Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಪ್ರಯಾಣಿಕರ ಅನುಕೂಲತೆ ಮತ್ತು ಡಿಜಿಟಲ್ ಪ್ರವೇಶವನ್ನು ಹೆಚ್ಚಿಸುವ ಪ್ರಮುಖ ಹೆಜ್ಜೆಯಾಗಿ, ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗವು ನಿಲ್ದಾಣ ಸಂಚರಣೆಗೆ QR ಆಧಾರಿತ ವೆಬ್ ಅಪ್ಲಿಕೇಶನ್ “ನಮ್ಮ ನಕ್ಷೆ” ಅನ್ನು ವಿಭಾಗದಾದ್ಯಂತ 14 ನಿಲ್ದಾಣಗಳಿಗೆ ವಿಸ್ತರಿಸಿದೆ. ಆರಂಭದಲ್ಲಿ ಕೆಎಸ್ಆರ್ ಬೆಂಗಳೂರು ನಿಲ್ದಾಣದಲ್ಲಿ ಪ್ರಾರಂಭಿಸಲಾದ ನಮ್ಮ ನಕ್ಷೆ ಸೌಲಭ್ಯವು ಈಗ SMVT ಬೆಂಗಳೂರು, ಬಂಗಾರಪೇಟೆ ಜಂಕ್ಷನ್, ಕೆಂಗೇರಿ, ಕೃಷ್ಣರಾಜಪುರಂ, ಯಲಹಂಕ ಜಂಕ್ಷನ್, ಕರ್ಮೇಲಾರಾಮ್, ಹೊಸೂರು, ಹಿಂದೂಪುರ, ಮಂಡ್ಯ, ರಾಮನಗರ, ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ, ತುಮಕೂರು ಮತ್ತು ವೈಟ್ಫೀಲ್ಡ್ ನಿಲ್ದಾಣಗಳಲ್ಲಿ ಲಭ್ಯವಿದೆ. www.nammanakshe.com ನಲ್ಲಿ ಹೋಸ್ಟ್ ಮಾಡಲಾದ ವೆಬ್ ಆಧಾರಿತ ಅಪ್ಲಿಕೇಶನ್, ನಿಲ್ದಾಣದ ಆವರಣದಲ್ಲಿ ಪ್ರದರ್ಶಿಸಲಾದ QR ಕೋಡ್ ಅನ್ನು ಸ್ಕ್ಯಾನ್ ಮಾಡುವ ಮೂಲಕ ಪ್ರವೇಶಿಸಬಹುದಾದ ಸಂವಾದಾತ್ಮಕ ಡಿಜಿಟಲ್ ನಕ್ಷೆಯ ಮೂಲಕ ನೈಜ-ಸಮಯದ, ನಿಲ್ದಾಣ-ನಿರ್ದಿಷ್ಟ ಸಂಚರಣೆ ಸಹಾಯವನ್ನು ಒದಗಿಸುತ್ತದೆ. ಪ್ರಯಾಣಿಕರು ಪ್ಲಾಟ್ಫಾರ್ಮ್ಗಳು, ನಿರ್ಗಮನಗಳು, ಪಾದಚಾರಿ ಮೇಲ್ಸೇತುವೆಗಳು, ಸಬ್ವೇಗಳು, ಕಾಯುವ ಸಭಾಂಗಣಗಳು, ವಿಶ್ರಾಂತಿ ಕೊಠಡಿಗಳು, ಲಿಫ್ಟ್ಗಳು, ಎಸ್ಕಲೇಟರ್ಗಳು, ರ್ಯಾಂಪ್ಗಳು, ಕುಡಿಯುವ ನೀರಿನ ಬಿಂದುಗಳು…
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಬೈಕ್, ಶಾಲಾ ವಾಹನ ಡಿಕ್ಕಿಯಾದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುದ ಚಿಂತಾಮಣಿ ತಾಲ್ಲೂಕಿನ ಬುರುಡುಗುಂಟೆ ಬಳಿಯಲ್ಲಿ ಈ ಘಟನೆ ನಡೆದಿದೆ. ಶಾಲಾ ವಾಹನ ಬೈಕಿಗೆ ಡಿಕ್ಕಿಯಾದ ಪರಿಣಾಮ ಒಂದೇ ಬೈಕಿನಲ್ಲಿ ತೆರಳುತ್ತಿದ್ದಂತ ಮೂವರು ಮಕ್ಕಳು ಸೇರಿದಂತೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಶಿವಮೊಗ್ಗ: ಜಿಲ್ಲಾ ರೈತ ಸಂಘದ ಅಧ್ಯಕ್ಷ ದಿನೇಶ್ ಶಿರವಾಳ ದೀಪಾವಳಿ ಗೋಪೂಜೆ ಸಂದರ್ಭದಲ್ಲಿ ಸಾಗರದ ತಮ್ಮ ಮನೆಯ ಜಾನುವಾರುಗಳ ಮೇಲೆ ಶರಾವತಿ ಪಂಪ್ಡ್ ಸ್ಟೋರೇಜ್ ವಿರೋಧಿಸಿ ಹೇಳಿಕೆಗಳನ್ನು ಬರೆಯುವ ಮೂಲಕ ಗಮನ ಸೆಳೆದಿದ್ದಾರೆ. ಮಲೆನಾಡು ಭಾಗದಲ್ಲಿ ಗೋಪೂಜೆ ಸಂದರ್ಭದಲ್ಲಿ ಗೋವುಗಳನ್ನು ಶೃಂಗರಿಸುವುದು ನಡೆದುಕೊಂಡು ಬಂದ ಪದ್ದತಿಯಾಗಿದೆ. ದಿನೇಶ್ ಶಿರವಾಳ ಅವರು ತಮ್ಮ ಗೋವಿನ ಮೇಲೆ ಬಣ್ಣದ ಚಿತ್ತಾರದ ಬದಲು ಶರಾವತಿ ಉಳಿಸಿ, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಬೇಡ ಎಂಬಿತ್ಯಾದಿ ಘೋಷಣೆಗಳನ್ನು ಬರೆಯುವ ಮೂಲಕ ವಿಶೇಷ ರೀತಿಯಲ್ಲಿ ರಾಜ್ಯ ಸರ್ಕಾರದ ಪಂಪ್ಡ್ ಸ್ಟೋರೇಜ್ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವಂತ ಅವರು, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಕೈಬಿಡಲು ಈಗಾಗಲೆ ರಾಜ್ಯ ಸರ್ಕಾರಕ್ಕೆ ರೈತ ಸಂಘದ ನೇತೃತ್ವದಲ್ಲಿ ೧೨ ದಿನಗಳ ನಿರಂತರ ಪ್ರತಿಭಟನೆ ನಡೆಸಿ ಒತ್ತಾಯ ಮಾಡಿದ್ದೇವೆ. ರಾಜ್ಯದ ಬೇರೆಬೇರೆ ಭಾಗಗಳಿಂದ ವಿವಿಧ ಮಠಾಧೀಶರು, ಚುನಾಯಿತ ಪ್ರತಿನಿಧಿಗಳು, ಪರಿಸರ ಹೋರಾಟಗಾರರು, ಬೆಂಬಲ ನೀಡಿದ್ದಾರೆ. ಯೋಜನೆ ಕೈಬಿಡುವವರೆಗೂ ಹೋರಾಟ ಒಂದಿಲ್ಲೊಂದು ರೀತಿಯಲ್ಲಿ…
ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿಗಳ ಕುರ್ಚಿಯೂ ಖಾಲಿ ಇಲ್ಲ, ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಹುದ್ದೆಯೂ ಖಾಲಿ ಇಲ್ಲ. ಈ ಬಗ್ಗೆ ಚರ್ಚೆಯೇ ಅಪ್ರಸ್ತುತ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪ್ರತಿಕ್ರಿಯಿಸಿದ್ದಾರೆ. ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಗೆ ಸಂಬಂಧಿಸಿದಂತೆ ಮಾಧ್ಯಮ ಮಿತ್ರರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ವಿಧಾನಪರಿಷತ್ ಸದಸ್ಯರಾದ ಯತೀಂದ್ರ ಅವರ ಮಾತುಗಳನ್ನು ಮುಖ್ಯಮಂತ್ರಿಗಳ ಧ್ವನಿ ಎಂಬಂತೆ ಬಿಂಬಿಸುವುದು ಸರಿಯಲ್ಲ. ಈಗಾಗಲೇ ಯತೀಂದ್ರ ಅವರೇ ತಮ್ಮ ಹೇಳಿಕೆಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ್ದು, ತಾವು ಏನೂ ಹೇಳುವ ಅಗತ್ಯವಿಲ್ಲ ಎಂದರು. ಯಾವುದೇ ಜಾತಿ, ಮತ, ಧರ್ಮದ ಆಧಾರದ ಮೇಲೆ ನಾಯಕತ್ವ ನಿರ್ಧಾರ ಆಗುವುದಿಲ್ಲ ಎಂದ ಈಶ್ವರ ಖಂಡ್ರೆ, ಪಕ್ಷ 2028ರಲ್ಲೂ ಮರಳಿ ಅಧಿಕಾರಕ್ಕೆ ಬರಲಿದ್ದು, ಆಗ ಪಕ್ಷದ ವರಿಷ್ಠರು, ಸೂಕ್ತ ಸಂದರ್ಭದಲ್ಲಿ, ಎಲ್ಲ ಜಾತಿ, ಸಮುದಾಯದವರ ಅಭಿಪ್ರಾಯ ಪಡೆದು ನಿರ್ಧಾರ ಕೈಗೊಳ್ಳುತ್ತಾರೆ ಎಂದರು. ನವೆಂಬರ್ ಕ್ರಾಂತಿ ಎಂಬುದು ಸಂಪೂರ್ಣ ಭ್ರಾಂತಿ, ರಾಜ್ಯ ಸರ್ಕಾರ ಮುಖ್ಯಮಂತ್ರಿ…
ಬೆಂಗಳೂರು: ಐತಿಹಾಸಿಕ ಶಕ್ತಿ ದೇವತೆ ಹಾಸನಾಂಬೆ ಸನ್ನಿಧಿಯಲ್ಲಿ ಈ ವರ್ಷ ಸಾರ್ವಜನಿಕರ ದರ್ಶನದ ಸಂಖ್ಯೆ ಹೊಸ ದಾಖಲೆ ಬರೆದಿದೆ. ಕಳೆದ 13 ದಿನಗಳಲ್ಲಿ ಬರೋಬ್ಬರಿ 26 ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಶಕ್ತಿ ದೇವತೆಯ ದರ್ಶನ ಪಡೆದಿದ್ದಾರೆ. ಈ ಭಾರಿ ಜನಸಾಗರಕ್ಕೆ ಮುಖ್ಯ ಕಾರಣ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಶಕ್ತಿ ಯೋಜನೆ’ ಎಂದು ವಿಧಾನ ಪರಿಷತ್ ಶಾಸಕರು ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರು ಆಗಿರುವ ದಿನೇಶ್ ಗೂಳಿಗೌಡ ಬಣ್ಣಿಸಿದ್ದಾರೆ. ಮಹಿಳಾ ಭಕ್ತರು ಅಪಾರ-ಇದು ಶಕ್ತಿ ಯೋಜನೆ ಎಫೆಕ್ಟ್: ರಾಜ್ಯ ಸರ್ಕಾರವು ಘೋಷಿಸಿದ ಪಂಚ ಗ್ಯಾರಂಟಿಗಳ ಪೈಕಿ ಒಂದಾದ ‘ಶಕ್ತಿ’ ಯೋಜನೆ ಜಾರಿಯಾದ ನಂತರ, ರಾಜ್ಯದ ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್ಗಳಲ್ಲಿ ಪ್ರಯಾಣಿಸುತ್ತಿದ್ದು, ಇದು ಎಲ್ಲ ಧಾರ್ಮಿಕ ಕೇಂದ್ರಗಳ ಆದಾಯ ಮತ್ತು ಭಕ್ತರ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸಿದೆ. ಇದಕ್ಕೆ ಈಗ ಹಾಸನಾಂಬೆಯ ದರ್ಶನವೇ ಸಾಕ್ಷಿ. ಪ್ರತಿ ವರ್ಷ ಹಾಸನಾಮಿ ದರ್ಶನಕ್ಕೆ ನಾಲ್ಕರಿಂದ ಐದು ಲಕ್ಷ ಜನರಷ್ಟೇ ಸೇರುತ್ತಿದ್ದರು. ಆದರೆ ರಾಜ್ಯ ಸರ್ಕಾರ ಉಚಿತವಾಗಿ…
ಈ 3 ರಾಶಿಯವರಿಗೆ ಶರೀರದಲ್ಲಿ ಇಂತಹ ಲಕ್ಷಣಗಳು ಕಂಡುಬಂದರೆ ಆವರಿಗೆ ಶನಿದೇವರ ಕೃಪೆ ಆರಂಭವಾಗಿದೆ ಅನ್ನುವ ಸೂಚನೆ ಅದಾಗಿದೆ, ಯಾವ ಲಕ್ಷಣಗಳು ನೋಡಿ…!! ಈ ಭೂಮಿಯ ಮೇಲೆ ಜನರು ಹೆಚ್ಚಾಗಿ ಹೆದರುವ ದೇವರು ಅಂದರೆ ಶನಿದೇವ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ಶನಿ ದೇವರು ಮಾನವ ಮಾಡುವ ಪಾಪ ಕರ್ಮಗಳಿಗೆ ಅಂಗವಾಗಿ ಅವರು ಪುಣ್ಯ ಮತ್ತು ಶಿಕ್ಷೆಯನ್ನ ಕೊಡುವ ಕಾರಣ ಜನರು ತಪ್ಪು ಮಾಡುವ ಮುನ್ನ ಒಮ್ಮೆ ಶನಿ ದೇವರನ್ನ ಜ್ಞಾಪಕ ಮಾಡುತ್ತಾರೆ ಎಂದು ಹೇಳಬಹುದು. ಇನ್ನು ಶನಿ ದೇವರ ದೃಷ್ಟಿಯಿಂದ ಪಾರಾಗಲು ಜನರು ಶನಿ ದೇವರ ವೃತ ಮತ್ತು ಎಳ್ಳೆಣ್ಣೆಯ ದೀಪವನ್ನ ಶನಿ ದೇವರಿಗೆ ಹಚ್ಚುವುದರ ಮೂಲಕ ಶನಿಯ ಆರಾಧನೆಯನ್ನ ಮಾಡುತ್ತಾರೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಪಂಡಿತರು ಮತ್ತು ಶಾಸ್ತ್ರ ಹೇಳುವ ಪ್ರಕಾರ ಮಾನವನ ಶರೀರದಲ್ಲಿ ಇಂತಹ ಲಕ್ಷಣಗಳು ಕಂಡುಬಂದರೆ ಶನಿ ದೇವರ ಕೃಪೆ ಅವರ ಮೇಲೆ ಇದೆ ಅನ್ನುವ ಸೂಚನೆ ಆದಾಗಿದೆ ಎಂದು ಶಾಸ್ತ್ರ ಹೇಳುತ್ತದೆ. ಹಾಗಾದರೆ…
ಬೆಂಗಳೂರು: ರಾಜ್ಯದ ರಾಜಧಾನಿಯಲ್ಲಿ ಎರಡನೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ಸ್ಥಳ ಪರಿಶೀಲನೆ ಮಾಡಿಕೊಂಡು ಹೋಗಿರುವ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು (ಎಎಐ) ಇನ್ನು 2-3 ದಿನಗಳಲ್ಲಿ ವರದಿ ಕೊಡಲಿದೆ. ಇದಾದ ನಂತರ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಗುರುವಾರ ಹೇಳಿದ್ದಾರೆ. ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಎರಡನೆಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ನಮಗೆ 2033ರವರೆಗೂ ನಿರ್ಬಂಧವಿದೆ. ಆದರೆ, ಈಗಿನಿಂದಲೇ ಅಗತ್ಯ ಪ್ರಕ್ರಿಯೆಗಳನ್ನು ಆರಂಭಿಸಿದರೆ ಅಷ್ಟು ಹೊತ್ತಿಗೆ ಮುಗಿಸಬಹುದು. ಒಂದು ವಿಮಾನ ನಿಲ್ದಾಣ ನಿರ್ಮಿಸಲು ಕನಿಷ್ಠ ಪಕ್ಷ ಐದಾರು ವರ್ಷಗಳಾದರೂ ಹಿಡಿಯುತ್ತದೆ ಎಂದಿದ್ದಾರೆ. ಎಎಐ ತಾನು ಪರಿಶೀಲಿಸಿರುವ ಎರಡು ಸ್ಥಳಗಳಿಗೂ ಹಸಿರು ನಿಶಾನೆ ತೋರಿಸಬಹುದು. ನಾವೂ ಒಂದು ಕಡೆ ಐದಾರು ಸಾವಿರ ಎಕರೆ ಭೂಮಿ ಕೊಡಬಹುದು. ಆದರೆ ವಿಮಾನ ನಿಲ್ದಾಣ ನಿರ್ಮಾಣ ಸಂಸ್ಥೆಗಳು ಇದು ಆರ್ಥಿಕವಾಗಿ ಲಾಭದಾಯಕವೇ ಎನ್ನುವಂತಹ ಅಂಶಗಳನ್ನು ನೋಡುತ್ತವೆ. ಇದೊಂದು…
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆವಿ IISC ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 25.10.2025 (ಶನಿವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 02:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಮಲ್ಲೇಶ್ವರಂ, ಎಂ.ಡಿ.ಬ್ಲಾಕ್, ವೈಯಾಲಿಕಾವಲ್, ಈಜುಕೊಳ ವಿಸ್ತರಣೆ, ಕೋದಂಡರಾಮಪುರ, ರಂಗನಾಥಪುರ, ಬಿಎಚ್ಇಎಲ್, ಐಐಎಸ್ಸಿ ಬ್ರೈನ್ ಸೆಂಟರ್, ಅಂಬೇಡ್ಕರ್ ನಗರ, ಯಶವಂತಪುರ ಪೈಪ್ಲೈನ್ ರಸ್ತೆ, ಎಲ್ಎನ್ ಕಾಲೋನಿ, ಸುಬೇದಾರಪಾಳ್ಯ, ದಿವಾನರ, ಪಾಳ್ಯ, ಕೆ.ಎನ್. ವಿಸ್ತರಣೆ, ಯಶವಂತಪುರ 1ನೇ ಮುಖ್ಯರಸ್ತೆ, ಎಚ್.ಎಂ.ಟಿ. ಮುಖ್ಯ ರಸ್ತೆ, ಮಾಡೆಲ್ ಕಾಲೋನಿ, ಶರೀಫ್ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ. https://kannadanewsnow.com/kannada/kea-important-information-about-certificate-download-for-those-who-passed-the-compulsory-kannada-examination/ https://kannadanewsnow.com/kannada/the-biggest-eclipse-the-state-is-facing-is-congress-rule-mp-tejasvi-surya/
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಇದೆ. ಕಡ್ಡಾಯ ಕನ್ನಡ ಪರೀಕ್ಷೆ ತೇರ್ಗಡೆಯಾದವರಿಗೆ ಅದನ್ನು ಹೊರತುಪಡಿಸಿ, ಉಳಿದ ಪರೀಕ್ಷೆ ಬರೆಯಬೇಕಿದೆ. ಇದೀಗ ಕಡ್ಡಾಯ ಕನ್ನಡ ಪರೀಕ್ಷೆ ಉತ್ತೀರ್ಣರಾದವರಿಗೆ ಪ್ರಮಾಣ ಪತ್ರ ಡೌನ್ ಲೋಡ್ ಬಗ್ಗೆ ಕೆಇಎ ಮಹತ್ವದ ಮಾಹಿತಿ ಹಂಚಿಕೊಂಡಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಾದಂತ ಹೆಚ್.ಪ್ರಸನ್ನ ಅವರು, ವಿವಿಧ ಇಲಾಖೆಗಳ 708 ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ನಡೆದಿದ್ದು, ಕನ್ನಡ ಕಡ್ಡಾಯ ಪರೀಕ್ಷೆಯಲ್ಲಿ ಉತ್ತೀರ್ಣರಾದವರ ಪ್ರಮಾಣ ಪತ್ರಗಳನ್ನು KEA ವೆಬ್ ಸೈಟ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಲು ಸದ್ಯದಲ್ಲೇ ಲಿಂಕ್ ಬಿಡುಗಡೆ ಮಾಡಲಾಗುವುದು. ಈ ವಿಷಯದಲ್ಲಿ ಗೊಂದಲ ಬೇಡ. ಅರ್ಹರು, ಉತ್ತೀರ್ಣರಾಗಿರುವ ವಿಷಯವನ್ನು ಅರ್ಜಿಯಲ್ಲಿ ನಮೂದಿಸಿ, ನಿಗದಿತ ಅವಧಿಯೊಳಗೆ ಸಲ್ಲಿಸಲು ಸೂಚಿಸಿದ್ದಾರೆ. https://twitter.com/KEA_karnataka/status/1981275970356293892 https://kannadanewsnow.com/kannada/congress-government-is-deadly-for-this-state-legislative-council-opposition-leader-chalavadi-narayanaswamy/ https://kannadanewsnow.com/kannada/the-biggest-eclipse-the-state-is-facing-is-congress-rule-mp-tejasvi-surya/
ಬೆಂಗಳೂರು: ರಾಜ್ಯಕ್ಕೆ ಹಿಡಿದಿರುವ ದೊಡ್ಡ ಗ್ರಹಣವೆಂದರೆ ಕಾಂಗ್ರೆಸ್ ಆಡಳಿತ. ಇನ್ನು ಉಳಿದ ಎರಡೂವರೆ ವರ್ಷದ ನಂತರ ರಾಜ್ಯಕ್ಕೆ ಗ್ರಹಣ ಮುಕ್ತಿಯಾಗುತ್ತದೆ ಎಂದು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ವಿಶ್ಲೇಷಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎರಡೂವರೆ ವರ್ಷಗಳ ನಂತರ ಕರ್ನಾಟಕ ಸೂರ್ಯ ಚಂದ್ರ ಇರುವವರೆಗೂ ಪ್ರಕಾಶಮಾನವಾಗಿ ಬೆಳಗುತ್ತದೆ ಎಂದು ನುಡಿದರು. ಸಿದ್ದರಾಮಯ್ಯ ಅವರೇ, ಕರ್ನಾಟಕಕ್ಕೆ ಹಿಡಿದಿರುವ ಗ್ರಹಣ ನಿಮ್ಮ ಆಡಳಿತ. ನೀವು ಅಧಿಕಾರಕ್ಕೆ ಬಂದು ಸುಮಾರು ಎರಡೂವರೆ ವರ್ಷವಾಗಿದೆ. ಬೆಂಗಳೂರಿನ ರಸ್ತೆ ಗುಂಡಿಗಳಿಂದ ಜನರು ನರಕಯಾತನೆಯನ್ನು ಅನುಭವಿಸುತ್ತಿದ್ದಾರೆ. ನಿಮ್ಮ ಆಡಳಿತ ಎಷ್ಟು ಚೆನ್ನಾಗಿದೆ ಎಂಬುದಕ್ಕೆ ಬೆಂಗಳೂರಿನ ರಸ್ತೆ ಗುಂಡಿಗಳೇ ಸಾಕ್ಷಿ ಎಂದು ವ್ಯಂಗ್ಯವಾಡಿದರು. ಅಮಾವಾಸ್ಯೆ- ಹುಣ್ಣಿಮೆಗೆ ವ್ಯತ್ಯಾಸ ತಿಳಿದಿಲ್ಲ.. ಸಿದ್ದರಾಮಯ್ಯ ಅವರು ಹಿರಿಯರು ಹಾಗೂ ಲೋಕಾನುಭವ ಹೊಂದಿರುವವರು. ಅಮಾವಾಸ್ಯೆಗೂ ಮತ್ತು ಹುಣ್ಣಿಮೆಗೂ ಅವರಿಗೆ ವ್ಯತ್ಯಾಸ ಗೊತ್ತಿಲ್ಲ. ಅಮಾವಾಸ್ಯೆ ದಿನವು ಸೂರ್ಯ ಇರುತ್ತಾನೆ; ಹುಣ್ಣಿಮೆ…














