Author: kannadanewsnow09

ಬೆಂಗಳೂರು: ಅನೇಕ ಪೊಲೀಸ್ ಪೇದೆಗಳು ಕ್ಯಾಪ್ ಬದಲಾವಣೆ ಬಗ್ಗೆ ಮನವಿ ಬಂದಿತ್ತು. ಮಳೆ ಸಂದರ್ಭದಲ್ಲಿ ಸಮಸ್ಯೆಯಾಗುತ್ತಿತ್ತು. ಸಿಎಂ ಅವರು ಪೀಕ್ ಕ್ಯಾಪ್‌ಗಳನ್ನು ಆಯ್ಕೆ ಮಾಡಿದ್ದಾರೆ. ಸದ್ಯದಲ್ಲೆ ಪರಿಚಯಿಸುತ್ತೇವೆ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್ ಮತ್ತು ಬಿಎಂಆರ್‌ಸಿಎಲ್ ಸಹಯೋಗದೊಂದಿಗೆ ಬೆಂಗಳೂರಿನ ಕೋರಮಂಗಲದಲ್ಲಿ ನೂತನವಾಗಿ ನಿರ್ಮಿಸಿರುವ ‘ಕೆಎಸ್‌ಆರ್‌ಪಿ ಸಮುದಾಯ ಭವನ ಉದ್ಘಾಟನಾ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಪಾಲ್ಗೊಂಡು, ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. ಇಡೀ ದೇಶದಲ್ಲಿ ಮೊದಲ ಬಾರಿಗೆ ಕಾರಾಗೃಹ ಅಕಾಡೆಮಿಯ ಕಟ್ಟಡವನ್ನು ಉದ್ಘಾಟಿಸಲಾಗಿದೆ. ಅಲ್ಲದೇ, ಇಷ್ಟು ದೊಡ್ಡ ಕೆಎಸ್ಆರ್‌ಪಿ ಸಮುದಾಯ ಭವನವನ್ನು ನಿರ್ಮಿಸಿಲ್ಲ. ಇದರ ನಿರ್ಮಾಣಕ್ಕೆ ಬಿಎಂಆರ್‌ಸಿಎಲ್ 40 ಕೋಟಿ ರೂ. ನೀಡಿದ್ದಾರೆ. ಶೇಷಾದ್ರಿಪುರ ಪೊಲೀಸ್ ಠಾಣೆ ಕಟ್ಟಡ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಗಿದೆ. ನಮ್ಮ ಇಲಾಖೆ ಮಾನವ ಸಂಪನ್ಮೂಲಗಳ ಇಲಾಖೆ. ನಮ್ಮ ಇಲಾಖೆಯಲ್ಲಿ ದೊಡ್ಡ ಯೋಜನೆಗಳಿಲ್ಲ. ಆದರೆ, ಪೊಲೀಸರೆ ನಮ್ಮ ಇಲಾಖೆಯ ಸಂಪತ್ತು ಎಂದರು. ರಾಜ್ಯದಲ್ಲಿ ಶಾಂತಿ, ಕಾನೂನು ಸುವ್ಯವ್ಥೆ, ಸಾರ್ವಜನಿಕರ ಆಸ್ತಿ ಕಾಪಾಡಲು,…

Read More

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆವಿ ಎಲ್ ಆರ್ ಬಂಡೆ ಉಪಕೇಂದ್ರ ವ್ಯಾಪ್ತಿಯಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 17.07.2025 (ಗುರುವಾರ) ರಂದು ಬೆಳಗ್ಗೆ 10:00 ರಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. “ಕಾವಲಬೈರಸಂದ್ರ, ಎಲ್.ಆರ್.ಬಂಡೆ ಮುಖ್ಯ ರಸ್ತೆ, ಗಾಂಧಿನಗರ, ಚಿನ್ನಣ್ಣ ಲೇಔಟ್, ಅಂಬೇಡ್ಕರ್ ವೈದ್ಯಕೀಯ ಕಾಲೇಜು, ಅನ್ವರ್ ಲೇಔಟ್, ಕಾವೇರಿ ನಗರ, ಸುಲ್ತಾನ್ ಪಾಳ್ಯ, ರಂಕಾನಗರ, ಕನಕನಗರ, ಕೆ.ಎಚ್.ಬಿ.ಮುಖ್ಯ ರಸ್ತೆ, ಭುವನೇಶ್ವರಿ ನಗರ, ಡಿ.ಜೆ.ಹಳ್ಳಿ, ಕೆ.ಜಿ. ಕಾಲೋನಿ, ಕೆ.ಜಿ. ಹಳ್ಳಿ, ಗಣೇಶ ಬ್ಲಾಕ್, ಆತ್ಮಾನಣದ ನಗರ, ಆದರ್ಶ ನಗರ, ವಿ.ನಾಗೇನಹಳ್ಳಿ, ಪೆರಿಯಾರ್ ನಗರ, ಪೆರಿಯಾರ್ ಸರ್ಕಲ್ ಶಾಂಪುರ, ಕುಶಾಲ ನಗರ, ಮೋದಿ ರಸ್ತೆ, ಮೋದಿ ಗಾರ್ಡನ್, ದೊಡ್ಡಣ್ಣ ನಗರ, ಮುನಿವೀರಪ್ಪ ಲೇಔಟ್, ಸುಗಾರ್ ಮಂಡಿ, ಸಾಲ್ಟ್ ಮಂಡಿ, ಮುನೇಶ್ವರ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. ನಾಳೆ  ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ ಶುಕ್ರವಾರ ವಿದ್ಯುತ್‌ ವ್ಯತ್ಯಯದ ವಿವರ:…

Read More

ಬೆಂಗಳೂರು: ಪೊಲೀಸ್ ಸಿಬ್ಬಂದಿಗಳ ಹಿತಾದೃಷ್ಡಿಯಿಂದ ಆರೋಗ್ಯ ತಪಾಸಣಾ ವೆಚ್ಚವನ್ನು 1500 ರೂ.ಗಳಿಗೆ ಹೆಚ್ಚಿಸಲಾಗಿದೆ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್ ಮತ್ತು ಬಿಎಂಆರ್‌ಸಿಎಲ್ ಸಹಯೋಗದೊಂದಿಗೆ ಬೆಂಗಳೂರಿನ ಕೋರಮಂಗಲದಲ್ಲಿ ನೂತನವಾಗಿ ನಿರ್ಮಿಸಿರುವ ‘ಕೆಎಸ್‌ಆರ್‌ಪಿ ಸಮುದಾಯ ಭವನ ಉದ್ಘಾಟನಾ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಪಾಲ್ಗೊಂಡು, ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. ನ್ಯಾಯ ಒದಗಿಸುವುದರಲ್ಲಿ ಕರ್ನಾಟಕ ಪೊಲೀಸ್ ನಂಬರ್ ಒನ್ ಇದೆ ಎಂದು ಹೈದ್ರಾಬಾದ್ ವಿಶ್ವವಿದ್ಯಾಲಯ ಹೇಳಿದೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ನಮ್ಮ ಪೊಲೀಸರು ಪಾರಿತೋಷಕ ತಂದಿದ್ದಾರೆ ಎಂದು ಶ್ಲಾಘಿಸಿದರು. ಗ್ಲೋಬಲ್ ಇನ್ವೆಸ್ಟರ್ಸ್ ಮೀಟ್‌ನಲ್ಲಿ 10 ಲಕ್ಷ ಕೋಟಿ ರೂ. ಹೂಡಿಕೆ ಹರಿದು ಬಂದಿದೆ. ರಾಜ್ಯದಲ್ಲಿ ಕಾನೂನು ಸುವ್ಯವ್ಥೆ ಕೆಟ್ಟಿದ್ದರೆ ಇಷ್ಟೊಂದು ಹೂಡಿಕೆ ಬರುತ್ತಿರಲಿಲ್ಲ. ರಾಜ್ಯಕ್ಕೆ ಬಂಡಾವಾಳ ಹೂಡಿಕೆ ಬರುವಲ್ಲಿ, ನಿಮ್ಮ ಉತ್ತಮ ಕಾರ್ಯವೈಖರಿಯಿಂದ ಸಾಧ್ಯವಾಗಿದೆ ಎಂದರು. ಸಿಎಂ ಅವರು ಬಜೆಟ್ ಸಿದ್ಧಪಡಿಸುವಾಗ, ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ಅನೇಕ ಬೇಡಿಕೆಗಳನ್ನು ಅವರ ಮುಂದಿಟ್ಟು ಸಾವಿರಾರು ಕೋಟಿ…

Read More

ಇಸ್ರೇಲ್: ಈ ವಾರದ ಆರಂಭದಲ್ಲಿ ಯುನೈಟೆಡ್ ಟೋರಾ ಯಹೂದಿ ಪಕ್ಷವು ನಿರ್ಗಮಿಸಿದ ನಂತರ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಸರ್ಕಾರವು ಬುಧವಾರ ತನ್ನ ಬಹುಮತವನ್ನು ಕಳೆದುಕೊಂಡಿತು. ಆಗ ಅಲ್ಟ್ರಾ-ಆರ್ಥೊಡಾಕ್ಸ್ ಶಾಸ್ ಪಕ್ಷವು ಒಕ್ಕೂಟವನ್ನು ತೊರೆದಿತು. 11 ಸ್ಥಾನಗಳನ್ನು ಹಿಂತೆಗೆದುಕೊಳ್ಳುವುದರೊಂದಿಗೆ, ನೆತನ್ಯಾಹು ಈಗ 120 ನೆಸ್ಸೆಟ್ ಸ್ಥಾನಗಳಲ್ಲಿ ಕೇವಲ 61 ಸ್ಥಾನಗಳನ್ನು ಮಾತ್ರ ಉಳಿಸಿಕೊಂಡಿದೆ. ಇದರಿಂದಾಗಿ ಅವರು ಅವಿಶ್ವಾಸ ಮತಗಳಿಗೆ ಗುರಿಯಾಗುತ್ತಾರೆ. ನೆತನ್ಯಾಹು ತಮ್ಮ ಧಾರ್ಮಿಕ ಘಟಕಗಳನ್ನು ಕಡ್ಡಾಯ ಮಿಲಿಟರಿ ಸೇವೆಯಿಂದ ವಿನಾಯಿತಿ ನೀಡುವ ಕಾನೂನನ್ನು ಅಂಗೀಕರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಪ್ರತಿಭಟಿಸಿ ರಾಜೀನಾಮೆ ನೀಡಿದ್ದಕ್ಕಾಗಿ ಶಾಸ್ “ಟೋರಾ ವಿದ್ಯಾರ್ಥಿಗಳ ವಿರುದ್ಧ ಕಿರುಕುಳ” ವನ್ನು ಉಲ್ಲೇಖಿಸಿದ್ದಾರೆ. ಒಕ್ಕೂಟವನ್ನು ಸಕ್ರಿಯವಾಗಿ “ದುರ್ಬಲಗೊಳಿಸುವುದಿಲ್ಲ” ಎಂದು ಶಾಸ್ ಪ್ರತಿಜ್ಞೆ ಮಾಡಿದರೂ, ಅದರ ನಿರ್ಗಮನವು ಶಾಸಕಾಂಗ ಪ್ರಯತ್ನಗಳು ಆರಂಭಿಕ ಚುನಾವಣೆಗಳನ್ನು ಪ್ರಚೋದಿಸುವ ಅಪಾಯಗಳನ್ನು ಹೊಂದಿದೆ. ಮಿಲಿಟರಿ ಬಲವಂತದ ಕುರಿತು ಇಸ್ರೇಲ್‌ನ ಸ್ಫೋಟಕ ಚರ್ಚೆಯಿಂದ ಈ ಕುಸಿತ ಉಂಟಾಗಿದೆ. ಇಸ್ರೇಲ್‌ನ ಜನಸಂಖ್ಯೆಯ ಶೇ. 13 ರಷ್ಟಿರುವ ಅಲ್ಟ್ರಾ-ಆರ್ಥೊಡಾಕ್ಸ್ ಯಹೂದಿಗಳು (ಹರೇಡಿಮ್)…

Read More

ನಿಮ್ಮ ಪ್ಯಾನ್ ಕಾರ್ಡ್ ಕೇವಲ ತೆರಿಗೆ ಐಡಿ ಅಲ್ಲ, ಇದು ಬ್ಯಾಂಕುಗಳು, ಸರ್ಕಾರಿ ಸೇವೆಗಳು ಮತ್ತು ಹೂಡಿಕೆ ವೇದಿಕೆಗಳಲ್ಲಿ ಬಳಸುವ ಗುರುತಿನ ಪ್ರಮುಖ ಭಾಗವಾಗಿದೆ. ಪ್ಯಾನ್ ಕಾರ್ಡ್‌ನಲ್ಲಿರುವ ನಿಮ್ಮ ಫೋಟೋ ಹಳೆಯದಾಗಿದ್ದರೆ ಅಥವಾ ತಪ್ಪಾಗಿದ್ದರೆ, ಅದನ್ನು ನವೀಕರಿಸುವುದು ಎಂದಿಗಿಂತಲೂ ಸುಲಭವಾಗಿದೆ. ಬಹು ಕಚೇರಿ ಭೇಟಿಗಳ ತೊಂದರೆಯಿಲ್ಲದೆ, ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ನಿಮ್ಮ ಪ್ಯಾನ್ ಕಾರ್ಡ್ ಫೋಟೋವನ್ನು ಹೇಗೆ ಬದಲಾಯಿಸಬಹುದು ಎಂಬುದರ ಕುರಿತು ಸಂಪೂರ್ಣ ಮಾರ್ಗದರ್ಶಿ ಇಲ್ಲಿದೆ. ನಿಮ್ಮ ಪ್ಯಾನ್ ಕಾರ್ಡ್ ಫೋಟೋವನ್ನು ಆನ್‌ಲೈನ್‌ನಲ್ಲಿ ನೀವು ಹೇಗೆ ನವೀಕರಿಸಬಹುದೇ? ಹೌದು! ಆದಾಯ ತೆರಿಗೆ ಇಲಾಖೆಯು ವ್ಯಕ್ತಿಗಳು ತಮ್ಮ ಪ್ಯಾನ್ ಕಾರ್ಡ್ ಫೋಟೋವನ್ನು ಎರಡು ಅಧಿಕೃತ ಪೋರ್ಟಲ್‌ಗಳ ಮೂಲಕ ಆನ್‌ಲೈನ್‌ನಲ್ಲಿ ನವೀಕರಿಸಲು ಅನುಮತಿಸುತ್ತದೆ – NSDL ಮತ್ತು UTIITSL. ಪ್ರಕ್ರಿಯೆಯು ಸರಳವಾಗಿದೆ ಮತ್ತು ನಿಮ್ಮ ಮನೆಯಿಂದಲೇ ಮಾಡಬಹುದು. ಈ ಹಂತ ಅನುಸರಿಸಿ, ಆನ್‌ಲೈನ್ ನಲ್ಲೇ ಬದಲಾವಣೆ ಮಾಡಿ 1. NSDL ಅಥವಾ UTIITSL ವೆಬ್‌ಸೈಟ್‌ಗೆ ಅಧಿಕೃತ ಪೋರ್ಟಲ್‌ಹೆಡ್‌ಗೆ ಭೇಟಿ ನೀಡಿ. 2. ಪ್ಯಾನ್ ತಿದ್ದುಪಡಿ/ನವೀಕರಣದ…

Read More

ಬೆಂಗಳೂರು: ಕೃಷ್ಣಾ ಜಲ ವಿವಾದ ನ್ಯಾಯಾಧೀಕರಣ-2 (ಬ್ರಿಜೇಶ್ ಕಮಾರ್ ಆಯೋಗ)ರ ಅವಧಿಯನ್ನು ಮತ್ತೊಂದು ವರ್ಷ ವಿಸ್ತರಿಸಿರುವ ಕೇಂದ್ರ ಸರ್ಕಾರದ ಕ್ರಮವು, ಇತ್ಯರ್ಥವಾಗಿರುವ ಜಲ ವಿವಾದದಲ್ಲಿ ನ್ಯಾಯ ಅಪೇಕ್ಷಿಸುತ್ತಿದ್ದ ಕರ್ನಾಟಕಕ್ಕೆ ಆಘಾತ ತಂದಿದೆ ಎಂಬುದಾಗಿ ಕಾನೂನು, ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕೃಷ್ಣ ಜಲ ವಿವಾದ ನ್ಯಾಯಾಧೀಕರಣ-2ರ ಅಂತಿಮ ತೀರ್ಪನ್ನು ಕೇಂದ್ರ ಸರ್ಕಾರದ ಗೆಜೆಟ್‌ನಲ್ಲಿ ಪ್ರಕಟಿಸಬೇಕೆಂದು ಕರ್ನಾಟಕ ಕಳೆದ ಹತ್ತು ವರ್ಷಗಳಿಂದ ಒತ್ತಾಯ ಮಾಡುತ್ತಿದೆ. ಕೇಂದ್ರ ಸರ್ಕಾಟ ಗೆಜೆಟ್‌ನಲ್ಲಿ ಪ್ರಕಟಣೆ ಮಾಡದೇ ಇರುವುದರಿಂದ 200 ಟಿಎಂಸಿ ಕರ್ನಾಟಕದ ಪಾಲಿನ ನೀರು ರಾಜ್ಯಕ್ಕೆ ದಕ್ಕದೇ ಬಹುದೊಡ್ಡ ಅನ್ಯಾಯಕ್ಕೆ ಕಾರಣವಾಗಿದೆ ಎಂದಿದ್ದಾರೆ. ಕೇಂದ್ರ ಸರ್ಕಾರ ಕೂಡಲೇ ಈ ಅವಧಿ ವಿಸ್ತರಣೆಯನ್ನು ಮರಳಿ ಪಡೆಯಬೇಕು. ಇಲ್ಲವೇ ಗೆಜೆಟ್‌ನಲ್ಲಿ ಪ್ರಕಟಿಸಲು ನ್ಯಾಯ ಯುತ ಕ್ರಮಕೈಗೊಳ್ಳಬೇಕು ಎಂಬುದಾಗಿ ಕಾನೂನು, ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ ಪಾಟೀಲ್ ಒತ್ತಾಯಿಸಿದ್ದಾರೆ. https://kannadanewsnow.com/kannada/there-is-no-need-to-worry-about-heart-attacks-minister-sharanprakash-patil/ https://kannadanewsnow.com/kannada/soon-karnataka-police-will-replace-the-cap-distribution-of-peak-caps/

Read More

ಬೆಂಗಳೂರು : ರಾಜ್ಯದಲ್ಲಿ ಈಗ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ. ಸರಾಸರಿ ಹೃದಯಾಘಾತದ ಪ್ರಕರಣಗಳು ಕಳೆದ ವರ್ಷದಷ್ಟೇ ಇದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಆರ್‌. ಪಾಟೀಲ್ ತಿಳಿಸಿದರು. ಹಾಸನದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚುತ್ತಿವೆ ಎನ್ನುವ ಸುದ್ದಿ ಕೇಳಿ ಜಯದೇವ ಆಸ್ಫತ್ರೆ ಸೇರಿದಂತೆ ಆನೇಕ ಆಸ್ಫತ್ರೆಗಳಲ್ಲಿ ರೋಗಿಗಳ ಸಂಖ್ಯೆ ಮತ್ತು ಮುಂಜಾಗ್ರತೆ ಕ್ರಮ ತೆಗೆದುಕೊಳ್ಳುವವರ ಸಂಖ್ಯೆಯೂ ಗಣನೀಯವಾಗಿ ಏರಿಕೆಯಾಗಿದೆ. ಇದರಿಂದ ವಿಚಿತ್ರ ಸನ್ನಿವೇಶ ಎದುರಾಗುತ್ತಿದೆ ಎಂದು ಸಚಿವರು ತಿಳಿಸಿದರು. https://twitter.com/KarnatakaVarthe/status/1945435101380440344 ಕೋವಿಡ್ ಲಸಿಕೆಗೂ ಹಾಸನದಲ್ಲಿ ಸಂಭವಿಸಿದ ಹೃದಯಾಘಾತ ಪ್ರಕರಣಗಳಿಗೂ ಯಾವುದೇ ಸಂಬಂಧವಿಲ್ಲ. ವ್ಯಾಕ್ಸಿನ್ ಬಗ್ಗೆ ಅನುಮಾನ ಬೇಡ. ಹಾಸನ ಜಿಲ್ಲೆಯಲ್ಲಿ ಮಾತ್ರ ಪ್ರಕರಣ ಬೇರೆ ಆಗಿದೆ ಅನ್ನೋದು ತಪ್ಪು ಎಂದು ಡಾ. ಪಾಟೀಲ್‌ ವಿವರಿಸಿದರು. ಹೃದಯಾಘಾತದ ಆತಂಕ ಕೈಬಿಟ್ಟು ಉತ್ತಮ ಜೀವನಶೈಲಿ, ಅಗತ್ಯ ನಿದ್ರೆ ಮತ್ತು ದೈಹಿಕ ವ್ಯಾಯಾಮ ಮಾಡುವುದು ಅಗತ್ಯ. ಹೃದಯಾಘಾತದ…

Read More

ಕಷ್ಟಪಟ್ಟು ಮಾಡಿದ ಸಾಲವನ್ನೆಲ್ಲಾ ತೀರಿಸಲಾಗದೆ ಪರದಾಡುತ್ತಿರುವವರಿಗೆ ಇಂದಿನ ಅದ್ಭುತ ದಿನ ಬಂದಿದೆ. ಇಂದು ಮಂಗಳವಾರ, ಗುರುವಾರ ಸಾಲ ಮರುಪಾವತಿಗೆ ಉತ್ತಮ ದಿನ. ಈ ದಿನದ ಜೊತೆಗೆ ಅಷ್ಟಮಿ ತಿಥಿ ಕೂಡ ಇಂದು ಸಂಜೆ ಹುಟ್ಟಲಿದೆ. ಕಾಲದ ದೃಷ್ಟಿಯಿಂದ ಇಂದು 2.07.25 ಸಂಜೆ 6:50ಕ್ಕೆ ಅಷ್ಟಮಿ ತಿಥಿ ಹುಟ್ಟಿದೆ. ನಾಳೆ 3.07.25 ಗುರುವಾರ ಸಂಜೆ 6:55 ರವರೆಗೆ ಅಷ್ಟಮಿ ತಿಥಿ ಮಾನ್ಯವಾಗಿದೆ. ನಾಳೆ ಎಲ್ಲ ದೇವಸ್ಥಾನಗಳಲ್ಲಿ ಅಷ್ಟಮಿ ತಿಥಿ ಪೂಜೆ ನಡೆಯಲಿದೆ. ನಾಳೆ ಸಂಜೆ ದೇವಸ್ಥಾನಕ್ಕೆ ಹೋಗಿ ದೀಪ ಹಚ್ಚಿ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ.…

Read More

ದಾವಣಗೆರೆ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವಿನ ಸರಣಿ ಮುಂದುವರೆದಿದೆ. ದಾವಣಗೆರೆಯಲ್ಲಿ ದೈಹಿಕ ಶಿಕ್ಷಕನೊಬ್ಬ ಹೃದಾಯಾಘತಕ್ಕೆ ಒಳಗಾಗಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಬಿವಿಎಸ್ ಶಾಲೆಯ ದೈಹಿಕ ಶಿಕ್ಷಕ ರವಿಕುಮಾರ್(28) ಸಾವನ್ನಪ್ಪಿದ್ದಾರೆ. ಶಾಲೆಯಲ್ಲೇ ಕುಸಿದು ಬಿದ್ದು ದೈಹಿಕ ಶಿಕ್ಷಕ ರವಿಕುಮಾರ್ ಸಾವನ್ನಪ್ಪಿದ್ದಾರೆ. ದೈಹಿಕ ಶಿಕ್ಷಕ ರವಿಕುಮಾರ್ 8 ವರ್ಷದ ಪುತ್ರಿ, 6 ವರ್ಷದ ಪುತ್ರನ ಜೊತೆಗೆ ಶಾಲೆಗೆ ಬರುತ್ತಿದ್ದರು. ಇದು ಶಾಲೆಯಲ್ಲಿ ಇದ್ದಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. https://kannadanewsnow.com/kannada/good-news-for-the-states-police-personnel-health-inspection-costs-increase-by-1500/ https://kannadanewsnow.com/kannada/soon-karnataka-police-will-replace-the-cap-distribution-of-peak-caps/

Read More

ಬೆಂಗಳೂರು: ದಿನಾಂಕ 17.07.2025 (ಗುರುವಾರ) ಬೆಳಿಗ್ಗೆ 10:00 ಗಂಟೆಯಿಂದ ಮದ್ಯಾಹ್ನ 17:00 ಗಂಟೆಯವರೆಗೆ ‘66/11ಕೆ.ವಿ ಯೆಲ್ಲಾರ್ ಬಂಡೆ’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು. ಎ.ಕೆ.ಅಶ್ರಮ ರಸ್ತೆ, ದೇವೆಗೌಡ ರಸ್ತೆ, ಆರ್.ಟಿ.ನಗರ 1ನೇ ಬ್ಲಾಕ್, ತಿಮ್ಮಯ್ಯ ಗಾರ್ಡನ್, ಮೋದಿ ಗಾರ್ಡನ್, ಮಿಲಿಟರಿ ಏರೀಯ, ವೀರಣ್ಣಪಾಳ್ಯ, ಲುಂಬಿನಿ ಗಾರ್ಡನ್, ಬಿ.ಡಬ್ಲ್ಯೂ.ಎಸ್.ಎಸ್.ಬಿ ಸೆವೇಜ್ ಪ್ಲಾಟ್, ಮರಿಯಣ್ಣಪಾಳ್ಯ, ಕಾಫೀ ಬೋರ್ಡ್ ಲೇಔಟ್ ಕೆಂಪಾಪುರ, ದಾಸರಹಳ್ಳಿ, ಮಾರುತಿ ಲೇಔಟ್ ಭುವನೇಶ್ವರಿನಗರ, ಬಿ.ಇ.ಎಲ್. ಕಾರ್ಪೋರೇಟ್ ಆಫೀಸ್ ಚಾಣಕ್ಯ ಲೇಔಟ್ ನಾಗವಾರ, ಎಂ.ಎಸ್. ರಾಮಯ್ಯ ಉತ್ತರ ಸಿಟಿ, ತನಿಸಂದ್ರ ಮುಖ್ಯ ರಸ್ತೆ, ಆಶಿರ್ವಾದ್ ನಗರ, ಅಮರಜ್ಯೋತಿ ಲೇಔಟ್ ರಾಚೇನಹಳ್ಳಿ ಮುಖ್ಯ ರಸ್ತೆ, ಮೇಸ್ತ್ರೀ ಪಾಳ್ಯ, ರಾಯಲ್ ಎನ್‌ಕ್ಲೇವ್, ಶ್ರೀರಾಂಪುರ ವಿಲೇಜ್, ವಿ.ಹೆಚ್.ಬಿ.ಸಿ.ಎಸ್ ಲೇಔಟ್ ವೀರಣ್ಣಪಾಳ್ಯ, ಜೋಜಪ್ಪ ಲೇಔಟ್, 17 ನೇ ಕ್ರಾಸ್, ಗೋವಿಂದಪುರ, ವೀರಣ್ಣಪಾಳ್ಯ ಮುಖ್ಯ ರಸ್ತೆ, ಬೈರಪ್ಪ ಲೇಔಟ್ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. ಇದಲ್ಲದೇ ಬೆಳಗ್ಗೆ 10:00 ರಿಂದ…

Read More