಮಾಡಲಾಗಿತ್ತು. ಸಂಬಂಧಪಟ್ಟ ರೈತರಿಗೂ ನೋಟಿಸ್ ನೀಡಲಾಗಿತ್ತು. ತಮ್ಮ ಸಮಸ್ಯೆ ಇತ್ಯರ್ಥಕ್ಕೆ ಸಭೆಗೆ ಬರುವಂತೆ ನೋಟಿಸ್ ನಲ್ಲಿ ತಿಳಿಸಲಾಗಿತ್ತು.…
ಪ್ರತಿದಿನ ಮಲಗುವ ಮುನ್ನ ಈ 1 ಪದವನ್ನು ಯಾರಿಗೂ ತಿಳಿಯದಂತೆ ಹೇಳಿ ಮತ್ತು ಮನೆಯೊಳಗೆ ಈ ಒಂದು ವಸ್ತುವನ್ನು ಬಾಗಿಲಲ್ಲಿ ನಿಂತು ಊದಿ. ಹಣ ನಿಮ್ಮ ಮನೆಗೆ ಕಂತುಗಳಲ್ಲಿ ಮಾತ್ರ ಬರುತ್ತದೆ. ಹಣದ ಕಾಗುಣಿತ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ…